Headlines

ಸಾಧ್ಯವಿದ್ರೆ ಕಾಂಗ್ರೆಸ್ ಬಿಟ್ಟು ಗೆದ್ದು ತೋರ್ಸಿ ನೋಡೋಣ! ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್

ಮೈಸೂರು, ಏಪ್ರಿಲ್ 10: ಜೆಡಿಎಸ್ ಬಗ್ಗೆ ಹಗುರವಾಗಿ ಮಾತನಾಡುವ ಸಿಎಂ ಸಿದ್ದರಾಮಯ್ಯ ಅದೇ ಪಕ್ಷದಲ್ಲಿ ರಾಜಕೀಯ ಅಸ್ತಿತ್ವ ಕಂಡುಕೊಂಡವರು ಎಂಬುದನ್ನು ಮರೆಯಬಾರದು ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, 1999ರ ಚುನಾವಣೆಯಲ್ಲಿ ಮತ್ತು ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋತಿದ್ದನ್ನು ಉಲ್ಲೇಖಿಸಿದರು. ಜನ ಅವರನ್ನು ರಾಜಕೀಯದಿಂದ ದೂರವಿಟ್ಟಿದ್ದರು ಎಂದು ಹೇಳಿದರು. ಅಲ್ಲದೆ, ಕಾಂಗ್ರೆಸ್ ತೊರೆದು ಐದರಿಂದ ಹತ್ತು ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದು ತೋರಿಸುವಂತೆ ಸವಾಲು ಹಾಕಿದರು. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

IPL 2026: ಗೆಲುವಿನ ಸಂತಸದಲ್ಲಿದ್ದ ಲಕ್ನೋ ತಂಡಕ್ಕೆ ಆಘಾತ; ಸ್ಟಾರ್ ಆಲ್‌ರೌಂಡರ್ ಐಪಿಎಲ್​ನಿಂದ ಔಟ್

2026 ರ ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಭರ್ಜರಿ ಆರಂಭ ಕಂಡಿದೆ. ಮೊದಲ ಪಂದ್ಯದಲ್ಲಿ ತಂಡ ಸೋತರೂ, ಮುಂದಿನ ಎರಡು ಪಂದ್ಯಗಳನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಅದರಲ್ಲೂ ಮೂರನೇ ಪಂದ್ಯವನ್ನು ಅತ್ಯಂತ ರೋಚಕವಾಗಿ ಗೆದ್ದುಕೊಂಡಿದ್ದ ಲಕ್ನೋ ತಂಡ ಸಂತಸದ ಅಲೆಯಲ್ಲಿ ತೇಲುತ್ತಿತ್ತು. ಇದರ ನಡುವೆ ತಂಡಕ್ಕೆ ಆಘಾತವೊಂದು ಎದುರಾಗಿದೆ. ತಂಡದ ಸ್ಟಾರ್ ಸ್ಪಿನ್ನರ್ ಶ್ರೀಲಂಕಾದ ವನಿಂದು ಹಸರಂಗ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಲಕ್ನೋ ತಂಡದ ನಿರ್ದೇಶಕ ಟಾಮ್ ಮೂಡಿ, ಲಂಕಾ ಆಲ್‌ರೌಂಡರ್ ವನಿಂದು…

Read More

AMFI data: ಮಾರ್ಚ್​ನಲ್ಲಿ ಈಕ್ವಿಟಿ ಫಂಡ್​ಗಳಿಗೆ ಹೂಡಿಕೆ ಸುಗ್ಗಿ; ಶೇ. 55ರಷ್ಟು ಹೆಚ್ಚಿದ ಒಳಹರಿವು

ನವದೆಹಲಿ, ಏಪ್ರಿಲ್ 10: ಕಳೆದ ಒಂದು ಒಂದೂವರೆ ವರ್ಷದಿಂದ ಭಾರತದ ಈಕ್ವಿಟಿ ಮಾರುಕಟ್ಟೆ (stock market) ಹಿನ್ನಡೆಯಲ್ಲಿದ್ದರೂ ಹೂಡಿಕೆ ಆಕರ್ಷಿಸುವುದರಲ್ಲಿ ಹಿಂದೆ ಬಿದ್ದಿಲ್ಲ. ಮ್ಯೂಚುವಲ್ ಫಂಡ್​ನ ಒಟ್ಟಾರೆ ಅಸೆಟ್​ಗಳು (Mutual Fund AUMs) ಕಡಿಮೆಗೊಂಡರೂ ಈಕ್ವಿಟಿ ಸ್ಕೀಮ್​ಗಳು ಭರ್ಜರಿ ಹೂಡಿಕೆ ಪಡೆದಿವೆ. ಭಾರತೀಯ ಮ್ಯೂಚುವಲ್ ಫಂಡ್ ಸಂಸ್ಥೆಯಾದ ಎಎಂಎಫ್​ಐ ಇಂದು (ಏ. 10) ಬಿಡುಗಡೆ ಮಾಡಿದ ಮಾರ್ಚ್ ತಿಂಗಳ ದತ್ತಾಂಶದಲ್ಲಿ ಕೆಲ ಕುತೂಹಲಕಾರಿ ಅಂಶಗಳನ್ನು ಗಮನಿಸಬಹುದು. ಮಾರ್ಚ್ ತಿಂಗಳಲ್ಲಿ ಮ್ಯೂಚುವಲ್ ಫಂಡ್ ಉದ್ಯಮದ ಒಟ್ಟು ಎಯುಎಂ ಅಥವಾ…

Read More

ಸಿದ್ದರಾಮಯ್ಯಗೆ ಹಳೆಯ ದಿನಗಳನ್ನ ನೆನಪಿಸಿ ವ್ಯಂಗ್ಯವಾಡಿದ ಕುಮಾರಸ್ವಾಮಿ

ಮೈಸೂರು, (ಏಪ್ರಿಲ್ 10): ಸಿದ್ದರಾಮಯ್ಯ (Siddaramaiah)  ಜೆಡಿಎಸ್​ನಲ್ಲಿದ್ದಾಗ 58 ಸೀಟು ಗೆದ್ದಿದ್ದೆವು ಅಂತಾರೆ. 1999ರಲ್ಲೂ ಅವರು ಅಧ್ಯಕ್ಷರಾಗಿದ್ದರು, ಆಗ ಎಷ್ಟು ಸೀಟು ಗೆದ್ದಿದ್ದರು? ಮಹದೇವಪ್ಪ, ಸಿದ್ದರಾಮಯ್ಯ ಇಬ್ಬರೂ ಮನೆಗೆ ಬಂದು ಕಣ್ಣೀರಿಟ್ಟಿದ್ದರು. ಅವರು ಕಣ್ಣೀರು ಹಾಕುವಾಗ ಅಲ್ಲಿ ಬಕೆಟ್ ಇದ್ದಿದ್ದರೆ ತುಂಬಿಹೋಗುತ್ತಿತ್ತು. ಸಿದ್ದರಾಮಯ್ಯನವರು ಒಮ್ಮೆ ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಳ್ಳಲಿ ಎಂದು ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ (HD Kumaraswamy)  ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಹಿಂದೆ ಚುನಾವಣೆಯಲ್ಲಿ ದೇವೇಗೌಡರು, ನಾನು, ರೇವಣ್ಣ, ಮಹದೇವಪ್ಪ, ಸಿದ್ದರಾಮಯ್ಯ…

Read More

ಪ್ರೇಮ ಸಂಬಂಧವೋ? ಲವ್​​ ಜಿಹಾದೋ?: ಅಸಲಿಗೆ ಹುಬ್ಬಳ್ಳಿ, ಧಾರವಾಡದಲ್ಲಿ ಆಗ್ತಿರೋದೇನು?

ಹುಬ್ಬಳ್ಳಿ, ಏಪ್ರಿಲ್​​ 10: ರಾಜ್ಯದ ವಾಣಿಜ್ಯ ನಗರ ಹುಬ್ಬಳ್ಳಿ ಮತ್ತು ಶಿಕ್ಷಣ ಕಾಶಿ ಧಾರವಾಡದಲ್ಲಿ ಅದ್ಯಾಕೋ ಗೊತ್ತಿಲ್ಲ ಮೇಲಿಂದ ಮೇಲೆ ಲವ್​​ ಜಿಹಾದ್​​ ಆರೋಪ ಪ್ರಕರಣಗಳು ಕೇಳಿಬರತೊಡಗಿವೆ. ಕಳೆದ ಎರಡು ತಿಂಗಳ ಅವಧಿಯಲ್ಲಿಯೇ ಇಂತಹ ನಾಲ್ಕು ಆರೋಪಗಳು ವರದಿಯಾಗಿದ್ದು, ಈ ಬಗ್ಗೆ ಪರ-ವಿರೋಧ ಚರ್ಚೆಗಳು ಶುರುವಾಗಿವೆ. ಕೆಲವರು ಇದನ್ನು ಪ್ರೇಮ ಸಂಬಂಧ ಮಾತ್ರ ಎಂದು ಕರೆದರೆ, ಇನ್ನು ಕೆಲವರು ಇದು ವ್ಯವಸ್ಥಿತವಾಗಿ ಹಿಂದೂ ಯುವತಿಯರನ್ನು ಮುಸ್ಲಿಂ ಧರ್ಮಕ್ಕೆ ಪ್ರೀತಿ ಪ್ರೇಮದ ಹೆಸರಲ್ಲಿ ಮತಾಂತರ ಮಾಡುವ ಷಡ್ಯಂತ್ರ ಎನ್ನುತ್ತಿದ್ದಾರೆ….

Read More

ಗಣಂಗೂರು ಟೋಲ್‌ನಲ್ಲಿ ಗೂಂಡಾವರ್ತನೆ: ಫಾಸ್ಟ್‌ಟ್ಯಾಗ್‌ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ!

ಮಂಡ್ಯ, ಏಪ್ರಿಲ್ 10: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್ ಸಿಬ್ಬಂದಿ ಯುವಕನ ಮೇಲೆ ಹಲ್ಲೆ ನಡೆಸಿ ಗೂಂಡಾವರ್ತನೆ ತೋರಿದ್ದಾರೆ. ಫಾಸ್ಟ್‌ಟ್ಯಾಗ್‌ನಲ್ಲಿ ಹಣ ಖಾಲಿಯಾದ ಕಾರಣಕ್ಕೆ ಉಂಟಾದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಮಹೇಶ್ ಎಂಬ ಯುವಕನಿಗೆ ಟೋಲ್ ಸಿಬ್ಬಂದಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಎರಡು ದಿನದ ಹಿಂದೆ ಮಹೇಶ್ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ಬರುತ್ತಿದ್ದಾಗ ಫಾಸ್ಟ್‌ಟ್ಯಾಗ್‌ನಲ್ಲಿ ಹಣವಿಲ್ಲದಿರುವುದು ಗೊತ್ತಾಗಿತ್ತು. ಈ ವೇಳೆ ಯುವಕ ತನ್ನ ಪರಿಚಿತರಿಗೆ ಕರೆ ಮಾಡಿ ಮಾತಾಡುವುದಾಗಿ ಹೇಳಿದರೂ ಕೇಳದ ಸಿಬ್ಬಂದಿ,…

Read More

ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾ ಸೆಟ್​​ನಲ್ಲಿ ಬೆಂಕಿ: ಹಲವರಿಗೆ ಗಾಯ

ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ನಿರ್ದೇಶನ ಮಾಡಿ ಪ್ರಭಾಸ್ ನಟಿಸಿರುವ ‘ಸ್ಪಿರಿಟ್’ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದ್ದು, ಇದೀಗ ಸಿನಿಮಾ ಸೆಟ್​​ನಲ್ಲಿ ಅವಘಡ ಸಂಭವಿಸಿದೆ. ‘ಸ್ಪಿರಿಟ್’ ಸಿನಿಮಾ ಸೆಟ್​​ನಲ್ಲಿ ಅಗ್ನಿ ಅವಘಡ ನಡೆದಿದ್ದು, ಚಿತ್ರತಂಡದ ಕೆಲವರಿಗೆ ಗಾಯಗಳಾಗಿವೆ ಎನ್ನಲಾಗುತ್ತಿದೆ. ಸಿನಿಮಾದ ಚಿತ್ರೀಕರಣ ಹೈದರಾಬಾದ್​​ನಲ್ಲಿ ನಡೆಯುತ್ತಿದ್ದು, ಹೈದರಾಬಾದ್​​ನ ಸೆಟ್​​ನಲ್ಲಿ ಈ ಅವಘಡ ಸಂಭವಿಸಿದೆಯಂತೆ. ಶಾರ್ಟ್ ಸರ್ಕ್ಯೂಟ್​​ನಿಂದ ಈ ಅಗ್ನಿ ಅವಘಡ ಸಂಭವಿಸಿದ್ದು, ಸಿನಿಮಾದ ಸಿಬ್ಬಂದಿಗಾಗಿ ಹಾಕಲಾಗಿದ್ದ ಸೆಟ್​​ ಸುಟ್ಟಿವೆ ಹಾಗೂ ಸಿನಿಮಾ ತಂಡದ ಕೆಲವು ವಸ್ತುಗಳು ಅಗ್ನಿಗೆ…

Read More

ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಒಂದು ವಾರದ ನಿರೀಕ್ಷಣಾ ಜಾಮೀನು ಮಂಜೂರು

ಹೈದರಾಬಾದ್, ಏಪ್ರಿಲ್ 10: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ (ಏಪ್ರಿಲ್ 10) ಕಾಂಗ್ರೆಸ್ ನಾಯಕ ಪವನ್ ಖೇರಾ(Pawan Khera) ಅವರಿಗೆ ಒಂದು ವಾರದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಂಬಂಧಿತ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಒಂದು ವಾರ ಕಾಲಾವಕಾಶ ನೀಡಲಾಗಿದೆ. ಖೇರಾ ಅವರ ನಿವಾಸವಿರುವ ಹೈದರಾಬಾದ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಲಾಗಿದೆ. ಗುರುವಾರ ತೆಲಂಗಾಣ ಹೈಕೋರ್ಟ್ ಹಿರಿಯ…

Read More

SSLC ತೃತೀಯ ಭಾಷೆಗೆ ಅಂಕದ ಬದಲಾಗಿ ಗ್ರೇಡ್​​ ಪ್ರಶ್ನಿಸಿ PIL: ಅರ್ಜಿದಾರರಿಗೆ ಬಿಗ್​​ ಶಾಕ್​​ ಕೊಟ್ಟ ಹೈಕೋರ್ಟ್​

ಬೆಂಗಳೂರು, ಏಪ್ರಿಲ್​​ 10: ಎಸ್​​ಎಸ್​​ಎಲ್​​ಸಿ ತೃತೀಯ ಭಾಷೆ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​​ ನೀಡುವ ನಿರ್ಧಾರ ಭಾರಿ ಪರ-ವಿರೋಧ ಚರ್ಚೆಗೆ ಕಾರಣವಾಗಿತ್ತು. ಈ ನಡುವೆ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್​​ಗೆ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಪರೀಕ್ಷೆಯ ಕೊನೆಯ ಹಂತದಲ್ಲಿ ಸರ್ಕಾರದ ತೆಗೆದುಕೊಂಡಿರುವ ಈ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಆರೋಪಿಸಲಾಗಿತ್ತು. ಆದರೆ ಅರ್ಜಿದಾರರಿಗೆ ಹೈಕೋರ್ಟ್​​ ಈಗ ಬಿಗ್​​ ಶಾಕ್​​ ಕೊಟ್ಟಿದೆ. ಅರ್ಜಿದಾರರಿಗೆ…

Read More

ಲೆಬನಾನ್‌ನಲ್ಲಿ ಶಾಂತಿ ಸ್ಥಾಪನೆಯಾಗುವವರೆಗೆ ಚರ್ಚೆ ಇಲ್ಲ, ಅಮೆರಿಕದೊಂದಿಗೆ ಮಾತುಕತೆ ಸ್ಥಗಿತಗೊಳಿಸುವುದಾಗಿ ಇರಾನ್ ಎಚ್ಚರಿಕೆ

ಟೆಹ್ರಾನ್, ಏಪ್ರಿಲ್ 10: ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಆಶಾಕಿರಣವಾಗಿದ್ದ ಅಮೆರಿಕ-ಇರಾನ್(Iran) ಕದನ ವಿರಾಮ ಒಪ್ಪಂದವು ಈಗ ಸಂಪೂರ್ಣ ಕುಸಿತದ ಅಂಚಿಗೆ ಬಂದು ನಿಂತಿದೆ. ನಾಳೆ ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ನಿರ್ಣಾಯಕ ಮಾತುಕತೆಯಿಂದ ಹಿಂದೆ ಸರಿಯುವುದಾಗಿ ಇರಾನ್ ಘೋಷಿಸಿದ್ದು, ಜಾಗತಿಕ ರಾಜಕೀಯದಲ್ಲಿ ಮತ್ತೆ ಆತಂಕದ ಕಾರ್ಮೋಡ ಕವಿಯುವಂತೆ ಮಾಡಿದೆ. ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿದ್ದ 14 ದಿನಗಳ ಕದನ ವಿರಾಮವು ಮುರಿದುಬೀಳುವ ಹಂತಕ್ಕೆ ತಲುಪಿದೆ. ಲೆಬನಾನ್‌ನಲ್ಲಿ ಇಸ್ರೇಲ್ ನಡೆಸುತ್ತಿರುವ ಭೀಕರ ದಾಳಿಗಳನ್ನು ನಿಲ್ಲಿಸದ ಹೊರತು ನಾವು ಯಾವುದೇ ಮಾತುಕತೆಗೆ…

Read More