ಖಾಲಿ ಹೊಟ್ಟೆಯಲ್ಲಿ ಹಣ್ಣು ತಿನ್ನುವ ಅಭ್ಯಾಸವಿದ್ಯಾ… ಇದು ನಿಜವಾಗಿಯೂ ಆರೋಗ್ಯಕ್ಕೆ ಒಳ್ಳೆಯದಾ? ತಜ್ಞರ ಅಭಿಪ್ರಾಯವೇನು?

ಖಾಲಿ ಹೊಟ್ಟೆಯಲ್ಲಿ ಹಣ್ಣು ತಿನ್ನುವ ಅಭ್ಯಾಸವಿದ್ಯಾ… ಇದು ನಿಜವಾಗಿಯೂ ಆರೋಗ್ಯಕ್ಕೆ ಒಳ್ಳೆಯದಾ? ತಜ್ಞರ ಅಭಿಪ್ರಾಯವೇನು?

ಹಣ್ಣುಗಳು (Fruits) ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದ ವಿಷಯ. ಆದರೆ ಅವುಗಳನ್ನು ಯಾವ ಸಮಯದಲ್ಲಿ ತಿನ್ನಬೇಕು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಹಾಗಾಗಿ ಕಂಡ ಕಂಡ ಸಮಯದಲ್ಲಿ ಸೇವನೆ ಮಾಡಿದಾಗ ಅದರಿಂದ ಸಿಗುವ ಲಾಭಗಳಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಅದರಲ್ಲಿಯೂ ಖಾಲಿ ಹೊಟ್ಟೆಯಲ್ಲಿ ಹಣ್ಣು ಸೇವನೆ ಮಾಡುವುದು ಒಳ್ಳೆಯದೇ ಅಥವಾ ತಪ್ಪೇ ಎಂಬ ಪ್ರಶ್ನೆ ಸಾಮಾನ್ಯವಾಗಿ ಕಾಡುತ್ತದೆ. ಈ ಬಗ್ಗೆ ಆರೋಗ್ಯ ತಜ್ಞರು ನೀಡಿರುವ ಸ್ಪಷ್ಟ ಮಾಹಿತಿ ಸ್ಟೋರಿಯಲ್ಲಿದೆ.

ಖಾಲಿ ಹೊಟ್ಟೆಯಲ್ಲಿ ಹಣ್ಣು ತಿನ್ನಬಹುದೇ?

ಆರೋಗ್ಯ ತಜ್ಞರ ಪ್ರಕಾರ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಣ್ಣು ತಿನ್ನುವುದರಲ್ಲಿ ತಪ್ಪಿಲ್ಲ. ಆದರೆ ಯಾವ ಹಣ್ಣು ತಿನ್ನುತ್ತೀರಿ ಎಂಬುದು ಮುಖ್ಯವಾಗುತ್ತದೆ. ಸೇಬು, ಪಪ್ಪಾಯಿ, ಕರಬೂಜ್‌ ಹಣ್ಣುಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದು ಆರೋಗ್ಯಕರ. ಆದರೆ ಬಾಳೆಹಣ್ಣು ಖಾಲಿ ಹೊಟ್ಟೆಯಲ್ಲಿ ತಿನ್ನುವುದನ್ನು ತಪ್ಪಿಸುವುದು ಒಳ್ಳೆಯದು.

ಖಾಲಿ ಹೊಟ್ಟೆಯಲ್ಲಿ ಹಣ್ಣನ್ನು ಸೇವನೆ ಮಾಡುವುದರಿಂದ ಸಿಗುವ ಲಾಭಗಳು:

ಬೆಳಿಗ್ಗೆ ಹಣ್ಣು ತಿನ್ನುವುದರಿಂದ ಜೀರ್ಣಕ್ರಿಯೆ ಸಕ್ರಿಯಗೊಳ್ಳುತ್ತದೆ. ಹಣ್ಣುಗಳು ಹಗುರವಾಗಿದ್ದು ಸುಲಭವಾಗಿ ಜೀರ್ಣವಾಗುತ್ತವೆ, ಇದರಿಂದ ದೇಹಕ್ಕೆ ತಕ್ಷಣ ಶಕ್ತಿ ದೊರೆಯುತ್ತದೆ. ಹಣ್ಣುಗಳಲ್ಲಿ ಇರುವ ಫೈಬರ್, ವಿಟಮಿನ್ ಮತ್ತು ಖನಿಜಾಂಶಗಳು ದೇಹಕ್ಕೆ ಅಗತ್ಯ ಪೋಷಕಾಂಶಗಳನ್ನು ನೀಡುತ್ತವೆ. ಇದರಿಂದ ಹೊಟ್ಟೆ ತುಂಬಿದ ಭಾವನೆ ಉಂಟಾಗಿ ಅನಗತ್ಯವಾಗಿ ಮತ್ತೆ ಮತ್ತೆ ತಿನ್ನುವ ಅಭ್ಯಾಸ ಕಡಿಮೆಯಾಗುತ್ತದೆ.

ಇದನ್ನೂ ಓದಿ: ಹಣ್ಣು vs ಹಣ್ಣಿನ ಜ್ಯೂಸ್‌; ಇವೆರಡರಲ್ಲಿ ಯಾವುದರ ಸೇವನೆ ಬೆಸ್ಟ್‌

ಎಲ್ಲರಿಗೂ ಸೂಕ್ತವೇ?

ಖಾಲಿ ಹೊಟ್ಟೆಯಲ್ಲಿ ಹಣ್ಣು ತಿನ್ನುವುದು ಎಲ್ಲರಿಗೂ ಸೂಕ್ತವಲ್ಲ. ಅಜೀರ್ಣ, ಆಸಿಡ್ ಸಮಸ್ಯೆ ಸಮಸ್ಯೆಯಿರುವವರಿಗೆ ಇದು ಒಳ್ಳೆಯದಲ್ಲ. ವಿಶೇಷವಾಗಿ ಕಿತ್ತಳೆ ಮತ್ತು ಬಾಳೆಹಣ್ಣು ಇಂತಹವರಿಗೆ ಹೊಟ್ಟೆ ನೋವು ಮತ್ತು ಕಿರಿಕಿರಿಗೆ ಕಾರಣವಾಗಬಹುದು. ಇಂತಹವರು ಮಿತ ಪ್ರಮಾಣದಲ್ಲಿ ಪಪ್ಪಾಯಿ ಹಣ್ಣು ಸೇವಿಸುವುದು ಉತ್ತಮ.

ಸರಿಯಾದ ವಿಧಾನ ಯಾವುದು?

ಹಣ್ಣುಗಳನ್ನು ಸದಾ ತಾಜಾ ರೂಪದಲ್ಲೇ ತಿನ್ನಬೇಕು. ಜ್ಯೂಸ್ ಮಾಡುವುದಕ್ಕಿಂತ ಹಣ್ಣು ತಿನ್ನುವುದು ಹೆಚ್ಚು ಲಾಭಕರ. ಆದರೆ ಒಂದೇ ವೇಳೆ ಎಲ್ಲಾ ರೀತಿಯ ಹಣ್ಣುಗಳನ್ನು ಮಿಶ್ರಣ ಮಾಡಿ ಹೆಚ್ಚೆಚ್ಚು ಪ್ರಮಾಣದಲ್ಲಿ ತಿನ್ನುವುದನ್ನು ತಪ್ಪಿಸಬೇಕು. ಹಣ್ಣು ತಿಂದ ತಕ್ಷಣವೇ ಊಟ ಮಾಡುವುದೂ ಕೂಡ ಸರಿಯಲ್ಲ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ರೂ. ಅಕ್ರಮ ಆಸ್ತಿ! ಬೆಳಗಾವಿ ನಗರಾಭಿವೃದ್ಧಿ ಇಂಜಿನಿಯರ್ ಆಸ್ತಿ ಕಂಡು ಲೋಕಾಯುಕ್ತರೇ ಶಾಕ್

ಬೆಳಗಾವಿ, ಏಪ್ರಿಲ್ 11: ಬೆಳಗಾವಿಯ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಜಯಸಿಂಗ್ ರಜಪೂತಗೆ ಸೇರಿದ ನಿವಾಸ ಹಾಗೂ ಕಚೇರಿಗಳ ಮೇಲೆ ನಡೆದ ಲೋಕಾಯುಕ್ತ ದಾಳಿ ಅಂತ್ಯಗೊಂಡಿದ್ದು, ತನಿಖೆ ವೇಳೆ ಬರೋಬ್ಬರಿ 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿ ಪತ್ತೆಯಾಗಿದೆ. ಬೆಳಗಾವಿಯ ಆಂಜನೇಯ ನಗರ ಸೇರಿದಂತೆ ಒಟ್ಟು ಏಳು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿತ್ತು. ಈ ವೇಳೆ 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ಆಭರಣಗಳು ಪತ್ತೆಯಾಗಿವೆ. ಇದಲ್ಲದೆ 3.12 ಕೋಟಿ ರೂಪಾಯಿ ಬ್ಯಾಂಕ್ ಡೆಪಾಸಿಟ್ ಇಟ್ಟಿರುವುದು ಬೆಳಕಿಗೆ ಬಂದಿದೆ. ಸವದತ್ತಿ, ಹುಕ್ಕೇರಿ ಹಾಗೂ ಹುಬ್ಬಳ್ಳಿಯ ವಿವಿಧೆಡೆ ಒಟ್ಟು 18 ನಿವೇಶನಗಳನ್ನು ಅಜಯಸಿಂಗ್ ಖರೀದಿಸಿರುವುದು ದಾಖಲೆಗಳಿಂದ ಸಾಬೀತಾಗಿದೆ. ಮನೆಯಲ್ಲಿ ಐಷಾರಾಮಿ ಕಾರುಗಳು ಮತ್ತು ಬೈಕ್‌ಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ನೀಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಅಜಯಸಿಂಗ್ ಅವರು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಸದ್ಯಕ್ಕೆ ಎಲ್ಲಾ ದಾಖಲೆಗಳು ಮತ್ತು ನಗದನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ತನಿಖೆಯನ್ನು ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IPL 2026: ಸೋತ RCBಗೆ ನಾಳೆ ಮತ್ತೆ ಪಂದ್ಯ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ ಮೂರು ಪಂದ್ಯಗಳನ್ನಾಡಿದೆ. ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್​ಗಳ ಜಯ ಸಾಧಿಸಿದ್ದ ಆರ್​ಸಿಬಿ, ದ್ವಿತೀಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 43 ರನ್​ಗಳಿಂದ ಬಗ್ಗು ಬಡಿದಿದ್ದರು. ಆದರೆ ಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಗ್ಗರಿಸಿದೆ.

ಗುವಾಹಟಿಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 201 ರನ್​ಗಳು. 202 ರನ್​ಗಳ ಗುರಿಯನ್ನು ರಾಜಸ್ಥಾನ್ ರಾಯಲ್ಸ್ ತಂಡ 18 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಆರ್ ಪಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಇತ್ತ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೀಗ 4ನೇ ಪಂದ್ಯಕ್ಕಾಗಿ ಸಜ್ಜಾಗಬೇಕಿದೆ. ಅದು ಕೂಡ ಒಂದೇ ದಿನದ ಅಂತರದಲ್ಲಿ. ಅಂದರೆ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ನಾಳೆ (ಏ.12) ಆಡಲಿದೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಭಾನುವಾರ ನಡೆಯಲಿರುವ ಈ ಪಂದ್ಯಕ್ಕಾಗಿ ಶನಿವಾರ ಆರ್​ಸಿಬಿ ತಂಡ ಮುಂಬೈಗೆ ಬಂದಿಳಿಯಲಿದೆ. ಅಂದರೆ ಇಲ್ಲಿ ಆರ್​ಸಿಬಿ ತಂಡಕ್ಕೆ ಅಭ್ಯಾಸ ನಡೆಸಲು ಕೇವಲ ಒಂದು ದಿನ ಮಾತ್ರ ಸಿಗಲಿದೆ.

ಇತ್ತ ಮೊದಲ ವಾರದಲ್ಲಿ ಕೇವಲ 2 ಪಂದ್ಯಗಳನ್ನು ಮಾತ್ರ ಆಡಿದ್ದ ಆರ್​ಸಿಬಿ ಇದೀಗ ಬ್ಯಾಕ್ ಟು ಬ್ಯಾಕ್ ಎರಡು ಮ್ಯಾಚ್​ಗಳನ್ನಾಡಬೇಕಿದೆ. ಅದರಂತೆ ಈಗಾಗಲೇ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯ ಮುಗಿಸಿ ಆರ್​ಸಿಬಿ ಪಡೆ ಮುಂಬೈಗೆ ಪ್ರಯಾಣಿಸಿದ್ದು, ನಾಳೆ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.

ಅತ್ತ ಮುಂಬೈ ಇಂಡಿಯನ್ಸ್ ತಂಡವು ಕಳೆದ ಮ್ಯಾಚ್​ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 27 ರನ್​ಗಳಿಂದ ಸೋಲನುಭವಿಸಿತ್ತು. ಇದೀಗ ಆರ್​ಸಿಬಿ ತಂಡ ಕೂಡ ಆರ್​ಆರ್ ವಿರುದ್ಧವೇ ಸೋತು ಮುಂದಿನ ಮ್ಯಾಚ್​ಗಾಗಿ ಸಜ್ಜಾಗಿದೆ. ಅಂದರೆ ಇಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೊನೆಯ ಪಂದ್ಯಗಳಲ್ಲಿ ಸೋತಿರುವ ಎರಡು ಟೀಮ್​ಗಳು ಮುಖಾಮುಖಿಯಾಗುತ್ತಿರುವುದು ವಿಶೇಷ.

ಹೀಗಾಗಿ ಈ ಪಂದ್ಯದ ಮೂಲಕ ಒಂದು ತಂಡವು ಗೆಲುವಿನ ಲಯಕ್ಕೆ ಮರಳಲಿದೆ. ಆ ತಂಡ ಮುಂಬೈ ಇಂಡಿಯನ್ಸ್ ಆಗಿರಲಿದೆಯಾ ಅಥವಾ ಆರ್​ಸಿಬಿ ಆಗಲಿದೆಯಾ ಎಂಬುದು ಖಚಿತವಾಗಲು ನಾಳೆಯ ಪಂದ್ಯ ಮುಗಿಯುವವರೆಗೆ ಕಾಯಲೇಬೇಕು.

ಮುಂಬೈ ಇಂಡಿಯನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರಯಾನ್ ರಿಕಲ್ಟನ್, ರಾಬಿನ್ ಮಿಂಝ್, ರಾಜ್ ಬಾವಾ, ರಘು ಶರ್ಮಾ, ಮಿಚೆಲ್ ಸ್ಯಾಂಟ್ನರ್, ಕಾರ್ಬಿನ್ ಬಾಷ್, ನಮನ್ ಧೀರ್, ಜಸ್​ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ಅಲ್ಲಾ ಗಫನ್ಝರ್, ಅಶ್ವನಿ ಕುಮಾರ್, ದೀಪಕ್ ಚಹರ್‌, ವಿಲ್ ಜ್ಯಾಕ್ಸ್, ಶೆರ್ಫೇನ್ ರದರ್​ಫೋರ್ಡ್​,​  ಮಯಾಂಕ್ ಮಾರ್ಕಂಡೆ, ಶಾರ್ದೂಲ್ ಠಾಕೂರ್, ಕ್ವಿಂಟನ್ ಡಿ ಕಾಕ್, ಡ್ಯಾನಿಶ್ ಮಾಲೆವಾರ್, ಮೊಹಮ್ಮದ್ ಇಝಾರ್, ಅಥರ್ವ ಅಂಕೋಲೆಕರ್, ಮಯಾಂಕ್ ರಾವತ್.

ಇದನ್ನೂ ಓದಿ: ಬೌಲರ್ ಯಾರೇ ಇರಲಿ… RCB ಪಂದ್ಯದ ಬಳಿಕ ವೈಭವ್ ಎಚ್ಚರಿಕೆ..!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್.

 

Source link

Avoid Loud Voice: ಈ ಸ್ಥಳಗಳಲ್ಲಿ ಎಂದಿಗೂ ಏರು ಧ್ವನಿಯಲ್ಲಿ ಮಾತನಾಡಲೇಬೇಡಿ; ಕಾರಣ ಇಲ್ಲಿದೆ

ಹಿಂದೂ ಸನಾತನ ಸಂಸ್ಕೃತಿಯಲ್ಲಿನ ಸಂಪ್ರದಾಯ, ಪದ್ಧತಿ ಮತ್ತು ವಿಧಿವಿಧಾನಗಳನ್ನು ಅನುಸರಿಸುವುದರಿಂದ ತಾಳ್ಮೆ, ಸಹನೆ ಮತ್ತು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತದೆ. ಇದು ನಮ್ಮ ಮನಸ್ಸನ್ನು ಪ್ರಶಾಂತವಾಗಿಡಲು ಸಹಾಯ ಮಾಡುತ್ತದೆ. ಆಹಾರ, ಮಾತು, ಕಾರ್ಯಕ್ರಮಗಳು ಮತ್ತು ಮನಸ್ಸಿನ ಭಾವನೆಗಳು ನಮ್ಮ ಆಯಸ್ಸಿನ ಮೇಲೆ ಪರಿಣಾಮ ಬೀರುತ್ತವೆ. ಉತ್ತಮ ಪದ್ಧತಿಗಳು ಆಯಸ್ಸನ್ನು ಹೆಚ್ಚಿಸಿದರೆ, ನಕಾರಾತ್ಮಕ ಪದ್ಧತಿಗಳು ಅದನ್ನು ಕಡಿಮೆ ಮಾಡಬಹುದು. ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಶಿವಕುಮಾರ ಸ್ವಾಮಿಗಳು 110 ವರ್ಷಗಳ ಕಾಲ ಜೀವಿಸಿದ್ದು ಇದಕ್ಕೆ ಉತ್ತಮ ಉದಾಹರಣೆಯಾಗಿದೆ. ಮೃದು ಮಾತಿನ ಪ್ರಾಮುಖ್ಯತೆಯ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ನಮ್ಮ ಮಾತಿನ ಕ್ರಮವು ಜೀವನದ ಗುಣಮಟ್ಟದ ಮೇಲೆ ಪ್ರಭಾವ ಬೀರುತ್ತದೆ. ಮಾತು ಸೌಮ್ಯವೋ, ಗಟ್ಟಿಯೋ ಅಥವಾ ಜೋರಾಗಿದೆಯೋ ಎಂಬುದು ಮುಖ್ಯ. ಕೆಲವರು ಮೃದುವಾಗಿ ಮಾತನಾಡಿದರೆ, ಕೆಲವರು ಅದೇ ಮಾತನ್ನು ಜೋರಾಗಿ ಹೇಳುತ್ತಾರೆ ಅಥವಾ ಕಿರುಚುತ್ತಾರೆ. ಅರಚುವುದು, ಕಿರುಚುವುದು, ಗಟ್ಟಿಯಾಗಿ ಕೂಗುವುದು ಅಥವಾ ಜೋರು ಧ್ವನಿಯಲ್ಲಿ ಮಾತನಾಡುವುದು ಕೆಲವು ಸ್ಥಳಗಳಲ್ಲಿ ಸೂಕ್ತವಲ್ಲ. ಇಂತಹ ಜಾಗಗಳಲ್ಲಿ ತಾಳ್ಮೆಯಿಂದ, ಸಹನೆಯಿಂದ ಮತ್ತು ನಿಧಾನವಾಗಿ ಮಾತನಾಡಬೇಕು.

ಏರು ಧ್ವನಿಯಲ್ಲಿ ಎಲ್ಲಿ ಮಾತನಾಡಬಾರದು ಎಂಬುದನ್ನು ತಿಳಿದುಕೊಳ್ಳೋಣ:

ಶಿಕ್ಷಣ ಸಂಸ್ಥೆಗಳು:

ಯಾವುದೇ ಶಾಲಾ, ಕಾಲೇಜು ಅಥವಾ ವಿಶ್ವವಿದ್ಯಾಲಯದಲ್ಲಿ ವಿದ್ಯೆ ಕಲಿಸುವ ಸ್ಥಳದಲ್ಲಿ ನಾವು ಸೌಮ್ಯವಾಗಿ, ತಾಳ್ಮೆಯಿಂದ ಮತ್ತು ನಿಧಾನವಾಗಿ ಮಾತನಾಡಬೇಕು. ಇಲ್ಲಿ ಜೋರಾಗಿ ಮಾತನಾಡಿದಾಗ ನಮ್ಮ ಜ್ಞಾನ ಕುಂಠಿತವಾಗುತ್ತದೆ ಎಂದು ಶಾಸ್ತ್ರ ಹೇಳುತ್ತದೆ. ನ್ಯೂಟನ್‌ನ ಮೂರನೇ ನಿಯಮದಂತೆ, ನಾವು ನೀಡುವ ಆಕ್ಷನ್‌ಗೆ ಪ್ರತಿಕ್ರಿಯೆ ಇದ್ದೇ ಇರುತ್ತದೆ. ಜೋರಾದ ಮಾತು ಜ್ಞಾನದ ಇಳಿಕೆಗೆ ಕಾರಣವಾಗಬಹುದು.

ಆಸ್ಪತ್ರೆಗಳು:

ಚಿಕ್ಕ ಕ್ಲಿನಿಕ್ ಇರಲಿ ಅಥವಾ ದೊಡ್ಡ ಆಸ್ಪತ್ರೆ ಇರಲಿ, ಚಿಕಿತ್ಸೆ ನೀಡುವ ಯಾವುದೇ ಸ್ಥಳದಲ್ಲಿ ಗಟ್ಟಿಯಾಗಿ ಮಾತನಾಡುವುದು ಶುಭವಲ್ಲ. ಇದು ಅನಾರೋಗ್ಯವನ್ನು ಉಲ್ಬಣಗೊಳಿಸಬಹುದು. ವೈದ್ಯರನ್ನು ವೈದ್ಯೋ ನಾರಾಯಣೋ ಹರಿ ಎಂದು ಪರಿಗಣಿಸಲಾಗುತ್ತದೆ. ಅವರೊಂದಿಗೆ ಮೃದುವಾಗಿ ಮಾತನಾಡುವುದು ನಮಗೂ, ರೋಗಿಗಳಿಗೂ ಒಳಿತು.

ಹಣ ಕೊಡಬೇಕಾದವರ ಬಳಿ:

ಯಾರಿಂದಲಾದರೂ ಹಣ ಪಡೆಯಬೇಕಾದಾಗ ಅಥವಾ ಹಣಕಾಸಿನ ವ್ಯವಹಾರ ನಡೆಸುವಾಗ ಗಟ್ಟಿಯಾದ ಧ್ವನಿಯಲ್ಲಿ ಮಾತನಾಡಬಾರದು. ಇದು ಸಮಸ್ಯೆಯನ್ನು ಹೆಚ್ಚಿಸಬಹುದು ಮತ್ತು ಸಂಬಂಧಗಳನ್ನು ಹದಗೆಡಿಸಬಹುದು. ಮುಳ್ಳಿನ ಮೇಲೆ ಬಟ್ಟೆ ಹಾಕಿದಂತೆ ಎಂಬಂತೆ ಇಂತಹ ವ್ಯವಹಾರಗಳನ್ನು ನಿಧಾನವಾಗಿ ನಿರ್ವಹಿಸಬೇಕು.

ಪೂಜಾ ಕೊಠಡಿ:

ಪೂಜೆ ಮಾಡುವಾಗ ಜೋರಾದ ಧ್ವನಿಯಲ್ಲಿ ಮಾತನಾಡುವುದು ಏಕಾಗ್ರತೆಗೆ ಭಂಗ ತರುತ್ತದೆ. ಇದರಿಂದ ಪೂಜೆಯ ಸಫಲತೆ ಕಡಿಮೆಯಾಗಿ, ದೈವಿಕ ಬಾಂಧವ್ಯ ಕುಂಠಿತವಾಗುವ ಸಾಧ್ಯತೆ ಇರುತ್ತದೆ. ನಿರ್ವಿಘ್ನಗಳು ಸಹ ಉಂಟಾಗಬಹುದು.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ದಂಪತಿಗಳ ನಡುವೆ:

ಗಂಡ-ಹೆಂಡತಿ ಪರಸ್ಪರ ಸೌಮ್ಯವಾಗಿ ಮಾತನಾಡಬೇಕು. ಹೆಂಡತಿಯನ್ನು ಗುಲಾಮರಂತೆ ನೋಡುವ ಅಥವಾ ಗಂಡನ ಜವಾಬ್ದಾರಿಯನ್ನು ಅಹಂನಿಂದ ನಿರ್ವಹಿಸುವ ಪ್ರವೃತ್ತಿ ಸರಿಯಲ್ಲ. ಸೌಮ್ಯ ಸಂವಹನ ಇಲ್ಲದಿದ್ದರೆ ಸಂಸಾರ ನೌಕೆ ಕಷ್ಟಗಳ ಸುಳಿಯಲ್ಲಿ ಸಿಲುಕಬಹುದು.

ಮೇಲಧಿಕಾರಿಗಳೊಂದಿಗೆ:

ನಿಮ್ಮ ಮೇಲಧಿಕಾರಿಗಳ ಶೈಕ್ಷಣಿಕ ಅರ್ಹತೆ ಏನೇ ಇರಲಿ, ಅವರೊಂದಿಗೆ ಸೌಮ್ಯವಾಗಿ ಮಾತನಾಡುವುದು ವೃತ್ತಿಜೀವನದಲ್ಲಿ ಪೂರ್ಣತೆಯನ್ನು ನೀಡುತ್ತದೆ. ಇದು ಕಚೇರಿಯಲ್ಲಿ ಸುಲಲಿತ ವಾತಾವರಣಕ್ಕೆ ಸಹಕಾರಿ.

ಮಕ್ಕಳೊಂದಿಗೆ:

ಮಕ್ಕಳೊಂದಿಗೆ ಅವರ ವಯಸ್ಸಿಗೆ ಅನುಗುಣವಾಗಿ ವಿಭಿನ್ನವಾಗಿ ಸಂವಹನ ಮಾಡಬೇಕು. ಪುಟ್ಟ ಮಕ್ಕಳಿದ್ದಾಗ ಪ್ರೀತಿಯಿಂದ ಮಾತನಾಡಿದರೆ, ದೊಡ್ಡವರಾದಾಗ ಸ್ನೇಹಿತರಂತೆ ಮೃದುವಾಗಿ ಮಾತನಾಡಬೇಕು. ಇದು ಸೌಹಾರ್ದಯುತ ಸಂಬಂಧಗಳನ್ನು ಬೆಳೆಸುತ್ತದೆ.

ಈ ಎಲ್ಲಾ ಸಂದರ್ಭಗಳಲ್ಲಿ ಮೃದು ಮಾತು ನಮ್ಮ ಜೀವನಕ್ಕೆ ಸಕಾರಾತ್ಮಕ ಬದಲಾವಣೆಗಳನ್ನು ತರುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

National Safe Motherhood Day 2026: ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವನ್ನು ಆಚರಿಸುವುದೇಕೆ ಗೊತ್ತಾ?

ತಾಯ್ತನ (Motherhood) ಎನ್ನುವಂತಹದ್ದು ಸುಂದರ ಅನುಭೂತಿಯಾಗಿದ್ದು, ಎಲ್ಲಾ ಹೆಣ್ಣಿಗೂ ತಾನು ಸಹ ಗರ್ಭಿಣಿಯಾಗಬೇಕು, ಮಗುವನ್ನು ಪಡೆಯಬೇಕು, ಮಗುವನ್ನು ಚೆನ್ನಾಗಿ ಆರೈಕೆ ಮಾಡಬೇಕು ಎಂಬ ಆಸೆ ಇದ್ದೇ ಇರುತ್ತದೆ.  ಆದರೆ ಮಗವನ್ನು ಹೆತ್ತರೂ ಸಹ ತಮ್ಮನ್ನು ತಾವು ಹೇಗೆ ಆರೈಕೆ ಮಾಡಬೇಕು ಎನ್ನುವ ಕೊರತೆ ಕೆಲವು ಮಹಿಳೆಯರಿಗೆ ಇರುತ್ತದೆ. ಅಲ್ಲದೆ ಕೆಲವು ಮನೆಗಳಲ್ಲಿ ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ಗರ್ಭಿಣಿಯಾಗಿರುವಾಗ ಹಾಗೂ ಪ್ರಸವದ ಬಳಿಕ ಎಲ್ಲಾ ತಾಯಂದಿರಲ್ಲಿ ದೈಹಿಕ, ಮಾನಸಿಕ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹಾಗಾಗಿ ತಾಯಂದಿರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವುದು ಅತ್ಯಗತ್ಯ. ಆದರೆ ಈ ಆರೈಕೆಯ ಕೊರತೆಯಿಂದಾಗಿ ಗರ್ಭಧಾರಣೆ, ಹೆರಿಗೆ ಮತ್ತು ಹೆರಿಗೆಯ ನಂತರದ ಆರೋಗ್ಯ ಸಮಸ್ಯೆಗಳಿಂದ ಮಹಿಳೆಯರು ಮರಣ ಹೊಂದುತ್ತಿದ್ದಾರೆ. ಆದ್ದರಿಂದ ಗರ್ಭಾವಸ್ಥೆಯಲ್ಲಿ, ಹೆರಿಗೆಯ ಸಮಯದಲ್ಲಿ ಮತ್ತು ಪ್ರಸವದ ನಂತರದ ತಾಯಂದಿರಿಗೆ ನೀಡಬೇಕಾದ ಅಗತ್ಯ ಆರೈಕೆಯ ಬಗ್ಗೆ ಅರಿವು ಮೂಡಿಸಲು ಹಾಗೂ ತಾಯಿ ಮತ್ತು ನವಜಾತ ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡುವ ಉದ್ದೇಶದಿಂದ ಪ್ರತಿವರ್ಷ ಏಪ್ರಿಲ್‌ 11 ರಂದು ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನದ ಇತಿಹಾಸವೇನು?

ರಾಷ್ಟ್ರೀಯ ಮಾತೃತ್ವ ದಿನದ ಆಚರಣೆ ‘ವೈಟ್ ರಿಬ್ಬನ್ ಅಲೈಯನ್ಸ್ ಇಂಡಿಯಾದ’ ಪ್ರಯತ್ನದ ಫಲವಾಗಿದೆ. ಭಾರತ ಸರ್ಕಾರವು ವೈಟ್ ರಿಬ್ಬನ್ ಅಲೈಯನ್ಸ್ ಇಂಡಿಯಾದ ಪ್ರಸ್ತಾವನೆಯ ಮೇರೆಗೆ 2003 ರಲ್ಲಿ ಏಪ್ರಿಲ್‌ 11 ರಂದು ರಾಷ್ಟ್ರೀಯ ಸುರಕ್ಷಿತ ಮಾತೃತ್ವದ ದಿನವನ್ನು ಆಚರಿಸುವುದಾಗಿ ಘೋಷಿಸಿತು. ಏಪ್ರಿಲ್‌ 13 ಮಹಾತ್ಮ ಗಾಂಧೀಜಿಯ ಪತ್ನಿ ಕಸ್ತೂರ್‌ಬಾ ಗಾಂಧಿಯವರ ಜನ್ಮ ದಿನವಾಗಿರುವುದರಿಂದ, ಅವರ ಜನ್ಮ ದಿನದ ಸ್ಮರಣಾರ್ಥವಾಗಿ ಇದೇ ದಿನವನ್ನು ಆಯ್ಕೆ ಮಾಡಲಾಯಿತು. ಅಂದಿನಿಂದ ಪ್ರತಿವರ್ಷ ಭಾರತದಲ್ಲಿ ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ. ಗರ್ಭಧಾರಣೆ, ಹೆರಿಗೆ ಮತ್ತು ಹೆರಿಗೆಯ ನಂತರದ ತಾಯಿ ಹಾಗೂ ಮಗುವಿನ ಆರೋಗ್ಯದ ಬಗ್ಗೆ ವಹಿಸಬೇಕಾದ ಕಾಳಜಿಯ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಪ್ರಮುಖ ಉದ್ದೇಶವಾಗಿದೆ.

ಇದನ್ನೂ ಓದಿ: ಏಪ್ರಿಲ್‌ 5ರಂದೇ ರಾಷ್ಟ್ರೀಯ ಕಡಲ ದಿನವನ್ನು ಆಚರಿಸುವುದು ಏಕೆ?

ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನದ ಮಹತ್ವವೇನು?

  • ರಾಷ್ಟ್ರೀಯ ಸುರಕ್ಷಿತ ತಾಯ್ತನ ದಿನವು ಭಾರತದಲ್ಲಿ ಗರ್ಭಿಣಿ ಮಹಿಳೆಯರು, ತಾಯಂದಿರು ಎದುರಿಸುವ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ.
  • ನವಜಾತ ಶಿಶುವಿನೊಂದಿದೆ ತಾಯಂದಿರ ಆರೋಗ್ಯವನ್ನು ಉತ್ತೇಜಿಸುವ, ಗರ್ಭಿಣಿಯರಿಗೆ ಸಕಾಲಿಕ ಆರೋಗ್ಯ ಸೇವೆಗಳನ್ನು ಒದಗಿಸುವ,  ಅವರ ಕುಟುಂಬಗಳಿಗೆ ಸುರಕ್ಷಿತ ಗರ್ಭಧಾರಣೆಯ ಬಗ್ಗೆ ಶಿಕ್ಷಣ ನೀಡುವ ಹಾಗೂ  ಭಾರತದಲ್ಲಿ ತಾಯಂದಿರು ಮತ್ತು ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡುವ ಪ್ರಮುಖ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ.
  • ಮಹಿಳೆಯರಿಗೆ ತಮ್ಮ ಮಾತೃತ್ವ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು, ತಾಯಂದಿರಿಗಾಗಿ ಇರುವ  ಸರ್ಕಾರಿ ಯೋಜನೆಗಳು ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದು ಈ ದಿನದ ಉದ್ದೇಶವಾಗಿದೆ.
  • ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವು ತಾಯಿಯ ಆರೋಗ್ಯವನ್ನು ಉತ್ತೇಜಿಸುವ, ತಾಯಿ ಹಾಗೂ ನವಜಾತ ಶಿಶುವಿನ ಮರಣ ಪ್ರಮಾಣವನ್ನು ಕಡಿಮೆ ಮಾಡುವ ಮತ್ತು ಭಾರತದಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸುವ ಪ್ರಮುಖ ಆಚರಣೆಯಾಗಿದೆ.
  • ಈ ದಿನ ತಾಯಿಯ ಆರೋಗ್ಯದ ಬಗ್ಗೆ ಮಹಿಳೆಯರಿಗೆ ಶಿಕ್ಷಣ ನೀಡಲು ವಿವಿಧ  ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳು ಸಾರ್ವಜನಿಕ ಕಾರ್ಯಕ್ರಮಗಳ ಮೂಲಕ ಜಾಗೃತಿ ಅಭಿಯಾನಗಳನ್ನು ನಡೆಸುತ್ತವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

ಧಾರವಾಡ, ಏಪ್ರಿಲ್ 11: ಅವಳಿ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದುದ್ದು, ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್​ನನ್ನು (Fairoz Pathan Murder) ಧಾರವಾಡ ನಗರದ ಹಾಶ್ಮಿ ನಗರದಲ್ಲಿರುವ ಅವರ ಮನೆಯಲ್ಲಿ ಬರ್ಬರವಾಗಿ ಹತ್ಯೆಗೈಯಲಾಗಿದೆ. ಶುಕ್ರವಾರ ರಾತ್ರಿ ಆತನ ಮನೆಗೆ ನುಗ್ಗಿದ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರು ಮಂದಿ ಸೇರಿ ಈ ಕೃತ್ಯವನ್ನೆಸಗಿದ್ದಾರೆ ಎನ್ನಲಾಗಿದೆ.

ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ಮೊಹಮ್ಮದ್ ಶಾ ಸೇರಿದಂತೆ ಸದ್ದಾಂ, ಗೌಸ್, ಪರ್ವೇಜ್ ಹತ್ಯೆಗೈದ ಆರೋಪಿಗಳು ಎಂದು ತಿಳಿದುಬಂದಿದೆ. ಕೊಲೆ ಸಂಚು ರೂಪಿಸಿದ್ದ ಅರ್ಬಾಜ್ ಪಠಾಣ್ ಮತ್ತು ಗುಲಾಬ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹತ್ಯೆಗೈದ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ವೈಯಕ್ತಿಕ ಹಾಗೂ ರಾಜಕೀಯ ವೈಷಮ್ಯವೇ ಹತ್ಯೆಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದ್ದು, ಉಪನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

(ಮಾಹಿತಿ ಅಪ್​ಡೇಟ್ ಆಗುತ್ತಿದೆ)

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

2nd PUC ಪರೀಕ್ಷೆಯಲ್ಲಿ ಆಟೋ ಚಾಲಕನ ಮಗನಿಗೆ ರಾಜ್ಯಕ್ಕೆ 6ನೇ ರ‍್ಯಾಂಕ್: ವಿಕಾಸ್ ಹೇಳಿದ್ದೇನು ನೋಡಿ!

ರಾಯಚೂರು, ಏಪ್ರಿಲ್ 11: ರಾಯಚೂರು ಜಿಲ್ಲೆಯ ವಿದ್ಯಾರ್ಥಿ ವಿಕಾಸ್, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 600ಕ್ಕೆ 594 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಆರನೇ ರ‍್ಯಾಂಕ್ ಮತ್ತು ರಾಯಚೂರು ಜಿಲ್ಲೆಗೆ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಇವರು ರಾಯಚೂರು ನಗರದ ಆಟೋ ಚಾಲಕ ಹನಮಂತು ಅವರ ಮಗ. ವಿದ್ಯಾನಿಧಿ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿರುವ ವಿಕಾಸ್, ತಮ್ಮ ಈ ಯಶಸ್ಸಿಗೆ ಕಾಲೇಜಿನ ಉಪನ್ಯಾಸಕರು, ಪೋಷಕರು ಮತ್ತು ಅಕ್ಕ ನೀಡಿದ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಿದ್ದಾರೆ. ತಮ್ಮ ತಂದೆಯ ಪರಿಶ್ರಮವನ್ನು ಕಣ್ಣಾರೆ ಕಂಡ ವಿಕಾಸ್, ಅದಕ್ಕೆ ತಕ್ಕ ಪ್ರತಿಫಲ ನೀಡಲು ಸತತವಾಗಿ ಶ್ರಮಿಸಿದ್ದಾರೆ. ಮುಂದೆ ಬಿಕಾಂ ಪದವಿಯೊಂದಿಗೆ ಸಿಎ ಓದುವ ಗುರಿಯನ್ನು ಹೊಂದಿದ್ದಾರೆ. ವಿಕಾಸ್ ‘ಟಿವಿ9’ ಜತೆ ನಡೆಸಿರುವ ಮಾತುಕತೆ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬೌಲರ್ ಯಾರೇ ಇರಲಿ… RCB ಪಂದ್ಯದ ಬಳಿಕ ವೈಭವ್ ಎಚ್ಚರಿಕೆ..!

IPL 2026: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಅದು ಸಹ ವೈಭವ್ ಸೂರ್ಯವಂಶಿಯ (Vaibhav Suryavanshi) ಆರ್ಭಟದಿಂದಾಗಿ. ಐಪಿಎಲ್​ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 201 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಕೇವಲ 26 ಎಸೆತಗಳಲ್ಲಿ 78 ರನ್ ಚಚ್ಚಿದ್ದರು. ಈ ಸ್ಫೋಟಕ ಬ್ಯಾಟಿಂಗ್​ ನೆರವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು 18 ಓವರ್​ಗಳಲ್ಲಿ 202 ರನ್​ಗಳಿಸಿ 6 ವಿಕೆಟ್​ಗಳ ಜಯ ಸಾಧಿಸಿದೆ.

ನಿರೀಕ್ಷೆಯಂತೆ ಈ ಪಂದ್ಯದಲ್ಲಿ 8 ಫೋರ್ ಹಾಗೂ 7 ಭರ್ಜರಿ ಸಿಕ್ಸರ್​ಗಳೊಂದಿಗೆ 78 ರನ್ ಬಾರಿಸಿದ ವೈಭವ್ ಸೂರ್ಯವಂಶಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿದಿದೆ. ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ವೈಭವ್ ಸೂರ್ಯವಂಶಿ, ಬೌಲರ್ ಯಾರೇ ಇರಲಿ, ನನ್ನ ಗುರಿ ಚೆಂಡಿನ ಮೇಲಷ್ಟೇ ಎಂದಿದ್ದಾರೆ. ಈ ಮೂಲಕ ತಾನು ಯಾವುದೇ ಬೌಲರ್​ನ ನೋಡಿ ಹೆದರಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಆರ್​ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿ ಮುಂಬೈ ಇಂಡಿಯನ್ಸ್ ವಿರುದ್ಧ ಅಬ್ಬರಿಸಿದ್ದರು. ಅದರಲ್ಲೂ ಜಸ್​ಪ್ರೀತ್ ಬುಮ್ರಾ ಅವರ ಒಂದೇ ಓವರ್​ನಲ್ಲಿ  2 ಸಿಕ್ಸ್​ನೊಂದಿಗೆ 13 ರನ್ ಚಚ್ಚಿದ್ದರು. ಇದೀಗ ಭುವನೇಶ್ವರ್ ಕುಮಾರ್ ಹಾಗೂ ಜೋಶ್ ಹೇಝಲ್​ವುಡ್ ಅವರ ಬೆಂಡೆತ್ತಿದ್ದಾರೆ.

ಹೀಗಾಗಿಯೇ ಬುಮ್ರಾ ಮತ್ತು ಹೇಝಲ್‌ವುಡ್ ಅವರಂತಹ ದಿಗ್ಗಜರನ್ನು ಎದುರಿಸುವಾಗ ಭಯವಿತ್ತೇ ಎಂಬ ಪ್ರಶ್ನೆಯನ್ನು ವೈಭವ್ ಮುಂದಿಡಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಯುವ ದಾಂಡಿಗ, “ಬೌಲಿಂಗ್ ಮಾಡುತ್ತಿರುವುದು ಯಾರು ಎಂಬುದು ಮನಸ್ಸಿನ ಮೂಲೆಯಲ್ಲಿ ಇದ್ದೇ ಇರುತ್ತದೆ. ಆದರೆ ನಾನು ಬೌಲರ್ ಮುಖ ನೋಡಿ ಆಡುವುದಿಲ್ಲ, ಬದಲಿಗೆ ಬರುತ್ತಿರುವ ಚೆಂಡನ್ನು ನೋಡಿ ಆಡಲು ಪ್ರಯತ್ನಿಸುತ್ತೇನೆ. ನನ್ನ ಸಹಜ ಆಟಕ್ಕೆ ನಾನು ಬೆಂಬಲ ನೀಡುತ್ತೇನೆ. ಇಲ್ಲಿ ಬೌಲರ್ ಯಾರು ಎಂಬುದು ನನಗೆ ಮುಖ್ಯವಲ್ಲ. ನನ್ನು ಗುರಿ ಚೆಂಡಿನ ಮೇಲಷ್ಟೇ ಎಂದು ವೈಭವ್ ಸೂರ್ಯವಂಶಿ ಇತರೆ ಬೌಲರ್​ಗಳಿಗೂ ಎಚ್ಚರಿಕೆ ರವಾನಿಸಿದ್ದಾರೆ.

ಪಂದ್ಯದ ಗೆಲುವಿನ ನಂತರ ಸಂಭ್ರಮಾಚರಣೆ ಅಥವಾ ಕೇಕ್ ಕತ್ತರಿಸುವ ಯೋಜನೆ ಇದೆಯೇ ಎಂದು ಕೇಳಿದಾಗ, “ಇಲ್ಲ ಸರ್, ಅಂತಹದ್ದೇನೂ ಇಲ್ಲ. ನಮಗೆ ನಾಳೆ ಬೆಳಿಗ್ಗೆ ಬೇಗ ವಿಮಾನ ಇರುವುದರಿಂದ ಇವತ್ತು ಬೇಗ ಮಲಗಬೇಕಿದೆ. ಶಿಸ್ತು ನಮಗೆ ಮುಖ್ಯ,” ಎಂದು ಹೇಳುವ ಮೂಲಕ ತಮ್ಮ ವೃತ್ತಿಪರತೆಯನ್ನು ಮೆರೆದಿದ್ದಾರೆ.

ಇದೇ ವೇಳೆ ತಮ್ಮ ಈ ಬೆಳವಣಿಗೆಗೆ ತಂದೆ ಮತ್ತು ಕೋಚ್‌ಗಳ ಮಾರ್ಗದರ್ಶನವೇ ಕಾರಣ ಎಂದು ಅವರು ಸ್ಮರಿಸಿರುವ ವೈಭವ್. “ನನ್ನ ತಂದೆ ಮತ್ತು ಕೋಚ್‌ಗಳು, ವಿಶೇಷವಾಗಿ ಇಲ್ಲಿನ ಗಾರ್ಡಿಯನ್ ರೋಮಿ ಸರ್ ಅವರು ಯಾವಾಗಲೂ ಒಂದು ಮಾತನ್ನು ಹೇಳುತ್ತಾರೆ – ಈ ಪ್ರಯಾಣ ಬಹಳ ದೀರ್ಘವಾಗಿದೆ, ಇದು ಕೇವಲ ಆರಂಭವಷ್ಟೇ. ಹೊರಗಿನ ವಿಚಾರಗಳತ್ತ ಗಮನ ಹರಿಸದೆ ಕೇವಲ ಆಟ ಮತ್ತು ಪ್ರಕ್ರಿಯೆಯಮೇಲೆ ಮಾತ್ರ ಗಮನ ಹರಿಸು ಎಂದು”. ನಾನು ಅವರ ಮಾತನ್ನು ಪಾಲಿಸುತ್ತಿದ್ದೇನೆ ಎಂದು ವೈಭವ್ ಸೂರ್ಯವಂಶಿ ಹೇಳಿದ್ದಾರೆ.

ಇದೇ ವೇಳೆ ಬೇಗನೆ ಔಟಾದ ಬಗ್ಗೆ ಮಾತನಾಡಿದ ವೈಭವ್, “ನಾನು ಕ್ರೀಸ್‌ನಲ್ಲಿ ಇನ್ನೂ ಸ್ವಲ್ಪ ಸಮಯ ಉಳಿದಿದ್ದರೆ ತಂಡಕ್ಕೆ ಇನ್ನೂ 10-20 ರನ್ ಬರುತ್ತಿತ್ತು. ಗುರಿ ಬೆನ್ನಟ್ಟುವಾಗ ಪಂದ್ಯವನ್ನು ಇನ್ನೂ ಎರಡು ಓವರ್ ಮೊದಲೇ ಮುಗಿಸಬಹುದಿತ್ತು. ಅನಗತ್ಯ ಹೊಡೆತಕ್ಕೆ ಕೈಹಾಕಿ ಔಟ್ ಆದಾಗ ತಂಡಕ್ಕೆ ಹಿನ್ನಡೆಯಾಗುತ್ತದೆ ಎಂಬ ಬೇಸರ ನನಗಿರುತ್ತದೆ”.  ಇದಾಗ್ಯೂ ನನ್ನ ಆದ್ಯತೆ ತಂಡದ ಗೆಲುವು. ಹೀಗಾಗಿ ಕೆಲವೊಮ್ಮೆ ತಪ್ಪುಗಳಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: Rajat Patidar: ತಪ್ಪುಗಳಾಗುತ್ತೆ, ಆದರೆ ಈ ತಪ್ಪುಗಳನ್ನು…!

ಒಟ್ಟಾರೆಯಾಗಿ, ವೈಭವ್ ಸೂರ್ಯವಂಶಿ ಅವರ ಈ ಮಾತುಗಳು ಭಾರತೀಯ ಕ್ರಿಕೆಟ್‌ನ ಮುಂದಿನ ದಿನಗಳಲ್ಲಿ ಒಬ್ಬ ಶಿಸ್ತಿನ ಮತ್ತು ಮಾನಸಿಕವಾಗಿ ಸದೃಢವಾದ ಆಟಗಾರ ಸಿದ್ಧವಾಗುತ್ತಿದ್ದಾನೆ ಎಂಬುದಕ್ಕೆ ಸಾಕ್ಷಿಯಾಗಿದೆ. ಅಲ್ಲದೆ ಈ ಬಾರಿಯ ಐಪಿಎಲ್​ನಲ್ಲಿ ಇದೇ ರೀತಿ ಅಬ್ಬರಿಸಿದರೆ ಮುಂಬರುವ ಝಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ವೈಭವ್ ಸೂರ್ಯವಂಶಿ ಆಯ್ಕೆಯಾಗುವುದರಲ್ಲಿ ಡೌಟೇ ಇಲ್ಲ.

 

 

Source link

ಚುನಾವಣೆ ಮುಗೀತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಸಚಿವ ಸ್ಥಾನಕ್ಕಾಗಿ ಶಾಸಕರ ದೆಹಲಿ ಯಾತ್ರೆ ಶುರು

ಬೆಂಗಳೂರು, ಏಪ್ರಿಲ್ 11: ರಾಜ್ಯದಲ್ಲಿ ಉಪಚುನಾವಣೆ ಮುಗಿಯುತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ (Congress) ಸಚಿವ ಸ್ಥಾನದ ಆಕಾಂಕ್ಷಿಗಳ ಚಟುವಟಿಕೆಗಳು ಗರಿಗೆದರಿವೆ. ಸಚಿವ ಸಂಪುಟ ಪುನರ್‌ ರಚನೆಯಾಗಲಿದೆ ಎಂಬ ನಿರೀಕ್ಷೆಯಲ್ಲಿರುವ 20ಕ್ಕೂ ಹೆಚ್ಚು ಹಿರಿಯ ಶಾಸಕರು ಭಾನುವಾರ ದೆಹಲಿಗೆ ಪ್ರಯಾಣ ಬೆಳೆಸಲು ಮುಂದಾಗಿದ್ದು, ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಲು ಸಜ್ಜಾಗಿದ್ದಾರೆ. ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಮತ್ತು ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರ ನೇತೃತ್ವದಲ್ಲಿ ಶಾಸಕರ ತಂಡ ನಾಳೆ ದೆಹಲಿಗೆ ತೆರಳಲಿದೆ. ಈ ತಂಡದಲ್ಲಿ ಮೂರರಿಂದ ಆರು ಬಾರಿ ಗೆದ್ದಿರುವ ಅನುಭವಿ ಶಾಸಕರು ಸೇರಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕಾಗಿ ಮನವಿ ಸಲ್ಲಿಸುವುದು ಶಾಸಕರ ಈ ಯಾತ್ರೆಯ ಮುಖ್ಯ ಉದ್ದೇಶ ಎಂದು ಉನ್ನತ ಮೂಲಗಳು ತಿಳಿಸಿವೆ.

ಶಾಸಕರ ಬೇಡಿಕೆ ಏನು?

ಸರ್ಕಾರ ರಚನೆಯಾಗಿ ಮೂರು ವರ್ಷಗಳು ಕಳೆಯುತ್ತಾ ಬಂದಿವೆ. ಆರಂಭದಲ್ಲಿ ಎರಡೂವರೆ ವರ್ಷದ ನಂತರ ಸಂಪುಟ ಪುನರ್‌ ರಚನೆ ಮಾಡಿ ಹೊಸಬರಿಗೆ ಅವಕಾಶ ನೀಡಲಾಗುವುದು ಎಂಬ ಭರವಸೆ ನೀಡಲಾಗಿತ್ತು. ಪಕ್ಷಕ್ಕಾಗಿ ನಾವು ನಿರಂತರವಾಗಿ ದುಡಿದಿದ್ದೇವೆ. ಉಳಿದಿರುವ ಎರಡು ವರ್ಷದ ಅವಧಿಗಾದರೂ ನಮಗೆ ಸಚಿವ ಸ್ಥಾನ ನೀಡಬೇಕು ಎಂಬುದು ಶಾಸಕರ ವಾದವಾಗಿದೆ. ಇದಕ್ಕಾಗಿ ಸಂಪುಟ ಪುನರ್‌ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡುವಂತೆ ಹೈಕಮಾಂಡ್‌ಗೆ ಅವರು ಒತ್ತಾಯಿಸಲಿದ್ದಾರೆ.

ಹೈಕಮಾಂಡ್ ತೀರ್ಮಾನಕ್ಕೆ ಬದ್ಧ

ನಾಯಕತ್ವ ಬದಲಾವಣೆಯ ಕುರಿತಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಶಾಸಕರು, ‘ನಾಯಕತ್ವದ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು, ವರಿಷ್ಠರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಆದರೆ ಸಚಿವ ಸಂಪುಟದಲ್ಲಿ ಹಿರಿಯ ಮತ್ತು ಅನುಭವಿ ಶಾಸಕರಿಗೆ ಅವಕಾಶ ನೀಡಬೇಕು’ ಎಂದು ಆಗ್ರಹಿಸಿದ್ದಾರೆ. ಏಪ್ರಿಲ್ 17ರ ನಂತರ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಕೂಡ ದೆಹಲಿಗೆ ಭೇಟಿ ನೀಡಲಿದ್ದು, ಅದಕ್ಕೂ ಮುನ್ನವೇ ಈ ಶಾಸಕರ ತಂಡ ವರಿಷ್ಠರ ಮನವೊಲಿಸಲು ಮುಂದಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಟಾಕ್ಸಿಕ್’ ಬಗ್ಗೆ ಭಯ ಇಲ್ಲ ಎಂದಿದ್ದ ‘ಡಕಾಯಿತ್’ ಚಿತ್ರಕ್ಕೆ ಮೊದಲ ದಿನ ಹೀನಾಯ ಕಲೆಕ್ಷನ್

‘ಟಾಕ್ಸಿಕ್’ ಸಿನಿಮಾ ಎದುರು ಬರ್ತೀವಿ, ನಮಗೆ ಆ ಸಿನಿಮಾ ಬಗ್ಗೆ ಭಯ ಇಲ್ಲ’ ಎಂದು ‘ಡಕಾಯಿತ್’ ಸಿನಿಮಾ ನಟ ಅಡವಿ ಶೇಷ್ ಅವರು ಈ ಮೊದಲು ಹೇಳಿದ್ದರು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ‘ಡಕಾಯಿತ್’ ಹಾಗೂ ‘ಟಾಕ್ಸಿಕ್’ ಸಿನಿಮಾ ಒಂದೇ ದಿನ ತೆರೆಗೆ ಬರಬೇಕಿತ್ತು. ಆದರೆ, ಎರಡೂ ಸಿನಿಮಾಗಳ ರಿಲೀಸ್ ಮುಂದಕ್ಕೆ ಹೋಯಿತು. ‘ಡಕಾಯಿತ್’ ಸಿನಿಮಾ ಏಪ್ರಿಲ್ 10ರಂದು ತೆರೆಗೆ ಬಂದಿದೆ. ಈ ಚಿತ್ರ ಬೆರಳೆಣಿಕೆ ಕೋಟಿ ಕಲೆಕ್ಷನ್ ಮಾಡಿದೆ.

ಅಡವಿ ಶೇಷ್ ಹಾಗೂ ಮೃಣಾಲ್ ಠಾಕೂರ್ ಅಭಿನಯದ ಡಕಾಯಿತ್’ ಚಿತ್ರವನ್ನು ಜನರು ಅಷ್ಟಾಗಿ ಇಷ್ಟಪಟ್ಟಿಲ್ಲ. ಈ ಸಿನಿಮಾ ಮೊದಲ ದಿನದ ಹೀನಾಯ ಕಲೆಕ್ಷನ್ ಮಾಡಿದೆ. ಈ ಚಿತ್ರದ ಬಜೆಟ್ 70 ಕೋಟಿ ರೂಪಾಯಿ. ಹೀಗೆಯೇ ಮುಂದುವರಿದರೆ ಸಿನಿಮಾದಿಂದ ನಿರ್ಮಾಪಕರು ನಷ್ಟ ಅನುಭವಿಸುವ ಸೂಚನೆ ಸಿಕ್ಕಿದೆ.

‘ಡಕಾಯಿತ್’ ಸಿನಿಮಾ ರೊಮ್ಯಾಂಟಿಕ್ ಆ್ಯಕ್ಷನ್ ಥ್ರಿಲ್ಲರ್ ಶೈಲಿಯಲ್ಲಿ ಮೂಡಿ ಬಂದಿದೆ. ಅಡಿವಿ ಶೇಷ್ ಹಾಗೂ ಮೃಣಾಲ್ ನಟನೆ ಗಮನ ಸೆಳೆದಿದೆ. ಬಿಜಿಎಂ ಕೂಡ ಮೆಚ್ಚುಗೆ ಗಳಿಸಿದೆ. ಆದರೆ, ಸಿನಿಮಾದಲ್ಲಿ ಇಷ್ಟ ಆಗದೇ ಇರುವ ಹಲವಿದೆ. ಈ ಚಿತ್ರದ ಕಥೆ ಹಳೆಯ ಕಾಲದ್ದಾಗಿದೆ. ಕಥೆಯ ನರೇಷನ್ ತುಂಬಾನೇ ಫ್ಲ್ಯಾಟ್ ಆಗಿದೆ ಎಂಬ ಆರೋಪ ಇದೆ. ಭಾವನಾತ್ಮಕವಾಗಿ ಸಿನಿಮಾ ಕನೆಕ್ಟ್ ಆಗಿದೆ. ಆ್ಯಕ್ಷನ್ ಸಿನಿಮಾಗಳಲ್ಲಿ ಹೊಸತನ ಇಲ್ಲ. ಇದೆಲ್ಲವೂ ಸಿನಿಮಾಗೆ ಹಿನ್ನಡೆ ತಂದಿದೆ.

ಇದನ್ನೂ ಓದಿ: ‘ಡಕಾಯತ್’ ಸಿನಿಮಾ ಆಫರ್ ಮೊದಲು ಹೋಗಿದ್ದು ದಕ್ಷಿಣದ ಈ ಸ್ಟಾರ್ ನಟನಿಗೆ

‘ಡಕಾಯಿತ್’ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 6.50 ಕೋಟಿ ರೂಪಾಯಿ. ಈ ಚಿತ್ರಕ್ಕೆ ಸಿಕ್ಕಿದ್ದು ಬರೋಬ್ಬರಿ 3,800 ಶೋಗಳು. ಒಕ್ಯುಪೆನ್ಸಿ ಕೇವಲ 26 ಪರ್ಸೆಂಟ್ ಮಾತ್ರ ಇತ್ತು. ಸದ್ಯ ತೆಲುಗಿನಲ್ಲಿ ಯಾವುದೇ ದೊಡ್ಡ ಸಿನಿಮಾಗಳಿಲ್ಲ. ಆದಾಗ್ಯೂ ಚಿತ್ರದ ಬಳಿ ಅಬ್ಬರಿಸಲು ಸಾಧ್ಯವಾಗುತ್ತಿಲ್ಲ. ಒಂದೊಮ್ಮೆ ‘ಟಾಕ್ಸಿಕ್’ ಹಾಗು ‘ಡಕಾಯಿತ್’ ಚಿತ್ರಗಳು ಒಟ್ಟಿಗೆ ತೆರೆಗೆ ಬಂದಿದ್ದರೆ ಗೆಲ್ಲೋದು ಮತ್ತಷ್ಟು ಕಷ್ಟಕರವಾಗುತ್ತಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version