ಐಪಿಎಲ್ 2026 ರ 17 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗುತ್ತಿವೆ. ನ್ಯೂ ಚಂಡೀಗಢದಲ್ಲಿ ಶನಿವಾರ ನಡೆದ ಡಬಲ್ ಹೆಡರ್ನ ಮೊದಲ ಪಂದ್ಯದಲ್ಲಿ ಪಂಜಾಬ್ ತನ್ನ ಗೆಲುವಿನ ಓಟವನ್ನು ಮುಂದುವರಿಸುವ ಅವಕಾಶವನ್ನು ಹೊಂದಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಹಿಂದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ತಂಡಕ್ಕೆ ಮಳೆ ಅವಕಾಶ ಕಸಿದುಕೊಂಡಿತು. ಆದಾಗ್ಯೂ, ಈ ಬಾರಿ ಅಂತಹ ಯಾವುದೇ ಅಡಚಣೆಯನ್ನು ನಿರೀಕ್ಷಿಸಲಾಗುವುದಿಲ್ಲ. ಏತನ್ಮಧ್ಯೆ, ಇಶಾನ್ ಕಿಶನ್ ನೇತೃತ್ವದ ಸನ್ರೈಸರ್ಸ್ ಹೈದರಾಬಾದ್ ತಂಡವು ತನ್ನ ಹಿಂದಿನ ಪಂದ್ಯದಲ್ಲಿ ಸೋಲನ್ನು ಅನುಭವಿಸಿದ ನಂತರ ಎರಡನೇ ಗೆಲುವನ್ನು ಎದುರು ನೋಡುತ್ತಿದೆ.
ಯೂಟ್ಯೂಬ್ನಲ್ಲಿ ‘ಅಮೃತಾಂಜನ್’ ಹೆಸರಿನಲ್ಲಿ ತಮಾಷೆಯ ವಿಡಿಯೋಗಳನ್ನು ಮಾಡುತ್ತಿದ್ದ ಯುವಕರ ತಂಡ, ‘ಅಮೃತ-ಅಂಜನ್’ ಹೆಸರಿನ ಹಾಸ್ಯಮಯ ಸಿನಿಮಾ ಮಾಡಿದ್ದು, ಸಿನಿಮಾಕ್ಕೆ ಚಿತ್ರಮಂದಿರಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಈ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.
ಚಿತ್ರಮಂದಿರದಲ್ಲಿ ಬಿಡುಗಡೆ ಆದಾಗ ದೊಡ್ಡ ಮಟ್ಟದ ಸದ್ದು, ಸುದ್ದಿ ಮಾಡಿದ್ದ ತಮಿಳು ಸಿನಿಮಾ ‘ತಾಯ್ ಕಳವಿ’, ಇತ್ತೀಚೆಗೆ ಬಿಡುಗಡೆ ಆದ ಒಳ್ಳೆಯ, ಯೋಚನೆಗೆ ಪ್ರೇರೇಪಿಸುವ ಸಿನಿಮಾ ಇದೆಂಬ ವಿಮರ್ಶೆ ಇದಕ್ಕೆ ಸಿಕ್ಕಿತ್ತು. ಇದೀಗ ಈ ಸಿನಿಮಾ ಜಿಯೋ ಹಾಟ್ಸ್ಟಾರ್ನಲ್ಲಿ ಬಿಡುಗಡೆ ಆಗಿದೆ.
‘ಎವರಿಬಡಿ ಲವ್ಸ್ ಸೌರಬ್ ಹಂಡಾ’ ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ಹಾಲಿವುಡ್ನ ‘ನೈವ್ಸ್ ಔಟ್’ ಮಾದರಿಯ ಈ ಸಿನಿಮಾ ಒಂದು ಕೊಲೆಯ ಸುತ್ತ ನಡೆಯುತ್ತಿದೆ. ಸಿನಿಮಾನಲ್ಲಿ ಬಾಲಿವುಡ್ನ ಕೆಲವು ಅದ್ಭುತ ನಟ-ನಟಿಯರು ನಟಿಸಿದ್ದು ಸಿನಿಮಾವನ್ನು ಜೀ5 ನಲ್ಲಿ ವೀಕ್ಷಿಸಬಹುದಾಗಿದೆ.
ಶಾಹಿದ್ ಕಪೂರ್ ಮತ್ತು ತೃಪ್ತಿ ದಿಮ್ರಿ ನಟನೆಯ ಈ ಆಕ್ಷನ್ ಡ್ರಾಮಾ ಚಿತ್ರಮಂದಿರಗಳಲ್ಲಿ ದೊಡ್ಡ ಸದ್ದು ಮಾಡಲಿಲ್ಲ. ವಿಶಾಲ್ ಭಾರಧ್ವಜ್ ನಿರ್ದೇಶನ ಮಾಡಿರುವ ಈ ಸಿನಿಮಾ ತುಸು ವೈಯಲೆಂಟ್ ಮತ್ತು ಗ್ಲಾಮರಸ್ ಆಗಿದ್ದು, ಇದೀಗ ಈ ಸಿನಿಮಾವನ್ನು ಅಮೆಜಾನ್ ಪ್ರೈಂನಲ್ಲಿ ವೀಕ್ಷಿಸಬಹುದಾಗಿದೆ.
‘ತು ಯಾ ಮೇ’ ಒಂದು ಭಿನ್ನ ರೀತಿಯ ಸರ್ವೈವಲ್ ಸಿನಿಮಾ. ಆದರ್ಶ್ ಗೌರವ್ ಮತ್ತು ಶನಾಯಾ ಕಪೂರ್ ನಟಿಸಿರುವ ಈ ಸಿನಿಮಾವನ್ನು ಬಿಜಾಯ್ ನಂಬಿಯಾರ್ ನಿರ್ದೇಶಿಸಿದ್ದು, ಸ್ವಿಮ್ಮಿಂಗ್ ಪೂಲ್ನಲ್ಲಿ ಸಿಲುಕಿರುವ ಜೋಡಿಯೊಂದು ಅದೇ ಪೂಲ್ನ ಒಳಗಿರುವ ಮೊಸಳೆಯಿಂದ ತಪ್ಪಿಸಿಕೊಂಡು ಹೊರಬರುವ ಕತೆ ಹೊಂದಿದೆ. ಸಿನಿಮಾ ನೆಟ್ಫ್ಲಿಕ್ಸ್ನಲ್ಲಿದೆ.
ಏಪ್ರಿಲ್ 12ರಿಂದ ಏಪ್ರಿಲ್ 18ರವರೆಗಿನ ಎರಡನೇ ವಾರವಾಗಿದ್ದು ಈ ವಾರದಲ್ಲಿ ಪರಿಚಿತವು ಪ್ರೇಮವಾಗಬಹುದು, ವರ್ತನೆ ನೇರವಾಗಿರಲಿ, ಅನುಮಾನಕ್ಕೆ ಆಸ್ಪದ ಬೇಡ. ಪ್ರೀತಿಯ ಕೊರತೆ ಕೆಲವರಿಗೆ ಆಗಲಿದ್ದು, ಮನಸ್ಸಿನೊಳಗೇ ದುಃಖಿಸಬೇಕಾಗುವುದು.
ಮೇಷ:
ಜೀವನ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಪ್ರೀತಿ ಗಟ್ಟಿಯಾಗಿರುತ್ತದೆ. ಅವಿವಾಹಿತರಿಗೆ ಹೊಸ ಸಂಬಂಧದ ಪ್ರಸ್ತಾಪ ಬರಬಹುದು. ಮಾತಿನಲ್ಲಿ ಸಂಯಮವಿರಲಿ, ಆಪ್ತತೆಯು ಹೆಚ್ಚಾಗಲಿದೆ.
ವೃಷಭ:
ಪ್ರೇಮ ಜೀವನದಲ್ಲಿ ಮಧುರವಾದ ಕ್ಷಣಗಳನ್ನು ಕಳೆಯುವಿರಿ. ಹಳೆಯ ಸ್ನೇಹಿತರ ಭೇಟಿ ಮನಸ್ಸಿಗೆ ಸಂತೋಷ ನೀಡುತ್ತದೆ. ದಾಂಪತ್ಯದಲ್ಲಿ ಪರಸ್ಪರ ಗೌರವ ಮತ್ತು ನಂಬಿಕೆ ವೃದ್ಧಿಯಾಗುವ ಸಮಯವಿದು.
ಮಿಥುನ:
ಸಂಗಾತಿಯಿಂದ ಅನಿರೀಕ್ಷಿತ ಉಡುಗೊರೆ ದೊರೆಯಬಹುದು. ಪ್ರೀತಿಯ ವಿಷಯದಲ್ಲಿ ಗೊಂದಲಗಳಿದ್ದರೆ ಈ ವಾರ ನಿವಾರಣೆಯಾಗಲಿವೆ. ಸ್ನೇಹ ಸಂಬಂಧಗಳು ಗಾಢವಾಗಲಿದ್ದು, ಪ್ರೇಮಿಗಳಿಗೆ ಮನೆಯವರ ಬೆಂಬಲ ಸಿಗಬಹುದು.
ಕರ್ಕಾಟಕ:
ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ದಾಂಪತ್ಯದಲ್ಲಿನ ಕಹಿ ಮರೆತು ಹೊಸ ಆರಂಭಕ್ಕೆ ನಾಂದಿ ಹಾಡುವಿರಿ. ಭಾವನಾತ್ಮಕವಾಗಿ ಸಂಗಾತಿಗೆ ಹತ್ತಿರವಾಗುವಿರಿ. ಹೊಸ ಪರಿಚಯಗಳು ಸ್ನೇಹಕ್ಕೆ ತಿರುಗಲಿವೆ.
ಸಿಂಹ:
ಆಪ್ತ ಸಂಬಂಧಗಳಲ್ಲಿ ಸ್ವಲ್ಪ ಬಿಗುವಿನ ವಾತಾವರಣ ಇರಬಹುದು. ಅಹಂಕಾರ ಬಿಟ್ಟು ನಡೆದರೆ ಪ್ರೇಮ ಜೀವನ ಸುಖಮಯವಾಗಿರುತ್ತದೆ. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ತಾಳ್ಮೆ ಇಲ್ಲಿ ಅತಿ ಮುಖ್ಯ.
ಕನ್ಯಾ:
ನಿಮ್ಮ ಸಂವಹನ ಶೈಲಿಯಿಂದ ಪ್ರೀತಿ ಪಾತ್ರರ ಮನ ಗೆಲ್ಲುವಿರಿ. ಒಂಟಿಯಾಗಿರುವವರಿಗೆ ಆಕರ್ಷಕ ವ್ಯಕ್ತಿಗಳ ಭೇಟಿಯಾಗುವ ಸಾಧ್ಯತೆಯಿದೆ. ದಾಂಪತ್ಯದಲ್ಲಿ ಸುಖ-ಶಾಂತಿ ನೆಲೆಸಲಿದ್ದು, ಆಪ್ತತೆ ಹೆಚ್ಚಾಗಲಿದೆ.
ತುಲಾ:
ಸಂಬಂಧಗಳಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ಸಂಗಾತಿಯ ಬೆಂಬಲ ನಿಮ್ಮ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಪ್ರೇಮಿಗಳು ವಿವಾಹದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಇದು ಸೂಕ್ತ ಸಮಯ. ಹಳೆಯ ಸ್ನೇಹ ಮರುಕಳಿಸಬಹುದು.
ವೃಶ್ಚಿಕ:
ಭಾವನಾತ್ಮಕವಾಗಿ ಸ್ವಲ್ಪ ಏರಿಳಿತಗಳಿರಬಹುದು. ಪ್ರೀತಿಪಾತ್ರರ ಮೇಲೆ ಸಂಶಯ ಬೇಡ, ಮುಕ್ತವಾಗಿ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ. ದಾಂಪತ್ಯದಲ್ಲಿ ರೊಮ್ಯಾಂಟಿಕ್ ಕ್ಷಣಗಳು ಹೆಚ್ಚಾಗಲಿವೆ.
ಧನು:
ಹೊಸ ಸ್ನೇಹವು ಪ್ರೇಮಕ್ಕೆ ತಿರುಗುವ ಸಾಧ್ಯತೆಯಿದೆ. ಸಾಮಾಜಿಕ ಸಮಾರಂಭಗಳಲ್ಲಿ ಭಾಗವಹಿಸುವುದರಿಂದ ಸಂಬಂಧಗಳು ವೃದ್ಧಿಯಾಗುತ್ತವೆ. ಸಂಗಾತಿಯೊಡನೆ ದೂರದ ಪ್ರಯಾಣ ಕೈಗೊಳ್ಳುವ ಸಂಭವವಿದೆ.
ಮಕರ:
ಕೆಲಸದ ಒತ್ತಡದ ನಡುವೆಯೂ ಸಂಗಾತಿಗೆ ಸಮಯ ನೀಡುವಿರಿ. ದಾಂಪತ್ಯದಲ್ಲಿ ಪ್ರೀತಿ ಮತ್ತು ಜವಾಬ್ದಾರಿ ಸಮಾನವಾಗಿರುತ್ತದೆ. ಆಪ್ತ ಸ್ನೇಹಿತರ ಮಾರ್ಗದರ್ಶನ ನಿಮ್ಮ ಪ್ರೇಮ ಜೀವನಕ್ಕೆ ಸಹಕಾರಿಯಾಗಲಿದೆ.
ಕುಂಭ:
ಮನಸ್ಸಿನ ಮಾತುಗಳನ್ನು ಹಂಚಿಕೊಳ್ಳಲು ಇದು ಸಕಾಲ. ನಿಮ್ಮ ಆಕರ್ಷಣೆ ಹೆಚ್ಚಾಗಲಿದ್ದು, ಪ್ರೇಮಿಗಳ ನಡುವೆ ಬಾಂಧವ್ಯ ಗಟ್ಟಿಯಾಗುತ್ತದೆ. ಸಂಗಾತಿಯಿಂದ ವಿಶೇಷ ಪ್ರೋತ್ಸಾಹ ಸಿಗಲಿದ್ದು, ನೆಮ್ಮದಿಯ ವಾರವಿದು.
ಮೀನ:
ಸಂಬಂಧಗಳಲ್ಲಿ ಮೃದುತ್ವವಿರಲಿ. ಸಂಗಾತಿಯ ಭಾವನೆಗಳಿಗೆ ಬೆಲೆ ಕೊಡಿ. ಸಣ್ಣ ವಿವಾದಗಳನ್ನು ಬೆಳೆಸಬೇಡಿ. ವಾರದ ಅಂತ್ಯಕ್ಕೆ ಪ್ರೇಮ ಜೀವನದಲ್ಲಿ ಹೊಸ ಚೈತನ್ಯ ಮೂಡಲಿದೆ ಮತ್ತು ಆಪ್ತತೆ ಹೆಚ್ಚಲಿದೆ.
‘ಜನ ನಾಯಗನ್’ ಸಿನಿಮಾ (Jana Nayagan Movie) ರಿಲೀಸ್ಗೂ ಮೊದಲೇ ಲೀಕ್ ಆಗಿದೆ. ಇದು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಜನರು ಈ ಬಗ್ಗೆ ಸಾಕಷ್ಟು ಪ್ರಶ್ನೆ ಮಾಡುತ್ತಿದ್ದಾರೆ. ಅನೇಕರು ಲೀಕ್ ಮಾಡಿದವರ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಹೀಗಿರುವಾಗಲೇ ‘ಜನ ನಾಯಗನ್’ ಸಿನಿಮಾ ಕ್ಲಿಪ್ ಸೋರಿಕೆಗೆ ವಿಜಯ್ ಕೈವಾಡವೇ ಇದೆ ಎಂದು ಕೆಲವರು ಆರೋಪಿಸಿದ್ದಾರೆ. ಇದಕ್ಕೆ ವಿಜಯ್ ಅಭಿಮಾನಿಗಳು ಖಡಕ್ ಆಗಿ ಉತ್ತರಿಸುವ ಕೆಲಸ ಮಾಡುತ್ತಿದ್ದಾರೆ.
ಎಲ್ಲಾ ಹೀರೋಗಳಿಗೆ ತಾವು ಮಾಡಿದ ಸಿನಿಮಾಗಳ ಮೇಲೆ ಪ್ರೀತಿ ಇರುತ್ತದೆ. ಅದು ಲೀಕ್ ಆಗಲಿ ಎಂದು ಯಾರೊಬ್ಬರೂ ಬಯಸುವುದಿಲ್ಲ. ಹಾಗಿದ್ದರೂ ವಿಜಯ್ ಮೇಲೆ ಈ ರೀತಿಯ ಗಂಭೀರ ಆರೋಪವನ್ನು ಕೆಲವರು ಮಾಡಿದ್ದಾರೆ. ‘ಜನ ನಾಯಗನ್ ಲೀಕ್ ಮಾಡಿ ಸಿಂಪತಿ ಗಿಟ್ಟಿಸಿಕೊಳ್ಳುವ ಪ್ಲ್ಯಾನ್ ವಿಜಯ್ ಅವರದ್ದು’ ಎಂದು ಕೆಲವರು ಆರೋಪ ಮಾಡಿದ್ದಾರೆ.
Breaking: KVN’s internal investigation confirms that the JanaNayagan EDIT_REF_14012026 file was officially shared with Vijay’s team.
The leak has reportedly been traced back to Vijay’s own camp.
‘ಜನ ನಾಯಗನ್’ ಎಲ್ಲಿಯೂ ಪ್ರದರ್ಶನ ಆಗಿಲ್ಲ. ಹೀಗಾಗಿ, ಇದರ ಲೀಕ್ ಹಿಂದೆ ತಂಡದವರಲ್ಲಿದ್ದವರ ಕೈವಾಡ ಇರಬಹುದು ಎಂಬುದು ಕೆಲವರ ಅನುಮಾನ. ಈ ಕಾರಣದಿಂದ ಈಗಾಗಲೇ ಕೆವಿಎನ್ ಸಂಸ್ಥೆ ತನಿಖೆಗೆ ಆದೇಶ ಮಾಡಿದೆ. ಈ ವರದಿ ಹೊರ ಬಂದ ಬಳಿಕ ಅಸಲಿಯತ್ತು ತಿಳಿಯಲಿದೆ. ಇದರ ವರದಿ ಬರೋದಕ್ಕೂ ಮೊದಲೇ ಕೆಲವರು ವಿಜಯ್ ಹಾಗೂ ಅವರ ತಂಡದ ಮೇಲೆ ಸುಖಾಸುಮ್ಮನೆ ಆರೋಪ ಮಾಡುವ ಕೆಲಸ ಮಾಡುತ್ತಿದ್ದಾರೆ.
ಇನ್ನು, ಸಿನಿಮಾ ಲೀಕ್ ಬಗ್ಗೆ ವಿಜಯ್ ಮೌನವಹಿಸಿದ್ದಾರೆ. ಅವರು ಸಂಪೂರ್ಣವಾಗಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಈ ಕಾರಣಕ್ಕೆ ಅವರು ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುತ್ತಿಲ್ಲ ಎನ್ನಲಾಗಿದೆ. ಇನ್ನು, ಕೆಲವು ಪೈರಸಿ ಸೈಟ್ಗಳು ಒಳ್ಳೆಯತನ ಮೆರೆಯುವ ಕೆಲಸ ಮಾಡುತ್ತಿವೆ. ಸಿನಿಮಾ ರಿಲೀಸ್ ಆದ ಹೊರತಾಗಿಯೂ ಪೈರಸಿ ಕಾಪಿಯನ್ನು ಅಪ್ಲೋಡ್ ಮಾಡುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿವೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ.
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಾಳೆ (ಏ.12) ನಡೆಯಲಿರುವ ಈ ಪಂದ್ಯಕ್ಕಾಗಿ ಆರ್ಸಿಬಿ ಒಂದು ಬದಲಾವಣೆ ಮಾಡುವುದು ಖಚಿತ.
ಏಕೆಂದರೆ ಕಳೆದ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಆರ್ಸಿಬಿ ವೇಗಿ ಅಭಿನಂದನ್ ಸಿಂಗ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಆಡಿದ ಮೂರು ಮ್ಯಾಚ್ಗಳಲ್ಲಿ ಒಟ್ಟು 58 ಎಸೆತಗಳನ್ನು ಎಸೆದಿರುವ ಅಭಿನಂದನ್ ನೀಡಿರುವುದು ಬರೋಬ್ಬರಿ 122 ರನ್ಗಳು. ಅದರಲ್ಲೂ ರಾಜಸ್ಥಾನ್ ರಾಯಲ್ಸ್ ವಿರುದ್ಧ 3 ಓವರ್ಗಳಲ್ಲಿ ಬರೋಬ್ಬರಿ 54 ರನ್ ಚಚ್ಚಿಸಿಕೊಂಡಿದ್ದರು.
ಇತ್ತ ಮೂರು ಮ್ಯಾಚ್ಗಳಲ್ಲಿ 12.62ರ ಸರಾಸರಿಯಲ್ಲಿ ರನ್ ನೀಡಿರುವ ಅಭಿನಂದನ್ ಸಿಂಗ್ ಪಡೆದಿರುವುದು ಕೇವಲ ಮೂರು ವಿಕೆಟ್ಗಳು ಮಾತ್ರ. ಹೀಗಾಗಿಯೇ ಮುಂದಿನ ಪಂದ್ಯದಿಂದ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ. ಅದರಂತೆ ಮುಂಬೈ ಇಂಡಿಯನ್ಸ್ ವಿರುದ್ಧ ಅಭಿನಂದನ್ ಬದಲಿಗೆ ಆರ್ಸಿಬಿ ರಾಸಿಖ್ ದಾರ್ ಸಲಾಂ ಅಥವಾ ಮಂಗೇಶ್ ಯಾದವ್ ಅವರನ್ನು ಕಣಕ್ಕಿಳಿಸಬಹುದು.
ಇಲ್ಲಿ ಅನುಭವಕ್ಕೆ ಮಣೆಹಾಕುವುದಾದರೆ ರಾಸಿಖ್ ದಾರ್ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ. ಏಕೆಂದರೆ ರಾಸಿಖ್ ಈಗಾಗಲೇ 13 ಪಂದ್ಯಗಳನ್ನಾಡಿದ್ದಾರೆ. ಹೀಗಾಗಿ ವಾಂಖೆಡೆ ಪಿಚ್ನಲ್ಲಿ ಜಮ್ಮು-ಕಾಶ್ಮೀರದ ಯುವ ವೇಗಿಗೆ ಅವಕಾಶ ನೀಡಬಹುದು. ಅದರಂತೆ ಆರ್ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
ಹಾಸನ, ಏಪ್ರಿಲ್ 11: ಹಾಸನ (Hassan) ಜಿಲ್ಲೆಯ ವಿಶ್ವವಿಖ್ಯಾತ ಬೇಲೂರಿನಲ್ಲಿ (Belur) ಕಂದಾಯ ಮತ್ತು ಪುರಸಭೆ ಅಧಿಕಾರಿಗಳ ಕರಾಮತ್ತಿನಿಂದಾಗಿ ಐತಿಹಾಸಿಕ ದೇವಾಲಯಕ್ಕೆ ಸೇರಿದ ಕೋಟ್ಯಂತರ ರೂಪಾಯಿ ಮೌಲ್ಯದ ಸಾರ್ವಜನಿಕ ಆಸ್ತಿ ಖಾಸಗಿ ವ್ಯಕ್ತಿಯ ಪಾಲಾಗಿದೆ. ವಿದ್ಯಾಗಣಪತಿ ಟ್ರಸ್ಟ್ ಹೆಸರಿನಲ್ಲಿದ್ದ ಜಮೀನನ್ನು ನಕಲಿ ದಾಖಲೆಗಳ ಮೂಲಕ ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ಹಗರಣ ನಡೆದಿದ್ದು ಹೇಗೆ?
ಪುರಸಭೆಯ ಸರ್ವೆ ನಂಬರ್ 27ರಲ್ಲಿ ಸುಮಾರು 50 ವರ್ಷಗಳಿಂದ ವಿದ್ಯಾಗಣಪತಿ ಟ್ರಸ್ಟ್ ಹೆಸರಿನಲ್ಲಿ 20 ಗುಂಟೆ ಭೂಮಿ ಇತ್ತು. ಈ ಪೈಕಿ 10 ಗುಂಟೆಯನ್ನು ಅರ್ಚಕರಿಗೆ ನೀಡಲಾಗಿತ್ತು. 1995ರಲ್ಲಿ ಅರ್ಚಕರು ತಮಗೆ ಮಂಜೂರಾಗಿದ್ದ 10 ಗುಂಟೆಯನ್ನು ಮಲ್ಲಿಕಾರ್ಜುನ್ ಎಂಬುವವರಿಗೆ ಮಾರಾಟ ಮಾಡಿದ್ದರು. ಆದರೆ, ಭೂಮಿ ಖರೀದಿ ಮಾಡಿದ ವ್ಯಕ್ತಿ ಅಧಿಕಾರಿಗಳ ಜೊತೆ ಶಾಮೀಲಾಗಿ, ತಾನು ಖರೀದಿಸಿದ 10 ಗುಂಟೆಯ ಜೊತೆಗೆ ದೇವಾಲಯಕ್ಕೆ ಸೇರಿದ ಉಳಿದ 10 ಗುಂಟೆಯನ್ನೂ ಸೇರಿಸಿ ಅಕ್ರಮವಾಗಿ ಖಾತೆ ಮಾಡಿಸಿಕೊಂಡಿದ್ದಾರೆ.
ಅಧಿಕಾರಿಗಳ ಸಾಥ್
ಅನ್ಯಕ್ರಾಂತ (ಅಲಿನೇಷನ್) ಮಾಡುವಾಗ ದಿಕ್ಕುಗಳನ್ನು ಅದಲುಬದಲು ಮಾಡಿ ನಕ್ಷೆ ತಯಾರಿಸಲಾಗಿದೆ. ಕೇವಲ 10 ಸಾವಿರ ಅಡಿ ಜಾಗಕ್ಕೆ ದಾಖಲೆ ಇರಬೇಕಾಗಿದ್ದರೂ, ಪುರಸಭೆ ಅಧಿಕಾರಿಗಳು ಬರೋಬ್ಬರಿ 24 ಸಾವಿರ ಅಡಿಗೆ ಇ-ಸ್ವತ್ತು ಮಾಡಿಕೊಟ್ಟಿದ್ದಾರೆ. ಈ ಅಕ್ರಮದ ಬಗ್ಗೆ ದೂರು ನೀಡಿದ್ದರೂ, 2019ರಲ್ಲಿ ಅಧಿಕಾರಿಗಳು ಅದೇ ಅಕ್ರಮ ಅಳತೆಗೆ ದಾಖಲೆ ನೀಡಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ.
ತನಿಖೆಗೆ ಉಸ್ತುವಾರಿ ಸಚಿವರ ಆದೇಶ
ಬೇಲೂರಿನಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ಈ ಬಗ್ಗೆ ದೂರು ಕೇಳಿಬರುತ್ತಿದ್ದಂತೆಯೇ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಮೇಲ್ನೋಟಕ್ಕೆ ಅಕ್ರಮ ನಡೆದಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ಒಂದು ವಾರದೊಳಗೆ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮಂಡ್ಯ, ಏಪ್ರಿಲ್ 11: ಪ್ರಧಾನಿ ನರೇಂದ್ರ ಮೋದಿ (Narendra Modi) ಏಪ್ರಿಲ್ 15ರಂದು ಮಂಡ್ಯ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠದಲ್ಲಿ ನಡೆಯುವ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ನೂತನ ಗದ್ದಿಗೆ ಉದ್ಘಾಟಿಸಲಿರುವ ಅವರು, ನಂತರ ಕೇರಳಕ್ಕೆ ಪ್ರಯಾಣಿಸಲಿದ್ದಾರೆ.
ಮೋದಿಯ ಅಂದಿನ ದಿನಚರಿಯೇನು?
ಬೆಳಿಗ್ಗೆ ದೆಹಲಿಯಿಂದ ಹೊರಟು ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಆದಿಚುಂಚನಗಿರಿ ಹೆಲಿಪ್ಯಾಡ್ಗೆ ಸುಮಾರು 10:50ಕ್ಕೆ ತಲುಪಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ಮಠಕ್ಕೆ ತೆರಳಿ, ಬೆಳಗ್ಗೆ 11 ಗಂಟೆಗೆ ಮಾಜಿ ಪೀಠಾಧಿಪತಿ ಬಾಲಗಂಗಾಧರನಾಥ ಸ್ವಾಮಿ ಅವರ ನೂತನ ಗದ್ದಿಗೆ (ಮಂದಿರ) ಉದ್ಘಾಟನೆ ನೆರವೇರಿಸಲಿದ್ದಾರೆ. ನಂತರ BGS ಮೈದಾನದಲ್ಲಿ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದ್ದು, ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮದ ನಂತರ ಪ್ರಧಾನಿ ಮೋದಿ ಅವರು ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಮರಳಿ ಅಲ್ಲಿಂದ ಕೇರಳಕ್ಕೆ ಪ್ರಯಾಣ ಮುಂದುವರಿಸಲಿದ್ದಾರೆ.
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
ಪ್ರಧಾನಿ ಭೇಟಿ ಹಿನ್ನೆಲೆ ಜಿಲ್ಲಾಧಿಕಾರಿ ಕುಮಾರ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆದಿದ್ದು, ಭದ್ರತೆ, ಪ್ರೋಟೋಕಾಲ್ ಹಾಗೂ ಲಾಜಿಸ್ಟಿಕ್ಸ್ ವ್ಯವಸ್ಥೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಲಾಗಿದೆ. ಕಾರ್ಯಕ್ರಮ ಸ್ಥಳದ ಸಮೀಪ ಮೂರು ಹೆಲಿಪ್ಯಾಡ್ಗಳ ನಿರ್ಮಾಣ, ವಿಶೇಷ ಗ್ರೀನ್ ರೂಂ ಸಿದ್ಧತೆ, ನಿರಂತರ ವಿದ್ಯುತ್ ಪೂರೈಕೆ ಹಾಗೂ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ, ಎಸ್ಪಿ ವಿ.ಜೆ. ಶೋಭಾರಾಣಿ ಹಾಗೂ ಎಡಿಸಿ ಬಿ.ಸಿ. ಶಿವಾನಂದ ಮೂರ್ತಿ ಉಪಸ್ಥಿತರಿದ್ದರು.
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ವೆಂಕಟೇಶ್ ಅಯ್ಯರ್ ಪಾದಾರ್ಪಣೆ ಮಾಡಿದ್ದಾರೆ. ಗುವಾಹಟಿಯಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯುವ ಮೂಲಕ ವೆಂಕಿ ಐಪಿಎಲ್ನಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಈ ಮೂಲಕ ಆರ್ಸಿಬಿ ಪರ ಕಣಕ್ಕಿಳಿದ 179ನೇ ಆಟಗಾರ ಎನಿಸಿಕೊಂಡಿದ್ದಾರೆ.
ಅಂದರೆ 19 ಸೀಸನ್ಗಳಲ್ಲಿ ಆರ್ಸಿಬಿ ಪರ ಒಟ್ಟು 179 ಆಟಗಾರರು ಕೆಂಪು ಮತ್ತು ಕಪ್ಪು ಜರ್ಸಿಯನ್ನು ಧರಿಸಿ ಮೈದಾನಕ್ಕಿಳಿದಿದ್ದಾರೆ. ಈ 179 ಆಟಗಾರರ ಪೈಕಿ ಆರ್ಸಿಬಿ ಪರ ಅತ್ಯಧಿಕ ಪಂದ್ಯಗಳನ್ನಾಡಿದ ಆಟಗಾರ ವಿರಾಟ್ ಕೊಹ್ಲಿ.
2008ರಿಂದ 2026ರವರೆಗೆ, ಅಂದರೆ ಐಪಿಎಲ್ ಆರಂಭದಿಂದ ಇಂದಿನವರೆಗೆ ಒಂದೇ ತಂಡಕ್ಕಾಗಿ ಆಡುತ್ತಿರುವ ವಿಶ್ವದ ಏಕೈಕ ಆಟಗಾರ ಕಿಂಗ್ ಕೊಹ್ಲಿ.
ಅಂದರೆ ಆರ್ಸಿಬಿ ಪರ ಕಣಕ್ಕಿಳಿದ ಎಲ್ಲಾ ಆಟಗಾರರೊಂದಿಗೆ ಕಾಣಿಸಿಕೊಂಡ ಏಕೈಕ ಆಟಗಾರ ಎಂಬ ಹೆಗ್ಗಳಿಕೆ ಕೂಡ ವಿರಾಟ್ ಕೊಹ್ಲಿಗೆ ಸಲ್ಲುತ್ತದೆ.
ಆರ್ಸಿಬಿ ಮೂರು ಯುಗ:
ಇನ್ನು ಆರ್ಸಿಬಿ ಪರ ಆಡಿದ ಆಟಗಾರರನ್ನು ಮೂರು ವಿಭಾಗಗಳಲ್ಲಿ ವಿಂಗಡಿಸಬಹುದು. ಇಲ್ಲಿ ಆರಂಭದಲ್ಲಿ ಕಾಣಿಸಿಕೊಂಡಿದ್ದು ದಿಗ್ಗಜರು ಎಂಬುದು ವಿಶೇಷ. ಆ ಆಟಗಾರೆಂದರೆ…
ಬೆಂಗಳೂರು, ಏಪ್ರಿಲ್ 11: ಕರ್ನಾಟಕ ಕಾಂಗ್ರೆಸ್ನಲ್ಲಿ ಸಚಿವ ಸಂಪುಟ ಪುನರಚನೆಯ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಇದರ ಬೆನ್ನಲ್ಲೇ, ಕಾಂಗ್ರೆಸ್ನ ಹಿರಿಯ ಶಾಸಕರು ಈ ವಿಷಯವಾಗಿ ದೆಹಲಿಯ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ. ಯಾವುದೇ ನಿರ್ದಿಷ್ಟ ನಾಯಕತ್ವ ಹೆಸರಿನಲ್ಲಲ್ಲದೆ, ಮೂರು, ನಾಲ್ಕು, ಐದು ಬಾರಿ ಶಾಸಕರಾಗಿರುವ ಅನುಭವಿಗಳು ಒಟ್ಟಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಶಾಸಕರ ದೆಹಲಿ ಪ್ರವಾಸದ ಬಗ್ಗೆ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಸಚಿವ ಸಂಪುಟದ ಅವಧಿ ಮೂರು ವರ್ಷಗಳನ್ನು ಪೂರೈಸಿದ್ದು, ಮುಂದಿನ ಎರಡು ವರ್ಷಗಳಲ್ಲಿ ರಾಜಕೀಯ ಏರುಪೇರುಗಳನ್ನು ಗಮನದಲ್ಲಿಟ್ಟುಕೊಂಡು ಇತರರಿಗೂ ಅವಕಾಶ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ. ಈ ಮನವಿಯನ್ನು ಪಕ್ಷದ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆ ಅವರ ಎದುರು ಮಂಡಿಸಲಾಗುವುದು ಎಂದು ಜಯಚಂದ್ರ ತಿಳಿಸಿದ್ದಾರೆ.
ಸಚಿವ ಸಂಪುಟ ಪುನರಚನೆಗೆ ರಾಜಕೀಯ ಲೆಕ್ಕಾಚಾರಗಳು ಪ್ರಮುಖ ಕಾರಣವಾಗಿದ್ದು, 2028ರ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಸೂಕ್ತ ಕಾರ್ಯತಂತ್ರ ರೂಪಿಸುವುದು ಮುಖ್ಯ ಎಂದು ಶಾಸಕರು ಅಭಿಪ್ರಾಯಪಟ್ಟಿದ್ದಾರೆ. ವರಿಷ್ಠರ ನಿರ್ಧಾರವೇ ಅಂತಿಮವಾಗಿರುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೂ ಈ ಭೇಟಿಯ ವಿಷಯವನ್ನು ತರಲಾಗಿದ್ದು, ಅವರು ಮುಕ್ತ ಮನಸ್ಸಿನಿಂದ ಸಮ್ಮತಿಸಿದ್ದಾರೆ ಎಂದು ಟಿ.ಬಿ. ಜಯಚಂದ್ರ ಹೇಳಿದ್ದಾರೆ.
ಗಾಯಕಿ ಮಂಗ್ಲಿ (Mangli) ಅವರು ತೆಲುಗಿನವರಾದರೂ ಕನ್ನಡದಲ್ಲೂ ಜನಪ್ರಿಯತೆ ಪಡೆದಿದ್ದಾರೆ. ಅವರು ಕನ್ನಡದಲ್ಲೂ ಹಾಡು ಹೇಳಿದ್ದಾರೆ. ಅವರು ತಮ್ಮ ಕಂಚಿನ ಕಂಠದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈಗ ಅವರ ಮೇಲೆ 10 ಕೋಟಿ ರೂಪಾಯಿ ಮೋಸದ ಕೇಸ್ ದಾಖಲಾಗಿದೆ. ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಮಂಗ್ಲಿ ಹಾಗೂ ಅವರ ಸಹೋದರನ ವಿರುದ್ಧ ಕೇಸ್ ದಾಖಲಾಗಿದೆ. ಮಂಗ್ಲಿ ತಮಗೆ ಮೋಸ ಮಾಡಿದ್ದಾರೆ ಮತ್ತು ಅವರಿಂದ ಅಪಾಯವಿದೆ ಎಂದು ವಕೀಲರೊಬ್ಬರು ಆರೋಪಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ, ಪೊಲೀಸರು ಮಂಗ್ಲಿ, ಅವರ ಸಹೋದರ ಮತ್ತು ಇತರರ ವಿರುದ್ಧ ಐಪಿಸಿ ಸೆಕ್ಷನ್ 351 (2), 352 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಂಗ್ಲಿ ಮೈಕ್ರೋ ಫೈನಾನ್ಸ್ ಮಾಡುತ್ತಿದ್ದರು ಎನ್ನಲಾಗಿದೆ. ಮಂಗ್ಲಿ, ಅವರ ಸಹೋದರ ಇದರಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಅವರು ಸುಮಾರು 100 ಜನರಿಂದ ಭಾರಿ ಹಣವನ್ನು ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ಹಣವನ್ನು ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂಬ ಆಸೆ ತೋರಿಲಾಗಿತ್ತು. ಇದನ್ನು ನಂಬಿ ಅನೇಕರು ಹಣ ನೀಡಿದ್ದರು. ಮಂಗ್ಲಿ ಕಡೆಯಿಂದ ಸುಮಾರು 10 ಕೋಟಿ ರೂಪಾಯಿ ಮೋಸ ಆಗಿದೆ ಎನ್ನಲಾಗಿದೆ.
ನಿಗದಪಡಿಸಿದ ಸಮಯ ಕಳೆದರೂ ಲಾಭ ನೀಡಿಲ್ಲ, ಅಸಲನ್ನು ಕೂಡ ಕೊಟ್ಟಿಲ್ಲ ಎಂದು ಅನೇಕರು ಆರೋಪಿಸಿದ್ದಾರೆ. ಸಂತ್ರಸ್ತರು ವಕೀಲ ಸುಬ್ಬರಾವ್ ಅವರ ಸಂಪರ್ಕಿಸಿ ಸಹಾಯ ಕೇಳಿದ್ದರು. ಈ ವೇಳೆ ಹಣ ಕೊಡುವಂತೆ ಕೇಳಿದಾಗ ಮಂಗ್ಲಿ ಮತ್ತು ಆಕೆಯ ಸಹೋದರ ಶಿವ ವಕೀಲರಿಗೆ ಬೆದರಿಕೆ ಹಾಕಿದ್ದಾರೆ.