Headlines

ಸೋಲಿನ ಬೆನ್ನಲ್ಲೇ ಮತ್ತೆ ಪುಟಿದೇಳಲು ರೆಡಿ ಆದ ಮಣಿರತ್ನಂ; ದೊಡ್ಡ ಪ್ಲ್ಯಾನ್ – Kannada News | Mani Ratnam Begins Shooting For His Next Love Story With Vijay Sethupathi and Sai Pallavi At Howrah Bridge

ಖ್ಯಾತ ನಿರ್ದೇಶಕ ಮಣಿರತ್ನಂ (Maniratnam) ನಿರ್ದೇಶನದ ಕೊನೆಯ ಸಿನಿಮಾ ‘ಥಗ್ ಲೈಫ್’ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಕಾಣಲಿಲ್ಲ. ಈ ಸಿನಿಮಾ ಹೀನಾಯ ಸೋಲು ಕಂಡಿತು. ಇಂದಿನ ಜನರ ಇಷ್ಟಕ್ಕೆ ತಕ್ಕಂತೆ ಅವರು ಕಥೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಹಲವರು ಸಲಹೆ ನೀಡಿದ್ದರು. ಹೀಗಾಗಿ, ಮಣಿರತ್ನಂ ಈಗ ತಮಗೆ ಅತ್ಯಂತ ಹಿಡಿತವಿರುವ ರೋಮ್ಯಾಂಟಿಕ್ ಕಥೆಗಳ ಜೋನರ್‌ಗೆ ಮರಳಿದ್ದಾರೆ ಎಂದು ವರದಿ ಆಗಿದೆ. ಮಣಿರತ್ನಂ ಕೋಲ್ಕತ್ತಾದ ಹೌರಾ ಬ್ರಿಡ್ಜ್ ಹಿನ್ನೆಲೆ ಇಟ್ಟುಕೊಂಡು ಹೊಸ ಕಥೆಯೊಂದನ್ನು ಹೆಣೆಯುತ್ತಿದ್ದಾರೆ. ತಮ್ಮ ಕೊನೆಯ…

Read More

ಈ ಬಾರಿ ಗೆಲ್ಲಲು ಇದುವೇ ಕಾರಣ: ಶ್ರೇಯಸ್ ಅಯ್ಯರ್ – Kannada News | Shreyas iyer Post match interview after IND vs ZIM 3rd T20 Match

ಝಿಂಬಾಬ್ವೆ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ತಮ್ಮ ಯುವ ಪಡೆಯ ಪ್ರದರ್ಶನವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ತಂಡದಲ್ಲಿರುವ ಯುವ ಆಟಗಾರರು ಅತ್ಯಂತ ಭಯವಿಲ್ಲದೆ ಕ್ರಿಕೆಟ್ ಆಡುತ್ತಿದ್ದಾರೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ. ನಾಯಕರಾಗಿ ತಮ್ಮ ಮೊದಲ ಸರಣಿ ಗೆಲುವಿನ ಬಳಿಕ ಮಾತನಾಡಿದ ಶ್ರೇಯಸ್ ಅಯ್ಯರ್, ನಮ್ಮ ತಂಡದಲ್ಲಿ ಯುವ ಆಟಗಾರರ ದಂಡೇ ಇದೆ. ಅವರು ಮೈದಾನದಲ್ಲಿ ತೋರುತ್ತಿರುವ ಎನರ್ಜಿ ಮತ್ತು ಆಟದ ಮೇಲಿರುವ ಅವರ…

Read More

ಅಮೆರಿಕ-ಇರಾನ್ ಸಂಘರ್ಷ ಶಮನ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ತೀವ್ರ ಕುಸಿತ, ಹಣದುಬ್ಬರ ಮತ್ತು ಜಾಗತಿಕ ಆರ್ಥಿಕತೆಯ ಮೇಲಾಗುವ ಪರಿಣಾಮವೇನು? – Kannada News | US Iran Truce: Oil Prices Plummet, Impact on Global Economy, Inflation and India

ನ್ಯೂಯಾರ್ಕ್,ಜುಲೈ 27: ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ(Crude Oil) ಬೆಲೆಗಳು ತೀವ್ರ ಕುಸಿತ ಕಂಡಿವೆ. ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಸದ್ಯಕ್ಕೆ ಶಮನಗೊಂಡಿರುವುದರಿಂದ ಇಂಧನ ಪೂರೈಕೆಯಲ್ಲಿ ಎದುರಾಗಿದ್ದ ಅಡಚಣೆಗಳ ಆತಂಕ ದೂರವಾಗಿದ್ದು, ಕಚ್ಚಾ ತೈಲ ಬೆಲೆ ಶೇಕಡಾ 4.9 ರಷ್ಟು ಇಳಿಕೆಯಾಗಿ ಪ್ರತಿ ಬ್ಯಾರೆಲ್‌ಗೆ 92.02 ಡಾಲರ್‌ಗೆ ತಲುಪಿದೆ. ಕಳೆದ ವಾರವಷ್ಟೇ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 102 ಡಾಲರ್‌ಗಳ…

Read More

ಕರ್ನಾಟಕದ ಜಲಾಶಯಗಳ ನೀರಿನ ಮಟ್ಟದಲ್ಲಿ 6 ವರ್ಷಗಳಲ್ಲೇ ಎರಡನೇ ಕನಿಷ್ಠ ಸಂಗ್ರಹ! ಕಾವೇರಿ ಕಣಿವೆಯಲ್ಲಿ ಬರದ ಛಾಯೆ – Kannada News | Karnataka Reservoir Water Levels: Major Dams Record Second Lowest Storage in Six Years, Cauvery Basin Faces Severe Crisis

ಬೆಂಗಳೂರು, ಜುಲೈ 27: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿನ ನೀರಿನ ಸಂಗ್ರಹವು (Karnataka Dam Water Level) ಆತಂಕಕಾರಿ ಮಟ್ಟಕ್ಕೆ ಕುಸಿದಿದೆ. ಜುಲೈ 24ರ ವೇಳೆಗೆ ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ ಒಟ್ಟು 419.35 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದ್ದು, ಇದು ಕಳೆದ ಆರು ವರ್ಷಗಳಲ್ಲಿ ಇದೇ ಅವಧಿಯಲ್ಲಿ ದಾಖಲಾಗಿರುವ ಎರಡನೇ ಕನಿಷ್ಠ ಮಟ್ಟವಾಗಿದೆ. 2023ರ ಬರ ವರ್ಷದಲ್ಲಿ ಇದೇ ದಿನಕ್ಕೆ 371.07 ಟಿಎಂಸಿ ನೀರು ಸಂಗ್ರಹವಾಗಿತ್ತು. ಈ ಜಲಾಶಯಗಳ ಒಟ್ಟು ಸಾಮರ್ಥ್ಯ 895.69 ಟಿಎಂಸಿ ಆಗಿದೆ. ರಾಜ್ಯದ…

Read More

ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ! – Kannada News | Bengaluru Road Rage: Drama on Bannerghatta Road as Swift Driver Chases Innova

ಬೆಂಗಳೂರು, ಜುಲೈ 27: ನಗರದ ಬನ್ನೇರುಘಟ್ಟ ರಸ್ತೆಯಲ್ಲಿ ರಸ್ತೆ ಅಪಘಾತವೊಂದರ ಹಿನ್ನೆಲೆಯಲ್ಲಿ ಇನ್ನೋವಾ ಮತ್ತು ಸ್ವಿಫ್ಟ್ ಕಾರು ಚಾಲಕರ ನಡುವೆ ಸಿನಿಮಾ ಮಾದರಿಯ ಚೇಸಿಂಗ್ ಹಾಗೂ ಹೈಡ್ರಾಮಾ ನಡೆದಿದೆ. ಸ್ವಿಫ್ಟ್ ಕಾರಿಗೆ ಸ್ಪರ್ಶಿಸಿದ ಇನ್ನೋವಾ ಚಾಲಕ, ಸ್ವಿಫ್ಟ್ ಚಾಲಕನ ಕಾರಿನ ಕೀ ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣ ಜಾಗೃತನಾದ ಸ್ವಿಫ್ಟ್ ಚಾಲಕ, ಬೈಕ್ ಸವಾರನ ನೆರವು ಪಡೆದು ಇನ್ನೋವಾ ಕಾರನ್ನು ಚೇಸ್ ಮಾಡಿ ಹಿಡಿದಿದ್ದಾರೆ. ಈ ವೇಳೆ ಠಾಣೆಗೆ ಬರುವುದಾಗಿ ಹೇಳಿ ಇನ್ನೋವಾ ಚಾಲಕ ಮತ್ತೆ ರ್ಯಾಶ್…

Read More

ವಿವಾಹ ನೋಂದಣಿಗೆ ‘ಆಧಾರ್’ ಒಂದೇ ವಯಸ್ಸಿನ ಪುರಾವೆಯಲ್ಲ ಎಂದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ! – Kannada News | Don’t Rely Only on Aadhaar for Marriage Age Verification: Karnataka Child Rights Panel

ಬೆಂಗಳೂರು, ಜುಲೈ 27: ಬಾಲ್ಯ ವಿವಾಹಗಳನ್ನು (Child Marriage) ಪರಿಣಾಮಕಾರಿಯಾಗಿ ತಡೆಯಲು ವಿವಾಹ ನೋಂದಣಿ ಸಮಯದಲ್ಲಿ ವಯಸ್ಸಿನ ಸರಿಯಾದ ಪರಿಶೀಲನೆ ನಡೆಸಬೇಕು ಹಾಗೂ ಆಧಾರ್ ಕಾರ್ಡ್ ಒಂದನ್ನೇ ವಯಸ್ಸಿನ ಅಂತಿಮ ಪುರಾವೆಯಾಗಿ ಪರಿಗಣಿಸಬಾರದು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (KSCPCR) ಸರ್ಕಾರಕ್ಕೆ ಮನವಿ ಮಾಡಿದೆ. ಬಾಲ್ಯ ವಿವಾಹ ನಿಷೇಧ ನಿಯಮಗಳು 2014 ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿರುವ ಆಯೋಗ, ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಆಯುಕ್ತರಿಗೆ ಈ ಕುರಿತು ಅಧಿಕೃತ ಪತ್ರ…

Read More

ಭಾನುವಾರ ಭರ್ಜರಿ ಗಳಿಕೆ ಮಾಡಿದ ‘ಕರಾವಳಿ’ ಸಿನಿಮಾ; ಒಟ್ಟೂ ಕಲೆಕ್ಷನ್ ಎಷ್ಟು? – Kannada News | Karavali Box Office Collection Raj B Shetty Starrer Nears 4 Crore Mark After Strong Weekend

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದಾದ ‘ಕರಾವಳಿ’ (Karavali Movie) ಬಾಕ್ಸ್ ಆಫೀಸ್‌ನಲ್ಲಿ ಮೊದಲ ದಿನ ಸಾಧಾರಣ ಕಲೆಕ್ಷನ್ ಮಾಡಿತ್ತು. ಆದರೆ, ದಿನದಿಂದ ದಿನಕ್ಕೆ ಗಳಿಕೆಯಲ್ಲಿ ಭಾರಿ ಏರಿಕೆ ಕಾಣುತ್ತಿದೆ. ಬಿಡುಗಡೆಯಾದ ಮೊದಲ ದಿನ ಕೇವಲ 68 ಲಕ್ಷ ರೂಪಾಯಿ ಗಳಿಸಿದ್ದ ಈ ಚಿತ್ರ, ಆ ಬಳಿಕ ಪ್ರೇಕ್ಷಕರಿಂದ ಸಿಕ್ಕ ಪಾಸಿಟಿವ್ ವಿಮರ್ಶೆಗಳ ಬೆಂಬಲದೊಂದಿಗೆ ಗಲ್ಲಾಪೆಟ್ಟಿಗೆಯಲ್ಲಿ ಅಬ್ಬರಿಸುತ್ತಿದೆ. ಸದ್ಯ ಚಿತ್ರಮಂದಿರಗಳಲ್ಲಿ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿರುವ ಈ ಸಿನಿಮಾದ ಒಟ್ಟಾರೆ ಗಳಿಕೆ ಹೆಚ್ಚುತ್ತಿದೆ. ಸಿನಿಮಾದ ಒಟ್ಟೂ ಗಳಿಕೆ ನಾಲ್ಕು ಕೋಟಿ ರೂಪಾಯಿ…

Read More

CWG 2026: ಭಾರತದ ಪದಕಗಳ ಸಂಖ್ಯೆ ನಾಲ್ಕಕ್ಕೆ ಏರಿಕೆ! – Kannada News | India Won 4 Medals in Commonwealth Games 2026

ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಭಾರತದ ಕ್ರೀಡಾಪಟುಗಳು ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಈ ಭರ್ಜರಿ ಪ್ರದರ್ಶನದೊಂದಿಗೆ ನಾಲ್ಕನೇ ದಿನದ ಅಂತ್ಯಕ್ಕೆ  ಭಾರತ ಒಟ್ಟು 4 ಪದಕಗಳನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಭಾರತ ಪದಕ ಪಟ್ಟಿಯಲ್ಲಿ 8ನೇ ಸ್ಥಾನಕ್ಕೇರಿದೆ. ‘ಗೋಲ್ಡನ್ ಹ್ಯಾಟ್ರಿಕ್’: ಭಾರತದ ಸ್ಟಾರ್ ವೇಟ್‌ಲಿಫ್ಟರ್, ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಮಹಿಳೆಯರ 48 ಕೆಜಿ ವಿಭಾಗದಲ್ಲಿ ಭರ್ಜರಿ ಪ್ರದರ್ಶನ ನೀಡಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಸ್ನ್ಯಾಚ್‌ನಲ್ಲಿ ಗೇಮ್ಸ್ ದಾಖಲೆಯ 85…

Read More

ದೇಶದ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಸಮಿತಿ: ಕಾರ್ಯಪಡೆ ಮುನ್ನಡೆಸಲು ನೇಮಕಗೊಂಡ ನಂದನ್ ನಿಲೇಕಣಿ ಯಾರು? – Kannada News | Nandan Nilekani to Lead India’s Exam Reform Task Force for Transparency and Tech

ನವದೆಹಲಿ, ಜುಲೈ 27: ನೀಟ್(NEET) ಪತ್ರಿಕೆ ಸೋರಿಕೆ ಪ್ರಕರಣ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ ಬೆನ್ನಲ್ಲೇ, ಭಾರತದ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಆಧುನೀಕರಿಸಲು ಹಾಗೂ ಪಾರದರ್ಶಕತೆ ತರಲು ಪ್ರಧಾನಿ ನರೇಂದ್ರ ಮೋದಿ ಅವರು ‘ಉನ್ನತಾಧಿಕಾರ ಕಾರ್ಯಪಡೆ’ ರಚನೆ ಮಾಡುವುದಾಗಿ ಘೋಷಿಸಿದ್ದಾರೆ. ಈ ತಂತ್ರಜ್ಞಾನ ಆಧಾರಿತ ಸುಧಾರಣಾ ಸಮಿತಿಯ ಮುಖ್ಯಸ್ಥರನ್ನಾಗಿ ಇನ್ಫೋಸಿಸ್‌ನ ಸಹ-ಸಂಸ್ಥಾಪಕ ಹಾಗೂ ಪ್ರಸಿದ್ಧ ತಂತ್ರಜ್ಞಾನ ತಜ್ಞ ನಂದನ್ ನಿಲೇಕಣಿ ಅವರನ್ನು ನೇಮಿಸಲಾಗಿದೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಈ ವಿಷಯ ಪ್ರಕಟಿಸಿರುವ ಪ್ರಧಾನಿ ಮೋದಿ, “ನಮ್ಮ ಪರೀಕ್ಷಾ…

Read More

ನಾಲ್ಕು ದಿನಕ್ಕೆ 200 ಕೋಟಿ ರೂಪಾಯಿ ಗಳಿಸಿದ ‘ಜನ ನಾಯಗನ್’; ಅಸಲಿ ಪರೀಕ್ಷೆ ಈಗ ಶುರು – Kannada News | Jana Nayagan Box Office Collection Day 4: Vijay Starrer Crosses 200 Crore Mark Worldwide

ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ (Jana Nayagan Movie) ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ನಾಲ್ಕೇ ದಿನಗಳಲ್ಲಿ ವಿಶ್ವಾದ್ಯಂತ ಬರೋಬ್ಬರಿ 217.48 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡುವ ಮೂಲಕ 200 ಕೋಟಿ ಕ್ಲಬ್ ಸೇರಿ ಧೂಳೆಬ್ಬಿಸಿದೆ. ಬಿಡುಗಡೆಯಾದ ನಾಲ್ಕನೇ ದಿನ ಒಟ್ಟು 12,107 ಶೋಗಳಿಂದ ಭಾರತದಾದ್ಯಂತ 32.00 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ. ಇದರೊಂದಿಗೆ ದೇಶೀಯ ಮಾರುಕಟ್ಟೆಯಲ್ಲಿ ಚಿತ್ರದ ಒಟ್ಟು ಗ್ರಾಸ್ ಗಳಿಕೆ 145.98 ಕೋಟಿ ರೂಪಾಯಿಗೆ ತಲುಪಿದ್ದು,…

Read More