Headlines

‘ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ’; ಕಾಕ್ರೋಚ್ ವಿವಾದಕ್ಕೆ ಸಿಜೆಐ ಸೂರ್ಯಕಾಂತ್ ಬೇಸರ – Kannada News | My statements Misused With Malicious Intent Chief Justice Surya Kant On Cockroach Row

ನವದೆಹಲಿ:, ಆಗಸ್ಟ್ 14: “ದೇಶದ ಯುವಜನರನ್ನು ಹಾದಿತಪ್ಪಿಸುವ ದುರುದ್ದೇಶದಿಂದ ನನ್ನ ಹೇಳಿಕೆಗಳನ್ನು ತಪ್ಪಾಗಿ ಬಿಂಬಿಸಲಾಗಿದೆ ಮತ್ತು ದುರ್ಬಳಕೆ ಮಾಡಿಕೊಳ್ಳಲಾಗಿದೆ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ (CJI Surya Kant) ಹೇಳಿದ್ದಾರೆ. ಮೇ 15ರಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವೊಂದರ ವಿಚಾರಣೆ ನಡೆಸುವಾಗ ಸಿಜೆಐ, ನಕಲಿ ಪದವಿಗಳನ್ನು ಹೊಂದಿರುವ ಕೆಲವು ವ್ಯಕ್ತಿಗಳನ್ನು ಜಿರಳೆಗಳಿಗೆ ಹೋಲಿಸಿದ್ದರು. ಅಂತಹ ವ್ಯಕ್ತಿಗಳು ವ್ಯವಸ್ಥೆಯ ವಿರುದ್ಧ ವಾಗ್ದಾಳಿ ನಡೆಸಲು ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಆರ್‌ಟಿಐ (RTI) ಕಾರ್ಯಕರ್ತರಾಗಿ ಹೊರಹೊಮ್ಮುತ್ತಾರೆ ಎಂದು ಅವರು ಹೇಳಿದ್ದರು….

Read More

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಎಚ್ಚರಿಕೆ ನೀಡಿ ಎಸಿಪಿ, ಇನ್ಸ್​​​​​ಪೆಕ್ಟರ್ ವಿರುದ್ಧದ​​​​​​ ತನಿಖೆ ಕ್ಲೋಸ್ – Kannada News | Bengaluru Chinnaswamy Stadium Stampede Case: department enquiry Stopped Agaunst ACP And inspector

ಬೆಂಗಳೂರು, (ಆಗಸ್ಟ್ 14): ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರ ವಿರುದ್ಧ ಜಂಟಿ ಇಲಾಖಾ ವಿಚಾರಣೆ ಪೂರ್ಣಗೊಂಡಿದ್ದು, ಎಚ್ಚರಿಕೆ ನೀಡಿ ಜಂಟಿ ಇಲಾಖೆ ವಿಚಾರಣೆ ಮುಕ್ತಾಯಗೊಳಿಸಲಾಗಿದೆ. ಎಸಿಪಿ ಬಾಲಕೃಷ್ಣ, ಇನ್ಸ್ಪೆಕ್ಟರ್ ಗಿರೀಶ್ ವಿರುದ್ಧದ ಇಲಾಖೆ ವಿಚಾರಣೆ ಅಂತ್ಯವಾಗಿದ್ದು, ಇಬ್ಬರು ಪೊಲೀಸರ ಲಿಖಿತ ಸಮಜಾಯಿಷಿಗೆ ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಸಮಜಾಯಿಷಿ ಒಪ್ಪಿ ಎಚ್ಚರಿಕೆ ನೀಡಿ ವಿಚಾರಣೆ ಮುಕ್ತಾಯಗೊಳಿಸಲಾಗಿದೆ. ಸೇವಾವಧಿಯಲ್ಲಿ ಮತ್ತೆ ಇಂತ ಘಟನೆ ಮರುಕಳಿಸದಂತೆ ಎಚ್ಚರಿಕೆ ಜೊತೆಗೆ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಖುನ್ಹಾ…

Read More

ಕೆಪಿಸಿಯಲ್ಲಿ ನೌಕರರ ನೇಮಕಾತಿಯಲ್ಲಿ ಅಕ್ರಮ: 12 ಸಾವಿರ ಸಂಬಳದ ಕೆಲಸಕ್ಕೆ 35 ಸಾವಿರ ಲಂಚಕ್ಕೆ ಬೇಡಿಕೆ – Kannada News | KPC Recruitment Scam Alleged: 35,000 Bribe Demanded for a Job Paying 12,000 Salary

ಉಡುಪಿ, ಆಗಸ್ಟ್​​ 14: ಹೊಸಂಗಡಿಯ ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್‌ (KPCL) ಸಂಸ್ಥೆಯಲ್ಲಿ ಹೊರಗುತ್ತಿಗೆ ನೌಕರರ ನೇಮಕಾತಿ ಹೆಸರಿನಲ್ಲಿ ಲಂಚಕ್ಕೆ (Bribe) ಬೇಡಿಕೆ ಇಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ತಿಂಗಳಿಗೆ 12 ಸಾವಿರ ರೂ. ವೇತನದ ಕೆಲಸಕ್ಕೆ 35 ಸಾವಿರ ರೂ. ಮುಂಗಡವಾಗಿ ನೀಡಬೇಕು ಎಂಬ ಆರೋಪ ಕೇಳಿಬಂದಿದೆ. ಲಂಚಕ್ಕೆ ಬೇಡಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆಡಿಯೋ ಸಂಭಾಷಣೆ ಮತ್ತು ಗೂಗಲ್ ಪೇ ಮೂಲಕ ಹಣ ವರ್ಗಾವಣೆಯಾದ ಸ್ಕ್ರೀನ್‌ಶಾಟ್‌ಗಳು ಈ ಆರೋಪಕ್ಕೆ ಪೂರಕವಾಗಿವೆ. ಕೆಪಿಸಿಯಲ್ಲಿ ಹೊರಗುತ್ತಿಗೆ…

Read More

ಅಕೌಂಟ್ ನಲ್ಲಿ 1 ಕೋಟಿ ಬ್ಯಾಲೆನ್ಸ್: ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾಗಿ 7 ದಿನಗಳಾದ್ರೂ ಸಿಗದ ಟೆಕ್ಕಿ ಅದ್ವೈತ್ ಸುಳಿವು – Kannada News | Techie advaith Still missing from 6 days In shivagange hills, Now Police Starts technical evidence

ಬೆಂಗಳೂರು, (ಆಗಸ್ಟ್ 14): ಬೆಂಗಳೂರು ಹೊರವಲಯ ನೆಲಮಂಗಲ (Nelamangala) ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ  (Shivanange Betta Trekking) ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಅದ್ವೈತ್ ಉಪಾಧ್ಯಾಯನಿಗಾಗಿ (Techie Advaith) ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ ಇಂದು ಬ್ರೇಕ್ ಬಿದ್ದಿದೆ. ಕಳೆದ 6 ದಿನಗಳಿಂದ ಎನ್‌ಡಿಆರ್‌ಎಫ್‌ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ), ನೆಲಮಂಗಲ ಟೌನ್‌ ಮತ್ತು ಡಾಬಸ್‌ಪೇಟೆ ಪೊಲೀಸರು, ಅರಣ್ಯ ಸಿಬ್ಬಂದಿ, ಚಿತ್ರದುರ್ಗದ ಸಾಹಸಿ ಜ್ಯೋತಿರಾಜ್‌ ಹಾಗೂ ಸ್ಥಳೀಯರು ಜಂಟಿಯಾಗಿ ಬೆಟ್ಟ, ಕಂದಕ ಮತ್ತು ಕಾಡು ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದರು….

Read More

IND vs SL: ಆಗಸ್ಟ್ 15 ರಂದು ಐತಿಹಾಸಿಕ ಪಂದ್ಯವನ್ನಾಡುತ್ತಿದೆ ಟೀಂ ಇಂಡಿಯಾ – Kannada News | India vs Sri Lanka 1st Test: India’s 600th! Date, Venue, Time and Live Stream

ಒಂದು ತಿಂಗಳ ದೀರ್ಘ ವಿರಾಮದ ನಂತರ ಟೀಂ ಇಂಡಿಯಾ ಮತ್ತೆ ಅಖಾಡಕ್ಕಿಳಿಯುತ್ತಿದೆ. ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ನಾಳೆಯಿಂದ ಅಂದರೆ ಆಗಸ್ಟ್ 15 ರಿಂದ ಆರಂಭವಾಗುತ್ತಿದೆ. ಈ ಟೆಸ್ಟ್ ಪಂದ್ಯ ಟೀಂ ಇಂಡಿಯಾ ಪಾಲಿಗೆ ಐತಿಹಾಸಿಕ ಪಂದ್ಯವಾಗಿದೆ. ಏಕೆಂದರೆ ಟೀಂ ಇಂಡಿಯಾಕ್ಕೆ ಇದು 600ನೇ ಟೆಸ್ಟ್ ಪಂದ್ಯವಾಗಿದೆ. ಟೆಸ್ಟ್ ಇತಿಹಾಸದಲ್ಲಿ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನಾಡಿದ ತಂಡಗಳ ಪಟ್ಟಿಯಲ್ಲಿ ಟೀಂ ಇಂಡಿಯಾ ಕೂಡ ಸ್ಥಾನ ಪಡೆದಿದೆ. ಅಲ್ಲದೆ 600…

Read More

ಮಗಳ ವಯಸ್ಸಿನ ನಟಿ ಜೊತೆ ಗೋವಿಂದ ಸುತ್ತಾಟ; ಕೆಂಡಾಮಂಡಲ ಆದ ಪತ್ನಿ ಸುನೀತಾ – Kannada News | Govinda wife Sunita Ahuja slams him over alleged relationship with Komal Rani

ಒಂದು ಕಾಲದಲ್ಲಿ ಸ್ಟಾರ್ ಹೀರೋ ಆಗಿದ್ದ ನಟ ಗೋವಿಂದ (Govinda) ಹಾಗೂ ಅವರ ಪತ್ನಿ ಸುನೀತಾ ಅಹುಜಾ (Sunita Ahuja) ನಡುವಿನ ವೈಯಕ್ತಿಕ ಸಂಘರ್ಷ ಮತ್ತೊಮ್ಮೆ ಸಾರ್ವಜನಿಕವಾಗಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಇತ್ತೀಚೆಗೆ ನಟಿ ಕೋಮಲ್ ರಾಣಿ (Komal Rani) ಜೊತೆಗೆ ಗೋವಿಂದ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ, ಪತ್ನಿ ಸುನೀತಾ ಅವರು ತಮ್ಮ ಪತಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸುನೀತಾ, ‘ತನ್ನ ಮಗಳ ವಯಸ್ಸಿನ ಹುಡುಗಿಯನ್ನು ಜೊತೆಯಲ್ಲಿ ಕರೆದುಕೊಂಡು ತಿರುಗಾಡಲು…

Read More

ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ ದ್ರೌಪದಿ ಮುರ್ಮು – Kannada News | Operation Sindoor Sent Firm Message To Terrorists President Droupadi Murmu

ನವದೆಹಲಿ, ಆಗಸ್ಟ್ 14: 80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಇಂದು ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu), ಭಯೋತ್ಪಾದಕ ಜಾಲಗಳ ವಿರುದ್ಧ ದಾಳಿ ನಡೆಸುವ ಭಾರತೀಯ ಸಶಸ್ತ್ರ ಪಡೆಗಳ ಸಾಮರ್ಥ್ಯವನ್ನು ‘ಆಪರೇಷನ್ ಸಿಂಧೂರ್’ ಪ್ರದರ್ಶಿಸಿದೆ. ಈ ಕಾರ್ಯಾಚರಣೆ ಭಯೋತ್ಪಾದಕರಿಗೆ ಪ್ರಬಲ ಸಂದೇಶ ರವಾನಿಸಿದೆ ಎಂದು ಹೇಳಿದರು. ಸಿಂಧೂ ನದಿ ನೀರು ಒಪ್ಪಂದದ ಕುರಿತು ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಭಯೋತ್ಪಾದನೆಗೆ ಆಶ್ರಯ ನೀಡುತ್ತಿರುವ ಪಾಕಿಸ್ತಾನ ದೇಶದೊಂದಿಗಿನ ಸಿಂಧೂ ನದಿ ನೀರು…

Read More

ಏಷ್ಯಾಕಪ್ ಜೊತೆಗೆ ಏಷ್ಯನ್ ಗೇಮ್ಸ್​ನಿಂದಲೂ ಹೊರಬಿದ್ದ ಜೆಮಿಮಾ ರೊಡ್ರಿಗಸ್

2026 ರ ಮಹಿಳಾ ಟಿ20 ಏಷ್ಯಾಕಪ್​ಗೆ ಬಿಸಿಸಿಐ ಇಂದು 15 ಸದಸ್ಯರ ಭಾರತ ಮಹಿಳಾ ತಂಡವನ್ನು ಪ್ರಕಟಿಸಿದೆ. ತಂಡದಲ್ಲಿ ನಿರೀಕ್ಷಿತ ಹೆಸರುಗಳೇ ಇದ್ದರೂ ಇಬ್ಬರು ಪ್ರಮುಖ ಆಟಗಾರ್ತಿಯರು ಗಾಯದಿಂದಾಗಿ ಈ ಟೂರ್ನಿಯಲ್ಲಿ ಆಡುತ್ತಿಲ್ಲ. ಅವರಲ್ಲಿ ಒಬ್ಬರು ಅನುಭವಿ ಬ್ಯಾಟರ್ ಜೆಮಿಮಾ ರೊಡ್ರಿಗಸ್ ಹಾಗೂ ಇನ್ನೊಬ್ಬರು ಯುವ ಸ್ಪಿನ್ನ ಆಲ್‌ರೌಂಡರ್ ಶ್ರೇಯಾಂಕ ಪಾಟೀಲ್(PC-PTI). ಶ್ರೇಯಾಂಕ ಪಾಟೀಲ್ ಈ ಟೂರ್ನಿಯಲ್ಲಿ ಆಡುತ್ತಿಲ್ಲ ಎಂಬುದು ಈ ಮೊದಲೇ ವರದಿಯಾಗಿತ್ತು. ಆದರೆ ಜೆಮಿಮಾ ರೊಡ್ರಿಗಸ್ ಆಡದಿರುವುದು ತಂಡಕ್ಕೆ ಕೊಂಚ ಹಿನ್ನಡೆಯನ್ನುಂಟುಮಾಡಿದೆ. ದಿ ಹಂಡ್ರೆಡ್‌ನಲ್ಲಿ…

Read More

“ಇಟಲಿಯೊಂದಿಗೆ ಬಲವಾದ ಸಂಬಂಧವಿದೆ”; ಮೆಲೋನಿ ಕುರಿತ ಕಾಂಗ್ರೆಸ್​​ ಟೀಕೆಗೆ ಕೇಂದ್ರ ಸರ್ಕಾರ ತಿರುಗೇಟು – Kannada News | MEA says We have strong ties with Italy; responds to Congress MP Rahul Gandhis Meloni jibe

ನವದೆಹಲಿ, ಆಗಸ್ಟ್ 14: ರಾಹುಲ್ ಗಾಂಧಿ (Rahul Gandhi) ಸೇರಿದಂತೆ ಕಾಂಗ್ರೆಸ್ ನಾಯಕರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಕುರಿತು ಲೇವಡಿ ಮಾಡಿದ್ದರು. ಇದರ ಬೆನ್ನಲ್ಲೇ ಭಾರತ ಇದಕ್ಕೆ ಪ್ರತಿಕ್ರಿಯಿಸಿದ್ದು, ಭಾರತ ಮತ್ತು ಇಟಲಿಯ ನಡುವಿನ ದ್ವಿಪಕ್ಷೀಯ ಬಾಂಧವ್ಯದಲ್ಲಿ ಪರಸ್ಪರ ಗೌರವ ಮತ್ತು ಅರ್ಥಮಾಡಿಕೊಳ್ಳುವಿಕೆ ಮುಖ್ಯ ಎಂದು ಭಾರತ ಪ್ರತಿಪಾದಿಸಿದೆ. ಹಾಗೇ, ಎರಡೂ ದೇಶಗಳು ಆಳವಾದ ಮತ್ತು ಗಟ್ಟಿಯಾದ ಬಾಂಧವ್ಯವನ್ನು ಹಂಚಿಕೊಂಡಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ರಾಹುಲ್ ಗಾಂಧಿ ವ್ಯಂಗ್ಯ: ವಿದೇಶಾಂಗ ನೀತಿಯನ್ನು ಪ್ರಧಾನಿ ನರೇಂದ್ರ…

Read More

ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಸೆಟ್ ಹಾಕಲು ಅಂದಾಜು 75 ಕೋಟಿ ರೂಪಾಯಿ ಬಜೆಟ್ – Kannada News | Yash Toxic movie Bengaluru Set Budget Rs 75 Crore says Art Director Mohan B Kere

ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಅದ್ದೂರಿಯಾಗಿ ನಿರ್ಮಾಣ ಆಗಿದೆ. ಯಶ್ ನಟನೆಯ ಈ ಚಿತ್ರಕ್ಕೆ ಮೋಹನ್ ಬಿ. ಕೆರೆ ಅವರು ಕಲಾ ನಿರ್ದೇಶನ ಮಾಡಿದ್ದಾರೆ. ತಮಗೆ ಈ ಅವಕಾಶ ಸಿಕ್ಕಿದ್ದಕ್ಕೆ ಅವರು ಖುಷಿಯಾಗಿದ್ದಾರೆ. ಬೆಂಗಳೂರಿನಲ್ಲಿ ಮೋಹನ್ ಬಿ. ಕೆರೆ ಅವರು ‘ಟಾಕ್ಸಿಕ್’ ಚಿತ್ರಕ್ಕಾಗಿ ಹಲವು ಸೆಟ್ ಹಾಕಿದರು. ಆ ಬಗ್ಗೆ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ‘ಈ ಚಿತ್ರಕ್ಕಾಗಿ ಹಲವು ಸೆಟ್ ಹಾಕಿದ್ದೆವು. ನಾನು ಬಿಟ್ಟುಕೊಡಲು ಸಾಧ್ಯವಾಗದ ರಹಸ್ಯಗಳು ಸಾಕಷ್ಟು ಇವೆ. ಸಿನಿಮಾ ಎಂಬುದೇ ಒಂದು ಕುತೂಹಲ….

Read More