ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕೊಡಗು (ಮೇ 19): ಕೊಡಗಿನ ಪ್ರಸಿದ್ಧ ದುಬಾರೆ ಸಾಕಾನೆ ಶಿಬಿರದಲ್ಲಿ (Kodagu dubare elephant camp) ಎರಡು ಆನೆಗಳ ಮಧ್ಯೆ ನಡೆದ ಕಾದಾಟದಲ್ಲಿ ಸಿಲುಕಿ ಪ್ರವಾಸಿ ಮಹಿಳೆಯೋರ್ವಳು ಸಾವನ್ನಪ್ಪಿದ್ದು, ಈ ದುರಂತದಿಂದ ಇಡೀ ಜಿಲ್ಲೆಯನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಈ ಕರಾಳ ಘಟನೆ ಮಾಸುವ ಮುನ್ನವೇ ಕಾದಾಟದಲ್ಲಿ ಗಾಯಗೊಂಡಿದ್ದ ‘ಮಾರ್ತಾಂಡ’ (Marthanda) ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು(ಮೇ 19) ಕೊನೆಯುಸಿರೆಳೆದಿದೆ. ಹೌದು.. ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ‘ಮಾರ್ತಾಂಡ’ ಮತ್ತು ‘ಕಂಜನ್’ ಆನೆಗಳ ನಡುವೆ ನಡೆದ ಭೀಕರ ಕಾಳಗದಲ್ಲಿ…