‘ಧುರಂಧಂರ್ 2’ ಟೀಸರ್ 9 ಮಿಲಿಯನ್, ‘ಟಾಕ್ಸಿಕ್’ ಟೀಸರ್ 97 ಮಿಲಿಯನ್; ಅಜಗಜಾಂತರ ವ್ಯತ್ಯಾಸ – Kannada News | Toxic Teaser vs Dhurandhar 2: Yash’s Film Dominates with 97M Views, What Went Wrong?

‘ಟಾಕ್ಸಿಕ್’ ಟೀಸರ್ (Toxic Movie) ರಿಲೀಸ್ ಆದಾಗ ಶುರುವಾದ ಒಂದು ಹಲ್​ಚಲ್ ಇದೆಯಲ್ಲ ಅದು ತುಂಬಾನೇ ದೊಡ್ಡದು. ಈ ಟೀಸರ್​​ನಲ್ಲಿ ಬಂದ ಯಾರೂ ಊಹಿಸದ ದೃಶ್ಯದಿಂದ ಟೀಸರ್ ಇಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡುವಂತೆ ಆಯಿತು. ಆದರೆ, ‘ಧುರಂಧರ್ 2’ ಸಿನಿಮಾದ ಟೀಸರ್ ಗಮನ ಸೆಳೆಯುವಲ್ಲಿ ವಿಫಲವಾಗಿದೆ. ಎರಡೂ ಟೀಸರ್ ವೀಕ್ಷಣೆಯ ವೀವ್ಸ್ ನೋಡಿದರೆ ಅಜಗಜಾಂತರ ವ್ಯತ್ಯಾಸ ಇದೆ. ಹೀಗಾಗಿ, ಯಾವ ಸಿನಿಮಾಗೆ ಹೆಚ್ಚು ಬೇಡಿಕೆ ಇದೆ ಎಂಬುದು ಸ್ಪಷ್ಟವಾಗಿದೆ.

‘ಟಾಕ್ಸಿಕ್’ ಟೀಸರ್ ಜನವರಿ 8ರಂದು ರಿಲೀಸ್ ಆಯಿತು. ಅಂದು ಯಶ್ ಜನ್ಮದಿನ. ಈ ಟೀಸರ್ 24 ಗಂಟೆಯಲ್ಲಿ ಯೂಟ್ಯೂಬ್ ಒಂದರಲ್ಲೇ ಸುಮಾರು 50 ಮಿಲಿಯನ್ಸ್ ವೀವ್ಸ್ ಕಂಡಿತ್ತು. ಅಂದರೆ 5 ಕೋಟಿ. ಇದು ಟಾಕ್ಸಿಕ್ ಚಿತ್ರದ ನಿಜವಾದ ಕ್ರೇಜ್ ಏನು ಎಂಬುದನ್ನು ತೋರಿಸಿತ್ತು. ಈ ಟೀಸರ್ ಈವರೆಗೆ ಸುಮಾರು 97 ಮಿಲಿಯನ್ ವೀಕ್ಷಣೆ ಕಂಡಿದೆ. ಇದು ಚಿತ್ರದ ಹೆಚ್ಚುಗಾರಿಕೆ.

ಇದನ್ನೂ ಓದಿ: ‘ಜನ ನಾಯಗನ್’, ‘ಟಾಕ್ಸಿಕ್’ ಬಳಿಕ ‘ಕೆಡಿ’ ಚಿತ್ರಕ್ಕೆ ಬಂತೊಂದು ಸ್ಟ್ರಾಂಗ್ ಪ್ರತಿಸ್ಪರ್ಧಿ

ಆದರೆ, ಈ ದಾಖಲೆಯ ಹತ್ತಿರ ಬರಲು ‘ಧುರಂಧರ್ 2’ ಟೀಸರ್ ಬಳಿ ಸಾಧ್ಯವಾಗಿಲ್ಲ. ಹಿಂದಿ ಟೀಸರ್ 24 ಗಂಟೆಯಲ್ಲಿ 9 ಮಿಲಿಯನ್​​ಗೂ ಕಡಿಮೆ ವೀಕ್ಷಣೆ ಕಂಡಿದೆ. ಇನ್ನು, ಉಳಿದ ಭಾಷೆಯ ಟೀಸರ್ ಸೇರಿಸಿದರೆ ಹೆಚ್ಚುವರಿಯಾಗಿ ಎರಡು ಮಿಲಿಯನ್ ಸೇರ್ಪಡೆ ಆಗಬಹುದು. ಅಂದರೆ, ಈವರೆಗೆ ಟೀಸರ್ 11 ಮಿಲಿಯನ್ ವೀಕ್ಷಣೆ ಕಂಡಿರಬಹುದು. ‘ಟಾಕ್ಸಿಕ್’ ಟೀಸರ್ ಕಂಡ 50 ಮಿಲಿಯನ್ ವೀಕ್ಷಣೆ ಎಲ್ಲಿ, ‘ಧುರಂಧರ್ 2’ ಕಂಡ 11 ಮಿಲಿಯನ್ ವೀಕ್ಷಣೆ ಎಲ್ಲಿ’ ಎಂದು ಕನ್ನಡ ಸಿನಿಪ್ರಿಯರು ಕೇಳಿಕೊಳ್ಳುತ್ತಿದ್ದಾರೆ.

‘ಧುರಂಧರ್’ ಸಿನಿಮಾದಲ್ಲಿ ಬರೋ ಎಂಡ್ ಕ್ರೆಡಿಟ್ ದೃಶ್ಯಗಳನ್ನೇ ‘ಧುರಂಧರ್ 2’ ಟೀಸರ್ ಎಂದು ರಿಲೀಸ್ ಮಾಡಲಾಗಿದೆ. ಇದು ಚಿತ್ರಕ್ಕೆ ತೀವ್ರ ಹಿನ್ನಡೆ ತಂದಿದೆ. ಇನ್ನು ಹೆಚ್ಚೆಂದರೆ ಟೀಸರ್ 20 ಮಿಲಿಯನ್ ವಿಕ್ಷಣೆ ಕಾಣಬಹುದು. ಅದಾಗಲೇ, ‘ಟಾಕ್ಸಿಕ್’ ಟೀಸರ್ 100 ಮಿಲಿಯನ್ ಕ್ಲಬ್ ಸೇರಿರುತ್ತದೆ ಎಂಬುದು ಪಕ್ಕಾ. ಎರಡೂ ಟೀಸರ್ ಮಧ್ಯೆ ಸುಮಾರು 80 ಮಿಲಿಯನ್ ವ್ಯತ್ಯಾಸ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಗದಗ: ರೋಣ ಜಿಗಳೂರು ಕ್ರಾಸ್ ಬಳಿ ಕ್ರೂಸರ್-ಲಾರಿ ಭೀಕರ ಅಪಘಾತ, ಮೂವರು ಸಾವು – Kannada News | Cruiser Lorry Collision in Gadag: 3 Dead, Over 10 Injured Near Jiguluru Cross

ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿರುವುದುImage Credit source: tv9

ಗದಗ, ಫೆಬ್ರವರಿ 5: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ನಡೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಜೇಂದ್ರಗಡದ ಶಿವಾಜಿ ನಗರ ನಿವಾಸಿಗಳಾದ ಕೂಲಿ ಕಾರ್ಮಿಕರು ಕ್ರೂಸರ್ ವಾಹನದಲ್ಲಿ ಕೆಲಸಕ್ಕಾಗಿ ರೋಣ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದ ಸ್ಥಳಕ್ಕೆ ರೋಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

(ಮಾಹಿತಿ ಅಪ್​ಡೇಟ್ ಆಗಲಿದೆ)

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಫ್ಲೋರಿಡಾ ಗಾಲ್ಫ್​ ಕೋರ್ಸ್​​ನಲ್ಲಿ ಟ್ರಂಪ್ ಹತ್ಯೆಗೆ ಯತ್ನಿಸಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ – Kannada News | Ryan: Man Convicted in Trump Assassination Attempt Sentenced to Life in Prison

ವಾಷಿಂಗ್ಟನ್, ಫೆಬ್ರವರಿ 05: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಅವರನ್ನು ಹತ್ಯೆ ಮಾಡಲು ಯತ್ನಿಸಿದ್ದ ಫ್ಲೋರಿಡಾದ ವ್ಯಕ್ತಿಯೊಬ್ಬನಿಗೆ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಸೆಪ್ಟೆಂಬರ್ 15, 2024 ರಂದು ವೆಸ್ಟ್ ಪಾಮ್ ಬೀಚ್‌ನ ಟ್ರಂಪ್ ಇಂಟರ್ನ್ಯಾಷನಲ್ ಗಾಲ್ಫ್ ಕ್ಲಬ್‌ನಲ್ಲಿ ಹತ್ಯೆ ಯತ್ನ ನಡೆದಿತ್ತು.

ಯುಎಸ್ ಜಿಲ್ಲಾ ನ್ಯಾಯಾಧೀಶರಾದ ಐಲೀನ್ ಕ್ಯಾನನ್ ಫೋರ್ಟ್​ ಪಿಯರ್ಸ್​ ನ್ಯಾಯಾಲಯದಲ್ಲಿ ರಯಾನ್ ರೌತ್‌ಗೆ ಶಿಕ್ಷೆಯನ್ನು ಪ್ರಕಟಿಸಿದರು. ಸೆಪ್ಟೆಂಬರ್‌ನಲ್ಲಿ ನ್ಯಾಯಾಧೀಶರು ಎಲ್ಲಾ ಆರೋಪಗಳಲ್ಲಿ ತಪ್ಪಿತಸ್ಥರೆಂದು ಘೋಷಿಸಿದ ಸ್ವಲ್ಪ ಸಮಯದ ನಂತರ ರೌತ್ ತನ್ನನ್ನು ತಾನೇ ಇರಿದುಕೊಳ್ಳಲು ಪ್ರಯತ್ನಿಸಿದ್ದ.

ರೌತ್​ಗೆ ಶಿಕ್ಷೆ ವಿಧಿಸುವುದನ್ನ ಆರಂಭದಲ್ಲಿ ಡಿಸೆಂಬರ್​ನಲ್ಲಿ ನಿಗದಿಪಡಿಸಲಾಗಿತ್ತು. ಸಿಎನ್‌ಎನ್ ಪ್ರಕಾರ, ಸೆಪ್ಟೆಂಬರ್‌ನಲ್ಲಿ ಟ್ರಂಪ್ 2024 ರ ಯುಎಸ್ ಅಧ್ಯಕ್ಷೀಯ ಚುನಾವಣೆಗೆ ಪ್ರಚಾರ ಮಾಡುತ್ತಿದ್ದಾಗ, ಟ್ರಂಪ್ ಮೇಲೆ ದಾಳಿ ನಡೆದಿತ್ತು. ಅಧ್ಯಕ್ಷೀಯ ಅಭ್ಯರ್ಥಿಯ ಹತ್ಯೆಗೆ ಯತ್ನಿಸಿದ್ದು ಸೇರಿದಂತೆ ಐದು ಆರೋಪಗಳಲ್ಲಿ ರೌತ್ ತಪ್ಪಿತಸ್ಥನೆಂದು ಸಾಬೀತಾಯಿತು.

59 ವರ್ಷದ ರೌತ್, ಕಳೆದ ವರ್ಷ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಟ್ರಂಪ್ ಇಂಟರ್ನ್ಯಾಷನಲ್ ಗಾಲ್ಫ್ ಕ್ಲಬ್‌ನಲ್ಲಿ ಆಗ ಅಧ್ಯಕ್ಷೀಯ ಅಭ್ಯರ್ಥಿಯಾಗಿದ್ದ ಟ್ರಂಪ್ ಅವರನ್ನು ಕೊಲ್ಲಲು ಪ್ರಯತ್ನಿಸಿದ ಆರೋಪದಲ್ಲಿ ತಪ್ಪಿತಸ್ಥನೆಂದು ಸಾಬೀತಾಗಿದೆ. ಈ ಪ್ರಕರಣದ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ರೌತ್ ಅವರ ವಕೀಲ ಮಾರ್ಟಿನ್ ರಾಸ್ ಹೇಳಿದ್ದಾರೆ.

ಮತ್ತಷ್ಟು ಓದಿ: ಭಾರತದ ಜೊತೆ ವ್ಯಾಪಾರ ಒಪ್ಪಂದ ಘೋಷಿಸಿದ ಅಮೆರಿಕ; ಸುಂಕವನ್ನು ಶೇ. 18ಕ್ಕೆ ಇಳಿಸಿದ ಟ್ರಂಪ್

ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ ಪದೇ ಪದೇ ತಪ್ಪಾಗಿ ವರ್ತಿಸುತ್ತಿದ್ದರು, ಇದರಲ್ಲಿ ಟ್ರಂಪ್‌ಗೆ ಗಾಲ್ಫ್ ಆಟಕ್ಕೆ ಸವಾಲು ಹಾಕುವುದು ಮತ್ತು ಅಡಾಲ್ಫ್ ಹಿಟ್ಲರ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಉಲ್ಲೇಖಿಸುವುದು ಸೇರಿತ್ತು.

ನ್ಯಾಯಾಧೀಶರು ಅವನನ್ನು ತಪ್ಪಿತಸ್ಥನೆಂದು ಘೋಷಿಸಿದ ಬಳಿಕ ಅಮೆರಿಕದ ಮಾರ್ಷಲ್​ಗಳು ಆತನನ್ನು ನ್ಯಾಯಾಲಯದ ಕೋಣೆಯಿಂದ ಹೊರಗೆ ಕರೆದೊಯ್ಯುವ ಮೊದಲು ರೌತ್ ಕುತ್ತಿಗೆಗೆ ರಿದುಕೊಳ್ಳಲು ಪ್ರಯತ್ನಿಸಿದ್ದ.

ಜುಲೈನಲ್ಲಿ ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ನಡೆದ ಪ್ರಚಾರ ರ್ಯಾಲಿಯಲ್ಲಿ ಬಂದೂಕುಧಾರಿಯೊಬ್ಬ ಗುಂಡು ಹಾರಿಸಿದ ನಂತರ, ಫ್ಲೋರಿಡಾದಲ್ಲಿ ನಡೆದ ಈ ಘಟನೆ 2024 ರಲ್ಲಿ ಟ್ರಂಪ್ ಅವರ ಮೇಲೆ ನಡೆದ ಎರಡನೇ ಹತ್ಯೆ ಯತ್ನವಾಗಿತ್ತು. ಗುಂಡಿನ ದಾಳಿಕೋರನನ್ನು ನಂತರ 20 ವರ್ಷದ ಥಾಮಸ್ ಕ್ರೂಕ್ಸ್ ಎಂದು ಗುರುತಿಸಲಾಗಿದ್ದು, ಆತನನ್ನು ಅಧಿಕಾರಿಗಳು ಸ್ಥಳದಲ್ಲೇ ಕೊಂದಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 7:21 am, Thu, 5 February 26

Source link

‘ಜನ ನಾಯಗನ್’, ‘ಟಾಕ್ಸಿಕ್’ ಬಳಿಕ ‘ಕೆಡಿ’ ಚಿತ್ರಕ್ಕೆ ಬಂತೊಂದು ಸ್ಟ್ರಾಂಗ್ ಪ್ರತಿಸ್ಪರ್ಧಿ – Kannada News | KVN Films in Trouble: Jana Nayagan, Toxic, KD Face Delays, Box Office Clashes

‘ಕೆವಿಎನ್ ಪ್ರೊಡಕ್ಷನ್ಸ್’ ಅಡಿಯಲ್ಲಿ ‘ಜನ ನಾಯಗನ್’, ‘ಟಾಕ್ಸಿಕ್’ (Toxic) ಹಾಗೂ ‘ಕೆಡಿ’ ಸಿನಿಮಾಗಳು ಒಟ್ಟೊಟ್ಟಿಗೆ ಸಿದ್ಧವಾಗಿವೆ. ‘ಜನ ನಾಯಗನ್’ ಜನವರಿ 9ಕ್ಕೆ ರಿಲೀಸ್ ಆಗಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ‘ಟಾಕ್ಸಿಕ್’ ಚಿತ್ರ ಮಾರ್ಚ್​ 19ರಂದು ತೆರೆಗೆ ಬರುತ್ತಿದೆ. ಇದಕ್ಕೆ ಬಾಲಿವುಡ್​​ನ ‘ಧುರಂಧರ್ 2’ ತೀವ್ರ ಪ್ರತಿಸ್ಪರ್ಧೆ ನೀಡುತ್ತಿದೆ. ಏಪ್ರಿಲ್ 30ಕ್ಕೆ ‘ಕೆಡಿ’ ಸಿನಿಮಾ ಬರುತ್ತಿದ್ದು, ಇದಕ್ಕೆ ದೊಡ್ಡ ಪ್ರತಿಸ್ಪರ್ಧಿ ಒಂದು ಎದುರಾಗಿದೆ. ಅದುವೇ ‘ಪೆದ್ದಿ’ ಸಿನಿಮಾ.

‘ಕೆವಿಎನ್ ಪ್ರೊಕ್ಷನ್ಸ್’ ಕನ್ನಡದ ನಿರ್ಮಾಣ ಸಂಸ್ಥೆ. ‘ಜನ ನಾಯಗನ್’ ಸಿನಿಮಾನ ಇದೇ ಸಂಸ್ಥೆ ಅದ್ದೂರಿ ಬಜೆಟ್ ಅಲ್ಲಿ ನಿರ್ಮಾಣ ಮಾಡಿದೆ. ಈ ಸಿನಿಮಾ ತಿಂಗಳ ಹಿಂದೆಯೇ ತೆರೆಗೆ ಬರಬೇಕಿತ್ತು. ಆದರೆ, ಇನ್ನೂ ಚಿತ್ರದ ಬಿಡುಗಡೆ ದಿನಾಂಕದ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಸೆನ್ಸಾರ್ ಮಂಡಳಿ ಪ್ರಮಾಣ ಪತ್ರ ನೀಡದೆ ಇರುವುದೆ ಇದಕ್ಕೆ ಕಾರಣ. ಇದು ಚಿತ್ರದ ಚಿಂತೆಗೆ ಕಾರಣ ಆಗಿದೆ. ಈ ಚಿತ್ರ ರಿಲೀಸ್ ಆಗದೆ ಇರುವುದರ ಹಿಂದೆ ರಾಜಕೀಯ ಒತ್ತಡಗಳೂ ಇವೆ ಎಂಬ ಮಾತುಗಳು ಕೇಳಿ ಬಂದಿವೆ.

ಇನ್ನು, ‘ಟಾಕ್ಸಿಕ್’ ಚಿತ್ರಕ್ಕೆ ಬಾಲಿವುಡ್​​ನ ‘ಧುರಂಧರ್ 2’ ಸಿನಿಮಾ ದೊಡ್ಡ ಪ್ರತಿಸ್ಪರ್ಧಿಯಾಗಿ ನಿಂತಿದೆ. ಎರಡೂ ಸಿನಿಮಾಗೆ ಸಾಕಷ್ಟು ಹೈಪ್ ಇದೆ. ಈ ಎರಡೂ ಚಿತ್ರಗಳು ಒಟ್ಟಿಗೆ ರಿಲೀಸ್ ಆಗುತ್ತಿರುವುದರಿಂದ ಬಾಕ್ಸ್ ಆಫೀಸ್​​​ನಲ್ಲಿ ದೊಡ್ಡ ಕ್ಲ್ಯಾಶ್ ನಿರೀಕ್ಷಿಸಬಹುದಾಗಿದೆ. ಸದ್ಯದ ಮಟ್ಟಿಗೆ ಈ ಚಿತ್ರಕ್ಕೆ ಕಾನೂನಾತ್ಮವಾಕವಾಗಿ ಯಾವುದೇ ತೊಂದರೆ ಎದುರಾಗಿಲ್ಲ. ಸೆನ್ಸಾರ್ ಸಮಯದಲ್ಲಿ ಯಾವುದಾದರೂ ಅಡಚಣೆ ಉಂಟಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಬಗ್ಗೆ ಭಯವಿಲ್ಲ ಎಂದಿದ್ದ ಹೀರೋ ಈಗ ಹೆಜ್ಜೆ ಹಿಂದಿಟ್ಟಿದ್ದೇಕೆ?

ಇನ್ನು, ‘ಕೆಡಿ’ ಸಿನಿಮಾ ಕೂಡ ‘ಕೆವಿಎನ್’ ಸಂಸ್ಥೆಯೇ ನಿರ್ಮಿಸಿದೆ. ಇದು ಸೋಲೋ ರಿಲೀಸ್ ಕಾಣೋ ನಿರೀಕ್ಷೆ ಇತ್ತು. ಆದರೆ, ಅದು ಸುಳ್ಳಾಗಿದೆ. ಈ ಚಿತ್ರಕ್ಕೆ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಪ್ರತಿ ಸ್ಪರ್ಧಿಯಾಗಿ ನಿಂತಿದೆ. ಈ ಮೂಲಕ ಕೆವಿಎನ್​​ಗೆ ಇಲ್ಲಿಯೂ ಅಡ್ಡಗಾಲು ಬಿದ್ದಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಉಚಿತ ಹೆಲ್ಮೆಟ್ ಪಡೆಯಲು ಪ್ರವಾಹದಂತೆ ಮುಗಿಬಿದ್ದ ಜನ: ಲಾರಿಯನ್ನೇ ಏರಿ ಹೇಗೆ ದೋಚುತ್ತಿದ್ದಾರೆ ನೋಡಿ! – Kannada News | Chaos at Free Helmet Distribution in Mulabagilu: Crowd Storms Lorry, Video Goes Viral

ಉಚಿತ ಹೆಲ್ಮೆಟ್ ಪಡೆಯಲು ಮುಗಿಬಿದ್ದ ಜನImage Credit source: tv9

ಕೋಲಾರ, ಫೆಬ್ರವರಿ 5: ಕೋಲಾರ (Kolar) ಜಿಲ್ಲೆಯ ಮುಳಬಾಗಿಲು ಪಟ್ಟಣದ ಮೈದಾನ ಜಾತ್ರೆಯಂತಾಗಿತ್ತು. ಡಿಸೆಂಬರ್​ 1 ರಿಂದ ಜಿಲ್ಲೆಯಲ್ಲಿ ಬೈಕ್​ ಸವಾರರಿಗೆ ಹೆಲ್ಮೆಟ್ ಕಡ್ಡಾಯ ರೂಲ್ಸ್ ಜಾರಿಮಾಡಲಾಗಿದೆ. ಹೀಗಾಗಿ ಮುಳಬಾಗಿಲು (Mulabagilu) ಬ್ಲಾಕ್ ಕಾಂಗ್ರೆಸ್ (Congress) ಅಧ್ಯಕ್ಷ, ಕಳೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಆದಿನಾರಾಯಣ ನೇತೃತ್ವದಲ್ಲಿ ಬುಧವಾರ 25 ಸಾವಿರ ಉಚಿತ ಹೆಲ್ಮೆಟ್​ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜೀವಸಂಜೀವಿನಿ ಕಾರ್ಯಕ್ರಮಕ್ಕೆ ಕೋಲಾರ ಶಾಸಕ ಕೊತ್ತೂರು ಮಂಜುನಾಥ್​ ಚಾಲನೆ ನೀಡಿದರು.

ಬೈಕ್​ಗಳಲ್ಲಿ ಬಂದಿದ್ದ ಸವಾರರಿಗೆ ಹೆಲ್ಮೆಟ್ ವಿತರಿಸಲು 16 ಕೌಂಟರ್ ಓಪನ್ ಮಾಡಲಾಗಿತ್ತು. ಆದರೆ, ಉಚಿತ ಹೆಲ್ಮೆಟ್ ಪಡೆಯಲು ಜನ ‘ನಾ ಮುಂದು ತಾ ಮುಂದು’ ಎಂದು ಮುಗಿಬಿದ್ದರು. ಕೆಲವರಂತೂ ಕ್ಯಾಂಟರ್​​ಗಳನ್ನೇ ಏರಿ ಕೈಗೆ ಸಿಕ್ಕ ಹೆಲ್ಮೆಟ್​​ಗಳನ್ನು ಕೊಂಡೊಯ್ದರು. ಉಚಿತ ಹೆಲ್ಮೆಟ್ ಕೊಡುವ ಸುದ್ದಿ ಕೇಳುತ್ತಿದ್ದಂತೆಯೇ ಮುಳಬಾಗಿಲು ತಾಲೂಕಿನ ಜನ ಸುನಾಮಿಯಂತೆ ನುಗ್ಗಿ ಬಂದರು.

ಉಚಿತ ಹೆಲ್ಮೆಟ್​ಗೆ ಮುಗಿಬಿದ್ದ ಜನ: ವಿಡಿಯೋ ನೋಡಿ

20 ರಿಂದ 25 ಸಾವಿರ ಉಚಿತ ಹೆಲ್ಮೆಟ್​ ಕೊಡುವ ಯೋಜನೆ ಇದಾಗಿತ್ತು. ಆದರೆ 30 ಸಾವಿರಕ್ಕೂ ಹೆಚ್ಚು ಜನ ಲಗ್ಗೆ ಇಟ್ಟಿದ್ದರಿಂದ ಮೈದಾನದಲ್ಲಿ ಪರಿಸ್ಥಿತಿ ಕೈಮೀರಿ ಹೋಗಿತ್ತು. ಜನ ಸರದಿ ಬಿಟ್ಟು ಸಿಕ್ಕಿಸಿಕ್ಕ ಕಡೆಯಿಂದ ನುಗ್ಗಿ ಲಾರಿಗಳಲ್ಲಿ ತುಂಬಿಟ್ಟಿದ್ದ ಹೆಲ್ಮೆಟ್ ಬಾಕ್ಸ್​ಗಳನ್ನು ಹೊತ್ತೊಯ್ದರು. ಇನ್ನು ಹೆಲ್ಮೆಟ್ ಪಡೆಯಲು ಸರದಿಯಲ್ಲಿ ನಿಂತಿದ್ದ ಸಾವಿರಾರು ಜನ ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ವಾಪಸ್ ಆದರು.

ಇದನ್ನೂ ಓದಿ: ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: ಹೊತ್ತಿ ಉರಿದ ಸರ್ವೀಸ್ ಸೆಂಟರ್, 1 ಕೋಟಿ ರೂ.ಗೂ ಅಧಿಕ ಬೆಲೆಬಾಳುವ ಕಾರುಗಳು ಭಸ್ಮ

ಅಪಘಾತದ ಸಂದರ್ಭದಲ್ಲಿ ಹೆಲ್ಮೆಟ್ ಬೈಕ್ ಸವಾರರ ಜೀವ ಉಳಿಸುವುದೇನೋ ನಿಜ. ಆದರೆ, ಉಚಿತ ಸಿಗುತ್ತದೆ ಎಂದು ಜನ ಜೀವವನ್ನೇ ಪಣಕ್ಕಿಟ್ಟು ಮುಗಿಬಿದ್ದಿದ್ದು ವಿಪರ್ಯಾಸ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಹವಾಮಾನ ವರದಿ: ಚಳಿ ಮುಗಿಯುತ್ತಾ ಬಂತು, ಬೇಸಿಗೆ ಆರಂಭ ಆಗುವ ಮುನ್ಸೂಚನೆ – Kannada News | Bengaluru Weather Today: Fog, 30°C; Coastal Heat Alert and Karnataka Forecast

ಬೆಂಗಳೂರು, ಫೆ.5: ಬೆಂಗಳೂರಿನ ಸೇರಿದಂತೆ ರಾಜ್ಯದಲ್ಲಿ ಇಂದಿನ ವಾತಾವರಣ (Karnataka Weathe) ಹೇಗಿದೆ? ಯಾವೆಲ್ಲ ಜಿಲ್ಲೆಯ ಜನ ಎಚ್ಚರಿಕೆಯಿಂದ ಇರಬೇಕು ಎಂಬುದು ಇಲ್ಲಿದೆ ನೋಡಿ. ನಗರದಲ್ಲಿ ಇಂದು ಮುಂಜಾನೆ ದಟ್ಟವಾದ ಮಂಜು ಮುಸುಕಿದ ವಾತಾವರಣವಿತ್ತು. ದಿನವಿಡೀ ಆಕಾಶವು ಭಾಗಶಃ ಮೋಡದಿಂದ ಕೂಡಿರುತ್ತದೆ. ಗರಿಷ್ಠ ತಾಪಮಾನ 30°C ಮತ್ತು ಕನಿಷ್ಠ ತಾಪಮಾನ 17°C ಆಸುಪಾಸಿನಲ್ಲಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೈಸೂರು ಮತ್ತು ಹಾಸನ ಭಾಗದಲ್ಲಿ ಹವಾಮಾನವು ತುಂಬಾ ಪ್ರಶಾಂತವಾಗಿದ್ದು, ಸಂಜೆಯ ವೇಳೆಗೆ ತಂಪಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಗರಿಷ್ಠ ತಾಪಮಾನವು 33°C ವರೆಗೆ ಏರಿಕೆಯಾಗುವ ಸಾಧ್ಯತೆಯಿದ್ದು, ಮಧ್ಯಾಹ್ನದ ಸಮಯದಲ್ಲಿ ಸೆಕೆ ಹೆಚ್ಚಿರಲಿದೆ. ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ಮುಂಜಾನೆ ಚಳಿಯ ಅನುಭವವಾಗಲಿದೆ. ಗರಿಷ್ಠ ತಾಪಮಾನವು 31°C – 33°C ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: ಬೆಂಗಳೂರಿಗರೇ ಗಮನಿಸಿ: ಫೆ.4 ರಿಂದ 9 ರವರೆಗೆ ಈ ಪ್ರದೇಶಗಳಲ್ಲಿ ಪ್ರತಿದಿನ 4 ಗಂಟೆಗಳ ಕಾಲ ವಿದ್ಯುತ್ ಕಡಿತ

ರಾಜ್ಯದ ಕೆಲವು ಪ್ರಮುಖ ನಗರಗಳ ಹವಾಮಾನ ಮಾಹಿತಿ ಇಲ್ಲಿದೆ:

ಉತ್ತರ ಕರ್ನಾಟಕ ಮತ್ತು ಬೆಂಗಳೂರಿನ ಸುತ್ತಮುತ್ತಲಿನ ಬಯಲು ಪ್ರದೇಶಗಳಲ್ಲಿ ಮುಂಜಾನೆ ದೃಷ್ಟಿಗೋಚರ ಕಡಿಮೆ ಇರಲಿದ್ದು, ವಾಹನ ಸವಾರರು ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ. ಇನ್ನು ರಾಜ್ಯದ ಯಾವುದೇ ಭಾಗದಲ್ಲಿ ಸದ್ಯಕ್ಕೆ ಮಳೆಯ ಮುನ್ಸೂಚನೆ ಇಲ್ಲ. ಒಣಹವೆ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಫೆಬ್ರವರಿ ಮೊದಲ ವಾರ ಮುಗಿಯುತ್ತಿದ್ದಂತೆ ಹಗಲಿನ ತಾಪಮಾನವು ಕ್ರಮೇಣ ಏರಿಕೆಯಾಗುತ್ತಿದ್ದು, ಬೇಸಿಗೆ ಆರಂಭ ಆಗುವ ಮುನ್ಸೂಚನೆ ಸಿಗುತ್ತಿದೆ ಎಂದು ಹೇಳಲಾಗಿದೆ. ಇಂದಿನಿಂದ ಬೆಂಗಳೂರಿನ ಕೆಲವು ಭಾಗಗಳಲ್ಲಿ ವಿದ್ಯುತ್​​ ಕಡಿತವಾಗಲಿದೆ. 4 ಗಂಟೆಗಳ ಕಾಲ ವಿದ್ಯುತ್ ವ್ಯಯ್ಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ. ಆ ಕಾರಣದಿಂದ ಬೆಂಗಳೂರಿನಲ್ಲಿ ಇಂದು ಸೆಕೆಯಿಂದ ಕೂಡಿದ್ದರೆ ಮುನ್ನೆಚ್ಚರಿಕೆ ವಹಿಸುವಂತೆ ಹೇಳಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: ಹೊತ್ತಿ ಉರಿದ ಸರ್ವೀಸ್ ಸೆಂಟರ್, 1 ಕೋಟಿ ರೂ.ಗೂ ಅಧಿಕ ಬೆಲೆಬಾಳುವ ಕಾರುಗಳು ಭಸ್ಮ – Kannada News | Massive Fire Accident in Vijayapura Car Service Center: Vehicles Worth Over R1 Crore Gutted

ವಿಜಯಪುರ, ಫೆಬ್ರವರಿ 5: ವಿಜಯಪುರ ನಗರದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇರುವ ಹೆಚ್‌ಎಂಕೆ ಕಾರ್ ಸರ್ವೀಸ್ ಸೆಂಟರ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, ಸುಮಾರು 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮವಾಗಿವೆ. ಹನಮಂತ ಕನಮಡಿ ಅವರಿಗೆ ಸೇರಿದ ಈ ಸರ್ವೀಸ್ ಸೆಂಟರ್‌ನಲ್ಲಿ ರಿಪೇರಿ ಮತ್ತು ಸರ್ವಿಸ್‌ಗಾಗಿ ನಿಲ್ಲಿಸಲಾಗಿದ್ದ ವಿವಿಧ ಕಂಪನಿಗಳ ಕಾರುಗಳು ಬೆಂಕಿಗಾಹುತಿಯಾಗಿವೆ. ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಇಡೀ ಸರ್ವಿಸ್ ಸೆಂಟರ್ ಸುಟ್ಟು ಕರಕಲಾಗಿದ್ದು, ಅಂಗಡಿಯಲ್ಲಿ ಇಟ್ಟಿದ್ದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಕಾರಿನ ಬಿಡಿಭಾಗಗಳು ಕೂಡ ಬೆಂಕಿಗೆ ಆಹುತಿಯಾಗಿವೆ. ಸುಟ್ಟುಹೋದ ಕಾರುಗಳ ಒಟ್ಟು ಮೌಲ್ಯ ಒಂದು ಕೋಟಿ ರೂಪಾಯಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.

ಅದೃಷ್ಟವಶಾತ್, ಘಟನೆ ಸಮಯದಲ್ಲಿ ಸರ್ವೀಸ್ ಸೆಂಟರ್‌ನಲ್ಲಿ ಯಾರೂ ಇಲ್ಲದಿರುವ ಕಾರಣ ಸಾವು-ನೋವು ಸಂಭವಿಸಿಲ್ಲ. ಸ್ಥಳಕ್ಕೆ ತಕ್ಷಣ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ಸುತ್ತಮುತ್ತ ವ್ಯಾಪಿಸದಂತೆ ಹರಸಾಹಸ ಪಟ್ಟು ನಿಯಂತ್ರಣಕ್ಕೆ ತಂದರು. ಘಟನಾ ಸ್ಥಳಕ್ಕೆ ಗೋಲಗುಂಬಜ್ ಹಾಗೂ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ಹವಳ ಧಾರಣೆಯಿಂದ ಏನು ಲಾಭಗಳು, ಇದು ಯಾರಿಗೆ ಸೂಕ್ತ? – Kannada News | Astrological Insights: Understanding the Power of Red Coral Gemstone

ಬೆಂಗಳೂರು, ಫೆ.5: ನವರತ್ನಗಳಲ್ಲಿ ವಿಶೇಷ ಸ್ಥಾನ ಪಡೆದಿರುವ ಹವಳವು (Red Coral) ಅದೃಷ್ಟ, ಶಕ್ತಿ ಹಾಗೂ ಶುಭಕಾರ್ಯಗಳನ್ನು ತರುತ್ತದೆ. ಇದನ್ನು ಕೋರಲ್, ಬ್ಲಡ್ ಸ್ಟೋನ್ ಎಂದೂ ಕರೆಯುತ್ತಾರೆ. ಹವಳಕ್ಕೆ ಕುಜ ಗ್ರಹವು ಅಧಿಪತಿಯಾಗಿದ್ದು, ಇದು ಮೇಷ ಮತ್ತು ವೃಶ್ಚಿಕ ರಾಶಿಗಳಿಗೆ ಒಡೆಯನಾಗಿರುತ್ತಾನೆ. ಆದರೆ ಹವಳವನ್ನು ಕೇವಲ ಈ ರಾಶಿಯವರು ಮಾತ್ರವಲ್ಲ, ಅನೇಕರು ಧರಿಸಬಹುದಾಗಿದೆ. ಕುಜನು ನಮ್ಮಲ್ಲಿ ಶಕ್ತಿ, ಸಂಕಲ್ಪ, ಧೈರ್ಯ ಮತ್ತು ಆತ್ಮವಿಶ್ವಾಸವನ್ನು ತುಂಬುವ ಗ್ರಹ. ವಿವಾಹ, ಸಂತಾನ, ಭೂಮಿ ಸಂಬಂಧಿತ ವಿಷಯಗಳಿಗೂ ಕುಜನೇ ಕಾರಕ.
ಕುಜ ಗ್ರಹವು ದುರ್ಬಲನಾದಾಗ, ಕೆಟ್ಟ ಸ್ಥಾನದಲ್ಲಿದ್ದಾಗ ಅಥವಾ ಕುಜ ಮಹಾದಶೆ ಬಂದಾಗ ಹವಳವನ್ನು ಧರಿಸುವುದರಿಂದ ಶುಭ ಫಲಗಳು ದೊರೆಯುತ್ತವೆ. ಇದನ್ನು ತಾಮ್ರ, ಬೆಳ್ಳಿ ಅಥವಾ ಬಂಗಾರದಲ್ಲಿ ಧರಿಸಬಹುದು. ಹವಳ ಧರಿಸುವುದರಿಂದ ಸಂಕುಚಿತ ಭಾವನೆಗಳು ದೂರವಾಗಿ ಧೈರ್ಯ ವೃದ್ಧಿಸುತ್ತದೆ. ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ಮತ್ತು ಶತ್ರು ಭಯ ನಿವಾರಣೆಯಲ್ಲಿ ಸಹಕಾರಿ. ಕನಿಷ್ಠ ಎರಡು ಕ್ಯಾರೆಟ್‌ನ ಶುದ್ಧ ಹವಳವನ್ನು ಉಂಗುರದ ಬೆರಳಿನಲ್ಲಿ ಧಾರಣೆ ಮಾಡುವುದು ಉತ್ತಮ. ಮಂಗಳವಾರದಂದು ಹಿರಿಯರ ಮುಖಾಂತರ ಅಭಿಷೇಕ ಮಾಡಿ ಧರಿಸಿದರೆ ಹೆಚ್ಚು ಶುಭ. ಆದಾಗ್ಯೂ, ವೃಷಭ, ಕುಂಭ, ಮತ್ತು ತುಲಾ ರಾಶಿಯವರು ಹವಳ ಧರಿಸುವುದು ಸೂಕ್ತವಲ್ಲ ಏಕೆಂದರೆ ಇದು ಮಾನಸಿಕ ಚಂಚಲತೆ ಮತ್ತು ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ದಿನದ ಪಂಚಾಂಗ ಮತ್ತು ಸಂಕಷ್ಟಿ ಚತುರ್ಥಿಯ ಮಹತ್ವ – Kannada News | Days Panchangam and Sankashti Chaturthi Significance by Dr. Basavaraj Guruji

ಇಂದಿನ ದಿನಾಂಕ 05-02-2026 ಗುರುವಾರವಾಗಿದ್ದು, ಇಂದಿನ ದಿನಭವಿಷ್ಯ ಹೇಗಿದೆ ಎಂಬುದನ್ನು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಇದು ವಿಶ್ವಾ ವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಚತುರ್ಥಿ, ಉತ್ತರಾ ನಕ್ಷತ್ರ, ಸುಕರ್ಮ ಯೋಗ ಮತ್ತು ಬವಕರಣ ಇರುವ ದಿನ. ಈ ದಿನದ ರಾಹುಕಾಲ ಮಧ್ಯಾಹ್ನ 2:00 ಗಂಟೆಯಿಂದ 3:28 ನಿಮಿಷದ ತನಕ ಇರುತ್ತದೆ. ಹಾಗೆಯೇ, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಮತ್ತು ಶುಭಕಾಲವು ಮಧ್ಯಾಹ್ನ 12:33 ನಿಮಿಷದಿಂದ 1:59 ನಿಮಿಷದ ತನಕ ಸುಕರ್ಮ ಕಾಲ ರೂಪದಲ್ಲಿ ಇರುತ್ತದೆ. ಗುರುವಾರ ಗುರುಗಳ ಲಹರಿಗಳು ಇರತಕ್ಕಂತಹ ಅದ್ಭುತವಾದ ಮತ್ತು ವಿಶೇಷವಾದ ದಿನ ಇದಾಗಿದೆ. ಕೃಷ್ಣಪಕ್ಷದ ಚತುರ್ಥಿ ಇರುವುದರಿಂದ ಇದನ್ನು ಸಂಕಷ್ಟಿ ಚತುರ್ಥಿ ಎಂದು ಕರೆಯಲಾಗುತ್ತದೆ. ಶುಕ್ಲಪಕ್ಷದ ಚತುರ್ಥಿಯನ್ನು ವಿನಾಯಕಿ ಚತುರ್ಥಿ ಎಂದು ಕರೆಯುತ್ತಾರೆ. ಇಂದು ಸಂಕಷ್ಟ ಚತುರ್ಥಿ ಇರುವ ಕಾರಣ, ಬೆಳಗಿನ ಜಾವ ವಿನಾಯಕನ ಪೂಜೆ ಮಾಡಿ ಉಪವಾಸ ಆಚರಿಸಬೇಕು. ದಿನಪೂರ್ತಿ ವಿನಾಯಕನ ಆರಾಧನೆ ಮಾಡುವುದರಿಂದ ನಮ್ಮ ಸಂಕಲ್ಪಗಳು ಈಡೇರತಕ್ಕಂತಹ ಪರ್ವ ದಿನ ಇದಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಶತ್ರುಪಕ್ಷದಿಂದ ಆಹ್ವಾನ, ಅವ್ಯಕ್ತ ಭಯ – Kannada News | Horoscope 05 February 2026; Dina Rashi Bhavishya Today, Checkout the details here

ಮೇಷ ರಾಶಿ:

ನಿಮ್ಮ ವೃತ್ತಿ ಸ್ಥಳವು ಬದಲಾಗಬಹುದು. ಹೊಸದಾಗಿ ಉದ್ಯೋಗವನ್ನು ಮಾಡುವವರಿಗೆ ಆಯ್ಕೆಯಲ್ಲಿ ಗೊಂದಲವು ಕಾಣಿಸಿಕೊಂಡೀತು. ನಿಮ್ಮ ಪರೀಕ್ಷೆಯ ಕಾಲವೂ ಇದಾಗಲಿದೆ. ತಂದೆಯ ಸೇವೆಯನ್ನು ಮಾಡುವಿರಿ. ಶ್ರಮಕ್ಕೆ ಯೋಗ್ಯವಾದ ಫಲವನ್ನೇ ನಿರೀಕ್ಷಿಸಿ. ಇನ್ನೊಬ್ಬರ ಯೋಚನೆಯನ್ನು ಕದಿಯಬಹುದು. ಕೆಲವು ವಿಚಾರದಲ್ಲಿ ನೀವು ನಿಯಂತ್ರಣವನ್ನು ತಪ್ಪಬಹುದು. ಅಲ್ಪ ವಸ್ತುಗಳಿಂದ ಸಂತೋಷವಾಗಿ ಇರಲು ಬಯಸುವಿರಿ. ಹಳೆಯ ವಸ್ತುಗಳನ್ನು ಯಾರಿಗಾದರೂ ಕೊಡುವಿರಿ.

ವೃಷಭ ರಾಶಿ:

ಸಾವಧಾನತೆಯನ್ನು ನೀವು ರೂಢಿಸಿಕೊಳ್ಳಬೇಕಾದೀತು. ನಿಮ್ಮ ನಾಟಕೀಯ ಮನೋಭಾವವು ಇತರರಿಗೆ ಗೊತ್ತಾದೀತು. ಮಕ್ಕಳಿಗೆ ತಂದೆಯಿಂದ ಸಹಾಯವು ಸಿಗಬಹುದು. ಕಾರ್ಯಗಳು ಸಮಯಮಿತಿಯನ್ನು ಮೀರಿ ವಿಳಂಬವು ನಿಮಗೆ ಇಷ್ಟವಾಗದು. ಅನಾರೋಗ್ಯದಿಂದ ನೀವು ಗುಣಮುಖರಾದರೂ ಪೂರ್ಣ ಹೊರ ಬರಲು ಆಗದು. ಧಾರ್ಮಿಕ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ಇಂದಿನ ಪ್ರಯಾಣವನ್ನು ಅನಿವಾರ್ಯವಾದರೆ ಮಾತ್ರ ಮಾಡಿ.‌

ಮಿಥುನ ರಾಶಿ:

ಸ್ಮರಣಶಕ್ತಿಯ ಕೊರತೆಯು ಅಧಿಕವಾಗಿ ಕಾಡಬಹುದು. ಸೌಂದರ್ಯದ ಬಗ್ಗೆ ಅತಿಯಾದ ಕಳಜಿ ಕಾಣಿಸುವುದು. ಧಾರ್ಮಿಕ ವಿಚಾರದ ಬಗ್ಗೆ ಹೆಚ್ಚು ಆಸಕ್ತಿ ಇರುವುದು. ಬಂಧುಗಳು ನಿಮ್ಮ ಬಗ್ಗೆ ಔದಾರ್ಯ ತೋರಿಸುವರು. ಸಹಾಯವೂ ಸಿಗಬಹುದು. ನಿಮ್ಮ ಸರಳತೆಯನ್ನು ಆಡಿಕೊಳ್ಳುವರು. ಯಾರನ್ನೂ ದೂಷಿಸುತ್ತ ಇರಬೇಡಿ.‌ ಇನ್ನೊಬ್ಬರಿಗೆ ಹಣವನ್ನು ಕೊಡುವಾಗ ವ್ಯಕ್ತಿತ್ವದ‌ ಬಗ್ಗೆ ಗಮನವಿರಲಿ. ಎಲ್ಲವೂ ನಿಮ್ಮ ಮೂಗಿನ‌ ನೇರಕ್ಕೆ ನಡೆಯಬೇಕು ಎನ್ನುವುದು ತಪ್ಪಾದೀತು.

ಕರ್ಕಾಟಕ ರಾಶಿ:

ನಿಮ್ಮ ಮಾತುಗಳಿಂದ ಅನರ್ಥವಾಗಬಹುದು. ಇಂದು ನಿಮಗೆ ಮಾತನಾಡುವ ಅವಕಾಶ ಸಿಕ್ಕರೆ ಮಿತವಾಗಿ ಆಡಬೇಕಾದೀತು. ಅವಶ್ಯಕವಿರುವಷ್ಟೇ ಆಹಾರವನ್ನು ಪಡೆಯುವಿರಿ. ಯಾರ ಸಹವಾಸವೂ ಬೇಡವೆನಿಸಬಹುದು. ಮೋಹದಲ್ಲಿ ನೀವು ಬೀಳುವಿರಿ. ಕೋಪವನ್ನು ಕಡಿಮೆ ಮಾಡಿಕೊಳ್ಳಲು ತಂತ್ರವನ್ನು ಕಂಡುಕೊಳ್ಳಿ. ನಿಮ್ಮ ಬಗ್ಗೆ ನಿಮ್ಮೆದುರೇ ಆಡಿಕೊಳ್ಳುವರು. ಸಿಟ್ಟು ಬಂದರೂ ನಿಯಂತ್ರಣ ಮಾಡಿಕೊಳ್ಳುವಿರಿ.

ಸಿಂಹ ರಾಶಿ:

ಸುಮ್ಮನೇ ಮೊಂಡು ವಾದಕ್ಕೆ ಇಳಿಯುವುದು ಬೇಡ. ಕಲಾವಿದರು ಹೆಚ್ಚಿನ ಅವಕಾಶಕ್ಕೆ ಪ್ರಯತ್ನ ಮಾಡುವರು. ನಿಮ್ಮದಲ್ಲದ ವಿಷಯವೂ ನಿಮ್ಮನ್ನು ಕಾಡುವುದು. ನಿಮ್ಮ ಜೊತೆ ವೃತ್ತಿಯನ್ನು ನಿರ್ವಹಿಸುವವರು ನಿಮ್ಮ ಮಾತನ್ನು ಸಹಿಸಲಾರರು. ಸಂಗಾತಿಯು ದೂರ ಪ್ರಯಾಣ ಹೋಗಲು ಆಹ್ವಾನಿಸಬಹುದು. ಯಾರ ಬಗ್ಗೆಯೂ ಸುಮ್ಮನೇ ಮಾತನಾಡುವುದು ಬೇಡ. ವಿವಾಹ ಜೀವನಕ್ಕೆ ಒಗ್ಗಿಕೊಳ್ಳುವಿರಿ. ಹೊಸ ವಸ್ತುವಿನ ಬಳಕೆಯಿಂದ ನಿಮಗೆ ಸಂತೋಷವು ಸಿಗುವುದು.

ಕನ್ಯಾ ರಾಶಿ:

ಇಂದು ಯಾರನ್ನೂ ನೋಯಿಸಲು ಮನಸ್ಸಾಗದು. ಸ್ತ್ರೀಯರಿಗೆ ಹೆಚ್ಚು ಅಭದ್ರತೆಯು ಕಾಣಿಸಿಕೊಳ್ಳಬಹುದು. ಇಂದು ಚರಾಸ್ತಿಯನ್ನೂ ನೀವೇ ಪಡೆಯುವ ಹುನ್ನಾರ ನಡೆಸಬಹುದು. ಧಾರ್ಮಿಕ ಆಚರಣೆಯನ್ನು ವಿವೇಚನಾರಹಿತವಾಗಿ ಮಾಡುವಿರಿ. ಕಪಟಿಯ ಪಟ್ಟವೂ ನಿಮಗೆ ಸಿಗಬಹುದು. ಸರ್ಕಾರಿ ಕಾರ್ಯದಲ್ಲಿ ವಿಳಂಬ. ಒರಟು ಸ್ವಭಾವವನ್ನು ನೀವು ಕಡಿಮೆ ಮಾಡಿಕೊಳ್ಳಿ. ಬೇಡವೆಂದು ಬಿಟ್ಟರೂ ಕೆಲಸವು ಮಾತ್ರ ನಿಮ್ಮನ್ನು ಬಿಡದು.

ತುಲಾ ರಾಶಿ:

ಉದ್ಯೋಗದಲ್ಲಿ ನಿಮಗೆ ಕೈಬಿಡುವರೆಂಬ ಭಯ ಕಾಡುವುದು. ಭೂಮಿಯ ಖರೀದಿಯಲ್ಲಿ ಗೊಂದಲವು ಹೆಚ್ಚಿರಬಹುದು. ನಿಮ್ಮ ಭಾವನೆಗಳನ್ನು ನೀವೇ ಹಿಡಿದಿಟ್ಟುಕೊಳ್ಳಲು ಪ್ರಯತ್ನಿಸುವಿರಿ. ಪೂರ್ಣ ವಿಶ್ವಾಸ ಬರುವವರೆಗೆ ಆರ್ಥಿಕ ವ್ಯವಹಾರದಲ್ಲಿ ಮುಂದುವರಿಯುವುದು ಬೇಡ. ವೃತ್ತಿಯಲ್ಲಿ ಇಂದು ಆಡಿದ ಮಾತು ನಿಮ್ಮನ್ನು ವಿಚಲಿತಗೊಳಿಸಬಹುದು. ಇಂದಿನ ನಿಮ್ಮ ಕಾರ್ಯದಿಂದ ಮೆಚ್ಚುಗೆ ಸಿಗುವುದು. ಸಾಕಷ್ಟು ಕಿರಿಕಿರಿ ಇದ್ದರೂ ಅದನ್ನು ಲೆಕ್ಕಿಸದೇ ನಿಮ್ಮ ಕರ್ತವ್ಯದಲ್ಲಿ ನೀವು ನಿರತರಾಗುವಿರಿ.

ವೃಶ್ಚಿಕ ರಾಶಿ:

ವಿವಾಹಕ್ಕೆ ಉಂಟಾದ ದೋಷಗಳನ್ನು ದೈವಜ್ಞರಿಂದ ಪರಿಹಾರವನ್ನು ಕಂಡುಕೊಳ್ಳಬಹುದು. ನಿಮ್ಮ ಬಗ್ಗೆ ಮಾಹಿತಿಯನ್ನು ಅನ್ಯರಿಂದ ಪಡೆದುಕೊಳ್ಳುವರು. ನಿಮಗೆ ಅಭದ್ರತೆಯು ಅತಿಯಾಗಿ ಕಾಡಬಹುದು. ವ್ಯಾಪಾರದಲ್ಲಿ ಮನೆಯವರ ತೊಡಗುವಿಕೆಯಿಂದ ಒತ್ತಡ ನಿವಾರಣೆಯಾಗುವುದು. ಹಿಂದೆ ಮುಂದೆ ಆಲೋಚಿಸದೇ ಧೈರ್ಯವನ್ನು ಮಾಡುವುದು ಬೇಡ. ಪ್ರಯಾಣದ ವಿಚಾರದಲ್ಲಿ ಇಂದು ಮನೆಯವರ ಮಾತಿನಂತೆ ನಡೆದುಕೊಳ್ಳಿ.

ಧನು ರಾಶಿ:

ನಿಮ್ಮ ಕೆಲಸಗಳೇ ಮಾತಾಡಿದರೆ ಶ್ರೇಯಸ್ಸು ಹೆಚ್ಚು. ಕುಟುಂಬದ ಅಸ್ಮಿತೆಯನ್ನು ಉಳಿಸಿಕೊಳ್ಳುವ ಬಗೆಯನ್ನು ಕಂಡುಕೊಳ್ಳಬೇಕಾದೀತು. ನೀವು ಸಾಧಿಸಲು ಶ್ರಮಿಸುತ್ತಿದ್ದಕ್ಕೆ ಫಲಿತಾಂಶವು ಯೋಗ್ಯವಾಗಿ ಲಭಿಸಲಿದೆ. ಅಹಿತಕರ ಸುದ್ದಿಯಿಂದ ವಿಚಲಿತರಾಗಬೇಕಿಲ್ಲ. ನಿಮಗೆ ಇಂದು ಕೈ ಹಾಕಿದ ಕಾರ್ಯದಲ್ಲಿ ಜಯದ ನಿರೀಕ್ಷೆ ಮಾಡಬಹುದು. ಸಂಪತ್ತಿನ ವಿಚಾರಕ್ಕೆ ಕುಟುಂಬ ಸಮರಾಂಗಣವಾದೀತು. ಸಹೋದರನ ಬೆಂಬಲವಿದ್ದರೂ ನಿಮಗೆ ಸ್ವಾಭಿಮಾನದಿಂದ ಹೊರಬರಲು ಆಗದು.

ಮಕರ ರಾಶಿ:

ನಾಯಕರಾದ ನಿಮ್ಮಿಂದ ಜನರು ಹೊಸತನವನ್ನು ನಿರೀಕ್ಷಿಸುವರು. ಇದರಿಂದ ನಿಮ್ಮ ಸಾಮಾಜಿಕ ಕಾರ್ಯಗಳ ಬಗ್ಗೆ ಸಮಾಧಾನವನ್ನು ಸ್ವತಃ ಪಡೆಯಲು ಸಾಧ್ಯ. ದೇವರಲ್ಲಿ ಭಕ್ತಿಯು ಅಧಿಕವಾದೀತು. ಮಕ್ಕಳಿಗೆ ಶಿಸ್ತನ್ನು ಹೇಳುವಿರಿ. ನಿಮ್ಮ ಮನಸ್ಸನ್ನು ಬಹಳ ವಿಚಲಿತವಾಗಿದ್ದು ಸ್ಥಿರತ್ವವನ್ನು ತಂದುಕೊಳ್ಳುವುದು ಕಷ್ಟವಾದೀತು. ನಿಕಟವರ್ತಿಗಳ ಸಂಕಟಕ್ಕೆ ಸ್ಪಂದಿಸುವ ಹೊಣೆಗಾರಿಕೆಯೂ ನಿಮ್ಮದೇ ಆಗಲಿದೆ. ನಿಮ್ಮ ಆಸ್ತಿಯನ್ನು ಇನ್ನೊಬ್ಬರು ಪಡೆಯಲು ಕಾನೂನು ರೀತಿಯಲ್ಲಿ ಹೋಗುವರು. ಮನೆಗೆ ದಂಪತಿಗಳನ್ನು ಕರೆದು ಸತ್ಕಾರ ಮಾಡಿ.

ಕುಂಭ ರಾಶಿ:

ನಿರುದ್ಯೋಗಿಗಳು ಉದ್ಯಮದ ಕಡೆಯಿಂದ ಉತ್ತರಕ್ಕಾಗಿ ಕಾಯುವಿರಿ. ಆರೋಗ್ಯದಲ್ಲಿ ಅಸಮಾಧಾನವು ಇರಲಿದೆ. ಮಾತಾನಾಡುವ ಭರದಲ್ಲಿ ಏನಾದರೂ ಹೇಳಬಹುದು. ಕೇವಲ ಬಾಯಿ ಮಾತಿನಲ್ಲಿ ವ್ಯವಹಾರವನ್ನು ಮಾಡಿ ಮುಂದುವರಿಸುವುದು ಬೇಡ. ಅವರಸದಲ್ಲಿ ಏನನ್ನೂ ಖರೀದಿ ಮಾಡುವುದು ಬೇಡ. ನಿಮ್ಮ ಸಲಹೆಯನ್ನು ಅಧಿಕಾರಿಗಳು ಸ್ವೀಕರಿಸದೇ ಇರಬಹುದು. ನೀವು ಇಂದು ಎಲ್ಲರ ಜೊತೆ ಅಲ್ಪವಾಗಿ ಮಾತನಾಡುವಿರಿ.

ಮೀನ ರಾಶಿ:

ನಿಮ್ಮ ನಿಯಮಗಳನ್ನು ಒಂದೊಂದಾಗಿಯೇ ಜಾರಿಗೆ ತರಲು ಪ್ರಯತ್ನಿಸಿದರೂ ಸಫಲತೆ ಕಾಣಬಹುದು. ಕೆಲವು ಕೆಟ್ಟ ಸುದ್ದಿಗಳು ಮನಸ್ಸಿನಲ್ಲಿ ಹತಾಶೆಯ ಸ್ಥಿತಿಯನ್ನು ಬಿಡಬಹುದು. ಇಂದಿನ ಖರ್ಚು ನಿಮ್ಮ ಜೇಬಿಗೆ ಭಾರವಾದೀತು. ಶತ್ರುಗಳ ತೊಂದರೆಯಿಂದ ನಿರ್ಮಾಣ ಕಾರ್ಯವು ನಿಧಾನವಾಗಲಿದೆ. ಕೆಲವು ಸಂಗತಿಗಳನ್ನು ಆಲೋಚಿಸಿದಷ್ಟೂ ಕ್ಲಿಷ್ಟವೆನಿಸಬಹುದು. ಅದರ ಬಗ್ಗೆ ಏನನ್ನೂ ಯೋಚಿಸುವುದು ಬೇಡ. ತಾನಾಗಿಯೇ ಉತ್ತರ ದೊರೆಯುವುದು.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಗುರು, ಪಕ್ಷ : ಕೃಷ್ಣ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಹಸ್ತಾ, ಯೋಗ : ಶೋಭನ, ಕರಣ : ವಣಿಜ, ಸೂರ್ಯೋದಯ – 06 – 52 am, ಸೂರ್ಯಾಸ್ತ – 06 – 24 pm, ಇಂದಿನ ಶುಭಾಶುಭ ಕಾಲ : ರಾಹು 14:05 – 15:31, ಯಮಗಂಡ ಕಾಲ 06:53 – 08:19, ಗುಳಿಕ ಕಾಲ 09:46 – 11:12

-ಲೋಹಿತ ಹೆಬ್ಬಾರ್ – 8762924271 (what’s app only)

Source link

Exit mobile version