Headlines

ಆರ್​ಎಸ್​​ಎಸ್ ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ: ಪ್ರಿಯಾಂಕ್ ಖರ್ಗೆಗೆ ಬಿ.ಎಲ್. ಸಂತೋಷ್ ತಿರುಗೇಟು – Kannada News | RSS Not for Registration: BL Santosh Slams Priyank Kharge at Bengaluru Event

ಬಿ.ಎಲ್. ಸಂತೋಷ್, ಪ್ರಿಯಾಂಕ್ ಖರ್ಗೆ ಬೆಂಗಳೂರು ಆ.15: 80ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆ ಬೆಂಗಳೂರಿನ ಬನ್ನಪ್ಪ ಪಾರ್ಕ್‌ನಲ್ಲಿ ಆಯೋಜಿಸಿದ್ದ ‘ಅಖಂಡ ಭಾರತ ಸಂಕಲ್ಪ ದಿನ’ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಿ, ಆರ್‌ಎಸ್‌ಎಸ್ ನೋಂದಣಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತೀವ್ರ ತಿರುಗೇಟು ನೀಡಿದ್ದಾರೆ. ನಡುವೆ ತಿರಂಗ ಧ್ವಜ ಹಾಗೂ ಕೇಸರಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, ನೂರಾರು ಆರ್‌ಎಸ್‌ಎಸ್…

Read More

ದಿನಭವಿಷ್ಯ: ಇಂದು ಈ ರಾಶಿಯವರು ವಸೂಲಾತಿ ಕೆಲಸದಲ್ಲಿ ಪ್ರವೃತ್ತರಾಗುವರು… – Kannada News | Daily Horoscope for August 15, 2026: Dakshinayana Greeshma season, Shravana Masa shukla Paksha Satursday astrology

ಮೇಷ ರಾಶಿ: ಮನೆಯವರು ನಿಮ್ಮ‌ ಮಾತಿನಿಂದ ಕಟ್ಟಿಹಾಕಬಹುದು. ಉಳಿದೆಲ್ಲ ಸಮಸ್ಯೆಗಿಂತ ಗುರಿಯೇ ನಿಮಗೆ ಮುಖ್ಯವಾಗಿರಲಿ. ಕಲ್ಪಿಸಿಕೊಂಡ ವಿಚಾರವು ಹಾಗೆಯೇ ಆಗಲಿದ್ದು ನಿಮಗೆ ಆಶ್ಚರ್ಯ ಆಗಬಹುದು. ಕೈಲಾದ ಸಹಾಯವನ್ನು ಮಾತ್ರ ಒಪ್ಪಿಕೊಳ್ಳಿ. ಸೌಂದರ್ಯಕ್ಕೆ ಹೆಚ್ಚು ಮಹತ್ತ್ವವನ್ನು ನೀವು ಕೊಡಲಿದ್ದೀರಿ. ಈ ದಿನ ಚೆನ್ನಾಗಿ ಇರಲಿ ಎಂದು ಪ್ರಾರ್ಥನೆ ಮಾಡುವುದೊಂದೇ ನಿಮ್ಮ ಕಡೆಯಿಂದ ಇಂದು ಆಗಬಹುದಾದ ದೊಡ್ಡ ಕೆಲಸ. ವೃಷಭ ರಾಶಿ: ಸಾಲಕ್ಕೆ ಸಂಬಂಧಿಸಿದ ವಿಷಯಗಳು ಇತ್ಯರ್ಥವಾಗಲಿವೆ. ಬಂಧುಗಳ ಭೇಟಿಗಾಗಿ ನೀವು ದೂರಪ್ರಯಾಣ ಮಾಡುವಿರಿ. ನಿಮ್ಮ ಭವಿಷ್ಯದ ಕಲ್ಪನೆಗಳು ವಾಸ್ತವದಿಂದ…

Read More

ಸ್ವಾತಂತ್ರ್ಯ ದಿನಾಚರಣೆ ಮುನ್ನವೇ ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ, ಸ್ಪೋಟಕ ವಿಚಾರ ಬೆಳಕಿಗೆ – Kannada News | Suspected terrorist Arrested In Bengaluru During independence day Celebrating

ಬೆಂಗಳೂರು, (ಆಗಸ್ಟ್ 14): ಕಲಬುರಗಿ ಬೆನ್ನಲ್ಲೇ ಬೆಂಗಳೂರಿನಲ್ಲೂ (Bengaluru) ಇಂದು (ಆಗಸ್ಟ್ 14) ಓರ್ವ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಆಸ್ಫುಲಾ ಮಲ್ಲಿಕ್(25) ಎನ್ನುವಾತನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಂಪನಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಆಸ್ಫುಲಾ ಮಲ್ಲಿಕ್ ಜಿಗಣಿಯಲ್ಲಿ ವಾಸ ಇದ್ದ. ಇನ್ನು ಈತ TTP(ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ) ಸಂಘಟನೆಯ ಶಂಕಿತ ಉಗ್ರ ಎನ್ನಲಾಗಿದ್ದು, ಉಗ್ರ ಸಂಘಟನೆ ಜೊತೆ ದಾಳಿಗೆ ಸಂಚು ರೂಪಿಸಿದ್ದ ಎಂದು ತಿಳಿದುಬಂದಿದೆ. ಪಾಕಿಸ್ತಾನ, ಭಾರತ ಸೇರಿದಂತೆ…

Read More

ಸ್ವಾತಂತ್ರ್ಯ ದಿನಾಚರಣೆಯ ಶೌರ್ಯ ಪ್ರಶಸ್ತಿ ಪ್ರಕಟ; 9 ಯೋಧರಿಗೆ ಕೀರ್ತಿ ಚಕ್ರ ಘೋಷಣೆ – Kannada News | Independence Day 2026: President Droupadi Murmu approves 78 gallantry awards including 9 Kirti Chakra

ನವದೆಹಲಿ, ಆಗಸ್ಟ್ 14: 80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು, ಭಾರತೀಯ ಸಶಸ್ತ್ರ ಪಡೆಗಳು ಮತ್ತು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳ (CAPF) ಸಿಬ್ಬಂದಿಗೆ 13 ಮರಣೋತ್ತರ ಪ್ರಶಸ್ತಿಗಳು ಸೇರಿದಂತೆ ಒಟ್ಟು 78 ಶೌರ್ಯ ಪ್ರಶಸ್ತಿಗಳನ್ನು ನೀಡಲು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅನುಮೋದನೆ ನೀಡಿದ್ದಾರೆ. ಈ ಪ್ರಶಸ್ತಿಗಳಲ್ಲಿ 7 ಮರಣೋತ್ತರ ಸೇರಿದಂತೆ 9 ಕೀರ್ತಿ ಚಕ್ರಗಳು ಸೇರಿವೆ. ಇವುಗಳ ಜೊತೆಗೆ 1 ‘ಬಾರ್ ಟು ಶೌರ್ಯ ಚಕ್ರ’, 1 ಮರಣೋತ್ತರ ಸೇರಿದಂತೆ 19 ಶೌರ್ಯ ಚಕ್ರಗಳು,…

Read More

ಒಟಿಟಿಯಲ್ಲಿ ದಾಖಲೆ ಬರೆದ ಕನ್ನಡ ಸಿನಿಮಾ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ – Kannada News | Kannada Movie Second Case Of Seetharam trending on Amazon Prime Video OTT ft Vijay Raghavendra

ಕನ್ನಡದ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಒಟಿಟಿಯಲ್ಲಿ ಕೂಡ ಕನ್ನಡದ ಸಿನಿಮಾಗಳಿಗೆ ದೊಡ್ಡ ಪ್ರೇಕ್ಷಕರ ವರ್ಗ ಸೃಷ್ಟಿ ಆಗಿದೆ. ಅದಕ್ಕೆ ಲೇಟೆಸ್ಟ್ ಉದಾಹರಣೆ ಎಂದರೆ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ (Second Case of Seetharam) ಸಿನಿಮಾ. ಒಟಿಟಿ ಅಂಗಳದಲ್ಲಿ ಈ ಸಿನಿಮಾ ಅಭೂತಪೂರ್ವ ಯಶಸ್ಸು ಪಡೆದಿದೆ. ‘ಅಮೆಜಾನ್ ಪ್ರೈಮ್ ವಿಡಿಯೋ’ ಮೂಲಕ ವೀಕ್ಷಣೆಗೆ ಲಭ್ಯವಾಗಿರುವ ಈ ಸಿನಿಮಾವನ್ನು ಜನರು ಮುಗಿಬಿದ್ದು ನೋಡುತ್ತಿದ್ದಾರೆ. ವಿಜಯ್ ರಾಘವೇಂದ್ರ (Vijay Raghavendra) ನಟನೆಯ ಈ ಸಿನಿಮಾ ಸದ್ಯಕ್ಕೆ ಒಟಿಟಿಯಲ್ಲಿ…

Read More

ಗಾಂಧಿ ಸರ್​​ನೇಮ್ ಹೆಸರಿಟ್ಟುಕೊಂಡು ಇಷ್ಟು ಕೀಳು ಹೇಳಿಕೆ ನೀಡೋದಾ?; ರಾಹುಲ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ – Kannada News | Cannot even imagine someone with Gandhi surname can make such a shameful remark Minister Rajnath Singh on Rahul Gandhi

ನವದೆಹಲಿ, ಆಗಸ್ಟ್ 14: ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ವಿದೇಶಾಂಗ ನೀತಿಯ ಬಗ್ಗೆ ಲೇವಡಿ ಮಾಡಿದ್ದ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. “ನಿನ್ನೆ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತದ ವಿದೇಶಾಂಗ ನೀತಿಯ ಕುರಿತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗಳು ಕೆಳಮಟ್ಟದ್ದು ಹಾಗೂ ಖಂಡನೀಯವಾಗಿವೆ. ಇದು ವೈಯಕ್ತಿಕವಾಗಿ ನನಗೂ ತೀವ್ರ ನೋವುಂಟು ಮಾಡಿದೆ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ, ಯಾವುದೇ ವಿರೋಧ…

Read More

TNPL 2026: ಕೇವಲ 90 ಎಸೆತಗಳಲ್ಲಿ ಬರೋಬ್ಬರಿ 239 ರನ್‌ ದಾಖಲು..! – Kannada News | TNPL 2026: Dindigul Dragons Crush Salem Spartans by 81 Runs; Indrajith’s Heroics

ದಿಂಡಿಗಲ್‌ನಲ್ಲಿ ನಡೆಯುತ್ತಿರುವ ಟಿಎನ್‌ಪಿಎಲ್ 2026 (TNPL 2026) ಸೀಸನ್​ನ 18ನೇ ಪಂದ್ಯದಲ್ಲಿ ಇಂದು ದಿಂಡಿಗಲ್ ಡ್ರಾಗನ್ಸ್ ಹಾಗೂ ಸೇಲಂ ಸ್ಪಾರ್ಟನ್ಸ್ ( Dindigul vs Salem Spartans) ತಂಡಗಳು ಮುಖಾಮುಖಿಯಾಗಿದ್ದವು. ಮಳೆ ಪೀಡಿತ ಈ ಪಂದ್ಯವನ್ನು ತಲಾ 15 ಓವರ್​ಗಳಿಗೆ ನಿಗದಿಪಡಿಸಲಾಯಿತು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ದಿಂಡಿಗಲ್ ಡ್ರಾಗನ್ಸ್ ತಂಡ ಮೈದಾನದಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದು ಕೇವಲ 90 ಎಸೆತಗಳಲ್ಲಿ ಬರೋಬ್ಬರಿ 239 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಸೇಲಂ ಸ್ಪಾರ್ಟನ್ಸ್ ತಂಡ…

Read More

ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್​​ಗೆ ಮದುವೆ ಫಿಕ್ಸ್: ಹುಡುಗಿ ಯಾರು?

ಚಿತ್ರದುರ್ಗ, ಆಗಸ್ಟ್​​ 14: ಕರ್ನಾಟಕದ ‘ಸ್ಪೈಡರ್‌ಮ್ಯಾನ್’ ಎಂದೇ ಜನಪ್ರಿಯರಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಅವರ ವಿವಾಹ ಮುಹೂರ್ತ ನಿಶ್ಚಯವಾಗಿದ್ದು, ಚಿತ್ರದುರ್ಗ ಸಮೀಪದ ಚಳ್ಳಕೆರೆಯ ದೊಡ್ಡಉಳ್ಳಾರ್ತಿ ಗ್ರಾಮದ ನಿವೇದಿತಾ ಎಂಬುವವರೊಂದಿಗೆ ಆಗಸ್ಟ್ 22 ಮತ್ತು 23ರಂದು ವೈಭವ ಗಾರ್ಡನ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈ ಹಿಂದೆ 2018-19ರಲ್ಲಿ ಜೋಗ್‌ಫಾಲ್ಸ್‌ನಲ್ಲಿ ಬಿದ್ದು ಗಾಯಗೊಂಡಿದ್ದ ಸಂದರ್ಭದಲ್ಲಿ ನಿಶ್ಚಯವಾಗಿದ್ದ ಮದುವೆ ರದ್ದಾಗಿತ್ತು. ಇದೀಗ ಬಾಲ್ಯದಿಂದಲೂ ಪರಿಚಿತವಿರುವ ನಿವೇದಿತಾರನ್ನು ಇಷ್ಟಪಟ್ಟು ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ಅರೇಂಜ್ಡ್-ಕಮ್-ಲವ್ ಮ್ಯಾರೇಜ್ ಆಗುತ್ತಿರುವುದಾಗಿ ಜ್ಯೋತಿರಾಜ್ ತಿಳಿಸಿದ್ದಾರೆ. ಆರ್ಥಿಕ ಸಂಕಷ್ಟದ…

Read More

‘ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ’; ಕಾಕ್ರೋಚ್ ವಿವಾದಕ್ಕೆ ಸಿಜೆಐ ಸೂರ್ಯಕಾಂತ್ ಬೇಸರ – Kannada News | My statements Misused With Malicious Intent Chief Justice Surya Kant On Cockroach Row

ನವದೆಹಲಿ:, ಆಗಸ್ಟ್ 14: “ದೇಶದ ಯುವಜನರನ್ನು ಹಾದಿತಪ್ಪಿಸುವ ದುರುದ್ದೇಶದಿಂದ ನನ್ನ ಹೇಳಿಕೆಗಳನ್ನು ತಪ್ಪಾಗಿ ಬಿಂಬಿಸಲಾಗಿದೆ ಮತ್ತು ದುರ್ಬಳಕೆ ಮಾಡಿಕೊಳ್ಳಲಾಗಿದೆ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ (CJI Surya Kant) ಹೇಳಿದ್ದಾರೆ. ಮೇ 15ರಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವೊಂದರ ವಿಚಾರಣೆ ನಡೆಸುವಾಗ ಸಿಜೆಐ, ನಕಲಿ ಪದವಿಗಳನ್ನು ಹೊಂದಿರುವ ಕೆಲವು ವ್ಯಕ್ತಿಗಳನ್ನು ಜಿರಳೆಗಳಿಗೆ ಹೋಲಿಸಿದ್ದರು. ಅಂತಹ ವ್ಯಕ್ತಿಗಳು ವ್ಯವಸ್ಥೆಯ ವಿರುದ್ಧ ವಾಗ್ದಾಳಿ ನಡೆಸಲು ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಆರ್‌ಟಿಐ (RTI) ಕಾರ್ಯಕರ್ತರಾಗಿ ಹೊರಹೊಮ್ಮುತ್ತಾರೆ ಎಂದು ಅವರು ಹೇಳಿದ್ದರು….

Read More

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಎಚ್ಚರಿಕೆ ನೀಡಿ ಎಸಿಪಿ, ಇನ್ಸ್​​​​​ಪೆಕ್ಟರ್ ವಿರುದ್ಧದ​​​​​​ ತನಿಖೆ ಕ್ಲೋಸ್ – Kannada News | Bengaluru Chinnaswamy Stadium Stampede Case: department enquiry Stopped Agaunst ACP And inspector

ಬೆಂಗಳೂರು, (ಆಗಸ್ಟ್ 14): ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರ ವಿರುದ್ಧ ಜಂಟಿ ಇಲಾಖಾ ವಿಚಾರಣೆ ಪೂರ್ಣಗೊಂಡಿದ್ದು, ಎಚ್ಚರಿಕೆ ನೀಡಿ ಜಂಟಿ ಇಲಾಖೆ ವಿಚಾರಣೆ ಮುಕ್ತಾಯಗೊಳಿಸಲಾಗಿದೆ. ಎಸಿಪಿ ಬಾಲಕೃಷ್ಣ, ಇನ್ಸ್ಪೆಕ್ಟರ್ ಗಿರೀಶ್ ವಿರುದ್ಧದ ಇಲಾಖೆ ವಿಚಾರಣೆ ಅಂತ್ಯವಾಗಿದ್ದು, ಇಬ್ಬರು ಪೊಲೀಸರ ಲಿಖಿತ ಸಮಜಾಯಿಷಿಗೆ ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಸಮಜಾಯಿಷಿ ಒಪ್ಪಿ ಎಚ್ಚರಿಕೆ ನೀಡಿ ವಿಚಾರಣೆ ಮುಕ್ತಾಯಗೊಳಿಸಲಾಗಿದೆ. ಸೇವಾವಧಿಯಲ್ಲಿ ಮತ್ತೆ ಇಂತ ಘಟನೆ ಮರುಕಳಿಸದಂತೆ ಎಚ್ಚರಿಕೆ ಜೊತೆಗೆ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಖುನ್ಹಾ…

Read More