Headlines

ಕೋಗಿಲು ನಿರಾಶ್ರಿತರಿಗೆ ತಕ್ಷಣವೇ ಮನೆ ಸಿಗೋದು ಡೌಟ್! ಎದುರಾಯ್ತು ದೊಡ್ಡ ತೊಡಕು – Kannada News | Bengaluru Kogilu Eviction Case: Immediate Housing for Displaced Families Uncertain Amid Major Legal Hurdles

ಕೋಗಿಲು ಬಡಾವಣೆಯಲ್ಲಿ ಅಕ್ರಮ ಕಟ್ಟಡಗಳ ತೆರವಿನ ಸಂಗ್ರಹ ಚಿತ್ರ ಬೆಂಗಳೂರು, ಜನವರಿ 2: ಬೆಂಗಳೂರಿನ (Bengaluru) ಕೋಗಿಲು ಬಡಾವಣೆ (Kogilu Layout Row) ಬಳಿ ಮನೆಗಳ ತೆರವು ಸಂತ್ರಸ್ತರಿಗೆ ಈಗಾಗಲೇ ನೀಡಿದ ಭರವಸೆಯಂತೆ ಸರ್ಕಾರ ಇಂದು ಮನೆಗಳ ಹಸ್ತಾಂತರ ಮಾಡಬೇಕಿದೆ. ಆದರೆ ಇವತ್ತೇ ನಿರಾಶ್ರಿತರಿಗೆ ಮನೆ ಸಿಗುವುದು ಅನುಮಾನ. ಅಧಿಕಾರಿಗಳು ನಿಯಮ ಪಾಲನೆಯ ಗೊಂದಲಕ್ಕೆ ಸಿಲುಕಿದ್ದಾರೆ ಎಂಬ ಖಚಿತ ಮಾಹಿತಿ ‘ಟಿವಿ9’ಗೆ ಲಭ್ಯವಾಗಿದೆ. ಒಂದೆಡೆ ನಿಯಮಗಳ ಪಾಲನೆ ಮಾಡಬೇಕು, ಮತ್ತೊಂದೆಡೆ ರಾಜಕಾರಣಿಗಳ ಒತ್ತಡವೂ ಇದೆ. ಇವೆರಡರ ನಡುವೆ…

Read More

Dengue Vaccine Approved in India: ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!

ಬೆಂಗಳೂರು, ಜುಲೈ 21: ಭಾರತದಲ್ಲಿ ಮಾರಕ ಡೆಂಗೀ ಜ್ವರಕ್ಕೆ ಮೊದಲ ಅಧಿಕೃತ ನಿರ್ದಿಷ್ಟ ಲಸಿಕೆ ಕ್ಯುಡೆಂಗಾ ಮಾರಾಟಕ್ಕೆ ಅನುಮೋದನೆ ದೊರೆತಿದೆ. ಜಪಾನ್‌ನ ಟಕೇಡಾ ಬಯೋ ಫಾರ್ಮಾಟಿಕಲ್ಸ್ ಅಭಿವೃದ್ಧಿಪಡಿಸಿರುವ ಈ ಲಸಿಕೆಗೆ ಡಿಸಿಜಿಐ (ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್) ಸಮ್ಮತಿ ಸೂಚಿಸಿದೆ. 4 ರಿಂದ 60 ವರ್ಷ ವಯೋಮಾನದವರಿಗೆ ಈ ಲಸಿಕೆ ನೀಡಬಹುದಾಗಿದೆ. ಕ್ಯುಡೆಂಗಾ ಲಸಿಕೆಯು ಡೆಂಗಿಯ ನಾಲ್ಕೂ ವಿಧದ ವೈರಸ್‌ಗಳ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತದೆ. ಎರಡು ಡೋಸ್‌ಗಳಲ್ಲಿ ಈ ಲಸಿಕೆಯನ್ನು ನೀಡಲಾಗುತ್ತದೆ. ಮೊದಲ ಡೋಸ್ ಪಡೆದ…

Read More

IND vs SL: ಹ್ಯಾಟ್ರಿಕ್ ಸಿಕ್ಸ್ ಬಾರಿಸಿ ತಂಡಕ್ಕೆ ಗೆಲುವು ತಂದ ಸಿರಾಜ್ – Kannada News | Team India Wins Thriller: Mohammed Siraj Smashes Hat trick Sixes vs SL XI

ಕೊಲಂಬೊದ ನಾನ್‌ಡಿಸ್ಕ್ರಿಪ್ಟ್ಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ XI (India vs Sri Lanka XI) ನಡುವಿನ 3 ದಿನಗಳ ಅಭ್ಯಾಸ ಪಂದ್ಯದ ಕೊನೆಯ ದಿನದ ಕೊನೆಯ ಓವರ್​ನಲ್ಲಿ ಪಂದ್ಯವನ್ನು ಗೆದ್ದಿಕೊಳ್ಳುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು. ಗೆಲುವಿನ ಶ್ರೀಲಂಕಾ ತಂಡದ ನೀಡಿದ 207 ರನ್​ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಸುಲಭವಾಗಿ ಗುರಿ ಬೆನ್ನಟ್ಟುವಂತೆ ತೋರುತ್ತಿತ್ತು. ಆದರೆ ತಂಡದ ಆಟಗಾರರು ಕ್ರೀಸ್​ನಲ್ಲಿ ಸಮಯ ಕಳೆಯುವ ಸಲುವಾಗಿ ಸಾಕಷ್ಟು ಎಸೆತಗಳನ್ನು ಡಾಟ್ ಮಾಡಿದರು. ಹೀಗಾಗಿ…

Read More

ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ? ಬೀದಿಗೆ ಬೀಳುವ ಭಯದಲ್ಲಿ ಕುಟುಂಬ

ಗದಗ, ಜ.11: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆ ಪಾಯ ಅಗೆಯುವಾಗ ಚಿನ್ನದ ನಿಧಿ ಪತ್ತೆಯಾದ ಘಟನೆ ಇದೀಗ ಹೊಸದೊಂದು ಸಮಸ್ಯೆಗೆ ಕಾರಣವಾಗಿದೆ. ಪ್ರಾಮಾಣಿಕತೆ ಮೆರೆದ ಕುಟುಂಬ ನಿಧಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರೂ, ಈಗ ಆ ಕುಟುಂಬಕ್ಕೆ ಭಯ ಮತ್ತು ಆತಂಕ ಶುರುವಾಗಿದೆ. ನಿಧಿ ಸಿಕ್ಕಿದ ಸ್ಥಳವನ್ನು ನಿಷಿದ್ಧ ಪ್ರದೇಶವೆಂದು ಘೋಷಿಸಿರುವ ಕಾರಣ, ಅವರು ಕಟ್ಟುತ್ತಿದ್ದ ಮನೆ ಅರ್ಧಕ್ಕೆ ನಿಂತಿದೆ. ಹೀಗಾಗಿ, ವಾಸಕ್ಕೆ ಮನೆಯಿಲ್ಲದೆ ಕುಟುಂಬ ಬೀದಿಗೆ ಬಂದಂತಾಗಿದ್ದು, ಎಲ್ಲಿ ಬದುಕು ಸಾಗಿಸಬೇಕು ಎಂಬ ಚಿಂತೆಯಲ್ಲಿದೆ. ಮನೆಯ ಯಜಮಾನ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 9ರ ದಿನಭವಿಷ್ಯ

ಈ ದಿನ ನರಸಿಂಹ ದೇವರ ದೇವಸ್ಥಾನಕ್ಕೆ ತೆರಳಿ, ಕೆಂಪು ಬಣ್ಣದ ಹೂವಿನಿಂದ ಕಟ್ಟಿದಂಥ ಮಾಲೆಯೊಂದನ್ನು ಸಮರ್ಪಣೆ ಮಾಡುವುದರಿಂದ ಬಹಳ ಪ್ರಯತ್ನ ಮಾಡುತ್ತಿದ್ದ ಪ್ರಾಜೆಕ್ಟ್ ಗಳು, ಹಣಕಾಸಿಗೆ ಸಂಬಂಧಿಸಿದ ವಿಚಾರಗಳಲ್ಲಿ ಪ್ರಗತಿಯನ್ನು ಕಾಣಲಿದ್ದೀರಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಇತರರ ವೈಯಕ್ತಿಕ ವಿಷಯಗಳಲ್ಲಿ ನೀವಾಗಿಯೇ ಸಲಹೆ- ಸೂಚನೆ ನೀಡುವುದಕ್ಕೆ ಹೋಗಬೇಡಿ. ಕೃಷಿಯನ್ನೇ ತಮ್ಮ ವೃತ್ತಿಯಾಗಿ ಮಾಡಿಕೊಂಡವರು ಜಮೀನಿನಲ್ಲಿ ಕೆಲವು ಕೆಲಸಗಳನ್ನು ಮಾಡಿಸುವ ನಿಟ್ಟಿನಲ್ಲಿ ಮಾತುಕತೆ ಆಡಲಿದ್ದೀರಿ. ಒಂದು…

Read More

SIR ವಿಚಾರಣೆಗೆ ಹಾಜರಾಗಲು ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಸಮನ್ಸ್ – Kannada News | Team India Cricketer Mohammed Shami summoned for SIR

ದೇಶದ ಹಲವು ರಾಜ್ಯಗಳಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಚಾಲ್ತಿಯಲ್ಲಿದೆ. ಈ ಪರಿಷ್ಕರಣೆಯ ಭಾಗವಾಗಿ ಇದೀಗ ವಿಚಾರಣೆಗೆ ಹಾಜರಾಗುವಂತೆ ಟೀಮ್ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ಮತ್ತು ಅವರ ಸಹೋದರ ಮೊಹಮ್ಮದ್ ಕೈಫ್​ ಅವರಿಗೆ ಚುನಾವಣಾ ಆಯೋಗ ಸಮನ್ಸ್ ಜಾರಿ ಮಾಡಿದೆ. ದಕ್ಷಿಣ ಕೋಲ್ಕತ್ತಾದ ಜಾದವ್‌ಪುರ ಪ್ರದೇಶದ ಕರ್ತ್ಜು ನಗರ ಶಾಲೆಯಿಂದ ಸೋಮವಾರ ನೋಟಿಸ್‌ಗಳನ್ನು ಜಾರಿಗೊಳಿಸಲಾಗಿದ್ದು, ಸಹಾಯಕ ಚುನಾವಣಾ ನೋಂದಣಿ ಅಧಿಕಾರಿ (AERO) ಮುಂದೆ ಹಾಜರಾಗುವಂತೆ ಶಮಿ ಮತ್ತು ಅವರ ತಮ್ಮನಿಗೆ ಸೂಚಿಸಲಾಗಿದೆ….

Read More

‘ಧುರಂಧರ್ 2’ ಅಬ್ಬರ: ಭಾರತದಲ್ಲಿ 10 ದಿನಕ್ಕೆ 700 ಕೋಟಿ ರೂಪಾಯಿ ದಾಟಿದ ಕಲೆಕ್ಷನ್

ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಅಭಿನಯದ ಮತ್ತು ಆದಿತ್ಯ ಧರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ (Dhurandhar 2) ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಪ್ರತಿದಿನ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಬಿಡುಗಡೆಯಾದ ಕೇವಲ 9 ದಿನಗಳಲ್ಲಿ 700 ಕೋಟಿ ಕ್ಲಬ್ ಸೇರಿದ್ದ ಈ ಚಿತ್ರ, ಈಗ 10ನೇ ದಿನಕ್ಕೆ ಕಾಲಿಡುತ್ತಲೇ ಭಾರತೀಯ ಚಿತ್ರರಂಗದ ಘಟಾನುಘಟಿ ಚಿತ್ರಗಳ ದಾಖಲೆಯನ್ನು ಪುಡಿಪುಡಿ ಮಾಡಿದೆ. ಮಾರ್ಚ್ 19ರಂದು ತೆರೆಕಂಡ ಈ ಸಿನಿಮಾ, ತನ್ನ 10ನೇ ದಿನವಾದ ಶನಿವಾರದಂದು (ಮಾರ್ಚ್ 28)…

Read More

ಕೋರ್ಟ್ ರಾಜಕೀಯ ವೇದಿಕೆಯಲ್ಲ; ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ಡಿಎಂಕೆ ಅರ್ಜಿ ಸ್ವೀಕರಿಸಲು ಸುಪ್ರೀಂ ಕೋರ್ಟ್ ನಕಾರ – Kannada News | Dont Make Court A Political Forum Supreme Court Refuses To Entertain DMK Plea In Karur Stampede Case

ನವದೆಹಲಿ, ಜುಲೈ 7: ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿ ನಡೆದ ಭೀಕರ ಕಾಲ್ತುಳಿತದ (Karur Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಡಿಎಂಕೆ (DMK) ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಇಂದು (ಜುಲೈ 7) ನಿರಾಕರಿಸಿದೆ. ಈ ವೇಳೆ ನ್ಯಾಯಾಲಯವು ರಾಜಕೀಯ ಪಕ್ಷಗಳಿಗೆ ಕಟು ಎಚ್ಚರಿಕೆಯನ್ನೂ ನೀಡಿದೆ. ಕರೂರ್ ಕಾಲ್ತುಳಿತ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ರಜೆ ಕಾಲದ ಪೀಠವು “ರಾಜಕೀಯ ಲಾಭಕ್ಕಾಗಿ ನ್ಯಾಯಾಲಯವನ್ನು ರಾಜಕೀಯ ವೇದಿಕೆಯನ್ನಾಗಿ ಬಳಸಿಕೊಳ್ಳಬೇಡಿ” ಎಂದು ಡಿಎಂಕೆ ಪಕ್ಷಕ್ಕೆ ನೇರವಾಗಿ ಎಚ್ಚರಿಕೆ…

Read More

ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಏಕಕಾಲಕ್ಕೆ 8 ಹಿರಿಯ IAS ಅಧಿಕಾರಿಗಳಿಗೆ ಶೋಕಾಸ್ ನೋಟಿಸ್

ಬೆಂಗಳೂರು, (ಮಾರ್ಚ್ 16): ಕರ್ನಾಟಕ ವಿಧಾನಸಭೆ ಅಧಿವೇಶನ (Karnataka Assembly Session 2026) ಇಂದು (ಮಾರ್ಚ್ 16) ಅಚ್ಚರಿಯ ಘಟನೆಗೆ ಸಾಕ್ಷಿಯಾಯ್ತು. ಸದನದಲ್ಲಿ ಶಾಸಕರು ಕೇಳುವ ಪ್ರಶ್ನೆಗಳಿಗೆ ಸಚಿವರು ಸಮರ್ಪಕ ಉತ್ತರ ಕೊಡುತ್ತಿಲ್ಲ ಎಂದು ಸಿಟ್ಟಾದ ಸ್ಪೀಕರ್ ಯು.ಟಿ.ಖಾದರ್ (UT Khader) ಸಭಾತ್ಯಾಗ ಮಾಡಿ ಸರ್ಕಾರಕ್ಕೆ ಚುರುಕು ಮುಟ್ಟಿಸಿದ್ದಾರೆ. ಬಜೆಟ್ ಕಲಾಪದ (Budget Session ) 7 ನೇ ದಿನವಾದ ಇವತ್ತು ಕೂಡ ಕಲಾಪ ನಡೆಸಲು ವಿಧಾನಸಭೆಗೆ ಆಗಮಿಸಿದ್ದರು. ಆದರೆ ಸಚಿವರು, ಅಧಿಕಾರಿಗಳು ಲಿಖಿತ ಪ್ರಶ್ನೆಗಳಿಗೆ ಉತ್ತರಿಸಲು…

Read More

ಇಂದು ಆಷಾಢ ಶುಕ್ರವಾರ, ದಕ್ಷಿಣಾಯನವೂ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Ashada Friday 2026: July 17 Horoscope for All 12 Zodiac Signs, Dakshinayana Begins with Karka Sankranti

ಇಂದು ಜುಲೈ 17, 2026 ರಂದು ಶುಕ್ರವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ತದಿಗೆ ತಿಥಿ, ಆಷಾಢ ಶುಕ್ರವಾರ, ಕಟಕ ಸಂಕ್ರಮಣ ಇದ್ದು, ಅಮ್ಮನ ಆರಾಧನೆಗೆ ಅತ್ಯಂತ ಪ್ರಾಶಸ್ತ್ಯವಾದ ದಿನವಾಗಿದೆ. ಚಾಮುಂಡೇಶ್ವರಿ, ಮಹಾಲಕ್ಷ್ಮಿ ಅಥವಾ ಮಹಾಕಾಳಿ ದೇವಸ್ಥಾನಗಳಲ್ಲಿ ಕುಂಕುಮಾರ್ಚನೆ, ದರ್ಶನ ಮತ್ತು ಪುಷ್ಪ ಸಮರ್ಪಣೆ ಮಾಡುವುದರಿಂದ ತಾಯಿಯ ಪರಿಪೂರ್ಣ ಅನುಗ್ರಹ ಪ್ರಾಪ್ತವಾಗುತ್ತದೆ ಎಂದು ‘ಟಿವಿ9 ಕನ್ನಡ ಡಿಜಿಟಲ್​’ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ….

Read More