Headlines

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಸ್ಫೋಟ: ಇಬ್ಬರು ಸಾವು, ಉಗ್ರರ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಸ್ಥಳೀಯ ನಾಯಕ – Kannada News | Pakistan Explosion: 2 Dead in Khyber Pakhtunkhwa; Local Leader Escapes TTP Attack

ಇಸ್ಲಾಮಾಬಾದ್, ಜುಲೈ 26: ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬಜೌರ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದ ಪ್ರಬಲ ಸ್ಫೋಟ(Blast)ದಲ್ಲಿ ಕನಿಷ್ಠ ಇಬ್ಬರು ಸ್ಥಳೀಯರು ಮೃತಪಟ್ಟಿದ್ದಾರೆ. ಇನ್ನು ಈ ದಾಳಿಯ ವೇಳೆ ಸ್ಥಳೀಯ ನಾಯಕರೊಬ್ಬರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಜೌರ್ ಜಿಲ್ಲೆಯ ಸಲರ್ಜೈ ತಹಸಿಲ್‌ನಲ್ಲಿರುವ ‘ತಾಲಿ ಬ್ಯಾಂಡ್’ ಪ್ರದೇಶದ ಬಳಿ ಈ ಸ್ಫೋಟ ಸಂಭವಿಸಿದೆ. ಮೃತರನ್ನು ಸುಲೇಮಾನ್ ಖಾರಿ ಹಾಗೂ ಗುಲಾಮ್ ಎಂದು ಗುರುತಿಸಲಾಗಿದ್ದು, ಅವರ ಮೃತದೇಹಗಳನ್ನು ಹತ್ತಿರದ ಖಾರ್ ಆಸ್ಪತ್ರೆಗೆ ರವಾನಿಸಲಾಗಿದೆ….

Read More

ಮುಲ್ಲಾಗಳಿಗೆ ಎದೆ ಸೀಳಿದ್ರೆ 3 ಅಕ್ಷರ ಬರಲ್ಲ ಹೇಳಿಕೆ ಕೇಸ್: ಸಿಟಿ ರವಿ ನಿವಾಸಕ್ಕೆ ನೋಟಿಸ್​ ಅಂಟಿಸಿದ ಪೊಲೀಸ್ – Kannada News | Chikkamagakuru Police Notice to BJP MLC CT Ravi Over Derogatory remarks On Muslim

ಚಿಕ್ಕಮಗಳೂರು, (ಜುಲೈ 26): ಅವಹೇಳನಕಾರಿ ಹೇಳಿಕೆ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಸಿಟಿ ರವಿ (CT Ravi) ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಜುಲೈ 26) ಭಾನುವಾರ ಪೊಲೀಸರು, ಚಿಕ್ಕಮಗಳೂರಿನ (Chikkamagaluru) ಸಿಟಿ ರವಿ ಅವರ ಮನೆಗೆ ನೋಟಿಸ್ ನೀಡಲು ಬಂದ ವೇಳೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೂ ಚಿಕ್ಕಮಗಳೂರು ನಗರ ಠಾಣೆಯ ಇನ್ಸ್​ಪೆಕ್ಟರ್​ ಅಭಯ್ ಪ್ರಕಾಶ್ ಅವರು ಸಿಟಿ ರವಿ ಅವರಿಗೆ ನೋಟಿಸ್ ನೀಡಲು​ ಮುಂದಾಗಿದ್ದಾರೆ. ಆದ್ರೆ, ಸಿಟಿ…

Read More

ಸಿನಿಮಾ ಆಗಲಿದೆ ರಜನೀಕಾಂತ್ ಅವರ ಜೀವನ ಕತೆ – Kannada News | Rajinikanth planning to make movie on his own life

ರಜನೀಕಾಂತ್ (Rajinikanth), ಭಾರತದ ಅತಿ ದೊಡ್ಡ ಸೂಪರ್ ಸ್ಟಾರ್. ಕಳೆದ 40 ವರ್ಷಗಳಿಂದಲೂ ಅವರು ಸೂಪರ್ ಸ್ಟಾರ್ ಪಟ್ಟದಲ್ಲಿದ್ದಾರೆ. ಅವರ ಸಿನಿಮಾಗಳಿಗೆ ದೊಡ್ಡ ಅಭಿಮಾನಿ ವರ್ಗವಿದೆ. ಯಾವುದೇ ಸಿನಿಮಾ ಹಿನ್ನೆಲೆ ಇಲ್ಲದೆ ಬೆಂಗಳೂರಿನ ಗಲ್ಲಿಯೊಂದರಲ್ಲಿ ಹುಟ್ಟಿ ವಿಶ್ವವೇ ಗುರುತಿಸುವ ಸೂಪರ್ ಸ್ಟಾರ್ ಆಗಿ ಬೆಳೆದವರು ರಜನೀಕಾಂತ್. ನಟ ರಜನೀಕಾಂತ್ ಈಗಲೂ ಸಿನಿಮಾಗಳಲ್ಲಿ ಸಕ್ರಿಯವಾಗಿದ್ದಾರೆ. ಜೊತೆಗೆ ತಮ್ಮ ಜೀವನದ ಕತೆಯನ್ನು ಪುಸ್ತಕ ರೂಪಕ್ಕೆ ಇಳಿಸುತ್ತಿದ್ದಾರೆ. ರಜನೀಕಾಂತ್ ಅವರು ಕಳೆದ ಕೆಲ ವರ್ಷಗಳಿಂದ ತಮ್ಮ ಆಟೋ ಬಯೋಗ್ರಫಿ ಬರೆಯುತ್ತಿದ್ದಾರೆ. ಇದೀಗ…

Read More

ಮೇಕೆದಾಟು ಯೋಜನೆಗೆ ವಿರೋಧ: ಅತ್ತಿಬೆಲೆ ಗಡಿಯಲ್ಲಿ ಖಾಲಿ ಕೊಡ ಚಳವಳಿ; ತಮಿಳುನಾಡು ವಾಹನಗಳಿಗೆ ನಿರ್ಬಂಧ – Kannada News | Opposition to Mekedatu Project: Empty Pot Protest at Attibele Border; Restrictions on Tamil Nadu Vehicles

ಆನೇಕಲ್​, ಜುಲೈ 26: ಮೇಕೆದಾಟು ಕುಡಿಯುವ ನೀರಿನ ಯೋಜನೆ (Mekedatu project) ಜಾರಿಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ, ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಯಲ್ಲಿ ಕನ್ನಡ ಜಾಗೃತಿ ವೇದಿಕೆ ವತಿಯಿಂದ ಹೆದ್ದಾರಿ ತಡೆ ಬೃಹತ್ ಖಾಲಿ ಕೊಡ ಚಳವಳಿ (Empty Pot protest) ಮಾಡಲಾಯಿತು. ರಾಜಕೀಯ ದುರುದ್ದೇಶದ ವಿರುದ್ಧ ಆಕ್ರೋಶ ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ದೇವ ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ ಮಹಿಳೆಯರು ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ರಾಜ್ಯದಲ್ಲಿ…

Read More

NEET UG 2026: ಲಕ್ಷಕ್ಕೂ ಹೆಚ್ಚು MBBS ಸೀಟುಗಳು; ಇಲ್ಲಿದೆ ಕೌನ್ಸೆಲಿಂಗ್ ಪ್ರಕ್ರಿಯೆ ಮತ್ತು ಟಾಪ್ 10 ವೈದ್ಯಕೀಯ ಕಾಲೇಜುಗಳ ಮಾಹಿತಿ! – Kannada News | NEET UG Counseling 2026: MCC Dates, 1.36 Lakh+ MBBS Seats and Top Colleges List

ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ವೈದ್ಯರಾಗುವ ತಮ್ಮ ಕನಸನ್ನು ನನಸಾಗಿಸಿಕೊಳ್ಳಲು NEET UG ಪರೀಕ್ಷೆಯನ್ನು ಬರೆದಿದ್ದಾರೆ. ಪರೀಕ್ಷೆ ಮುಗಿದ ತಕ್ಷಣವೇ ಅಭ್ಯರ್ಥಿಗಳ ಗಮನವು ಈಗ ವೈದ್ಯಕೀಯ ಸಮಾಲೋಚನಾ ಸಮಿತಿ (MCC) ನಡೆಸುವ ಕೌನ್ಸೆಲಿಂಗ್ ಪ್ರಕ್ರಿಯೆಯತ್ತ ನೆಟ್ಟಿದೆ. ಈ ಕೌನ್ಸೆಲಿಂಗ್ ಮೂಲಕ ದೇಶದ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ದೊರೆಯಲಿದ್ದು, ವಿದ್ಯಾರ್ಥಿಗಳು ಪ್ರವೇಶ ಪ್ರಕ್ರಿಯೆ ಮತ್ತು ಲಭ್ಯವಿರುವ ಸೀಟುಗಳ ಸ್ಪಷ್ಟ ಚಿತ್ರಣವನ್ನು ಹೊಂದಿರುವುದು ಅಗತ್ಯವಾಗಿದೆ. 1.36 ಲಕ್ಷಕ್ಕೂ ಹೆಚ್ಚು MBBS ಸೀಟುಗಳಿಗೆ ತೀವ್ರ ಸ್ಪರ್ಧೆ: 2026-27ನೇ ಶೈಕ್ಷಣಿಕ ವರ್ಷಕ್ಕೆ ದೇಶದ…

Read More

ಮೊದಲ ಸಭೆಯಲ್ಲೇ ಅಧಿಕಾರಿಗಳಿಗೆ ಖಡಕ್ ಸಲಹೆ ಸೂಚನೆಗಳನ್ನ ನೀಡಿದ ಪ್ರಲ್ಹಾದ ಜೋಶಿ – Kannada News | Pralhad Joshi Holds First Education Ministry Review Meeting After Taking Charge

ನವದೆಹಲಿ, (ಜುಲೈ 26): ಕೇಂದ್ರ ನೂತನ ಶಿಕ್ಷಣ ಸಚಿವರಾಗಿ ಬಿಜೆಪಿ ಹಿರಿಯ ನಾಯಕ ಪ್ರಲ್ಹಾದ ಜೋಶಿ (Pralhad Joshi) ನವದೆಹಲಿಯ ಕರ್ತವ್ಯ ಭವನದಲ್ಲಿ ಇಂದು (ಜುಲೈ 26) ಸರಳವಾಗಿ ಅಧಿಕಾರ ಸ್ವೀಕರಿಸಿದರು.   ಬಳಿಕ ಶಿಕ್ಷಣ ಸಚಿವಾಲಯದ (Education Ministry) ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ, ಇಲಾಖೆಗೆ ಸಂಬಂಧಪಟ್ಟಂತೆ ಸಹಜ ಚರ್ಚೆ ನಡೆಸಿದರು. ಈ ವೇಳೆ ಇತ್ತೀಚಿನ ಬೆಳವಣಿಗೆಗಳ ಕುರಿತೂ ಗಹನ ಚರ್ಚೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರ 12 ವರ್ಷದ ಸಮರ್ಥ ಆಡಳಿತ…

Read More

ಇದು ಪ್ರಾಮಾಣಿಕತೆ… ರಿವ್ಯೂ ಪಡೆದು ವಿಕೆಟ್ ಒಪ್ಪಿಸಿದ ಸ್ಯಾಂಟ್ನರ್! – Kannada News | Mitchell Santner Hilariously Asks Umpire To Check His Own Run Out

ಕ್ರಿಕೆಟ್ ಜಗತ್ತಿನಲ್ಲಿ ಕ್ರೀಡಾ ಸ್ಫೂರ್ತಿಗೆ ನ್ಯೂಝಿಲೆಂಡ್ ಆಟಗಾರರು ಯಾವಾಗಲೂ ಹೆಸರುವಾಸಿ. ಇದಕ್ಕೆ ಮತ್ತೊಂದು ಸಾಕ್ಷಿ ಎಂಬಂತೆ, ನ್ಯೂಝಿಲೆಂಡ್‌ನ ಆಲ್‌ರೌಂಡರ್ ಮಿಚೆಲ್ ಸ್ಯಾಂಟ್ನರ್ ತಮ್ಮ ಅತಿಯಾದ ಪ್ರಾಮಾಣಿಕತೆಯಿಂದಾಗಿ ತಾವೇ ರನ್ ಔಟ್ ಆಗಿ ಹೊರನಡೆದ ಅಪರೂಪದ ಘಟನೆ ನಡೆದಿದೆ. ‘ದಿ ಹಂಡ್ರೆಡ್ 2026′ ಟೂರ್ನಿಯಲ್ಲಿ ನಡೆದ ಈ ಘಟನೆಯ ವಿಡಿಯೋ ಈಗ ಜಾಗತಿಕವಾಗಿ ಭಾರಿ ವೈರಲ್ ಆಗಿದೆ. ದಿ ಹಂಡ್ರೆಡ್’ ಕ್ರಿಕೆಟ್ ಟೂರ್ನಿಯಲ್ಲಿ ಟ್ರೆಂಟ್ ರಾಕೆಟ್ಸ್ ಮತ್ತು ಬರ್ಮಿಂಗ್ಹ್ಯಾಮ್ ಫೀನಿಕ್ಸ್ ತಂಡಗಳ ನಡುವೆ ಎಡ್ಜ್‌ಬಾಸ್ಟನ್‌ನಲ್ಲಿ ಪಂದ್ಯ ನಡೆಯುತ್ತಿತ್ತು. ಟ್ರೆಂಟ್…

Read More

ಆಂಧ್ರಪ್ರದೇಶದಲ್ಲೂ ‘ಡಿಎಸ್‌ಸಿ’ ಪರೀಕ್ಷೆ ಅಕ್ರಮದ ಕಾವು: ಶಿಕ್ಷಣ ಸಚಿವ ನಾರಾ ಲೋಕೇಶ್ ರಾಜೀನಾಮೆಗೆ ಜಗನ್ ಒತ್ತಾಯ – Kannada News | AP DSC Scam: Lokesh Resignation Demanded Amidst Teacher Recruitment Irregularities

ಅಮರಾವತಿ, ಜುಲೈ 26: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್(Dharmendra Pradhan) ಅವರು ನೀಟ್ ಅಕ್ರಮದ ಹೊಣೆ ಹೊತ್ತು ರಾಜೀನಾಮೆ ನೀಡಿದ ಬೆನ್ನಲ್ಲೇ, ಆಂಧ್ರಪ್ರದೇಶದಲ್ಲೂ ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸಿ ರಾಜಕೀಯ ಕಾವೇರಿದೆ. ‘ಮೆಗಾ ಡಿಎಸ್‌ಸಿ-2025’ (Mega DSC-2025) ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ವೈಎಸ್‌ಆರ್ ಕಾಂಗ್ರೆಸ್ ಪಕ್ಷ (YSRCP), ರಾಜ್ಯ ಶಿಕ್ಷಣ ಸಚಿವ ನಾರಾ ಲೋಕೇಶ್ ಅವರ ರಾಜೀನಾಮೆಗೆ ಪಟ್ಟು ಹಿಡಿದಿದೆ. ಜಗನ್ ಮೋಹನ್ ರೆಡ್ಡಿ ಸರ್ಕಾರಕ್ಕೆ ಸವಾಲು ಕೇಂದ್ರದ…

Read More

ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ; ವಿಡಿಯೋ ನೋಡಿ – Kannada News | Raj B Shetty starrer Karavali movie team shares glimpse of audience response

ಕಂಬಳದ ಕಥೆ ಹೊಂದಿರುವ ‘ಕರಾವಳಿ’ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ (Raj B Shetty) ಅವರು ಅಭಿನಯಿಸಿದ್ದಾರೆ. ಇತ್ತೀಚೆಗೆ ಬಿಡುಗಡೆ ಆಗಿರುವ ಈ ಸಿನಿಮಾಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಹಲವು ಚಿತ್ರಮಂದಿರಗಳಿಗೆ ಚಿತ್ರತಂಡ ಭೇಟಿ ನೀಡುತ್ತಿದೆ. ರಾಜ್ ಬಿ. ಶೆಟ್ಟಿ ಅವರು ಹೋದಲ್ಲೆಲ್ಲ ಅಭಿಮಾನಿಗಳಿಂದ ಸಖತ್ ರೆಸ್ಪಾನ್ಸ್ ಸಿಗುತ್ತಿದೆ. 2ನೇ ದಿನ ಜನರ ಪ್ರತಿಕ್ರಿಯೆ ಹೇಗಿತ್ತು ಎಂಬುದನ್ನು ತಿಳಿಸಲು ‘ಕರಾವಳಿ’ ಚಿತ್ರತಂಡ ಈ ವಿಡಿಯೋವನ್ನು ಹಂಚಿಕೊಂಡಿದೆ. ಸಿನಿಮಾ ಹೇಗಿದೆ ಎಂಬ ವಿಮರ್ಶೆಯನ್ನು ಅಭಿಮಾನಿಗಳು ಹಂಚಿಕೊಂಡಿದ್ದಾರೆ. ಗುರುದತ್…

Read More

ಬೆಂಗಳೂರಿನಲ್ಲಿ ಬಾಂಗ್ಲಾದೇಶಿ ದಂಪತಿ ಮೇಲೆ ಹಲ್ಲೆ: ವೈದ್ಯನ ಬಂಧನ – Kannada News | Bengaluru Doctor Arrested for Assaulting Bangladeshi Couple in Bellandur

ಬೆಂಗಳೂರು, ಜುಲೈ 26: ಬೆಳ್ಳಂದೂರಿನಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶಿ ದಂಪತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸ್ಥಳೀಯ ವೈದ್ಯರೊಬ್ಬರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಸಾಯಿ ಕ್ಲಿನಿಕ್‌ನ ಡಾ. ನಾಗೇಂದ್ರ ಬಂಧಿತ ವೈದ್ಯ. ವೈಟ್ ಫೀಲ್ಡ್ ಸಮೀಪದ ಬೆಟ್ಟದಾಸಪುರದಲ್ಲಿ ವಾಸವಾಗಿರುವ ಬಾಂಗ್ಲಾದೇಶ ಮೂಲದ ನಸ್ರೀನಾ ಬಿಲಾಲ್ (23) ಎಂಬ ಮಹಿಳೆ ನೀಡಿದ ದೂರಿನನ್ವಯ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ನಡೆದಿದ್ದೇನು? ನಸ್ರೀನಾ ಬಿಲಾಲ್ ಹಾಗೂ ಅವರ ಪತಿ ಮಹಮ್ಮದ್ ಬಿಲಾಲ್ (ಚಾಲಕ) ಅವರು ಬಾಂಗ್ಲಾದೇಶದ ನಿವಾಸಿಗಳು ಎಂಬ ಕಾರಣಕ್ಕೆ…

Read More