ದಾವಣಗೆರೆ ಉಪಚುನಾವಣೆ: ಎಷ್ಟು ಮತದಾನ? ಬಿಜೆಪಿ-ಕಾಂಗ್ರೆಸ್​​ ನಾಯಕರ ಗೆಲುವಿನ ಲೆಕ್ಕಾಚಾರ ಏನು?

ದಾವಣಗೆರೆ ಉಪಚುನಾವಣೆ:  ಎಷ್ಟು ಮತದಾನ? ಬಿಜೆಪಿ-ಕಾಂಗ್ರೆಸ್​​ ನಾಯಕರ ಗೆಲುವಿನ ಲೆಕ್ಕಾಚಾರ ಏನು?

ದಾವಣಗೆರೆ, (ಏಪ್ರಿಲ್ 10): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Davanagere By Election) ಅಂತ್ಯವಾಗಿದೆ. ಕಳೆದ ಹದಿನೈದು ಇಪ್ಪತ್ತು ದಿನಗಳ ಅಬ್ಬರದ ಪ್ರಚಾರ ಒಂದು ರೀತಿಯಲ್ಲಿ ಭರ್ಜರಿ ಮಳೆ ಸುರಿದು ನಿಂತ ಅನುಭವ. ಬಿರು ಬಿಸಿಲು, ಸೀಮೆಂಟ್ ರಸ್ತೆ ಉಲ್ಟಾ ಝಳ. ನಿರಂತರ ಹುರಿಯುತ್ತಿರುವ ಮಂಡಕ್ಕಿ ಭಟ್ಟಿಗಳ ಕಾವಿಗಿಂತ ಇದು ಸ್ವಲ್ಪ ಹೆಚ್ಚಾಗಿತ್ತು. ನಾವು ಹೇಳುತ್ತಿರುವುದು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಬಗ್ಗೆ. ಹಿರಿಯ ರಾಜಕಾರಣಿ ಆರು ಸಲ ಶಾಸಕ. ಒಮ್ಮೆ ಸಚಿವ, ಒಮ್ಮೆ ಸಂಸದ ಜೊತೆಗೆ ವೀರಶೈವ ಮಹಾಸಭೆಯ ರಾಷ್ಟೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ಕ್ಷೇತ್ರ ದಾವಣಗೆರ ದಕ್ಷಿಣ ಕ್ಷೇತ್ರದ ಉಪಚುನಾವಣೆ ಮುಗಿದ್ದು, ಸೋಲು ಗೆಲುವಿನ ಲೆಕ್ಕಾಚಾರ ಶುರುವಾಗಿದೆ.

ಮತದಾನದ ಅಂಕಿ ಸಂಖ್ಯೆ

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಮತದಾನದ ಅಂಕಿ ಸಂಖ್ಯೆ ನೋಡುವುದಾದರೆ, ಒಟ್ಟು 158131 ಜನರಿಂದ ಮತದಾನ ಮಾಡಿದ್ದಾರೆ. ಅಂದ್ರೆ ಶೇ 68.43 ರಷ್ಟು ಮತದಾನ ದಾಖಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ 50 ಮತಗಟ್ಟೆಗಳಲ್ಲಿ ಅತಿ ಹೆಚ್ಚು ಶೇ 70 ರಿಂದ 80 ರಷ್ಟು ಮತದಾನ ಆಗಿದೆ. ಕಳೆದ 2023 ಚುನಾವಣೆಯಲ್ಲಿ ಶೇ 69.48 ರಷ್ಟು ಮತದಾನವಾಗಿತ್ತು. ಆದ್ರೆ ಈ ಸಲ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಹೊಸದಾಗಿ 20397 ಮತದಾರ ಸೇರ್ಪಡೆ ಆಗಿದ್ದಾರೆ. ಈ ಉಪ ಚುನಾವಣೆಯಲ್ಲಿ ಮತದಾನದಿಂದ 72141 ಜನರು ದೂರ ಉಳಿದಿದ್ದಾರೆ. 117690 ಮಹಿಳೆಯಲ್ಲಿ 79823ಮಹಿಳೆಯರು ಮತದಾನ ಮಾಡಿದ್ದಾರೆ. ಇನ್ನು 11339 ಪುರುಷರಲ್ಲಿ 78290 ಪುರುಷರು ತಮ್ಮ ಹಕ್ಕು ಚಲಾಯಿಸಿದ್ದಾರೆ. 43 ಇತರೇ ಮತದಾರರಲ್ಲಿ 18 ಜನ ಓಟ್ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮುಸ್ಲಿಂ ನಾಯಕರಲ್ಲಿ ಕಿಚ್ಚು ಹೊತ್ತಿಸಿದ ದಾವಣಗೆರೆ ದಂಗಲ್, ಪಕ್ಷದ ವಿರುದ್ಧ ಜಮೀರ್ ಷಡ್ಯಂತ್ರ ರೂಪಿಸಿದ್ರಾ?

ಮುಸ್ಲಿಮರು ಹೆಚ್ಚಿರುವ ಮತಗಟ್ಟೆಯಲ್ಲಿ 56 ಸಾವಿರ ಮತದಾನ

ಈಗ ಕ್ಷೇತ್ರದಲ್ಲಿ ಅಲ್ಪ ಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದ ಕಾರಣ ಅವರು ತಮಗೆ ಟಿಕೆಟ್ ಕೇಳಿದ್ರು. ಆದ್ರೆ ಕಾಂಗ್ರೆಸ್ ಹೈಕಮಾಂಡ್ ಶಾಮನೂರು ಮೊಮ್ಮಗ ಸಮರ್ಥ ಶಾಮನೂರ್ ಗೆ ಟಿಕೆಟ್ ನೀಡಿತ್ತು. ಸಿಎಂ ಮತ್ತು ಡಿಸಿಎಂ ತಲಾ ಮೂರು ದಿನ ಇಲ್ಲಿಯೇ ಠಿಕಾಣಿ ಹೂಡಿ ಪ್ರಚಾರ ಮಾಡಿದ್ದರು. ಮುಸ್ಲಿಂ ಮುಖಂಡರ ಮನವೊಲಿಸಿ ಕಣದಿಂದ ಹಿಂದೆ ಸರಿಸಿದ್ದು, ಕೆಲ ಗೊಂದಲಗಳ ನಡುವೆ ಮತದಾನ ಮುಗಿದೆ. ಇನ್ನು ಅಂಕಿ-ಸಂಖ್ಯೆಗಳ ಲೆಕ್ಕಾಚಾರಕ್ಕೆ ಹೋದ್ರೆ ಮುಸ್ಲಿಂ ಮತದಾರರು ಹೆಚ್ಚಿರುವ ಮತಗಟ್ಟೆಯಲ್ಲಿ ಬರೋಬರಿ 56 ಸಾವಿರ ಮತದಾನವಾಗಿದೆ. ಈ ಮತ ಬುಟ್ಟಿಗೆ ಎಸ್ ಪಿಐ ಮತ್ತು ಮುಸ್ಲಿಂ ಪಕ್ಷೇತರರು ಕೈ ಹಾಕಿದ್ದಾರೆ ಎಂಬ ಚರ್ಚೆ ನಡೆದಿದೆ. ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಮುಸ್ಲಿಮರ ಮತಗಳನ್ನ ಸೆಳೆಯಲು ಬಿಜೆಪಿ ಸಹ ಪ್ರಯತ್ನಿಸಿದೆ. ಕೇಸರಿ ಪಡೆ ಇದೇ ಮೊದಲು ಅಲ್ಪಸಂಖ್ಯಾತರ ಬಗ್ಗೆ ಅನುಕಂಪ ತೋರಿಸಿದ್ದು. ಜೊತೆಗೆ ಬಹುತೇಕ ಸಭೆಗಳಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿದೆ ಎಂದು ಹೇಳಿಕೊಂಡು ಪ್ರಚಾರ ನಡೆಸಿದೆ. ಹೀಗಾಗಿ ಮುಸ್ಲಿಮರ ಮತಗಳ ವಿಭಜನೆಯಾಗಿವೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇನ್ನು ಅಲ್ಪಸಂಖ್ಯಾತರ ಮತಕ್ಕೆ ಇನ್ನೊಬ್ಬರು ಕೈ ಹಾಕಿದ್ದಾರೆ ಎಂದು ಚುನಾವಣೆ ಬಳಿಕ ಕಾಂಗ್ರೆಸ್ ಮುಖಂಡರು ನೀಡುತ್ತಿರುವ ಹೇಳಿಕೆ ಸಂಶಯಕ್ಕೆ ಕಾರಣವಾಗಿದೆ.

ಗೆಲುವಿನ ಉತ್ಸಾಹದಲ್ಲಿ ಬಿಜೆಪಿ

ಕಳೆದ 2023 ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿಜಿ ಅಜಯಕುಮಾರ 56416 ಅಂದ್ರೆ ಶೇ. 38.50 ರಷ್ಟು ಮತಪಡೆದಿದ್ದು. ಗೆಲುವು ಕಂಡಿದ್ದ ಶಾಮನೂರು ಶಿವಶಂಕರಪ್ಪ 84298 ಮತ ಅಂದ್ರೆ 57.60 ರಷ್ಟು ಓಟ್ ಪಡೆದು 27888 ಮತಗಳಿಂದ ಗೆದಿದ್ದರು. ಆದ್ರೆ, ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮಾಜ ಮತಗಳ ವಿಭಜನೆಯಾಗಿದ್ದು, ಇದು ಬಿಜೆಪಿಗೆ ಪ್ಲಸ್ ಆಗಿ ಗೆಲುವು ಸಾಧಿಸಲಿದ್ದೇ ಎನ್ನುವ ಲೆಕ್ಕಾಚಾರ ಕೇಸರಿ ಪಡೆ ನಾಯುಕರದ್ದು. .

ಕಾಂಗ್ರೆಸ್​ ಲೆಕ್ಕಾಚಾರವೇನು?

ಇನ್ನೊಂದೆಡೆ ಕಾಂಗ್ರೆಸ್​​ ನಾಯಕರ ಲೆಕ್ಕಾಚಾರವೇ ಬೇರೆ ಇದೆ. ಕಳೆದ ಚುನಾವಣೆಗಳನ್ನ ನೋಡಿದಾಗ ಮೇಲ್ಜಾತಿಯ ಜನ ಇರುವ ಮತಗಟ್ಟೆಯಲ್ಲಿ ಸಹ ಕಾಂಗ್ರೆಸ್ ಮತಗಳಿಸಿತ್ತು. ಇದು ಈ ಸಲ ಸಹ ಮುಂದುವರೆಯುವ ಸಾಧ್ಯತೆ ಇದೆ. ಮೇಲಾಗಿ ಶಾಮನೂರು ಶಿವಶಂಕರಪ್ಪ ವೀರಶೈವ ಸಮಾಜದ ಅಧ್ಯಕ್ಷ. ಹೀಗಾಗಿ ವೀರಶೈವದ ಮತಗಳ ಸಾಲಿಡ್ ಆಗಿ ಕಾಂಗ್ರೆಸ್ ಬಿದ್ದಿವೆ. ಇನ್ನು ಅಹಿಂದ ವರ್ಗದ ಮತಗಳು ಸಹ ತಮ್ಮ ಪರವಾಗಿ ಬಿದ್ದಿವೆ. ಹಾಗೇ ಅಲ್ಪಸಂಖ್ಯಾತರ ಮತಗಳು ಹೆಚ್ಚಾಗಿ ವಿಭಜನೆಯಾಗಿಲ್ಲ. ಅಲ್ಪ ಸ್ವಲ್ಪವಾಗಿರಬಹುದು. ಇದರಿಂದ ಫಲಿತಾಂಶದ ಮೇಲೆ ಪರಿಣಾಮ ಬೀರದ ಬದಲಿಗೆ ಗೆಲುವಿನ ಲೀಡ್ ಕಡಿಮೆಯಾಗಹುದು ಎನ್ನುವು ಕಾಂಗ್ರೆಸ್ಸಿಗರ ಲೆಕ್ಕಾಚಾರ.​​

ಏನೇ ಆಗಲಿ ಹಿಂದೆಂದು ಕಂಡರಿಯದ ಸ್ಪರ್ಧೆ ಈ ಸಲ ಆಗಿದೆ. ಜಿದ್ದಾಜಿದ್ದಿ ಸ್ವಲ್ಪ ಜಾಸ್ತಿಯೇ ಇತ್ತು. ಅವರು ಮತ ಕಿತ್ತರೇ, ಆ ಪ್ರದೇಶದಲ್ಲಿ ಇವರು ಸ್ವಲ್ಪ ಜಾಸ್ತಿ ತೆಗೆದುಕೊಂಡರೇ ನಮಗೆ ಅನುಕೂಲ ಎಂಬ ಮಾತುಗಳೇ ಕೇಳಿ ಬರುತ್ತಿವೆ. ಹೀಗಾಗಿ ಎರಡು ಪಕ್ಷಗಳ ಮುಖಂಡರಲ್ಲಿ ಗೆಲುವಿನ ವಿಶ್ವಾಸ ಅಂತು ಇದೆ.

Source link

‘ಜೈಲರ್ 2’ ಸಿನಿಮಾದಲ್ಲಿ ಪವನ್ ಕಲ್ಯಾಣ್? ಶಾರುಖ್ ಮಾಡಬೇಕಿದ್ದ ಪಾತ್ರ ಈಗ ಪವರ್ ಸ್ಟಾರ್ ಪಾಲು

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ, ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ‘ಜೈಲರ್ 2’ (Jailer 2) ಚಿತ್ರದ ಬಗ್ಗೆ ಈಗ ಒಂದು ಕುತೂಹಲಕಾರಿ ಸುದ್ದಿ ಕಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಈ ಚಿತ್ರದಲ್ಲಿ ಬರಲಿರುವ ಒಂದು ಪ್ರಮುಖ ಅತಿಥಿ ಪಾತ್ರದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಬದಲು ಟಾಲಿವುಡ್‌ನ ‘ಪವರ್ ಸ್ಟಾರ್’ ಪವನ್ ಕಲ್ಯಾಣ್ (Pawan Kalyan) ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಆ ಮೂಲಕ ‘ಜೈಲರ್ 2’ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚುವಂತಾಗಿದೆ.

ಮೊದಲಿಗೆ ಈ ಸಿನಿಮಾದಲ್ಲಿ ರಜನಿಕಾಂತ್ ಜೊತೆಗೆ ಶಾರುಖ್ ಖಾನ್ ಒಬ್ಬ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿ ಇತ್ತು. ಶಾರುಖ್ ಕೂಡ ಈ ಪಾತ್ರದ ಬಗ್ಗೆ ಆಸಕ್ತಿ ತೋರಿಸಿದ್ದರು ಎನ್ನಲಾಗಿತ್ತು. ಆದರೆ, ಪ್ರಸ್ತುತ ಅವರು ತಮ್ಮ ‘ಕಿಂಗ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಕಾರಣ, ಡೇಟ್ಸ್ ಹೊಂದಾಣಿಕೆಯಾಗದ ಹಿನ್ನೆಲೆಯಲ್ಲಿ ‘ಜೈಲರ್ 2’ ಆಫರ್ ತಿರಸ್ಕರಿಸಿದ್ದಾರೆ ಎನ್ನಲಾಗಿದೆ.

ಶಾರುಖ್ ಖಾನ್ ಡೇಟ್ಸ್ ಇಲ್ಲದ ಕಾರಣ ಚಿತ್ರತಂಡವು ಈಗ ಪವನ್ ಕಲ್ಯಾಣ್ ಅವರನ್ನು ಸಂಪರ್ಕಿಸಿದೆ ಎಂದು ವರದಿ ಆಗಿದೆ. ಒಂದು ವೇಳೆ ಇದು ನಿಜವಾದರೆ, ರಜನಿಕಾಂತ್ ಮತ್ತು ಪವನ್ ಕಲ್ಯಾಣ್ ಅವರನ್ನು ಒಂದೇ ಪರದೆಯ ಮೇಲೆ ನೋಡುವುದು ಅಭಿಮಾನಿಗಳಿಗೆ ಹಬ್ಬವೇ ಸರಿ. ಆದರೂ, ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಹೊರಬೀಳಬೇಕಿದೆ.

‘ಜೈಲರ್’ ಮೊದಲ ಭಾಗದಲ್ಲಿ ಮ್ಯಾಜಿಕ್ ಮಾಡಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಮತ್ತು ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರು ಈ ಸೀಕ್ವೆಲ್‌ನಲ್ಲೂ ತಮ್ಮ ಪಾತ್ರಗಳನ್ನು ಮುಂದುವರಿಸಲಿದ್ದಾರೆ. ಇದು ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಅವರ ಜೊತೆ ಪವನ್ ಕಲ್ಯಾಣ್ ಕೂಡ ಸೇರಿಕೊಂಡರೆ ಸಿನಿಮಾದ ಮಾಸ್ ಎಲಿಮೆಂಟ್ ಹೆಚ್ಚಲಿದೆ.

ಇದನ್ನೂ ಓದಿ: ‘ಜೈಲರ್ 2’ನಲ್ಲಿ ಶಿವಣ್ಣ, ಈ ಬಾರಿ ಕೇವಲ ಅತಿಥಿ ಪಾತ್ರವಲ್ಲ

ಈ ಸಿನಿಮಾದ ಚಿತ್ರೀಕರಣ ಶೀಘ್ರದಲ್ಲೇ ಮುಕ್ತಾಯಗೊಳ್ಳಲಿದ್ದು, ಈ ವರ್ಷದ ಅಂತ್ಯದ ವೇಳೆಗೆ ‘ಜೈಲರ್ 2’ ಬೆಳ್ಳಿ ಪರದೆಯ ಮೇಲೆ ಅಬ್ಬರಿಸಲು ಸಿದ್ಧವಾಗುತ್ತಿದೆ ಎಂದು ಸ್ವತಃ ರಜನಿಕಾಂತ್ ಅವರೇ ಇತ್ತೀಚೆಗೆ ಸುಳಿವು ನೀಡಿದ್ದರು. ಮಿಥುನ್ ಚಕ್ರವರ್ತಿ, ವಿದ್ಯಾ ಬಾಲನ್, ಎಸ್.ಜೆ. ಸೂರ್ಯ ಕೂಡ ಈ ಚಿತ್ರದ ಪಾತ್ರವರ್ಗದಲ್ಲಿ ಇದ್ದಾರೆ. ಈ ಎಲ್ಲ ಕಾರಣಗಳಿಂದ ಹೈಪ್ ಜಾಸ್ತಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಧಾರಾಕಾರ ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ

ದೇವನಹಳ್ಳಿ, ಏಪ್ರಿಲ್​ 10: ಬೆಂಗಳೂರುನಲ್ಲಿ ಸುರಿದ ಭಾರಿ ಮಳೆ ಪರಿಣಾಮ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಅವರಿದ್ದ ವಿಮಾನ ಲ್ಯಾಂಡ್ ಆಗಲು ಸಾಧ್ಯವಾಗದೇ ಮಂಗಳೂರುಗೆ ವಾಪಸ್​ ತೆರಳಿರುವಂತಹ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಸಂಜೆ 5:45ಕ್ಕೆ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್​ ಆಗಬೇಕಿತ್ತು. ಆದರೆ ಮಳೆ ಹಿನ್ನೆಲೆ ಲ್ಯಾಂಡಿಂಗ್​ಗೆ ಕ್ಲಿಯರೆನ್ಸ್​​​ ಇಲ್ಲದ ಕಾರಣ ಮಂಗಳೂರು ವಾಪಸ್ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

RR vs RCB: ಪವರ್‌ಪ್ಲೇನಲ್ಲಿ ರನ್ ಬಂದರೂ ಪ್ರಮುಖ 5 ವಿಕೆಟ್ ಕಳೆದುಕೊಂಡ ಆರ್​​ಸಿಬಿ

Source link

‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ ಉಪೇಂದ್ರ

ಪ್ರಿಯಾಂಕಾ ಉಪೇಂದ್ರ, ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ (Kotigobba) ಸಿನಿಮಾ ಮರು ಬಿಡುಗಡೆ ಆಗಿದೆ. ಈ ಸಿನಿಮಾವನ್ನು ಇಂದು (ಏಪ್ರಿಲ್ 10) ಪ್ರಿಯಾಂಕಾ ಉಪೇಂದ್ರ (Priyanka Upendra) ಅವರು ಅಭಿಮಾನಿಗಳ ಜೊತೆ ಕುಳಿತು ವೀಕ್ಷಿಸಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ತಮ್ಮ ಖುಷಿಯನ್ನು ಹಂಚಿಕೊಂಡರು. ‘ತುಂಬಾ ಖುಷಿ ಆಗುತ್ತಿದೆ. 25 ವರ್ಷಗಳ ಹಿಂದೆ ಈ ಚಿತ್ರವನ್ನು ನಾನು ಅಭಿಮಾನಿಗಳ ಜೊತೆ ನೋಡಲು ಸಾಧ್ಯವಾಗಿರಲಿಲ್ಲ. ಈಗ ಆ ಅವಕಾಶ ಸಿಕ್ಕಿದೆ. ಈಗಲೂ ಅಭಿಮಾನಿಗಳಿಂದ ಈ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ವಿಷ್ಣು ಸರ್ ಮ್ಯಾಜಿಕ್ ಇದು. ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ. ಇಂದಿಗೂ ಈ ಸಿನಿಮಾ ಮತ್ತು ಹಾಡುಗಳು ಎಷ್ಟು ಫ್ರೆಶ್ ಆಗಿದೆ. ವಿಷ್ಣುವರ್ಧನ್ (Vishnuvardhan) ಅವರು ಎವರ್​ಗ್ರೀನ್. ಇಂದು ನಾನು ಕೂಡ ಅವರಿಗೋಸ್ಕರವೇ ಬಂದಿದ್ದೇನೆ’ ಎಂದು ಪ್ರಿಯಾಂಕಾ ಉಪೇಂದ್ರ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮುಸ್ಲಿಂ ಮುನಿಸು ಎಫೆಕ್ಟ್ ಆಗಿದೆ: ದಾವಣಗೆರೆ ಬೈ ಎಲೆಕ್ಷನ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಬೆಳಗಾವಿ, (ಏಪ್ರಿಲ್ 10): ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಂತ್ಯವಾಗಿದ್ದು, ಫಲಿತಾಂಶಕ್ಕೆ ಕಾತರದಿಂದ ಕಾಯುತ್ತಿದ್ದಾರೆ. ಇನ್ನೊಂದೆಡೆ ಕ್ಷೇತ್ರದಲ್ಲಿ ಸೋಲು ಗೆಲುವಿನ ಬಗ್ಗೆ ಚರ್ಚೆ ಜೋರಾಗಿವೆ ನಡೆದಿವೆ. ಇನ್ನೊಂದೆಡೆ ರಾಜಕೀಯ ನಾಯಕರು ಸಹ ಲೆಕ್ಕಾಚಾರ ಹಾಕುತ್ತಿದ್ದಾರೆ. ಇದರ ನಡುವೆ ದಾವಣಗೆರೆಯಲ್ಲಿ ಮುಸ್ಲಿಂ ಮತಗಳು ಕೈಕೊಟ್ಟಿರುವ ಬಗ್ಗೆ ಚರ್ಚೆಯಾಗುತ್ತಿದ್ದು, ಈ ಸಂಬಂಧ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಅಲ್ಪಸಂಖ್ಯಾತ ಮುನಿಸು ಲೀಡ್ ಮೇಲೆ ಪರಿಣಾಮ ಬೀರಲಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ, ದಾವಣಗೆರೆಯಲ್ಲಿ ಶೇಕಡಾ 20ರಷ್ಟು ಕಮ್ಮಿ ಆಗಲಿದೆ. ಅಲ್ಪಸಂಖ್ಯಾತ ಮುನಿಸು ಲೀಡ್ ಮೇಲೆ ಪರಿಣಾಮ ಬೀರಲಿದೆ. ಡ್ಯಾಮೆಜ್ ಅನ್ನು ಸಚಿವರಾದ ಮಲ್ಲಿಕಾರ್ಜುನ ಸರಿಪಡಿಸಬೇಕು. ಅವರು ಮೇಲೆ ಬಹಳ ದೊಡ್ಡ ಜವಾಬ್ದಾರಿ ಇದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮುಸ್ಲಿಂ ನಾಯಕರಲ್ಲಿ ಕಿಚ್ಚು ಹೊತ್ತಿಸಿದ ದಾವಣಗೆರೆ ದಂಗಲ್, ಪಕ್ಷದ ವಿರುದ್ಧ ಜಮೀರ್ ಷಡ್ಯಂತ್ರ ರೂಪಿಸಿದ್ರಾ?

Source link

ಬರೋಬ್ಬರಿ 11 ಶಸ್ತ್ರಚಿಕಿತ್ಸೆ: ಯುವತಿ ಸ್ಥಿತಿ ಕಂಡು ಮರುಗಿದ ಕುಮಾರಸ್ವಾಮಿ: ಮನೆಗೆ ಹೋಗಿ ಸಹಾಯ ಹಸ್ತ

ಮೈಸೂರು, ಏಪ್ರಿಲ್ 10: ನಂಜನಗೂಡಿನ ಪುಟ್ಟ ಹಳ್ಳಿಯೊಂದರಲ್ಲಿ ವಿಧಿಯ ಅಟ್ಟಹಾಸಕ್ಕೆ ಸಿಲುಕಿ ಇಡೀ ಕುಟುಂಬವೇ ಬೀದಿಗೆ ಬಿದ್ದಿತ್ತು. ಮಾರಕ ಕಾಯಿಲೆಯಿಂದ ಎರಡು ಕಾಲು ಕಳೆದುಕೊಂಡ ಪೂಜಾ ಎಂಬಾಕೆಯ ಬದುಕು ಅಂಧಕಾರದಲ್ಲಿತ್ತು. ಅತ್ತ ಪತಿಗೂ ಅಪಘಾತ, ಇತ್ತ ಕೈಯಲ್ಲಿ ಹಣವಿದಲ್ಲ ಸ್ಥಿತಿ. ಈ ಕಣ್ಣೀರಿನ ಕಥೆ ಕೇಳಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy), ಇಂದು ಆ ಬಡ ಕುಟುಂಬಕ್ಕೆ ಸಾಕ್ಷಾತ್ ದೇವರಾಗಿ ಬಂದಿದ್ದರು. ಹಳೆಯ ಲೀಸ್ ಹಣ ತೀರಿಸುವ ಭರವಸೆ ಜೊತೆಗೆ, ಮನೆಯ ಮಗನಂತೆ ಆ ಕುಟುಂಬಕ್ಕೆ ಧೈರ್ಯ ತುಂಬಿದರು.

ಬರೋಬ್ಬರಿ 11 ಶಸ್ತ್ರಚಿಕಿತ್ಸೆ

ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ 24 ವರ್ಷದ ಪೂಜಾ ಮಾರಕ ಕಾಯಿಲೆಗೆ ತುತ್ತಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಇಲ್ಲಿಯೇ ನೆಲೆಸಿರುವ ಈ ಕುಟುಂಬಕ್ಕೆ ವಿಧಿ ಒಂದಾದ ಮೇಲೊಂದರಂತೆ ಕಷ್ಟಗಳನ್ನ ನೀಡಿದೆ. ಮಾರಕ ಕಾಯಿಲೆಗೆ ತುತ್ತಾದ ಪೂಜಾ, ಬರೋಬ್ಬರಿ 11 ಶಸ್ತ್ರಚಿಕಿತ್ಸೆಗಳನ್ನ ಎದುರಿಸಿದ್ದಾರೆ. ಅಂತಿಮವಾಗಿ ತನ್ನ ಎರಡೂ ಕಾಲುಗಳನ್ನೇ ಕಳೆದುಕೊಂಡು ಇಂದು ಹಾಸಿಗೆ ಹಿಡಿದಿದ್ದಾರೆ.

ನನ್ನ ಸಂಕಷ್ಟವನ್ನ ಕುಮಾರಣ್ಣನಿಗೆ ತಲುಪಿಸಿ

ಪೂಜಾಗೆ ಗಾಯದ ಮೇಲೆ ಬರೆ ಎಳೆದಂತೆ ಪತಿ ರವಿ ಕೂಡ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪುಟ್ಟ ಮಕ್ಕಳನ್ನ ಕಟ್ಟಿಕೊಂಡು ಜೀವನ ನಡೆಸಲು ದಾರಿಯೇ ಇಲ್ಲದಂತಾದಾಗ, ಪೂಜಾ ಮನವಿ ಮಾಡಿದ್ದು ಕುಮಾರಣ್ಣನಿಗೆ. “ನನ್ನ ಸಂಕಷ್ಟವನ್ನ ಹೇಗಾದರೂ ಮಾಡಿ ಅವರಿಗೆ ತಲುಪಿಸಿ” ಎಂದು ಬೇಡಿಕೊಂಡಿದ್ದರು. ಪೂಜಾರ ಕೂಗು ಕುಮಾರಸ್ವಾಮಿ ಅವರಿಗೆ ತಲುಪಿದೆ. ಹಾಗಾಗಿ ಇಂದು ನಂಜನಗೂಡು ದೇವಸ್ಥಾನಕ್ಕೆ ಭೇಟಿ ನೀಡಿದ್ದ ಅವರು, ನೇರವಾಗಿ ಪೂಜಾರ ಮನೆಗೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯಗೆ ಹಳೆಯ ದಿನಗಳನ್ನ ನೆನಪಿಸಿ ವ್ಯಂಗ್ಯವಾಡಿದ ಕುಮಾರಸ್ವಾಮಿ

ಹಾಸಿಗೆಯಲ್ಲಿ ಮಲಗಿದ್ದ ಪೂಜಾರನ್ನ ಕಂಡು ಮರುಗಿದ ಹೆಚ್​​ಡಿ ಕುಮಾರಸ್ವಾಮಿ, ಕುಟುಂಬದ ಪರಿಸ್ಥಿತಿಯನ್ನ ಆಲಿಸಿದರು. ಪೂಜಾ ತಂದೆ ಕುಮಾರ ಮತ್ತು ತಾಯಿ ಶೀಲಾರಿಗೆ ಧೈರ್ಯ ತುಂಬಿದರು. ಸ್ಥಳದಲ್ಲೇ ವೈಯಕ್ತಿಕವಾಗಿ ಧನಸಹಾಯ ಮಾಡಿದರು. ಅಷ್ಟೇ ಅಲ್ಲ, ಕುಟುಂಬದ ದೊಡ್ಡ ತಲೆನೋವಾಗಿದ್ದ ಮನೆಯ ಲೀಸ್ ಹಣವನ್ನ ತಾವೇ ಪಾವತಿಸುವುದಾಗಿ ಭರವಸೆ ನೀಡುವ ಮೂಲಕ ಕುಟುಂಬಕ್ಕೆ ಆಸರೆಯಾದರು. ಪತಿ ರವಿ ಅಪಘಾತದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರ ಜೊತೆ ಚರ್ಚಿಸಿ ಸೂಕ್ತ ಪರಿಹಾರ ಕೊಡಿಸುವಂತೆ ಸೂಚನೆ ನೀಡಿದರು.

ಇದನ್ನೂ ಓದಿ: ಸಾಧ್ಯವಿದ್ರೆ ಕಾಂಗ್ರೆಸ್ ಬಿಟ್ಟು ಗೆದ್ದು ತೋರ್ಸಿ ನೋಡೋಣ! ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್

ಇನ್ನು ಈ ವೇಳೆ ಹೆಚ್​ಡಿ ಕುಮಾರಸ್ವಾಮಿಗೆ ಶಾಸಕ ಹರೀಶ್ ಗೌಡ, ಎಂಎಲ್‌ಸಿ ಮಂಜೇಗೌಡ ಸೇರಿದಂತೆ ಜೆಡಿಎಸ್ ಪ್ರಮುಖ ಮುಖಂಡರು ಸಾಥ್ ನೀಡಿದರು. ಒಟ್ಟಿನಲ್ಲಿ, ರಾಜಕೀಯ ಜಂಜಾಟಗಳ ನಡುವೆಯೂ ಕೇಂದ್ರ ಸಚಿವರು ತೋರಿದ ಈ ಮಾನವೀಯತೆ, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ವಿಧಿಯ ಆಟಕ್ಕೆ ಸೋತಿದ್ದ ಪೂಜಾ ಕುಟುಂಬಕ್ಕೆ ಕುಮಾರಸ್ವಾಮಿ ನೀಡಿದ ಭರವಸೆ ಹೊಸ ಜೀವನದ ಕಿರಣ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅಮೆರಿಕದ ಜೊತೆ ಆಟವಾಡಬೇಡಿ; ಪಾಕಿಸ್ತಾನಕ್ಕೆ ಹೊರಡುವ ಮುನ್ನ ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ

ವಾಷಿಂಗ್ಟನ್, ಏಪ್ರಿಲ್ 10: ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ (JD Vance) ಇಂದು ಇರಾನ್ ಜೊತೆ ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನಕ್ಕೆ (Pakistan) ತೆರಳಿದ್ದಾರೆ. ಈ ವೇಳೆ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಜೆಡಿ ವ್ಯಾನ್ಸ್, “ನಾವು ಮಾತುಕತೆಯನ್ನು ಎದುರು ನೋಡುತ್ತಿದ್ದೇವೆ. ಅದು ಸಕಾರಾತ್ಮಕವಾಗಿರುತ್ತದೆ ಎಂದು ನಾನು ಭಾವಿಸುತ್ತೇನೆ. ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದಂತೆ ಇರಾನಿಯನ್ನರು ಉತ್ತಮ ನಂಬಿಕೆಯಿಂದ ಮಾತುಕತೆ ನಡೆಸಲು ಸಿದ್ಧರಿದ್ದರೆ ನಾವು ಖಂಡಿತವಾಗಿಯೂ ಮುಕ್ತವಾಗಿ ಕೈ ಚಾಚಲು ಸಿದ್ಧರಿದ್ದೇವೆ. ಆದರೆ, ಅಮೆರಿಕದ ಜೊತೆ ಆಟವಾಡಿದರೆ ನಾವು ಸುಮ್ಮನಿರುವುದಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಅರಣ್ಯ ಭೂಮಿ ಒತ್ತುವರಿ ಕೇಸ್: ಮಾಜಿ ಸ್ಪೀಕರ್ ರಮೇಶ್ ಕುಮಾರ್​ಗೆ ಹಿನ್ನಡೆ

ಕೋಲಾರ, ಏಪ್ರಿಲ್​ 10: ಅರಣ್ಯ ಭೂಮಿ ಒತ್ತುವರಿ (Land Encroachment) ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಗೆ ಭೂಮಿಯನ್ನು ಬಿಟ್ಟುಕೊಡುವಂತೆ ಮೇಲ್ಮನವಿ ಪ್ರಾಧಿಕಾರ ಮತ್ತು ಅರಣ್ಯ ಸಂರಕ್ಷಾಧಿಕಾರಿಗಳ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್​​ಗೆ ಹಿನ್ನಡೆಯಾಗಿದೆ. ಜೊತೆಗೆ ಅವರು ಸಲ್ಲಿಸಿದ ಮೇಲ್ಮನವಿಗೆ ಅರ್ಹತೆ ಇಲ್ಲವೆಂದು ವಜಾಗೊಳಿಸಲಾಗಿದೆ.

ಅರಣ್ಯ ಇಲಾಖೆಗೆ ಭೂಮಿ ಬಿಟ್ಟುಕೊಡುವಂತೆ ಆದೇಶ

ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್‌ಕುಮಾರ್ ಸಲ್ಲಿಸಿದ ಮೇಲ್ಮನವಿ ಅಜಿ ವಿಚಾರಣೆ ಮಾಡಿದ ನ್ಯಾಯಾಲಯ, ಅರಣ್ಯ ಇಲಾಖೆಗೆ ಭೂಮಿ ಬಿಟ್ಟುಕೊಡುವಂತೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಕಾಯ್ದೆಯ 64(A) ವಿಧಿಯಡಿ ಒತ್ತುವರಿ ತೆರವುಗೊಳಿಸಲು ನ್ಯಾಯಾಲಯ ನಿರ್ದೇಶನ ನೀಡಿದೆ. 2025ರ ಜನವರಿ 15 ಮತ್ತು 16ರಂದು ನಡೆಸಿದ ಜಂಟಿ ಸಮೀಕ್ಷೆಯ ವರದಿ ಆಧರಿಸಿ ಈ ಆದೇಶ ನೀಡಲಾಗಿದೆ.

ಇದನ್ನೂ ಓದಿ: ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ಗೆ ಮತ್ತೆ ಭೂಸಂಕಷ್ಟ? ಜ. 15 ರೊಳಗೆ ಸರ್ವೆ ಮುಗಿಸಲು ಹೈಕೋರ್ಟ್ ಆದೇಶ

ಆದೇಶವನ್ನು ಸ್ವೀಕರಿಸಿದ ದಿನಾಂಕದಿಂದ 30 ದಿನಗಳೊಳಗೆ ಅತಿಕ್ರಮಣ ಮಾಡಲಾದ ಭೂಮಿಯನ್ನು ಶಾಂತಿಯುತವಾಗಿ ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಸೂಚಿಸಲಾಗಿದೆ. ನಿಗದಿತ ಅವಧಿಯಲ್ಲಿ ಆದೇಶ ಪಾಲನೆ ಮಾಡದಿದ್ದಲ್ಲಿ, ಕೋಲಾರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಭೂಮಿ ತೆರವುಗೊಳಿಸುವಂತೆ ಸೂಚಿಸಲಾಗಿದೆ.

ಏನಿದು ಪ್ರಕರಣ?

ಮಾಜಿ ಸ್ಪೀಕರ್ ರಮೇಶ್ ಕುಮಾರ್​ ಕಳೆದ 2 ದಶಕಗಳಿಂದ ಅರಣ್ಯ ಭೂಮಿಯ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಅವರ ಹುಟ್ಟೂರಾದ ಕೋಲಾರ ಜಿಲ್ಲೆ‌ಯ ಶ್ರೀನಿವಾಸಪುರ ತಾಲ್ಲೂಕಿನ ಹೊಸಹುಡ್ಯ ಗ್ರಾಮದಲ್ಲಿರುವ ಸರ್ವೆ ಸಂಖ್ಯೆ 1 ಮತ್ತು 2ರಲ್ಲಿ 60.23 ಎಕರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ: ಮಾಜಿ ಸ್ಪೀಕರ್​ ರಮೇಶ್​ ಕುಮಾರ್​ ವಿರುದ್ಧ 64 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ

ಬೇರೆ ಬೇರೆ ರೈತರಿಂದ ಖರೀದಿ ಮಾಡಿದ್ದ ಭೂಮಿಯ ಪೈಕಿ ಸುಮಾರು 60.23 ಎರಕೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಲಾಗಿದೆ ಜಂಟಿ ಸರ್ವೇ ಕಾರ್ಯದ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಅದರಂತೆ ಜಂಟಿ ಸರ್ವೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಐಎಸ್​ಐ ಜೊತೆ ನಂಟು; ದೆಹಲಿ, ಪಂಜಾಬ್​ನಲ್ಲಿ 11 ಗೂಢಚಾರರ ಬಂಧನ

ನವದೆಹಲಿ, ಏಪ್ರಿಲ್ 10: ದೆಹಲಿ ಪೊಲೀಸರು ಪಾಕಿಸ್ತಾನ ಗುಪ್ತಚರ ಸಂಸ್ಥೆಯಾದ ಐಎಸ್‌ಐ (ISI) ಜೊತೆ ಸಂಪರ್ಕ ಹೊಂದಿರುವ ಪ್ರಮುಖ ಗೂಢಚಾರ ಜಾಲವನ್ನು ಭೇದಿಸಿದ್ದು, 11 ಜನರನ್ನು ಬಂಧಿಸಿದ್ದಾರೆ. ಐಎಸ್‌ಐ ಜೊತೆಗೆ ಮಾತ್ರವಲ್ಲದೆ ಈ ಗೂಢಚಾರ ಜಾಲವು ನಿಷೇಧಿತ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್ (ಬಿಕೆಐ) ನೊಂದಿಗೆ ಸಂಪರ್ಕ ಹೊಂದಿದೆ ಎಂದು ಮಾಹಿತಿ ಲಭ್ಯವಾಗಿದೆ. ದೆಹಲಿ ಮತ್ತು ಪಂಜಾಬ್‌ನ ವಿವಿಧ ಸ್ಥಳಗಳಿಂದ 11 ವ್ಯಕ್ತಿಗಳನ್ನು ಬಂಧಿಸಲಾಗಿದೆ. ಇವರು ದೇಶದ ವಿವಿಧ ಭಾಗಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಈ ಗುಂಪು ದೇಶದ ವಿವಿಧ ಭಾಗಗಳಲ್ಲಿ ಸಕ್ರಿಯವಾಗಿದ್ದು, ಬೇಹುಗಾರಿಕೆ ಗುಂಪಾಗಿ ಮಾತ್ರವಲ್ಲದೆ ಭಯೋತ್ಪಾದಕ ಘಟಕವಾಗಿಯೂ ಕಾರ್ಯನಿರ್ವಹಿಸುತ್ತಿತ್ತು. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ದೇಶಾದ್ಯಂತ 9 ಸೂಕ್ಷ್ಮ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದರು ಎಂದು ತಿಳಿದುಬಂದಿದೆ. ಕಥುವಾದಿಂದ ಉತ್ತರ ಭಾರತದವರೆಗಿನ ಹಲವಾರು ಮಿಲಿಟರಿ ಪ್ರದೇಶಗಳಲ್ಲಿ ಬೇಹುಗಾರಿಕೆ ನಡೆಸಲಾಗುತ್ತಿತ್ತು.

ಇದನ್ನೂ ಓದಿ: 16 ವರ್ಷಗಳಿಂದ ಭಾರತದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಪಾಕಿಸ್ತಾನದ ಎಲ್​ಇಟಿ ಉಗ್ರ ಸೆರೆ

ಈ ಜಾಲವು ಮಿಲಿಟರಿ ನೆಲೆಗಳು, ರೈಲು ನಿಲ್ದಾಣಗಳು ಮತ್ತು ಇತರ ಸೂಕ್ಷ್ಮ ಪ್ರದೇಶಗಳ ಡೇಟಾ, ಸ್ಥಳ, ಫೋಟೋಗಳು ಮತ್ತು ವಿಡಿಯೋಗಳನ್ನು ಸಂಗ್ರಹಿಸಿ ಪಾಕಿಸ್ತಾನಕ್ಕೆ ಕಳುಹಿಸುತ್ತಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಇದಲ್ಲದೆ, ಈ ಆರೋಪಿಗಳು ಪಾಕಿಸ್ತಾನದಿಂದ ಶಸ್ತ್ರಾಸ್ತ್ರಗಳನ್ನು ತರಲು ಪ್ರಯತ್ನಿಸುತ್ತಿದ್ದರು. ತನಿಖಾ ಸಂಸ್ಥೆಗಳ ಪ್ರಕಾರ, ಆರೋಪಿಗಳು ಕಂಟೋನ್ಮೆಂಟ್ ಮತ್ತು ರೈಲ್ವೆ ನಿಲ್ದಾಣದಂತಹ ಸೂಕ್ಷ್ಮ ಸ್ಥಳಗಳಲ್ಲಿ ಸೌರಶಕ್ತಿ ಚಾಲಿತ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಈ ಕ್ಯಾಮೆರಾಗಳಿಂದ ಲೈವ್ ಫೀಡ್‌ಗಳನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುತ್ತಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version