ಕರಾವಳಿ ಜನರ ಆಸೆಗೆ ತಣ್ಣೀರೆರಚಿದ ರೈಲ್ವೆ ಇಲಾಖೆ!: ಜೂನ್ 3ರ ಬೆಂಗಳೂರು-ಮಂಗಳೂರು ವಂದೇ ಭಾರತ್ ಟ್ರಯಲ್ ರನ್ ದಿಢೀರ್ ಕ್ಯಾನ್ಸಲ್! – Kannada News
ಬೆಂಗಳೂರು-ಮಂಗಳೂರು ವಂದೇ ಭಾರತ್ ಟ್ರಯಲ್ ರನ್ ಕ್ಯಾನ್ಸಲ್Image Credit source: google gemini ಮಂಗಳೂರು, ಜೂ.2: ಬೆಂಗಳೂರು ಮತ್ತು ಮಂಗಳೂರು ನಡುವೆ ಅತಿ ಶೀಘ್ರದಲ್ಲೇ ಸಂಚರಿಸಲಿದೆ ಎನ್ನಲಾಗಿದ್ದ ಪ್ರೀಮಿಯಂ ವಂದೇ ಭಾರತ್ ಎಕ್ಸ್ಪ್ರೆಸ್ (Vande Bharat Express) ರೈಲಿನ ಸೇವೆಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಜೂನ್ 3ರ ಬುಧವಾರದಂದು ನಿಗದಿಯಾಗಿದ್ದ ರೈಲಿನ ಮೊದಲ ಅಧಿಕೃತ ಪ್ರಾಯೋಗಿಕ ಸಂಚಾರವನ್ನು ನೈಋತ್ಯ ರೈಲ್ವೆ (South Western Railway) ವಲಯವು ಕೊನೆ ಘಳಿಗೆಯಲ್ಲಿ ರದ್ದುಗೊಳಿಸಿದ್ದು, ಕರಾವಳಿ ಜನರಲ್ಲಿ ತೀವ್ರ ನಿರಾಶೆ ಮೂಡಿಸಿದೆ….