Headlines

ಮಧ್ಯ, ಉತ್ತರ ಕರ್ನಾಟಕ ಜಿಲ್ಲೆಯ ಜನತೆಗೆ ಮತ್ತೊಂದು ಗುಡ್​​​ನ್ಯೂಸ್ ಕೊಟ್ಟ ಕೇಂದ್ರ – Kannada News | Ashwini Vaishnaw positive response To pralhad joshi Request about Bengaluru pune high speed rail corridor

ನವದೆಹಲಿ, (ಫೆಬ್ರವರಿ 04): ಕರ್ನಾಟಕಕ್ಕೆ (Karnataka) ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ (high speed rail corridor) ಕೊಡುಗೆಯ ಶುಭ ಸೂಚನೆ ಸಿಕ್ಕಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರ ಒತ್ತಾಸೆ ಮೇರೆಗೆ ಕರ್ನಾಟಕದಲ್ಲಿ “ಬೆಂಗಳೂರು ಮತ್ತು ಪುಣೆ” ನಡುವೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ ಗೆ ಚಿಂತನೆ ನಡೆದಿದ್ದು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಒಂದು ವೇಳೆ…

Read More

ಅಕ್ರಮ ವಲಸಿಗರನ್ನ ತೋರಿಸಿದ್ರೂ ಕೇಸ್ ಹಾಕ್ತೀರಿ: ಪೊಲೀಸರಿಗೆ ಕೋರ್ಟ್ ಕ್ಲಾಸ್, ಪುನೀತ್ ಕೆರೆಹಳ್ಳಿಗೆ ರಿಲೀಫ್ – Kannada News | High Court Questions government on Illegal Immigrants, Stays Case Against Puneeth Kerehalli

ಬೆಂಗಳೂರು, ಫೆಬ್ರವರಿ 04: ಅಕ್ರಮ ಬಾಂಗ್ಲಾ ವಲಸಿಗರ ವಿಚಾರವಾಗಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧ ಎರಡೆರಡು ಕೇಸ್​ಗಳು ದಾಖಲಾಗಿದ್ದವು. ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಪುನೀತ್ ಕೆರೆಹಳ್ಳಿ ವಿರುದ್ಧದ ಒಂದು ಪ್ರಕರಣಕ್ಕೆ ತಡೆ ನೀಡಿದ್ದು, ಮತ್ತೊಂದು ಪ್ರಕರಣದಲ್ಲಿ ಬಲವಂತದ ಕ್ರಮಕೈಗೊಳ್ಳದಂತೆ ಆದೇಶ ಹೊರಡಿಸಿದೆ. ಆ ಮೂಲಕ ಹಿಂದೂ ಕಾರ್ಯಕರ್ತನಿಗೆ ಕೊಂಚ್​​ ರಿಲೀಫ್ ಸಿಕ್ಕಂತಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠ ಇಂದು ಪ್ರಕರಣದ ವಿಚಾರಣೆ ಮಾಡಿದ್ದು, ಎಲ್ಲೆಡೆ ಅಕ್ರಮ ವಲಸಿಗರು ಬಂದು ಸೇರಿದ್ದಾರೆ. ಅಕ್ರಮ ವಲಸಿಗರಿದ್ದಾರೆಂದು…

Read More

ಮೊದಲ ಸಿನಿಮಾ ಶೂಟಿಂಗ್ ಮುಗಿಸಿದ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ – Kannada News | Mahakumbh viral girl Monalisa Bhosle completes first film The Diary of Manipur shooting

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದವರೆಲ್ಲ ಯಶಸ್ಸು ಕಾಣಲ್ಲ. ಆದರೆ ತಮಗೆ ಸಿಕ್ಕ ಜನಪ್ರಿಯತೆಯನ್ನು ಸರಿಯಾಗಿ ಬಳಸಿಕೊಂಡರೆ ಖಂಡಿತವಾಗಿಯೂ ಯಶಸ್ಸು ಸಿಗುತ್ತದೆ. ಮಹಾಕುಂಭಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿನಾ ಭೋಸ್ಲೆ (Monalisa Bhosle) ನಿಮಗೆ ನೆನಪಿರಬಹುದು. ಈಗ ಅವರೇನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಕೂಡ ಹಲವರಿಗೆ ಇರಬಹುದು. ಅದಕ್ಕೆ ಉತ್ತರ ಸಿಕ್ಕಿದೆ. ಮೊನಾಲಿಸಾ ಭೋಸ್ಲೆ ಅವರು ತಮ್ಮ ಮೊದಲ ಹಿಂದಿ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ! ಆ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ. ಕಳೆದ ವರ್ಷ ಮಹಾಕುಂಭಮೇಳದಲ್ಲಿ ಮೊನಾಲಿಸಾ ಭೋಸ್ಲೆ ಅವರು…

Read More

ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು – Kannada News | Permission to open bar within distance of government schools: Excise department fraud exposed

ಬೆಂಗಳೂರು, ಫೆಬ್ರವರಿ 04: ಯಲಹಂಕ ವಿಧಾನಸಭಾ ಕ್ಷೇತ್ರದ ದೊಂಬರಹಳ್ಳಿಯಲ್ಲಿರುವ ಸರ್ಕಾರಿ ಶಾಲೆಯ 50 ಮೀಟರ್ ದೂರದಲ್ಲೇ ಸಿಂಹಾದ್ರಿ ಬೋರ್ಡಿಂಗ್, ಲಾಡ್ಜಿಂಗ್, ಬಾರ್ ಆ್ಯಂಡ್​ ರೆಸ್ಟೋರೆಂಟ್​​ಗೆ ಅನುವತಿ ನೀಡಲಾಗಿದೆ. ಈ ಬಗ್ಗೆ ಟಿವಿ9 ಗ್ರೌಂಡ್ ರಿಪೋರ್ಟ್​ ಮೂಲಕ ಸಾಕ್ಷಿ ಸಮೇತ ಅಬಕಾರಿ ಇಲಾಖೆಯ ಕಳ್ಳಾಟ ಬಯಲು ಮಾಡಿದೆ. ಶಾಲಾ-ಕಾಲೇಜುಗಳ 100 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ಮದ್ಯದಂಗಡಿಗಳಿಗೆ ಪರವಾನಗಿ ನೀಡುವಂತಿಲ್ಲ ಎಂಬ ನಿಯಮವಿದ್ದರೂ, ಅಬಕಾರಿ ಉಪ ಆಯುಕ್ತ ಮುರಳಿ ನಿಯಮವನ್ನು ಉಲ್ಲಂಘಿಸಿ ಲೈಸೆನ್ಸ್ ನೀಡಿರುವ ಆರೋಪ ಕೇಳಿಬಂದಿದೆ. ಮತ್ತಷ್ಟು ವಿಡಿಯೋ…

Read More

ಪ್ರಿಯಾಂಕಾ ಚೋಪ್ರಾ ಮನವಿಯನ್ನು ಪುರಸ್ಕರಿಸಿದ ರಾಜಮೌಳಿ, ಆದರೆ… – Kannada News | Priyanka Chopra talks about Rajamouli accepted her request

ರಾಜಮೌಳಿ (Rajamouli) ನಿರ್ದೇಶಿಸುತ್ತಿರುವ ‘ವಾರಣಾಸಿ’ ಸಿನಿಮಾ ಬಿಡುಗಡೆಗೆ ಇನ್ನೂ ಒಂದು ವರ್ಷ ಇರುವಾಗಲೇ ಸಿನಿಮಾದ ಪ್ರಚಾರ ಆರಂಭವಾದಂತಿದೆ. ಕೆಲ ವಾರಗಳ ಹಿಂದಷ್ಟೆ ಬಲು ಅದ್ಧೂರಿಯಾಗಿ ಸಿನಿಮಾದ ಸಣ್ಣ ಟೀಸರ್ ಬಿಡುಗಡೆ ಮಾಡಲಾಯ್ತು. ಸಿನಿಮಾದ ಹೆಸರು ಹಾಗೂ ಮಹೇಶ್ ಬಾಬು ಅವರ ಒಂದು ಲುಕ್ ಹೊರತಾಗಿ ಹೊಸತೇನನ್ನೂ ಸಹ ಟೀಸರ್​​ನಲ್ಲಿ ರಿವೀಲ್ ಮಾಡಲಾಗಿರಲಿಲ್ಲ. ಇದೀಗ ಸಿನಿಮಾದ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ಮತ್ತು ಪೃಥ್ವಿರಾಜ್ ಸುಕುಮಾರನ್ ಅವರುಗಳು ಸಂದರ್ಶನವೊಂದರಲ್ಲಿ ಮಾತನಾಡಿದ್ದು, ಸಿನಿಮಾದ ಬಗ್ಗೆ ಹಲವು…

Read More

ಸಿಖ್ಖರನ್ನು ಕೊಂದ ಗಾಂಧಿ ಕುಟುಂಬದ ಕುಡಿಯೊಂದಿಗೆ ನಾನು ಕೈಕುಲುಕುವುದಿಲ್ಲ; ರವನೀತ್ ಬಿಟ್ಟು ಪ್ರತಿಕ್ರಿಯೆ – Kannada News | Gandhi family is the murder of Sikhs I wont shake hands with Rahul Gandhi Ravneet Singh Bittu says

ನವದೆಹಲಿ, ಫೆಬ್ರವರಿ 4: ಇಂದು ಬೆಳಗ್ಗೆ ಸಂಸತ್ ಹೊರಗೆ ಪ್ರತಿಭಟನೆ ನಡೆಸುವಾಗ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು (Ravneet Singh Bittu) ಅವರನ್ನು ರಾಹುಲ್ ಗಾಂಧಿ “ದೇಶದ್ರೋಹಿ” ಎಂದು ಲೇವಡಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಚಿವ ರವನೀತ್ ಸಿಂಗ್ ಬಿಟ್ಟು, “ತನ್ನ ತಂದೆ ದೇಶಕ್ಕಾಗಿ ತನ್ನನ್ನು ತ್ಯಾಗ ಮಾಡಿದ್ದಕ್ಕಾಗಿ ತಾನು ಅತ್ಯಂತ ದೊಡ್ಡ ದೇಶಭಕ್ತನೆಂದು ರಾಹುಲ್ ಗಾಂಧಿ (Rahul Gandhi) ಭಾವಿಸಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷ ಮತ್ತು ಗಾಂಧಿ ಕುಟುಂಬ ಪಂಜಾಬ್‌ಗೆ ಬೆಂಕಿ…

Read More

ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್, ತಮ್ಮ‌ ರಕ್ಷಣೆಗೆ ತಾವೇ ನಿರ್ಮಿಸಿಕೊಂಡ ಮೀನುಗಾರರು – Kannada News | Ullal fishermen build a First Boat Ambulance In Karavali, here Is How To Work

ಮಂಗಳೂರು, (ಫೆಬ್ರವರಿ 04): ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್  (Boat Ambulance) ನಿರ್ಮಾಣವಾಗಿದೆ. ಈ ಹಿಂದೆ ಬೋಟ್ ಆಂಬ್ಯುಲೆನ್ಸ್ ಆರಂಭಿಸುವ ಬಗ್ಗೆ ಸರ್ಕಾರ ಭರವಸೆ ನೀಡಿತ್ತು. ಆದ್ರೆ, ಇನ್ನು ಕಾರ್ಯರೂಪಕ್ಕೆ ಬಂದಿಲ್ಲ. ಹೀಗಾಗಿ ಇದೀಗ ಸರ್ಕಾರಕ್ಕೆ ಸೆಡ್ಡು ಹೊಡೆದ ಮೀನುಗಾರರು, ತಮ್ಮ‌ ರಕ್ಷಣೆಗೆ ತಾವೇ ಬೋಟ್ ಆಂಬ್ಯುಲೆನ್ಸ್ ನಿರ್ಮಿಸಿಕೊಂಡಿದ್ದಾರೆ. ಸರ್ಕಾರದ ಯೋಜನೆಗೆ ಕಾಯದೇ ನಾಡದೋಣಿ ಮತ್ತು ಗಿಲ್ ನೆಟ್ ಮೀನುಗಾರರ ಸಂಘದವರು ಮೊದಲ ಬೋಟ್ ಆಂಬುಲೆನ್ಸ್ ನಿರ್ಮಿಸಿದ್ದಾರೆ. ಮಂಗಳೂರಿನ ಉಳ್ಳಾಲ ವಲಯದ ಮೀನುಗಾರರ ಮಾದರಿ ಕಾರ್ಯಕ್ಕೆ ಮೆಚ್ಚುಗೆ…

Read More

‘ಧುರಂಧರ್ 2’ ಸಿನಿಮಾದಲ್ಲಿ ಸಲ್ಮಾನ್ ಖಾನ್? ವೈರಲ್ ಆಗಿದೆ ಫೋಟೋ – Kannada News | Is Salman Khan acting in Dhurandhar 2 movie Photo goes viral

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಧುರಂಧರ್ 2’ (Dhurandhar 2) ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಈ ಸಿನಿಮಾದಲ್ಲಿ ರಣವೀರ್ ಸಿಂಗ್, ಸಂಜಯ್ ದತ್, ಸಾರಾ ಅರ್ಜುನ್, ಅಕ್ಷಯ್ ಖನ್ನಾ, ಅರ್ಜುನ್ ರಾಮ್​​ಪಾಲ್ ಮುಂತಾದವರು ನಟಿಸಿದ್ದಾರೆ. ಮಾರ್ಚ್ 19ರಂದು ಈ ಚಿತ್ರ ರಿಲೀಸ್ ಆಗಲಿದೆ. ಸಿನಿಮಾದ ಪಾತ್ರವರ್ಗದ ಬಗ್ಗೆ ಹಲವು ಗಾಸಿಪ್ ಕೇಳಿಬರುತ್ತಿದೆ. ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ (Salman Khan) ಕೂಡ ‘ಧುರಂಧರ್ 2’ ಸಿನಿಮಾದಲ್ಲಿ ನಟಿಸಿದ್ದಾರೆ ಎಂಬ ಹೇಳಲಾಗುತ್ತಿದೆ. ಆದರೆ ಈ ಸುದ್ದಿಯನ್ನು…

Read More

ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ – Kannada News | Belagavi: Pan Shop Owner Murdered Over Cigarette Payment; Four Arrested

ಬೆಳಗಾವಿ, ಫೆಬ್ರವರಿ 04: ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ಘೋಡಕೆನಟ್ಟಿ ಗ್ರಾಮದಲ್ಲಿ ಸಿಗರೇಟ್ ಹಣ ಕೇಳಿದ್ದಕ್ಕಾಗಿ ಪಾನ್ ಶಾಪ್ ಮಾಲೀಕ ಯಲ್ಲಪ್ಪ ನಾಯಕ್​​​ನನ್ನು ನಾಲ್ವರು ಯುವಕರು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಮಂಗಳವಾರ ರಾತ್ರಿ ಘಟನೆ ನಡೆದಿದೆ. ಯುವಕರು ಎರಡು ಸಿಗರೇಟ್ ಮತ್ತು ನೀರಿನ ಬಾಟಲಿಯನ್ನು ತೆಗೆದುಕೊಂಡು ಹಣ ಕೊಡದೇ ಹೋಗುತ್ತಿದ್ದರು. ಈ ವೇಳೆ ಯಲ್ಲಪ್ಪ ನಾಯಕ್ ಪ್ರಶ್ನಿಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಯಲ್ಲಪ್ಪರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ….

Read More

Video: ಪುಣ್ಯಕೋಟಿ ಗೋವಿನ ಹಾಡು ಕೇಳಿ ಬಿಕ್ಕಿ ಬಿಕ್ಕಿ ಅತ್ತ ಪುಟ್ಟ ಬಾಲಕ – Kannada News | A little boy was crying after hearing the song of the punyakoti cow

ಪುಟಾಣಿಗಳೇ (little kids) ಹಾಗೆ, ಸಣ್ಣ ಸಣ್ಣ ವಿಚಾರಗಳನ್ನು ಮನಸ್ಸಿಗೆ ತೆಗೆದುಕೊಳ್ಳುತ್ತಾರೆ. ಇನ್ನು ಯಾವುದಾದರು ಕಥೆಯಲ್ಲಿ ಬರುವ ಪಾತ್ರವನ್ನು ನಿಜವೆಂದು ಭಾವಿಸುತ್ತಾರೆ. ಆದರೆ ಇಲ್ಲೊಬ್ಬ ಪುಟ್ಟ ಹುಡುಗನು ಕೂಡ ಪುಣ್ಯಕೋಟಿ (Punyakoti) ಗೋವಿನ ಹಾಡು ಕೇಳಿ, ಅದು ಮಾಡಿದ ತ್ಯಾಗವನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ಪುಟಾಣಿಯ ಮುಗ್ಧತೆಗೆ ,ಮನಸೋತಿದ್ದಾರೆ. ಕೋಸ್ಟಲ್ ಬೀಟ್ಸ್ (Costal beats) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ…

Read More