Headlines

ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ಸೇರಿದ ಭಾರತದ ಎಲ್‌ಪಿಜಿ ಟ್ಯಾಂಕರ್

ಅಹಮದಾಬಾದ್, ಮಾರ್ಚ್ 16: ಎಲ್‌ಪಿಜಿ ಸಾಗಿಸುವ ಎರಡು ಭಾರತೀಯ ಧ್ವಜ ಹೊಂದಿರುವ ಹಡಗುಗಳಿಗೆ ಇರಾನಿನ ಅಧಿಕಾರಿಗಳು ಹಾರ್ಮುಜ್ ಜಲಸಂಧಿಯನ್ನು (Strait of Hormuz) ದಾಟಲು ಅನುಮತಿ ನೀಡಿದ್ದರು. ಅವುಗಳಲ್ಲಿ ಒಂದು ಶಿವಾಲಿಕ್, ಇನ್ನೊಂದು ಹಡಗು ನಂದಾ ದೇವಿ. ಹಾರ್ಮುಜ್ ಜಲಸಂಧಿ ದಾಟಿರುವ ಶಿವಾಲಿಕ್ ಹಡಗು ಎಲ್​ಪಿಜಿಯನ್ನು ಹೊತ್ತು ಗುಜರಾತ್​​ನ ಮುಂದ್ರಾ ಬಂದರನ್ನು ತಲುಪಿದೆ. ನಂದಾ ದೇವಿ ಹಡಗು ನಾಳೆ ಕಾಂಡ್ಲಾ ಬಂದರಿಗೆ ಆಗಮಿಸುವ ನಿರೀಕ್ಷೆಯಿದೆ. ಈ ಹಡಗುಗಳು ಸುಮಾರು 92,700 ಮೆಟ್ರಿಕ್ ಟನ್ ಎಲ್‌ಪಿಜಿಯನ್ನು ಹೊತ್ತೊಯ್ದಿವೆ. ಇನ್ನಷ್ಟು…

Read More

Video: ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಎನ್‌ಸಿಪಿ ನಾಯಕಿ ಸುನೇತ್ರಾ ಪವಾರ್ ಅಧಿಕಾರ ಸ್ವೀಕಾರ – Kannada News | Sunetra Pawar Assumes Office as Maharashtra’s Deputy Chief Minister

ಪುಣೆ, ಫೆಬ್ರವರಿ 10: ಎನ್​ಸಿಪಿಯ ಹಿರಿಯ ನಾಯಕಿ ಸುನೇತ್ರಾ ಪವಾರ್ ಇಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಸಚಿವಾಲಯಕ್ಕೆ ಆಗಮಿಸಿ ತಮ್ಮ ಕೆಲಸ ಆರಂಭಿಸಿದ್ದಾರೆ. ಸುನೇತ್ರಾ ಪವಾರ್ ಅವರು ರಾಜ್ಯದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿರುವುದರಿಂದ ಇದು ಮಹಾರಾಷ್ಟ್ರ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ಸುನೇತ್ರಾ ಅವರ ಪತಿ ಅಜಿತ್ ಪವಾರ್ ಅವರ ಹಠಾತ್ ನಿಧನದ ನಂತರ ಅವರು ಈ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಅಧಿಕಾರ ವಹಿಸಿಕೊಳ್ಳುವ ಮೊದಲು, ಸುನೇತ್ರಾ ಪವಾರ್ ಮುಂಬೈನ ಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ…

Read More

ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ – Kannada News | Next CM DK Shivakumar Slogans Echo at KPCC Office Bangalore Amid Leadership Buzz in Karnataka Congress

ಬೆಂಗಳೂರು, ಜನವರಿ 8: ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂದೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಎಂಬ ಘೋಷಣೆಗಳು ಮೊಳಗಿವೆ. ಕಾರ್ಯಕರ್ತರು, ‘‘ಮುಂದಿನ ಸಿಎಂ ಡಿಕೆ ಶಿವಕುಮಾರ್ ಸಾಹೇಬ್ರಿಗೆ ಜೈ’’ ಎಂದು ಘೋಷಣೆ ಕೂಗಿ ಜೈಕಾರ ಹಾಕಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಅವರನ್ನು ಅಸ್ಸಾಂ ಚುನಾವಣೆಗೆ ಹಿರಿಯ ವೀಕ್ಷಕರನ್ನಾಗಿ ನೇಮಿಸಿದೆ. ಈ ನಿರ್ಧಾರ, ನಾಯಕತ್ವ ಬದಲಾವಣೆಯ ಕುರಿತ ಚರ್ಚೆಗಳಿಗೆ ಪಂಚರಾಜ್ಯಗಳ ಚುನಾವಣೆ ಮುಗಿಯುವವರೆಗೆ ವಿರಾಮ ನೀಡುವ ಪರೋಕ್ಷ ಸಂದೇಶ ಎಂದು ಕಾಂಗ್ರೆಸ್ ವಲಯದಲ್ಲಿ…

Read More

ಅಯೋಧ್ಯೆಗೆ ಹೊರಟ ಮೈಸೂರಿನ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ, ಕೋಚ್ ಹೇಗಿದೆ ನೋಡಿ – Kannada News | Railway Department arrangements Special compartment to Mysuru Ganapathi Sachidananda swamiji for Traveling To ayodhya

ಮೈಸೂರು, (ಡಿಸೆಂಬರ್ 22): ಇದೇ ಡಿಸೆಂಬರ್ 24 ರಿಂದ 28ರವರೆಗೆ ಅಯೋಧ್ಯೆಯಲ್ಲಿ ನೂತನ ಗಣಪತಿ ಸಚ್ಚಿದಾನಂದ ಆಶ್ರಮ ಲೋಕಾರ್ಪಣೆಯಾಗಲಿದೆ. ಹೀಗಾಗಿ ಗಣಪತಿ ಸಚ್ಚಿದಾನಂದ ಶ್ರೀ‌ಗಳು, ಮೈಸೂರಿನಿಂದ 1 ಸಾವಿರ ಜನರನ್ನು ಉಚಿತವಾಗಿ ಅಯೋಧ್ಯೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಒಂದು ಸಾವಿರ ಜನರ ಜತೆಗೆ ಶ್ರೀಗಳು ಸಹ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಶ್ರೀಗಳು ಮೂರು ದಿನ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಹೀಗಾಗಿ ರೈಲ್ವೆ ಇಲಾಖೆಯು ಶ್ರೀಗಳ ಬೋಗಿಯನ್ನು ವಿಶೇಷವಾಗಿ ಸಿದ್ದಗೊಳಸಿದೆ. ಕೂರಲು ಸೋಫಾ, ಮಲಗಲು ಬೆಡ್,…

Read More

ಭಕ್ತರು ತಿಂದುಂಡ ತಟ್ಟೆ-ಲೋಟ ತೊಳೆದ ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಪ್ರಸ್ತುತ ಹಾಲಿವುಡ್​​ನಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್​​ನೊಂದಿಗೆ ಸಂಬಂಧ ಕಡಿದುಕೊಂಡು ಹಲವು ವರ್ಷಗಳಾಗಿದ್ದು ಇದೀಗ ‘ವಾರಣಾಸಿ’ ಸಿನಿಮಾ ಮೂಲಕ ಭಾರತೀಯ ಚಿತ್ರರಂಗಕ್ಕೆ ವಾಪಸ್ಸಾಗಿದ್ದಾರೆ. ಸ್ಟಾರ್ ನಟಿಯಾಗಿರುವ ಪ್ರಿಯಾಂಕಾ ಚೋಪ್ರಾ ಅವರ ಜೀವನ ಶೈಲಿಯೂ ಸ್ಟಾರ್ ಮಾದರಿಯಲ್ಲಿಯೇ ಇದೆ. ಪತಿ ನಿಕ್ ಜೋನಸ್ ಜೊತೆಗೆ ಅಮೆರಿಕದ ಪ್ರತಿಷ್ಠಿತ ಬೆವರ್ಲಿ ಹಿಲ್ಸ್​​ನ ಐಶಾರಾಮಿ ಮನೆಯಲ್ಲಿ ವಾಸಿಸುತ್ತಾರೆ. ಆದರೆ ಇದೀಗ ಪ್ರಿಯಾಂಕಾ ಚೋಪ್ರಾ, ಸಾಮಾನ್ಯರಂತೆ, ಸಾಮಾನ್ಯ ಜನ ತಿಂದುಂಡು ಬಿಟ್ಟು ಹೋದ ತಟ್ಟೆ-ಲೋಟಗಳನ್ನು ತೊಳೆದಿದ್ದು, ಆ ವಿಡಿಯೋ…

Read More

VHT ಯಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾ ಪ್ಲೇಯರ್ಸ್ ಪಟ್ಟಿ ಇಲ್ಲಿದೆ – Kannada News | Virat Kohli, KL Rahul and Jadeja to play Vijay Hazare Trophy in January

ವಿಜಯ ಹಝಾರೆ ಟೂರ್ನಿಯ ಮೊದಲ ಸುತ್ತಿನ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದ ಟೀಮ್ ಇಂಡಿಯಾ ಕೆಲ ಆಟಗಾರರು ಜನವರಿಯಲ್ಲಿ ನಡೆಯಲಿರುವ ದ್ವಿತೀಯ ಸುತ್ತಿನಲ್ಲೂ ಕಣಕ್ಕಿಳಿಯಲಿದ್ದಾರೆ. ಅದರಲ್ಲೂ ಭಾರತ ಏಕದಿನ ತಂಡದ ಆಟಗಾರರು ಜನವರಿ ಮೊದಲ ವಾರದಲ್ಲಿ ದೇಶೀಯ ಟೂರ್ನಿಯಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಅದರಂತೆ ಭಾರತ ಟೆಸ್ಟ್ ಮತ್ತು ಏಕದಿನ ತಂಡದ ನಾಯಕರಾಗಿರುವ ಶುಭ್​​ಮನ್ ಗಿಲ್ ಜನವರಿ 3 ಮತ್ತು 6 ರಂದು ಪಂಜಾಬ್ ಪರ ಪಂದ್ಯಗಳನ್ನು ಆಡಲಿದ್ದಾರೆ ಎಂದು ತಿಳಿದು ಬಂದಿದೆ. ಪ್ರಸ್ತುತ ಮಾಹಿತಿ ಪ್ರಕಾರ, ಶುಭ್​ಮನ್ ಗಿಲ್ ಸಿಕ್ಕಿಂ…

Read More

ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!

ಬಾಗಲಕೋಟೆ, ಮಾರ್ಚ್​ 22: ಹೊನ್ನಾಕಟ್ಟಿ ಚೆಕ್ ಪೋಸ್ಟ್‌ನಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂಪಾಯಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಹಣ ರಾಯಚೂರಿನ ಬಿ. ವೀರೇಶ್ ಬಾಬು ಅವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಈ ಹಣವನ್ನು ರಾಯಚೂರಿನಿಂದ ಬೆಳಗಾವಿ ಕಡೆಗೆ ಕಾರಿನಲ್ಲಿ ಸಾಗಿಸಲಾಗುತ್ತಿತ್ತು. ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರು ಯಾವುದೇ ಸೂಕ್ತ ದಾಖಲೆಗಳಿಲ್ಲದೆ ನಗದು ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಿ, ತಕ್ಷಣವೇ ಹಣವನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ರಾಜ್ಯದಲ್ಲಿ ಬಾಗಲಕೋಟೆ ಹಾಗೂ…

Read More

ಆಹಾರ, ನೀರಿಲ್ಲದೇ 4 ದಿನಗಳ ಕಾಲ ಕಾಡಲ್ಲಿ ಬದುಕುಳಿದಿದ್ದೇಗೆ? ವನವಾಸವನ್ನ ಬಿಚ್ಚಿಟ್ಟ ಶರಣ್ಯಾ

ಕೊಡಗು, (ಏಪ್ರಿಲ್ 08): ಜಿಲ್ಲೆಯ ಅತ್ಯಂತ ಎತ್ತರದ ಶಿಖರ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯಾ ಕೊನೆಗೂ 4 ದಿನದ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ನಾಲ್ಕು ದಿನಗಳಿಂದ ದಟ್ಟಾರಣ್ಯದಲ್ಲಿ ಆಹಾರವಿಲ್ಲದೆ, ಕೇವಲ ಒಂದು ಬಾಟಲಿ ನೀರಿನ ಸಹಾಯದಿಂದ ಬದುಕುಳಿದಿದ್ದ ಈ ಸಾಹಸಿ ಯುವತಿಯನ್ನು ಏಪ್ರಿಲ್ 05ರಂದು ಪತ್ತೆ ಮಾಡಿ ಕಾಡಿನಿಂದ ಹೊರಗೆ ಕರೆದುಕೊಂಡು ಬರಲಾಗಿದೆ. ಇನ್ನು ದಟ್ಟಾರಣ್ಯದಲ್ಲಿ ಶರಣ್ಯಾ ದಾರಿ ತಪ್ಪಿದ್ದಿದ್ಹೇಗೆ? ಒಂದೇ ಬಾಟಲಿ ನೀರಿನಿಂದ ನಾಲ್ಕು ದಿನ ಬದುಕುಳಿದಿದ್ಹೆಗೆ? ನಾಲ್ಕು ದಿನದ…

Read More

ಚಿಕ್ಕಪ್ಪನಿಗಾಗಿ ‘ಪೆದ್ದಿ’ ಸಿನಿಮಾ ಬಿಡುಗಡೆ ಮುಂದೂಡಿದರೇ ರಾಮ್ ಚರಣ್? – Kannada News | Ram Charan starrer Peddi movie release date announce

ರಾಮ್ ಚರಣ್ (Ram Charan) ಇತ್ತೀಚೆಗಷ್ಟೆ ಮತ್ತೆ ತಂದೆ ಆಗಿದ್ದಾರೆ. ಈಗಾಗಲೇ ಮುದ್ದಾದ ಹೆಣ್ಣು ಮಗುವಿನ ತಂದೆ ಆಗಿದ್ದ ರಾಮ್ ಚರಣ್ ಈಗ ಮತ್ತೊಮ್ಮೆ ಅವಳಿ ಮಕ್ಕಳಿಗೆ ತಂದೆ ಆಗಿದ್ದಾರೆ. ಕೆಲ ದಿನಗಳ ಹಿಂದಷ್ಟೆ ರಾಮ್ ಚರಣ್​ ಪತ್ನಿ ಉಪಾಸನಾಗೆ ಒಂದು ಗಂಡು ಮತ್ತು ಒಂದು ಹೆಣ್ಣು ಮಗು ಜನಿಸಿದೆ. ಅದೇ ಖುಷಿಯಲ್ಲಿ ಇದೀಗ ರಾಮ್ ಚರಣ್ ಹೊಸ ಸಿನಿಮಾದ ಬಿಡುಗಡೆ ದಿನಾಂಕವೂ ಘೋಷಣೆಯಾಗಿದೆ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ಸತತ ಎರಡು ದೊಡ್ಡ ಸೋಲು ಕಂಡ ರಾಮ್…

Read More

Video: ಭಾರತದಲ್ಲಿ ನೆಲೆಸುವ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ಕೆನಡಿಯನ್ ವ್ಯಕ್ತಿ

ವಿದೇಶಿಗರಿಗೆ ಭಾರತದ ಅಂದ್ರೆ (foreigner) ಅದೇನೋ ಸೆಳೆತ. ಹೀಗಾಗಿ ಆಚಾರ ವಿಚಾರ, ಉಡುಗೆ ತೊಡುಗೆಯನ್ನು ಇಷ್ಟ ಪಟ್ಟು ತಮ್ಮ ಕುಟುಂಬದೊಂದಿಗೆ ಇಲ್ಲೇ ಜೀವನ ಕಟ್ಟಿಕೊಳ್ಳೋದು ಇದೆ. ಕಳೆದ ಎಂಟು ವರ್ಷಗಳಿಂದ ಬೆಂಗಳೂರಿನಲ್ಲಿ (Bengaluru) ವಾಸಿಸುತ್ತಿರುವ ಕೆನಡಾದ ವ್ಯಕ್ತಿಯೊಬ್ಬರು ತಾನು ಮಾತ್ರ ಭಾರತದಲ್ಲಿ ನೆಲೆಸಲು ಯಾಕೆ ಆಯ್ಕೆ ಮಾಡಿಕೊಂಡೆ ಎಂದು ವಿಡಿಯೋ ಮಾಡಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆದಿದೆ. ಕ್ಯಾಲೆಬ್ ಫ್ರೀಸೆನ್ (@caleb_friesen) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಬೆಂಗಳೂರಿನಲ್ಲಿ ವಾಸಿಸುವ…

Read More