U19 World Cup: ದಾಖಲೆಯ ಗುರಿ ಬೆನ್ನಟ್ಟಿ ಸತತ 6ನೇ ಬಾರಿಗೆ ವಿಶ್ವಕಪ್ ಫೈನಲ್​ಗೇರಿದ ಭಾರತ – Kannada News | 19 World Cup 2026: India Dominates Afghanistan, Enters Final for 6th Time

ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ (India U19 vs Afghanistan U19) ನಡುವಿನ 2026 ರ ಅಂಡರ್-19 ಏಕದಿನ ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಆಯುಷ್ ಮ್ಹಾತ್ರೆ ನಾಯಕತ್ವದ ಭಾರತ ಯುವ ಪಡೆ ಅಫ್ಘಾನಿಸ್ತಾನ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿ ಸತತ 6ನೇ ಬಾರಿಗೆ ಅಂಡರ್ 19 ವಿಶ್ವಕಪ್ ಫೈನಲ್​ಗೇರಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ ತಂಡ ಇಬ್ಬರ ಶತಕದ ನೆರವಿನಿಂದ 310 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತ ಇನ್ನು 53 ಎಸೆತಗಳು ಬಾಕಿ ಇರುವಂತೆಯೇ ಜಯದ ನಗೆ ಬೀರಿತು. ಇದರ ಜೊತೆಗೆ ಅಂಡರ್ 19 ವಿಶ್ವಕಪ್ ಸೆಮಿಫೈನಲ್​ನಲ್ಲಿ ಅತಿದೊಡ್ಡ ಗುರಿ ಬೆನ್ನಟ್ಟಿದ ದಾಖಲೆಯನ್ನು ಭಾರತ ತಂಡ ಬರೆಯಿತು.

Source link

ಜ್ಯೋತಿಷಿ ಹೇಳ್ತಿದ್ದವನ ಭವಿಷ್ಯವೇ ತಲೆಕೆಳಗಾಯ್ತು: ಕಮಲಾಕರ್ ಭಟ್‌-ಸುಚಿತ್ರಾಳ ಮತ್ತಷ್ಟು ಶೋಕಿ ಪುರಾಣ ಬಯಲು – Kannada News | Kamalakar bhat guruji And Suchitra And others judicial custody In Siddapur murder over affair dispute

ಶಿವಮೊಗ್ಗ/ಕಾರವಾರ, (ಫೆಬ್ರವರಿ 04): ನಿಮಗೆ ಸಾಡೇಸಾಥ್ ಆರಂಭವಾಗಿದೆ. ನಿಮಗೆ ಶನಿ ವಕ್ಕರಿಸಿದ್ದಾನೆ ಎಂದು ಜನರಿಗೆ ಜ್ಯೋತಿಷಿ ಹೇಳ್ತಿದ್ದ ಕಮಲಾಕರ್ ಭಟ್‌ನ ಭವಿಷ್ಯವೇ ತಲೆಕೆಳಗಾಗಿದೆ. ಕೊಲೆ ಕೇಸ್‌ನಲ್ಲಿ A3 ಕಮಲಾಕರ್ ಭಟ್ ಜೈಲುಪಾಲಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಜೆಎಂಎಫ್‌ಸಿ ಕೋರ್ಟ್‌, ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಇನ್ನು ಕಮಲಾಕರ್ ಭಟ್‌ ಹಾಗೂ ಸುಚಿತ್ರಾಳ ಅಕ್ರಮ ಸಂಬಂಧ ಬಗೆದಷ್ಟು ಬಯಲಾಗುತ್ತಿದೆ. ಜ್ಯೋತಿಷಿ ಕಚೇರಿಯಲ್ಲಿ ಕೆಲಸಕ್ಕೆ ಸೇರಿದ್ದ ಸುಚಿತ್ರಾ, ಬಳಿಕ ಪರ್ಮನೆಂಟ್ ಆಗಿ ಆತನ ಮನೆಯವಳಾಗಿಬಿಟ್ಟಿದ್ದಳು. ನಂತರ ಮನೆಯಲ್ಲಿ ಏನೆಲ್ಲಾ ನಡೆಯಿತಿತ್ತು ಎನ್ನುವುದನ್ನು ಸ್ವತಃ ಸುಚಿತ್ರಾಳ ಪುತ್ರಿ ಬಯಲು ಮಾಡಿದ್ದಾಳೆ.

ಕೆಲಸಕ್ಕೆಂದು ಸೇರಿ ಲಿವಿಂಗ್ ಟುಗೆದರ್

ಸುಚಿತ್ರಾ ಹಾಗೂ ಜ್ಯೋತಿಷಿ ಕಮಲಾಕರ್ ಭಟ್ ಇಬ್ಬರು ಬೆಂಗಳೂರಿನಲ್ಲಿ ಪರಿಚವಾಗಿದ್ದು, ಬಳಿಕ ಇವರ ಕಚೇರಿಯಲ್ಲಿ ಕೆಲಸಕ್ಕೆ ಸೇರಿದ್ದಳು. ನಂತರ ಸುಚಿತ್ರಾ ಹಾಗೂ ಕಮಲಾಕರ್ ಭಟ್ ನಡುವೆ ಲವ್ವಿಡವ್ವಿ ಶುರುವಾಗಿದ್ದು, ಜ್ಯೋತಿಷಿ ಸುಚಿತ್ರಾಳಿಗೆ ಶಿವಮೊಗ್ಗದಲ್ಲಿ ಒಂದು ಬಾಡಿಗೆ ಮನೆ ಮಾಡಿಕೊಟ್ಟಿದ್ದ ಹೀಗಾಗಿ ಸುಚಿತ್ರಾ 9 ತಿಂಗಳಿನಿಂದ ಶಿವಮೊಗ್ಗದ ಗುತ್ತೆಪ್ಪ ಕಾಲನಿಯ ಬಡಾವಣೆಯಲ್ಲಿ ಮನೆಯಲ್ಲಿ ಮಗಳೊದಿಗೆ ಕಮಲಾಕರ್ ಭಟ್ ಜೊತೆ ವಾಸವಾಗಿದ್ದಳು.

ಇದನ್ನೂ ಓದಿ: ಸ್ವಾಮೀಜಿ ಮಾತ್ರವಲ್ಲ ಹುಡುಗರ ಜೊತೆ ಪತ್ನಿ ಸಂಪರ್ಕ: ಹೆಂಡ್ತಿಯ ಮತ್ತಷ್ಟು ನವರಂಗಿ ಆಟ ಬಿಚ್ಚಿಟ್ಟ ಪತಿ

ಸುಚಿತ್ರಾಳ ಐಷರಾಮಿ ಜೀವನ

ಬಾಡಿಗೆ ಮನೆ ಪಕ್ಕದಲ್ಲಿ ಒಂದು ಕನಸು ಎನ್ನುವ ಸ್ವಾಮೀಜಿ ಕಚೇರಿ ಇತ್ತು. ಸ್ವಾಮೀಜಿ ಹೀಗೆ ಕಚೇರಿ ಮತ್ತು ಸುಚಿತ್ರಾ ಮನೆ ಎರಡನ್ನು ನಿರ್ವಹಣೆ ಮಾಡುತ್ತಿದ್ದ. ವಾರದಲ್ಲಿ ಮೂರ್ನಾಲ್ಕು ದಿನ ಜ್ಯೋತಿಷಿ ಸುಚಿತ್ರಾ ಜೊತೆಯಲ್ಲೇ ಇರುತ್ತದ್ದ. ಹೀಗಿರುವಾಗ ಸುಚಿತ್ರಾಳದ್ದು ಐಷಾರಾಮಿ ಜೀವನ ಶುರುವಾಗಿದ್ದು ಜ್ಯೋತಿಷಿಯ ಎರಡು ಕಾರ್ ಗಳನ್ನು ಸುಚಿತ್ರಾ ಬಳಕೆ ಮಾಡುತ್ತಿದ್ದಳು. ಇನ್ನು ಸುಚಿತ್ರಾ ಳಿಗೆ ಹರ್ಷ ಎನ್ನುವ ಕಾರು ಚಾಲಕನನ್ನು ಇಟ್ಟುಕೊಂಡಿದ್ದಳು.

ಜ್ಯೋತಿಷಿ-ತಾಯಿಯ ಮುಖವಾಡ ಕಳಚಿಟ್ಟ ಪುತ್ರಿ


ಇನ್ನು ಸುಚಿತ್ರಾಳ ಮಗಳು ಸುಮಾಶ್ರೀ ಟಿವಿ9 ಜತೆ ಮಾನಾಡಿದ್ದು, ತಾಯಿ ಹಾಗೂ ಗುರೂಜಿಯ ಮುಖವಾಡವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾಳೆ. ಕಳೆದ ಆರು ತಿಂಗಳಿಂದ ಶಿವಮೊಗ್ಗದಲ್ಲಿ ತಾಯಿ ಜೊತೆ ವಾಸವಾಗಿದ್ದು, ತಾಯಿ ಮತ್ತು ಕಮಲಾಕರ್ ಭಟ್ ಇಬ್ಬರು ಸೇರಿ ನನಗೆ ಜೀವ ಬೆದರಿಕೆ ಹಾಕುತ್ತಿದ್ದರು.ಮನೆ ಬಿಟ್ಟು ಹೋಗಲು ಇಬ್ಬರು ಬಲವಂತ ಮಾಡುತ್ತಿದ್ದರು. ಈ ಹಿನ್ನಲೆ ನಾನು ತಂದೆಗೆ ಮಾಹಿತಿ ನೀಡಿದೆ. ತಂದೆ ಊರಿಗೆ ಬರಲು ಸೂಚನೆ ನೀಡಿದರು. ಅದರಂತೆ ನಾನು ಸಿದ್ದಾಪುರಕ್ಕೆ ಹೋಗಿ ದೂರು ನೀಡಿರುವೆ. ನನ್ನ ತಂದೆ ಮತ್ತು ದೊಡ್ಡಪ್ಪ ಮೇಲೆ ಅಟ್ಯಾಕ್ ಮಾಡಿದ್ದು, ಘಟನೆಯಲ್ಲಿ ದೊಡ್ಡಪ್ಪ ಮೃತಪಟ್ಟಿದ್ದಾರೆ. ಗುರುಜಿ ಮತ್ತು ತಾಯಿಗೆ ಕಠಿಣ ಶಿಕ್ಷೆ ಆಗಬೇಕು ಎಂದಿದ್ದಾಳೆ.

ಇದನ್ನೂ ಓದಿ: ಕಮಲಾಕರ ಭಟ್​ ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ: ದೂರು ನೀಡಿದ್ದಕ್ಕೆ ಹಲ್ಲೆ; ಓರ್ವ ಸಾವು

ಸುಚಿತ್ರಾ ಸೇರಿ 7 ಆರೋಪಿಗಳಿಗೆ 8 ದಿನ ನ್ಯಾಯಾಂಗ ಬಂಧನ

ಜನರ ಭವಿಷ್ಯ ಹೇಳುತ್ತಾ ಬದುಕು ಕಟ್ಟಿಕೊಂಡಿದ್ದ ಉತ್ತರಕನ್ನಡ ಜಿಲ್ಲೆಯ ಕಮಲಾಕರ್ ಭಟ್‌, ಸುಚಿತ್ರಾ ಅನ್ನೋ ಈ ಮಹಿಳೆ ಜತೆ ಅಕ್ರಮ ಸಂಬಂಧ ಹೊಂದಿದ್ದನಂತೆ. ಇದನ್ನ ಪ್ರಶ್ನೆ ಮಾಡ್ತಿದ್ದಂತೆ ಮೊನ್ನೆ ದೊಡ್ಡ ರದ್ಧಾಂತವೇ ಆಗಿತ್ತು. ಶಿವಮೊಗ್ಗದಿಂದ ನಾಲ್ಕೈದು ಹುಡುಗರನ್ನ ಕರೆದುಕೊಂಡು ಸಿದ್ದಾಪುರಕ್ಕೆ ಹೋಗಿದ್ದ ಕಮಲಾಕರ, ಸುಚಿತ್ರಾ ಪತಿ ಮಹೇಶ್‌ ಮೇಲೆ ಮೇಲೆ ಅಟ್ಯಾಕ್ ಮಾಡಿಸಿದ್ದ. ಈ ವೇಳೆ ತಡೆಯಲು ಬಂದ ಮಹೇಶ್‌ ಸಹೋದರ ವಸಂತನಿಗೆ ಚಾಕು ಹಾಕಿ ಕೊಲೆ ಮಾಡಿದ್ರು. ಸೋಮವಾರ ರಾತ್ರಿಯೇ ಆರೋಪಿಗಳನ್ನ ವಶಕ್ಕೆ ಪಡೆದಿದ್ದ ಪೊಲೀಸರು ಇಂದು ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ಜೆಎಂಎಫ್‌ಸಿ ಕೋರ್ಟ್‌ ಮುಂದೆ ಹಾಜರು ಪಡಿಸಿದ್ರು. ವಿಚಾರಣೆ ನಡೆಸಿದ ಕೋರ್ಟ್‌ ಕಮಲಾಕರ್‌ ಭಟ್‌, ಸುಚಿತ್ರಾ ಸೇರಿದಂತೆ 7 ಆರೋಪಿಗಳಿಗೆ 8 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಫೆಬ್ರವರಿ 7-8ರಂದು ಮಲೇಷ್ಯಾಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ – Kannada News | PM Modi To Visit Malaysia On February 7 for bilateral talks and strategic Ties

ನವದೆಹಲಿ, ಫೆಬ್ರವರಿ 4: ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಈ ವಾರದ ಕೊನೆಯಲ್ಲಿ ಮಲೇಷ್ಯಾಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಫೆಬ್ರವರಿ 7 ಹಾಗೂ 8ರಂದು ನಡೆಯಲಿರುವ ಈ ಭೇಟಿ ಪ್ರಧಾನಿ ಮೋದಿ ಅವರ ಮಲೇಷ್ಯಾಕ್ಕೆ ಮೂರನೇ ಭೇಟಿಯಾಗಿದೆ.

ಈ ಮೊದಲು ಆಗಸ್ಟ್ 2024ರಲ್ಲಿ ಭಾರತ-ಮಲೇಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ‘ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ’ಗೆ ಏರಿಸಿದ ನಂತರ ಮಲೇಷ್ಯಾಕ್ಕೆ ಇದು ಪ್ರಧಾನಿ ಮೋದಿಯವರ ಮೊದಲ ಭೇಟಿಯಾಗಿದೆ. ಈ ಭೇಟಿಯ ಸಮಯದಲ್ಲಿ ಪ್ರಧಾನಿ ಮೋದಿ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರೊಂದಿಗೆ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಲಿದ್ದಾರೆ. ಹಾಗೇ, ಪ್ರಧಾನಿ ಮೋದಿ ಭಾರತೀಯ ಸಮುದಾಯದ ಸದಸ್ಯರು ಹಾಗೂ ಕೈಗಾರಿಕೆ, ವ್ಯಾಪಾರ ಪ್ರತಿನಿಧಿಗಳನ್ನು ಬೇಟಿಯಾಗಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ:

“ಭಾರತ ಮತ್ತು ಮಲೇಷ್ಯಾ ಐತಿಹಾಸಿಕ, ನಾಗರಿಕ ಮತ್ತು ಸಾಂಸ್ಕೃತಿಕ ಸಂಪರ್ಕಗಳ ಆಧಾರದ ಮೇಲೆ ದೀರ್ಘಕಾಲದ ಸ್ನೇಹ ಸಂಬಂಧಗಳನ್ನು ಹಂಚಿಕೊಂಡಿವೆ. ವಿಶ್ವದ ಮೂರನೇ ಅತಿದೊಡ್ಡ ದೇಶವಾದ ಮಲೇಷ್ಯಾದಲ್ಲಿ 2.9 ಮಿಲಿಯನ್ ಭಾರತೀಯ ವಲಸೆಗಾರರ ​​ಉಪಸ್ಥಿತಿಯಿಂದ ಈ ಸಂಬಂಧವು ಮತ್ತಷ್ಟು ಬಲಗೊಂಡಿದೆ” ಎಂದು ವಿದೇಶಾಂಗ ಸಚಿವಾಲಯದ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Parliament Session: ಇಂದು ಪ್ರಧಾನಿ ಮೋದಿ ಭಾಷಣ ರದ್ದು; ವಿಪಕ್ಷಗಳ ಪ್ರತಿಭಟನೆಯಿಂದ ಲೋಕಸಭಾ ಕಲಾಪ ನಾಳೆಗೆ ಮುಂದೂಡಿಕೆ

“ಭಾರತ ಹಾಗೂ ಮಲೇಷ್ಯಾ ಸಂಬಂಧವು ಬಹುಮುಖಿ ಮತ್ತು ಬೆಳೆಯುತ್ತಿದೆ. ಪ್ರಧಾನ ಮಂತ್ರಿ ಮೋದಿಯವರ ಮುಂಬರುವ ಭೇಟಿಯು ವ್ಯಾಪಾರ, ಹೂಡಿಕೆ, ರಕ್ಷಣೆ, ಭದ್ರತೆ ಮತ್ತು ಕಡಲ ಸಹಕಾರದಿಂದ ಹಿಡಿದು ಡಿಜಿಟಲ್ ಮತ್ತು ಹಣಕಾಸು ತಂತ್ರಜ್ಞಾನ, ಇಂಧನ, ಆರೋಗ್ಯ ರಕ್ಷಣೆ, ಶಿಕ್ಷಣ, ಸಂಸ್ಕೃತಿ, ಪ್ರವಾಸೋದ್ಯಮ ಮುಂತಾದ ದ್ವಿಪಕ್ಷೀಯ ಸಹಕಾರದ ಬಗ್ಗೆ ಚರ್ಚೆಗೆ ಅವಕಾಶ ಕಲ್ಪಿಸುತ್ತದೆ” ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಾನು ಜೀವನದ ಕೊನೆಕಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ: ರಾಜ್ಯಸಭೆಯಲ್ಲಿ ಗದ್ಗದಿತರಾದ ದೇವೇಗೌಡ – Kannada News | Save Karnataka Farmers from Water Crisis: HD Deve Gowda Emotional spech in Rajya Sabha

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡImage Credit source: tv9 kannada

ಬೆಂಗಳೂರು, ಫೆಬ್ರವರಿ 04: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್​​ಡಿ ದೇವೇಗೌಡರು (H. D. Deve Gowda) ಇಂದು ರಾಜ್ಯಸಭೆಯಲ್ಲಿ ಕರ್ನಾಟಕದ ಪರ ಧ್ವನಿ ಎತ್ತಿದರು. ರಾಜ್ಯದ ನೀರಾವರಿ ಬಗ್ಗೆ ಪ್ರಸ್ತಾಪಿಸಿದ ಅವರು, ಕರ್ನಾಟಕವನ್ನು ರಕ್ಷಿಸಿ. ನನ್ನ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ, ಅವರ ಹಿತ ಕಾಯಿರಿ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಂದು ಗದ್ಗದಿತರಾದರು. ಹೆಚ್​​ಡಿ ದೇವೇಗೌಡರ ಮಾತಿಗೆ ಇಡೀ ಸದನವೇ ಒಂದು ಕ್ಷಣ ಮೌನಕ್ಕೆ ಜಾರಿತ್ತು.

ರಾಜ್ಯಸಭೆಯಲ್ಲಿ ಕರ್ನಾಟಕದ ಬಗ್ಗೆ ಪ್ರಸ್ತಾಪಿಸಿದ ಹೆಚ್​​ಡಿಡಿ

ರಾಜ್ಯಸಭೆಯಲ್ಲಿ ಬುಧವಾರ ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಹೆಚ್​​ಡಿ ದೇವೇಗೌಡರು, ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ರಾಜ್ಯದ ಅನೇಕ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಆ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಕರ್ನಾಟಕ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಕೇಂದ್ರ ಸರಕಾರವನ್ನು ಮನವಿ ಮಾಡಿಕೊಂಡರು.

ಇದನ್ನೂ ಓದಿ: ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗರ್- ಶಿವಲಿಂಗೇಗೌಡ

‘ನನ್ನ ರಾಜ್ಯಸಭಾ ಅವಧಿ ಇನ್ನೊಂದು ತಿಂಗಳಲ್ಲಿ ಮುಗಿಯಲಿದೆ. ನನ್ನ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಅವರ ಹಿತಕಾಯಿರಿ. ನಾವೆಲ್ಲರೂ ಮನುಷ್ಯರು, ಮಳೆ ಬಿದ್ದರೆ ನೀರು, ಇಲ್ಲವಾದರೆ ಇಲ್ಲ. ಈ ಸದನದ ಎಲ್ಲಾ ಸದಸ್ಯರು ಕರ್ನಾಟಕದ ರಕ್ಷಣೆ ಮಾಡಬೇಕು ಎಂಬುದಾಗಿ ನಾನು ಕೈ ಮುಗಿದು ಬೇಡುತ್ತೇನೆ’ ಎಂದರು.

‘ಕರ್ನಾಟಕ ನಿರಂತರವಾಗಿ ನೆರೆ ರಾಜ್ಯಗಳ ಜತೆ ನೀರಾವರಿ ಹಕ್ಕಿಗಾಗಿ ಹೋರಾಟ ನಡೆಸುತ್ತಿದೆ. ನಾನು ಕೂಡ ನೀರಿಗಾಗಿ 65 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇನೆ. ಈ ಸದನದಲ್ಲಿ ನಾನು ನ್ಯಾಯಮಂಡಳಿಗಳು ನೀಡಿರುವ ತೀರ್ಪುಗಳ ಬಗ್ಗೆ ಚರ್ಚಿಸಲು ಬಯಸುವುದಿಲ್ಲ. ಕರ್ನಾಟಕ ರಾಜ್ಯಕ್ಕೆ ನೀರಿನದೇ ಬಹುದೊಡ್ಡ ಬಿಕ್ಕಟ್ಟಾಗಿದೆ. ಒಂದೆಡೆ ತಮಿಳುನಾಡು, ಮತ್ತೊಂದೆಡೆಯಲ್ಲಿ ಆಂಧ್ರ ಪ್ರದೇಶ, ಇನ್ನೊಂದು ಕಡೆಯಲ್ಲಿ ಗೋವಾದಿಂದ ತೊಂದರೆ ಎದುರಿಸುತ್ತಿದೆ’ ಎಂದಿದ್ದಾರೆ.

ಇದನ್ನೂ ಓದಿ:

‘ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಈ ಬಿಕ್ಕಟ್ಟಿಗೆ ಪರಿಹಾರ ನೀಡಬೇಕು. ನಾನು ನಿಮ್ಮ (ಎನ್‌ಡಿಎ) ಜತೆಯಲ್ಲಿಯೇ ಇರುತ್ತೇನೆ. ನನ್ನ ಮಗ ನಿಮ್ಮ ಸಂಪುಟದಲ್ಲಿ ಇದ್ದಾನೆ. ನಾವು ಮುಂದೆಯೂ ನಿಮ್ಮ ಜತೆಗೆ ಇರುತ್ತೇವೆ ಹಾಗೂ ಮೈತ್ರಿಕೂಟ ಬದಲಾವಣೆ ಮಾಡುವ ಯಾವ ಪ್ರಶ್ನೆಯೇ ಇಲ್ಲ. ರಾಜ್ಯದ ಜನರಿಗೆ ನ್ಯಾಯ ಒದಗಿಸಿ ಎಂಬುದಷ್ಟೇ ನನ್ನ ಏಕೈಕ ಮನವಿ’ ಎಂದು ಹೇಳಿದ್ದಾರೆ.

ಇದೇ ವೇಳೆ ಯುರೋಪಿಯನ್ ಒಕ್ಕೂಟ ಹಾಗೂ ಅಮೆರಿಕ ಜತೆ ಯಶಸ್ವಿಯಾಗಿ ವ್ಯಾಪಾರ ಒಪ್ಪಂದ ಮಾಡಿಕೊಂಡ ಭಾರತದ ರಾಜತಾಂತ್ರಿಕ ಜಾಣ್ಮೆಯನ್ನು ಕೊಂಡಾಡಿದ ಹೆಚ್​​ಡಿ ದೇವೇಗೌಡರು, ಇದಕ್ಕೆ ಕಾರಣೀಭೂತರಾದ ಪ್ರಧಾನಿ ನರೇಂದ್ರ ಮೋದಿಯನ್ನ ಶ್ಲಾಘಿಸಿದರು. ಈ ಬಗ್ಗೆ ತಾವು ಪತ್ರ ಬರೆದಿರುವುದನ್ನು ಉಲ್ಲೇಖಿಸಿದರು.

ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ

ಇನ್ನು ಮೋದಿ ಅವರನ್ನು ವಿನಾಕಾರಣ ಟೀಕೆ ಮಾಡುತ್ತಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅವರು, ‘ಆರ್ಥಿಕವಾಗಿ ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಜನರ ಆದಾಯ ಹೆಚ್ಚಳವಾಗುತ್ತಿದೆ. ರೈತಪರವಾಗಿ ಈ ಸರ್ಕಾರ ಕೆಲಸ ಮಾಡುತ್ತಿದೆ. 2047ಕ್ಕೆ ಭಾರತವು ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ’ವೆಂದು ಹೆಚ್​​ಡಿ ದೇವೇಗೌಡರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Chanakya Niti: ಯಶಸ್ಸು, ಶ್ರೀಮಂತಿಕೆ ಬಯಸುವವರು ರಾತ್ರಿ ಮಲಗುವ ಮುನ್ನ ಈ ಕೆಲಸಗಳನ್ನು ಮಾಡಲೇಬೇಕು – Kannada News | Chanakya Niti: Those who want success should do these things before going to bed at night

ಪ್ರತಿಯೊಬ್ಬರೂ ಸಹ ಜೀವನದಲ್ಲಿ ಯಶಸ್ಸನ್ನು (success) ಸಾಧಿಸಲು ಬಯಸುತ್ತಾರೆ. ಇದಕ್ಕಾಗಿ ಸಾಕಷ್ಟು ಕಠಿಣ ಪರಿಶ್ರಮ ಪಡುತ್ತಾರೆ. ಹೀಗಿದ್ರೂ ಕೂಡ ಕೆಲವರಿಗೆ ಯಶಸ್ಸು, ಶ್ರೀಮಂತಿಕೆ ಎನ್ನುವಂತಹದ್ದು ಲಭಿಸುವುದೇ ಇಲ್ಲ. ಯಶಸ್ಸಿಗೆ ಕಠಿಣ ಪರಿಶ್ರಮ ಮಾತ್ರವಲ್ಲ ಸರಿಯಾದ ಯೋಜನೆಯೂ ಅತ್ಯಗತ್ಯ ಎನ್ನುತ್ತಾರೆ ಚಾಣಕ್ಯರು.ಅಷ್ಟೇ ಅಲ್ಲದೆ ಸಕ್ಸಸ್‌ ಬಯಸುವವರು ರಾತ್ರಿ ಮಲಗುವ ಮುನ್ನ ಈ ಒಂದಷ್ಟು ಕೆಲಸಗಳನ್ನು ತಪ್ಪದೇ ಮಾಡಲೇಬೇಕು ಎಂದಿದ್ದಾರೆ. ಇವರು ಹೇಳಿಕೊಟ್ಟಿರುವ ಯಶಸ್ಸಿನ ಸೂತ್ರಗಳನ್ನು ಪಾಲಿಸಿದರೆ ನೀವು ಯಶಸ್ಸು ಮತ್ತು ಸಂಪತ್ತು ಎರಡನ್ನೂ ಪಡೆಯಬಹುದು. ಹಾಗಿದ್ರೆ ಯಶಸ್ಸನ್ನು ಗಳಿಸಲು ರಾತ್ರಿ ಮಲಗುವ ಮುನ್ನ ಯಾವೆಲ್ಲಾ ಕೆಲಸಗಳನ್ನು ಮಾಡಿದರೆ ಉತ್ತಮ ಅನ್ನೋದನ್ನು ನೋಡೋಣ ಬನ್ನಿ.

ಯಶಸ್ಸನ್ನು ಸಾಧಿಸಲು ಮಲಗುವ ಮುನ್ನ ಈ ಕೆಲಸಗಳನ್ನು ಮಾಡಿ:

ನಿಮ್ಮ ದಿನ ಹೇಗೆ ಹೋಯಿತು ಎಂಬುದನ್ನು ಯೋಚಿಸಿ: ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ತನ್ನ ಕ್ರಿಯೆಗಳ ಬಗ್ಗೆ ನಿಗಾ ಇಡುವ ವ್ಯಕ್ತಿಯು ಜೀವನದಲ್ಲಿ ಎಂದಿಗೂ ವಿಫಲನಾಗಲು ಸಾಧ್ಯವಿಲ್ಲ ಎಂಬುದನ್ನು ವಿವರಿಸಿದ್ದಾರೆ. ಆದ್ದರಿಂದ ನೀವು ದಿನಪೂರ್ತಿ ಮಾಡಿದ ಕೆಲಸಗಳ ದೈನಂದಿನ ದಾಖಲೆಗಳನ್ನು ಇಟ್ಟುಕೊಳ್ಳಬೇಕು. ನೀವೇನಾದರೂ ಆ ದಿನ ತಪ್ಪುಗಳನ್ನು ಮಾಡಿದರೆ, ಅವುಗಳನ್ನು ತಿದ್ದಿ ನಡೆಯುವುದೇಗೆ, ಅಂದುಕೊಂಡ ಕಾರ್ಯವನ್ನು ಇನ್ನಷ್ಟು ಉತ್ತಮಗೊಳಿಸುವುದೇಕೆ ಎಂದು ಯೋಚಿಸಬೇಕು. ಈ ಅಭ್ಯಾಸ ಖಂಡಿತವಾಗಿಯೂ ನಿಮ್ಮನ್ನು ಯಶಸ್ವಿಗೊಳಿಸುತ್ತದೆ.

ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ: ಮಲಗುವ ಮುನ್ನ ಸ್ವಲ್ಪ ಸಮಯವನ್ನು ತೆಗೆದುಕೊಂಡು ಅರ್ಥಪೂರ್ಣ, ನಿಮ್ಮ ಕೆಲಸಕ್ಕೆ ಪೂರಕವಾಗುವಂತಹ ಪುಸ್ತಕಗಳನ್ನು ಓದಿ. ಪುಸ್ತಕಗಳ ಮುಖಾಂತರ ಜ್ಞಾನ ಹೆಚ್ಚಾಗುತ್ತದೆ. ಚಾಣಕ್ಯರು ಹೇಳುವಂತೆ ಜ್ಞಾನವೇ ದೊಡ್ಡ ಸಂಪತ್ತು. ನೀವು ಯಶಸ್ವಿಯಾಗಲು, ಶ್ರೀಮಂತಿಕೆ ಗಳಿಸಲು ಬಯಸಿದರೆ ಜ್ಞಾನವನ್ನು ಹೆಚ್ಚಿಸುವತ್ತ ಗಮನಹರಿಸಬೇಕು.

ಮರುದಿನಕ್ಕೆ ಯೋಜನೆಗಳನ್ನು ಮಾಡಿ: ಉತ್ಪಾದಕತೆಯನ್ನು ಹೆಚ್ಚಿಸಲು ಮರುದಿನಕ್ಕೆ ಸರಿಯಾದ ಯೋಜನೆಗಳನ್ನು ರೂಪಿಸಿ. ದಿನಕ್ಕೆ ನಿರ್ದಿಷ್ಟ ಕಾರ್ಯಸೂಚಿಗಳನ್ನು ಹೊಂದಿಸಿ. ನೀವು ನಾಳೆ ಏನು ಮಾಡಬೇಕು ಎಂಬುದನ್ನು ಇಂದು ಮಲಗುವ ಮುನ್ನ ನಿರ್ಧರಿಸಿ, ಈ ಯೋಜನೆ ಮರುದಿನ ನಿಮ್ಮ ಉತ್ಪಾದಕತೆಯನ್ನು ಹೆಚ್ಚಿಸುವುದಲ್ಲದೆ ಕೆಲಸವನ್ನೂ ಸುಲಭಗೊಳಿಸುತ್ತದೆ. ಸಮಯಕ್ಕೆ ಸರಿಯಾಗಿ ಗುರಿ ತಲುಪಲೂ ಸಾಧ್ಯವಾಗುತ್ತದೆ.

ಇದನ್ನೂ ಓದಿ: ಇಂತಹ ಮಕ್ಕಳನ್ನು ಪಡೆದ ಪೋಷಕರೇ ನಿಜವಾದ ಅದೃಷ್ಟವಂತರು ಎನ್ನುತ್ತಾರೆ ಚಾಣಕ್ಯ

ಗುರಿಯ ಬಗ್ಗೆ ಯೋಚಿಸಿ: ಒಬ್ಬ ವ್ಯಕ್ತಿಯ ಮನಸ್ಸು ಯಾವಾಗಲೂ ತನ್ನ ಗುರಿಯತ್ತ ಕೇಂದ್ರೀಕೃತವಾಗಿರಬೇಕು. ಸ್ಪಷ್ಟ ಗುರಿಯನ್ನು ಹೊಂದಿರುವವನು ಭವಿಷ್ಯದಲ್ಲಿ ಎಂದಿಗೂ ಸೋಲುವುದಿಲ್ಲ ಮತ್ತು ಆತ ಖಂಡಿತವಾಗಿಯೂ ಯಶಸ್ಸನ್ನೂ ಸಾಧಿಸುತ್ತಾನೆ ಎನ್ನುತ್ತಾರೆ ಚಾಣಕ್ಯ. ಆದ್ದರಿಂದ ರಾತ್ರಿ ಮಲಗುವ ಮುನ್ನ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ಯೋಚಿಸಿ.

ದಿನವನ್ನು ಸಕಾರಾತ್ಮಕ ಚಿಂತನೆಗಳೊಂದಿಗೆ ಕೊನೆಗೊಳಿಸಿ: ರಾತ್ರಿ ಮಲಗುವಾಗ ನಕಾರಾತ್ಮಕ ಆಲೋಚನೆಗಳು ನಿಮ್ಮ ಮನಸ್ಸಿನಲ್ಲಿ ಬರಲು ಬಿಡಬೇಡಿ. ಸಕಾರಾತ್ಮಕ ಯೋಚನೆಗಳೊಂದಿಗೆ ನಿದ್ರೆ ಮಾಡಿ. ಜೀವನದ ಪ್ರತಿಯೊಂದು ಒಳ್ಳೆಯ ವಿಚಾರಗಳನ್ನು ನೆನಪಿಡಿ. ಖಂಡಿತವಾಗಿಯೂ ಇದು ನಿಮಗೆ ಯಶಸ್ಸನ್ನು ಗಳಿಸಲು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನನ್ನ ಪ್ರಕಾರ.. ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ – Kannada News | Dhoni Backs Kohli, Rohit for 2027 ODI World Cup: Experience Key for Team India

ಪ್ರಸ್ತುತ 2026 ರ ಟಿ20 ವಿಶ್ವಕಪ್ ಆಡುತ್ತಿರುವ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿಯುವ ಇರಾದೆಯಲ್ಲಿದೆ. ಈ ವರ್ಷ ಟಿ20 ವಿಶ್ವಕಪ್ ನಡೆದರೆ, ಮುಂದಿನ ವರ್ಷ ಅಂದರೆ 2027 ರಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. 2023 ರಲ್ಲಿ ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಭಾರತ ಎಡವಿತ್ತು. ಆದರೆ 2027 ರಲ್ಲಿ ಏಕದಿನ ವಿಶ್ವಕಪ್ ಟ್ರೋಫಿ ಬರವನ್ನು ನೀಗಿಸಿಕೊಳ್ಳುವ ಗುರಿಯಲ್ಲಿ ಟೀಂ ಇಂಡಿಯಾವಿದೆ. ಆದರೆ ಈ ಟೂರ್ನಿಗೆ ಭಾರತ ತಂಡ ಹೇಗಿರಲಿದೆ ಎಂಬುದು ಪ್ರಮುಖ ಪ್ರಶ್ನೆಯಾಗಿದೆ. ಅದರಲ್ಲೂ ಅನುಭವಿಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ತಂಡದಲ್ಲಿರುತ್ತಾರಾ ಎಂಬುದು ಪ್ರಸ್ತುತ ಟೀಂ ಇಂಡಿಯಾ ಅಭಿಮಾನಿಗಳನ್ನು ಕಾಡುತ್ತಿರುವ ಪ್ರಶ್ನೆಯಾಗಿದೆ.

ಈ ಪ್ರಶ್ನೆಗೆ ಈಗಾಗಲೇ ಸಾಕಷ್ಟು ಅನುಭವಿಗಳು ಉತ್ತರ ನೀಡಿದ್ದು, ರೋಹಿತ್, ಕೊಹ್ಲಿ ಆಡುವುದು ಖಚಿತ ಎಂದಿದ್ದಾರೆ. ಆದರೆ ಬಿಸಿಸಿಐ ಮಾತ್ರ ಈ ಪ್ರಶ್ನೆಗೆ ಇದುವರೆಗೆ ಖಚಿತ ಉತ್ತರ ನೀಡಿಲ್ಲ. ಆದಾಗ್ಯೂ ಬಿಸಿಸಿಐ ಪ್ರತಿಯೊಂದು ಏಕದಿನ ಸರಣಿಯಲ್ಲಿ ಇವರಿಬ್ಬರಿಗೆ ಅವಕಾಶ ನೀಡುತ್ತಿರುವುದರನ್ನು ಗಮನಿಸಿದರೆ, ಇವರಿಬ್ಬರು ಆಡುವುದು ಪಕ್ಕಾ ಎನ್ನಬಹುದು. ಇದೀಗ ಈ ಪ್ರಶ್ನೆಗೆ ತಂಡದ ಮಾಜಿ ನಾಯಕ ಎಂಎಸ್ ಧೋನಿ ಕೂಡ ತಮ್ಮ ಉತ್ತರವನ್ನು ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಧೋನಿ ಬಳಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ 2027 ರ ಏಕದಿನ ವಿಶ್ವಕಪ್‌ನಲ್ಲಿ ಆಡುತ್ತಾರಾ ಎಂಬ ಪ್ರಶ್ನೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ಧೋನಿ, ‘ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ 2027 ರ ಏಕದಿನ ವಿಶ್ವಕಪ್‌ನಲ್ಲಿ ಏಕೆ ಆಡಬಾರದು?’. ನನ್ನ ಅಭಿಪ್ರಾಯದಲ್ಲಿ, ಆಟಕ್ಕೆ ವಯಸ್ಸು ಮಾನದಂಡವಲ್ಲ. ಆದರೆ ಪ್ರದರ್ಶನ ಮತ್ತು ಫಿಟ್‌ನೆಸ್ ಮುಖ್ಯವಾಗುತ್ತದೆ. ಅವರು 30 ವರ್ಷಕ್ಕಿಂತ ಮೇಲ್ಪಟ್ಟವರು ಎಂದ ಮಾತ್ರಕ್ಕೆ ಅವರು ಆಡಲು ಸಾಧ್ಯವಿಲ್ಲ ಎಂದು ಅರ್ಥವಲ್ಲ. ದೊಡ್ಡ ಪಂದ್ಯಗಳಲ್ಲಿ ಅನುಭವ ಯಾವಾಗಲೂ ಮುಖ್ಯ. ಆದ್ದರಿಂದ ವಿರಾಟ್ ಮತ್ತು ರೋಹಿತ್ 2027 ರ ವಿಶ್ವಕಪ್ ಆಡುವುದಕ್ಕೆ ನನಗೆ ಯಾವುದೇ ಆಕ್ಷೇಪವಿಲ್ಲ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆಟವಾಡುತ್ತಾ ಆಟಿಕೆ ನುಂಗಿದ ಮಗು; ಎಂಡೋಸ್ಕೋಪಿ ಮೂಲಕ ಹೊರತೆಗೆದ ವೈದ್ಯರು – Kannada News | Baby boy swallows Hulk toy doctors remove it via endoscopy

ಅಹಮದಾಬಾದ್, ಫೆಬ್ರವರಿ 4: ಮಕ್ಕಳು ಸಾಮಾನ್ಯವಾಗಿ ಆಗಾಗ ತಮ್ಮ ಬಾಯಿಯಲ್ಲಿ ವಸ್ತುಗಳನ್ನು ಹಾಕುವ ಅಭ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಈ ಬಗ್ಗೆ ಪೋಷಕರು ನಿರ್ಲಕ್ಷ್ಯ ಮಾಡಬಾರದು. ಇತ್ತೀಚಿನ ಒಂದು ಪ್ರಕರಣದಲ್ಲಿ ಗುಜರಾತ್‌ನ (Gujarat)  ಅಹಮದಾಬಾದ್‌ನ ಒಂದೂವರೆ ವರ್ಷದ ಬಾಲಕ ಆಕಸ್ಮಿಕವಾಗಿ ತನ್ನ ಪ್ಲಾಸ್ಟಿಕ್ ಆಟಿಕೆಯನ್ನು ನುಂಗಿದ್ದ. ವೈದ್ಯಕೀಯ ಚಿಕಿತ್ಸೆಗಾಗಿ ಅವನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆಟಿಕೆ ಮಗುವಿನ ಹೊಟ್ಟೆಯಲ್ಲಿ ಸಿಲುಕಿಕೊಂಡಿದ್ದು, ಅವನ ಒಳ ಅಂಗಗಳಿಗೆ ಹಾನಿಯನ್ನುಂಟುಮಾಡುವ ಸಾಧ್ಯತೆಯಿದೆ ಎಂದು ವೈದ್ಯರು ಹೇಳಿದ್ದರು. ವೈದ್ಯರು ಮೊದಲು ಎಕ್ಸ್-ರೇ ನಡೆಸಿದರು. ಇದಾದ ನಂತರ ಸವಾಲಿನ ಎಂಡೋಸ್ಕೋಪಿಕ್ ಮಾಡಲಾಯಿತು. ಇದು ಆಟಿಕೆಯನ್ನು ಯಶಸ್ವಿಯಾಗಿ ತೆಗೆದುಹಾಕಿತು ಮತ್ತು ಮಗುವನ್ನು ಅಪಾಯದಿಂದ ಹೊರತಂದಿತು. ಒಂದುವೇಳೆ ಸ್ವಲ್ಪ ತಡವಾಗಿದ್ದರೂ ಆಟಿಕೆ ಹೊಟ್ಟೆಯಿಂದ ಮತ್ತಷ್ಟು ದೂರ ಸರಿದು ಕರುಳಿನಲ್ಲಿ ಸಿಲುಕಿಕೊಳ್ಳಬಹುದಿತ್ತು. ಆ ಸಂದರ್ಭದಲ್ಲಿ ಕರುಳಿಗೆ ತೊಂದರೆಯಾಗುವ ಅಪಾಯವಿತ್ತು.

ಇದನ್ನೂ ಓದಿ: ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು 6 ವರ್ಷದ ಮಗಳನ್ನೇ ಕೊಂದ ಅಪ್ಪ!

ಮಗುವಿನ ತಾಯಿ ತನ್ನ ಮಗ ವಾಂತಿ ಮಾಡುತ್ತಿರುವುದನ್ನು ಕಂಡು ಮತ್ತು ಅವನ ಆಟಿಕೆಗಳಲ್ಲಿ ಒಂದು ಕಾಣೆಯಾಗಿರುವುದನ್ನು ನೋಡಿ ಆತಂಕಕ್ಕೊಳಗಾದರು. ಆಗ ಈ ಘಟನೆ ಬೆಳಕಿಗೆ ಬಂದಿತು. ಮಗು ತನ್ನ “ಹಸಿರು ಹಲ್ಕ್” ಆಟಿಕೆಯನ್ನು ನುಂಗಿದೆ ಎಂದು ಭಯಪಟ್ಟ ಕುಟುಂಬವು ಅವನನ್ನು ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿತು. ಆ ಆಟಿಕೆ ಒಂದು ಸಣ್ಣ ತುಂಡಾಗಿರಲಿಲ್ಲ. ಅದು ತೋಳುಗಳು, ಕಾಲುಗಳು ಮತ್ತು ತಲೆಯನ್ನು ಹೊಂದಿರುವ ಪೂರ್ಣ ಗಾತ್ರದ ಒಂದು ಸಣ್ಣ ಗೊಂಬೆಯಾಗಿತ್ತು.

ಇದನ್ನೂ ಓದಿ: ಮಹಿಳೆಯ ಕಾಲು ಕತ್ತರಿಸಿ 6.5 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದೋಚಿದ ಕಳ್ಳರು

ಬಹಳಷ್ಟು ಪ್ರಯತ್ನದ ನಂತರ, ವೈದ್ಯರು ಆಟಿಕೆಯ ತಲೆಯನ್ನು ಹಿಡಿದು ಹೊರತೆಗೆಯುವಲ್ಲಿ ಯಶಸ್ವಿಯಾದರು. ಆಟಿಕೆ ಕೆಳಗೆ ಜಾರಿದರೆ ಕರುಳು ಛಿದ್ರವಾಗುವ ಅಪಾಯವಿತ್ತು. ಆಗ ಇನ್ನೊಂದು ಶಸ್ತ್ರಚಿಕಿತ್ಸೆ ಅಗತ್ಯವಾಗಿತ್ತು. ಮಗು ಈಗ ಸಂಪೂರ್ಣವಾಗಿ ಆರೋಗ್ಯವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಟಾಕ್ಸಿಕ್’ ಬಗ್ಗೆ ಭಯವಿಲ್ಲ ಎಂದಿದ್ದ ಹೀರೋ ಈಗ ಹೆಜ್ಜೆ ಹಿಂದಿಟ್ಟಿದ್ದೇಕೆ? – Kannada News | Adavi Shesh avoid clash with Toxic and Dhurandhar 2

ಮಾರ್ಚ್ ತಿಂಗಳಲ್ಲಿ ಕೆಲವು ಬಲು ದೊಡ್ಡ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಅದರಲ್ಲೂ ಯಶ್ ನಟನೆಯ ‘ಟಾಕ್ಸಿಕ್’ (Toxic) ಮತ್ತು ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಎರಡೂ ಮಾರ್ಚ್ 19ರಂದು ಒಂದೇ ದಿನ ಬಿಡುಗಡೆ ಆಗಲಿದ್ದು ಬೇರೆ ಸಿನಿಮಾಗಳೆಲ್ಲ ದೊಡ್ಡ ಸಿನಿಮಾಗಳಿಗೆ ದಾರಿ ಮಾಡಿ ಕೊಡುತ್ತಿವೆ. ಆದರೆ ಅದೇ ದಿನ ಅಂದರೆ ಮಾರ್ಚ್ 19ರಂದೇ ತೆಲುಗಿನ ನಟ ಅಡವಿ ಶೇಷ್ ನಟನೆಯ ‘ಡಕಾಯಿತ್’ ಸಿನಿಮಾ ಬಿಡುಗಡೆಗೆ ಅಣಿಯಾಗಿತ್ತು. ಆದರೆ ಇದೀಗ ಸಿನಿಮಾದ ಬಿಡುಗಡೆಯನ್ನು ಅಚಾನಕ್ಕಾಗಿ ಮುಂದೂಡಲಾಗಿದೆ.

ಮಾರ್ಚ್ 19ರಂದು ಸಿನಿಮಾ ಬಿಡುಗಡೆ ಘೋಷಿಸಿದಾಗ ನಾಯಕ ಅಡವಿ ಶೇಷ್ ಅವರನ್ನು ಅವರ ನಿರ್ಣಯದ ಬಗ್ಗೆ ಪ್ರಶ್ನೆ ಮಾಡಲಾಗಿತ್ತು. ‘ಟಾಕ್ಸಿಕ್’ ಅಂಥಹಾ ದೊಡ್ಡ ಸಿನಿಮಾ ಬಿಡುಗಡೆ ಆಗುವ ದಿನದಂದೇ ಏಕೆ ನೀವು ಬಿಡುಗಡೆ ಮಾಡುತ್ತಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿದ್ದ ಅಡವಿ ಶೇಷ್, ‘ನಮಗೆ ‘ಟಾಕ್ಸಿಕ್’ ಬಗ್ಗೆ ಭಯ ಇಲ್ಲ. ನಾನು ಅಂಡರ್​ಡಾಗ್ ಆಗಿಯೇ ಗೆದ್ದುಕೊಂಡು ಬಂದವನು. ಜನರಿಗೆ ಸರ್ಪ್ರೈಸ್ ನೀಡುತ್ತಲೇ ಬಂದಿದ್ದೇನೆ. ಅಲ್ಲದೆ, 2018ರ ನೆನಪು ನನಗೆ ಚೆನ್ನಾಗಿ ಇದೆ, ‘ಕೆಜಿಎಫ್ ಚಾಪ್ಟರ್ 1’ ಸಿನಿಮಾ ಶಾರುಖ್ ಖಾನ್ ನಟನೆಯ ‘ಜೀರೊ’ ಸಿನಿಮಾದ ಎದುರು ಬಿಡುಗಡೆ ಆಗಿತ್ತು, ಸಿನಿಮಾ ವ್ಯಾಕರಣವನ್ನೇ ಬದಲಾಯಿಸಿತು’ ಎಂದಿದ್ದಾರೆ. ಆ ಮೂಲಕ ತಾವು ‘ಟಾಕ್ಸಿಕ್’ ಎದುರು ಬಿಡುಗಡೆ ಮಾಡಿ ಸಿನಿಮಾ ಗೆಲ್ಲಿಸುತ್ತೇವೆ ಎಂದಿದ್ದರು.

ಇದನ್ನೂ ಓದಿ:‘ಧುರಂಧರ್ 2’ ಚಿತ್ರವನ್ನು‘ಟಾಕ್ಸಿಕ್’ ಕಬಳಿಸಿಯಾಗಿದೆ; ಹಿಂದಿ ಮಂದಿಯ ಅಭಿಪ್ರಾಯ

ಆದರೆ ಈಗ ನಿಜ ಪರಿಸ್ಥಿತಿಯ ಅರಿವಾದಂತಿದ್ದು, ಸಿನಿಮಾದ ಬಿಡುಗಡೆಯನ್ನು ಮುಂದೂಡಿದ್ದಾರೆ. ಅಡವಿ ಶೇಷ್, ಮೃಣಾಲ್ ಠಾಕೂರ್, ಅನುರಾಗ್ ಕಶ್ಯಪ್, ಪ್ರಕಾಶ್ ರೈ ನಟಿಸಿರುವ ‘ಡಕೈತ್’ ಸಿನಿಮಾ ಏಪ್ರಿಲ್ 10ಕ್ಕೆ ಬಿಡುಗಡೆ ಆಗಲಿದೆ. ಮಾರ್ಚ್ 19ಕ್ಕೆ ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗುತ್ತಿವೆ. ಅದರ ಐದು ದಿನಗಳ ಬಳಿಕ ಅಂದರೆ ಮಾರ್ಚ್ 26 ರಂದು ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಬಿಡುಗಡೆ ಆಗಲಿದೆ.

‘ಡಕೈತ್’ ಸಿನಿಮಾ ಭಿನ್ನ ಪ್ರೇಮಕತೆಯುಳ್ಳ ಆಕ್ಷನ್ ಸಿನಿಮಾ ಆಗಿದ್ದು, ಈಗಾಗಲೇ ಬಿಡುಗಡೆ ಆಗಿರುವ ಸಿನಿಮಾದ ಟೀಸರ್ ಸಖತ್ ಗಮನ ಸೆಳೆದಿದೆ. ಸಿನಿಮಾವನ್ನು ಶನೀಲ್ ದಿಯೊ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಬಗ್ಗೆ ನಟ ಅಡವಿ ಶೇಷ್ ಭಾರಿ ನಿರೀಕ್ಷೆಗಳನ್ನು ಇರಿಸಿಕೊಂಡಿದ್ದಾರೆ. ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ ಸಿನಿಮಾದ ವಿರುದ್ಧ ಹೋಗದಂತೆ ಅಭಿಮಾನಿಗಳು ಎಚ್ಚರಿಕೆ ನೀಡಿದ್ದರು. ಕೊನೆಗೂ ಈಗ ಅಡವಿ ಶೇಷ್ ಸೂಕ್ತ ನಿರ್ಣಯವನ್ನೇ ತೆಗೆದುಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 5:52 pm, Wed, 4 February 26

Source link

IND vs SA: ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ; ಅಭಿಷೇಕ್- ಕಿಶನ್​ಗೆ ಓಪನಿಂಗ್ ಜವಾಬ್ದಾರಿ – Kannada News | India vs South Africa T20 WC 2026 Warm up: Ishan Kishan Opens, Sanju Samson’s Fate Hangs

2026 ರ ಟಿ20 ವಿಶ್ವಕಪ್‌ಗೆ ( T20 World Cup 2026) ಮುಂಚಿತವಾಗಿ ಎಲ್ಲಾ ತಂಡಗಳು ಅಭ್ಯಾಸ ಪಂದ್ಯಗಳನ್ನು ಆಡುತ್ತಿವೆ. ಅದರಂತೆ ಆತಿಥೇಯ ಟೀಂ ಇಂಡಿಯಾ ಕೂಡ ತನ್ನ ಮೊದಲ ಮತ್ತು ಏಕೈಕ ಅಭ್ಯಾಸ ಪಂದ್ಯವನ್ನು ದಕ್ಷಿಣ ಆಫ್ರಿಕಾ (India vs South Africa) ವಿರುದ್ಧ ಆಡುತ್ತಿದೆ. ಈ ಪಂದ್ಯವು ನವಿ ಮುಂಬೈನ ಡಿವೈ ಸ್ಟೇಡಿಯಂ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಟಾಸ್ ಜೊತೆಗೆ ಎರಡು ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.

ಸಂಜು- ಕಿಶನ್ ಆರಂಭಿಕರು

ವಾಸ್ತವವಾಗಿ ಈ ಅಭ್ಯಾಸ ಪಂದ್ಯಕ್ಕೂ ಮುನ್ನ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಿತ್ತು. ಈ ಸರಣಿಯಲ್ಲಿ ಸಂಜು ಸ್ಯಾಮ್ಸನ್ ಎಲ್ಲಾ ಪಂದ್ಯಗಳಲ್ಲಿ ಅಭಿಷೇಕ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸಿದ್ದರು. ಆದರೆ ಅವರ ಫಾರ್ಮ್ ಅಷ್ಟೇನೂ ಉತ್ತಮವಾಗಿರಲಿಲ್ಲ. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಈ ಅಭ್ಯಾಸ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಜೊತೆಗೆ ಇಶಾನ್ ಕಿಶನ್​ಗೆ ಇನ್ನಿಂಗ್ಸ್ ಆರಂಭಿಸುವ ಜವಾಬ್ದಾರಿಯನ್ನು ನೀಡಲಾಗಿದೆ. ಈ ಜೋಡಿ ಈ ಪಂದ್ಯದಲ್ಲಿ ಅಬ್ಬರಿಸಿದರೆ, ಸಂಜು ಸ್ಯಾಮ್ಸನ್ ಟಿ20 ವಿಶ್ವಕಪ್​ನಲ್ಲಿ ಬೆಂಚ್ ಕಾಯುವುದು ಖಚಿತ.

ಟಿ20 ವಿಶ್ವಕಪ್‌ನಲ್ಲಿ ಅಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್​ ಯಾರು ಗೊತ್ತಾ?

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್ ಮತ್ತು ವರುಣ್ ಚಕ್ರವರ್ತಿ.

ದಕ್ಷಿಣ ಆಫ್ರಿಕಾ ತಂಡ: ಐಡೆಮ್ ಮಾರ್ಕ್ರಾಮ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಯಾನ್ ರಿಕಲ್ಟನ್, ಡೇವಿಡ್ ಮಿಲ್ಲರ್, ಡೆವಾಲ್ಡ್ ಬ್ರೆವಿಸ್, ಜಾರ್ಜ್ ಲಿಂಡೆ, ಜೇಸನ್ ಸ್ಮಿತ್, ಮಾರ್ಕೊ ಯಾನ್ಸೆನ್, ಟ್ರಿಸ್ಟಾನ್ ಸ್ಟಬ್ಸ್, ಕಾರ್ಬಿನ್ ಬಾಷ್, ಅನ್ರಿಚ್ ನೋಕಿಯಾ, ಕಗಿಸೊ ರಬಾಡ, ಕೇಶವ್ ಮಹಾರಾಜ್, ಕ್ವೆನಾ ಮಾಫಕ ಮತ್ತು ಲುಂಗಿ ಎನ್‌ಗಿಡಿ.

Published On – 7:06 pm, Wed, 4 February 26

Source link

‘ಧುರಂಧರ್’ ಸಿನಿಮಾದ 4 ಕೋಟಿ ಟಿಕೆಟ್ ಮಾರಾಟ; ಶಾರುಖ್, ಆಮಿರ್ ದಾಖಲೆ ಉಡೀಸ್ – Kannada News | Ranveer Singh starrer Dhurandhar movie sells total 4 Cr Tickets in India

ರಣವೀರ್ ಸಿಂಗ್ ನಟನೆಯ ‘ಧುರಂಧರ್’ (Dhurandhar) ಸಿನಿಮಾ ಹಲವು ದಾಖಲೆಗಳನ್ನು ಮುರಿದಿದೆ. ಬಾಕ್ಸ್ ಆಫೀಸ್​​ನಲ್ಲಿ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ಈ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಈ ಚಿತ್ರದ ಒಟ್ಟು 4 ಕೋಟಿ ಟಿಕೆಟ್​​ಗಳು ಮಾರಾಟ ಆಗಿವೆ! ಈ ಮೂಲಕ ಆಮಿರ್ ಖಾನ್, ಶಾರುಖ್ ಖಾನ್ ಮುಂತಾದ ಸ್ಟಾರ್ ನಟರ ಸಿನಿಮಾಗಳು ಈ ಮೊದಲು ಮಾಡಿದ್ದ ದಾಖಲೆಯನ್ನು ‘ಧುರಂಧರ್’ ಮುರಿದು ಹಾಕಿದೆ. ಪ್ರೇಕ್ಷಕರಿಂದ ಈ ಸಿನಿಮಾಗೆ ಫುಲ್ ಮಾರ್ಕ್ಸ್ ಸಿಕ್ಕಿದೆ.

ಕಳೆದ ವರ್ಷ ಡಿಸೆಂಬರ್ 5ರಂದು ‘ಧುರಂಧರ್’ ಸಿನಿಮಾ ಬಿಡುಗಡೆ ಆಗಿತ್ತು. ಆದಿತ್ಯ ಧಾರ್ ನಿರ್ದೇಶನ ಮಾಡಿದ ಈ ಸಿನಿಮಾ ಮೊದಲ ದಿನ ಗಳಿಸಿದ್ದು 30 ಕೋಟಿ ರೂಪಾಯಿ. ನಂತರ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಬಾಯಿ ಮಾತಿನ ಪ್ರಚಾರ ಚೆನ್ನಾಗಿ ಸಿಕ್ಕಿತು. ಆದ್ದರಿಂದ ಜನರು ಮುಗಿಬಿದ್ದು ಸಿನಿಮಾ ನೋಡಿದರು. ಬರೋಬ್ಬರಿ 4 ಕೋಟಿ ಟಿಕೆಟ್​​ಗ್ಳು ಮಾರಾಟ ಆಗಿವೆ ಎಂಬ ಮಾಹಿತಿ ಸಿಕ್ಕಿದೆ.

ಈ ಮೊದಲು ಶಾರುಖ್ ಖಾನ್ ನಟನೆಯ ‘ಕುಚ್ ಕುಚ್ ಹೋತಾ ಹೈ’ ಸಿನಿಮಾದ 3.5 ಕೋಟಿ ಟಿಕೆಟ್​ಗಳು ಮಾರಾಟ ಆಗಿದ್ದವು. ಆಮಿರ್ ಖಾನ್ ನಟನೆಯ ‘ದಂಗಲ್’ ಸಿನಿಮಾದ 3.7 ಕೋಟಿ ಟಿಕೆಟ್​​​ಳು ಮಾರಾಟ ಆಗಿದ್ದವು. ‘ಪಿಕೆ’ ಸಿನಿಮಾದ 3.5 ಕೋಟಿ ಟಿಕೆಟ್ ಮಾರಾಟ ಮಾಡಲಾಗಿತ್ತು. ಆ ಎಲ್ಲ ಸಿನಿಮಾಗಳನ್ನು ‘ಧುರಂಧರ್’ ಹಿಂದಿಕ್ಕಿದೆ.

ಅಂದಹಾಗೆ, ಈವರೆಗೂ ಭಾರತೀಯ ಚಿತ್ರರಂಗದಲ್ಲಿ 4 ಕೋಟಿಗೂ ಅಧಿಕ ಟಿಕೆಟ್​​ಗಳನ್ನು ಮಾರಾಟ ಮಾಡಿರುವುದು 19 ಸಿನಿಮಾಗಳು ಮಾತ್ರ. ‘ಬಾಹುಬಲಿ 2’, ‘ಶೋಲೆ’, ‘ಮೊಘಲ್ ಎ ಆಜಂ’, ‘ಮದರ್ ಇಂಡಿಯಾ’ ಸಿನಿಮಾಗಳು ಅಂದಾಜು ತಲಾ 10 ಕೋಟಿ ಟಿಕೆಟ್ ಮಾರಾಟ ಮಾಡಿದ್ದವು! ಆ ದಾಖಲೆಯನ್ನು ಮುರಿಯಲು ‘ಧುರಂದರ್’ ಸಿನಿಮಾಗೆ ಸಾಧ್ಯವಾಗಿಲ್ಲ.

ಇದನ್ನೂ ಓದಿ: ‘ಧುರಂಧರ್ 2’ ಸಿನಿಮಾದಲ್ಲಿ ಸಲ್ಮಾನ್ ಖಾನ್? ವೈರಲ್ ಆಗಿದೆ ಫೋಟೋ

‘ಧುರಂಧರ್’ ಸಿನಿಮಾದ ಭಾರಿ ಯಶಸ್ಸಿನಿಂದಾಗಿ ಇದರ ಸೀಕ್ವೆಲ್ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಮಾರ್ಚ್ 19ರಂದು ‘ಧುರಂದರ್ 2’ ರಿಲೀಸ್ ಆಗಲಿದೆ. ‘ಧುರಂಧರ್’ ಮಾಡಿದ ದಾಖಲೆಯಲ್ಲಿ ‘ಧುರಂಧರ್ 2’ ಸಿನಿಮಾ ಮುರಿಯುತ್ತಾ ಎಂಬುದನ್ನು ಕಾದುನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version