ಬೆಂಗಳೂರು: ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್, ಟ್ರಾಫಿಕ್​ಗೆ ಸಿಗಲಿದೆ ಮುಕ್ತಿ – Kannada News | New Flyover Planned at Ibbaluru Junction in Bengaluru to Ease Traffic Congestion; DPR Preparation Begins

ಬೆಂಗಳೂರು, ಫೆಬ್ರವರಿ 5: ಬೆಂಗಳೂರಿನ ಇಬ್ಬಲೂರು ಜಂಕ್ಷನ್ ವಾಹನ ಸವಾರರಿಗೆ ನಿತ್ಯ ತಲೆನೋವಾಗಿ ಪರಿಣಮಿಸಿದೆ. ಬೆಳ್ಳಂದೂರು, ಸರ್ಜಾಪುರ, ಎಚ್‌ಎಸ್‌ಆರ್ ಲೇಔಟ್ ಮತ್ತು ಕಾಡುಬೀಸನಹಳ್ಳಿಯಂತಹ ಪ್ರದೇಶಗಳಿಂದ ಬರುವ ವಾಹನಗಳು ಇದೇ ಜಂಕ್ಷನ್ ಮೂಲಕ ಹಾದು ಹೋಗುವುದರಿಂದ ಇಲ್ಲಿ ನಿರಂತರವಾಗಿ ಗಂಟೆಗಟ್ಟಲೆ ಸಂಚಾರ ದಟ್ಟಣೆ ಉಂಟಾಗುತ್ತದೆ. ಅಸ್ತಿತ್ವದಲ್ಲಿರುವ ಮೇಲ್ಸೇತುವೆ ಕಿರಿದಾಗಿದ್ದು, ವಾಹನಗಳ ದಟ್ಟಣೆಯನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿಲ್ಲ. ಈ ಸಮಸ್ಯೆಯನ್ನು ಪರಿಹರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊಸ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರು ಇತ್ತೀಚೆಗೆ ಸ್ಥಳ ಪರಿಶೀಲನೆ ನಡೆಸಿ, ಪೂರ್ವ ಮತ್ತು ದಕ್ಷಿಣ ನಗರ ಪಾಲಿಕೆ ಅಧಿಕಾರಿಗಳು ಹಾಗೂ ಬೆಂಗಳೂರು ಸ್ಮಾರ್ಟ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಬಿ-ಸ್ಮೈಲ್) ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ, ಅಸ್ತಿತ್ವದಲ್ಲಿರುವ ಮೇಲ್ಸೇತುವೆಯ ಸಾಮರ್ಥ್ಯ ಕಡಿಮೆ ಇರುವುದರಿಂದ ಹೆಚ್ಚುವರಿ ಮೇಲ್ಸೇತುವೆಯನ್ನು ನಿರ್ಮಿಸಲು ಅಥವಾ ಈಗಿರುವ ಮೇಲ್ಸೇತುವೆಯನ್ನು ವಿಸ್ತರಿಸಲು ನಿರ್ಧಾರ ಕೈಗೊಂಡಿದ್ದಾರೆ. ಈ ಯೋಜನೆಗೆ ಸಂಬಂಧಿಸಿದ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಜಿಬಿಎ ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ.

ವರದಿ: ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾರತ್ ಟ್ಯಾಕ್ಸಿಗೆ ಇಂದು ಅಧಿಕೃತ ಚಾಲನೆ; ಸಹಕಾರಿ ತತ್ವದಲ್ಲಿ ಕ್ಯಾಬ್ ಚಲಾಯಿಸುವವರು ಚಾಲಕರಲ್ಲ, ಸಾರಥಿಗಳು – Kannada News | Official launch of Bharat Taxi, the cab service model that offers win win for both drivers and customers

ನವದೆಹಲಿ, ಫೆಬ್ರುವರಿ 5: ಸಹಕಾರಿ ತತ್ವದಲ್ಲಿ ರೂಪುಗೊಂಡಿರುವ ಕ್ಯಾಬ್ ಸರ್ವಿಸ್ ಕಂಪನಿಯಾದ ಭಾರತ್ ಟ್ಯಾಕ್ಸಿಯ (Bharat Taxi) ಸೇವೆ ಇಂದು ಗುರುವಾರ ಅಧಿಕೃತವಾಗಿ ಚಾಲನೆಗೊಳ್ಳುತ್ತಿದೆ. ಅಮುಲ್ ಸೇರಿದಂತೆ ವಿವಿಧ ಸರ್ಕಾರಿ ಸಂಸ್ಥೆಗಳಿಂದ ಬೆಂಬಲಿತವಾಗಿರುವ ಈ ಕ್ಯಾಬ್ ಸರ್ವಿಸ್ ಸದ್ಯ ದೆಹಲಿ ಎನ್​ಸಿಆರ್ (Delhi-NCR) ಪ್ರದೇಶದಲ್ಲಿ ಅಧಿಕೃತವಾಗಿ ಶುರುವಾಗಲಿದೆ. ಗುರುವಾರ ಮಧ್ಯಾಹ್ನ ಗೃಹ ಸಚಿವ ಅಮಿತ್ ಶಾ ಅವರು ಭಾರತ್ ಟ್ಯಾಕ್ಸಿ ಸರ್ವಿಸ್​ಗೆ ಚಾಲನೆ ಕೊಡಲಿದ್ದಾರೆ. ಈ ಮೂಲಕ ಕ್ಯಾಬ್ ಸರ್ವಿಸ್ ಕ್ಷೇತ್ರದಲ್ಲಿ ಓಲಾ, ಊಬರ್​ನ ಪ್ರಾಬಲ್ಯಕ್ಕೆ ಸೆಡ್ಡು ಹೊಡೆಯಲು ಭಾರತ್ ಟ್ಯಾಕ್ಸಿ ಅಖಾಡಕ್ಕೆ ಇಳಿಯುತ್ತಿದೆ.

ಓಲಾ, ಊಬರ್​ಗಿಂತ ಭಾರತ್ ಟ್ಯಾಕ್ಸ್ ಹೇಗೆ ಭಿನ್ನ?

ಭಾರತ್ ಟ್ಯಾಕ್ಸಿ ಸಹಕಾರಿ ತತ್ವದಲ್ಲಿ ರೂಪುಗೊಂಡಿರುವ ಸೇವೆ. ಈ ಟ್ಯಾಕ್ಸಿ ಸರ್ವಿಸ್​ಗೆ ಸರ್ಕಾರದಿಂದ ನೇರ ಬೆಂಬಲ ಇಲ್ಲವಾದರೂ ಸಹಕಾರ ಟ್ಯಾಕ್ಸಿ ಕೋಆಪರೇಟಿವ್ ಲಿಮಿಟೆಡ್ ಎನ್ನುವ ಸಹಕಾರಿ ಸಂಸ್ಥೆ ಈ ಕ್ಯಾಬ್ ಸರ್ವಿಸ್ ಅನ್ನು ನಿರ್ವಹಿಸುತ್ತದೆ. ಈ ಸಹಕಾರಿ ಸಂಸ್ಥೆಯು ಲಾಭದ ಉದ್ದೇಶ ಹೊಂದಿಲ್ಲ ಎನ್ನುವುದು ಗಮನಾರ್ಹ.

ಇದನ್ನೂ ಓದಿ: ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ; ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ: ವಾಣಿಜ್ಯ ಸಚಿವರ ಟೀಕೆ

ಭಾರತ್ ಟ್ಯಾಕ್ಸಿಯಲ್ಲಿ ಡ್ರೈವರ್​ಗಳೇ ಮಾಲೀಕರು. ಪ್ಲಾಟ್​ಫಾರ್ಮ್ ಶುಲ್ಕ ತೆರಬೇಕಿಲ್ಲ. ಓಲಾ, ಊಬರ್​ಗಳು ಚಾಲಕರಿಂದ ಶೇ. 30-40ರಷ್ಟು ಕಮಿಷನ್ ಪಡೆಯುತ್ತವೆ. ಭಾರತ್ ಟ್ಯಾಕ್ಸಿಯಲ್ಲಿ ಈ ಶುಲ್ಕ ಇರುವುದಿಲ್ಲ. ಹೀಗಾಗಿ, ಇದು ಕ್ಯಾಬ್ ಚಾಲಕರು ಹಾಗು ಗ್ರಾಹಕರು ಇಬ್ಬರಿಗೂ ವಿನ್-ವಿನ್ ಸ್ಥಿತಿ. ಕ್ಯಾಬ್ ಚಾಲಕರಿಗೆ ಹೆಚ್ಚಿನ ಆದಾಯ ಸಿಗುತ್ತದೆ. ಗ್ರಾಹಕರಿಗೆ ಬೆಲೆಯೂ ಸ್ವಲ್ಪ ಕಡಿಮೆ ಆಗುತ್ತದೆ.

ಭಾರತ್ ಟ್ಯಾಕ್ಸಿಯಲ್ಲಿ ಚಾಲಕರನ್ನು ಸಾರಥಿಗಳೆಂದು ಕರೆಯಲಾಗುತ್ತದೆ. ಈ ಕ್ಯಾಬ್ ಸರ್ವಿಸ್​ಗೆ ಸೇರಬಯಸುವ ಸಾರಥಿಗಳು ಕೆಲ ಷೇರುಗಳನ್ನು ಖರೀದಿಸಬಹುದು. ಕನಿಷ್ಠ ಐದು ಷೇರುಗಳನ್ನು ಖರೀದಿಸಬಹುದು. ಸುಮಾರು 500 ರೂ ಆಗುತ್ತದೆ. ಆದರೆ, ಸಂಸ್ಥೆಯು ವೃದ್ಧಿಸಿದಂತೆಲ್ಲಾ ಈ ಷೇರುಗಳಿಂದ ಚಾಲಕರಿಗೆ ಡಿವಿಡೆಂಡ್ ಸಿಗುತ್ತಾ ಹೋಗುತ್ತದೆ.

ಇದನ್ನೂ ಓದಿ: ವಿದೇಶದಿಂದ ಬರುವಾಗ ತರುವ ಎಷ್ಟು ಲಗೇಜಿಗೆ ಸುಂಕ ವಿನಾಯಿತಿ ಇರುತ್ತೆ? ಎಷ್ಟು ಆಭರಣ ತರಬಹುದು?

ಸದ್ಯ, ಭಾರತ್ ಟ್ಯಾಕ್ಸಿಯಲ್ಲಿ ಎಸಿ, ನಾನ್-ಎಸಿ ಕ್ಯಾಬ್​ಗಳು, ಎಕ್ಸ್ ಎಲ್ ಕ್ಯಾಬ್​ಗಳು, ಆಟೊ, ಬೈಕ್ ಟ್ಯಾಕ್ಸಿ ಸೇವೆ ಲಭ್ಯ ಇವೆ. ಇದರ ಆ್ಯಪ್​ನ ಇಂಟರ್​ಫೇಸ್ ಕೂಡ ಅತ್ಯಾಧುನಿಕವಾಗಿದೆ ಎನ್ನಲಾಗಿದೆ. 2025ರ ಡಿಸೆಂಬರ್​ನಲ್ಲಿ ದೆಹಲಿ ಮತ್ತು ಗುಜರಾತ್​ನಲ್ಲಿ ಪ್ರಾಯೋಗಿಕವಾಗಿ ಆರಂಭವಾಗಿತ್ತು. ಸಾಕಷ್ಟು ರೈಡ್​ಗಳು ಈ ವೇಳೆ ಆಗಿವೆ. ಈ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ದೆಹಲಿ ಎನ್​ಸಿಆರ್ ಪ್ರದೇಶದಲ್ಲಿ ಅಧಿಕೃತವಾಗಿ ಇದಕ್ಕೆ ಚಾಲನೆ ಕೊಡಲಾಗಿದೆ. ಮುಂಬರುವ ದಿನಗಳಲ್ಲಿ ಮತ್ತು ವರ್ಷಗಳಲ್ಲಿ ದೇಶಾದ್ಯಂತ ಎಲ್ಲಾ ನಗರಗಳಲ್ಲಿ ಇದರ ಸೇವೆ ವಿಸ್ತರಿಸುವ ಉದ್ದೇಶ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕಲಬುರಗಿ ಆರ್​ಟಿಒ ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಇಲ್ಲಿ ದುಡ್ಡು ಕೊಟ್ಟರೆ ಎಲ್ಲವೂ ಸಿಗುತ್ತೆ!

ಕಲಬುರಗಿ, ಫೆಬ್ರವರಿ 5: ಕಲಬುರಗಿ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ (ಆರ್ಟಿಓ) ನಡೆಯುತ್ತಿರುವ ಭ್ರಷ್ಟಾಚಾರವನ್ನು ‘ಟಿವಿ9’ ಸುದ್ದಿ ವಾಹಿನಿ ಬಯಲು ಮಾಡಿದೆ. ಆರ್​​ಟಿಒ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಡುತ್ತಿರುವುದು ಮತ್ತು ದಾಖಲೆಗಳನ್ನು ಅನಧಿಕೃತವಾಗಿ ವಿತರಿಸುತ್ತಿರುವುದು ಬಹಿರಂಗವಾಗಿದೆ. ಈ ಕಚೇರಿಯಲ್ಲಿ ಹಣ ನೀಡಿದರೆ ವಾಹನಗಳ ಆರ್​ಸಿ ಕಾರ್ಡ್‌ಗಳು ಸೇರಿದಂತೆ ಎಲ್ಲಾ ಸರ್ಕಾರಿ ದಾಖಲೆಗಳು ಸುಲಭವಾಗಿ ಲಭ್ಯವಾಗುತ್ತವೆ. ಅರ್ಹರಲ್ಲದವರಿಗೂ ಅಥವಾ ಅನಗತ್ಯ ವ್ಯಕ್ತಿಗಳಿಗೂ ಈ ಭೂಪರು ಸರ್ಕಾರಿ ದಾಖಲೆಗಳನ್ನು ನೀಡುತ್ತಾರೆ. ಲಂಚ ಪಡೆದು ಆರ್​​ಸಿ ಕಾರ್ಡ್‌ ವಿತರಿಸುವ ದೃಶ್ಯಾವಳಿಗಳನ್ನು ‘ಟಿವಿ9’ ಸೆರೆಹಿಡಿದಿದೆ. ಒಂದು ಆರ್​ಸಿ ಕಾರ್ಡ್‌ಗೆ 200 ರಿಂದ 300 ರೂಪಾಯಿ ಲಂಚ ಪಡೆದು ವಿತರಣೆ ಮಾಡಲಾಗುತ್ತಿರುವುದ ಬೆಳಕಿಗೆ ಬಂದಿದೆ. ಇದು ಸಾರಿಗೆ ಇಲಾಖೆಯ ಪಾರದರ್ಶಕತೆ ಮತ್ತು ದಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯದಲ್ಲಿ ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ – Kannada News | Karnataka Launches Special Drive To Identify Illegal Bangladeshi Immigrants

ಬೆಂಗಳೂರು, ಫೆಬ್ರವರಿ 05:  ಅಕ್ರಮ ವಲಸಿಗರನ್ನು ಪತ್ತೆಹಚ್ಚಲು ರಾಜ್ಯ ಸರ್ಕಾರವು ವಿಶೇಷ ಕಾರ್ಯಾಚರಣೆಯನ್ನು ಆರಂಭಿಸಿದೆ. ಬಾಂಗ್ಲಾದೇಶ ಮತ್ತು ಇತರ ದೇಶಗಳಿಂದ ಅನಧಿಕೃತವಾಗಿ ನೆಲೆಸಿರುವ ವಿದೇಶಿಯರನ್ನು ಗುರುತಿಸುವುದು ಈ ಕಾರ್ಯಾಚರಣೆಯ ಮುಖ್ಯ ಉದ್ದೇಶವಾಗಿದೆ. ಹೈಕೋರ್ಟ್‌ನ ಸೂಚನೆಯ ನಂತರ ರಾಜ್ಯ ಸರ್ಕಾರ ಈ ಕ್ರಮಕ್ಕೆ ಮುಂದಾಗಿದ್ದು, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈಗಾಗಲೇ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ರಾಜ್ಯಾದ್ಯಂತ ಅನಧಿಕೃತವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿಗರು ಮತ್ತು ವಿದೇಶಿಯರನ್ನು ಹುಡುಕಲು ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ. ಈ ಹಿಂದೆ, ಸುಮಾರು 370 ಜನರನ್ನು ಗಡೀಪಾರು ಮಾಡಲಾಗಿದೆ ಎಂದು ಸದನದಲ್ಲಿ ಉತ್ತರ ನೀಡಿದ್ದನ್ನೂ ಈ ವೇಳೆ ಅವರು ಉಲ್ಲೇಖಿಸಿದ್ದಾರೆ. ಎಫ್‌ಆರ್‌ಒ (ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ) ದಾಖಲೆಗಳಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಅನಧಿಕೃತ ವಲಸಿಗರು ಕಾಣಸಿಗದಿರುವುದರಿಂದ, ಸರ್ಕಾರವು ಈ ವಿಶೇಷ ಡ್ರೈವ್ ಮೂಲಕ ಅವರನ್ನು ಪತ್ತೆಹಚ್ಚಲು ಮುಂದಾಗಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಟೀಚರ್ ತನ್ನ ಪ್ರೀತಿ ಒಪ್ಪಿಕೊಳ್ಳಲಿಲ್ಲವೆಂದು ರಸ್ತೆಯಲ್ಲಿ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ – Kannada News | Mainpuri Shocker: Student Attacks Teacher After Rejection, Biting Lips

ಮೈನ್​ಪುರಿ, ಫೆಬ್ರವರಿ 05: ನಾವು ಪ್ರೀತಿಸಿದವರು ಒಪ್ಪಿಕೊಳ್ಳಲಿಲ್ಲವೆಂದರೆ ಎಲ್ಲೇ ಇರಲಿ ಅವರು ಸುಖವಾಗಿರಲಿ ಎಂದು ಬಯಸುವುದು ನಿಜವಾದ ಪ್ರೀತಿ(Love). ಆದರೆ ಇಲ್ಲೊಬ್ಬ 12ನೇ ತರಗತಿ ವಿದ್ಯಾರ್ಥಿ ಶಿಕ್ಷಕಿ ತನ್ನ ಪ್ರೀತಿ ಮಾಡುವುದಿಲ್ಲ ಎಂದು ಗೊತ್ತಾದ ಬಳಿಕ ಆತ ರಸ್ತೆಯಲ್ಲೇ ಶಿಕ್ಷಕಿಯ ತುಟಿಯ ಕಚ್ಚಿ ತುಂಡರಿಸಿರುವ ಘಟನೆ ಉತ್ತರ ಪ್ರದೇಶದ ಮೈನ್​ಪುರಿಯಲ್ಲಿ ನಡೆದಿದೆ. ಶಿಕ್ಷಕಿ ತನ್ನ ಪ್ರೀತಿಯನ್ನು ಒಪ್ಪಿಕೊಂಡಿಲ್ಲವೆಂದು ಕ್ರೌರ್ಯದ ಎಲ್ಲಾ ಮಿತಿಗಳನ್ನು ಆತ ದಾಟಿದ್ದಾನೆ. ಗಂಭೀರವಾಗಿ ಗಾಯಗೊಂಡ ಶಿಕ್ಷಕಿಯನ್ನು ಆಗ್ರಾಕ್ಕೆ ಕಳುಹಿಸಲಾಗಿದೆ, ಆಕೆಯ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.

ಪೊಲೀಸರು ಆರೋಪಿ ವಿದ್ಯಾರ್ಥಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮೈನ್‌ಪುರಿಯ ಕೊಟ್ವಾಲಿ ಪ್ರದೇಶದಲ್ಲಿ, 12 ನೇ ತರಗತಿಯ ವಿದ್ಯಾರ್ಥಿ ಅಖಂಡ್ ಪ್ರತಾಪ್ ಸಿಂಗ್ ಕಾಲೇಜಿನಲ್ಲಿ ತನ್ನ ಶಿಕ್ಷಕಿಗೆ ಕಿರುಕುಳ ನೀಡಲು ಶುರು ಮಾಡಿದ್ದ. ಶಿಕ್ಷಕಿಯ ಕುಟುಂಬದವರು ದೂರು ನೀಡಿದ ಬಳಿಕ ಸ್ವಲ್ಪ ಸಮಯದವರೆಗೆ ನಡವಳಿಕೆ ಸಹಜವಾಗಿತ್ತು.

ಆದರೆ ವಿದ್ಯಾರ್ಥಿ ಮತ್ತೆ ಪೀಡಿಸಲು ಶುರು ಮಾಡಿದ್ದ. ಶಿಕ್ಷಕಿ ಹೋದ ಸ್ಥಳದಲ್ಲೆಲ್ಲಾ ಆತ ಹಿಂಬಾಲಿಸುತ್ತಿದ್ದ. ಆಕೆ ಅದನ್ನು ವಿರೋಧಿಸಿದಾಗ ಈತ ಭಯಾನಕ ಹೆಜ್ಜೆ ಇಟ್ಟಿದ್ದ. ಆಕೆ ಆ ಕಾಲೇಜನ್ನೇ ಬಿಟ್ಟು ಬೇರೆಡೆ ಕೆಲಸ ಮಾಡಲು ಶುರು ಮಾಡಿದ್ದಳು, ಆದರೆ ಅಲ್ಲಿಯೂ ಬಂದು ಆತ ತೊಂದರೆ ಕೊಡುತ್ತಿದ್ದ. ಆಕೆಯ ಎರಡೂ ತುಟಿಗಳನ್ನು ಕತ್ತರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ನಗರದ ಆಗ್ರಾ ರಸ್ತೆಯಲ್ಲಿರುವ ಖಾಸಗಿ ಕಾಲೇಜಿನಲ್ಲಿ ತನ್ನ ಸಹೋದರಿ ಪಾಠ ಮಾಡುತ್ತಿದ್ದಾಳೆ ಎಂದು ಶಿಕ್ಷಕಿಯ ಸಹೋದರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಅಖಂಡ್ ಪ್ರತಾಪ್ ಸಿಂಗ್ ಎಂಬ 12 ನೇ ತರಗತಿಯ ವಿದ್ಯಾರ್ಥಿ ತನ್ನ ಸಹೋದರಿಯ ಮೇಲೆ ಕಣ್ಣಿಟ್ಟಿದ್ದು, ಆಗಾಗ ಕೆಟ್ಟದಾಗಿ ನಡೆದುಕೊಳ್ಳುತ್ತಿದ್ದ ಎಂದು ಹೇಳಿದ್ದಾರೆ. ಶಿಕ್ಷಕಿ ವಿದ್ಯಾರ್ಥಿಯ ತಾಯಿಗೆ ಈ ಬಗ್ಗೆ ದೂರು ನೀಡಿದ್ದರು ಆಗ ಇಂಥಾ ತಪ್ಪು ಮತ್ತೆ ಆಗುವುದಿಲ್ಲ ಎಂದು ತಾಯಿ ಭರವಸೆ ನೀಡಿದ್ದರು. ಆದರೂ ನಡವಳಿಕೆ ಬದಲಾಗಲಿಲ್ಲ.

ಮತ್ತಷ್ಟು ಓದಿ: ಪ್ರೀತಿ ಪ್ರೇಮದ ಹೆಸರಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ: ಲವ್ ಜಿಹಾದ್​​ಗೆ ಬಲಿಯಾದ ಹಿಂದೂ ಯುವತಿ ರೀಟಾ

ವಿದ್ಯಾರ್ಥಿಯ ಕಿರುಕುಳದಿಂದ ಬೇಸತ್ತ ಶಿಕ್ಷಕಿ ಆಗ್ರಾ ರಸ್ತೆಯ ಕಾಲೇಜನ್ನು ತೊರೆದು ಜ್ಯೋತಿ ರಸ್ತೆಯಲ್ಲಿರುವ ಮತ್ತೊಂದು ಕಾಲೇಜಿನಲ್ಲಿ ಪಾಠ ಮಾಡುತ್ತಿದ್ದರು.ಆರೋಪಿ ಅಖಂಡ್ ಪ್ರತಾಪ್ ಧೈರ್ಯಗೆಡಲಿಲ್ಲ. ಹೊಸ ಕಾಲೇಜಿಗೆ ಹೋಗುವಾಗ ಶಿಕ್ಷಕಿಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದ. ಅನೈತಿಕ ಸಂಬಂಧಕ್ಕೆ ಒತ್ತಡ ಹೇರಿದ್ದ.

ಶಿಕ್ಷಕಿಯ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಫತೇ ಬಹದ್ದೂರ್ ಸಿಂಗ್ ತಿಳಿಸಿದ್ದಾರೆ. ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಮತ್ತು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಟಿ20 ವಿಶ್ವಕಪ್​ನಲ್ಲಿ 10 ಹೊಸ ನಿಯಮಗಳು ಜಾರಿ! – Kannada News | New Rules in ICC T20 World Cup 2026

ಬಹುನಿರೀಕ್ಷಿತ ಟಿ20 ವಿಶ್ವಕಪ್​ಗೆ ವೇದಿಕೆ ಸಿದ್ಧವಾಗಿದೆ. ಫೆಬ್ರವರಿ 7 ರಿಂದ ಶುರುವಾಗಲಿರುವ 20 ತಂಡಗಳ ಚುಟಕು ಮಹಾ ಸಮರಕ್ಕೂ ಮುನ್ನವೇ ಐಸಿಸಿ ಕೆಲ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳ ಮೂಲಕ ಪಂದ್ಯವನ್ನು ಮತ್ತಷ್ಟು ರೋಚಕ ಹಾಗೂ ನ್ಯಾಯಯುತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅದರಂತೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಜಾರಿಯಲ್ಲಿರುವ ಹೊಸ ನಿಯಮಗಳಾವುವು ಎಂದು ನೋಡುವುದಾದರೆ…

  1. ಸ್ಟಾಪ್ ಕ್ಲಾಕ್ ನಿಯಮ: ಓವರ್‌ಗಳ ನಡುವೆ ಕಡ್ಡಾಯ 60-ಸೆಕೆಂಡ್‌ಗಳ “ಸ್ಟಾಪ್ ಕ್ಲಾಕ್” ಈಗ ಜಾರಿಯಲ್ಲಿರಲಿದೆ. ಅಂದರೆ ಹಿಂದಿನ ಓವರ್ ಮುಗಿದ ಒಂದು ನಿಮಿಷದೊಳಗೆ ಫೀಲ್ಡಿಂಗ್ ತಂಡವು ಮುಂದಿನ ಓವರ್ ಎಸೆಯಲು ಸಿದ್ಧರಾಗಿರಬೇಕು.
  2. 5 ರನ್​ಗಳ ಪೆನಾಲ್ಟಿ: ಸ್ಟಾಪ್ ಕ್ಲಾಕ್ ನಿಯಮವನ್ನು ಉಲ್ಲಂಘಿಸಿದರೆ, ಪ್ರತಿ ಇನ್ನಿಂಗ್ಸ್‌ನಲ್ಲಿ ಎರಡು ಬಾರಿ ಎಚ್ಚರಿಕೆ ನೀಡಲಾಗುತ್ತದೆ. ಆ ನಂತರದ ಉಲ್ಲಂಘನೆಗಳಿಗೆ ಪ್ರತಿ ಬಾರಿ 5 ರನ್‌ಗಳ ದಂಡ ವಿಧಿಸಲಾಗುತ್ತದೆ.
  3. ಬೌಂಡರಿ ಫೀಲ್ಡಿಂಗ್ ನಿಯಮ: ಬೌಂಡರಿಯ ಆಚೆ ಚೆಂಡನ್ನು ತಡೆಯಲು ಫೀಲ್ಡರ್‌ಗಳು ಮೈದಾನದ ಒಳಗಿನಿಂದ ಹಾರಿರಬೇಕು. ಅವರು ಚೆಂಡನ್ನು ಹಿಂದಕ್ಕೆ ತಳ್ಳಲು ಬೌಂಡರಿಯ ಹೊರಗಿನಿಂದ ಹಾರಿದರೆ, ಅದನ್ನು ಬೌಂಡರಿ ಎಂದು ಪರಿಗಣಿಸಲಾಗುತ್ತದೆ.
  4. ಶಾರ್ಟ್ ರನ್ ಪೆನಾಲ್ಟಿ: ಬ್ಯಾಟ್ಸ್​ಮನ್ ಉದ್ದೇಶಪೂರ್ವಕವಾಗಿ ಶಾರ್ಟ್ ರನ್ ಮಾಡಿದರೆ, ಬ್ಯಾಟಿಂಗ್ ತಂಡಕ್ಕೆ 5 ರನ್​ಗಳ ಪೆನಾಲ್ಟಿ ವಿಧಿಸಲಾಗುತ್ತದೆ. ಇದನ್ನು ಫೀಲ್ಡ್ ಅಂಪೈರ್ ನಿರ್ಧರಿಸಲಿದ್ದಾರೆ.
  5. ಬ್ಯಾಟರ್ ಆಯ್ಕೆ: ಉದ್ದೇಶಪೂರ್ವಕವಾಗಿ ಶಾರ್ಟ್ ರನ್ ಮಾಡಿ ಸ್ಟ್ರೈಕ್​ ನೀಡಲು ಯತ್ನಿಸಿದರೆ, ಅದನ್ನು ಅಮಾನ್ಯ ಎಂದು ಪರಿಗಣಿಸಲಾಗುತ್ತದೆ. ಅಲ್ಲದೆ ಮುಂದಿನ ಎಸೆತಕ್ಕೆ ಯಾವ ಬ್ಯಾಟರ್ ಸ್ಟ್ರೈಕ್ ತೆಗೆದುಕೊಳ್ಳಬೇಕೆಂದು ಆಯ್ಕೆ ಮಾಡುವ ಹಕ್ಕು ಫೀಲ್ಡಿಂಗ್ ತಂಡದ ನಾಯಕನಿಗೆ ನೀಡಲಾಗುತ್ತದೆ.
  6. ಕನ್ಕ್ಯುಶನ್ ಬದಲಿ ಆಟಗಾರರು: ಸಮಾನ ಬದಲಿ ಆಟಗಾರರು ಪಾರದರ್ಶಕವಾಗಿರುವುದನ್ನು ಖಚಿತಪಡಿಸಿಕೊಳ್ಳಲು ತಂಡಗಳು ಈಗ ಐದು ನಿರ್ದಿಷ್ಟ ಬದಲಿ ಆಟಗಾರರ ಪಟ್ಟಿಯನ್ನು ಸಲ್ಲಿಸಬೇಕು. ಈ ಬದಲಿ ಆಟಗಾರರ ಪಟ್ಟಿಯಲ್ಲಿ ವಿಕೆಟ್ ಕೀಪರ್, ಬ್ಯಾಟರ್, ವೇಗದ ಬೌಲರ್, ಸ್ಪಿನ್ನರ್ ಮತ್ತು ಆಲ್-ರೌಂಡರ್ ಇರಲೇಬೇಕು. ಇವರಲ್ಲಿ ಆಯಾ ಆಟಗಾರರ ಪಾತ್ರದ ಬದಲಿಗೆ ಕನ್ಕ್ಯುಶನ್ ಬದಲಿ ಆಟಗಾರರನ್ನು ಆಯ್ಕೆ ಮಾಡಬೇಕಾಗುತ್ತದೆ.
  7. ಡಿಆರ್‌ಎಸ್ (DRS) ಬದಲಾವಣೆ: ಡಿಆರ್​ಎಸ್ ರಿವ್ಯೂ ವೇಳೆ “ಅಂಪೈರ್ಸ್ ಕಾಲ್” (Umpire’s Call) ಬಂದರೆ ಇನ್ನು ಮುಂದೆ ರಿವ್ಯೂ ಕಳೆದುಕೊಳ್ಳುವುದಿಲ್ಲ. ಇದರ ಹೊರತಾಗಿ ಒಂದು ತಂಡಕ್ಕೆ ಇನಿಂಗ್ಸ್​ಗೆ 2 ಡಿಆರ್​ಎಸ್​ ಆಯ್ಕೆಗಳು ಮಾತ್ರ ಇರಲಿದೆ.
  8. ಬಾಲ್ ಸೆಟಲ್ಮೆಂಟ್ ನಿಯಮ: ಇನ್ನು ಮುಂದೆ ಚೆಂಡು ಬೌಲರ್ ಅಥವಾ ವಿಕೆಟ್ ಕೀಪರ್ ಅನ್ನು ತಲುಪಿದಾಗ ಮಾತ್ರ ಸೆಟಲ್ಡ್ ಎಂದು ಪರಿಗಣಿಸುವ ಅಗತ್ಯವಿಲ್ಲ. ಮೈದಾನದಲ್ಲಿ ಸ್ಥಿರವಾಗಿರುವ ಯಾವುದೇ ಫೀಲ್ಡರ್ ಅನ್ನು ತಲುಪಿದರೆ ಅಂಪೈರ್ ಚೆಂಡನ್ನು ಡೆಡ್ ಅಥವಾ ಸೆಟಲ್ಡ್ ಎಂದು ಪರಿಗಣಿಸಬಹುದು.
  9. ವಿಕೆಟ್ ಕೀಪಿಂಗ್ ನಿಯಮ ಬದಲಾವಣೆ: ಬೌಲರ್ ಚೆಂಡನ್ನು ಎಸೆಯುವ ಮುನ್ನ ವಿಕೆಟ್ ಕೀಪರ್​ನ ಕೈಗಳು ಸ್ಟಂಪ್‌ಗಳ ಮುಂದೆ ಇದ್ದರೆ, ಅದು ನೋ ಬಾಲ್ ಅಲ್ಲ. ಹಾಗೆಯೇ ಬೌಲರ್ ರನ್-ಅಪ್‌ನಲ್ಲಿದ್ದಾಗಲೂ ಕೀಪರ್‌ನ ಕೈಗವಸುಗಳು ಸ್ಟಂಪ್‌ಗಳ ಮುಂದೆ ಇದ್ದರೆ ಅದನ್ನೂ ಸಹ ನೋ-ಬಾಲ್ ಎಂದು ಪರಿಗಣಿಸಲಾಗುವುದಿಲ್ಲ. ಬದಲಾಗಿ ಚೆಂಡನ್ನು ಬೌಲ್ ಮಾಡಿದ ನಂತರ, ಕೀಪರ್‌ನ ಕೈಗಳು ಸ್ಟಂಪ್‌ಗಳ ಹಿಂದೆ ಇರಬೇಕು. ಅಂದರೆ ಬೌಲರ್​ ಚೆಂಡನ್ನು ಎಸೆದ ಬಳಿಕ ವಿಕೆಟ್ ಕೀಪರ್​ನ ಗ್ಲೌಸ್ ಸ್ಟಂಪ್​ಗಳ ಮುಂದೆ ಇರಬಾರದು.
  10. ಸ್ಟಂಪ್ ಔಟ್ – ರನೌಟ್ ನಿಯಮ: ರನ್ ಔಟ್ ಅಥವಾ ಸ್ಟಂಪಿಂಗ್ ಸಮಯದಲ್ಲಿ ಫೀಲ್ಡರ್ ಅಥವಾ ಕೀಪರ್ ಚೆಂಡನ್ನು ಸಂಪೂರ್ಣವಾಗಿ ತಮ್ಮ ಕೈಯಲ್ಲಿ ಹೊಂದಿರಬೇಕು ಎಂದು ಎಂಸಿಸಿ ಸ್ಪಷ್ಟಪಡಿಸಿದೆ. ಅಂದರೆ ಕ್ಯಾಚ್ ಸಮಯದಲ್ಲಿ ಹೇಗೆ ಚೆಂಡು ಸಂಪೂರ್ಣವಾಗಿ ಆಟಗಾರನ ಕೈಯಲ್ಲಿರಬೇಕೋ, ಅದೇ ರೀತಿ ಇನ್ಮುಂದೆ ಸ್ಟಂಪಿಂಗ್ ಮತ್ತು ರನೌಟ್​ಗಳ ಸಮಯದ ವಿಕೆಟ್ ಕೀಪರ್ ಹಾಗೂ ಫೀಲ್ಡರ್​ ಚೆಂಡಿನ ಮೇಲೆ ನಿಯಂತ್ರಣ ಹೊಂದಿರಬೇಕು ಎಂದು ತಿಳಿಸಲಾಗಿದೆ.

Published On – 11:53 am, Thu, 5 February 26

Source link

ಸಿದ್ದರಾಮಯ್ಯ Vs ಡಿ.ಕೆ. ಶಿವಕುಮಾರ್​​: ಎಐಸಿಸಿ ನಾಯಕರ ಮೌನದ ಬಗ್ಗೆ ‘ಕೈ ‘ ಶಾಸಕರಲ್ಲೇ ಬೇಸರ! – Kannada News | Karnataka Congress Leadership Crisis: MLAs Blame High Command’s Silence, Fear Election Impact

ರಾಜ್ಯ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ಗೊಂದಲImage Credit source: Google

ಬೆಂಗಳೂರು, ಫೆಬ್ರವರಿ 05: ರಾಜ್ಯ ಕಾಂಗ್ರೆಸ್​​ನಲ್ಲಿ ಕಳೆದ ಕೆಲ ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಭುಗಲೇಳುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್​ ಮೌನದ ಬಗ್ಗೆ ಕಾಂಗ್ರೆಸ್​ ಶಾಸಕರು ಬೇಸರ ಹೊರಹಾಕಿದ್ದು, ನಾಯಕತ್ವ ಬದಲಾವಣೆ ಗೊಂದಲದಿಂದ ನಮ್ಮ ಸ್ಥಿತಿ ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ ಎಂದು ಅಲವತ್ತುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೆ ಕೆಲವೇ ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಬರಲಿದೆ. ಹೀಗಿದ್ದರೂ ನಾಯಕತ್ವ ಬದಲಾವಣೆ ವಿಷಯವನ್ನು ಹೈಕಮಾಂಡ್ ಇತ್ಯರ್ಥಪಡಿಸದ ಕಾರಣ ಯಾರನ್ನು ನಂಬಿ ಚುನಾವಣೆ ಎದುರಿಸಬೇಕು ಎಂಬುದೇ ಕಾಂಗ್ರೆಸಿಗರ ಗೊಂದಲಕ್ಕೆ ಕಾರಣವಾಗಿದೆಯಂತೆ.

ಒಬ್ಬರ ಬಳಿ ಹೋದ್ರೆ ಮತ್ತೊಬ್ಬರಿಗೆ ಸಿಟ್ಟು

ಸಿಎಂ ಸಿದ್ದರಾಮಯ್ಯ ಬಳಿ ಅನುದಾನ ಕೇಳಲೆಂದು ತೆರಳಿದರೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಅವರಿಗೆ ಬೇಸರವಾಗುತ್ತೆ. ಇತ್ತ ಡಿಸಿಎಂ ಮನೆಗೆ ತೆರಳಿದರೆ ಸಿಎಂಗೆ ಸಿಟ್ಟು ಬರುತ್ತೆ. ಹೀಗಿರುವಾಗ ನಾವು ಏನು ಮಾಡೋದು ಎಂದು ಅಧಿವೇಶನ ನಡೆಯುವ ಸಂದರ್ಭದಲ್ಲಿ ಶಾಸಕರು ಪರಸ್ಪರ ಬೇಸರ ಹಂಚಿಕೊಂಡಿದ್ದಾರೆ. ಅಲ್ಲದೆ ಹಲವು ಬಾರಿ ಹಿರಿಯ ನಾಯಕರೇ ವಿಷಯ ಪ್ರಸ್ತಾಪಿಸದರೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೌನಕ್ಕೆ ಶರಣಾಗಿದ್ದಾರೆ. ಐಸಿಸಿ ನಾಯಕರ ಈ ಮೌನದಿಂದಲೇ ಉಂಟಾಗಿರುವ ಗೊಂದಲ ಮತ್ತಷ್ಟು ಹೆಚ್ಚಾಗುತ್ತಿದೆ ಎಂದು ಕೆಲ ಶಾಸಕರು ಅಭಿಪ್ರಾಯಪಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನವೇ ಬಿಜೆಪಿ, ಜೆಡಿಎಸ್ ಟಿಕೆಟ್ ಫೈಟ್! ನಿಖಿಲ್ ವಿರುದ್ಧ ಕೇಸರಿ ಪಡೆ ಬಹಿರಂಗ ವಾಗ್ದಾಳಿ

ಸ್ಥಳೀಯ ಸಂಸ್ಥೆಯ ಚುನಾವಣೆ ಮೇಲೆ ಪರಿಣಾಮದ ಆತಂಕ

ನಾಯಕತ್ವ ವಿಚಾರವಾಗಿ ಏನೇ ತೀರ್ಮಾನವಿದ್ದರೂ ಕರೆದು ಮಾತುಕತೆ ನಡೆಸುವುದು ಸೂಕ್ತ. ಗೊಂದಲ ಹೀಗೇ ಮುಂದುವರಿದರೆ ಅದು ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಆಗಬಹುದು. ಹೀಗಾಗಿ ಎಲ್ಲ ಹಿರಿಯ ಸಚಿವರೂ ಗಾಢ ಮೌನ ಮುರಿಯುವಂತೆ ಕಾಂಗ್ರೆಸ್ ಶಾಸಕರು ಆಗ್ರಹಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ನಡೆದ ಶಾಸಕರ ಸಭೆಯಲ್ಲೂ ಇದೇ ಅಭಿಪ್ರಾಯ ವ್ಯಕ್ತವಾಗಿದ್ದು, ಖರ್ಗೆ ಮತ್ತು ವೇಣುಗೋಪಾಲ್​​ ಅವರ ಮೌನದ ಬಗ್ಗೆ ಸ್ವಪಕ್ಷ ಶಾಸಕರೇ ಬೇಸರ ವ್ಯಕ್ತಪಡಿಸಿದ್ದಾರಂತೆ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್​​ನ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬರುತ್ತಾ ಎಂಬ ಪ್ರಶ್ನೆ ಉದ್ಭವಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 11:48 am, Thu, 5 February 26

Source link

‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಸೂಚನೆ ಕೊಟ್ಟ ನಿರ್ದೇಶಕನ ಪತ್ನಿ ಯಾಮಿ ಗೌತಮ್

‘ಧುರಂಧರ್’ ಸಿನಿಮಾ ಯಶಸ್ಸು ಕಂಡ ಬಳಿಕ ‘ಧುರಂಧರ್ 2’ ಬಗ್ಗೆ ನಿರೀಕ್ಷೆ ಹುಟ್ಟಿದೆ. ಈ ಚಿತ್ರದಲ್ಲಿ ಏನು ತೋರಿಸುತ್ತಾರೆ ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ನಿರ್ದೇಶಕ ಆದಿತ್ಯ ಧಾರ್ ಪತ್ನಿ ಯಾಮಿ ಗೌತಮ್ ಈ ಬಗ್ಗೆ ಮಾತನಾಡಿದ್ದಾರೆ. ಮೊದಲ ಭಾಗಕ್ಕಿಂತ ಎರಡನೇ ಭಾಗ ಹೆಚ್ಚು ಪವರ್​​ಫುಲ್ ಆಗಿರಲಿದೆ ಎಂದಿದ್ದಾರೆ. 2026ಕ್ಕೆ ಒಂದೊಳ್ಳೆಯ ಚಿತ್ರ ಸಿಕ್ಕಂತೆ ಆಗುತ್ತದೆ ಎಂಬುದು ಅವರ ಅಭಿಪ್ರಾಯ. ಹಲವು ಅತಿಥಿ ಪಾತ್ರಗಳು ಕೂಡ ಸಿನಿಮಾದಲ್ಲಿ ಇರಲಿವೆಯಂತೆ. ಈ ಎಲ್ಲಾ ಕಾರಣದಿಂದ ಅಭಿಮಾನಿಗಳ ನಿರೀಕ್ಷೆ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೆ ಕುಸಿತ; ಇಲ್ಲಿದೆ ದರಪಟ್ಟಿ – Kannada News | Gold Price Today on 5th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 5: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಕುಸಿತದ ಹಾದಿಗೆ ಬಂದಿವೆ. ನಿನ್ನೆ ಬುಧವಾರ ಬರೋಬ್ಬರಿ 700ಕ್ಕೂ ಹೆಚ್ಚು ರೂಗಳಷ್ಟು ಹೆಚ್ಚಿದ್ದ ಚಿನ್ನದ ಬೆಲೆ (Gold Rates) ಇವತ್ತು 460 ರೂ ತಗ್ಗಿದೆ. ಬೆಳ್ಳಿ ಬೆಲೆಯೂ 20 ರೂ ಕಡಿಮೆ ಆಗಿದೆ. ಇದರ ಬೆಲೆ ನಿನ್ನೆ ಒಂದೇ ದಿನ ಬರೋಬ್ಬರಿ 40 ರೂಗಳಷ್ಟು ಹೆಚ್ಚಿತ್ತು. ಈಗ ಮತ್ತೆ ಇಳಿಕೆ ಕಂಡಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 30,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 30,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 5ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,442 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,155 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,582 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 300 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,442 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,155 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 300 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,155 ರೂ
  • ಚೆನ್ನೈ: 14,320 ರೂ
  • ಮುಂಬೈ: 14,155 ರೂ
  • ದೆಹಲಿ: 14,170 ರೂ
  • ಕೋಲ್ಕತಾ: 14,155 ರೂ
  • ಕೇರಳ: 14,155 ರೂ
  • ಅಹ್ಮದಾಬಾದ್: 14,160 ರೂ
  • ಜೈಪುರ್: 14,170 ರೂ
  • ಲಕ್ನೋ: 14,170 ರೂ
  • ಭುವನೇಶ್ವರ್: 14,155 ರೂ

ಇದನ್ನೂ ಓದಿ: ಕೆಲ ದಿನಗಳಿಂದ ಚಿನ್ನ, ಬೆಳ್ಳಿ ಬೆಲೆಗಳ ಭರ್ಜರಿ ಕುಸಿತ; ಇಗೋ ಇಲ್ಲಿವೆ ಕಾರಣಗಳು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 615 ರಿಂಗಿಟ್ (14,084 ರುಪಾಯಿ)
  • ದುಬೈ: 549.50 ಡಿರಾಮ್ (13,527 ರುಪಾಯಿ)
  • ಅಮೆರಿಕ: 153.50 ಡಾಲರ್ (13,878 ರುಪಾಯಿ)
  • ಸಿಂಗಾಪುರ: 195.40 ಸಿಂಗಾಪುರ್ ಡಾಲರ್ (13,866 ರುಪಾಯಿ)
  • ಕತಾರ್: 554 ಕತಾರಿ ರಿಯಾಲ್ (13,742 ರೂ)
  • ಸೌದಿ ಅರೇಬಿಯಾ: 555 ಸೌದಿ ರಿಯಾಲ್ (13,381 ರುಪಾಯಿ)
  • ಓಮನ್: 58.20 ಒಮಾನಿ ರಿಯಾಲ್ (13,669 ರುಪಾಯಿ)
  • ಕುವೇತ್: 44.78 ಕುವೇತಿ ದಿನಾರ್ (13,248 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 300 ರೂ
  • ಚೆನ್ನೈ: 300 ರೂ
  • ಮುಂಬೈ: 300 ರೂ
  • ದೆಹಲಿ: 300 ರೂ
  • ಕೋಲ್ಕತಾ: 300 ರೂ
  • ಕೇರಳ: 300 ರೂ
  • ಅಹ್ಮದಾಬಾದ್: 300 ರೂ
  • ಜೈಪುರ್: 300 ರೂ
  • ಲಕ್ನೋ: 300 ರೂ
  • ಭುವನೇಶ್ವರ್: 300 ರೂ
  • ಪುಣೆ: 300

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಜೈಲಿಂದ ಹೊರಬರ್ತಿದ್ದಂತೆಯೇ ಮತ್ತೆ ಬಾಲಬಿಚ್ಚಿದ ಖತರ್ನಾಕ್ ವಂಚಕ: ಅಮಿತ್ ಶಾ ಆಪ್ತನೆಂದು ಹೇಳಿಕೊಂಡು ಮತ್ತಷ್ಟು ವಂಚನೆ – Kannada News | Karnataka Fraud: Sujayendra Arrested Again for Impersonating Amit Shah Aide, Fake Docs

ಸುಜಯೇಂದ್ರನ ವಿರುದ್ಧ ಮತ್ತೊಂದು FIR Image Credit source: Tv9 kannada

ಬೆಂಗಳೂರು, ಫೆ.5: ಕೇಂದ್ರ ಸಚಿವ ಅಮಿತ್ ಶಾ (Amit Shah) ಅವರ ಆಪ್ತ ಎಂದು ಹೇಳಿಕೊಂಡು ತಿರುಗುತ್ತಿದ್ದ ಖತರ್ನಾಕ್ ವಂಚಕ ಸುಜಯೇಂದ್ರ (Sujayendra) ಎಂಬಾತನ ವಿರುದ್ಧ ಈಗ ಮತ್ತೊಂದು ಎಫ್‌ಐಆರ್ (FIR) ದಾಖಲಾಗಿದೆ. ಅಧಿಕಾರ ಮತ್ತು ಪ್ರಭಾವವನ್ನು ದುರುಪಯೋಗಪಡಿಸಿಕೊಂಡು ಈತ ನಡೆಸುತ್ತಿದ್ದ ಹಗರಣಗಳು ಒಂದೊಂದಾಗಿ ಹೊರಬರುತ್ತಿವೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರದೀಪ್ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ರಾಜ್ಯಪಾಲರ ನಕಲಿ ಸಹಿ ಮತ್ತು ಲೋಕಭವನದ ಅಧಿಕೃತ ಲೆಟರ್ ಹೆಡ್ ಅನ್ನು ಬಳಸಿಕೊಂಡು ವಂಚನೆ ಎಸಗಿದ್ದಾನೆ ಎಂದು ಹೇಳಲಾಗಿದೆ.

2025ರಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಪತ್ರ ಬರೆದಿದ್ದ ಸುಜಯೇಂದ್ರ, ರಾಜ್ಯಪಾಲರೇ ಶಿಫಾರಸು ಮಾಡಿದ್ದಾರೆ ಎಂದು ನಂಬಿಸಿ ಒಬ್ಬ ವಿದ್ಯಾರ್ಥಿಗೆ ಸೀಟ್ ಮಂಜೂರು ಮಾಡುವಂತೆ ಸೂಚಿಸಿದ್ದ ಎಂದು ಹೇಳಲಾಗಿದೆ. ಈ ಹಿಂದೆ ಜಮ್ಮು ಮತ್ತು ಕಾಶ್ಮೀರದ ವೈದ್ಯರೊಬ್ಬರಿಗೆ ತಾನು ಕೇಂದ್ರದಲ್ಲಿ ಪ್ರಭಾವಿ ವ್ಯಕ್ತಿ ಎಂದು ನಂಬಿಸಿ ಸುಮಾರು 2.5 ಕೋಟಿ ರೂಪಾಯಿ ವಂಚಿಸಿದ್ದ. ಈ ಪ್ರಕರಣದಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದರು. ಈತನ ಮನೆಯ ಮೇಲೆ ದಾಳಿ ನಡೆಸಿದಾಗ ಕೇಂದ್ರ ಗೃಹ ಸಚಿವಾಲಯ ಮತ್ತು ಲೋಕಭವನದ ಹೆಸರಿನ ಹಲವು ನಕಲಿ ಲೆಟರ್ ಹೆಡ್‌ಗಳು ಮತ್ತು ನಕಲಿ ಸೀಲುಗಳು ಪತ್ತೆಯಾಗಿದ್ದವು.

ಈ ಹಿಂದೆ ವಂಚನೆ ಕೇಸ್‌ನಲ್ಲಿ ಜೈಲು ಸೇರಿದ್ದ ಈತ, ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದ. ಹೊರಬಂದ ಬೆನ್ನಲ್ಲೇ ಈತನ ಹಳೆಯ ನಕಲಿ ಪತ್ರಗಳ ಹಗರಣ ಈಗ ಬಯಲಾಗಿದೆ. ಪ್ರಕರಣದ ತನಿಖೆಯನ್ನು ವಿಧಾನಸೌಧ ಠಾಣೆಯಿಂದ ಕೇಸನ್ನು ವಿಜಯನಗರ ಠಾಣೆಗೆ ವರ್ಗಾಯಿಸಲಾಗಿದೆ. ನಕಲಿ ಪತ್ರಗಳು ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ಸುಜಯೇಂದ್ರನಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆ ವರದಿ ಪ್ರಕಾರ, ಸುಜಯೇಂದ್ರನ ಮನೆಯಲ್ಲಿ ಪತ್ತೆಯಾಗಿರುವ ದಸ್ತಾವೇಜುಗಳು ಮತ್ತು ಆತನ ವಂಚನೆಯ ಜಾಲವನ್ನು ನೋಡಿದರೆ, ಈ ಹಗರಣದ ವ್ಯಾಪ್ತಿ ದೊಡ್ಡದಿದೆ ಎಂಬ ಅನುಮಾನ ವ್ಯಕ್ತವಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಪರಾಧ ಪ್ರಮಾಣ ಕಡಿಮೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್​​​

ಸುಜಯೇಂದ್ರನ ಮನೆಯಲ್ಲಿ ಕೇವಲ ವಿಟಿಯು ಮಾತ್ರವಲ್ಲದೆ, ರಾಜ್ಯದ ಇತರ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ವೃತ್ತಿಪರ ಶಿಕ್ಷಣ ಸಂಸ್ಥೆಗಳಿಗೆ ಬರೆದಿದ್ದಾರೆ ಎನ್ನಲಾದ ಹಲವು ನಕಲಿ ಶಿಫಾರಸು ಪತ್ರಗಳು ಪತ್ತೆಯಾಗಿವೆ. ಮೆಡಿಕಲ್, ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕೋಟಾದಲ್ಲಿ ಸೀಟು ಕೊಡಿಸಲು ಇವುಗಳನ್ನು ಬಳಸಲಾಗಿದೆಯೇ ಎಂದು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಜಮ್ಮು-ಕಾಶ್ಮೀರದ ವೈದ್ಯರ ಪ್ರಕರಣ ಹೊರಬಂದ ಮೇಲೆ ಅನೇಕರು ದೂರು ನೀಡಲು ಮುಂದೆ ಬರುತ್ತಿದ್ದಾರೆ. ಕೇಂದ್ರ ಸಚಿವರ ಹೆಸರು ಬಳಸುತ್ತಿದ್ದರಿಂದ ಅನೇಕ ಪೋಷಕರು ನಂಬಿ ಲಕ್ಷ ಲಕ್ಷ ಹಣವನ್ನು ನೀಡಿದ್ದಾರೆ. ಇದರ ಜತೆಗೆ ಯಾವುದೇ ಪತ್ರವಿಲ್ಲದೆ ಸೀಟು ಮಂಜೂರು ಮಾಡುವುದು ಸುಲಭವಲ್ಲ. ಹಾಗಾಗಿ, ವಿಶ್ವವಿದ್ಯಾಲಯಗಳ ಅಥವಾ ಶಿಕ್ಷಣ ಇಲಾಖೆಯ ಕೆಲವು ಅಧಿಕಾರಿಗಳು ಈತನಿಗೆ ಅರಿವಿದ್ದೋ ಅಥವಾ ಅರಿವಿಲ್ಲದೆಯೋ ಸಹಕರಿಸಿದ್ದಾರೆಯೇ? ನಕಲಿ ಪತ್ರಗಳನ್ನು ಪರಿಶೀಲಿಸದೆ ಸೀಟು ನೀಡಲಾಗಿದೆಯೇ? ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಎಫ್‌ಐಆರ್​ನಲ್ಲಿ ಏನಿದೆ?

ಸುಜಯೇಂದ್ರ ಹೆಚ್.ಎನ್ ಎಂಬ ವ್ಯಕ್ತಿಯು ಮಾನ್ಯ ರಾಜ್ಯಪಾಲರ ಸಹಿಯನ್ನು ನಕಲಿ ಸಹಿ ಮಾಡಿ ರಾಜ್ಯಪಾಲರ ಕಾರ್ಯಾಲಯದ ಅಧಿಕೃತ ಪತ್ರದ ಆದೇಶವನ್ನು ಅನಧಿಕೃತವಾಗಿ ಬಳಸಿಕೊಂಡು ಜೂನ್ 2025 ರಲ್ಲಿ ವಿ.ಟಿ.ಯು ವಿಶ್ವವಿದ್ಯಾಲಯದ ಕುಲಪತಿಗಳಿಗೆ ಪತ್ರವನ್ನು ಹೊರಡಿಸಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರದೀಪ್ ಅವರು ನೀಡಿರುವ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಧಿಕೃತ ಲೆಟರ್ ಹೆಡ್‌ನ ದುರುಪಯೋಗ ಮತ್ತು ನಕಲಿ ಸಹಿಯು ಗಂಭೀರ ಅಪರಾಧವಾಗಿದ್ದು, ಇದರಿಂದ ಕಾರ್ಯಾಲಯಕ್ಕೆ ಆಡಳಿತಾತ್ಮಕವಾಗಿ ಮತ್ತು ಕಾನೂನು ಬದ್ಧ ಹಾಗೂ ಪ್ರತಿಷ್ಠೆಗೆ ಹಾನಿ ಉಂಟು ಮಾಡಿರುವ ವ್ಯಕ್ತಿಯ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಹೇಳಿದ್ದಾರೆ. ಬಿ.ಎನ್.ಎಸ್ (BNS) ಸೆಕ್ಷನ್ 336(3), 336(4), ಮತ್ತು 340(2) ಅಡಿಯಲ್ಲಿ ದಾಖಲಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version