Headlines

ಕಲಬುರಗಿ ಆರ್​ಟಿಒ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಇಲ್ಲಿ ದುಡ್ಡು ಕೊಟ್ಟರೆ ಎಲ್ಲವೂ ಸಿಗುತ್ತೆ!

ಕಲಬುರಗಿ, ಫೆಬ್ರವರಿ 5: ಕಲಬುರಗಿ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ (ಆರ್ಟಿಓ) ನಡೆಯುತ್ತಿರುವ ಭ್ರಷ್ಟಾಚಾರವನ್ನು ‘ಟಿವಿ9’ ಸುದ್ದಿ ವಾಹಿನಿ ಬಯಲು ಮಾಡಿದೆ. ಆರ್​​ಟಿಒ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಡುತ್ತಿರುವುದು ಮತ್ತು ದಾಖಲೆಗಳನ್ನು ಅನಧಿಕೃತವಾಗಿ ವಿತರಿಸುತ್ತಿರುವುದು ಬಹಿರಂಗವಾಗಿದೆ. ಈ ಕಚೇರಿಯಲ್ಲಿ ಹಣ ನೀಡಿದರೆ ವಾಹನಗಳ ಆರ್​ಸಿ ಕಾರ್ಡ್‌ಗಳು ಸೇರಿದಂತೆ ಎಲ್ಲಾ ಸರ್ಕಾರಿ ದಾಖಲೆಗಳು ಸುಲಭವಾಗಿ ಲಭ್ಯವಾಗುತ್ತವೆ. ಅರ್ಹರಲ್ಲದವರಿಗೂ ಅಥವಾ ಅನಗತ್ಯ ವ್ಯಕ್ತಿಗಳಿಗೂ ಈ ಭೂಪರು ಸರ್ಕಾರಿ ದಾಖಲೆಗಳನ್ನು ನೀಡುತ್ತಾರೆ. ಲಂಚ ಪಡೆದು ಆರ್​​ಸಿ ಕಾರ್ಡ್‌ ವಿತರಿಸುವ…

Read More

ರಾಜ್ಯದಲ್ಲಿ ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ – Kannada News | Karnataka Launches Special Drive To Identify Illegal Bangladeshi Immigrants

ಬೆಂಗಳೂರು, ಫೆಬ್ರವರಿ 05:  ಅಕ್ರಮ ವಲಸಿಗರನ್ನು ಪತ್ತೆಹಚ್ಚಲು ರಾಜ್ಯ ಸರ್ಕಾರವು ವಿಶೇಷ ಕಾರ್ಯಾಚರಣೆಯನ್ನು ಆರಂಭಿಸಿದೆ. ಬಾಂಗ್ಲಾದೇಶ ಮತ್ತು ಇತರ ದೇಶಗಳಿಂದ ಅನಧಿಕೃತವಾಗಿ ನೆಲೆಸಿರುವ ವಿದೇಶಿಯರನ್ನು ಗುರುತಿಸುವುದು ಈ ಕಾರ್ಯಾಚರಣೆಯ ಮುಖ್ಯ ಉದ್ದೇಶವಾಗಿದೆ. ಹೈಕೋರ್ಟ್‌ನ ಸೂಚನೆಯ ನಂತರ ರಾಜ್ಯ ಸರ್ಕಾರ ಈ ಕ್ರಮಕ್ಕೆ ಮುಂದಾಗಿದ್ದು, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈಗಾಗಲೇ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ರಾಜ್ಯಾದ್ಯಂತ ಅನಧಿಕೃತವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿಗರು ಮತ್ತು ವಿದೇಶಿಯರನ್ನು ಹುಡುಕಲು ನಿರ್ದೇಶನ…

Read More

ಟೀಚರ್ ತನ್ನ ಪ್ರೀತಿ ಒಪ್ಪಿಕೊಳ್ಳಲಿಲ್ಲವೆಂದು ರಸ್ತೆಯಲ್ಲಿ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ – Kannada News | Mainpuri Shocker: Student Attacks Teacher After Rejection, Biting Lips

ಮೈನ್​ಪುರಿ, ಫೆಬ್ರವರಿ 05: ನಾವು ಪ್ರೀತಿಸಿದವರು ಒಪ್ಪಿಕೊಳ್ಳಲಿಲ್ಲವೆಂದರೆ ಎಲ್ಲೇ ಇರಲಿ ಅವರು ಸುಖವಾಗಿರಲಿ ಎಂದು ಬಯಸುವುದು ನಿಜವಾದ ಪ್ರೀತಿ(Love). ಆದರೆ ಇಲ್ಲೊಬ್ಬ 12ನೇ ತರಗತಿ ವಿದ್ಯಾರ್ಥಿ ಶಿಕ್ಷಕಿ ತನ್ನ ಪ್ರೀತಿ ಮಾಡುವುದಿಲ್ಲ ಎಂದು ಗೊತ್ತಾದ ಬಳಿಕ ಆತ ರಸ್ತೆಯಲ್ಲೇ ಶಿಕ್ಷಕಿಯ ತುಟಿಯ ಕಚ್ಚಿ ತುಂಡರಿಸಿರುವ ಘಟನೆ ಉತ್ತರ ಪ್ರದೇಶದ ಮೈನ್​ಪುರಿಯಲ್ಲಿ ನಡೆದಿದೆ. ಶಿಕ್ಷಕಿ ತನ್ನ ಪ್ರೀತಿಯನ್ನು ಒಪ್ಪಿಕೊಂಡಿಲ್ಲವೆಂದು ಕ್ರೌರ್ಯದ ಎಲ್ಲಾ ಮಿತಿಗಳನ್ನು ಆತ ದಾಟಿದ್ದಾನೆ. ಗಂಭೀರವಾಗಿ ಗಾಯಗೊಂಡ ಶಿಕ್ಷಕಿಯನ್ನು ಆಗ್ರಾಕ್ಕೆ ಕಳುಹಿಸಲಾಗಿದೆ, ಆಕೆಯ ಸ್ಥಿತಿ ಇನ್ನೂ ಗಂಭೀರವಾಗಿದೆ…

Read More

ಟಿ20 ವಿಶ್ವಕಪ್​ನಲ್ಲಿ 10 ಹೊಸ ನಿಯಮಗಳು ಜಾರಿ! – Kannada News | New Rules in ICC T20 World Cup 2026

ಬಹುನಿರೀಕ್ಷಿತ ಟಿ20 ವಿಶ್ವಕಪ್​ಗೆ ವೇದಿಕೆ ಸಿದ್ಧವಾಗಿದೆ. ಫೆಬ್ರವರಿ 7 ರಿಂದ ಶುರುವಾಗಲಿರುವ 20 ತಂಡಗಳ ಚುಟಕು ಮಹಾ ಸಮರಕ್ಕೂ ಮುನ್ನವೇ ಐಸಿಸಿ ಕೆಲ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳ ಮೂಲಕ ಪಂದ್ಯವನ್ನು ಮತ್ತಷ್ಟು ರೋಚಕ ಹಾಗೂ ನ್ಯಾಯಯುತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅದರಂತೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಜಾರಿಯಲ್ಲಿರುವ ಹೊಸ ನಿಯಮಗಳಾವುವು ಎಂದು ನೋಡುವುದಾದರೆ… ಸ್ಟಾಪ್ ಕ್ಲಾಕ್ ನಿಯಮ: ಓವರ್‌ಗಳ ನಡುವೆ ಕಡ್ಡಾಯ 60-ಸೆಕೆಂಡ್‌ಗಳ “ಸ್ಟಾಪ್ ಕ್ಲಾಕ್” ಈಗ ಜಾರಿಯಲ್ಲಿರಲಿದೆ. ಅಂದರೆ ಹಿಂದಿನ ಓವರ್ ಮುಗಿದ ಒಂದು…

Read More

ಸಿದ್ದರಾಮಯ್ಯ Vs ಡಿ.ಕೆ. ಶಿವಕುಮಾರ್​​: ಎಐಸಿಸಿ ನಾಯಕರ ಮೌನದ ಬಗ್ಗೆ ‘ಕೈ ‘ ಶಾಸಕರಲ್ಲೇ ಬೇಸರ! – Kannada News | Karnataka Congress Leadership Crisis: MLAs Blame High Command’s Silence, Fear Election Impact

ರಾಜ್ಯ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ಗೊಂದಲImage Credit source: Google ಬೆಂಗಳೂರು, ಫೆಬ್ರವರಿ 05: ರಾಜ್ಯ ಕಾಂಗ್ರೆಸ್​​ನಲ್ಲಿ ಕಳೆದ ಕೆಲ ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಭುಗಲೇಳುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್​ ಮೌನದ ಬಗ್ಗೆ ಕಾಂಗ್ರೆಸ್​ ಶಾಸಕರು ಬೇಸರ ಹೊರಹಾಕಿದ್ದು, ನಾಯಕತ್ವ ಬದಲಾವಣೆ ಗೊಂದಲದಿಂದ ನಮ್ಮ ಸ್ಥಿತಿ ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ ಎಂದು ಅಲವತ್ತುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೆ ಕೆಲವೇ ತಿಂಗಳಲ್ಲಿ…

Read More

‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಸೂಚನೆ ಕೊಟ್ಟ ನಿರ್ದೇಶಕನ ಪತ್ನಿ ಯಾಮಿ ಗೌತಮ್

‘ಧುರಂಧರ್’ ಸಿನಿಮಾ ಯಶಸ್ಸು ಕಂಡ ಬಳಿಕ ‘ಧುರಂಧರ್ 2’ ಬಗ್ಗೆ ನಿರೀಕ್ಷೆ ಹುಟ್ಟಿದೆ. ಈ ಚಿತ್ರದಲ್ಲಿ ಏನು ತೋರಿಸುತ್ತಾರೆ ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ನಿರ್ದೇಶಕ ಆದಿತ್ಯ ಧಾರ್ ಪತ್ನಿ ಯಾಮಿ ಗೌತಮ್ ಈ ಬಗ್ಗೆ ಮಾತನಾಡಿದ್ದಾರೆ. ಮೊದಲ ಭಾಗಕ್ಕಿಂತ ಎರಡನೇ ಭಾಗ ಹೆಚ್ಚು ಪವರ್​​ಫುಲ್ ಆಗಿರಲಿದೆ ಎಂದಿದ್ದಾರೆ. 2026ಕ್ಕೆ ಒಂದೊಳ್ಳೆಯ ಚಿತ್ರ ಸಿಕ್ಕಂತೆ ಆಗುತ್ತದೆ ಎಂಬುದು ಅವರ ಅಭಿಪ್ರಾಯ. ಹಲವು ಅತಿಥಿ ಪಾತ್ರಗಳು ಕೂಡ ಸಿನಿಮಾದಲ್ಲಿ ಇರಲಿವೆಯಂತೆ. ಈ ಎಲ್ಲಾ ಕಾರಣದಿಂದ…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೆ ಕುಸಿತ; ಇಲ್ಲಿದೆ ದರಪಟ್ಟಿ – Kannada News | Gold Price Today on 5th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 5: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಕುಸಿತದ ಹಾದಿಗೆ ಬಂದಿವೆ. ನಿನ್ನೆ ಬುಧವಾರ ಬರೋಬ್ಬರಿ 700ಕ್ಕೂ ಹೆಚ್ಚು ರೂಗಳಷ್ಟು ಹೆಚ್ಚಿದ್ದ ಚಿನ್ನದ ಬೆಲೆ (Gold Rates) ಇವತ್ತು 460 ರೂ ತಗ್ಗಿದೆ. ಬೆಳ್ಳಿ ಬೆಲೆಯೂ 20 ರೂ ಕಡಿಮೆ ಆಗಿದೆ. ಇದರ ಬೆಲೆ ನಿನ್ನೆ ಒಂದೇ ದಿನ ಬರೋಬ್ಬರಿ 40 ರೂಗಳಷ್ಟು ಹೆಚ್ಚಿತ್ತು. ಈಗ ಮತ್ತೆ ಇಳಿಕೆ ಕಂಡಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10…

Read More

ಜೈಲಿಂದ ಹೊರಬರ್ತಿದ್ದಂತೆಯೇ ಮತ್ತೆ ಬಾಲಬಿಚ್ಚಿದ ಖತರ್ನಾಕ್ ವಂಚಕ: ಅಮಿತ್ ಶಾ ಆಪ್ತನೆಂದು ಹೇಳಿಕೊಂಡು ಮತ್ತಷ್ಟು ವಂಚನೆ – Kannada News | Karnataka Fraud: Sujayendra Arrested Again for Impersonating Amit Shah Aide, Fake Docs

ಸುಜಯೇಂದ್ರನ ವಿರುದ್ಧ ಮತ್ತೊಂದು FIR Image Credit source: Tv9 kannada ಬೆಂಗಳೂರು, ಫೆ.5: ಕೇಂದ್ರ ಸಚಿವ ಅಮಿತ್ ಶಾ (Amit Shah) ಅವರ ಆಪ್ತ ಎಂದು ಹೇಳಿಕೊಂಡು ತಿರುಗುತ್ತಿದ್ದ ಖತರ್ನಾಕ್ ವಂಚಕ ಸುಜಯೇಂದ್ರ (Sujayendra) ಎಂಬಾತನ ವಿರುದ್ಧ ಈಗ ಮತ್ತೊಂದು ಎಫ್‌ಐಆರ್ (FIR) ದಾಖಲಾಗಿದೆ. ಅಧಿಕಾರ ಮತ್ತು ಪ್ರಭಾವವನ್ನು ದುರುಪಯೋಗಪಡಿಸಿಕೊಂಡು ಈತ ನಡೆಸುತ್ತಿದ್ದ ಹಗರಣಗಳು ಒಂದೊಂದಾಗಿ ಹೊರಬರುತ್ತಿವೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರದೀಪ್ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ರಾಜ್ಯಪಾಲರ…

Read More

Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು – Kannada News | Chennai Central Express Derailment Reported Near Odisha’s Jakhapura

ಜಾಜ್​ಪುರ, ಫೆಬ್ರವರಿ 05: ಒಡಿಶಾದ ಜಾಜ್​ಪುರ ಜಿಲ್ಲೆಯ ಜಖಾಪುರ ರೈಲು ನಿಲ್ದಾಣದ ಬಳಿ ಚೆನ್ನೈ ಸೆಂಟ್ರಲ್ ಎಕ್ಸ್​ಪ್ರೆಸ್ ರೈಲು ಹಳಿ ತಪ್ಪಿದೆ. ರೈಲಿನ ಮೂರು ಬೋಗಿಗಳು ಹಳಿ ತಪ್ಪಿವೆ. ರೈಲು ಭುವನೇಶ್ವರದಿಂದ ಕೋಲ್ಕತ್ತಾಗೆ ತೆರಳುತ್ತಿತ್ತು. ಮಾಧ್ಯಮ ವರದಿಗಳ ಪ್ರಕಾರ, ಭದ್ರಕ್‌ನಿಂದ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿರುವ ಅಧಿಕಾರಿಗಳು  ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ ಮತ್ತು ಬೋಗಿಗಳಿಗೂ ಅಷ್ಟಾಗಿ ಹಾನಿಯಾಗಿಲ್ಲ ಎಂದು ದೃಢಪಡಿಸಿದ್ದಾರೆ. ಘಟನೆಯ ನಂತರ ರೈಲು ಮಾರ್ಗದ ಹಾನಿಗೊಳಗಾದ ಭಾಗದಲ್ಲಿ ಮರುಸ್ಥಾಪನೆ ಕಾರ್ಯ ಪ್ರಾರಂಭವಾಯಿತು. ಏತನ್ಮಧ್ಯೆ,…

Read More

Viral: ಬೆಂಗಳೂರಿನಲ್ಲಿ ಬಾಡಿಗೆ ಮನೆ ತೋರಿಸಲು ದುಡ್ಡು ಕೇಳ್ತಾರೆ; ಮನೆ ಮಾಲೀಕನ ದುರಾಸೆ ಕಂಡು ಶಾಕ್ ಆದ ವ್ಯಕ್ತಿ – Kannada News | Bengaluru: Bengaluru landlord asks to pay one month’s rent if you go to see a rented house

ಬೆಂಗಳೂರು, ಫೆಬ್ರವರಿ 05: ಈಗಿನ ದುಬಾರಿ ದುನಿಯಾದಲ್ಲಿ ಬೆಂಗಳೂರಿನಂತಹ (Bengaluru) ದೊಡ್ಡ ದೊಡ್ಡ ನಗರದಲ್ಲಿ ಬಾಡಿಗೆ ಮನೆಯಲ್ಲಿ ಇರುವುದು ಕಷ್ಟಕರ. ದುಡಿದ ಹಣವನ್ನೆಲ್ಲವೂ ಬಾಡಿಗೆ ಕಟ್ಟುವುದಕ್ಕೆ ಆಗುತ್ತದೆ. ಆದರೆ ಮನೆ ಮಾಲೀಕರು ತಿಂಗಳ ಬಾಡಿಗೆ ಸಾವಿರ ಅಲ್ಲ, ಲಕ್ಷ ರೂ ಹೇಳ್ತಾರೆ. ಆದರೆ ಬೆಂಗಳೂರಿನಲ್ಲಿ ಮನೆಯನ್ನು ಹುಡುಕುತ್ತಿರುವಾಗ ಎದುರಾದ ಅನಿರೀಕ್ಷಿತ ಘಟನೆಯ ಬಗ್ಗೆ ವಿವರಿಸಿದ್ದಾರೆ. ಮನೆ ಹೇಗಿದೆ ಎಂದು ನೋಡಲು ಒಂದು ತಿಂಗಳ ಬಾಡಿಗೆ ನೀಡಬೇಕೆಂದ ಮನೆ ಮಾಲೀಕರ ವಿಚಿತ್ರ ಬೇಡಿಕೆ ಕಂಡು ಶಾಕ್ ಆಗಿದ್ದಾರೆ. ಈ…

Read More