Video: ಪುಣ್ಯಕೋಟಿ ಗೋವಿನ ಹಾಡು ಕೇಳಿ ಬಿಕ್ಕಿ ಬಿಕ್ಕಿ ಅತ್ತ ಪುಟ್ಟ ಬಾಲಕ – Kannada News | A little boy was crying after hearing the song of the punyakoti cow

ಪುಟಾಣಿಗಳೇ (little kids) ಹಾಗೆ, ಸಣ್ಣ ಸಣ್ಣ ವಿಚಾರಗಳನ್ನು ಮನಸ್ಸಿಗೆ ತೆಗೆದುಕೊಳ್ಳುತ್ತಾರೆ. ಇನ್ನು ಯಾವುದಾದರು ಕಥೆಯಲ್ಲಿ ಬರುವ ಪಾತ್ರವನ್ನು ನಿಜವೆಂದು ಭಾವಿಸುತ್ತಾರೆ. ಆದರೆ ಇಲ್ಲೊಬ್ಬ ಪುಟ್ಟ ಹುಡುಗನು ಕೂಡ ಪುಣ್ಯಕೋಟಿ (Punyakoti) ಗೋವಿನ ಹಾಡು ಕೇಳಿ, ಅದು ಮಾಡಿದ ತ್ಯಾಗವನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ಪುಟಾಣಿಯ ಮುಗ್ಧತೆಗೆ ,ಮನಸೋತಿದ್ದಾರೆ.

ಕೋಸ್ಟಲ್ ಬೀಟ್ಸ್ (Costal beats) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಮನೆಯವರೆಲ್ಲರೂ  ಟಿವಿಯ ಮುಂದೆ ಕುಳಿತು ಪುಣ್ಯಕೋಟಿ ಗೋವಿನ ಹಾಡನ್ನು ವೀಕ್ಷಿಸುತ್ತಿದ್ದಾರೆ. ಈ ನಡುವೆ ಈ ಪುಟ್ಟ ಬಾಲಕನು ಈ ಹಾಡು ಕೇಳಿ ಬಿಕ್ಕಿ ಬಿಕ್ಕಿ ಅಳುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಸ್ಟೇಜ್ ಮೇಲೆ ಹೊಗೆ ಕಂಡು ಭಯದಲ್ಲೇ ಅಳುತ್ತಾ ಓಡಿಹೋದ ಪುಟಾಣಿ ಡ್ಯಾನ್ಸರ್ಸ್

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಮುಗ್ಧತೆ ಎಲ್ಲಾ ಕಾಲದಲ್ಲೂ ಸುಂದರ ಎಂದಿದ್ದಾರೆ. ಇನ್ನೊಬ್ಬರು, ಇವಾಗ್ಲೂ ಈ ಪುಣ್ಯಕೋಟಿ ಹಾಡು ಕೇಳುವಾಗ ದುಃಖ ಆಗುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಪುಣ್ಯಕೋಟಿ ಹಾಡಿನಲ್ಲಿ ಅಡಗಿರುವ ಭಾವನೆ ಇದು, ದೇವರು ಆ ಮಗುವಿಗೆ ಒಳ್ಳೆಯದು ಮಾಡಲಿ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿಗರೇ ಗಮನಿಸಿ: ಫೆ.4 ರಿಂದ 9 ರವರೆಗೆ ಈ ಪ್ರದೇಶಗಳಲ್ಲಿ ಪ್ರತಿದಿನ 4 ಗಂಟೆಗಳ ಕಾಲ ವಿದ್ಯುತ್ ಕಡಿತ – Kannada News | Bangalore Power Outage: BESCOM announces 4 hour daily cuts in Hebbal, North Bengaluru

ಬೆಂಗಳೂರು, ಫೆ.4: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮಹತ್ವದ ಘೋಷಣೆಯೊಂದನ್ನು ಮಾಡಿದೆ. ಬೆಂಗಳೂರಿನ ಜನರು ಫೆ.4 ಅಂದರೆ ಇಂದಿನಿಂದ ಫೆ.9ರವರೆಗೆ ವಿದ್ಯುತ್​​ ಕಡಿತ ಸಮಸ್ಯೆಯನ್ನು ಅನುಭವಿಸಬೇಕಾಗುತ್ತದೆ. ಫೆಬ್ರವರಿ 4 ರಿಂದ 9 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಪ್ರತಿದಿನ ನಾಲ್ಕು ಗಂಟೆಗಳ ಕಾಲ ವಿದ್ಯುತ್ ಕಡಿತಗೊಳ್ಳಲಿದ್ದು, ನಗರದ ಹಲವಾರು ಪ್ರದೇಶಗಳಲ್ಲಿ, ವಿಶೇಷವಾಗಿ ಹೆಬ್ಬಾಳ ಮತ್ತು ಉತ್ತರ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಸಮಸ್ಯೆ ಉಂಟಾಗಲಿದೆ. ವರದಿಯ ಪ್ರಕಾರ, ನಗರದ ವಿದ್ಯುತ್ ಮೂಲಸೌಕರ್ಯವನ್ನು ಹೆಚ್ಚಿಸಲು ಈ ಕ್ರಮ ಅಗತ್ಯವಾಗಿದೆ ಎಂದು ಹೇಳಿದೆ. ಇದರಿಂದ ಮುಂದಿನ ದಿನಗಳಲ್ಲಿ ವಿದ್ಯುತ್​​​​​ ಸಂಪರ್ಕದಿಂದ ಯಾವುದೇ ಸಮಸ್ಯೆಗಳು ಬರಬಾರದು ಎಂದ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ವಿದ್ಯುತ್ ಕಡಿತಕ್ಕೆ ಕಾರಣವೇನು?

66/11 ಕೆವಿ ಎಚ್‌ಬಿಆರ್ ವಿದ್ಯುತ್ ಸ್ಥಾವರದಲ್ಲಿ ತುರ್ತು ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ನಿಗದಿತ ವಿದ್ಯುತ್ ಕಡಿತ ಅಗತ್ಯವಾಗಿದೆ ಎಂದು ಬೆಸ್ಕಾಂ ತಿಳಿಸಿದೆ. ನಗರದ ವಿದ್ಯುತ್ ಮೂಲಸೌಕರ್ಯವನ್ನು ಹೆಚ್ಚಿಸಲು ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಇದರಿಂದ ವಿದ್ಯುತ್ ಸರಬರಾಜಿನಲ್ಲಿ ದೀರ್ಘಕಾಲದ ವ್ಯತ್ಯಯಗಳಿಗೆ ಕಾರಣವಾಗುತ್ತದೆ, ಇದು ನಿವಾಸಿಗಳು, ಸಾರ್ವಜನಿಕ ಮತ್ತು ಖಾಸಗಿ ಕಚೇರಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಮೇಲೆ ಪರಿಣಾಮ ಬೀರುತ್ತದೆ.

ಯಾವೆಲ್ಲ ಪ್ರದೇಶದಲ್ಲಿ ವಿದ್ಯುತ್​​​​ ವ್ಯತ್ಯಯವಾಗಲಿದೆ:

ಕಾವಲ್‌ಬೈರಸಂದ್, ಎಲ್.ಆರ್. ಬಂಡೆ ಮುಖ್ಯ ರಸ್ತ, ಗಾಂಧಿನಗ, ಚಿನ್ನಣ್ಣ ಬಡಾವಣ, ಅಂಬೇಡ್ಕರ್ ಲೇಔಟ,, ಅನ್ವರ್ ಲೇಔಟ, ಕಾವೇರಿ ನಗ, ಅಂಬೇಡ್ಕರ್ ವೈದ್ಯಕೀಯ ಕಾಲೇಜು ಪ್ರದೇ, ಸುಲ್ತಾನ್ ಪಾಳ್, ರಂಕಾ ನಗ,ಕನಕ ​​ನಗ, ಕೆಎಚ್‌ಬಿ ಮುಖ್ಯ ರಸ್ತೆ, ಭುವನೇಶ್ವರಿ ನಗ, ಡಿಜಿಎ ಹಳ್ಳ, ಕೆಜೆ ಹಳ್ಳಿ, ಕೆಜೆ ಕಾಲೋನ, ಆದರ್ಶ ನಗ, ವಿ. ನಾಗೇನಹಳ್ಳ, ಪೆರಿಯಾರ್ ನಗ, ಪೆರಿಯಾರ್ ವೃತ್, ಶಂಪು, ಕುಶಾಲ್ ನಗ, ಮೋದಿ ರಸ್ತೆ, ಮೋದಿ ಗಾರ್ಡನ, ದೊಡ್ಡಣ್ಣ ನಗ, ಮುನಿವೀರಪ್ಪ ಬಡಾವಣ, ಸಕ್ಕರೆ ಮಂಡ, ಉಪ್ಪು ಮಂಡಿ, ಮುನೇಶ್ವರ ನಗರ.

ಹೆಚ್ಚುವರಿಯಾಗಿ, ಐದು ದಿನಗಳ ನಿರ್ವಹಣಾ ಅವಧಿಯಲ್ಲಿ ದಿವ್ಯ ಶಾಂತಿ, ಗೋವಿಂದಪುರ, ಕಾರ್ಲೆ, ಬೃಂದಾವನ ನಗರ, ಟೈಟಾನ್ ಗ್ಯಾರೇಜ್, ಭೈರವಿ ಅಪಾರ್ಟ್‌ಮೆಂಟ್‌ಗಳು, ಹೆಗ್ಗಡೆ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕೆಲಸ ಕಳೆದುಕೊಳ್ಳುತ್ತಿರುವ ಬೆಂಗಳೂರಿನ ಯುವಕರು: 100 ಕೆಲಸಕ್ಕೆ ಅರ್ಜಿ, ಎಲ್ಲವೂ ತಿರಸ್ಕಾರ, ಟೆಕ್ಕಿ ಪೋಸ್ಟ್​​ ವೈರಲ್

ಈ ಕ್ರಮಗಳನ್ನು ಸಾರ್ವಜನಿಕರು ಅನುಸರಿಸಿ:

ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಪವರ್ ಬ್ಯಾಂಕ್‌ಗಳು ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ಸಾಧನಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿ. ಲಭ್ಯವಿರುವಲ್ಲಿ ವಿದ್ಯುತ್ ಬ್ಯಾಕಪ್ ವ್ಯವಸ್ಥೆಗಳನ್ನು ಬಳಸಿಕೊಳ್ಳಿ. ಪ್ರತಿದಿನ ನಿರ್ವಹಣಾ ಕಾರ್ಯಗಳು ಪೂರ್ಣಗೊಂಡ ನಂತರ ವಿದ್ಯುತ್ ಸಂಪರ್ಕವನ್ನು ನೀಡಲಾಗುವುದು. ಇದಲ್ಲದೆ, ನಿವಾಸಿಗಳು ತಮ್ಮ ದೈನಂದಿನ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳವಂತೆ ತಿಳಿಸಲಾಗಿದೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ICC Rankings: ಬರೋಬ್ಬರಿ 32 ಸ್ಥಾನ ಮೇಲೇರಿದ ಕಿಶನ್; ಜಾರಿದ ಸಂಜು ಸ್ಯಾಮ್ಸನ್ – Kannada News | ICC T20 Rankings: Kishan, Suryakumar Climb; Varun Chakravarthy Tops Bowlers

ಅಭಿಷೇಕ್ ಶರ್ಮಾ ಟಿ20 ಶ್ರೇಯಾಂಕದಲ್ಲಿ ತಮ್ಮ ಪ್ರಾಬಲ್ಯವನ್ನು ಕಾಯ್ದುಕೊಂಡಿದ್ದು, 917 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಆದಾಗ್ಯೂ, ತಿಲಕ್ ವರ್ಮಾ ಒಂದು ಸ್ಥಾನ ಕುಸಿದು ನಾಲ್ಕನೇ ಸ್ಥಾನಕ್ಕೆ ಇಳಿದಿದ್ದಾರೆ. ಸೂರ್ಯಕುಮಾರ್ ಯಾದವ್ ಏಳನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ. ಶಿವಂ ದುಬೆ ಕೂಡ 17 ಆಟಗಾರರನ್ನು ಹಿಂದಿಕ್ಕಿ 41 ನೇ ಸ್ಥಾನಕ್ಕೆ ತಲುಪಿದ್ದಾರೆ.

Source link

ಪ್ರೆಗ್ನೆಂಟ್ ಆದ್ಮೇಲೆ ಕೈಕೊಟ್ಟವ್ನೆ: ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ – Kannada News | Victim Woman Talks about Man Cheating In Name Of Love In devanahalli

ದೇವನಹಳ್ಳಿ, (ಫೆಬ್ರವರಿ 04): ಗಂಡನಿಂದ ದೂರವಿದ್ದ ಮಹಿಳೆಯನ್ನು ಪ್ರೀತಿ (Love) ಹೆಸರಲ್ಲಿ ನಂಬಿಸಿ, ಲೈಂಗಿಕ ಸಂಪರ್ಕ ಬೆಳೆಸಿದ್ದು, ಬಳಿಕ ಆಕೆ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆಯೇ ಕೈಕೊಟ್ಟಿದ್ದಾನೆ. ಪ್ರಕರಣ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ದೊಡ್ಡಬಳ್ಳಾಪುರ (Doddaballapur) ನಗರದ ಶಾಂತಿನಗರ ನಿವಾಸಿ ಪ್ರವೀಣ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆಗೆ ಓರ್ವ ಮಗಳು ಕೂಡ ಇದ್ದಾಳೆಂಬ ವಿಷಯ ಬಹಿರಂಗವಾಗಿದ್ದು, ತನ್ನ ಮೇಲೆ ಆರೋಪಿ ಮತ್ತು ಆತನ ಕುಟುಂಬ ಶೋಷಣೆ ನಡೆಸಿರೋದಾಗಿ ಆಕೆ ಆರೋಪಿಸಿದ್ದಾಳೆ. ಇನ್ನು ಆರೋಪಿ ಪ್ರವೀಣ್ ಕುಮಾರ್ ಮಾಡಿದ ಮೋಸದ ಬಗ್ಗೆ ಸ್ವತಃ ಸಂತ್ರಸ್ತೆ ಟಿವಿ9 ಬಳಿ ಹಂಚಿಕೊಂಡಿದ್ದಾಳೆ.

ಇದನ್ನೂ ಓದಿ: ಪ್ರೀತಿ ಹೆಸರಲ್ಲಿ ವಿವಾಹಿತ ಮಹಿಳೆ ಜೊತೆ ಚಕ್ಕಂದ: ನಂಬಿಸಿ ಗರ್ಭಪಾತ ಮಾಡಿಸಿದ್ನಾ ಯುವಕ?

Source link

ಬಾಯಿಯ ದುರ್ವಾಸನೆ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ಮನೆಮದ್ದುಗಳು ಪರಿಣಾಮಕಾರಿ – Kannada News | These home remedies are effective in getting rid of bad breath

ದಿನಕ್ಕೆರಡು ಬಾರಿ ಹಲ್ಲುಜ್ಜಿದರೂ, ಅನೇಕರು ಬಾಯಿ ದುರ್ವಾಸನೆ (bad breath) ಸಮಸ್ಯೆಯನ್ನು ಎದುರಿಸುತ್ತಾರೆ. ಬಾಯಿಯ ಆರೋಗ್ಯ, ನೈರ್ಮಲ್ಯದ ಬಗ್ಗೆ ಕಾಳಜಿ ವಹಿಸದಿದ್ದರೆ ಹೀಗೆ ಬಾಯಿ ವಾಸನೆ ಬರುತ್ತದೆ. ಇದು ಹೆಚ್ಚಿನವರಿಗೆ ಮುಜುಗರವನ್ನು ಉಂಟುಮಾಡುತ್ತದೆ. ಇದೇ ಕಾರಣಕ್ಕೆ ಅನೇಕರು ಮೌತ್‌ ಕ್ಲೀನರ್‌ಗಳನ್ನು ಬಳಕೆ ಮಾಡುತ್ತಾರೆ. ಇದರ ಬದಲು ಕೆಲವೊಂದು ಮನೆಮದ್ದುಗಳ ಸಹಾಯದಿಂದ ಬಾಯಿಯ ದುರ್ವಾಸನೆ ಸಮಸ್ಯೆಯಿಂದ ಪರಿಣಾಮಕಾರಿ ಪರಿಹಾರವನ್ನು ಪಡೆಯಬಹುದು. ಆ ಮನೆಮದ್ದುಗಳು ಯಾವುವು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಬಾಯಿ ದುರ್ವಾಸನೆಯನ್ನು ಹೋಗಲಾಡಿಸಲು ಈ ಮನೆಮದ್ದುಗಳನ್ನು ಪ್ರಯತ್ನಿಸಿ:

ಪುದೀನ: ಬಾಯಿಯ ದುರ್ವಾಸನೆಯನ್ನು ಹೋಗಲಾಡಿಲಸು ಪದೀನಾ ತುಂಬಾ ಪರಿಣಾಮಕಾರಿ ಪರಿಹಾರವಾಗಿದೆ. ಇದಕ್ಕಾಗಿ ಪುದೀನ ಎಲೆಗಳನ್ನು ನೀರಿನಲ್ಲಿ ಕುದಿಸಿ, ಒಂದು ದ್ರಾವಣವನ್ನು ತಯಾರಿಸಿ, ದಿನಕ್ಕೆ ಮೂರು ಬಾರಿ ಬಾಯಿ ಮುಕ್ಕಳಿಸುವುದರಿಂದ ಕೆಲವೇ ದಿನಗಳಲ್ಲಿ ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸಬಹುದು. ಇದಲ್ಲದೆ ಪುದೀನಾ ಎಲೆಯನ್ನು ಜಗಿಯುವುದರಿಂದಲೂ ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸಬಹುದು.

ಶುಂಠಿ: ಬಾಯಿಯ ದುರ್ವಾಸನೆಯನ್ನು ತೊಡೆದುಹಾಕಲು, ಒಂದು ಲೋಟ ನೀರಿಗೆ ಶುಂಠಿ ರಸವನ್ನು ಸೇರಿಸಿ ಬಾಯಿ ಮುಕ್ಕಳಿಸಿ. ಹೌದು ದಿನಕ್ಕೆ ಮೂರು ಬಾರಿ ಬೆಳಿಗ್ಗೆ, ಮಧ್ಯಾಹ್ನ ಮತ್ತು ಸಂಜೆ ಈ ನೀರಿನಿಂದ ಬಾಯಿ ಮುಕ್ಕಳಿಸುವುದರಿಂದ ಪರಿಣಾಮಕಾರಿಪರಿಹಾರವನ್ನು ಪಡೆಯಬಹುದು.

ಲವಂಗ ಅಥವಾ ಸೋಂಪು ಬೀಜಗಳನ್ನು ಅಗಿಯಿರಿ: ಇವುಗಳಲ್ಲಿ ನಂಜುನಿರೋಧಕ ಗುಣಗಳಿದ್ದು, ಬಾಯಿಯ ದುರ್ವಾಸನೆಯನ್ನು ಉಂಟುಮಾಡುವ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಸಿಟ್ರಸ್ ಹಣ್ಣುಗಳು: ಕಿತ್ತಳೆ ಮತ್ತು ನಿಂಬೆಹಣ್ಣಿನಂತಹ ಸಿಟ್ರಸ್ ಹಣ್ಣುಗಳು ಬಾಯಿಯಲ್ಲಿ ಬ್ಯಾಕ್ಟೀರಿಯಾ ಬೆಳೆಯುವುದನ್ನು ತಡೆಯಲು ಸಹಾಯ ಮಾಡುವ ಆಮ್ಲವನ್ನು ಹೊಂದಿರುತ್ತವೆ. ಇದಕ್ಕಾಗಿ, 1 ಟೀಚಮಚ ನಿಂಬೆ ಅಥವಾ ಕಿತ್ತಳೆ ರಸದೊಂದಿಗೆ ಸ್ವಲ್ಪ ಉಪ್ಪನ್ನು ಬೆರೆಸಿ, ಅದನ್ನು ಬಾಯಲ್ಲಿಟ್ಟು ನಂತರ ಸ್ವಚ್ಛಗೊಳಿಸಿ, ಇದು ಬಾಯಿಯ ದುರ್ವಾಸನೆಯನ್ನು ನಿವಾರಿಸುತ್ತದೆ. ಇದಲ್ಲದೆ ನಿಂಬೆ ಮತ್ತು ಕಿತ್ತಳೆ ಸಿಪ್ಪೆಗಳನ್ನು ಸಹ ಅಗಿಯಬಹುದು.

ಇದನ್ನೂ ಓದಿ: ಹಲ್ಲುಜ್ಜಲು ಎಷ್ಟು ಪ್ರಮಾಣದ ಟೂತ್‌ಪೇಸ್ಟ್‌ ಬಳಸುವುದು ಸೂಕ್ತ?

ಸಾಸಿವೆ ಮತ್ತು ಉಪ್ಪು: ಸಾಸಿವೆ ಎಣ್ಣೆಯನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಬೆರೆಸಿ ನಿಮ್ಮ ಒಸಡುಗಳಿಗೆ ಮಸಾಜ್ ಮಾಡುವುದರಿಂದ ಬಾಯಿಯ ದುರ್ವಾಸನೆ ನಿವಾರಣೆಯಾಗುತ್ತದೆ. ಕೆಲವೊಮ್ಮೆ, ವಸಡಿನ ಕೊಳೆತ ಬಾಯಿಯ ದುರ್ವಾಸನೆಗೆ ಕಾರಣವಾಗಬಹುದು. ಅಂತಹ ಸಂದರ್ಭಗಳಲ್ಲಿ, ಕೆಲವು ದಿನಗಳವರೆಗೆ ಈ ಪರಿಹಾರವನ್ನು ಅನುಸರಿಸುವುದರಿಂದ ಬಾಯಿಯ ದುರ್ವಾಸನೆ ನಿವಾರಣೆಯಾಗುತ್ತದೆ.

ನಾಲಿಗೆಯ ಸ್ವಚ್ಛಗೊಳಿಸುವುದು ಮುಖ್ಯ:

ಜನರು ಹೆಚ್ಚಾಗಿ ಹಲ್ಲುಜ್ಜುತ್ತಾರೆ, ಆದರೆ ನಾಲಿಗೆಯ ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸುವುದಿಲ್ಲ. ಇದರಿಂದ ಕೊಳಕು ಮತ್ತು ಬ್ಯಾಕ್ಟೀರಿಯಾಗಳು ಹಾಗೆಯೇ ಉಳಿದು ಬಿಡುತ್ತದೆ.  ಇದು ಬಾಯಿ ದುರ್ವಾಸನೆ ಸಮಸ್ಯೆಗೆ ದೊಡ್ಡ ಕಾರಣವಾಗಿದೆ. ಆದ್ದರಿಂದ, ಪ್ರತಿದಿನ ತಾಮ್ರ ಅಥವಾ ಉಕ್ಕಿನ ಟಂಗ್‌ ಕ್ಲೀನರ್‌ನಿಂದ ನಾಲಿಗೆಯನ್ನು ಸ್ವಚ್ಛಗೊಳಿಸಿ. ಅಲ್ಲದೆ ಸಾಕಷ್ಟು ನೀರು ಕುಡಿಯಿರಿ ಮತ್ತು ಊಟದ ನಂತರ ಬಾಯಿ ಮುಕ್ಕಳಿಸುವ ಅಭ್ಯಾಸ ಬೆಳೆಸಿಕೊಳ್ಳಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IIT Madras Summer Internship 2026: IIT ಮದ್ರಾಸ್ ಸಮ್ಮರ್ ಇಂಟರ್ನ್‌ಶಿಪ್; ತರಬೇತಿಯ ಜೊತೆಗೆ 30,000 ರೂ. ಸ್ಟೈಫಂಡ್ – Kannada News | IIT Madras Summer Internship 2026: Apply Now for Rs 30,000 Stipend and Research Experience

ಭಾರತೀಯ ತಂತ್ರಜ್ಞಾನ ಸಂಸ್ಥೆ (IIT) ಮದ್ರಾಸ್ ತನ್ನ ಸಮ್ಮರ್​ ಫೆಲೋಶಿಪ್/ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಘೋಷಿಸಿದ್ದು, ದೇಶದಾದ್ಯಂತದ ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ ಒದಗಿಸಿದೆ. ವಿಶೇಷವಾಗಿ IIT ಹೊರಗಿನ ವಿದ್ಯಾರ್ಥಿಗಳಿಗೆ ಸಂಶೋಧನಾ ಅನುಭವ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದ್ದು, ಆಯ್ಕೆಯಾದವರಿಗೆ ಆಕರ್ಷಕ ಸ್ಟೈಫಂಡ್ ಕೂಡ ನೀಡಲಾಗುತ್ತದೆ. ಇಂಟರ್ನ್‌ಶಿಪ್ ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಒಟ್ಟು 30,000 ರೂ. ಸ್ಟೈಫಂಡ್ ಪಡೆಯಲಿದ್ದಾರೆ.

ಈ ಇಂಟರ್ನ್‌ಶಿಪ್ ಎರಡು ತಿಂಗಳ ಅವಧಿಯದ್ದಾಗಿದ್ದು, ಮೇ 18 ರಿಂದ ಜುಲೈ 17 ರವರೆಗೆ ನಡೆಯಲಿದೆ. ಆಯ್ಕೆಯಾದ ವಿದ್ಯಾರ್ಥಿಗಳು ಈ ಅವಧಿಯಲ್ಲಿ IIT ಮದ್ರಾಸ್ ಕ್ಯಾಂಪಸ್‌ನಲ್ಲಿ ಸಂಶೋಧನಾ ಅಥವಾ ಅಕಾಡೆಮಿಕ್ ಯೋಜನೆಗಳಲ್ಲಿ ಭಾಗವಹಿಸಬೇಕು. ಪ್ರತಿ ತಿಂಗಳಿಗೆ 15,000 ರೂ. ಸ್ಟೈಫಂಡ್ ನೀಡಲಾಗುತ್ತಿದ್ದು, ಎರಡು ತಿಂಗಳುಗಳಿಗೆ ಒಟ್ಟು 30,000 ರೂ. ಲಭಿಸುತ್ತದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 2 ಸಂಜೆ 5 ಗಂಟೆಯೊಳಗೆ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

IIT ಮದ್ರಾಸ್‌ನಲ್ಲಿ ಇಂಜಿನಿಯರಿಂಗ್, ವಿಜ್ಞಾನ, ಮಾನವಿಕ ಹಾಗೂ ನಿರ್ವಹಣಾ ಅಧ್ಯಯನ ಸೇರಿದಂತೆ ಹಲವು ವಿಭಾಗಗಳಲ್ಲಿ ಇಂಟರ್ನ್‌ಶಿಪ್ ಅವಕಾಶಗಳಿವೆ. ಏರೋಸ್ಪೇಸ್, ಕಂಪ್ಯೂಟರ್ ಸೈನ್ಸ್, ಡೇಟಾ ಸೈನ್ಸ್ ಮತ್ತು AI, ಮೆಕ್ಯಾನಿಕಲ್, ಸಿವಿಲ್, ಎಲೆಕ್ಟ್ರಿಕಲ್, ಬಯೋಟೆಕ್ನಾಲಜಿ, ಕೆಮಿಕಲ್ ಎಂಜಿನಿಯರಿಂಗ್, ಮೆಟಲರ್ಜೀ, ಮೆಡಿಕಲ್ ಸೈನ್ಸ್, ಓಷನ್ ಎಂಜಿನಿಯರಿಂಗ್ ಸೇರಿದಂತೆ ಅನೇಕ ತಾಂತ್ರಿಕ ವಿಭಾಗಗಳ ಜೊತೆಗೆ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಮಾನವಿಕ ಮತ್ತು ನಿರ್ವಹಣಾ ವಿಭಾಗಗಳಲ್ಲಿಯೂ ಅವಕಾಶಗಳಿವೆ. ಇದು ವಿದ್ಯಾರ್ಥಿಗಳಿಗೆ ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ನೈಜ ಅನುಭವ ಪಡೆಯಲು ಉತ್ತಮ ವೇದಿಕೆಯಾಗಿದೆ.

ಇದನ್ನೂ ಓದಿ: ಎಕ್ಸಿಮ್ ಬ್ಯಾಂಕ್​ನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ; ತಿಂಗಳಿಗೆ 65,000ರೂ. ಸ್ಟೈಫಂಡ್

ಅರ್ಜಿ ಸಲ್ಲಿಸಲು ಎಂಜಿನಿಯರಿಂಗ್, ವಿಜ್ಞಾನ, ಮಾನವಿಕ ಮತ್ತು ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳು ಅರ್ಹರು. ಮೂರನೇ ವರ್ಷದ BE/BTech/BSc ಎಂಜಿನಿಯರಿಂಗ್/ಸೈನ್ಸ್ ವಿದ್ಯಾರ್ಥಿಗಳು, ಇಂಟಿಗ್ರೇಟೆಡ್ ಅಥವಾ ಡ್ಯುಯಲ್ ಪದವಿಯ ME/MTech/MSc ಮೂರನೇ ಅಥವಾ ನಾಲ್ಕನೇ ವರ್ಷದ ವಿದ್ಯಾರ್ಥಿಗಳು ಹಾಗೂ ಮೊದಲ ವರ್ಷದ MSc/MA/MBA ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಆದರೆ IITಗಳಲ್ಲಿ ಈಗಾಗಲೇ ಓದುತ್ತಿರುವ ವಿದ್ಯಾರ್ಥಿಗಳಿಗೆ ಈ ಅವಕಾಶ ಲಭ್ಯವಿಲ್ಲ.

ಒಟ್ಟಿನಲ್ಲಿ, IIT ಮದ್ರಾಸ್‌ನ ಈ ಬೇಸಿಗೆ ಇಂಟರ್ನ್‌ಶಿಪ್ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯಲ್ಲಿ ಸಂಶೋಧನಾ ಅನುಭವ, ಮಾರ್ಗದರ್ಶನ ಮತ್ತು ಸ್ಟೈಫಂಡ್ ಜೊತೆಗೆ ತಮ್ಮ ವೃತ್ತಿಜೀವನಕ್ಕೆ ಬಲವಾದ ನೆಲೆ ಸೃಷ್ಟಿಸಿಕೊಳ್ಳುವ ಅಪೂರ್ವ ಅವಕಾಶವಾಗಿದೆ. ಆಸಕ್ತರು ಗಡುವಿನೊಳಗೆ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೇಶದ್ರೋಹಿ ಸ್ನೇಹಿತ; ಕೇಂದ್ರ ಸಚಿವ ರವನೀತ್ ಬಿಟ್ಟುಗೆ ರಾಹುಲ್ ಗಾಂಧಿ ಲೇವಡಿ, ಸಂಸತ್ ಹೊರಗೆ ವಾಗ್ವಾದ – Kannada News | My Traitor Friend; Rahul Gandhi’s dig At BJP Minister Ravneet Bittu outside Parliament Sparks Row

ನವದೆಹಲಿ, ಫೆಬ್ರವರಿ 4: ಇಂದು ಬೆಳಿಗ್ಗೆ ಸಂಸತ್ ಭವನದ ಹೊರಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಮತ್ತು ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಇಂದಿನ ಕಲಾಪದ ಆರಂಭಕ್ಕೂ ಮುನ್ನ ಪಾರ್ಲಿಮೆಂಟ್ ಹೊರಗೆ ಮೆಟ್ಟಿಲಿನ ಬಳಿ ಕಾಂಗ್ರೆಸ್ ಸಂಸದರು ಕುಳಿತಿದ್ದರು. ಆಗ ಅಲ್ಲಿಗೆ ಬಂದ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು (Ravneet Singh Bittu) ಅವರನ್ನು ನೋಡಿ ತಮಾಷೆ ಮಾಡಿದ್ದಾರೆ. “ನನ್ನ ದೇಶದ್ರೋಹಿ ಸ್ನೇಹಿತ ಬಂದರು ನೋಡಿ” ಎಂದು ಹೇಳುತ್ತಾ ರವನೀತ್ ಸಿಂಗ್​ಗೆ ಹಸ್ತಲಾಘವ ನೀಡಲು ಕೈಚಾಚಿದ್ದಾರೆ. ಆದರೆ, ತಮ್ಮನ್ನು ದೇಶದ್ರೋಹಿ ಎಂದು ಕರೆದಿದ್ದಕ್ಕೆ ಕೋಪಗೊಂಡ ರವನೀತ್ ಬಿಟ್ಟು ರಾಹುಲ್ ಗಾಂಧಿಯ ಹ್ಯಾಂಡ್​ ಶೇಕ್ ಮಾಡಿಲ್ಲ. ಅಷ್ಟೇ ಅಲ್ಲದೆ, “ನೀವು ನಮ್ಮ ದೇಶದ ಶತ್ರು” ಎಂದು ರಾಹುಲ್ ಗಾಂಧಿಯನ್ನು ಟೀಕಿಸಿದ್ದಾರೆ. ಈ “ದೇಶದ್ರೋಹಿ” ಹಾಗೂ “ದೇಶದ ಶತ್ರು” ಎಂಬ ಹೇಳಿಕೆಗಳು ಇಬ್ಬರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು.

ಅಂದಹಾಗೆ, ಈ ರವನೀತ್ ಸಿಂಗ್ ಬಿಟ್ಟು ಕಾಂಗ್ರೆಸ್ ನಾಯಕರಾಗಿದ್ದವರು. 3 ಬಾರಿ ಕಾಂಗ್ರೆಸ್ ಸಂಸದ ಮತ್ತು ಕೇಂದ್ರ ರೈಲ್ವೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದ ರವನೀತ್ ಬಿಟ್ಟು 2024ರ ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಅದಾದ ನಂತರ ಚುನಾವಣೆಯಲ್ಲಿ ಗೆದ್ದು ಕೇಂದ್ರ ಸಚಿವರೂ ಆಗಿದ್ದರು.

ಇಂದು ಆಗಿದ್ದೇನು?:

ಇಂದು ಕಾಂಗ್ರೆಸ್ ಸಂಸದರು ಸಂಸತ್​​ನ ಮಕರ ದ್ವಾರದ ಬಳಿ ಪ್ರತಿಭಟನೆ ನಡೆಸುತ್ತಿದ್ದಾಗ ಅಲ್ಲಿ ರವನೀತ್ ಬಿಟ್ಟು ನಡೆದುಕೊಂಡು ಹೋಗುತ್ತಿದ್ದರು. ಅವರನ್ನು ನೋಡಿದ ರಾಹುಲ್ ಗಾಂಧಿ “ಅದೋ ಅಲ್ಲಿ ನಮ್ಮ ಒಬ್ಬ ದೇಶದ್ರೋಹಿ ನಡೆದುಕೊಂಡು ಬರುತ್ತಿದ್ದಾರೆ. ಅವರ ಮುಖ ನೋಡಿ” ಎಂದು ತಮಾಷೆ ಮಾಡಿದರು. ಆಗ ಅಲ್ಲಿ ಕುಳಿತಿದ್ದ ಬೇರೆ ಸಂಸದರು ಜೋರಾಗಿ ನಗಲಾರಂಭಿಸಿದರು. ಇದರಿಂದ ರವನೀತ್ ಬಿಟ್ಟುಗೆ ಅವಮಾನವಾಯಿತು. ಅಷ್ಟಕ್ಕೇ ಸುಮ್ಮನಾಗದ ರಾಹುಲ್ ಗಾಂಧಿ ಎದ್ದುನಿಂತು “ಹೆಲೋ ಬ್ರದರ್, ನನ್ನ ದೇಶದ್ರೋಹಿ ಸ್ನೇಹಿತ. ಡೋಂಟ್ ವರಿ, ನೀವು ಕಾಂಗ್ರೆಸ್‌ಗೆ ವಾಪಾಸ್ ಬರುತ್ತೀರಿ” ಎಂದು ಹೇಳುತ್ತಾ ಶೇಕ್ ಹ್ಯಾಂಡ್​​ಗೆ ಕೈ ಚಾಚಿದರು.

ಇದನ್ನೂ ಓದಿ: ಲೋಕಸಭೆ ಅಧಿವೇಶನದಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದ 8 ಸಂಸದರ ಅಮಾನತು

ಆದರೆ, ಅಷ್ಟರಲ್ಲೇ ಅವಮಾನಗೊಂಡಿದ್ದ ರವನೀತ್ ಸಿಂಗ್ ಬಿಟ್ಟು ರಾಹುಲ್ ಗಾಂಧಿಗೆ ಹಸ್ತಲಾಘವ ನೀಡಲಿಲ್ಲ. “ದೇಶ್ ಕೆ ದುಷ್ಮನ್ (ನೀವು ಈ ದೇಶದ ಶತ್ರು)” ಎಂದು ಹೇಳಿದ ರವನೀತ್ ಬಿಟ್ಟು ಅಲ್ಲಿ ಕುಳಿತಿದ್ದ ಪ್ರತಿಭಟನಾ ನಿರತ ಸಂಸದರ ಕುರಿತಾಗಿ “ನೀವು ಯುದ್ಧ ಗೆದ್ದಂತೆ ಕುಳಿತಿದ್ದೀರ” ಎಂದು ಲೇವಡಿ ಮಾಡಿದರು. ಇದಾದ ನಂತರ ಇಬ್ಬರ ನಡುವೆ ವಾಗ್ವಾದ ನಡೆಯಿತು.

“ಪಕ್ಷಕ್ಕೆ ದ್ರೋಹ ಮಾಡುವವನಿಗೆ ಬೇರೆ ಯಾವುದೇ ಪದ ಸರಿಹೊಂದುವುದಿಲ್ಲ” ಎಂದು ಪ್ರತಿಪಾದಿಸುತ್ತಾ ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿಯನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿತು. “ವಿರೋಧ ಪಕ್ಷದ ನಾಯಕನಿಗೆ ಮಾತನಾಡಲು ಅವಕಾಶವಿಲ್ಲದಿದ್ದಾಗ ನಾವು ಏನು ಮಾಡಬಹುದು? ರವನೀತ್ ಬಿಟ್ಟು ಅವರನ್ನು ಸಂಸದರನ್ನಾಗಿ ಮಾಡಿದವರು ಯಾರು? ದೇಶದ್ರೋಹಿ ಬಗ್ಗೆ ನಾವು ಇನ್ನೇನು ಹೇಳಲು ಸಾಧ್ಯ?” ಎಂದು ಕಾಂಗ್ರೆಸ್ ಸಂಸದ ಅಮರಿಂದರ್ ರಾಜಾ ವಾರಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ರಾಜಿ ಮಾಡಿಕೊಂಡು ರಾಷ್ಟ್ರವನ್ನೇ ಮಾರಿದ್ದಾರೆ; ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ರಾಹುಲ್ ಗಾಂಧಿ ಆರೋಪ

ಸಿಖ್ ಶಾಸಕ ಮತ್ತು ದೆಹಲಿ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ, ಸಿಖ್ ಸಚಿವರಾದ ಬಿಟ್ಟು ಅವರ ಬಗ್ಗೆ ರಾಹುಲ್ ಗಾಂಧಿ ನೀಡಿದ “ದೇಶದ್ರೋಹಿ” ಎಂಬ ಹೇಳಿಕೆಯನ್ನು ಖಂಡಿಸಿದ್ದಾರೆ. “ರಾಹುಲ್ ಗಾಂಧಿ ಮತ್ತು ಗಾಂಧಿ ಕುಟುಂಬ ದೇಶದ್ರೋಹಿಗಳು. ಸಿಖ್ಖರು ಮತ್ತು ಸರ್ದಾರ್‌ಗಳು ದೇಶದ್ರೋಹಿಗಳಾಗಲು ಸಾಧ್ಯವಿಲ್ಲ. ಈ ಹೇಳಿಕೆಯು ಕಾಂಗ್ರೆಸ್‌ನ ಮನಸ್ಥಿತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಪ್ರತಿಬಿಂಬಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜ್ಯೋತಿಷಿ ಕಮಲಾಕರ್​​ ಭಟ್​​ ಕೇಸ್​​: ಬಿ.ಕೆ. ಹರಿಪ್ರಸಾದ್​- ಸುರೇಶ್​​ ಕುಮಾರ್​ ನಡುವೆ ವಾಕ್ಸಮರ; ಕಾರಣ ಇಲ್ಲಿದೆ – Kannada News | Astrologer Murder Case: BJP MLA Suresh Kumar Counters Congress MLC B.K. Hariprasad’s Allegations

ಹರಿಪ್ರಸಾದ್​ Vs ಸುರೇಶ್​​ ಕುಮಾರ್​Image Credit source: Google

ಬೆಂಗಳೂರು, ಫೆಬ್ರವರಿ 04: ವಿವಾಹಿತ ಮಹಿಳೆಯೋರ್ವರ ಜೊತೆಗೆ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ ಆರೋಪ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಮೃತಪಟ್ಟಿರುವ ಘಟನೆಯೀಗ ಪರಿಷತ್​​ ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್​​ ಮತ್ತು ಬಿಜೆಪಿ ಶಾಸಕ ಎಸ್​​.ಸುರೇಶ್​​ ಕುಮಾರ್​ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಪ್ರಕರಣ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ ಮಾಡಿರುವ ಹರಿಪ್ರಸಾದ್​​ ಬಿಜೆಪಿ ಮತ್ತು ತಮ್ಮ ಹೆಸರನ್ನು ಉಲ್ಲೇಖಿಸಿರುವ ಬಗ್ಗೆ ಸುರೇಶ್​​ ಕುಮಾರ್​​ ಗರಂ ಆಗಿದ್ದು, ಕಾಂಗ್ರೆಸ್​​ ನಾಯಕನ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಹರಿಪ್ರಸಾದ್​ ಆರೋಪವೇನು?

ಕಾರವಾರದ ಸಿದ್ದಾಪುರದಲ್ಲಿ ಕಮಲಾಕರ್ ಭಟ್ ಹೆಸರಿನ ಜ್ಯೋತಿಷಿಯ ಅಕ್ರಮ ಸಂಬಂಧಕ್ಕೆ 41 ವರ್ಷದ ಅಮಾಯಕ ವಸಂತ್ ನಾಯ್ಕ್ ಬಲಿಯಾಗಿದ್ದಾರೆ. ಈ ಕ್ರಿಮಿನಲ್ ಪ್ರಕರಣ ನ್ಯಾಯಯುತ ತನಿಖೆಯಾಗಿ, ನ್ಯಾಯಾಲಯ ತೀರ್ಪು ಕೊಡುತ್ತದೆ. ಆದರೆ, ಇಂತಹ ಪ್ರಕರಣದಲ್ಲಿ ಸಂಘಪರಿವಾರದ ಹಿನ್ನಲೆಯಿಂದ ಬಂದ ಬಿಜೆಪಿಯ ಸುರೇಶ್​​ ಕುಮಾರ್​ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಂತಹ ಜನಪ್ರತಿನಿಧಿಗಳ ಪಾತ್ರ ಏನು? ಎಂಬುದು ಸ್ವಸ್ಥ ಸಮಾಜ ದೃಷ್ಟಿಯಿಂದ ಮುಖ್ಯವಾಗುತ್ತದೆ. ಕಮಲಾಕರ ಭಟ್ ಎಂಬ ಜ್ಯೋತಿಷಿ ಭಾಗಿಯಾದ ಕೊಲೆ ಕೇಸ್​​ನಲ್ಲಿ ರಾಜಾಜಿನಗರ ಶಾಸಕ ಸುರೇಶ್​​ ಕುಮಾರ್​​ ಪಾತ್ರವಿಲ್ಲವೇ? ಕೊಲೆ ಆರೋಪಿ ಜೋತಿಷಿ ಗುರೂಜಿ ಕಮಲಾಕರ ಭಟ್ಟನನ್ನು ಓರ್ವ ಶಾಸಕನಾಗಿ ಪ್ರೋತ್ಸಾಹಿಸಿ ಬೆಳೆಸಿದ್ದು ಸಂವಿಧಾನಕ್ಕೆ ಮಾಡುವ ಅಪಚಾರವಲ್ಲವೇ ? ಒರ್ವ ಮಾಜಿ ಕಾನೂನು ಸಚಿವನಿಗೆ ಇಷ್ಟೂ ಅರಿವಿಲ್ಲದಿರುವುದು ಈ ರಾಜ್ಯದ ದುರಂತವಾಗಿದೆ.

ಕೊಲೆಗಡುಕ, ಮಹಿಳಾ ಪೀಡಕ ಕಮಲಾಕರ ಭಟ್ ತನ್ನಲ್ಲಿಗೆ ಜೋತಿಷ್ಯ ಕೇಳಲು ಬರುವ ಗ್ರಾಹಕರನ್ನು ಲೈಂಗಿಕವಾಗಿ ಶೋಷಿಸುತ್ತಿದ್ದ. ಅದರ ಭಾಗವಾಗಿಯೇ ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿ ಅದು ಕೊಲೆಯವರೆಗೂ ಹೋಗಿದೆ. ಈ ರೀತಿ ಜನರ ಮೂಢನಂಬಿಕೆಯನ್ನೇ ಬಳಸಿಕೊಂಡು ಹಲವು ಅಕ್ರಮಗಳನ್ನು ಸಂಪಾದಿಸಿಕೊಂಡು ಇಂತಹ “ಜೀ-ಗುರೂಜಿ”ಗಳು ಸಮಾಜ ಸೇವೆಯ ಹೆಸರಿನಲ್ಲಿ ಸಮಾಜವನ್ನೇ ಯಾಮಾರಿಸುತ್ತಾರೆ. ಇಂತಹ ಮೂಢನಂಬಿಕೆಯ ಅಕ್ರಮ ದಂಧೆಗಳನ್ನು ಬಿಜೆಪಿಯ ಸ್ವಯಂ ಘೋಷಿತ ಸಜ್ಜನ ಶಾಸಕ ಬಿರುದಾಂಕಿತ ಬಿಜೆಪಿಯ ಸುರೇಶ್ ಕುಮಾರ್ ಬೆನ್ನುತ್ತಟ್ಟಿ ಪ್ರೋತ್ಸಾಹಿಸಿ ಬೆಳೆಸಿದ್ದಾರೆ. ಹಾಗಾಗಿ ಈ ಕೊಲೆಯಲ್ಲಿ ಸುರೇಶ್ ಕುಮಾರ್ ಅಂತವರ ಪಾತ್ರ ಬಹಳ ಮುಖ್ಯವಾಗುತ್ತದೆ. ಹಾಗಾಗಿಯೇ ಶಾಸಕ ಸುರೇಶ್ ಕುಮಾರ್ ಕೂಡಾ ಈ ಕೊಲೆಯ ನೈತಿಕ ಹೊಣೆಯನ್ನು ಹೊತ್ತುಕೊಳ್ಳಬೇಕು ಎಂದು ಹರಿಪ್ರಸಾದ್​​ ಹೇಳಿದ್ದಾರೆ.

ಇದನ್ನೂ ಓದಿ: ವಿವಾಹವಾಗಿ ಇಬ್ಬರು ಮಕ್ಕಳಿದ್ದರೂ ಕಮಲಾಕರ ಗುರೂಜಿ ಜೊತೆಗೆ ಸಂಬಂಧ; ಪುತ್ರಿಯಿಂದಲೇ ಮ್ಯಾಟರ್​​ ರಿವೀಲ್

ಸುರೇಶ್​​ ಕುಮಾರ್​​ ಕೌಂಟರ್​

ಸಿದ್ದಾಪುರದಲ್ಲಿ ನಡೆದ ಹೇಯ ಕೃತ್ಯವೊಂದನ್ನು ಮುಂದಿಟ್ಟುಕೊಂಡು, ಅದಕ್ಕೆ ರಾಜಕೀಯ ಬಣ್ಣ ಬಳಿದು ನನ್ನ ಹೆಸರನ್ನು ತಳುಕು ಹಾಕಲು ನೀವು ನಡೆಸಿರುವ ಪ್ರಯತ್ನ ನಿಮ್ಮ ಬೌದ್ಧಿಕ ದಿವಾಳಿತನವನ್ನು ಎತ್ತಿ ತೋರಿಸುವಂತಿದೆ. ಒಬ್ಬ ವ್ಯಕ್ತಿ ಮಾಡಿದ ಅಪರಾಧಕ್ಕೆ, ಆತನ ಪರಿಚಯವಿದ್ದ ಜನಪ್ರತಿನಿಧಿಯೇ ನೈತಿಕ ಹೊಣೆ ಹೊರಬೇಕು ಎಂಬ ನಿಮ್ಮ ವಾದ ಬಾಲಿಶವಾದದ್ದು. ಸಾರ್ವಜನಿಕ ಜೀವನದಲ್ಲಿರುವ ನಾವು ಸಾವಿರಾರು ಜನರನ್ನು ಭೇಟಿಯಾಗುತ್ತೇವೆ. ಯಾರೋ ಒಬ್ಬರು ನನ್ನ ಜೊತೆ ಫೋಟೋ ತೆಗೆಸಿಕೊಂಡರು ಅಥವಾ ಪರಿಚಯಸ್ಥರಾಗಿದ್ದರು ಎಂಬ ಒಂದೇ ಕಾರಣಕ್ಕೆ, ಅವರ ಖಾಸಗಿ ಬದುಕಿನ ವಿಕೃತಿಗಳಿಗೆ ಅಥವಾ ಅವರು ಎಸಗುವ ಕ್ರಿಮಿನಲ್ ಕೃತ್ಯಗಳಿಗೆ ನಾನು ಉತ್ತರದಾಯಿಯಾಗುತ್ತೇನೆಯೇ? ಹಾಗಾದರೆ, ನಿಮ್ಮ ಪಕ್ಷದ ನಾಯಕರ ಜೊತೆ ಫೋಟೋ ತೆಗೆಸಿಕೊಂಡವರು, ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡವರು ಜೈಲು ಪಾಲಾದ ಉದಾಹರಣೆಗಳಿಲ್ಲವೇ? ಆಗ ನಿಮ್ಮ ನಾಯಕರುಗಳೆಲ್ಲ ಆ ಅಪರಾಧಗಳ ನೈತಿಕ ಹೊಣೆ ಹೊತ್ತಿದ್ದಾರೆಯೇ? ಎಂದು ಸುರೇಶ್​​ ಕುಮಾರ್​​ ಪ್ರಶ್ನಿಸಿದ್ದಾರೆ.

ಬಹಳ ಹಿಂದೆ ಯಶವಂತಪುರದ ಪೆಟ್ರೋಲ್ ಬಂಕ್ ಬಳಿ ನನ್ನ ಗಾಡಿಗೆ ಇಂಧನ ತುಂಬಿಸುತ್ತಿರುವಾಗ ಈ ವ್ಯಕ್ತಿಯ ಪರಿಚಯವಾಗಿತ್ತು. ನಾನು ಒಮ್ಮೆ ಮಾತ್ರ ಅವರನ್ನು ಭೇಟಿ ಮಾಡಿರುವುದು. ಈಗೇನಾದರೂ ನನಗೆ ಎದುರಿಗೆ ಸಿಕ್ಕರೆ ಅವರನ್ನು ಗುರುತು ಹಿಡಿಯುವುದೂ ಅಸಾಧ್ಯ. ​ನೀವು ನನಗೆ ಸಂವಿಧಾನದ ಪಾಠ ಮಾಡಲು ಬಂದಿದ್ದೀರಿ. ಒಬ್ಬ ಮಾಜಿ ಕಾನೂನು ಸಚಿವನಾಗಿ ಸಂವಿಧಾನದ ಪ್ರತಿಯೊಂದು ಸಾಲಿನ ಮಹತ್ವ ನನಗೆ ಚೆನ್ನಾಗಿ ತಿಳಿದಿದೆ. ವೈಜ್ಞಾನಿಕ ಮನೋಭಾವ ಮತ್ತು ತಾರ್ಕಿಕತೆ ಎಂದರೆ, ಘಟನೆಗಳ ಸತ್ಯಾಸತ್ಯತೆಯನ್ನು ಅರಿಯದೇ ಕೇವಲ ರಾಜಕೀಯ ದ್ವೇಷಕ್ಕಾಗಿ ಇಲ್ಲಸಲ್ಲದ ಆರೋಪ ಮಾಡುವುದಲ್ಲ. ತನಿಖೆ ನಡೆಯುತ್ತಿರುವ ಗಂಭೀರ ಪ್ರಕರಣವೊಂದರಲ್ಲಿ, ನೇರ ಸಾಕ್ಷ್ಯಗಳಿಲ್ಲದೇ ಒಬ್ಬ ಶಾಸಕನ ಪಾತ್ರವಿದೆ ಎಂದು ತೀರ್ಪು ನೀಡುವುದು ಯಾವ ರೀತಿಯ ವೈಜ್ಞಾನಿಕ ಮನೋಭಾವ? ಇದು ಪಕ್ಕಾ ಪೂರ್ವಾಗ್ರಹ ಪೀಡಿತ ಮನಸ್ಥಿತಿ. ಇನ್ನೂ ಹೆಚ್ಚಾಗಿ ಹೇಳಬೇಕೆಂದರೆ ಇದು ಕೊಳೆತ ಮನಸ್ಥಿತಿ ಎಂದು ಸುರೇಶ್​ ಕುಮಾರ್​​ ತಿವಿದಿದ್ದಾರೆ.

ಇದನ್ನೂ ಓದಿ: ಕಮಲಾಕರ ಭಟ್​ ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ; ದೂರು ನೀಡಿದ್ದಕ್ಕೆ ಹಲ್ಲೆ, ಓರ್ವ ಸಾವು

ನಾನು ಜ್ಯೋತಿಷ್ಯವನ್ನ ತುಂಬಾ ನಂಬುವನೂ ಅಲ್ಲ ಅಥವಾ ಯಾವುದೇ ಮೂಢನಂಬಿಕೆಯನ್ನ ಬೆಂಬಲಿಸುವನೂ ಅಲ್ಲ. ಆದರೆ, ಧಾರ್ಮಿಕ ನಂಬಿಕೆಗಳಿಗೂ, ಕ್ರಿಮಿನಲ್ ಚಟುವಟಿಕೆಗಳಿಗೂ ಇರುವ ವ್ಯತ್ಯಾಸ ತಿಳಿಯದಷ್ಟು ದಡ್ಡನೂ ನಾನಲ್ಲ. ಕೊಲೆಗಾರ ಕೊಲೆಗಾರನೇ, ಅವನು ಜ್ಯೋತಿಷಿಯಾಗಿರಲಿ ಅಥವಾ ರಾಜಕಾರಣಿಯಾಗಿರಲಿ. ಆತನಿಗೆ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆಯಾಗಬೇಕು ಎಂಬುದೇ ನನ್ನ ನಿಲುವು. ಅದನ್ನು ಬಿಟ್ಟು, ಬಿಜೆಪಿಯವರಿಗೆ ಕ್ರಿಮಿನಲ್ ಗಳ ಜೊತೆ ಅವಿನಾಭಾವ ಸಂಬಂಧ ಎಂದು ಸಾರಾಸಗಟಾಗಿ ಇಡೀ ಪಕ್ಷವನ್ನು ನಿಂದಿಸುವುದು ನಿಮ್ಮ ಹತಾಶೆಯನ್ನು ತೋರಿಸುತ್ತದೆ. ಅಪರಾಧವನ್ನು ಅಪರಾಧವನ್ನಾಗಿ ನೋಡುವ ಸಂಸ್ಕಾರ ಬೆಳೆಸಿಕೊಳ್ಳಿ. ಶವದ ಮುಂದೆ ನಿಂತು ರಾಜಕೀಯ ಲಾಭ ಹುಡುಕುವ ನಿಮ್ಮ ಚಾಳಿ, ಸ್ವಸ್ಥ ಸಮಾಜಕ್ಕೆ ಮತ್ತು ನೀವು ಉಲ್ಲೇಖಿಸಿದ ಸಂವಿಧಾನಕ್ಕೆ ಮಾಡುವ ದ್ರೋಹ. ಆ ಭಗವಂತ ನಿಮಗೆ ಸದ್ಬುದ್ದಿ ನೀಡಲಿ ಎಂದವರು ಕೌಂಟರ್​​ ಕೊಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 2:36 pm, Wed, 4 February 26

Source link

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮುರುಡೇಶ್ವರಕ್ಕೆ ಪ್ರವಾಸ ಹೋಗುವವರಿಗೆ kstdcನಿಂದ ವಿಶೇಷ ಪ್ಯಾಕೇಜ್​​ – Kannada News | Explore Karnataka’s Sacred South: KSTDC’s Affordable 6 Day Temple Tour Package

ಬೆಂಗಳೂರು, ಫೆ.4: ಕರ್ನಾಟಕದ ದಕ್ಷಿಣ ಭಾಗಗಳಲಾಗದ ಮಂಗಳೂರು, ಉಡುಪಿ, ಇನ್ನು ಹಲವು ಜಿಲ್ಲೆಗಳು ಒಳ್ಳೆಯ ಪ್ರವಾಸಿ ತಾಣಗಳನ್ನು ಹೊಂದಿದೆ. ಇತ್ತೀಚಿನ ಕೇಂದ್ರ ಬಜೆಟ್​​​ನಲ್ಲೂ ಪ್ರವಾಸಿತಾಣಗಳಿಗೆ ಹೆಚ್ಚಿನ ಆದ್ಯತೆಗಳನ್ನು ನೀಡಲಾಗಿದೆ. ರಾಜ್ಯ ಸರ್ಕಾರ ಕೂಡ ಈ ಪ್ರವಾಸಿನ ತಾಣಗಳ ಅಭಿವೃದ್ಧಿ ಹಾಗೂ ಅಲ್ಲಿ ಹೆಚ್ಚಿನ ಪ್ರವಾಸಿಗಳು ಭೇಟಿ ನೀಡಬೇಕು ಎಂಬ ಕಾರಣಕ್ಕೆ ವಿಶೇಷ ಪ್ಯಾಕೇಜ್​​ಗಳನ್ನು ನೀಡಿದೆ. ಇದೀಗ kstdc ಕರ್ನಾಟಕದ ದಕ್ಷಿಣ ಭಾಗಗಳಲ್ಲಿರುವ ಪುಣ್ಯಕ್ಷೇತ್ರಕ್ಕೆ ಹೋಗಲು ವಿಶೇಷ ಪ್ಯಾಕೇಜ್​​​ ಒಂದನ್ನು ನೀಡಿದೆ. ಒಟ್ಟು 6 ದಿನಗಳ ಪ್ರವಾಸ ಇದ್ದಾಗಿದೆ. ಇದರಲ್ಲಿ ಎಲ್ಲ ರೀತಿ ಸೌಲಭ್ಯಗಳು ನೀಡಲಾಗಿದೆ. ಕಡಿಮೆ ಖರ್ಚಿನಲ್ಲಿ ಹೊಸ ವಿಚಾರಗಳನ್ನು ಹಾಗೂ ಹೊಸ ಹೊಸ ಸ್ಥಳಗಳನ್ನು ನೀಡಬಹುದು.

ಪ್ರವಾಸದ ಅವಧಿ: 6 ದಿನಗಳು / 5 ರಾತ್ರಿಗಳು.

ಪ್ರಮುಖ ಸ್ಥಳಗಳು: ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರು, ಉಡುಪಿ, ಕೊಲ್ಲೂರು, ಮುರುಡೇಶ್ವರ ಮತ್ತು ಗೋಕರ್ಣ.

ಪ್ರಯಾಣದ ಮಾರ್ಗ: ಬೆಂಗಳೂರು → ಧರ್ಮಸ್ಥಳ → ಮಂಗಳೂರು → ಉಡುಪಿ → ಮುರುಡೇಶ್ವರ → ಗೋಕರ್ಣ → ಬೆಂಗಳೂರು.

6 ದಿನಗಳ ಪ್ರವಾಸದ ವೇಳಾಪಟ್ಟಿ ಇಲ್ಲಿದೆ ನೋಡಿ:

ದಿನ 1: ರಾತ್ರಿ 09:00 ಗಂಟೆಗೆ ಕೆಎಸ್‌ಟಿಡಿಸಿ ಬುಕಿಂಗ್ ಕೌಂಟರ್, ಬಿಎಂಟಿಸಿ ಬಸ್ ನಿಲ್ದಾಣ ಯಶವಂತಪುರದಿಂದ ನಿರ್ಗಮನ.

ದಿನ 2; 05:00 am – 08:00 am ಫ್ರೆಶಪ್ ಮತ್ತು ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ

09:00 am – 09:45 am ಕಲಶೇಶ್ವರ ದರ್ಶನ ಮತ್ತು ಉಪಹಾರ

11:45 am – 01:30 pm ಶೃಂಗೇರಿ ಶಾರದಾಂಬ ದೇವಸ್ಥಾನಕ್ಕೆ ಭೇಟಿ ನೀಡಿ

01:30 pm – 05:30 pm ವರೆಗೆ ಪ್ರಯಾಣ

01:30 pm – 05:30 pm ಪ್ರಯಾಣ. ಮೂಕಾಂಬಿಕಾದೇವಿ ದರ್ಶನ ಮತ್ತು ಭೋಜನ ರಾತ್ರಿ

09:00 ಗಂಟೆಗೆ ಬೈಂದೂರಿನಲ್ಲಿ ವಾಸ್ತವ್ಯ

ದಿನ 3: ಬೆಳಿಗ್ಗೆ 06.00 ಕ್ಕೆ ಬೈಂದೂರಿನಿಂದ ಹೊರಡುವುದು

06.45 ರಿಂದ 07.30 ರವರೆಗೆ ಇಂದಗುಂಜಿ ಗಣೇಶ ದರ್ಶನ

08:00 – 08.30 ರವರೆಗೆ ಶಂಬುಲಿಂಗೇಶ್ವರ ದೇವಸ್ಥಾನ-ಗುಣವಂತೆ

09:00 – 09:45 ಕ್ಕೆ ಉಪಹಾರ

9.45 – 10:00 ರವರೆಗೆ ಬೆಳಗಿನ ಉಪಾಹಾರ

04:00 ಕ್ಕೆ ಗೋಕರ್ಣ, ಮಹಾಬಲೇಶ್ವರ ದೇವಸ್ಥಾನ ಮತ್ತು OM ಬೀಚ್

05:00 pm – 06:00 pm ಧಾರೇಶ್ವರ ದೇವಸ್ಥಾನ

06:30 pm ಹೊನ್ನಾವರ ಮತ್ತು ಅಲ್ಲಿಯೇ ವಾಸ್ತವ್ಯ

ದಿನ 4: 06:00 ಗಂಟೆಗೆ ಹೋಟೆಲ್‌ನಿಂದ ನಿರ್ಗಮನ

07:00 am – 09:30 am ಮುರುಡೇಶ್ವರ ದೇವಸ್ಥಾನ ಮತ್ತು ಉಪಹಾರ

10:30 am – 11:30 am ಆನೆಗುಡ್ಡೆ ವಿನಾಯಕ ದೇವಸ್ಥಾನದ ದರ್ಶನ

12:00 – 02:00 ಕ್ಕೆ ಉಡುಪಿ ಶ್ರೀಕೃಷ್ಣನ ದರ್ಶನ ಮತ್ತು ಮಧ್ಯಾಹ್ನ

03:00 ಕ್ಕೆ ಮಂಜುಳ ​​ದೇವಸ್ಥಾನ ಮತ್ತು ಮಧ್ಯಾಹ್ನ 03:00 ಕ್ಕೆ ಮಂಜುಳ ​​ದೇವಸ್ಥಾನ.

ಸಂಜೆ 07:30 ಕ್ಕೆ ಕಟೀಲು ದುರ್ಗಾಪರಮೇಶ್ವರಿ ದರ್ಶನಕ್ಕೆ ಆಗಮನ ಮತ್ತು ಅಲ್ಲಿಯೇ ವಾಸ್ತವ್ಯ

ಇದನ್ನೂ ಓದಿ; 720 ರೂ.ಗೆ ಒಂದೇ ದಿನದಲ್ಲಿ ಬೆಂಗಳೂರಿನ 6 ಸ್ಥಳಗಳನ್ನು ಸುತ್ತಾಡಬಹುದು

ದಿನ 5: 06:00 ಗಂಟೆಗೆ ಹೋಟೆಲ್‌ನಿಂದ ಹೊರಡುವುದು

07:30 am – 01:30 pm ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಮತ್ತು ಉಪಹಾರ

02:30 pm – 03:30 pm ಮಧ್ಯಾಹ್ನದ ಊಟದ ನಂತರ ಸೌತಡಕ ವಿನಾಯಕ ದೇವಸ್ಥಾನದ ದರ್ಶನ

05:00 pm 09:00 pm ಆದಿ ಸುಬ್ರಮಣ್ಯ, ಕುಕ್ಕೆ ಸುಬ್ರಮಣ್ಯ ಮತ್ತು
3 pm ಕುಕ್ಕೆಯಿಂದ ಹೊರಡುವುದು

ದಿನ 6: ಬೆಳಿಗ್ಗೆ 05:30 ಕ್ಕೆ ಬೆಂಗಳೂರಿಗೆ ಆಗಮನ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:37 pm, Wed, 4 February 26

Source link

ಯಶ್ ಚಿತ್ರಕ್ಕೆ ಕೌಂಟರ್ ಕೊಡೋಕೆ ಬಂತು ಮತ್ತೊಂದು ‘ರಾಮಾಯಣ’; ರಾಮನ ಪಾತ್ರದಲ್ಲಿ ಸ್ಟಾರ್ ಹೀರೋ – Kannada News | Mahesh Babu Confirms Rama Role in Rajamouli’s Varanasi: Intense Training for Epic Saga

ರಣಬೀರ್ ಕಪೂರ್ (Ranbir Kapoor) ನಟನೆಯ ‘ರಾಮಾಯಣ’ ಸಿನಿಮಾ ಈ ವರ್ಷ ದೀಪಾವಳಿಗೆ ರಿಲೀಸ್ ಆಗುತ್ತಿದೆ. ಈ ಸಿನಿಮಾದಲ್ಲಿ ಯಶ್ ರಾವಣನ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ರಾಮಾಯಣದ ಮೇಲೆ ಸಾಕಷ್ಟು ಸಿನಿಮಾಗಳು ಬಂದು ಹೋಗಿವೆ. ಈಗ ಈ ಸಾಲಿಗೆ ಮತ್ತೊಂದು ಸಿನಿಮಾ ಸೇರ್ಪಡೆ ಆಗುತ್ತಿದೆ. ‘ರಾಮಾಯಣ’ ಆಧರಿಸಿ ರಾಜಮೌಳಿ ಸಿನಿಮಾ ಮಾಡುತ್ತಿದ್ದಾರೆ! ಮಹೇಶ್ ಬಾಬು ಇದಕ್ಕೆ ಹೀರೋ!

ರಾಜಮೌಳಿ ಅವರು ಮಹೇಶ್ ಬಾಬು ಜೊತೆ ‘ವಾರಣಾಸಿ’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ.ಈ ಬಗ್ಗೆ ಮೊದಲೇ ಘೋಷಣೆ ಆಗಿದೆ. ಆದರೆ, ಚಿತ್ರದ ಕಥೆ ಯಾವ ರೀತಿ ಇರಲಿದೆ ಎಂಬ ಸುಳಿವನ್ನು ನಿರ್ದೇಶಕರು ನೀಡಿರಲಿಲ್ಲ. ಈಗ ಮಹೇಶ್ ಬಾಬು ಅವರು ಈ ಬಗ್ಗೆ ದೊಡ್ಡ ವಿಷಯ ರಿವೀಲ್ ಮಾಡಿದ್ದಾರೆ. ‘ನಾನು ರಾಮನ ಪಾತ್ರ ಮಾಡುತ್ತಿದ್ದೇನೆ’ ಎಂದು ಮಹೇಶ್ ಬಾಬು ಒಪ್ಪಿಕೊಂಡಿದ್ದಾರೆ.

‘ವಾರಣಾಸಿ’ ಚಿತ್ರಕ್ಕಾಗಿ ಮಹೇಶ್ ಬಾಬು ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದಾರೆ.ಕೇವಲ ಎರಡೇ ಎರಡು ಶಾಟ್​​ಗೋಸ್ಕರ್ ಮಹೇಶ್ ಬಾಬು ಬರೋಬ್ಬರಿ ಆರು ತಿಂಗಳು ಟ್ರೇನಿಂಗ್ ಪಡೆದಿದ್ದರಂತೆ. ‘ನಾನು ರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದೇನೆ. ಅದಕ್ಕಾಗಿ ಕೆಲವು ಭಂಗಿಗಳನ್ನು ಕಲಿಯಬೇಕಿತ್ತು. ಆಧುನಿಕ ಪಾತ್ರಗಳಂತೆ ನಿಲ್ಲಲು ಆಗೋದಿಲ್ಲ. ಆ ತರಬೇತಿಯ ಭಾಗವಾಗಿ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಂಡೆ’ ಎಂದು ಮಹೇಶ್ ಬಾಬು ಹೇಳಿದ್ದಾರೆ.

‘ಜರ್ಮನಿಯಲ್ಲಿ ನಾನು ಕುಟುಂಬದ ಜೊತೆ ಪ್ರವಾಸಕ್ಕೆ ತೆರಳಿದ್ದೆ. ಈ ವೇಳೆ ಗೊತ್ತಿಲ್ಲದೆ ಒಂದು ಭಂಗಿಯಲ್ಲಿ ನಿಲ್ಲುತ್ತಿದ್ದೆ. ಒಂದೆರಡು ವಿದೇಶಿಯರು ನನ್ನನ್ನು ನೋಡಿ, ಈ ವ್ಯಕ್ತಿಗೆ ಏನಾಗಿದೆ ಎಂದುಕೊಳ್ಳುತ್ತಿದ್ದರು. ಆದರೆ, ಈಸಿದ್ಧತೆ ಶೂಟಿಂಗ್​​​ನಲ್ಲಿ ತುಂಬಾನೇ ಸಹಕಾರಿ ಆಯಿತು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವೇದಿಕೆ ಮೇಲೆ ರ‍್ಯಾಂಪ್ ವಾಕ್ ಮಾಡಿದ ಮಹೇಶ್ ಬಾಬು ಮಗಳು ಸಿತಾರಾ

ಮಹೇಶ್ ಬಾಬು ಅವರು ಕಳರಿಪಯಟ್ಟು ರೀತಿಯ ಕಲೆಯನ್ನು ಕಲಿತಿದ್ದಾರೆ. ಆರು ತಿಂಗಳಲ್ಲಿ ಅವರು ಕಲಿತ ವಿಷಯಗಳು ಅವರ ಮೇಲೆ ಸಾಕಷ್ಟು ಪ್ರಭಾವ ಬೀರಿದ್ದವು. ‘ನಾನು ನಿಲ್ಲೋದು, ಕುಳಿತುಕೊಳ್ಳೋದು, ಎಲ್ಲವೂ ಬದಲಾಗಿದೆ’ ಎಂದು ಮಹೇಶ್ ಬಾಬು ಹೇಳಿದ್ದಾರೆ. ಈ ಸಿನಿಮಾ ಯಾವ ರೀತಿ ಇರುತ್ತದೆ ಎಂಬ ಕುತೂಹಲ ಮೂಡಿದೆ.

‘ಆರ್​ಆರ್​​ಆರ್​’ ಸಿನಿಮಾದಲ್ಲಿ ಬರೋ ರಾಮ್ ಚರಣ್ ಪಾತ್ರ ‘ರಾಮಾಯಣ’ದ ರಾಮನ ಪಾತ್ರದಿಂದ ಸ್ಫೂರ್ತಿ ಪಡೆದಿದೆ ಎಂದು ಅವರು ಈ ಮೊದಲು ಹೇಳಿದ್ದರು. ಪೃಥ್ವಿರಾಜ್ ಅವರು ಕುಂಭ ಹೆಸರಿನ ಪಾತ್ರ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version