ಎಡಿಬಿ ವರದಿ: ಭಾರತದ ಜಿಡಿಪಿ ಬೆಳವಣಿಗೆ 2025ರಲ್ಲಿ ಶೇ. 6.9, 2027ರಲ್ಲಿ ಶೇ. 7.3 ಅಂದಾಜು

ಎಡಿಬಿ ವರದಿ: ಭಾರತದ ಜಿಡಿಪಿ ಬೆಳವಣಿಗೆ 2025ರಲ್ಲಿ ಶೇ. 6.9, 2027ರಲ್ಲಿ ಶೇ. 7.3 ಅಂದಾಜು

ನವದೆಹಲಿ, ಏಪ್ರಿಲ್ 10: ಜಾಗತಿಕ ತುಮುಲಗಳು, ಬಿಕ್ಕಟ್ಟುಗಳ ಮಧ್ಯೆ ಭಾರತದ ಆರ್ಥಿಕತೆ (Indian Economy) ಉತ್ತಮ ಬೆಳವಣಿಗೆ ದಾಖಲಿಸುವ ನಿರೀಕ್ಷೆ ಇದೆ. ಈ ವರ್ಷ ನಿರೀಕ್ಷಿತ ಅಭಿವೃದ್ಧಿ ಕಾಣದಿದ್ದರೂ ಒಟ್ಟಾರೆಯಾಗಿ ಸಮಾಧಾನಕರ ಬೆಳವಣಿಗೆ ಪಡೆಯಬಹುದು ಎಂದು ಅನೇಕ ಏಜೆನ್ಸಿಗಳು ಅಭಿಪ್ರಾಯಪಟ್ಟಿವೆ. ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್​ನ (ಎಡಿಬಿ) ಇತ್ತೀಚಿನ ವರದಿಯಲ್ಲಿ 2026 ಮತ್ತು 2027ರ ವರ್ಷಕ್ಕೆ ಭಾರತದ ಜಿಡಿಪಿ ಎಷ್ಟು ಬೆಳೆಯಬಹುದು ಎಂದು ಅಂದಾಜಿಸಿದೆ.

ಏಪ್ರಿಲ್ ತಿಂಗಳ ಏಷ್ಯನ್ ಡೆವಲಪ್ಮೆಂಟ್ ಔಟ್​ಲುಕ್ (ಎಡಿಒ) ವರದಿ ಪ್ರಕಾರ, 2026ರ ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಜಿಡಿಪಿ ಬೆಳವಣಿಗೆ ಶೇ. 6.9ಕ್ಕೆ ಮಿತಿಗೊಳ್ಳಬಹುದು. ಆದರೆ, 2027ರಲ್ಲಿ ಚೇತರಿಕೆ ಕಂಡು ಶೇ. 7.3 ಬೆಳವಣಿಗೆ ದಾಖಲಿಸಬಹುದು ಎಂದು ಈ ವರದಿಯಲ್ಲಿ ಅಂದಾಜಿಸಲಾಗಿದೆ. 2025ರ ಕ್ಯಾಲಂಡರ್ ವರ್ಷದಲ್ಲಿ ಭಾರತ ಶೇ. 7.6ರಷ್ಟು ಜಿಡಿಪಿ ಬೆಳವಣಿಗೆ ಕಂಡಿತ್ತು.

ಇದನ್ನೂ ಓದಿ: ಭಾರತ ಶೇ 7.8, ಅಮೆರಿಕ ಶೇ. 0.5; ಆರ್ಥಿಕ ಬೆಳವಣಿಗೆ ವೇಗದಲ್ಲಿ ಅಜಗಜಾಂತರ

ಏಷ್ಯಾದ ಒಟ್ಟಾರೆ ಬೆಳವಣಿಗೆ ಹೇಗಿರಬಹುದು?

ಎಡಿಬಿ ವರದಿ ಪ್ರಕಾರ ಏಷ್ಯಾ ಪೆಸಿಫಿಕ್ ಪ್ರದೇಶದ ಒಟ್ಟಾರೆ ಬೆಳವಣಿಗೆ 2026ರಲ್ಲಿ ಶೇ. 5.1ಕ್ಕೆ ನಿಲ್ಲಬಹುದು. 2025ರಲ್ಲಿ ಶೇ. 5.4 ಬೆಳವಣಿಗೆ ಹೋಲಿಸಿದರೆ ಈ ವರ್ಷ ಏಷ್ಯಾದ ಒಟ್ಟಾರೆ ಅಭಿವೃದ್ಧಿ ಸ್ವಲ್ಪ ನಿಧಾನಗೊಳ್ಳಲಿದೆ. 2027ರಲ್ಲೂ ಈ ಪ್ರದೇಶವು ಶೇ. 5.1ರಷ್ಟು ಮಾತ್ರವೇ ಬೆಳವಣಿಗೆ ದಾಖಲಿಸಲಿದೆ ಎಂದು ಎಡಿಬಿ ಹೇಳಿದೆ. ಈ ಮಧ್ಯೆ ಭಾರತದಂತಹ ಕೆಲ ಏಷ್ಯನ್ ದೇಶಗಳು ಸರಾಸರಿಗಿಂತ ಹೆಚ್ಚು ಪ್ರಗತಿ ಹೊಂದುವ ಸಾಧ್ಯತೆ ಇದೆ.

ಕುತೂಹಲವೆಂದರೆ ಮಾರ್ಚ್ 10ರವರೆಗಿನ ವಾತಾವರಣದ ಆಧಾರದ ಮೇಲೆ ಎಡಿಬಿ ಈ ಭವಿಷ್ಯ ನುಡಿದಿದೆ. ಇರಾನ್ ಯುದ್ಧ ಫೆಬ್ರುವರಿ 28ರಂದು ಶುರುವಾಗಿತ್ತು. ಯುದ್ಧ ತೀರಾ ಮುಂದುವರಿಯಬಹುದು ಎನ್ನುವ ಕಲ್ಪನೆ ಇಲ್ಲದೇ 2026 ಮತ್ತು 2027ರ ಆರ್ಥಿಕ ಬೆಳವಣಿಗೆಯನ್ನು ಎಡಿಬಿಯ ಆರ್ಥಿಕ ತಜ್ಞರು ಅಂದಾಜು ಮಾಡಿದ್ದಾರೆ. ಆದರೆ, ಯುದ್ದ ದೀರ್ಘಾವಧಿ ಮುಂದುವರಿದರೆ ಅಪಾಯ ಇದೆ ಎನ್ನುವ ಎಚ್ಚರಿಕೆಯನ್ನು ಈ ವರದಿಯಲ್ಲಿ ನೀಡಲಾಗಿದೆ.

ಇದನ್ನೂ ಓದಿ: ಭಾರತಕ್ಕೆ ಪೆಟ್ರೋಲ್, ಡೀಸಲ್ ಸಮಸ್ಯೆ ವಕ್ಕರಿಸಲಿಲ್ಲ ಯಾಕೆ? ಸರ್ಕಾರದ ಈ ಕೆಲ ಕ್ರಮಗಳೇ ಕಾರಣವಾ?

ಇರಾನ್ ಯುದ್ಧವು ಒಂದು ತಿಂಗಳಿಗೂ ಹೆಚ್ಚು ಕಾಲ ಮುಂದುವರಿದಿದ್ದು ಜಾಗತಿಕವಾಗಿ ತಲ್ಲಣಗೊಳಿಸಿದೆ. ಅದರಲ್ಲೂ ಗಲ್ಫ್ ತೈಲದ ಮೇಲೆ ಹೆಚ್ಚು ಅವಲಂಬಿತವಾಗಿದ್ದ ಏಷ್ಯನ್ ದೇಶಗಳಿಗೆ ಈ ಒಂದು ತಿಂಗಳು ಬಹಳ ಹೊಡೆತ ಕೊಟ್ಟಿದೆ. ಭಾರತದ ತೈಲ ಮತ್ತು ಅನಿಲ ಪೂರೈಕೆ ಜಾಲ ಹೆಚ್ಚಿಸಿಕೊಂಡಿದ್ದರಿಂದ ತಕ್ಕಮಟ್ಟಿಗೆ ಪರಿಸ್ಥಿತಿ ನಿಭಾಯಿಸಲು ಯಶಸ್ವಿಯಾಗಿದೆ. ಒಂದು ವೇಳೆ 15 ದಿನಗಳ ಕದನವಿರಾಮದ ಬಳಿಕ ಮತ್ತೆ ಯುದ್ಧ ಶುರುವಾದರೆ ಪರಿಸ್ಥಿತಿ ನಿಜಕ್ಕೂ ಬಿಗಡಾಯಿಸಬಹುದು ಎಂದು ಅನೇಕ ಆರ್ಥಿಕ ತಜ್ಞರು ಹೇಳುತ್ತಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಶ್ರೀನಂದಾ ಮೃತದೇಹ ಚಂದ್ರದ್ರೋಣ ಪರ್ವತದ 2 ಸಾವಿರ ಅಡಿ ಪ್ರಪಾತದಲ್ಲಿ ಪತ್ತೆ

ಚಿಕ್ಕಮಗಳೂರು, ಏ.10: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ 14 ವರ್ಷದ ಬಾಲಕಿ ಶ್ರೀನಂದಾ ಅವರ ಮೃತದೇಹ ಇಂದು (ಏಪ್ರಿಲ್ 10) ಪತ್ತೆಯಾಗಿದೆ. ಸುಮಾರು 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಬಾಲಕಿಯ ಶವ ಸಿಕ್ಕಿರುವುದು ದೃಢಪಟ್ಟಿದೆ. ಕೇರಳದಿಂದ ಏಪ್ರಿಲ್ 7ರಂದು ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ್ದ 40 ಜನರ ಪ್ರವಾಸಿ ತಂಡದಲ್ಲಿ ಶ್ರೀನಂದಾ ಕೂಡ ಇದ್ದರು. ಇನಾಮು ದತ್ತಾತ್ರೇಯ ಪೀಠ ಹಾಗೂ ಮಾಣಿಕ್ಯಧಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬಾಲಕಿ ಹಠಾತ್ತಾಗಿ ನಾಪತ್ತೆಯಾಗಿದ್ದರು. ಈ ಘಟನೆ ನಡೆದ ನಂತರ ಪೊಲೀಸರ ತಂಡ ಹುಡುಗಿಗಾಗಿ ಕಾರ್ಯಚರಣೆಯನ್ನು ನಡೆಸಲಾಗಿತ್ತು . ಇದೀಗ ಹುಡುಗಿಯ ಮೃತದೇಹ ಪತ್ತೆಯಾಗಿದೆ.

ಬಾಲಕಿಯ ಪತ್ತೆಗಾಗಿ ಎಸ್‌ಡಿಆರ್‌ಎಫ್ (SDRF), ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ಎಎನ್ಎಫ್ (ANF) ತಂಡಗಳು ಜಂಟಿ ಕಾರ್ಯಾಚರಣೆ ನಡೆಸಿದ್ದವು. ದಟ್ಟ ಅರಣ್ಯ ಮತ್ತು ಕಡಿದಾದ ಪರ್ವತ ಪ್ರದೇಶವಾದ್ದರಿಂದ ಡ್ರೋನ್ ಹಾಗೂ ಥರ್ಮಲ್ ಕ್ಯಾಮೆರಾಗಳನ್ನು ಸಹ ಬಳಸಲಾಗಿತ್ತು.

ಇದನ್ನೂ ಓದಿ: ಶಾಲೆಯಲ್ಲೇ ಕಾಮದಾಟ, ಪ್ರಕರಣ ಬಯಲಾಗದಿರಲು ವಿದ್ಯಾರ್ಥಿನಿಗೆ ಗರ್ಭಪಾತ ಮಾಡಿಸಿದ್ದ ಗಣಿತ ಶಿಕ್ಷಕ! ಕೇಸ್ ದಾಖಲು

ಸತತ ಮೂರು ದಿನಗಳ ಕಾಲ ನಡೆಸಿದ ತೀವ್ರ ಶೋಧದ ನಂತರ, ಇಂದು ಮಾಣಿಕ್ಯಧಾರಾದ ಅತ್ಯಂತ ಆಳವಾದ ಪ್ರಪಾತದ ಕೆಳಗೆ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾಳೆಯೇ ಅಥವಾ ಬೇರೆನಾದರೂ ಕಾರಣವಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಕೇರಳದಿಂದ ಆಗಮಿಸಿದ್ದ ಪೋಷಕರು ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

‘ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ’: ಗೃಹ ಸಚಿವ ಪರಮೇಶ್ವರ್

ಬೆಂಗಳೂರು, ಏಪ್ರಿಲ್ 10: ಇತ್ತೀಚಿಗೆ ಬೆಂಗಳೂರಿನ ರಸ್ತೆಯೊಂದರಲ್ಲಿ ಓರ್ವ ವ್ಯಕ್ತಿ ಗಂಟೆಗಟ್ಟಲ್ಲೇ ನಿಂತಲ್ಲೇ ನಿಂತಿದ್ದ ವೀಡಿಯೋ ಭಾರಿ ವೈರಲ್ ಆಗಿತ್ತು. ಆತ ಝೋಂಬಿ ಡ್ರಗ್ ಸೇವನೆಯ ಎಫೆಕ್ಟ್​ನಿಂದಾಗಿ ಹೀಗೆ ವರ್ತಿಸಿದ್ದಾನೆ ಎಂದು ವೀಡಿಯೋ ವೈರಲ್ ಮಾಡಲಾಗಿತ್ತು. ಈ ಕುರಿತು ತನಿಖೆ ನಡೆಸಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್​ ಸಿಂಗ್, ಸುಳ್ಳು ಸುದ್ದಿ ಹರಡಲಾಗಿದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ್ ಕೂಡ ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ, ಇದು ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೂರು ದಿನಗಳಾದರೂ ಚಿಕ್ಕಮಗಳೂರಿನಲ್ಲಿ ನಾಪತ್ತೆಯಾದ ಬಾಲಕಿಯ ಸುಳಿವಿಲ್ಲ! ಕಿಡ್ನ್ಯಾಪ್ ಆಗಿರಬಹುದೇ?

ಬೆಂಗಳೂರು, ಏಪ್ರಿಲ್ 10: ಪ್ರವಾಸಕ್ಕೆಂದು ಪೋಷಕರ ಜೊತೆ ಜಿಲ್ಲೆಯ ಚಂದ್ರದ್ರೋಣ ಪರ್ವತ ಸರಣಿಗೆ ಬಂದಿದ್ದ ಕೇರಳದ ಬಾಲಕಿ ನಾಪತ್ತೆ ಪ್ರಕರಣ ಇನ್ನೂ ಇತ್ಯರ್ಥವಾಗಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪರಮೇಶ್ವರ್, ಚಿಕ್ಕಮಗಳೂರು ಶ್ರೀನಂದ ಬಾಲಕಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮಾಹಿತಿ ಲಭ್ಯವಿದ್ದರೂ, ಬಾಲಕಿಯನ್ನು ಇನ್ನೂ ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಈ ಪ್ರಕರಣದಲ್ಲಿ ಒಂದು ಕಡೆ ಆಕೆಯ ಅಪಹರಣದ ಶಂಕೆಯಿದ್ದರೆ, ಮತ್ತೊಂದು ಕಡೆ ಬಾಲಕಿ ಬೇರೆಯವರ ಜೊತೆ ಹೋಗಿರುವ ಸಾಧ್ಯತೆಯೂ ಇದೆ. ಅಂತಿಮ ಸತ್ಯವು ಬಾಲಕಿ ಪತ್ತೆಯಾದ ನಂತರ ತಿಳಿಯುತ್ತದೆ ಎಂದು ಸಚಿವ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

 

Source link

ಶಾಲೆಯಲ್ಲೇ ಕಾಮದಾಟ, ಪ್ರಕರಣ ಬಯಲಾಗದಿರಲು ವಿದ್ಯಾರ್ಥಿನಿಗೆ ಗರ್ಭಪಾತ ಮಾಡಿಸಿದ್ದ ಗಣಿತ ಶಿಕ್ಷಕ! ಕೇಸ್ ದಾಖಲು

ಚಿತ್ರದುರ್ಗ, ಏಪ್ರಿಲ್ 10: ಗುರು-ಶಿಷ್ಯ ಸಂಬಂಧಕ್ಕೇ ಕಳಂಕ ತರುವಂತಹ ಘಟನೆಯೊಂದು ಚಿತ್ರದುರ್ಗ (Chitradurga) ಜಿಲ್ಲೆಯಲ್ಲಿ ಜರುಗಿದೆ. 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಗಣಿತ ಶಿಕ್ಷಕನೊಬ್ಬ ಶಾಲೆಯ ತರಗತಿ ಕೊಠಡಿಯಲ್ಲೇ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾದ ಬಳಿಕ ಅಕ್ರಮವಾಗಿ ಗರ್ಭಪಾತ ಮಾಡಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಸದ್ಯ ಆರೋಪಿ ಶಿಕ್ಷಕ ಹಾಗೂ ಗರ್ಭಪಾತ ಮಾಡಿಸಿದ ವೈದ್ಯೆ ವಿರುದ್ಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ

ಚಿತ್ರದುರ್ಗ ಚಳ್ಳಕೆರೆ ತಾಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕ ಹೆಚ್.ಒ. ರಾಜಣ್ಣ ಎಂಬಾತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಈಕೃತ್ಯದಿಂದ ಬಾಲಕಿ ಗರ್ಭ ಧರಿಸಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆಯೇ ರಾಜಣ್ಣ, ಚಳ್ಳಕೆರೆಯ ಲಕ್ಷ್ಮೀ ಶ್ರೀನಿವಾಸ ನರ್ಸಿಂಗ್ ಆಸ್ಪತ್ರೆಯ ವೈದ್ಯೆ ಶಂಕರಲಕ್ಷ್ಮೀ ಅವರ ಸಹಾಯದಿಂದ ಬಾಲಕಿಗೆ ಗರ್ಭಪಾತ ಮಾಡಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೋಕ್ಸೋ ಅಡಿ ದೂರು ದಾಖಲು

ವಿಷಯ ತಿಳಿಯುತ್ತಿದ್ದಂತೆಯೇ ಮಕ್ಕಳ ರಕ್ಷಣಾಧಿಕಾರಿ ರೇಖಾ ಅವರು ಚಳ್ಳಕೆರೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಕ ರಾಜಣ್ಣ ಮತ್ತು ಗರ್ಭಪಾತ ಮಾಡಿದ ವೈದ್ಯೆ ಶಂಕರಲಕ್ಷ್ಮೀ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶದ ದಿನವೇ ವಿದ್ಯಾರ್ಥಿನಿ ನಿಗೂಢ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಸಲಿಗೆ ಆಗಿದ್ದೇ ಬೇರೆ!

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗೂಗಲ್ ಪೇಯಲ್ಲಿ ‘ಪಾಕೆಟ್ ಮನಿ’ ಆಪ್ಷನ್ ಕ್ಲಿಕ್​​ ಮಾಡಿದ್ರೆ ಹಣ ಹೋಗುತ್ತಾ? ಯಾರಿಗಾಗಿ ಈ ಆಯ್ಕೆ? ಇಲ್ಲಿದೆ ನೋಡಿ

ಸಾಮಾಜಿಕ ಜಾಲತಾಣದಲ್ಲಿ ಗೂಗಲ್ ಪೇಯಲ್ಲಿ ನೀಡಿರುವ ‘ಪಾಕೆಟ್ ಮನಿ’ ಆಪ್ಷನ್ ಬಗ್ಗೆ ಭಾರೀ ಚರ್ಚೆಗಳು ಆಗುತ್ತಿದೆ. ಈ ಆಪ್ಷನ್ ಕ್ಲಿಕ್ ಮಾಡಿದ್ರೆ ಹಣ ಎಲ್ಲವೂ ಹೋಗುತ್ತದೆ, ಇದೊಂದು ರೀತಿ ಸ್ಕ್ಯಾಮ್ ಎಂದು ಹೇಳುತ್ತಿದ್ದಾರೆ. ಇದೀಗ ಈ ಬಗ್ಗೆ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್​ ಆಗುತ್ತಿದೆ. ಅಷ್ಟಕ್ಕೂ ಇದರ ಹಿಂದೆ ಇರುವ ನಿಜವಾದ ತಂತ್ರ ಏನು? ಎಂಬ ಬಗ್ಗೆ ತಿಳಿಯಬೇಕಿದೆ. ಅಷ್ಟಕ್ಕೂ ಗೂಗಲ್​​ ಪೇಯಲ್ಲಿ ಇಂತಹ ಸ್ಕ್ಯಾಮ್​​​ಗಳು ನಡೆಯಲು ಸಾಧ್ಯವೇ? ಇಷ್ಟು ದೊಡ್ಡ ಸಂಸ್ಥೆ ಸೆಕ್ಯುರಿಟಿ ವಿಚಾರದಲ್ಲಿ ಅಪಾಯ ತಂದುಕೊಳ್ಳಲು ಸಾಧ್ಯವೇ ಇಲ್ಲ ಎಂಬುದು ವಾದವಾಗಿದೆ. ಇನ್ನು ಗೂಗಲ್ ಪೇಯಲ್ಲಿ ‘ಪಾಕೆಟ್ ಮನಿ’ ಆಪ್ಷನ್ ನೀಡಿರುವದರಿಂದ ಆಗುವ ಲಾಭಗಳೇನು? ಯಾಕಾಗಿ ಇದನ್ನು ನೀಡಿದ್ದಾರೆ ಎಂಬೆಲ್ಲ ವರದಿ ಇಲ್ಲಿದೆ ನೋಡಿ.

ಡಿಜಿಟಲ್ ಪಾವತಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಗೂಗಲ್ ಪೇ, ಕುಟುಂಬದ ಸದಸ್ಯರು ಮತ್ತು ಮಕ್ಕಳಿಗಾಗಿ ‘ಪಾಕೆಟ್ ಮನಿ’ ಎಂಬ ಹೊಸ ಫೀಚರ್ ಅನ್ನು ಬಿಡುಗಡೆ ಮಾಡಿದೆ. ಇದು ಪೋಷಕರು ತಮ್ಮ ಬ್ಯಾಂಕ್ ಖಾತೆಯನ್ನು ಬಳಸಿಕೊಂಡು ಮಕ್ಕಳಿಗೆ ಪಾವತಿ ಮಾಡಲು ಅವಕಾಶ ನೀಡುತ್ತದೆ, ಆದರೆ ಅದರ ಸಂಪೂರ್ಣ ನಿಯಂತ್ರಣ ಪೋಷಕರ ಕೈಯಲ್ಲೇ ಇರುತ್ತದೆ.

ಏನಿದು ‘ಪಾಕೆಟ್ ಮನಿ’ ವೈಶಿಷ್ಟ್ಯ?

ಇದು ಗೂಗಲ್ ಪೇನ ‘UPI Circle’ ಫ್ರೇಮ್‌ವರ್ಕ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಮೂಲಕ ಪೋಷಕರು ತಮ್ಮ ಮಕ್ಕಳಿಗೆ ಅಥವಾ ಅವಲಂಬಿತರಿಗೆ ಡಿಜಿಟಲ್ ಹಣವನ್ನು ಬಳಸಲು ಅನುಮತಿಸಬಹುದು. ಇದಕ್ಕಾಗಿ ದ್ವಿತೀಯ ಬಳಕೆದಾರರಿಗೆ (ಮಕ್ಕಳಿಗೆ) ಪ್ರತ್ಯೇಕ ಬ್ಯಾಂಕ್ ಖಾತೆಯ ಅಗತ್ಯವಿರುವುದಿಲ್ಲ. ಪೋಷಕರು ತಿಂಗಳಿಗೆ ಗರಿಷ್ಠ 15,000 ರೂ. ವರೆಗೆ ಖರ್ಚು ಮಾಡುವ ಮಿತಿಯನ್ನು ನಿಗದಿಪಡಿಸಬಹುದು. ಈ ಮಿತಿಯೊಳಗೆ ಮಕ್ಕಳು ಸ್ವತಂತ್ರವಾಗಿ ಪಾವತಿ ಮಾಡಬಹುದು.

ಈ ಆಯ್ಕೆಯನ್ನು ಆರಿಸಿಕೊಂಡರೆ, ಮಗು ಪ್ರತಿ ಬಾರಿ ಪೇಮೆಂಟ್ ಮಾಡಲು ಪ್ರಯತ್ನಿಸಿದಾಗ ಪೋಷಕರ ಫೋನ್‌ಗೆ ವಿನಂತಿ ಬರುತ್ತದೆ. ಪೋಷಕರು ಓಕೆ ಅಂದರಷ್ಟೇ ಹಣ ವರ್ಗಾವಣೆಯಾಗುತ್ತದೆ. ಒಬ್ಬ ಪ್ರಾಥಮಿಕ ಬಳಕೆದಾರನು ಇದರಲ್ಲಿ ಗರಿಷ್ಠ ಐವರು ಸದಸ್ಯರನ್ನು ಸೇರಿಸಬಹುದು. ಭದ್ರತೆಯ ದೃಷ್ಟಿಯಿಂದ, ಪೋಷಕರು ತಮ್ಮ ಮತ್ತು ಮಕ್ಕಳ ಸಂಬಂಧದ ಬಗ್ಗೆ ಸರ್ಕಾರಿ ಗುರುತಿನ ಚೀಟಿ ನೀಡಿ ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಇದರಿಂದ ಮಕ್ಕಳ ಬಳಿ ಬ್ಯಾಂಕ್ ಖಾತೆ ಇಲ್ಲದಿದ್ದರೂ, ಶಾಲಾ-ಕಾಲೇಜುಗಳ ಕ್ಯಾಂಟೀನ್ ಅಥವಾ ಸಣ್ಣ ಪುಟ್ಟ ಶಾಪಿಂಗ್‌ಗೆ ಡಿಜಿಟಲ್ ಪಾವತಿ ಮಾಡಲು ಈ ಫೀಚರ್ ಸಹಕಾರಿ.ಪೋಷಕರು ಹಣ ಎಲ್ಲಿ ಮತ್ತು ಎಷ್ಟು ಖರ್ಚಾಗುತ್ತಿದೆ ಎಂಬುದನ್ನು ತಮ್ಮ ಫೋನ್ ಮೂಲಕವೇ ಟ್ರ್ಯಾಕ್ ಮಾಡಬಹುದು.

ಗೂಗಲ್ ಪೇ ‘ಪಾಕೆಟ್ ಮನಿ’ ಸೆಟಪ್ ಮಾಡುವುದು ಹೇಗೆ? ಇಲ್ಲಿದೆ ಸ್ಟೆಪ್-ಬೈ-ಸ್ಟೆಪ್ ಗೈಡ್!

ಹಂತ 1: ಯುಪಿಐ ಸರ್ಕಲ್‌ಗೆ ಭೇಟಿ ನೀಡಿ

ನಿಮ್ಮ ಫೋನ್‌ನಲ್ಲಿ ಗೂಗಲ್ ಪೇ ಅಪ್ಲಿಕೇಶನ್ ತೆರೆಯಿರಿ. ಮೇಲೆ ಬಲಭಾಗದಲ್ಲಿರುವ ನಿಮ್ಮ ‘ಪ್ರೊಫೈಲ್’ (Profile) ಚಿತ್ರದ ಮೇಲೆ ಕ್ಲಿಕ್ ಮಾಡಿ. ಅಲ್ಲಿ ಕಾಣಿಸುವ ಮೆನುವಿನಲ್ಲಿ ‘UPI Circle’ ಎಂಬ ವಿಭಾಗವನ್ನು ಆಯ್ಕೆ ಮಾಡಿ.

ಹಂತ 2: ಸದಸ್ಯರನ್ನು ಸೇರಿಸಿ

‘ಪಾಕೆಟ್ ಮನಿ’ ಸೆಟಪ್ ಮಾಡುವ ಆಯ್ಕೆಯನ್ನು ಆರಿಸಿ. ನಿಮ್ಮ ಕಾಂಟ್ಯಾಕ್ಟ್ ಲಿಸ್ಟ್‌ನಿಂದ ನೀವು ಯಾರನ್ನು (ಮಕ್ಕಳು ಅಥವಾ ಅವಲಂಬಿತರು) ದ್ವಿತೀಯ ಬಳಕೆದಾರರನ್ನಾಗಿ ಸೇರಿಸಲು ಬಯಸುತ್ತೀರೋ ಅವರ ಹೆಸರನ್ನು ಆರಿಸಿ. ನೆನಪಿಡಿ, ಅವರು ಈಗಾಗಲೇ ಗೂಗಲ್ ಪೇ ಇನ್‌ಸ್ಟಾಲ್ ಮಾಡಿರಬೇಕು.

ಹಂತ 3: QR ಕೋಡ್ ಸ್ಕ್ಯಾನಿಂಗ್

ಈಗ ಪ್ರಾಥಮಿಕ ಬಳಕೆದಾರರು (ಪೋಷಕರು), ದ್ವಿತೀಯ ಬಳಕೆದಾರರ (ಮಕ್ಕಳ) ಗೂಗಲ್ ಪೇನಲ್ಲಿರುವ UPI Circle QR ಕೋಡ್ ಅನ್ನು ಸ್ಕ್ಯಾನ್ ಮಾಡಬೇಕು. ಇದು ಇಬ್ಬರ ನಡುವೆ ಸುರಕ್ಷಿತ ಸಂಪರ್ಕವನ್ನು ಏರ್ಪಡಿಸುತ್ತದೆ.

ಹಂತ 4: ಪಾವತಿ ವಿಧಾನದ ಆಯ್ಕೆ

ಇಲ್ಲಿ ನಿಮಗೆ ಎರಡು ಪ್ರಮುಖ ಆಯ್ಕೆಗಳು ಸಿಗುತ್ತವೆ:

ಪೂರ್ಣ ನಿಯೋಗ (Full Delegation): ಇಲ್ಲಿ ನೀವು ಮಾಸಿಕ ಖರ್ಚು ಮಿತಿಯನ್ನು (ಗರಿಷ್ಠ ₹15,000) ನಿಗದಿಪಡಿಸಬಹುದು. ಈ ಮಿತಿಯೊಳಗೆ ಮಕ್ಕಳು ನಿಮ್ಮ ಅನುಮತಿ ಇಲ್ಲದೆ ನೇರವಾಗಿ ಪಾವತಿ ಮಾಡಬಹುದು.

ಅನುಮೋದನೆ ಆಧಾರಿತ (Approve Each Payment): ಪ್ರತಿ ಬಾರಿ ಮಗು ಪಾವತಿ ಮಾಡುವಾಗಲೂ ನಿಮ್ಮ ಫೋನ್‌ಗೆ ನೋಟಿಫಿಕೇಶನ್ ಬರುತ್ತದೆ. ನೀವು ಅದನ್ನು ಅನುಮೋದಿಸಿದರೆ ಮಾತ್ರ ಹಣ ವರ್ಗಾವಣೆಯಾಗುತ್ತದೆ.

ಹಂತ 5: KYC ಮತ್ತು ದೃಢೀಕರಣ

ಕೊನೆಯದಾಗಿ, ನಿಮ್ಮ ಮತ್ತು ದ್ವಿತೀಯ ಬಳಕೆದಾರರ ನಡುವಿನ ಸಂಬಂಧವನ್ನು ನಮೂದಿಸಿ ಮತ್ತು ಅಗತ್ಯವಿರುವ ಸರ್ಕಾರಿ ಐಡಿ (Government ID) ವಿವರಗಳನ್ನು ಒದಗಿಸಿ KYC ಪ್ರಕ್ರಿಯೆ ಪೂರ್ಣಗೊಳಿಸಿ. ಸೆಟಪ್ ಖಚಿತಪಡಿಸಲು ನಿಮ್ಮ UPI PIN ನಮೂದಿಸಿದರೆ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ: ಸ್ಮಾರ್ಟ್ ಆಗಿ ಪ್ಲಾನ್ ಮಾಡಿ; ಈ 4 ಹಣಕಾಸು ತಪ್ಪುಗಳನ್ನು ಮಾಡದಿರಿ

ಗೂಗಲ್ ಪೇ ಪಾಕೆಟ್ ಮನಿ: ವಹಿವಾಟು ನಡೆಸುವುದು ಹೇಗೆ?

ಹಂತ 1: ಪಾವತಿ ವಿಧಾನವನ್ನು ಆರಿಸಿ

ಸೆಟಪ್ ಪ್ರಕ್ರಿಯೆ ಮತ್ತು ಕೆವೈಸಿ (KYC) ಪೂರ್ಣಗೊಂಡ ನಂತರ, ದ್ವಿತೀಯ ಬಳಕೆದಾರರು (ಮಕ್ಕಳು) ಸಾಮಾನ್ಯ ಯುಪಿಐ ಬಳಕೆದಾರರಂತೆ ಪಾವತಿ ಆರಂಭಿಸಬಹುದು.

ಅಂಗಡಿಗಳಲ್ಲಿ: ಯಾವುದೇ ಅಂಗಡಿಯ QR ಕೋಡ್ ಸ್ಕ್ಯಾನ್ ಮಾಡಬಹುದು ಅಥವಾ ಮೊಬೈಲ್ ಸಂಖ್ಯೆ ನಮೂದಿಸಬಹುದು.

ಆನ್‌ಲೈನ್‌ನಲ್ಲಿ: ಯಾವುದೇ ಆಪ್ ಅಥವಾ ವೆಬ್‌ಸೈಟ್‌ನಲ್ಲಿ ಚೆಕ್‌ಔಟ್ ಮಾಡುವಾಗ ‘UPI’ ಆಯ್ಕೆ ಮಾಡಿ, ಅಲ್ಲಿ ಗೂಗಲ್ ಪೇ ಮೂಲಕ ಪಾವತಿ ಪೂರ್ಣಗೊಳಿಸಬಹುದು.

ಹಂತ 2: ಪಾವತಿ ಪ್ರಕ್ರಿಯೆ

ಪೋಷಕರು ಸೆಟಪ್ ಸಮಯದಲ್ಲಿ ಆರಿಸಿಕೊಂಡಿರುವ ಆಯ್ಕೆಯ ಆಧಾರದ ಮೇಲೆ ಪಾವತಿ ನಡೆಯುತ್ತದೆ:

ಪೂರ್ಣ ನಿಯೋಗ: ಪೋಷಕರು ನಿಗದಿಪಡಿಸಿದ ಮಾಸಿಕ ಮಿತಿಯೊಳಗೆ (ಉದಾಹರಣೆಗೆ ₹2,000) ಮಗು ಪಾವತಿ ಮಾಡಿದರೆ, ಅದು ಯಾವುದೇ ಹೆಚ್ಚಿನ ಅನುಮತಿ ಇಲ್ಲದೆ ತಕ್ಷಣವೇ ಪೂರ್ಣಗೊಳ್ಳುತ್ತದೆ.

ಅನುಮೋದನೆ ಮೋಡ್ : ಮಗು ಪಾವತಿ ಮಾಡಲು ಮುಂದಾದಾಗ, ಪ್ರಾಥಮಿಕ ಬಳಕೆದಾರರಿಗೆ (ಪೋಷಕರಿಗೆ) ತಕ್ಷಣವೇ ಅಧಿಸೂಚನೆ (Notification) ಹೋಗುತ್ತದೆ. ಪೋಷಕರು ನಿಗದಿತ ಸಮಯದೊಳಗೆ ಅದನ್ನು ಪರಿಶೀಲಿಸಿ ‘Approve’ ಮಾಡಿದರೆ ಮಾತ್ರ ಪಾವತಿ ಸಫಲವಾಗುತ್ತದೆ.

ಹಂತ 3: ವಹಿವಾಟು ಇತಿಹಾಸ

ಪಾರದರ್ಶಕತೆಗಾಗಿ, ನಡೆದ ಎಲ್ಲಾ ವಹಿವಾಟುಗಳ ವಿವರಗಳು ಪೋಷಕರು ಮತ್ತು ಮಕ್ಕಳು ಇಬ್ಬರ ಗೂಗಲ್ ಪೇ ಆಪ್‌ನ ‘Transaction History’ ವಿಭಾಗದಲ್ಲಿ ಲಭ್ಯವಿರುತ್ತದೆ. ಇದರಿಂದ ಹಣ ಎಲ್ಲಿ ಖರ್ಚಾಗಿದೆ ಎಂಬುದನ್ನು ನಿಖರವಾಗಿ ತಿಳಿಯಬಹುದು.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Karnataka Government Jobs: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ಗಮನಕ್ಕೆ; KEAಯಿಂದ ನೇಮಕಾತಿ ಪರೀಕ್ಷೆಗಳ ದಿನಾಂಕ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ರಾಜ್ಯದ ವಿವಿಧ ಪ್ರಮುಖ ನಿಗಮ, ಮಂಡಳಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS), ಬೆಂಗಳೂರು ಜಲಮಂಡಳಿ (BWSSB) ಮತ್ತು ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಈ ಪರೀಕ್ಷೆಗಳು ನಡೆಯಲಿವೆ. ಈ ಮೂಲಕ ಬಹುದಿನಗಳಿಂದ ಪರೀಕ್ಷೆಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಪ್ರಾಧಿಕಾರವು ಸ್ಪಷ್ಟನೆಯನ್ನು ನೀಡಿದೆ.

ಪರೀಕ್ಷಾ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಲು ಪ್ರಾಧಿಕಾರವು ದಿನಾಂಕಗಳನ್ನು ನಿಗದಿಪಡಿಸಿದ್ದು, ಹೈದರಾಬಾದ್ ಕರ್ನಾಟಕ ಹಾಗೂ ಉಳಿದ ಜಿಲ್ಲೆಗಳ ಅಭ್ಯರ್ಥಿಗಳಿಗೆ ಪ್ರತ್ಯೇಕ ದಿನಗಳಂದು ಪರೀಕ್ಷೆ ನಡೆಯಲಿದೆ. ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ನೀಡಿರುವ ಮಾಹಿತಿಯಂತೆ, ಮೂಲ ವೃಂದದ (RPC) ಹುದ್ದೆಗಳಿಗೆ ಏಪ್ರಿಲ್ 26 ಮತ್ತು ಮೇ 10ರಂದು ಪರೀಕ್ಷೆಗಳು ಜರುಗಲಿವೆ. ಅದೇ ರೀತಿ, ಕಲ್ಯಾಣ ಕರ್ನಾಟಕ ವೃಂದದ (HK) ಅಭ್ಯರ್ಥಿಗಳಿಗೆ ಏಪ್ರಿಲ್ 27 ಹಾಗೂ ಮೇ 9ರಂದು ಲಿಖಿತ ಪರೀಕ್ಷೆಗಳನ್ನು ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಈ ನೇಮಕಾತಿ ಪರೀಕ್ಷೆಗಳಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಹೀಗೆ ವಿವಿಧ ಶ್ರೇಣಿಯ ಹುದ್ದೆಗಳು ಒಳಗೊಂಡಿವೆ. ಪರೀಕ್ಷೆಯ ಪಠ್ಯಕ್ರಮ, ಪರೀಕ್ಷಾ ಕೇಂದ್ರಗಳ ವಿವರ ಮತ್ತು ಪ್ರವೇಶ ಪತ್ರದ ಲಭ್ಯತೆಯ ಕುರಿತು ಅಭ್ಯರ್ಥಿಗಳು ನಿರಂತರವಾಗಿ ಕೆಇಎ ಅಧಿಕೃತ ವೆಬ್‌ಸೈಟ್(cetonline.karnataka.gov.in) ಗಮನಿಸಲು ಸೂಚಿಸಲಾಗಿದೆ. ಪರೀಕ್ಷಾ ದಿನಾಂಕಗಳು ಘೋಷಣೆಯಾಗಿರುವುದರಿಂದ ಅಭ್ಯರ್ಥಿಗಳು ತಮ್ಮ ಅಂತಿಮ ಹಂತದ ಸಿದ್ಧತೆಯನ್ನು ಚುರುಕುಗೊಳಿಸಲು ಇದು ಸಕಾಲವಾಗಿದೆ. ಹೆಚ್ಚಿನ ತಾಂತ್ರಿಕ ಮಾಹಿತಿ ಅಥವಾ ಬದಲಾವಣೆಗಳಿದ್ದಲ್ಲಿ ಪ್ರಾಧಿಕಾರವು ತನ್ನ ಜಾಲತಾಣದಲ್ಲಿ ಅಪ್‌ಡೇಟ್ ಮಾಡಲಿದೆ ಎಂದು ತಿಳಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದ್ವಿತೀಯ ಪಿಯುಸಿ ಫಲಿತಾಂಶದ ದಿನವೇ ವಿದ್ಯಾರ್ಥಿನಿ ನಿಗೂಢ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಸಲಿಗೆ ಆಗಿದ್ದೇ ಬೇರೆ!

ಬೆಂಗಳೂರು, ಏಪ್ರಿಲ್ 10: ಹೆಬ್ಬಾಳದ ಮನೋರಾಯನಪಾಳ್ಯದಲ್ಲಿ ವಿದ್ಯಾರ್ಥಿನಿ ತನುಶ್ರೀ ಸಾವು (Tanushree Death Case) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಮೊದಲು ತಾಯಿಯ ಮೇಲೆ ಅನುಮಾನ ವ್ಯಕ್ತವಾಗಿದ್ದರೂ, ಈಗ ಲಭ್ಯವಿರುವ ಸಾಕ್ಷ್ಯಗಳು ಇದು ದ್ವಿತೀಯ ಪಿಯುಸಿ ಪರೀಕ್ಷೆ ಫೇಲ್ ಆಗಿ ಮನನೊಂದ ಆತ್ಮಹತ್ಯೆ ಎಂಬದನ್ನು ಪುಷ್ಟೀಕರಿಸುತ್ತಿವೆ. ತನುಶ್ರೀ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿತ್ತು. ಸಂಬಂಧಿಕರು ಕೂಡ ವಿದ್ಯಾರ್ಥಿನಿಯ ತಾಯಿಯ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದರು. ಆದರೆ, ಇದೀಗ ಅಸಲಿ ಸತ್ಯ ಬಹಿರಂಗವಾಗಿದೆ.

ಏನಿದು ಬಿಗ್ ಟ್ವಿಸ್ಟ್?

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತನುಶ್ರೀ ಗಣಿತ ಮತ್ತು ರಾಸಾಯನಶಾಸ್ತ್ರ ವಿಷಯಗಳಲ್ಲಿ ಅನುತ್ತೀರ್ಣಳಾಗಿದ್ದಳು. ಇದರಿಂದ ತೀವ್ರ ಮನನೊಂದಿದ್ದ ಆಕೆ, ಸಾವಿಗೂ ಮುನ್ನ ಸೋಶಿಯಲ್ ಮೀಡಿಯಾ ಸ್ಟೇಟಸ್‌ನಲ್ಲಿ ‘3 PM fielding set’ ಎಂದು ಬರೆದುಕೊಂಡಿದ್ದಳು. ಇದನ್ನು ಗಮನಿಸಿದ ಆಕೆಯ ಸ್ನೇಹಿತೆ ಗಾಬರಿಗೊಂಡು ‘ನಮ್ಮ ಮನೆಗೆ ಬಾ’ ಎಂದು ಮೆಸೇಜ್ ಮಾಡಿದ್ದಳು. ತನುಶ್ರೀ ಕೂಡ ‘ಸರಿ ಬರ್ತೀನಿ’ ಎಂದು ಉತ್ತರಿಸಿದ್ದಳು.

ಆದರೆ, ತನುಶ್ರೀಯ ಸ್ಟೇಟಸ್ ನೋಡಿ ಅನುಮಾನಗೊಂಡ ಸ್ನೇಹಿತೆ ತಕ್ಷಣ ಆಕೆಯ ಮನೆಗೆ ಓಡಿ ಬಂದಿದ್ದಳು. ಅಷ್ಟರಲ್ಲಾಗಲೇ ತನುಶ್ರೀ ನೇಣು ಬಿಗಿದುಕೊಂಡಿದ್ದಳು. ಕೂಡಲೇ ಸ್ನೇಹಿತೆ ತನ್ನ ತಂದೆ ಅಂಥೋನಿ ಅವರಿಗೆ ಕರೆ ಮಾಡಿದ್ದು, ಅವರು ಬಂದು ಬಾಗಿಲು ಒಡೆದು ತನುಶ್ರೀಯನ್ನು ಕೆಳಕ್ಕೆ ಇಳಿಸಿದ್ದಾರೆ. ಆಗ ತನುಶ್ರೀ ಉಸಿರಾಡುತ್ತಿದ್ದಳು ಎನ್ನಲಾಗಿದೆ. ಕೂಡಲೇ ಆಕೆಯನ್ನು ಅಂಬೇಡ್ಕರ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆ ಆಕೆ ಸಾವನ್ನಪ್ಪಿದ್ದಾಳೆ.

ಈ ಬೆಳವಣಿಗೆಯಿಂದಾಗಿ ಪ್ರಕರಣಕ್ಕೆ ಮತ್ತೊಂದು ಆಯಾಮ ಪಡೆದಂತಾಗಿದೆ. ಪೊಲೀಸರು ಯುಡಿಆರ್ (UDR) ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶದ ದಿನವೇ ವಿದ್ಯಾರ್ಥಿನಿ ನಿಗೂಢ ಸಾವು: ತಾಯಿಯ ನಡವಳಿಕೆ ಮೇಲೆಯೇ ಸಂಬಂಧಿಕರ ಶಂಕೆ!

ಆರಂಭದಲ್ಲಿ ಸಂಬಂಧಿಕರು ತನುಶ್ರೀಯ ತಾಯಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಇದು ಆತ್ಮಹತ್ಯೆ ಆಗಿರಲಾರದು ಎಂಬ ಅನುಮಾನವನ್ನೂ ವ್ಯಕ್ತಪಡಿಸಿದ್ದರು. ಆದರೆ, ಸದ್ಯ ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆ ಎಂಬುದು ಗೊತ್ತಾಗಿದ್ದು, ತನಿಖೆ ಮುಂದುವರಿದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಾಮರಾಜನಗರ: ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

ಚಾಮರಾಜನಗರ, ಏಪ್ರಿಲ್​​ 09: ಕಳ್ಳ-ಕಾಕರಿಗೆ ಸಾಮಾನ್ಯವಾಗಿ ಯಾವುದರ ಮೇಲೂ ಭಯ ಇರೋದಿಲ್ಲ. ಆದರೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ದೇವಸ್ಥಾನದ ಹುಂಡಿ ಕದಿಯಲು ಬಂದ ಖದೀಮನೋರ್ವ, ಕನ್ನ ಹಾಕುವ ಮೊದಲು ದೇವರಿಗೆ ಕೈ ಮುಗಿದು ಕುಂಕುಮವನ್ನೂ ಹಚ್ಚಿಕೊಂಡಿದ್ದಾನೆ. ಗ್ರಾಮದ ಶಕ್ತಿ ದೇವತೆ ಪಟ್ಟದರಾಣಿ ದೇವಾಲಯದಲ್ಲಿ ಕಳ್ಳತನ ನಡೆದಿದ್ದು, ಈ ಹಿಂದೆಯೂ ಹುಂಡಿ ಹಣ ಕಳುವಾಗಿದ್ದ ಕಾರಣಕ್ಕೆ ದೇಗುಲಕ್ಕೆ ಸಿಸಿಟಿವಿ ಕ್ಯಾಮರಾ ಹಾಕಲಾಗಿತ್ತು. ಈ ಹಿನ್ನೆಲೆ ಕಳ್ಳತನದ ದೃಶ್ಯ ಸೆರೆಯಾಗಿದೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಬೊಮ್ಮಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕೊಡವ ಶೈಲಿಯಲ್ಲಿ ಸೀರೆ ಉಟ್ಟು ಗಮನ ಸೆಳೆದ ರಶ್ಮಿಕಾ ಮಂದಣ್ಣ

Source link

Exit mobile version