Headlines

ಧಾರಾಕಾರ ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ

ದೇವನಹಳ್ಳಿ, ಏಪ್ರಿಲ್​ 10: ಬೆಂಗಳೂರುನಲ್ಲಿ ಸುರಿದ ಭಾರಿ ಮಳೆ ಪರಿಣಾಮ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಅವರಿದ್ದ ವಿಮಾನ ಲ್ಯಾಂಡ್ ಆಗಲು ಸಾಧ್ಯವಾಗದೇ ಮಂಗಳೂರುಗೆ ವಾಪಸ್​ ತೆರಳಿರುವಂತಹ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಸಂಜೆ 5:45ಕ್ಕೆ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್​ ಆಗಬೇಕಿತ್ತು. ಆದರೆ ಮಳೆ ಹಿನ್ನೆಲೆ ಲ್ಯಾಂಡಿಂಗ್​ಗೆ ಕ್ಲಿಯರೆನ್ಸ್​​​ ಇಲ್ಲದ ಕಾರಣ ಮಂಗಳೂರು ವಾಪಸ್ ಆಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More

RR vs RCB: ಪವರ್‌ಪ್ಲೇನಲ್ಲಿ ರನ್ ಬಂದರೂ ಪ್ರಮುಖ 5 ವಿಕೆಟ್ ಕಳೆದುಕೊಂಡ ಆರ್​​ಸಿಬಿ

2026 ರ ಐಪಿಎಲ್‌ನಲ್ಲಿ ತವರಿನಿಂದ ಹೊರಕ್ಕೆ ಮೊದಲ ಪಂದ್ಯವನ್ನಾಡಿದ ಆರ್​​ಸಿಬಿ, ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಿತ್ತು. ಮಳೆ ಪೀಡಿತ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಪವರ್‌ಪ್ಲೇನಲ್ಲಿ ಅಂದರೆ ಮೊದಲ 6 ಓವರ್​ಗಳಲ್ಲಿ 60 ರನ್ ಕಲೆಹಾಕಿತ್ತಾದರೂ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡಿತು. ಎಂದಿನಂತೆ ಆರ್​ಸಿಬಿ ಪರ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದರು. ಇತ್ತ ರಾಜಸ್ಥಾನ್ ಪರ ಬೌಲಿಂಗ್ ಆರಂಭಿಸಿದ…

Read More

‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ ಉಪೇಂದ್ರ

ಪ್ರಿಯಾಂಕಾ ಉಪೇಂದ್ರ, ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ (Kotigobba) ಸಿನಿಮಾ ಮರು ಬಿಡುಗಡೆ ಆಗಿದೆ. ಈ ಸಿನಿಮಾವನ್ನು ಇಂದು (ಏಪ್ರಿಲ್ 10) ಪ್ರಿಯಾಂಕಾ ಉಪೇಂದ್ರ (Priyanka Upendra) ಅವರು ಅಭಿಮಾನಿಗಳ ಜೊತೆ ಕುಳಿತು ವೀಕ್ಷಿಸಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ತಮ್ಮ ಖುಷಿಯನ್ನು ಹಂಚಿಕೊಂಡರು. ‘ತುಂಬಾ ಖುಷಿ ಆಗುತ್ತಿದೆ. 25 ವರ್ಷಗಳ ಹಿಂದೆ ಈ ಚಿತ್ರವನ್ನು ನಾನು ಅಭಿಮಾನಿಗಳ ಜೊತೆ ನೋಡಲು ಸಾಧ್ಯವಾಗಿರಲಿಲ್ಲ. ಈಗ ಆ ಅವಕಾಶ ಸಿಕ್ಕಿದೆ. ಈಗಲೂ ಅಭಿಮಾನಿಗಳಿಂದ ಈ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ….

Read More

ಮುಸ್ಲಿಂ ಮುನಿಸು ಎಫೆಕ್ಟ್ ಆಗಿದೆ: ದಾವಣಗೆರೆ ಬೈ ಎಲೆಕ್ಷನ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಬೆಳಗಾವಿ, (ಏಪ್ರಿಲ್ 10): ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಂತ್ಯವಾಗಿದ್ದು, ಫಲಿತಾಂಶಕ್ಕೆ ಕಾತರದಿಂದ ಕಾಯುತ್ತಿದ್ದಾರೆ. ಇನ್ನೊಂದೆಡೆ ಕ್ಷೇತ್ರದಲ್ಲಿ ಸೋಲು ಗೆಲುವಿನ ಬಗ್ಗೆ ಚರ್ಚೆ ಜೋರಾಗಿವೆ ನಡೆದಿವೆ. ಇನ್ನೊಂದೆಡೆ ರಾಜಕೀಯ ನಾಯಕರು ಸಹ ಲೆಕ್ಕಾಚಾರ ಹಾಕುತ್ತಿದ್ದಾರೆ. ಇದರ ನಡುವೆ ದಾವಣಗೆರೆಯಲ್ಲಿ ಮುಸ್ಲಿಂ ಮತಗಳು ಕೈಕೊಟ್ಟಿರುವ ಬಗ್ಗೆ ಚರ್ಚೆಯಾಗುತ್ತಿದ್ದು, ಈ ಸಂಬಂಧ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಅಲ್ಪಸಂಖ್ಯಾತ ಮುನಿಸು ಲೀಡ್ ಮೇಲೆ ಪರಿಣಾಮ ಬೀರಲಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ…

Read More

ಬರೋಬ್ಬರಿ 11 ಶಸ್ತ್ರಚಿಕಿತ್ಸೆ: ಯುವತಿ ಸ್ಥಿತಿ ಕಂಡು ಮರುಗಿದ ಕುಮಾರಸ್ವಾಮಿ: ಮನೆಗೆ ಹೋಗಿ ಸಹಾಯ ಹಸ್ತ

ಮೈಸೂರು, ಏಪ್ರಿಲ್ 10: ನಂಜನಗೂಡಿನ ಪುಟ್ಟ ಹಳ್ಳಿಯೊಂದರಲ್ಲಿ ವಿಧಿಯ ಅಟ್ಟಹಾಸಕ್ಕೆ ಸಿಲುಕಿ ಇಡೀ ಕುಟುಂಬವೇ ಬೀದಿಗೆ ಬಿದ್ದಿತ್ತು. ಮಾರಕ ಕಾಯಿಲೆಯಿಂದ ಎರಡು ಕಾಲು ಕಳೆದುಕೊಂಡ ಪೂಜಾ ಎಂಬಾಕೆಯ ಬದುಕು ಅಂಧಕಾರದಲ್ಲಿತ್ತು. ಅತ್ತ ಪತಿಗೂ ಅಪಘಾತ, ಇತ್ತ ಕೈಯಲ್ಲಿ ಹಣವಿದಲ್ಲ ಸ್ಥಿತಿ. ಈ ಕಣ್ಣೀರಿನ ಕಥೆ ಕೇಳಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy), ಇಂದು ಆ ಬಡ ಕುಟುಂಬಕ್ಕೆ ಸಾಕ್ಷಾತ್ ದೇವರಾಗಿ ಬಂದಿದ್ದರು. ಹಳೆಯ ಲೀಸ್ ಹಣ ತೀರಿಸುವ ಭರವಸೆ ಜೊತೆಗೆ, ಮನೆಯ ಮಗನಂತೆ ಆ…

Read More

ಅಮೆರಿಕದ ಜೊತೆ ಆಟವಾಡಬೇಡಿ; ಪಾಕಿಸ್ತಾನಕ್ಕೆ ಹೊರಡುವ ಮುನ್ನ ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ

ವಾಷಿಂಗ್ಟನ್, ಏಪ್ರಿಲ್ 10: ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ (JD Vance) ಇಂದು ಇರಾನ್ ಜೊತೆ ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನಕ್ಕೆ (Pakistan) ತೆರಳಿದ್ದಾರೆ. ಈ ವೇಳೆ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಜೆಡಿ ವ್ಯಾನ್ಸ್, “ನಾವು ಮಾತುಕತೆಯನ್ನು ಎದುರು ನೋಡುತ್ತಿದ್ದೇವೆ. ಅದು ಸಕಾರಾತ್ಮಕವಾಗಿರುತ್ತದೆ ಎಂದು ನಾನು ಭಾವಿಸುತ್ತೇನೆ. ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದಂತೆ ಇರಾನಿಯನ್ನರು ಉತ್ತಮ ನಂಬಿಕೆಯಿಂದ ಮಾತುಕತೆ ನಡೆಸಲು ಸಿದ್ಧರಿದ್ದರೆ ನಾವು ಖಂಡಿತವಾಗಿಯೂ ಮುಕ್ತವಾಗಿ ಕೈ ಚಾಚಲು ಸಿದ್ಧರಿದ್ದೇವೆ. ಆದರೆ, ಅಮೆರಿಕದ ಜೊತೆ ಆಟವಾಡಿದರೆ ನಾವು ಸುಮ್ಮನಿರುವುದಿಲ್ಲ”…

Read More

ಅರಣ್ಯ ಭೂಮಿ ಒತ್ತುವರಿ ಕೇಸ್: ಮಾಜಿ ಸ್ಪೀಕರ್ ರಮೇಶ್ ಕುಮಾರ್​ಗೆ ಹಿನ್ನಡೆ

ಕೋಲಾರ, ಏಪ್ರಿಲ್​ 10: ಅರಣ್ಯ ಭೂಮಿ ಒತ್ತುವರಿ (Land Encroachment) ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಗೆ ಭೂಮಿಯನ್ನು ಬಿಟ್ಟುಕೊಡುವಂತೆ ಮೇಲ್ಮನವಿ ಪ್ರಾಧಿಕಾರ ಮತ್ತು ಅರಣ್ಯ ಸಂರಕ್ಷಾಧಿಕಾರಿಗಳ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್​​ಗೆ ಹಿನ್ನಡೆಯಾಗಿದೆ. ಜೊತೆಗೆ ಅವರು ಸಲ್ಲಿಸಿದ ಮೇಲ್ಮನವಿಗೆ ಅರ್ಹತೆ ಇಲ್ಲವೆಂದು ವಜಾಗೊಳಿಸಲಾಗಿದೆ. ಅರಣ್ಯ ಇಲಾಖೆಗೆ ಭೂಮಿ ಬಿಟ್ಟುಕೊಡುವಂತೆ ಆದೇಶ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್‌ಕುಮಾರ್ ಸಲ್ಲಿಸಿದ ಮೇಲ್ಮನವಿ ಅಜಿ ವಿಚಾರಣೆ ಮಾಡಿದ ನ್ಯಾಯಾಲಯ, ಅರಣ್ಯ ಇಲಾಖೆಗೆ ಭೂಮಿ…

Read More

ಐಎಸ್​ಐ ಜೊತೆ ನಂಟು; ದೆಹಲಿ, ಪಂಜಾಬ್​ನಲ್ಲಿ 11 ಗೂಢಚಾರರ ಬಂಧನ

ನವದೆಹಲಿ, ಏಪ್ರಿಲ್ 10: ದೆಹಲಿ ಪೊಲೀಸರು ಪಾಕಿಸ್ತಾನ ಗುಪ್ತಚರ ಸಂಸ್ಥೆಯಾದ ಐಎಸ್‌ಐ (ISI) ಜೊತೆ ಸಂಪರ್ಕ ಹೊಂದಿರುವ ಪ್ರಮುಖ ಗೂಢಚಾರ ಜಾಲವನ್ನು ಭೇದಿಸಿದ್ದು, 11 ಜನರನ್ನು ಬಂಧಿಸಿದ್ದಾರೆ. ಐಎಸ್‌ಐ ಜೊತೆಗೆ ಮಾತ್ರವಲ್ಲದೆ ಈ ಗೂಢಚಾರ ಜಾಲವು ನಿಷೇಧಿತ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್ (ಬಿಕೆಐ) ನೊಂದಿಗೆ ಸಂಪರ್ಕ ಹೊಂದಿದೆ ಎಂದು ಮಾಹಿತಿ ಲಭ್ಯವಾಗಿದೆ. ದೆಹಲಿ ಮತ್ತು ಪಂಜಾಬ್‌ನ ವಿವಿಧ ಸ್ಥಳಗಳಿಂದ 11 ವ್ಯಕ್ತಿಗಳನ್ನು ಬಂಧಿಸಲಾಗಿದೆ. ಇವರು ದೇಶದ ವಿವಿಧ ಭಾಗಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ….

Read More

ಕೇವಲ 5 ಶಾಟ್​ಗಳಲ್ಲಿ ಸಿದ್ಧವಾಯ್ತು ‘ಅದಿತಿ’ ಸಿನಿಮಾ; ಇದು ಮಹಿಳಾ ಪ್ರಧಾನ ಚಿತ್ರ

ಬಹುಭಾಷೆಯಲ್ಲಿ ಬಿಡುಗಡೆ ಆಗಲಿರುವ ‘ಅದಿತಿ’ ಸಿನಿಮಾದಲ್ಲಿ ಒಂದು ಡಿಫರೆಂಟ್ ಪ್ರಯತ್ನ ಮಾಡಲಾಗಿದೆ. ಇಡೀ ಸಿನಿಮಾವನ್ನು ಕೇವಲ 5 ಶಾಟ್​ಗಳಲ್ಲಿ ಚಿತ್ರಿಸಲಾಗಿದೆ. ಇದು ನಿಜಕ್ಕೂ ಸವಾಲಿನ ಕೆಲಸ. ಆ ಮೂಲಕ ‘ಅದಿತಿ’ ಸಿನಿಮಾ (Aditi Movie) ಕುತೂಹಲ ಮೂಡಿದೆ. ಅಂದಹಾಗೆ, ಈ ಸಿನಿಮಾದಲ್ಲಿ ಮಹಿಳಾ ಪ್ರಧಾನ ಕಥಾಹಂದರ ಇದೆ. ಬಹುತೇಕ ಮಹಿಳೆಯರೇ ಈ ಸಿನಿಮಾಗಾಗಿ ಕೆಲಸ ಮಾಡಿದ್ದಾರೆ. ಇತ್ತೀಚೆಗೆ ‘ಅದಿತಿ’ ಸಿನಿಮಾದ ಟೀಸರ್ (Teaser) ಬಿಡುಗಡೆ ಮಾಡಲಾಯಿತು. ಈ ಚಿತ್ರದ ಶೀರ್ಷಿಕೆಗೆ ‘ಲಿಬರ್ಟಿ’ ಎಂಬ ಟ್ಯಾಗ್​ಲೈನ್ ಇದೆ. ‘ಮಿಲೆನಿಯಮ್…

Read More

ಕಾಂಗ್ರೆಸ್ ಮುಸ್ಲಿಂ ನಾಯಕರಲ್ಲಿ ಕಿಚ್ಚು ಹೊತ್ತಿಸಿದ ದಾವಣಗೆರೆ ದಂಗಲ್, ಪಕ್ಷದ ವಿರುದ್ಧ ಜಮೀರ್ ಷಡ್ಯಂತ್ರ ರೂಪಿಸಿದ್ರಾ?

ಬೆಂಗಳೂರು, (ಏಪ್ರಿಲ್ 10): ದಾವಣಗೆರೆ ದಕ್ಷಿಣ ಉಪ ಚುನಾವಣೆ (Davanagere By Election) ಮುಗಿದರೂ ಸಹ ಕಾಂಗ್ರೆಸ್​ ಮುಸ್ಲಿಂ ನಾಯಕರಲ್ಲಿನ (Congress Muslim Leaders) ಕಿಚ್ಚು ತಣ್ಣಗಾಗಿಲ್ಲ. ಬದಲಾಗಿ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಹೌದು…ಬೈ ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ದಾವಣಗೆರೆ ಚುನಾವಣೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್, ನಜೀರ್ ಅಹಮದ್, ಅಬ್ದುಲ್ ಜಬ್ಬರ್ ವ್ಯತಿರಿಕ್ತವಾಗಿ ನಡೆದುಕೊಂಡಿದ್ದಾರೆ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾಂಗ್ರೆಸ್ ಮುಸ್ಲಿಂ ನಾಯಕರು ರಣದೀಪ್ ಸುರ್ಜೇವಾಲಗೆ ದೂರು ನೀಡಿದ್ದಾರೆ….

Read More