Headlines

IPL 2026: ಧೋನಿ ಫ್ಯಾನ್ಸ್​ಗೆ ಸಿಹಿ ಸುದ್ದಿ; ಕಂಬ್ಯಾಕ್​ಗೆ ದಿನಾಂಕ ನಿಗದಿ

ಈ ಬಾರಿಯ ಐಪಿಎಲ್‌ನಲ್ಲಾದರೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಹಳೆಯ ಲಯಕ್ಕೆ ಮರಳುತ್ತದೆ ಎಂದು ಕಾದು ಕುಳಿತಿದ್ದ ಅಭಿಮಾನಿಗಳಿಗೆ ಮತ್ತದೆ ನಿರಾಸೆ ಎದುರಾಗಿದೆ. ಕಳೆದ ಆವೃತ್ತಿಯಂತೆಯೇ ಈ ಆವೃತ್ತಿಯಲ್ಲೂ ಸಿಎಸ್​ಕೆ ತಂಡ ಸತತವಾಗಿ ಕಳಪೆ ಪ್ರದರ್ಶನ ನೀಡುತ್ತಿದೆ. ಇದರ ಜೊತೆಗೆ ತಂಡದ ಜೀವಾಳ ಎನಿಸಿಕೊಂಡಿರುವ ಎಂಎಸ್ ಧೋನಿ ಅವರ ಅಲಭ್ಯತೆಯೂ ತಂಡಕ್ಕೆ ಮತ್ತಷ್ಟು ಸಂಕಷ್ಟಗಳನ್ನು ತಂದೊಡ್ಡಿದೆ. ಐಪಿಎಲ್​ಗೆ ಭರ್ಜರಿ ತಯಾರಿ ಮಾಡಿಕೊಂಡಿದ್ದ ಧೋನಿ, ಮೊದಲ ಪಂದ್ಯದಿಂದಲೇ ಕಣಕ್ಕಿಳಿಯುವ ತವಕದಲ್ಲಿದ್ದರು. ಆದರೆ ಅಭ್ಯಾಸದ ವೇಳೆ ಗಾಯಕ್ಕೆ ತುತ್ತಾದ…

Read More

ಗ್ಯಾಸ್ ಸಮಸ್ಯೆಯಿಂದಾಗಿ ಸ್ವಾವಲಂಬನೆ ಹೆಜ್ಜೆ: ವಿನೂತನ ತಂತ್ರಜ್ಞಾನದ ವಿದ್ಯುತ್ ಸ್ಟೌ ಪರಿಚಯಿಸಿದ ಜೋಶಿ

ನವದೆಹಲಿ, (ಏಪ್ರಿಲ್ 10): ಗ್ಯಾಸ್ ಸ್ಟೌ ಮಾದರಿಯಲ್ಲೇ ಜ್ವಾಲೆ ಹರಡುವ “ವಿದ್ಯುತ್ ಸ್ಟೌ” (Electric Stove)  ಅನ್ನು ಪರಿಚಯಿಸಿ ಅದರ ಉತ್ಪಾದನೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡುವ ಚಿಂತನೆ ಸಹ ನಡೆಸುತ್ತಿದ್ದು, ಎಎಲ್​ಪಿಜೆ ಗ್ಯಾಸ್ (LPG) ಪರ್ಯಾಯವಾಗಿ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರ ಸಲಹೆಯಂತೆ ಕೇಂದ್ರ ಸರ್ಕಾರ ದೇಶದೆಲ್ಲೆಡೆ 50 ಲಕ್ಷ PNG ಸಂಪರ್ಕಕ್ಕೆ ಪ್ರಾಶಸ್ತ್ಯ ನೀಡಿದೆ. ಈ ಜ್ವಾಲೆ ಉತ್ಪಾದಿಸುವ ವಿದ್ಯುತ್ ಸ್ಟೌ ಪ್ರದರ್ಶಿಸಿ, ಗೃಹ…

Read More

ವನತಾರಾದಿಂದ ವಿಶ್ವದ ಮೊದಲ ಜಾಗತಿಕ ವನ್ಯಜೀವಿ ಮತ್ತು ಪಶುವೈದ್ಯಕೀಯ ವಿಶ್ವವಿದ್ಯಾಲಯ

ಜಾಮನಗರ್, ಏಪ್ರಿಲ್ 10: ರಿಲಾಯನ್ಸ್ ಇಂಡಸ್ಟ್ರೀಸ್​ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಅನಂತ್ ಅಂಬಾನಿ ಅವರು ವನತಾರಾ ಯೂನಿವರ್ಸಿಟಿಗೆ ಚಾಲನೆ ನೀಡಿದ್ದಾರೆ. ವನ್ಯಜೀವಿ ಸಂರಕ್ಷಣಾ ಸಂಸ್ಥೆಯಾದ ವನತಾರಾದಿಂದ ಶುರುವಾಗಿರುವ ಇದು ವಿಶ್ವದ ಮೊದಲ ಜಾಗತಿಕ ವನ್ಯಜೀವಿ ಮತ್ತು ಪಶುವೈದ್ಯಕೀಯ ವಿಶ್ವವಿದ್ಯಾಲಯವಾಗಿದೆ. ವನ್​ತಾರಾ ವಿಶ್ವವಿದ್ಯಾಲಯವು ಪ್ರಾಣಿ ಕಲ್ಯಾಣ, ವೈಜ್ಞಾನಿಕ ಪ್ರಗತಿ ಮತ್ತು ವನ್ಯಜೀವಿ ಸಂರಕ್ಷಣೆಯ ಭವಿಷ್ಯದಲ್ಲಿ ಬೇರೂರಿದೆ. ಪಶುವೈದ್ಯಕೀಯ ಔಷಧ, ಸಂರಕ್ಷಣೆ ಮತ್ತು ವನ್ಯಜೀವಿ ಆರೈಕೆಯಲ್ಲಿ ಭವಿಷ್ಯದ ನಾಯಕರನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಈ ಸಂಸ್ಥೆ ಹೊಂದಿದೆ. ಇದರ ಪಠ್ಯಕ್ರಮವು ಭಾರತದ ನಿರಂತರ…

Read More

ಮಕ್ಕಳ 1ನೇ ತರಗತಿ ದಾಖಲಾತಿ ಬಗ್ಗೆ ಮಹತ್ವದ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು, ಏಪ್ರಿಲ್​ 10: ಒಂದನೇ ತರಗತಿ ದಾಖಲಾತಿಗೆ (Class 1st admission) ಕಡ್ಡಾಯ 6 ವರ್ಷ ತುಂಬಿರಬೇಕು ಎಂಬ ಆದೇಶ ಸಂಘರ್ಷಕ್ಕೆ ಕಾರಣವಾಗಿತ್ತು. ಬಳಿಕ ಶಿಕ್ಷಣ ಇಲಾಖೆ ವಿನಾಯಿತಿ ನೀಡಿತ್ತು. ಆ ಬಳಿಕವೂ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು, ಪ್ರತಿಭಟನೆ ಕೂಡ ಮಾಡಿದ್ದರು. ಇದೀಗ 1ನೇ ತರಗತಿಗೆ ಮಕ್ಕಳ ದಾಖಲಾತಿಯಲ್ಲಿ 60 ದಿನ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 2026-27ನೇ ಶೈಕ್ಷಣಿಕ ಸಾಲಿಗೆ ಸೀಮಿತವಾಗಿ ಒಂದನೇ ತರಗತಿಗೆ ಮಕ್ಕಳನ್ನು ದಾಖಲು ಮಾಡಿಕೊಳ್ಳುವ ಸಂದರ್ಭದಲ್ಲಿ, ಶೈಕ್ಷಣಿಕ ವರ್ಷದ…

Read More

ಅಜಾಗರೂಕ‌ ಚಾಲನೆ ಕೇಸ್: ಲ್ಯಾಂಬೋರ್ಗಿನಿಯಲ್ಲೇ ತೆರಳಿ ರಸ್ತೆ ಕ್ಲೀನ್ ಮಾಡಿ ಬರ್ತೀರಾ?; ಅರ್ಜಿದಾರರಿಗೆ ಕೋರ್ಟ್​​ ಪ್ರಶ್ನೆ

ಬೆಂಗಳೂರು, ಏಪ್ರಿಲ್​​ 10: ಮೈಸೂರು ರಸ್ತೆಯಲ್ಲಿ ಲ್ಯಾಂಬೋರ್ಗಿನಿ ಕಾರು ಅಜಾಗರೂಕ‌ ಚಾಲನೆ ಕೇಸ್ ಸಂಬಂಧ ಪ್ರಕರಣ ರದ್ದು ಕೋರಿ ಕಾರು ಚಲಾಯಿಸಿದ್ದ ವ್ಯಕ್ತಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಸಮುದಾಯ ಸೇವೆ ಮಾಡುವ ಷರತ್ತಿನಡಿ ಕೇಸ್​​ ರದ್ದುಪಡಿಸುವುದಾಗಿ ಮೌಖಿಕವಾಗಿ ಸೂಚಿಸಿದೆ. ಬಿ.ಆರ್.ಚಿರಂತ್ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ, ಪಶ್ಚಾತ್ತಾಪ ರೂಪದಲ್ಲಿ ಸಮುದಾಯ ಸೇವೆ ಮಾಡುವುದಾಗಿ ವಕೀಲರ ಪ್ರಸ್ತಾವಿಸಿದ್ದರು. ಹೊಸ ಕಾನೂನಿನಲ್ಲಿ ಇದಕ್ಕೆ ಅವಕಾಶವಿದೆ ಎಂದು ವಾದಿಸಿದ್ದರು. ಅರ್ಜಿದಾರರ ಪರ ವಾದ ಆಲಿಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ…

Read More

ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಬಿಹಾರದ ವ್ಯಕ್ತಿ ಬಲೆಗೆ ಬಿದ್ದಿದ್ದು ಹೇಗೆ?

ನವದೆಹಲಿ, ಏಪ್ರಿಲ್ 10: ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಆರೋಪದ ಮೇಲೆ ಬಿಹಾರದಲ್ಲಿ ಮೂವರನ್ನು ಬಂಧಿಸಲಾಗಿದೆ. ಅಮೆರಿಕದ ಸಿಐಎ (US Central Intelligence Agency) ನೀಡಿದ ಮಾಹಿತಿಯ ಮೇರೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ವ್ಯಕ್ತಿಯನ್ನು ಭಾರತದ ಅಧಿಕಾರಿಗಳು ಬಂಧಿಸಿದ್ದಾರೆ. ಅಮನ್ ತಿವಾರಿ ಸೇರಿದಂತೆ ಬಕ್ಸಾರ್ ಜಿಲ್ಲೆಯ ಮೂವರನ್ನು ಬಿಹಾರದ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಅಮನ್ ತಿವಾರಿ ಯುಎಸ್ ಕೇಂದ್ರ ಗುಪ್ತಚರ ಸಂಸ್ಥೆಗೆ…

Read More

Peter Movie Review: ಪರಿಸ್ಥಿತಿಯ ಹಿಡಿತಕ್ಕೆ ಸಿಕ್ಕ ‘ಪೀಟರ್’ ಕಥೆಯೊಳಗೆ ಸಾಕಷ್ಟು ಸಸ್ಪೆನ್ಸ್

ನಟ ರಾಜೇಶ್ ಧ್ರುವ ಅವರು ‘ಪೀಟರ್’ (Peter) ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಹೀರೋ ಎಂದರೆ ಸಕಲ ಕಲಾವಲ್ಲಭನಲ್ಲ. ಸರ್ವಶಕ್ತನೂ ಅಲ್ಲ. ನಮ್ಮ-ನಿಮ್ಮ ನಡುವೆ ಇರುವ ಒಬ್ಬ ಸಾಮಾನ್ಯ ಹುಡುಗ ಆತ. ಇಂಥ ಪಾತ್ರದ ಮೂಲಕ ಪ್ರೇಕ್ಷಕರಿಗೆ ಕನೆಕ್ಟ್ ಆಗುವ ರೀತಿಯಲ್ಲಿ ರಾಜೇಶ್ ಧ್ರುವ (Rajesh Dhruva) ಕಾಣಿಸಿಕೊಂಡಿದ್ದಾರೆ. ಮಡಿಕೇರಿಯ ಸುಂದರ ಪರಿಸರದಲ್ಲಿ ಈ ಕಥೆ ನಡೆಯುತ್ತದೆ. ಈ ಕಥೆಯೊಳಗೆ ಒಂದಷ್ಟು ರಹಸ್ಯಗಳು ಅಡಗಿವೆ. ಈ ಸಿನಿಮಾಗೆ ಸುಕೇಶ್ ಶೆಟ್ಟಿ ಅವರು ನಿರ್ದೇಶನ ಮಾಡಿದ್ದು,…

Read More

RR vs RCB IPL 2026 Live Score: ರಾಜಸ್ಥಾನಕ್ಕೆ ರಾಯಲ್ ಚಾಲೆಂಜ್ – Kannada News | Rajasthan Royals vs Royal Challengers Bengaluru IPL 2026 Live Cricket Score RR vs RCB Match on 10th April latest news in Kannada

ಐಪಿಎಲ್ 2026 ರ 16 ನೇ ಪಂದ್ಯವು ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ರಾಜಸ್ಥಾನ ಈ ಪಂದ್ಯವನ್ನು ತಮ್ಮ ಎರಡನೇ ತವರು ಮೈದಾನವಾದ ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ಆಡಲಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳು ಅಜೇಯವಾಗಿ ಉಳಿದಿವೆ ಆದ್ದರಿಂದ, ಈ ಪಂದ್ಯದ ಬಳಿಕ ಒಂದು ತಂಡಕ್ಕೆ ಮೊದಲ ಸೋಲು ಎದುರಾಗಲಿದೆ. Source link

Read More

ಮಕ್ಕಳ ಆರೋಗ್ಯ ಚೆನ್ನಾಗಿರಬೇಕಾ? ಹಾಗಿದ್ರೆ ಈ ಬ್ಲಡ್ ಟೆಸ್ಟ್‌ಗಳನ್ನು ಮಾಡಿಸಲೇಬೇಕು!

ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಬರುತ್ತಿದ್ದು, ಈ ಸಮಯದಲ್ಲಿ ಅವರ ಆರೋಗ್ಯ ಕಾಪಾಡಿಕೊಳ್ಳುವುದೇ ಒಂದು ದೊಡ್ಡ ಸವಾಲಾಗಿದೆ. ಈ ರೀತಿಯ ಸಂದರ್ಭಗಳಲ್ಲಿ, ಯಾವುದೇ ರೋಗವನ್ನು ಮೊದಲೇ ಪತ್ತೆಹಚ್ಚಲು ಕಾಲಕಾಲಕ್ಕೆ ಅಗತ್ಯವಾದ ಆರೋಗ್ಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವುದು ಬಹಳ ಮುಖ್ಯ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಮಗುವಿನ ವಯಸ್ಸು ಮತ್ತು ಅಗತ್ಯಗಳಿಗೆ ಅನುಗುಣವಾಗಿ ಯಾವ ರಕ್ತ ಪರೀಕ್ಷೆಗಳನ್ನು (Health Tests) ಮಾಡಬೇಕು ಮತ್ತು ಈ ಪರೀಕ್ಷೆಗಳನ್ನು ಯಾವಾಗ ನಡೆಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ….

Read More

Akshaya Tritiya 2026: ಅಕ್ಷಯ ತೃತೀಯದಂದು ಚಿನ್ನ ಮತ್ತು ಬೆಳ್ಳಿ ಖರೀದಿಸಲು ಶುಭ ಸಮಯ ಯಾವುದು?

ಸನಾತನ ಧರ್ಮದಲ್ಲಿ ಅಕ್ಷಯ ತೃತೀಯಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ವರ್ಷ ಏಪ್ರಿಲ್ 19ರಂದು ಅಕ್ಷಯ ತೃತೀಯ ಬಂದಿದೆ. ಈ ದಿನದ ವಿಶೇಷತೆಯೆಂದರೆ, ಅಂದು ಮಾಡುವ ಯಾವುದೇ ಸತ್ಕರ್ಮಗಳು ‘ಅಕ್ಷಯ’ವಾಗಿರುತ್ತವೆ, ಅಂದರೆ ಅವುಗಳ ಫಲ ಎಂದಿಗೂ ಮುಗಿಯುವುದಿಲ್ಲ ಎಂಬುದು ಭಕ್ತರ ಗಾಢ ನಂಬಿಕೆ. ಮುಹೂರ್ತ ನೋಡದೆಯೇ ಶುಭ ಕಾರ್ಯ ಮಾಡಬಹುದಾದ ದಿನ: ಅಕ್ಷಯ ತೃತೀಯವನ್ನು ‘ಸ್ವಯಂ ಸಿದ್ಧ ಮುಹೂರ್ತ’ ಎಂದು ಪರಿಗಣಿಸಲಾಗುತ್ತದೆ….

Read More