ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಅರ್ಚಕ ಮಸಲತ್ತು: ಸಮಸ್ಯೆ ನಿವಾರಣೆ ನೆಪದಲ್ಲಿ ಅತ್ಯಾಚಾರ – Kannada News | A astrologer Arrested for physical assault On Young Woman at Chikkamagaluru

ಚಿಕ್ಕಮಗಳೂರು, (ಫೆಬ್ರವರಿ 04): ಯಾವುದೇ ಶುಭಕಾರ್ಯ ಮಾಡಬೇಕು ಅಂದ್ರು ಶಾಸ್ತ್ರ ಜ್ಯೋತಿಷ್ಯ (astrology) ಕೇಳುವುದು ವಾಡಿಕೆ, ನಂಬಿಕೆ. ಇದೆ ನಂಬಿಕೆಯನ್ನು ಬಂಡವಾಳ ಮಾಡಿಕೊಂಡ ಜ್ಯೋತಿಷಿ ಒಬ್ಬ ಮಾನಗೇಡಿ ಕೆಲಸ ಮಾಡಿದ್ದಾನೆ. ಮದುವೆಯ ಬಗ್ಗೆ ತನ್ನ ಬಳಿ ಜ್ಯೋತಿಷ್ಯ ಕೇಳಲು ಬಂದ ಯುವತಿಯ ಬಾಳಲ್ಲಿ ಜ್ಯೋತಿಷಿ (astrologer )ಚೆಲ್ಲಾಟವಾಡಿದ್ದಾನೆ. ಹೌದು..ಸಮಸ್ಯೆ ನಿವಾರಣೆ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ತಾಲೂಕು ಬಣಕಲ್‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕಾಮುಕ ಅರ್ಚಕ ಕೃಷ್ಣ ರಾವ್ ಎನ್ನುವಾತ ದಾವಣಗೆರೆ ಮೂಲದ ಈ ಕ್ರಿಮಿ, 7 ವರ್ಷಗಳ ಹಿಂದಯೇ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಹೊರಟ್ಟಿ ಗ್ರಾಮಕ್ಕೆ ಬಂದು ನೆಲೆಸಿದ್ದು, ಗ್ರಾಮದ ಪಾರ್ವತಿ ಈಶ್ವರ ದೇಗುಲದ ಅರ್ಚಕನಾಗಿ ಕೆಲಸ ಮಾಡಿಕೊಂಡಿದ್ದ. ಜೊತೆ ಜೊತೆಗೆ ಜ್ಯೋತಿಷ್ಯವನ್ನ ಸಹ ಹೇಳುತ್ತಿದ್ದ. ಹೀಗಾಗಿ ದಲಿತ ಸಮುದಾಯದ 23 ವರ್ಷದ ಯುವತಿಯೊಬ್ಳು ಬಂದಿದ್ದು, ಮದ್ವೆ ವಿಷಯದಲ್ಲಿ ತೊಂದರೆ ಆಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾಳೆ. ಆಕೆಯ ಮುಗ್ದತೆಯನ್ನೇ ಬಂಡವಾಳ ಮಾಡಿಕೊಂಡ ಕೃಷ್ಣ ರಾವ್, ಯುವತಿ ಮೇಲೆ ಹಲವು ಸಲ ಅತ್ಯಾಚಾರ ಮಾಡಿದ್ದಾನೆ.

ಇದನ್ನೂ ಓದಿ: ಜ್ಯೋತಿಷಿ ಹೇಳ್ತಿದ್ದವನ ಭವಿಷ್ಯವೇ ತಲೆಕೆಳಗಾಯ್ತು: ಕಮಲಾಕರ್ ಭಟ್‌-ಸುಚಿತ್ರಾಳ ಮತ್ತಷ್ಟು ಶೋಕಿ ಪುರಾಣ ಬಯಲು

ಜಾತಕದಲ್ಲಿ ದೋಷ ಇದೆ ಎಂದು ಹೇಳಿದ್ದು, ಅದನ್ನು ಸಮಸ್ಯೆ ನಿವಾರಣೆ ಹೆಸರಲ್ಲಿ ಯುವತಿ ಮೇಲೆ ಕಳೆದೊಂದು ವರ್ಷದಲ್ಲಿ ಹಲವು ಸಲ ಅತ್ಯಾಚಾರ ಮಾಡಿದ್ದಾನೆ. ಇದೀಗ ಈಗ ಯುವತಿ ಬಣಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರನ್ನಾಧರಿಸಿ ಪೊಲೀಸರು, ಆರೋಪಿ ವಿರುದ್ಧ BNS ಕಲಂ 64(2)(m) ಹಾಗೂ ಅತ್ಯಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದರ ಜೊತೆಗೆ ಅಟ್ರಾಸಿಟಿ ಕೇಸ್ ಕೂಡ ದಾಖಲಿಸಿಕೊಂಡಿದ್ದು, ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ? – Kannada News | Aamir Khan visits singer Arijit Singh home after announcing retirement

ದೇಶವೇ ಮೆಚ್ಚಿದ ಗಾಯಕ ಅರಿಜಿತ್ ಸಿಂಗ್ (Arijit Singh) ಅವರು ಕೆಲವೇ ದಿನಗಳ ಹಿಂದೆ ನಿವೃತ್ತಿ ಘೋಷಿಸಿದ್ದರು. ಇನ್ಮುಂದೆ ಯಾವುದೇ ಸಿನಿಮಾ ಗೀತೆಗಳನ್ನು ಹಾಡುವುದಿಲ್ಲ ಎಂದು ಅವರು ಹೇಳಿದ್ದರು. ಅವರ ಈ ನಿರ್ಧಾರದಿಂದ ಕೋಟ್ಯಂತರ ಅಭಿಮಾನಿಗಳಿಗೆ ಆಘಾತ ಆಯಿತು. ಅರಿಜಿತ್ ಸಿಂಗ್ ಅವರು ನೂರಾರು ಸೂಪರ್ ಹಿಟ್ ಹಾಡುಗಳಿಗೆ ಧ್ವನಿ ಆಗಿದ್ದಾರೆ. ಆದರೆ ಅವರು ಏಕಾಏಕಿ ನಿವೃತ್ತಿ (Retirement) ತೆಗೆದುಕೊಂಡಿರುವುದು ಎಲ್ಲರಿಗೂ ಬೇಸರ ಮೂಡಿಸಿದೆ. ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ (Aamir Khan) ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಈ ರೀತಿ ಸುದ್ದಿ ಹಬ್ಬಲು ಕಾರಣ ಕೂಡ ಇದೆ. ಆಮಿರ್ ಖಾನ್ ಅವರು ಇತ್ತೀಚೆಗೆ ಅರಿಜಿತ್ ಸಿಂಗ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಮುಂಬೈನಿಂದ ಪಶ್ವಿಮ ಬಂಗಾಳಕ್ಕೆ ತೆರಳಿ, ಅಲ್ಲಿರುವ ಅರಿಜಿತ್ ಸಿಂಗ್ ಅವರ ಮನೆಗೆ ಆಮಿರ್ ಖಾನ್ ಭೇಟಿ ನೀಡಿರುವುದು ಅಚ್ಚರಿ ಮೂಡಿಸಿದೆ. ಈ ಸಂದರ್ಭದ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗಿವೆ.

ಅರಿಜಿತ್ ಸಿಂಗ್ ಅವರಿಗೆ ತುಂಬಾ ಡಿಮ್ಯಾಂಡ್ ಇದೆ. ಸದ್ಯಕ್ಕಂತೂ ಅವರು ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿ ಇದ್ದಾರೆ. ಇಂಥ ಸಮಯದಲ್ಲಿ ನಿವೃತ್ತಿ ಘೋಷಿಸಿರುವುದು ಚಿತ್ರರಂಗಕ್ಕೆ ಕೂಡ ನಷ್ಟ. ಹಾಗಾಗಿ ಅವರನ್ನು ಮತ್ತೆ ಹಿನ್ನೆಲೆ ಗಾಯನಕ್ಕೆ ಕರೆತರಬೇಕು ಎಂಬುದು ಅನೇಕರ ಬಯಕೆ ಆಗಿದೆ. ಆ ಕಾರಣದಿಂದಲೇ ಆಮಿರ್ ಖಾನ್ ಅವರು ಅರಿಜಿತ್ ಸಿಂಗ್ ನಿವಾಸಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಆದರೆ ಈ ಬಗ್ಗೆ ಆಮಿರ್ ಖಾನ್ ಅವರು ಸದ್ಯಕ್ಕೆ ಪ್ರತಿಕ್ರಿಯೆ ನೀಡಿಲ್ಲ. ಯಾವ ಕಾರಣಕ್ಕಾಗಿ ಅವರು ಅರಿಜಿತ್ ಸಿಂಗ್ ನಿವಾಸಕ್ಕೆ ಭೇಟಿ ನೀಡಿದ್ದಾರೆ ಎಂಬುದು ಸದ್ಯಕ್ಕೆ ಗೌಪ್ಯವಾಗಿದೆ. ಶೀಘ್ರದಲ್ಲೇ ಅವರು ಈ ಬಗ್ಗೆ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.

ಇದನ್ನೂ ಓದಿ: ನಿವೃತ್ತಿ ಘೋಷಣೆಗೂ ಮೊದಲು ಅರಿಜಿತ್ ಮಾಡಿಕೊಂಡ ಆಸ್ತಿ ಎಷ್ಟು?

‘ಇದನ್ನು ನಿಲ್ಲಿಸುತ್ತಿದ್ದೇನೆ. ನಮಸ್ಕಾರ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಕೇಳುಗರಾಗಿ ಇಷ್ಟು ವರ್ಷಗಳ ಕಾಲ ನನಗೆ ಇಷ್ಟೊಂದು ಪ್ರೀತಿ ನೀಡಿದ್ದಕ್ಕಾಗಿ ನಿಮ್ಮೆಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಇನ್ನು ಮುಂದೆ ನಾನು ಹಿನ್ನೆಲೆ ಗಾಯಕನಾಗಿ ಯಾವುದೇ ಹೊಸ ಕೆಲಸಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಈ ಪ್ರಯಾಣ ಅದ್ಭುತವಾಗಿತ್ತು’ ಎಂದು ಅರಿಜಿತ್ ಸಿಂಗ್ ಅವರು ಪೋಸ್ಟ್ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವಿರೋಧದ ಮಧ್ಯೆ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ: ಬಿಜೆಪಿ ನಾಯಕರು ಆಕ್ರೋಶ – Kannada News | Karnataka Assembly Session: G Ram G Act Resolution Passed, Sparks Opposition Outrage

ಬೆಂಗಳೂರು, ಫೆಬ್ರವರಿ 04: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿಜಿ ರಾಮ್ ಜಿ (G-RAM-G) ಕಾಯ್ದೆಯನ್ನು ವಾಪಸ್ ಪಡೆಯಬೇಕು ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು ಮರುಜಾರಿಗೊಳಿಸುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ (Siddaramaiah) ಮಂಡಿಸಿದ್ದ ಅಧಿಕೃತ ನಿರ್ಣಯವನ್ನು, ವಿರೋಧದ ಮಧ್ಯೆ ಇಂದು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ಕೇಂದ್ರ ಜಾರಿಗೆ ತಂದ ಜಿ ರಾಮ್ ಜಿ ಕಾಯ್ದೆ ವಿರುದ್ಧವೇ ನಿರ್ಣಯ ಮಂಡಿಸಲು ಸರ್ಕಾರ ವಿಶೇಷ ಅಧಿವೇಶನ ಕರೆದಿತ್ತು. ಮನ್ರೇಗಾ ಪರವಾಗಿ, ವಿಬಿ ಜಿ ರಾಮ್‌ ಜಿ ವಿರುದ್ಧವಾಗಿ ಸಿಎಂ ಸಿದ್ದರಾಮಯ್ಯ ಸದನದಲ್ಲಿ ನಿನ್ನೆ ನಿರ್ಣಯ ಮಂಡಿಸಿದ್ದರು. ಈ ನಿರ್ಣಯವನ್ನು ಸ್ಪೀಕರ್ ಮತಕ್ಕೆ ಹಾಕಿದ್ದರು. ಧ್ವನಿ ಮತದ ಮೂಲಕ ಖಂಡನಾ ನಿರ್ಣಯ ಅಂಗೀಕಾರವಾಗಿದೆ ಎಂದು ಸ್ಪೀಕರ್ U.T.ಖಾದರ್​ ಪ್ರಕಟಿಸಿದರು. ನಿರ್ಣಯ ಅಂಗೀಕಾರವಾದ ಬಳಿಕ ಅನಿರ್ದಿಷ್ಟಾವಧಿಗೆ ಕಲಾಪವನ್ನು ಮುಂದೂಡಲಾಯಿತು.

ಕೇಂದ್ರ ಸರ್ಕಾರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ವಿಧಾನಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ನರೇಗಾ ಯೋಜನೆಯನ್ನು ಎಲ್.ಕೆ.ಅಡ್ವಾಣಿ ಹೊಗಳಿದ್ದರು. ಈಗ ತಂದಿರುವ ವಿಬಿ ಜಿ ರಾಮ್ ಜಿ ಕಾಯ್ದೆಯಲ್ಲಿ ಏನಿದೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ʼವಿಬಿಜಿ ರಾಮ್ ಜಿ ಕಾಯ್ದೆʼ ಭ್ರಷ್ಟಾಚಾರಿ ಕಾಂಗ್ರೆಸ್‌ ಮಧ್ಯವರ್ತಿಗಳಿಗೆ ತೊಡಕು: ಜೋಶಿ ತಿರುಗೇಟು

ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ ಬಿಜೆಪಿಯವರಿಗೆ ಗೊತ್ತಿಲ್ಲ. ಕಾರ್ಮಿಕರ ಬದುಕಿನ ಬಗ್ಗೆ ಲೋಕಸಭೆಯಲ್ಲಿ ಬಿಜೆಪಿ ಸದಸ್ಯ ವರುಣ್ ಗಾಂಧಿ ಪ್ರಶ್ನಿಸಿದ್ದಾರೆ. ಆಗ ಕೇಂದ್ರ ಸರ್ಕಾರ ಪಾದರ್ಶಕವಾಗಿದೆ ಎಂದು ಉತ್ತರಿಸಿದೆ. ಆದರೆ ಈಗ ಮನ್​ರೇಗಾ ಕಾಯ್ದೆಯನ್ನೇ ಬದಲಾಯಿಸಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ಮಾಡಿದ್ದಾರೆ.

ಸರ್ಕಾರ ತಂದಿರುವ ನಿರ್ಣಯ ಅಕ್ರಮ ಎಂದ ಆರ್.ಅಶೋಕ್

ಇನ್ನು ವಿಧಾನಸೌಧದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ವಿಧಾನಸಭೆಯಲ್ಲಿ ದೌರ್ಜನ್ಯ ಮಾಡಿ ನಿರ್ಣಯ ತಂದಿದ್ದಾರೆ. ಸರ್ಕಾರ ತಂದಿರುವ ನಿರ್ಣಯ ಅಕ್ರಮ. 5 ಗಂಟೆಗಳ ಮೇಲೆ ಚರ್ಚೆ ಆಗಬಾರದೆಂದು ನಿಯಮವಿದೆ, ಏಳು ದಿನ ಮೊದಲೇ ನೋಟಿಸ್ ಕೊಟ್ಟಿಲ್ಲ. ಸ್ಪೀಕರ್ ನಡೆ ಸರಿ ಇಲ್ಲ ಎಂದು  ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೇಂದ್ರದ ವಿರುದ್ಧ ಸುಳ್ಳು ಜಾಹೀರಾತು ಆರೋಪ: ಸಚಿವ ಪ್ರಿಯಾಂಕ್​​ ಖರ್ಗೆ ವಿರುದ್ಧ ಮಂಡ್ಯ ಬಿಜೆಪಿ ದೂರು

ಜಿ ರಾಮ್ ಜಿ ಯೋಜನೆ ಪಾರದರ್ಶಕವಾಗಿದೆ. ಕಮಿಷನ್ ಹೊಡೆಯಲು ಆಗಲ್ಲ, ಕೇಂದ್ರದ ನಿಗಾ ಇರುತ್ತೆ. BJB-ಜೆಡಿಎಸ್ ಒಟ್ಟಾಗಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಿದೆ. 40-50 ಸಾವಿರ ಕೋಟಿ ರೂ ಹಣವನ್ನು ಲೂಟಿ ಮಾಡಿದ್ದಾರೆ. ಅಬಕಾರಿ ಇಲಾಖೆ ಲೂಟಿ, ಹಗರಣ ಬಯಲಿಗೆಳೆದಿದ್ದೇವೆ. ತನಿಖೆ ಆಗಬೇಕು, ಅಬಕಾರಿ ಮಂತ್ರಿ ರಾಜೀನಾಮೆ ಕೊಡಬೇಕು. ನಮ್ಮ ಧರಣಿ ನಿಲ್ಲಲ್ಲ, ರಾಜ್ಯವ್ಯಾಪಿ ಹೋರಾಟ ಮಾಡುತ್ತೇವೆ ಎಂದು ಆರ್.ಅಶೋಕ್ ಹೇಳಿದ್ದಾರೆ.

ಅರವಿಂದ ಬೆಲ್ಲದ್ ಹೇಳಿದಿಷ್ಟು 

ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಮಾತನಾಡಿ, ವಿಬಿ ಜಿ ರಾಮ್‌ ಜಿ ಯೋಜನೆಗೆ ಕೇಂದ್ರ ಸರ್ಕಾರ ಹಣವನ್ನು ಕೊಡಬೇಕು ಎನ್ನುವುದು ಕಾಂಗ್ರೆಸ್ ಟೀಕೆ. ವಾಜಪೇಯಿ ಸರ್ವಶಿಕ್ಷಾ ಅಭಿಯಾನ‌ ತಂದಿದ್ದರು. ನಂತರ ಯುಪಿಎ ಸರ್ಕಾರ ಆ ಯೋಜನೆಗೆ 50-50 ಅನುಪಾತ ಜಾರಿಗೆ ತಂದರು. ಯುಪಿಎ ಅವಧಿಯಲ್ಲಿಯೂ ಕೇಂದ್ರದ ಪಾಲನ್ನು ಕಡಿಮೆ ಮಾಡಿಕೊಳ್ಳುತ್ತಾ ಬಂದರು. ಕಾಂಗ್ರೆಸ್ ಸಹ ಹೊಸ ಕಾನೂನು ಜಾರಿ ಮಾಡಲು ಅನುದಾನ ಕಡಿಮೆ ಮಾಡಿತು. ಮನ್ರೇಗಾದಲ್ಲಿ ಲೂಟಿ ಹೊಡೆಯುತ್ತಿದ್ದರೆಂದು ಹಳ್ಳಿಯ ಜನರು ಹೇಳುತ್ತಾರೆ. ವೋಟ್ ಚೋರಿ ಎನ್ನುವ ಅಭಿಯಾನ ಮಾಡಿದರು. ಈಗ ಇದನ್ನು ಆರಂಭಿಸಿದ್ದಾರೆ, ಇದರಲ್ಲೂ ಮುಖಭಂಗ ಅನುಭವಿಸುತ್ತಾರೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

T20 World Cup 2026: ಟಿ20 ವಿಶ್ವಕಪ್ ಆಡುವ ಸಂಜು ಸ್ಯಾಮ್ಸನ್ ಕನಸು ಭಗ್ನ – Kannada News | T20 World Cup: Ishan Kishan Replaces Sanju Samson in India’s Playing XI Opener Slot

ಅಭ್ಯಾಸ ಪಂದ್ಯದಲ್ಲಿ ಆಡುವ ಅವಕಾಶದಿಂದ ವಂಚಿತರಾಗಿರುವ ಸಂಜುಗೆ ಟಿ20 ವಿಶ್ವಕಪ್‌ನಲ್ಲಿಯೂ ಆಡುವ ಹನ್ನೊಂದರ ಪಟ್ಟಿಯಲ್ಲಿ ಅವಕಾಶ ಸಿಗುವುದಿಲ್ಲ. ಅವರ ಬದಲಿಗೆ ಇಶಾನ್ ಕಿಶನ್ ಇನ್ನಿಂಗ್ಸ್ ಪ್ರಾರಂಭಿಸಿದರೆ, ತಿಲಕ್ ವರ್ಮಾ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಆರಂಭಿಕನಾಗಿ ಮಾತ್ರವಲ್ಲದೆ ಕಿಶನ್ ವಿಕೆಟ್​ಕೀಪಿಂಗ್ ಕೂಡ ಮಾಡುವುದರಿಂದ ಸಂಜುಗೆ ಈ ಜವಾಬ್ದಾರಿಯೂ ಸಿಗುವುದಿಲ್ಲ.

Source link

Viral News: ಮಾತು ಬಿಟ್ಟಿದ್ದಕ್ಕೆ ಪ್ರಿಯಕರನನ್ನೇ ಕೊಂದ ಯುವತಿ! – Kannada News | 22 year old girl killed boyfriend after he ignored her

ಬಿಲಾಸ್ಪುರ, ಫೆಬ್ರವರಿ 4: ಅವರಿಬ್ಬರೂ ಕೆಲವು ವರ್ಷಗಳಿಂದ ಪ್ರೀತಿ (Love) ಮಾಡುತ್ತಿದ್ದರು. ಆದರೆ, ಇತ್ತೀಚೆಗೆ ಏನು ಸಮಸ್ಯೆಯಾಗಿತ್ತೋ ಗೊತ್ತಿಲ್ಲ; ಯುವಕ ತನ್ನ ಪ್ರೇಯಸಿಯ ನಂಬರ್ ಬ್ಲಾಕ್ ಮಾಡಿದ್ದ. ಆಕೆ ಯಾವ ನಂಬರ್​​ನಿಂದ ಆತನನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಆತ ಸರಿಯಾಗಿ ಉತ್ತರಿಸುತ್ತಿರಲಿಲ್ಲ. ತಾನು ಪ್ರೀತಿಸುವ ಹುಡುಗ ತನ್ನೊಂದಿಗೆ ಮಾತು ಬಿಟ್ಟಿದ್ದರಿಂದ ತೀವ್ರ ಕೋಪಗೊಂಡಿದ್ದ 22 ವರ್ಷದ ಯುವತಿ ಆತನ ಜೀವವನ್ನೇ ತೆಗೆದಿದ್ದಾಳೆ. ಛತ್ತೀಸ್‌ಗಢದ ಬಿಲಾಸ್ಪುರ ನಗರದಲ್ಲಿ ಈ ಘಟನೆ ನಡೆದಿದೆ.

ಮಂಗಳವಾರ ಬೆಳಿಗ್ಗೆ 25 ವರ್ಷದ ಪ್ರಸಾದ್ ಸೂರ್ಯವಂಶಿ ಎಂಬುವವರ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ. ಆರೋಪಿ ಯುವತಿಯನ್ನು ಜಿಲ್ಲೆಯ ಸಿಪತ್ ಪ್ರದೇಶದ ಝಲ್ಮಲಾ ಗ್ರಾಮದ ರೋಶ್ನಿ ಸೂರ್ಯವಂಶಿ ಎಂದು ಗುರುತಿಸಲಾಗಿದೆ. ಪೊಲೀಸರ ತನಿಖೆಯ ಪ್ರಕಾರ, ರತನ್‌ಪುರ ಪ್ರದೇಶದ ಕರ್ರಾ ಗ್ರಾಮದ ನಿವಾಸಿಯಾದ ಪ್ರಸಾದ್ ಇಲ್ಲಿನ ಮಂಗ್ಲಾ ಚೌಕ್ ಬಳಿಯ ರೆಸ್ಟೋರೆಂಟ್‌ನಲ್ಲಿ ವೇಟರ್ ಆಗಿ ಕೆಲಸ ಮಾಡುತ್ತಿದ್ದ. ಆತ ಶುಭಂ ವಿಹಾರ್‌ನಲ್ಲಿ ಬಾಡಿಗೆ ಮನೆಯಲ್ಲಿ ಇತರ ಇಬ್ಬರೊಂದಿಗೆ ವಾಸಿಸುತ್ತಿದ್ದ.

ಇದನ್ನೂ ಓದಿ: ಒಬ್ಬಳ ಮೇಲೆ ಇಬ್ಬರಿಗೆ ಲವ್​: ನೇಪಾಳಿ ಯುವತಿಗಾಗಿ ನಡೆದ ಗಲಾಟೆಯಲ್ಲಿ ನಡೆದಿದ್ದು ರಕ್ತಪಾತ!

ಕೆಲವು ಸಮಯದ ಹಿಂದೆ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ರೋಶ್ನಿಯೊಂದಿಗೆ ಇನ್‌ಸ್ಟಾಗ್ರಾಮ್ ಮೂಲಕ ಸ್ನೇಹ ಬೆಳೆಸಿದ್ದ. ಇಬ್ಬರೂ ಆಗಾಗ ಭೇಟಿಯಾಗಲು ಪ್ರಾರಂಭಿಸಿದ್ದರು. ಬಳಿಕ ಇಬ್ಬರ ನಡುವೆ ಪ್ರೀತಿ ಮೊಳೆತಿತ್ತು. ಆದರೆ ಕೆಲವು ದಿನಗಳ ಹಿಂದೆ, ಪ್ರಸಾದ್ ರೋಶ್ನಿಯ ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದ. ಇನ್‌ಸ್ಟಾಗ್ರಾಮ್‌ನಲ್ಲಿ ಕೂಡ ಆಕೆಯ ಮೆಸೇಜ್​ಗೆ ಉತ್ತರ ನೀಡುತ್ತಿರಲಿಲ್ಲ.

ಇದನ್ನೂ ಓದಿ: ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು 6 ವರ್ಷದ ಮಗಳನ್ನೇ ಕೊಂದ ಅಪ್ಪ!

ಅವನು ಇನ್ನೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿದ ರೋಶ್ನಿ ಮಂಗಳವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಅವನ ಮನೆಗೆ ಹೋದಳು. ನನ್ನ ನಂಬರ್ ಏಕೆ ಬ್ಲಾಕ್ ಮಾಡಿದ್ದೀಯ? ಎಂದು ಕೇಳಿದಾಗ ಇಬ್ಬರ ನಡುವೆ ಜಗಳವಾಯಿತು. ಈ ವೇಳೆ ಗಲಾಟೆ ನಡೆದಿದ್ದು, ತರಕಾರಿ ಕತ್ತರಿಸುವ ಚಾಕುವನ್ನು ತೆಗೆದುಕೊಂಡ ರೋಶ್ನಿ ಆತನ ಎದೆಗೆ ಇರಿದಿದ್ದಾಳೆ.

ಈ ಘಟನೆ ನಡೆದಾಗ ಪ್ರಸಾದ್ ಜೊತೆಗಿದ್ದ ರೂಮ್‌ಮೇಟ್‌ಗಳು ಕೂಡ ಅಲ್ಲಿದ್ದರು. ಆಸ್ಪತ್ರೆಗೆ ದಾಖಲಿಸುವ ಮೊದಲೇ ಆತ ಮೃತಪಟ್ಟಿದ್ದ. ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಆಧಾರದ ಮೇಲೆ ರೋಶ್ನಿಯನ್ನು ಬಂಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ – Kannada News | Karnataka Council Chairman Basavaraj Horatti Suspends BJP MLC CT Ravi

ಬೆಂಗಳೂರು, (ಫೆಬ್ರವರಿ 04): ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಈ ದಿನದ ಮಟ್ಟಿಗೆ ಬಿಜೆಪಿ ಸದಸ್ಯ ಸಿ.ಟಿ.ರವಿಯವರನ್ನು ಅಮಾನತು ಮಾಡಿದ್ದಾರೆ. ರಾತ್ರಿ 8 ಗಂಟೆಯೊಳಗೆ ಸಿ.ಟಿ.ರವಿ ಸದನಕ್ಕೆ ಕರೆತರುವಂತೆ ವಿಪಕ್ಷ ನಾಯಕರು, ಪರಿಷತ್​ನ ವಿಪಕ್ಷ ಮುಖ್ಯ ಸಚೇತಕರಿಗೆ ಹೇಳಿದ್ದೆ. ಆದ್ರೆ, ಬಿಜೆಪಿ ಸದಸ್ಯ ಸಿ.ಟಿ.ರವಿ ಸಭಾಪತಿ ಆದೇಶಕ್ಕೆ ಗೌರವ ನೀಡಿರುವುದಿಲ್ಲ. ಹೀಗಾಗಿ ಸಿ.ಟಿ.ರವಿಯನ್ನು ಈ ದಿನದ ಮಟ್ಟಿಗೆ ಅಮಾನತು ಮಾಡಲಾಗಿದೆ. ಇದರಿಂದ ಪರಿಷತ್​​ ಸದಸ್ಯ ಸಿ.ಟಿ.ರವಿ ಬಂದರೆ ಹೊರಗೆ ನಿಲ್ಲಿಸಿ. ಯಾವ ಕಡೆಯಿಂದಲೂ ಅವರು ಒಳಗೆ ಬರತಕ್ಕದ್ದಲ್ಲ. ಎಲ್ಲಾ ಬಾಗಿಲಲ್ಲಿ ಇರುವವರಿಗೆ ಹೇಳಿ ಎಂದು ಸಭಾಪತಿ ಬಸವರಾಜ್ ಹೊರಟ್ಟಿ ಅವರು ಪರಿಷತ್​​ನ ಚೀಫ್ ಮಾರ್ಷಲ್​​ಗೆ ಖಡಕ್ ಸೂಚನೆ ನೀಡಿದ್ದಾರೆ.

ಮೋದಿಗೆ ದೇಶದ್ರೋಹಿ ಎಂದಿದ್ದ ಕಾಂಗ್ರೆಸ್ ಸದಸ್ಯ ನಜೀರ್ ಅಹ್ಮದ್ ಅವರಿಗೆ ಪಾಕಿಸ್ತಾನದ ನಾಲಿಗೆ ಎಂದು ಸಿಟಿ ರವಿಯವರು ಸದನದಲ್ಲೇ ಹೇಳಿದ್ದು, ಇದು ಭಾರೀ ಆಕ್ರೋಶಕ್ಕೆ ಕಾರಣವಾಯ್ತು. ಕೂಡಲೇ ಸಿಟಿ ರವಿ ಕ್ಷಮೆಯಾಚನೆ ಮಾಡಬೇಕೆಂದು ಕಾಂಗ್ರೆಸ ಸದಸ್ಯರು ಪಟ್ಟು ಹಿಡಿದಿದ್ದರು. ಈ ಸಂಬಂಧ ಸಭಾಪತಿ ಹೊರಟ್ಟಿ ಕೂಡಲೇ ಸದನಕ್ಕೆ ಹಾಜರಾಗಬೇಕೆಂದು ಸೂಚಿಸಿದ್ದರು. ಆದರೂ ಸಿಟಿ ರವಿ ಬರದಿದ್ದರಿಂದ ಸಭಾಪತಿ ಈ ಕ್ರಮಕೈಗೊಂಡಿದ್ದಾರೆ.

Source link

IND vs SA: 6,6,6,6,6,6,6.. ಅಫ್ರಿಕಾ ವಿರುದ್ಧ ಅಬ್ಬರಿಸಿದ ಇಶಾನ್ ಕಿಶನ್

Source link

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಅಂತ್ಯ; ಮುಖ್ಯಮಂತ್ರಿಯಾಗಿ ಖೇಮ್‌ಚಂದ್ ಪ್ರಮಾಣವಚನ ಸ್ವೀಕಾರ – Kannada News | BJP leader Yumnam Khemchand Singh takes oath as Manipur Chief Minister after Presidents rule ends

ನವದೆಹಲಿ, ಫೆಬ್ರವರಿ 4: ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಡಳಿತ ಅಂತ್ಯಗೊಂಡಿದೆ. 62 ವರ್ಷದ ಯುಮ್ನಮ್ ಖೇಮ್‌ಚಂದ್ ಸಿಂಗ್ ಅವರು ಜನಾಂಗೀಯ ಸಂಘರ್ಷ ಪೀಡಿತ ಈಶಾನ್ಯ ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಯುಮ್ನಮ್ ಖೇಮ್‌ಚಂದ್ ಅವರನ್ನು ಮಣಿಪುರದಲ್ಲಿ (Manipur) ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಮೈಟೈ ಸಮುದಾಯಕ್ಕೆ ಸೇರಿದ ಖೇಮ್‌ಚಂದ್ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿದ ನಂತರ ಪ್ರಮಾಣವಚನ ಸ್ವೀಕರಿಸಿದರು.

ಯುಮ್ನಮ್ ಖೇಮ್‌ಚಂದ್ ಅವರ ಜೊತೆ ಇಬ್ಬರು ಉಪಮುಖ್ಯಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದ್ದಾರೆ. ಒಬ್ಬರು ಕುಕಿ-ಜೋ ಸಮುದಾಯದ ಕುಕಿ-ಝೋ ಮತ್ತು ಇನ್ನೊಬ್ಬರು ನಾಗಾ ಸಮುದಾಯದ ಲೋಸಿ ದಿಖೋ.

ಇದಕ್ಕೂ ಮೊದಲು, ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರಪತಿ ದ್ರೌಪದಿ ಮುರ್ಮು ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿದ್ದಾರೆ ಎಂದು ಘೋಷಿಸುವ ಅಧಿಸೂಚನೆಯನ್ನು ಹೊರಡಿಸಿತು. ಇದು ಮಣಿಪುರ ರಾಜ್ಯದಲ್ಲಿ ಹೊಸ ಚುನಾಯಿತ ಸರ್ಕಾರ ರಚನೆಗೆ ದಾರಿ ಮಾಡಿಕೊಟ್ಟಿತು. 2025ರ ಫೆಬ್ರವರಿ 9ರಂದು ಎನ್. ಬಿರೇನ್ ಸಿಂಗ್ ರಾಜೀನಾಮೆ ನೀಡಿದಾಗಿನಿಂದ ಸಿಎಂ ಹುದ್ದೆ ಖಾಲಿಯಾಗಿತ್ತು. ಮಣಿಪುರ ದೀರ್ಘಕಾಲದ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದರಿಂದ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಯಿತು. 1 ವರ್ಷದ ಬಳಿಕ ಇದೀಗ ನೂತನ ಸರ್ಕಾರ ರಚನೆಯಾಗಿದೆ.

ಇದನ್ನೂ ಓದಿ: ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಯುಮ್ನಮ್ ಖೇಮ್ಚಂದ್ ಸಿಂಗ್ ಆಯ್ಕೆ

60 ಸದಸ್ಯರ ಮಣಿಪುರ ವಿಧಾನಸಭೆಯಲ್ಲಿ, ಬಿಜೆಪಿ ಪ್ರಸ್ತುತ 37 ಶಾಸಕರನ್ನು ಹೊಂದಿದೆ. 2022ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ 32 ಅಭ್ಯರ್ಥಿಗಳು ಗೆದ್ದರು, ಜೆಡಿಯು 6 ಸ್ಥಾನಗಳನ್ನು ಗೆದ್ದಿತ್ತು. ಅವರಲ್ಲಿ 5 ಮಂದಿ ನಂತರ ಬಿಜೆಪಿಗೆ ಪಕ್ಷಾಂತರಗೊಂಡರು. ಇದಲ್ಲದೆ, ಸೇವೆ ಸಲ್ಲಿಸುತ್ತಿರುವ ಶಾಸಕರೊಬ್ಬರು ನಿಧನರಾದ ನಂತರ ಒಂದು ಸ್ಥಾನ ಖಾಲಿಯಾಯಿತು.

ಖೇಮ್‌ಚಂದ್ ಸಿಂಗ್ ಎರಡು ಬಾರಿ ಶಾಸಕರಾಗಿದ್ದು, 2017 ಮತ್ತು 2022ರಲ್ಲಿ ಸಿಂಗ್ಜಮೇಯಿ ವಿಧಾನಸಭಾ ಸ್ಥಾನದಿಂದ ಆಯ್ಕೆಯಾಗಿದ್ದಾರೆ. ಮಾರ್ಚ್ 2017ರಲ್ಲಿ ಅವರು ಮಣಿಪುರ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆಯಾದರು. ಅವರು 5 ವರ್ಷಗಳ ಅವಧಿಗೆ ಆ ಹುದ್ದೆಯಲ್ಲಿ ಸೇವೆ ಸಲ್ಲಿಸಿದರು. 2022ರ ವಿಧಾನಸಭಾ ಚುನಾವಣೆಯ ನಂತರ ಅವರು ಬಿರೇನ್ ಸಿಂಗ್ ಸಂಪುಟದಲ್ಲಿ ಸಚಿವರಾದರು. ನಂತರ ರಾಷ್ಟ್ರಪತಿ ಆಳ್ವಿಕೆ ಹೇರುವವರೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್, ಪುರಸಭೆ ಆಡಳಿತ, ವಸತಿ ಅಭಿವೃದ್ಧಿ ಮತ್ತು ಶಿಕ್ಷಣ ಸೇರಿದಂತೆ ಹಲವಾರು ಖಾತೆಗಳನ್ನು ನಿರ್ವಹಿಸಿದರು.

ಇದನ್ನೂ ಓದಿ: ಫೆಬ್ರವರಿ 7-8ರಂದು ಮಲೇಷ್ಯಾಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

“ಮಣಿಪುರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಯುಮ್ನಮ್ ಖೇಮ್‌ಚಂದ್ ಸಿಂಗ್ ಅವರಿಗೆ ಅಭಿನಂದನೆಗಳು. ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ನೆಮ್ಚಾ ಕಿಪ್ಗೆನ್ ಮತ್ತು ಲೋಸಿ ದಿಖೋ ಅವರನ್ನು ಮತ್ತು ಮಣಿಪುರ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೊಂಥೌಜಮ್ ಗೋವಿಂದಾಸ್ ಸಿಂಗ್ ಮತ್ತು ಖುರೈಜಮ್ ಲೋಕೆನ್ ಸಿಂಗ್ ಅವರನ್ನು ನಾನು ಅಭಿನಂದಿಸುತ್ತೇನೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:07 pm, Wed, 4 February 26

Source link

ಸಂಪಾಯಿತಲೇ ಪರಾಕ್: ಮೈಲಾರಲಿಂಗ ಕಾರ್ಣಿಕ ನುಡಿಯನ್ನ ಭಕ್ತರೇ ವಿಶ್ಲೇಷಣೆ ಮಾಡಲಿ ಎಂದ ಡಿಸಿ – Kannada News | Vijayangara: Mailara Lingeshwara Karnika: Sampayitale Parak; What did DC say

ಬಳ್ಳಾರಿ, ಫೆಬ್ರವರಿ 04: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಮೈಲಾರಲಿಂಗೇಶ್ವರ ದೇವರ ಕಾರ್ಣಿಕ ನುಡಿ ಹೊರಬಿದ್ದಿದೆ. ‘ಸಂಪಾಯಿತಲೇ ಪರಾಕ್’ ಎಂದು ಕಾರ್ಣಿಕ ಗೊರವಯ್ಯ ಭವಿಷ್ಯ ನುಡಿದಿದ್ದಾರೆ. ಸದ್ಯ ಈ ಕಾರ್ಣಿಕ ನುಡಿಯನ್ನು ರಾಜ್ಯ, ದೇಶದಲ್ಲಿ ಉತ್ತಮ ಮಳೆ-ಬೆಳೆ ಎಂದು ವಿಶ್ಲೇಷಣೆ ಮಾಡಲಾಗಿದೆ. ಇನ್ನು ಈ ಬಗ್ಗೆ ವಿಜಯನಗರ ಡಿಸಿ ಕವಿತಾ ಮನ್ನೀಕೆರಿ ಮಾತನಾಡಿದ್ದು, ಕಾರ್ಣಿಕ ನುಡಿಯನ್ನು ಭಕ್ತರೇ ವಿಶ್ಲೇಷಣೆ ಮಾಡಲಿ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ – Kannada News | Jogi movie producer Ashwini Ram Prasad talks about new film Gharga

‘ಜೋಗಿ’ ಸಿನಿಮಾದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರು ಈಗ ‘ಘಾರ್ಗ’ (Gharga) ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅವರ ಪುತ್ರ ಅರುಣ್ ರಾಮ್ ಪ್ರಸಾದ್ ಅವರು ಈ ಚಿತ್ರಕ್ಕೆ ಹೀರೋ ಆಗಿದ್ದಾರೆ. ಶಶಿಧರ್ ಅವರು ನಿರ್ದೇಶನ ಮಾಡಿದ್ದಾರೆ. ‘ಎಲ್ಲ ಕಡೆಗಳಲ್ಲೂ ಜೋಗಿ ಸಿನಿಮಾಗೆ ಪ್ರಚಾರ ಮಾಡಿದ್ದೆ. ಎಲ್ಲ ಊರುಗಳಲ್ಲಿ ಪೋಸ್ಟರ್ ಹಾಕಿಸಿದ್ದೆ. ಈಗ ಆ ಟ್ರೆಂಡ್ ಇಲ್ಲ. ಎಲ್ಲವೂ ಡಿಜಿಟಲ್ ಆಗಿದೆ. ಈ ಸಿನಿಮಾದ ಕಥೆ ಕೇಳಿದಾಗಲೇ ನನಗೆ ಇಷ್ಟ ಆಯಿತು. ಕಂಟೆಂಟ್ ಏನೇ ಆದರೂ ಮೊಬೈಲ್ ಮೂಲಕ ಎಲ್ಲ ಕಡೆಗಳಲ್ಲಿ ವೈರಲ್ ಆಗುತ್ತದೆ. ನಿರ್ದೇಶಕರಿಗೆ ಮತ್ತು ಮಗನಿಗೆ ಅದರ ಎಲ್ಲ ಜವಾಬ್ದಾರಿ ಕೊಟ್ಟಿದ್ದೇನೆ. ಯೂಟ್ಯೂಬ್ ಮೂಲಕ ಚೆನ್ನಾಗಿ ಪ್ರಚಾರ ಆಗುತ್ತಿದೆ’ ಎಂದು ಅಶ್ವಿನಿ ರಾಮ್ ಪ್ರಸಾದ್ (Ashwini Ram Prasad) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version