Headlines

ಝಲ್ಮುರಿ ಇಲ್ಲಿಗೂ ತಲುಪಿತೇ? ಪ್ರಧಾನಿ ಮೋದಿ ಪ್ರಶ್ನೆಗೆ ನೆದರ್ಲ್ಯಾಂಡ್​​​ನ ಭಾರತೀಯ ವಲಸಿಗರ ಕರತಾಡನ – Kannada News | Has Jhalmuri Reached Here Too? PM Modis question to Indian diaspora In Netherlands

ಹೇಗ್, ಮೇ 16: ಪ್ರಧಾನಿ ನರೇಂದ್ರ ಮೋದಿ ನೆದರ್ಲ್ಯಾಂಡ್ಸ್​​ ಪ್ರವಾಸದಲ್ಲಿದ್ದಾರೆ. ಈ ವೇಳೆ ಅವರು ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಿದ್ದಾರೆ. ಈ ವೇಳೆ ಪಂಚ ರಾಜ್ಯಗಳ ಚುನಾವಣೆಯ ಬಗ್ಗೆಯೂ ಪ್ರಸ್ತಾಪಿಸಿದ ಮೋದಿ (PM Modi) ನಗುತ್ತಾ ಝಲ್ಮುರಿ ಇಲ್ಲಿಗೂ ತಲುಪಿದೆಯೇ? ಎಂದು ಕೇಳಿದರು. ಝಲ್ಮುರಿ ಹೆಸರು ಕೇಳುತ್ತಿದ್ದಂತೆ ನೆರೆದಿದ್ದ ಭಾರತೀಯರು ಚಪ್ಪಾಳೆ ತಟ್ಟುತ್ತಾ ಸ್ಪಂದಿಸಿದರು. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಶೇ. 80ರಿಂದ 90ರಷ್ಟಿತ್ತು. ಈ ಬಾರಿ ಮಹಿಳೆಯರು ಹೆಚ್ಚು ಮತದಾನ ಮಾಡಿದ್ದಾರೆ ಎಂದು ಹೇಳಿದರು….

Read More

ಯಾದಗಿರಿ: ಗಲ್ಫ್​ ರಾಷ್ಟ್ರಗಳಲ್ಲಿ ಯುದ್ಧದ ಕಾರ್ಮೋಡ ಹಿನ್ನಲೆ ಅಕ್ಕಿ ರಫ್ತುಗೂ ಬಿತ್ತು ಬ್ರೇಕ್​​: ಉದ್ಯಮಿಗಳು ಕಂಗಾಲು

ಯಾದಗಿರಿ, ಮಾರ್ಚ್​​ 14: ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಪರಿಣಾಮ ಗಲ್ಫ್​ ರಾಷ್ಟ್ರಗಳ ಮೇಲಷ್ಟೇ ಅಲ್ಲ, ಯಾದಗಿರಿ (Yadagiri) ಜಿಲ್ಲೆಯ ವ್ಯಾಪಾರ ವಹಿವಾಟಿನ ಮೇಲೂ ಬೀರಲು ಆರಂಭಿಸಿದೆ. ಮೊಟ್ಟೆ ಉದ್ಯಮ, ಅಕ್ಕಿ ರಫ್ತು ಹಾಗೂ ಹೋಟೆಲ್ ಉದ್ಯಮಕ್ಕೂ ಯುದ್ಧದ ಎಫೆಕ್ಟ್ ತಟ್ಟಿದ್ದು, ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೊಟ್ಟೆ ದರ ಕುಸಿತ ಯಾದಗಿರಿ ಜಿಲ್ಲೆಯಿಂದ ಗಲ್ಫ್​​ ರಾಷ್ಟ್ರಗಳಿಗೆ ಲಕ್ಷಾಂತರ ಮೊಟ್ಟೆಗಳನ್ನು ರಫ್ತು ಮಾಡಲಾಗುತ್ತಿತ್ತು. ಕತಾರ್, ಕುವೈತ್, ಸೌದಿ ಅರೇಬಿಯಾ ಹಾಗೂ ದುಬೈ ಸೇರಿದಂತೆ ಹಲವು…

Read More

ಉದ್ಯಮಿ ಮನೆಯಲ್ಲಿ ದರೋಡೆ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಪ್ರಾಣ ಸ್ನೇಹಿತನ ಮನೆಯಲ್ಲೇ ರಾಬರಿ ಮಾಡಿಸಿದ ಸ್ಟಾಂಪ್ ವೆಂಡರ್

ಬೆಂಗಳೂರು, ಮಾರ್ಚ್​​ 08: ಪೊಲೀಸರ ಹೆಸರಲ್ಲಿ ಮನೆಗೆ ಎಂಟ್ರಿಕೊಟ್ಟ ಗ್ಯಾಂಗ್​​ ಒಂದು ರಿಯಲ್ ಎಸ್ಟೇಟ್ ಉದ್ಯಮಿ ಮನೆಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ನಗದು ಮತ್ತು ಸುಮಾರು ಅರ್ಧ ಕೆಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ನಡೆದಿತ್ತು. ಈ ಪ್ರಕರಣವನ್ನು ಭೇದಿಸಿರುವ ಬ್ಯಾಡರಹಳ್ಳಿ ಪೊಲೀಸರು ಈ ಹಿಂದೆ ನಾಗೇಂದ್ರ ಹಾಗೂ ಬಚ್ಚನ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಆದರೆ ತನಿಖೆ ಮುಂದುವರಿದಾಗ ಅಸಲಿ ಸತ್ಯ ಬಯಲಾಗಿದ್ದು, ಪ್ರಕರಣದ ಹಿಂದಿನ ಮಾಸ್ಟರ್​​ ಮೈಂಡ್​​ ಹೆಸರು…

Read More

ಬೆಂಗಳೂರಿನ ಗಾಂಧಿ ಬಜಾರ್‌ನಲ್ಲಿ 120ಕ್ಕೂ ಹೆಚ್ಚು ಸ್ಟ್ರೀಟ್ ಲೈಟ್ಸ್ ನಾಪತ್ತೆ! ಕಳ್ಳರ ಕಾಟಕ್ಕೆ ಜನ ಕಂಗಾಲು – Kannada News

ಬೆಂಗಳೂರಿನ ಗಾಂಧಿ ಬಜಾರ್‌ನಲ್ಲಿ 120ಕ್ಕೂ ಹೆಚ್ಚು ಸ್ಟ್ರೀಟ್ ಲೈಟ್ಸ್ ನಾಪತ್ತೆ!Image Credit source: The Hindu ಬೆಂಗಳೂರು, ಜೂನ್ 12: ಗಾಂಧಿ ಬಜಾರ್​ನಲ್ಲಿ (Gandhibazar) ಹಬ್ಬ ಹರಿದಿನಗಳಿರಲಿ ಅಥವಾ ವೀಕೆಂಡ್ ಇರಲಿ, ಅಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಜಮಾಯಿಸುತ್ತಾರೆ. ಆದರೆ, ಕಳೆದ ಕೆಲವು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಇಲ್ಲಿಗೆ ಬರಲು ಮಹಿಳೆಯರು ಮತ್ತು ಮಕ್ಕಳು ತೀವ್ರ ಭಯಪಡುತ್ತಿದ್ದಾರೆ. ಇದಕ್ಕೆ ಕಾರಣ, ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಬಸವನಗುಡಿಯ ಗಾಂಧಿ ಬಜಾರ್ ರಸ್ತೆ ಈಗ ಸಂಪೂರ್ಣ ಕತ್ತಲೆಯಲ್ಲಿ ಮುಳುಗಿದೆ. ಮುಖ್ಯಾಂಶಗಳು…

Read More

ಅಡ್ಡ ಬಂದ ನಾಗರ ಹಾವು: ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್ – Kannada News

ಚಿಕ್ಕಮಗಳೂರು, ಜೂ.11: ರಸ್ತೆಗೆ ಏಕಾಏಕಿ ಅಡ್ಡ ಬಂದ ನಾಗರ ಹಾವನ್ನು ತಪ್ಪಿಸಲು ಹೋದ ಬೈಕ್ ಸವಾರನ ಎಡವಟ್ಟಿನಿಂದಾಗಿ, ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸರಣಿ ಅಪಘಾತ ನಡೆದಿರುವ ವಿಲಕ್ಷಣ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ನುಗ್ಗಿದ್ದು, ಅದೃಷ್ಟವಶಾತ್ ಭಾರಿ ಪ್ರಾಣಾಪಾಯವೊಂದು ಕೂದಲೆಳೆತದಲ್ಲಿ ತಪ್ಪಿದೆ. ಬೈಕ್ ಸವಾರರಿಬ್ಬರು ನಾರಾಯಣಪುರ ಗೇಟ್ ರಸ್ತೆಯಲ್ಲಿ ಚಲಿಸುತ್ತಿದ್ದಾಗ ಬೃಹತ್ ಗಾತ್ರದ ನಾಗರ ಹಾವೊಂದು ಏಕಾಏಕಿ ರಸ್ತೆಗೆ ಅಡ್ಡ…

Read More

ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಔಷಧಗಳ ಬೆಲೆಯೂ ಏರಿಕೆ!

ಬೆಂಗಳೂರು, ಮೇ 17: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಜನ ಸಾಮಾನ್ಯರಿಗೆ ಬಿಸಿ ಮುಟ್ಟಿಸಿದ ಬೆನ್ನಲ್ಲೇ ಈಗ ಬಿಪಿ, ಶುಗರ್ ಸೇರಿದಂತೆ ದಿನಬಳಕೆಯ ಔಷಧಿಗಳ ಬೆಲೆಯೂ ಶೇ 15 ರಿಂದ 20 ರಷ್ಟು ದುಬಾರಿಯಾಗುವ ಆತಂಕ ಎದುರಾಗಿದೆ . ಮಾತ್ರೆಗಳ ಫಾಯಿಲ್ಸ್ ತಯಾರಿಕೆಗೆ ಪೆಟ್ರೋ ಕೆಮಿಕಲ್ ಅತ್ಯಗತ್ಯವಾಗಿದ್ದು, ಜಾಗತಿಕ ಯುದ್ಧದ ಹಿನ್ನೆಲೆಯಲ್ಲಿ ಇದರ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಸದ್ಯಕ್ಕೆ ಹಳೆಯ ಎಂಆರ್‌ಪಿ ದರದಲ್ಲೇ ಔಷಧಿಗಳು ಸಿಗುತ್ತಿದ್ದರೂ, ಮುಂದಿನ ದಿನಗಳಲ್ಲಿ ಕಚ್ಚಾ ವಸ್ತುಗಳ ಕೊರತೆಯಿಂದ…

Read More

ಬೆಂಗಳೂರು: ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಚಿತ್ರೀಕರಣ; ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಆತಂಕದಲ್ಲಿ ಟೆಕ್ಕಿ! – Kannada News | Bengaluru Privacy Breach: Engineer’s Bath Videoed in Mahadevapura, Police Investigate.

ಬೆಂಗಳೂರು, ಮೇ.6 : ಸಿಲಿಕಾನ್ ಸಿಟಿಯ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಬಾಡಿಗೆ ಮನೆಯಲ್ಲಿ ಸ್ನಾನ ಮಾಡುತ್ತಿದ್ದ 23 ವರ್ಷದ ಯುವ ಸಾಫ್ಟ್‌ವೇರ್ ಇಂಜಿನಿಯರ್ ಅವರ ವಿಡಿಯೋವನ್ನು ಅಪರಿಚಿತ ವ್ಯಕ್ತಿಯೊಬ್ಬ ಚಿತ್ರೀಕರಿಸಿರುವ ಬಗ್ಗೆ ದೂರು ದಾಖಲಾಗಿದೆ. ಇದೀಗ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಯುವತಿಯು ಕಳೆದ ಒಂಬತ್ತು ತಿಂಗಳ ಹಿಂದೆ ಗರುಡಾಚಾರ್ ಪಾಳ್ಯಕ್ಕೆ ವಾಸ್ತವ್ಯ ಬದಲಾಯಿಸಿದ್ದರು. ಬುಧವಾರ ಬೆಳಿಗ್ಗೆ ಸುಮಾರು 9.30ರ ಸುಮಾರಿಗೆ ಅವರು ಸ್ನಾನ…

Read More

IND vs ENG: ಭಾರತ- ಇಂಗ್ಲೆಂಡ್ ಕಾಳಗಕ್ಕೆ ಮಳೆ ಅಡ್ಡಿ? ಪಂದ್ಯ ರದ್ದಾದರೆ ಯಾರು ಫೈನಲ್​ಗೆ? – Kannada News | India vs England T20 WC 2026 Semi Final: Mumbai Pitch, Weather Report and Match Preview

2026 ರ ಟಿ20 ವಿಶ್ವಕಪ್ (T20 World Cup 2026) ಕೊನೆಯ ಹಂತವನ್ನು ತಲುಪಿದೆ. ವೆಸ್ಟ್ ಇಂಡೀಸ್ ವಿರುದ್ಧದ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿದೆ. ಮಾರ್ಚ್ 5 ರಂದು ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಭಾರತ, ಇಂಗ್ಲೆಂಡ್ (India vs England) ತಂಡವನ್ನು ಎದುರಿಸಲಿದೆ. ಈ ಎರಡೂ ತಂಡಗಳು ಸೆಮಿಫೈನಲ್‌ನಲ್ಲಿ ಸತತ ಮೂರನೇ ಬಾರಿಗೆ ಮುಖಾಮುಖಿಯಾಗುತ್ತಿವೆ. 2022 ರಲ್ಲಿ ಇಂಗ್ಲೆಂಡ್, ಭಾರತವನ್ನು ಸೋಲಿಸಿ ಕಪ್ ಗೆದ್ದರೆ, 2024 ರಲ್ಲಿ ಭಾರತ, ಇಂಗ್ಲೆಂಡ್…

Read More

ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು? – Kannada News | Jaggesh Shows His Angriness over Movie Piracy

ಟ ಸುದೀಪ್ ಅವರು ಪೈರಸಿ ಬಗ್ಗೆ ಧ್ವನಿ ಎತ್ತಿದ್ದು ಗೊತ್ತೇ ಇದೆ. ಸುದೀಪ್ ಬಳಿಕ ಜಗ್ಗೇಶ್ ಅವರು ಪೈರಸಿ ಬಗ್ಗೆ ಮಾತನಾಡಿದ್ದಾರೆ. ಅವರ ಸಹೋದರ ಕೋಮಲ್ ಕುಮಾರ್ ನಟನೆಯ ‘ಕೋಣ’ ಸಿನಿಮಾ ಪೈರಸಿ ಆಗಿತ್ತು. ಇದನ್ನು ಮಾಡಿದವರ ವಿರುದ್ಧ ಜಗ್ಗೇಶ್ ದೂರು ನೀಡಿದ್ದರು. ಈಗ ನಂದಿನಿ ಲೇಔಟ್ ಪೊಲೀಸರು ಪೈರಸಿ ಮಾಡುತ್ತಿದ್ದ ಓರ್ವನ ಬಂಧಿಸಿದ್ದಾರೆ. ಫೇಸ್​ಬುಕ್ ಲೈವ್ ಬಂದು ಪೈರಸಿ ವಿರುದ್ಧ ನಟ ಜಗ್ಗೇಶ್ ಆಕ್ರೋಶ ಹೊರಹಾಕಿದ್ದಾರೆ. ‘ಸಿನಿಮಾ ಪೈರಸಿ ಕೊಲೆಗೆ ಸಮಾನ, ನಿರ್ಮಾಪಕನನ್ನು ಕೊಂದಂತೆ. ಪೈರಸಿ…

Read More

ಭಾರತದ ಆಪರೇಷನ್ ಸಿಂಧೂರ್ ವೇಳೆ ನೂರ್ ಖಾನ್ ವಾಯುನೆಲೆಗೆ ಹಾನಿ; ಒಪ್ಪಿಕೊಂಡ ಪಾಕಿಸ್ತಾನ – Kannada News | Pakistan Minister Ishaq Dar Admits Indias Operation Sindoor Strikes Damaged Nur Khan Base

ನವದೆಹಲಿ, ಡಿಸೆಂಬರ್ 28: ಈ ವರ್ಷದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ್ (Operation Sindoor) ಸಮಯದಲ್ಲಿ ಭಾರತ ನಡೆಸಿದ ಕಾರ್ಯತಂತ್ರದ ಮತ್ತು ನಿಖರವಾದ ದಾಳಿಗಳ ಪರಿಣಾಮವನ್ನು ಪಾಕಿಸ್ತಾನ (Pakistan) ಸರ್ಕಾರ ಸಾರ್ವಜನಿಕವಾಗಿ ಒಪ್ಪಿಕೊಂಡಿದೆ. ಏಪ್ರಿಲ್‌ನಲ್ಲಿ ಪಹಲ್ಗಾಮ್‌ನಲ್ಲಿ (Pahalgam Attack) ನಡೆದ 26 ಭಾರತೀಯರ ಸಾವಿಗೆ ಪ್ರತಿಕ್ರಿಯೆಯಾಗಿ ಭಾರತ ಆಪರೇಷನ್ ಸಿಂಧೂರ್ ನಡೆಸಿದ ಹಲವು ತಿಂಗಳ ನಂತರ ಪಾಕಿಸ್ತಾನ ಈ ವಿಷಯವನ್ನು ಒಪ್ಪಿಕೊಂಡಿದೆ. ನೂರ್ ಖಾನ್ ವಾಯುನೆಲೆಗೆ ಹಾನಿಯನ್ನು ಪಾಕಿಸ್ತಾನ ಒಪ್ಪಿಕೊಂಡಿದೆ. ರಾವಲ್ಪಿಂಡಿಯ ಚಕ್ಲಾಲಾ ಪ್ರದೇಶದ ನೂರ್ ಖಾನ್…

Read More