ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 5ರ ದಿನಭವಿಷ್ಯ

ಮದುವೆಗಾಗಿ ಪ್ರಯತ್ನ ಮಾಡುತ್ತಾ ಇರುವವರು, ಅಥವಾ ಪ್ರಯತ್ನ ಮಾಡುವಾಗ ನಾನಾ ಕಾರಣಗಳಿಗೆ ಅಡೆತಡೆಗಳನ್ನು ಎದುರಿಸುತ್ತಾ ಇರುವವರು ಸ್ವಯಂವರ ಪಾರ್ವತಿ ಮಂತ್ರವನ್ನು ಹನ್ನೊಂದು ಬಾರಿ ಪಠಣ ಮಾಡಿ ಅಥವಾ ಶ್ರವಣ ಮಾಡಿ. ದಂಪತಿ ಅಥವಾ ಪ್ರೇಮಿಗಳ ಮಧ್ಯೆ ವಿರಸ ಏರ್ಪಟ್ಟಿದ್ದಲ್ಲಿ ಈ ದಿನ ಶಿರಡಿ ಸಾಯಿಬಾಬ ಮಂದಿರಕ್ಕೆ ತೆರಳಿ ದರ್ಶನ ಪಡೆಯಿರಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಈ ದಿನ ನೀವು ನಿರೀಕ್ಷೆಯೇ ಮಾಡದ ರೀತಿಯಲ್ಲಿ ವೃತ್ತಿಜೀವನದಲ್ಲಿ ತಿರುವು ಬರುವ ಸಾಧ್ಯತೆ ಇದೆ. ಮನೆಗೆ ಸಂಬಂಧಿಸಿದಂತೆ ಬಾಕಿ ಕೆಲಸಗಳನ್ನು ಪೂರ್ಣ ಮಾಡುವುದಕ್ಕೆ ಇದು ಉತ್ತಮ ದಿನ ಆಗಿರುತ್ತದೆ. ಸಮಾರಂಭ- ಗೆಟ್ ಟು ಗೆದರ್ ಗಳಿಗೆ ಸಂಬಂಧಿಕರಿಂದ ಆಹ್ವಾನ ಬರಬಹುದು. ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಜಾಗ್ರತೆ ಅವಶ್ಯ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಹೊಸ ಸಾಲ ತೆಗೆದುಕೊಳ್ಳುವ ನಿರ್ಧಾರ ಸಾಧ್ಯವಾದಷ್ಟೂ ಮಟ್ಟಿಗೆ ಬೇಡ. ಅನಿರೀಕ್ಷಿತವಾಗಿ ವಾಹನದ ರಿಪೇರಿ ಅಥವಾ ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ಬರಬಹುದು. ಪ್ರೀತಿಯಲ್ಲಿ ಇರುವವರಿಗೆ ಜತೆಯಾಗಿ ಸಮಯ ಕಳೆಯುವಂಥ ಯೋಗ ಇದ್ದು, ಭವಿಷ್ಯದಲ್ಲಿನ ಯೋಜನೆಗಳ ಬಗ್ಗೆ ತುಂಬ ಗಹನವಾದ ಚರ್ಚೆಯನ್ನು ಮಾಡಲಿದ್ದೀರಿ. ಅದು ಆತ್ಮೀಯವಾದ ಸಂಭಾಷಣೆ ಆಗಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ನಿಮಗೆ ಬಹಳ ದಿನಗಳಿಂದ ಬಾಕಿ ಉಳಿದುಹೋಗಿದ್ದ ಮಾಹಿತಿ ಅಥವಾ ಹಣ ನಿಮ್ಮ ಕಡೆ ಬರುತ್ತದೆ. ಉದ್ಯೋಗ ಸ್ಥಳದಲ್ಲಿ ನಿಮ್ಮ ಆಲೋಚನೆಗೆ ಮಹತ್ವ ಸಿಗುತ್ತದೆ. ಮನೆ ಬದಲಾವಣೆ ಮಾಡಬೇಕು ಎಂದಿರುವವರು ಅಥವಾ ಮನೆಯ ಜಾಗಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಆಲೋಚನೆ ಮಾಡುತ್ತಾ ಇರುವವರಿಗೆ ಮನಸ್ಸಿಗೆ ಸಮಾಧಾನ ಆಗುವಂಥ ಬೆಳವಣಿಗೆ ಆಗಲಿದೆ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 5ರ ದಿನಭವಿಷ್ಯ

ಉದ್ಯೋಗಕ್ಕಾಗಿ ಪ್ರಯತ್ನ ಮಾಡುತ್ತಿರುವವರು, ಹೊಸದಾಗಿ ವ್ಯವಹಾರ- ವ್ಯಾಪಾರ ಶುರು ಮಾಡಿರುವವರು ಅಥವಾ ಶುರು ಮಾಡಬೇಕು ಎಂದಿರುವವರು ಸಿಟ್ರಿನ್ ಎಂಬ ರತ್ನದ ಉಂಗುರ ಧಾರಣೆ ಮಾಡುವುದರಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ, ಸವಾಲುಗಳನ್ನು ಎದುರಿಸುವ ಮಾರ್ಗೋಪಾಯ ಗೋಚರ ಆಗುತ್ತದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಯಾರನ್ನೋ ಸಮಾಧಾನ ಮಾಡಬೇಕು- ಮನವೊಲಿಸುವ ಕೆಲಸ ಮಾಡಬೇಕು ಎಂಬ ಕಾರಣಕ್ಕೆ ಹಣಕಾಸನ್ನು ವ್ಯರ್ಥವಾಗಿ ವೆಚ್ಚ ಮಾಡುವುದಕ್ಕೆ ಹೋಗಬೇಡಿ. ಕುಟುಂಬದಲ್ಲಿನ ಹಿರಿಯರೊಂದಿಗೆ ಹೆಚ್ಚಿನ ಸಮಯ ಕಳೆಯುವುದರಿಂದ ಮನಸ್ಸಿಗೆ ತೃಪ್ತಿ- ಸಮಾಧಾನ ದೊರೆಯಲಿದೆ. ಸ್ನೇಹಿತರು ನೀಡುವ ಸಲಹೆಯನ್ನು ಅಳವಡಿಸಿಕೊಳ್ಳುವ ಕಡೆಗೆ ಆದ್ಯತೆ ನೀಡಿ. ಕತ್ತು–ಭುಜದ ನೋವು ಸಣ್ಣ ಪ್ರಮಾಣದಲ್ಲಿಯಾದರೂ ತೊಂದರೆ ಮಾಡಬಹುದು.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ನೀವು ದಿನವನ್ನು ಆರಂಭಿಸುವ ರೀತಿಯೇ ಉತ್ಸಾಹಭರಿತವಾಗಿ ಇರುತ್ತದೆ. ನಿಮ್ಮ ಮನಸ್ಸಿಗೆ ಅನಿಸಿದಂಥ ಕೆಲವು ಕೆಲಸಗಳನ್ನು ತಕ್ಷಣವೇ ಪೂರ್ಣ ಮಾಡುವುದಕ್ಕೆ ಆದ್ಯತೆಯನ್ನು ನೀಡಿ. ಆದರೆ ಮುಖ್ಯವಾದ ವಿಚಾರವೊಂದರ ಬಗ್ಗೆ ತಕ್ಷಣವೇ ನಿರ್ಧಾರ ಹೇಳಬೇಕು ಎಂಬ ಒತ್ತಡ ಹೇರಿದಲ್ಲಿ ಅದಕ್ಕಾಗಿ ಸಮಯವನ್ನು ಕೇಳಿ. ಉದ್ಯೋಗಕ್ಕೆ ಸಂಬಂಧಿಸಿದಂತೆ ನಿಮ್ಮ ಸಹೋದ್ಯೋಗಿಗಳ ಜೊತೆಗೆ ಸಣ್ಣ–ಪುಟ್ಟ ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ನವ ವಿವಾಹಿತರಾಗಿದ್ದಲ್ಲಿ ಸಂಗಾತಿಯೊಂದಿಗೆ ದೂರ ಪ್ರಯಾಣಕ್ಕೆ ತೆರಳುವಂಥ ಯೋಗ ನಿಮ್ಮ ಪಾಲಿಗೆ ಇದೆ. ವಿದ್ಯಾರ್ಥಿಗಳು ಏನಾದರೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಾ ಇದ್ದಲ್ಲಿ, ನೀವು ಮಾಡುವ ಪ್ರಯತ್ನಕ್ಕೆ ಒಳ್ಳೆಯ ಫಲಿತಾಂಶ ಸಿಗುವ ಸೂಚನೆ ದೊರೆಯುತ್ತದೆ. ಆರೋಗ್ಯದಲ್ಲಿ ಕೆಲವು ಏರುಪೇರು ಕಾಣಿಸಿಕೊಳ್ಳಬಹುದು. ಮುಖ್ಯವಾಗಿ ತಲೆಸುತ್ತು– ಕಣ್ಣಿನ ರೆಪ್ಪೆ ಭಾರವಾದಂತೆ ಆಗುವುದು ಈ ರೀತಿ ತೊಂದರೆ ಆಗಬಹುದು.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 5ರ ದಿನಭವಿಷ್ಯ

ಈ ದಿನ ನಿಮ್ಮಿಂದ ಸಾಧ್ಯವಾದಲ್ಲಿ ಕನಿಷ್ಠ ಹನ್ನೊಂದು ಬಾರಿ ಮೃತ್ಯುಂಜಯ ಮಂತ್ರವನ್ನು ಹೇಳಿಕೊಳ್ಳಿ. ಅದು ಸಾಧ್ಯವಾಗದಿದ್ದಲ್ಲಿ ಯೂಟ್ಯೂಬ್ ಅಥವಾ ಬೇರೆ ಯಾವುದಾದರೂ ಮಾಧ್ಯಮದ ಮೂಲಕ ಹನ್ನೊಂದು ಬಾರಿ ಮೃತ್ಯುಂಜಯ ಮಂತ್ರವನ್ನು ಕೇಳಿಸಿಕೊಳ್ಳಿ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಈ ದಿನ ನಿಧಾನವಾಗಿ ಶುರುವಾಯಿತು ಎಂದೆನಿಸಿದರೂ ಮಧ್ಯಾಹ್ನದಿಂದ ನಿಮ್ಮ ಚಟುವಟಿಕೆ ಹೆಚ್ಚಾಗುತ್ತದೆ. ಕೆಲಸದಲ್ಲಿನ ಒತ್ತಡ ಕಡಿಮೆಯಾಗಲಿದ್ದು, ಹೊಸ ಕೆಲಸ- ಕಾರ್ಯಗಳ ಕಡೆಗೆ ಗಮನ ನೀಡಲು ಅವಕಾಶ ದೊರೆಯಲಿದೆ. ಈಗಾಗಲೇ ಕೆಲಸ ಮಾಡಿಕೊಟ್ಟಿದ್ದೀರಿ, ಹಿಂದಿನ ಬಾಕಿ ಬಿಲ್‌ಗಳು ಉಳಿದುಹೋಗಿವೆ ಎಂದಾದಲ್ಲಿ ಅದರ ವಸೂಲಾತಿಗೆ ಏನು ಮಾಡಬೇಕು ಎಂಬ ಬಗ್ಗೆಯೇ ನಿಮ್ಮ ಗಮನ ನೀಡಲಿದ್ದೀರಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಇನ್ನು ನೀವು ಬೇರೆಯವರಿಗೆ ಕೊಡಬೇಕಾದ ಹಣ ಉಳಿದು ಹೋಗಿದ್ದಲ್ಲಿ ಸಮಯಕ್ಕೆ ಪಾವತಿಸುವುದು ಒಳ್ಳೆಯದು. ಕುಟುಂಬದಲ್ಲಿ ಮಕ್ಕಳ ವಿಚಾರವಾಗಿ ಸಂತಸದ ಸುದ್ದಿ ಬರುತ್ತದೆ. ಸಂಗಾತಿಗೆ ಜತೆಗೆ ಚಿಕ್ಕ- ಪುಟ್ಟ ವಿಷಯಗಳಿಗೆ ಭಿನ್ನಾಭಿಪ್ರಾಯ ಉಂಟಾದರೂ ಸಂಜೆ ವೇಳೆಗೆ ಸರಿಯಾಗಲಿದೆ. ನಿಮ್ಮ ಹಳೆಯ ಸ್ನೇಹಿತರು ಮತ್ತೆ ಸಂಪರ್ಕಕ್ಕೆ ಬರಲಿದ್ದಾರೆ. ಗ್ಯಾಜೆಟ್‌ಗಳ ಖರೀದಿಸಬೇಕಿದ್ದಲ್ಲಿ ಆತುರ ಬೇಡ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಒಂದಲ್ಲಾ ಒಂದು ಕಾರಣಕ್ಕಾಗಿ ನೀವು ಮಾಡಬೇಕು ಎಂದುಕೊಂಡ ಕೆಲವು ಕೆಲಸಗಳು ವಿಳಂಬ ಆಗುವ ಸಾಧ್ಯತೆ ಇದೆ. ಹಾಗಂತ ಆತುರ ಮಾಡುವ ಅಗತ್ಯವಿಲ್ಲ. ಹಣಕಾಸು ವಿಷಯದಲ್ಲಿ ಎಲ್ಲರೂ ನೀಡುವ ಸಲಹೆಯನ್ನು ಪಾಲಿಸಬೇಕು ಎಂದೇನೂ ಇಲ್ಲ. ಒಂದು ವೇಳೆ ಅವು ಪ್ರಯೋಜನಕ್ಕೆ ಬಾರದು ಎಂದೆನಿಸಿದಲ್ಲಿ ಕೇಳಿಸಿಕೊಳ್ಳುವ ಅಗತ್ಯವೂ ಇಲ್ಲ.

ಲೇಖನ- ಸ್ವಾತಿ ಎನ್.ಕೆ.

 

Source link

ಮಹಿಳಾ ಸಂಸದರನ್ನು ಛೂ ಬಿಟ್ಟ ಕಾಂಗ್ರೆಸ್; ಇಂದು ಸಂಸತ್​​ನಲ್ಲಿ ಮೋದಿ ಭಾಷಣ ಮಾಡದಿರಲು ಕಾರಣವೇನು? – Kannada News | Congress Women MPs Surrounded PM Seat Why PM Modis Lok Sabha speech cancelled today

ನವದೆಹಲಿ, ಫೆಬ್ರವರಿ 4: ಇಂದು ಸಂಜೆ ಲೋಕಸಭಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಭಾಷಣ ಮಾಡಬೇಕಿತ್ತು. ಆದರೆ, ಇನ್ನೇನು ಮೋದಿ ತಮ್ಮ ಮಾತು ಆರಂಭಿಸಬೇಕು ಎನ್ನುವಷ್ಟರಲ್ಲಿ ಸದನದಲ್ಲಿ ಇದ್ದಕ್ಕಿದ್ದಂತೆ ಗದ್ದಲ ಆರಂಭವಾಯಿತು. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಗಳ ಅಂಶಗಳನ್ನು ಉಲ್ಲೇಖಿಸಲು ಸದನದಲ್ಲಿ ಅವಕಾಶ ನೀಡದ ಕಾರಣದಿಂದ ವಿರೋಧ ಪಕ್ಷಗಳ ಸಂಸದರು ಗಲಾಟೆ ಆರಂಭಿಸಿದರು. ಈ ವೇಳೆ ಕಾಂಗ್ರೆಸ್ ಪಕ್ಷದ ಮಹಿಳಾ ಸಂಸದರು ಪ್ರಧಾನಿ ಮೋದಿ ಕುಳಿತಿದ್ದ ಕುರ್ಚಿಯನ್ನು ಸುತ್ತುವರೆದರು.

ಇಂದು ಸಂಜೆ ಪ್ರಧಾನಿ ಮೋದಿ ಮಾತನಾಡುವ ಸ್ವಲ್ಪ ಮೊದಲು ವರ್ಷಾ ಗಾಯಕ್​ವಾಡ್ ಮತ್ತು ಜ್ಯೋತಿಮಣಿ ಸೇರಿದಂತೆ ವಿರೋಧ ಪಕ್ಷದ ಕೆಲವು ಮಹಿಳಾ ಸಂಸದರು ಪ್ರಧಾನಿ ಮೋದಿ ಅವರ ಕುರ್ಚಿಯ ಸುತ್ತ ಮುತ್ತಿಗೆ ಹಾಕಿದರು. ಬ್ಯಾನರ್​​ಗಳನ್ನು ಹಿಡಿದು ಬಾವಿಗಿಳಿದ ಮಹಿಳಾ ಸಂಸದರು ಗದ್ದಲ ಆರಂಭಿಸಿದರು. ನಿನ್ನೆ 8 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿದ್ದಕ್ಕಾಗಿ ಅವರ ಪ್ರತಿಭಟನೆ ನಡೆಯಿತು. ಇದರಿಂದ ಪ್ರಧಾನಿ ಮೋದಿಯವರಿಗೆ ಭಾಷಣ ಮಾಡಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: Parliament Session: ಇಂದು ಪ್ರಧಾನಿ ಮೋದಿ ಭಾಷಣ ರದ್ದು; ವಿಪಕ್ಷಗಳ ಪ್ರತಿಭಟನೆಯಿಂದ ಲೋಕಸಭಾ ಕಲಾಪ ನಾಳೆಗೆ ಮುಂದೂಡಿಕೆ

ಹೀಗಾಗಿ, ಸ್ಪೀಕರ್ ಸ್ಥಾನದಲ್ಲಿ ಕುಳಿತಿದ್ದ ಸಂಧ್ಯಾ ರೈ ಕಲಾಪವನ್ನು ನಾಳೆಗೆ ಮುಂದೂಡಿದರು. ಹಲವಾರು ಸಚಿವರು ಹೊರಹೋದ ನಂತರ ಮಹಿಳಾ ಸಂಸದರು ತಮ್ಮ ಮುತ್ತಿಗೆಯನ್ನು ಕೊನೆಗೊಳಿಸಿದರು. ಮಹಿಳಾ ಸಂಸೆಯರು ಮೊದಲೇ ಪ್ಲಾನ್ ಮಾಡಿ ಬೇಕೆಂದೇ ಪ್ರಧಾನಿ ಮೋದಿಯವರು ಭಾಷಣ ಮಾಡದಂತೆ ತಡೆದರು ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್ ನಾಯಕರು ಉದ್ದೇಶಪೂರ್ವಕವಾಗಿಯೇ ಮಹಿಳಾ ಸಂಸದರನ್ನು ಛೂ ಬಿಟ್ಟಿದ್ದರು ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ.

ಮಹಿಳಾ ಸಂಸದರ ಮುತ್ತಿಗೆಯಿಂದಾಗಿ ಧನ್ಯವಾದ ನಿರ್ಣಯವನ್ನು ಲೋಕಸಭೆ ಇನ್ನೂ ಅಂಗೀಕರಿಸಿಲ್ಲ. ಸದನವನ್ನು ನಾಳೆಯವರೆಗೆ ಮುಂದೂಡಲಾಗಿದೆ. ಆದ್ದರಿಂದ ನಾಳೆ ಚರ್ಚೆ ಮುಂದುವರಿಯುವ ಸಾಧ್ಯತೆಯಿದೆ. ನಾಳೆ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ; ಭಾರೀ ಟ್ರಾಫಿಕ್ ಜಾಮ್

ಮುಂಬೈ, ಫೆಬ್ರವರಿ 4: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ನಿನ್ನೆ ಸಂಜೆ ಕೆಮಿಕಲ್ ಟ್ಯಾಂಕರ್ ಪಲ್ಟಿಯಾಗಿ ಬಿದ್ದಿದೆ. ಇದರಿಂದ ಇಂದು ವಾಹನಗಳು ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಂತಿದ್ದು ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಾವಿರಾರು ಪ್ರಯಾಣಿಕರು ಗಂಟೆಗಟ್ಟಲೆ ಕಾಯುವಂತಾಯಿತು. ಅಪಘಾತದ (Accident) ನಂತರ, ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆ ಪತ್ತೆಯಾಗಿದ್ದು, ತಕ್ಷಣದ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಬೇರೆ ವಾಹನಗಳನ್ನು ಆ ರಸ್ತೆಯಲ್ಲಿ ಹೋಗದಂತೆ ನಿರ್ಬಂಧಿಸಲಾಗಿತ್ತು.

ಎಕ್ಸ್‌ಪ್ರೆಸ್‌ವೇ ಪೊಲೀಸ್ ಮತ್ತು ಸ್ಥಳೀಯ ಆಡಳಿತದ ಸುಮಾರು 40 ಸಿಬ್ಬಂದಿಗಳ ತಂಡವು ಸ್ಥಳಕ್ಕೆ ಧಾವಿಸಿ ಸೋರಿಕೆಯನ್ನು ತಡೆಗಟ್ಟಲು ಪ್ರಯತ್ನಗಳನ್ನು ಪ್ರಾರಂಭಿಸಿತು. ಆ ಟ್ಯಾಂಕರ್ ಪ್ರೊಪಿಲೀನ್ ಅನ್ನು ಹೊತ್ತೊಯ್ಯುತ್ತಿತ್ತು. ಇದು ಹೆಚ್ಚು ಸುಡುವ ರಾಸಾಯನಿಕವಾಗಿದ್ದು, ಸಣ್ಣ ಕಿಡಿ ಕೂಡ ದುರಂತ ಸ್ಫೋಟಕ್ಕೆ ಕಾರಣವಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದರು. ಹೀಗಾಗಿಯೇ ಆ ಟ್ಯಾಂಕರ್ ತೆರವು ಕಾರ್ಯಾಚರಣೆ ತಡವಾಯಿತು.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs SA: ಅಭ್ಯಾಸ ಪಂದ್ಯದಲ್ಲಿ ಆಫ್ರಿಕಾ ಮಣಿಸಿದ ಟೀಂ ಇಂಡಿಯಾ – Kannada News | India Dominates South Africa in T20 World Cup Warm Up, Wins by 30 Runs

ನವಿ ಮುಂಬೈನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಆತಿಥೇಯ ಭಾರತ 30 ರನ್​ಗಳ ಅಮೋಘ ಜಯ ಸಾಧಿಸುವ ಮೂಲಕ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಬರೋಬ್ಬರಿ 241 ರನ್ ಕಲೆಹಾಕಿತು. ತಂಡದ ಪರ ಆಡಿದ ಎಲ್ಲಾ ಬ್ಯಾಟ್ಸ್‌ಮನ್​ಗಳು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಕೂಡ ಉತ್ತಮ ಹೋರಾಟ ನೀಡಿತ್ತಾದರೂ ಗುರಿ ಬೆನ್ನಟ್ಟಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಆಫ್ರಿಕಾ ತಂಡ 210 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ಭಾರತದ ಪರ ಅಭಿಷೇಕ್ ಶರ್ಮಾ ಜೊತೆ ಇಶಾನ್ ಕಿಶನ್ ಬ್ಯಾಟಿಂಗ್ ಆರಂಭಿಸಿದರು. ಈ ಆರಂಭಿಕ ಜೋಡಿ ಭಾರತಕ್ಕೆ ಉತ್ತಮ ಆರಂಭ ನೀಡಿ ಐದನೇ ಓವರ್‌ನಲ್ಲಿಯೇ 50 ರನ್‌ಗಳ ಗಡಿ ದಾಟಿಸಿದರು. ಇಶಾನ್ ಕಿಶನ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಕಿಶನ್​ ಅವರ ಈ ಇನ್ನಿಂಗ್ಸ್​ನಲ್ಲಿ ಎರಡು ಬೌಂಡರಿ ಮತ್ತು ಏಳು ಸಿಕ್ಸರ್‌ಗಳು ಸೇರಿದ್ದವು.

ಅಭಿಷೇಕ್ ಶರ್ಮಾ ಕೂಡ 18 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 24 ರನ್ ಬಾರಿಸಿದರೆ, ತಿಲಕ್ ವರ್ಮಾ 19 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಮೂರು ಸಿಕ್ಸರ್ ನೆರವಿನಿಂದ 45 ರನ್ ಗಳಿಸಿ ಔಟಾದರು. ಸೂರ್ಯಕುಮಾರ್ ಯಾದವ್ 16 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಎರಡು ಸಿಕ್ಸರ್ ನೆರವಿನಿಂದ 30 ರನ್ ಗಳಿಸಿದರೆ ರಿಂಕು ಸಿಂಗ್ 16 ರನ್ ಬಾರಿಸಿದರು.

ಹಾರ್ದಿಕ್ ಪಾಂಡ್ಯ 10 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ಸಹಾಯದಿಂದ 30 ರನ್ ಬಾರಿಸಿದರೆ, ಅಕ್ಷರ್ ಪಟೇಲ್ 23 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ಸಹಾಯದಿಂದ ಅಜೇಯ 35 ರನ್ ಸಿಡಿಸಿದರು. ದಕ್ಷಿಣ ಆಫ್ರಿಕಾ ಪರ ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್, ಅನ್ರಿಚ್ ನೋಕಿಯಾ ಮತ್ತು ಕ್ವೆನಾ ಎಂಫಕಾ ತಲಾ ಒಂದು ವಿಕೆಟ್ ಪಡೆದರು.

Source link

ಪ್ರೇಮಿಗಳಿಗಾಗಿ ಮತ್ತೆ ರಿಲೀಸ್ ಆಗುತ್ತಿದೆ ಸಲ್ಮಾನ್ ಖಾನ್ ಸಿನಿಮಾ ‘ತೇರೆ ನಾಮ್’ – Kannada News | Salman Khan Bhumika Chawla starrer Tere Naam Rerelease on 27 February

ಫೆಬ್ರವರಿ ತಿಂಗಳು ಎಂದರೆ ಪ್ರೇಮಿಗಳಿಗೆ ಸಖತ್ ಸ್ಪಷಲ್. ವ್ಯಾಲೆಂಟೈನ್ಸ್ ಡೇ ಇರುವ ಕಾರಣ ಯುವ ಮನಸ್ಸುಗಳು ಪ್ರೀತಿಯ ಗುಂಗಿನಲ್ಲಿ ಇರುತ್ತವೆ. ಹಾಗಾಗಿ ಈ ತಿಂಗಳು ರೊಮ್ಯಾಂಟಿಕ್ ಸಿನಿಮಾ ನೋಡುವ ಪ್ರೇಕ್ಷಕರ ವರ್ಗ ಕೂಡ ದೊಡ್ಡದಿರುತ್ತದೆ. ಅಂಥ ಪ್ರೇಕ್ಷಕರನ್ನು ಗಮನದಲ್ಲಿ ಇಟ್ಟುಕೊಂಡು ‘ತೇರೆ ನಾಮ್’ (Tere Naam) ಸಿನಿಮಾ ಮರು ಬಿಡುಗಡೆ ಆಗುತ್​ತಿದೆ. ಸಲ್ಮಾನ್ ಖಾನ್ (Salman Khan) ಅವರು ಈ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ಅವರಿಗೆ ಜೋಡಿಯಾಗಿ ಭೂಮಿಕಾ ಚಾವ್ಲಾ ನಟಿಸಿದ್ದಾರೆ. ಫೆಬ್ರವರಿ 27ರಂದು ಈ ಸಿನಿಮಾ ಮರು ಬಿಡುಗಡೆ ಆಗಲಿದೆ.

‘ತೇರೆ ನಾಮ್’ ಸಿನಿಮಾದಲ್ಲಿ ಕಾಡುವ ಒಂದು ಪ್ರೇಮ್ ಕಹಾನಿ ಇದೆ. ಈ ಚಿತ್ರಕ್ಕೆ ಸತೀಶ್ ಕೌಶಿಕ್ ಅವರು ನಿರ್ದೇಶನ ಮಾಡಿದ್ದಾರೆ. 2003ರ ಆಗಸ್ಟ್ 15ರಂದು ಈ ಸಿನಿಮಾ ಬಿಡುಗಡೆ ಆಗಿತ್ತು. ಆಗ ಪ್ರೇಕ್ಷಕರು ಬಹಳ ಮೆಚ್ಚಿಕೊಂಡಿದ್ದರು. ಈ ಚಿತ್ರದಿಂದ ಸಲ್ಮಾನ್ ಖಾನ್ ಅವರ ಖ್ಯಾತಿ ಹೆಚ್ಚಾಗಿತ್ತು. ಈಗ ಮತ್ತೆ ‘ತೇರೆ ನಾಮ್’ ಸಿನಿಮಾವನ್ನು ದೊಡ್ಡ ಪರದೆ ಮೇಲೆ ನೋಡುವ ಅವಕಾಶ ಸಿಗುತ್ತಿದೆ.

ಅಭಿಮಾನಿಗಳು ‘ತೇರೆ ನಾಮ್’ ಸಿನಿಮಾವನ್ನು ಇಂದಿಗೂ ನೆನಪಿಸಿಕೊಳ್ಳವುದು ಸಲ್ಮಾನ್ ಖಾನ್ ಅವರ ನಟನೆ ಮತ್ತು ಹಿಮೇಶ್ ರೇಷಮಿಯಾ ಅವರ ಹಾಡುಗಳ ಕಾರಣದಿಂದ. ಸಲ್ಮಾನ್ ಖಾನ್ ಅವರ ವೃತ್ತಿಜೀವನದ ಅತ್ಯುತ್ತಮ ನಟನೆ ಈ ಸಿನಿಮಾದಲ್ಲಿದೆ ಎಂಬುದು ಫ್ಯಾನ್ಸ್ ಅಭಿಪ್ರಾಯ. ಅದೇ ರೀತಿ, ಹಿಮೇಶ್ ರೇಷಮಿಯಾ ಅವರು ಸಂಗೀತ ನೀಡಿದ ಹಾಡುಗಳು ಇಂದಿಗೂ ಎವರ್ಗ್ರೀನ್ ಆಗಿ ಉಳಿದುಕೊಂಡಿವೆ.

23 ವರ್ಷಗಳ ಬಳಿಕ ‘ತೇರೆ ನಾಮ್’ ಸಿನಿಮಾ ಮರು ಬಿಡುಗಡೆ ಆಗುತ್ತಿದೆ. 2003ರಲ್ಲಿ ರಿಲೀಸ್ ಆದಾಗ ಈ ಸಿನಿಮಾವನ್ನು ದೊಡ್ಡ ಪರದೆಯಲ್ಲಿ ಮಿಸ್ ಮಾಡಿಕೊಂಡವರು ಈಗ ಕಣ್ತುಂಬಿಕೊಳ್ಳುವ ಚಾನ್ಸ್ ಸಿಗುತ್ತಿದೆ. ಸಲ್ಮಾನ್ ಖಾನ್ ಅಭಿಮಾನಿಗಳಿಗೆ ಇದರಿಂದ ಖುಷಿ ಆಗಿದೆ. ಹೊಸ ತಲೆಮಾರಿನ ಪ್ರೇಕ್ಷಕರಿಂದ ಈ ಚಿತ್ರಕ್ಕೆ ಯಾವ ರೀತಿ ಪ್ರತಿಕ್ರಿಯೆ ಸಿಗುತ್ತದೆ ಎಂಬುದನ್ನು ಕಾದುನೋಡಬೇಕು.

ಇದನ್ನೂ ಓದಿ: ‘ಧುರಂಧರ್ 2’ ಸಿನಿಮಾದಲ್ಲಿ ಸಲ್ಮಾನ್ ಖಾನ್? ವೈರಲ್ ಆಗಿದೆ ಫೋಟೋ

ಇದು ತಮಿಳಿನ ‘ಸೇತು’ ಸಿನಿಮಾದ ರಿಮೇಕ್. ‘ಸೇತು’ ಚಿತ್ರ 1999ರಲ್ಲಿ ಬಿಡುಗಡೆ ಆಗಿತ್ತು. ಆ ಸಿನಿಮಾದಲ್ಲಿ ವಿಕ್ರಮ್ ಅವರು ಹೀರೋ ಆಗಿ ನಟಿಸಿದ್ದರು. ಬಳಿಕ 2001ರಲ್ಲಿ ಆ ಸಿನಿಮಾವನ್ನು ಕನ್ನಡದಲ್ಲಿ ರಿಮೇಕ್ (ಹುಚ್ಚ) ಮಾಡಲಾಯಿತು. ಸುದೀಪ್ ಅವರು ಮುಖ್ಯ ಪಾತ್ರ ಮಾಡಿದ್ದರು. ಅವರ ನಟನೆಗೆ ಭಾರಿ ಮೆಚ್ಚುಗೆ ಸಿಕ್ಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾಗಿ ಓಡಿದ ನಿವಾಸಿಗಳು – Kannada News | Cluster of Gas filled balloons explodes in Mumbai apartment Lift watcho shocking video

ಮುಂಬೈ, ಫೆಬ್ರವರಿ 4: ಮುಂಬೈನ ಅಪಾರ್ಟ್​ಮೆಂಟ್​ನ ಲಿಫ್ಟ್‌ನಲ್ಲಿ ಗ್ಯಾಸ್ ತುಂಬಿದ ಬಲೂನ್‌ಗಳು ಸ್ಫೋಟಗೊಂಡಿದೆ. ಅದಾದ ಕೆಲವೇ ಕ್ಷಣದಲ್ಲಿ ಮೂವರು ಲಿಫ್ಟ್‌ನಿಂದ ಹೊರಗೆ ಓಡಿಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ನೋಡಬಹುದು. ಈ ಭಯಾನಕ ವೀಡಿಯೊ ವೈರಲ್ (Viral Video) ಆಗಿದೆ. ಆ ಬಲೂನ್ ಮಾರಾಟಗಾರನ ವಿರುದ್ಧ ಪ್ರಕರಣ ದಾಖಲಾಗಿದೆ. ಬಲೂನ್‌ಗಳನ್ನು ತುಂಬಲು ಅವನು ಯಾವ ರೀತಿಯ ಅನಿಲವನ್ನು ಬಳಸಿದ್ದಾನೆ ಎಂಬುದು ತಿಳಿದಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ – Kannada News | Lakkundi treasure: Gold mine In Kappatagudda caves, here Is TV9 Ground Report

ಗದಗ, (ಫೆಬ್ರವರಿ 04): ಲಕ್ಕುಂಡಿ (lakkundi) ಚಿನ್ನದ ಆಗರ ಇರೋ ಊರು. ಚಿನ್ನ ನಾಣ್ಯವನ್ನ ಟಂಕಿಸುತ್ತಿದ್ದ ನೆಲ. ಇದೇ ಲಕ್ಕುಂಡಿಗೆ ಚಿನ್ನ ಎಲ್ಲಿಂದ ಬರ್ತಿತ್ತು ಎಂದು ಟಿವಿ9 ತಂಡ ಹುಡುಕಲು ಹೊರಟಿದ್ದಾಗ ಸಿಕ್ಕಿದ್ದೇ ಈ ಗುಹೆ. ಹೌದು… ಗದಗ (Gadag) ಜಿಲ್ಲೆ ಕಪ್ಪತ್ತಗುಡ್ಡದ ಗುಹೆಯಲ್ಲಿ ಚಿನ್ನದ ನಿಕ್ಷೇಪ ಇವೆ. ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮ, ಶಿಲ್ಪಕಲೆಯ ತವರು. ಇದೇ ಲಕ್ಕುಂಡಿ ಟಂಕಸಾಲೆಯಿಂದ ಪ್ರಸಿದ್ಧವಾಗಿತ್ತು. ಟಂಕಸಾಲೆಯಲ್ಲಿ ಚಿನ್ನದ ನಾಣ್ಯಗಳನ್ನು ರೆಡಿ ಮಾಡಲಾಗುತ್ತಿತ್ತು. ಇಲ್ಲಿಯ ಟಂಕಸಾಲೆಗಳಿಗೆ ಚಿನ್ನ ಬರ್ತಿದ್ದಿದ್ದೇ ಕಪ್ಪತ್ತಗುಡ್ಡದಿಂದ. ಬಳಿಕ ಕಪ್ಪತ್ತಗುಡ್ಡದಿಂದ ತರಲಾಗುತ್ತಿದ್ದ ಚಿನ್ನವನ್ನು ಲಕ್ಕುಂಡಿಯ ಟಂಕಸಾಲೆಯಲ್ಲಿ ಶುದ್ಧೀಕರಿಸಿ, ಚಿನ್ನದ ನಾಣ್ಯಗಳನ್ನು ತಯಾರಿಸಲಾಗುತ್ತಿತ್ತು ಅಂತ ಇತಿಹಾಸ ತಜ‌್ಞರು ಅಭಿಪ್ರಾಯ ಪಟ್ಟಿದ್ದಾರೆ. ಚಾಲುಕ್ಯರ ಕಾಲದಲ್ಲಿ ಆರಂಭವಾಗಿದ್ದ ಚಿನ್ನದ ಬೇಟೆ, ವಿಜಯನಗರ ಅರಸರ ಕಾಲದಲ್ಲಿಯೂ ಮುಂದುವರಿದಿತ್ತು. ಬ್ರಿಟಿಷರ ಕಾಲದಲ್ಲೂ ಇಲ್ಲಿ ಚಿನ್ನ ಅಗೆಯಲಾಗಿದ್ದು, ಗದಗ ಜಿಲ್ಲೆಯ ಅತ್ತಿಕಟ್ಟಿ, ಮಾಹಾಲಿಂಗಪೂರ ಗ್ರಾಮದ ಸಮೀಪವಿರುವ ಗುಹೆಗಳು ಅದಕ್ಕೆ ಸಾಕ್ಷಿಯಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು? – Kannada News | Gharga movie actor Arun Ram Prasad talks about Sai Kumar

‘ಜೋಗಿ’ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರ ಮಗ ಅರುಣ್ ರಾಮ್ ಪ್ರಸಾದ್ ‘ಘಾರ್ಗಾ’ (Gharga) ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅರುಣ್ ಅವರೇ ಹೀರೋ. ಇದೇ ಸಿನಿಮಾದಲ್ಲಿ ಸಾಯಿ ಕುಮಾರ್, ಅರುಣ್ ಸಾಗರ್ ಮುಂತಾದ ಹಿರಿಯ ಕಲಾವಿದರು ಸಹ ಅಭಿನಯಿಸಿದ್ದಾರೆ. ಮೊದಲ ಬಾರಿಗೆ ಸಾಯಿ ಕುಮಾರ್ (Sai Kumar) ಅವರ ಜೊತೆ ನಟಿಸುವಾಗ ಏನಾಯಿತು ಎಂಬುದಕ್ಕೆ ಅರುಣ್ ರಾಮ್ ಪ್ರಸಾದ್ ಅವರು ವಿವರಿಸಿದ್ದಾರೆ. ‘ಮೊದಲ ದಿನ ಚಿಕ್ಕಮಗಳೂರಿನಲ್ಲಿ ಶೂಟಿಂಗ್ ಮಾಡಿದ್ದು ಇನ್ನೂ ನನಗೆ ಚೆನ್ನಾಗಿ ನೆನಪಿದೆ. ರಿಹರ್ಸಲ್ ಮಾಡಿದ್ದೆವು. ಹಾಗಾಗಿ ಕಾನ್ಫಿಡೆನ್ಸ್ ಇತ್ತು. ಆದರೆ ಮೊದಲ ಶಾಟ್​​ನಲ್ಲಿ ಅವರು ನನ್ನನ್ನು ನೋಡಿದರು. ಆಗ ನನಗೆ ಎಲ್ಲವೂ ಮರೆತು ಹೋಯಿತು. ಆಮೇಲೆ ಅವರು ಕ್ಯಾರವಾನ್​​ಗೆ ಕರೆದುಕೊಂಡು ಹೋಗಿ ಸಮಾಧಾನ ಮಾಡಿದರು. ಪ್ರತಿ ದಿನ ಅವರು ನನ್ನನ್ನು ಊಟಕ್ಕೆ ಕರೆದುಕೊಂಡು ಹೋದರು. ಅದರಿಂದ ಅವರ ಜೊತೆ ನಟಿಸುವುದು ಸುಲಭ ಆಯಿತು’ ಎಂದು ಅರುಣ್ ರಾಮ್​ ಪ್ರಸಾದ್ (Arun Ram Prasad) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version