Headlines

ಮಂಗಳೂರು: ಅತ್ತಾವರದಲ್ಲಿ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಪಕ್ಕದಲ್ಲೇ ನಿಲ್ಲಿಸಿದ್ದ ಕಾರುಗಳು ನಜ್ಜುಗುಜ್ಜು! – Kannada News | Mangaluru Rain: Compound Wall Collapses in Attavar; Multiple Cars Smashed Under Debris

ಮಂಗಳೂರು, ಏಪ್ರಿಲ್ 22: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆ ಕೆಲವೆಡೆ ಅವಾಂತರ ಸೃಷ್ಟಿಸಿದೆ. ಮಂಗಳೂರಿನ ಅತ್ತಾವರದಲ್ಲಿ ವರ್ಷದ ಹಿಂದೆಯಷ್ಟೇ ನಿರ್ಮಿಸಲಾಗಿದ್ದ ಕಾಂಪೌಂಡ್ ಗೋಡೆಯೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಗೋಡೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಕಾರುಗಳು ಗೋಡೆಯ ಅವಶೇಷಗಳಡಿ ಸಿಲುಕಿ ಸಂಪೂರ್ಣ ಜಖಂಗೊಂಡಿವೆ. ಸ್ಥಳೀಯವಾಗಿ ಧಾರ್ಮಿಕ ಕಾರ್ಯಕ್ರಮವೊಂದು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ವಾಹನಗಳು ಬಂದಿದ್ದವು. ಪಾರ್ಕಿಂಗ್‌ಗೆ ಜಾಗವಿಲ್ಲದ ಕಾರಣ ಕಾರು ಮಾಲೀಕರು ಅನಿವಾರ್ಯವಾಗಿ ಗೋಡೆಯ ಪಕ್ಕದಲ್ಲಿ ವಾಹನಗಳನ್ನು ನಿಲ್ಲಿಸಿದ್ದರು….

Read More

5 ವರ್ಷ ಹಿಂದಿನ ಕೊಲೆ ಪ್ರಕರಣದಲ್ಲಿ 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಸಂಬಲ್ಪುರ, ಮಾರ್ಚ್ 27: ಒಡಿಶಾದ ಕತರ್ಬಗಾ ಪೊಲೀಸ್ ವ್ಯಾಪ್ತಿಯ ಪದನ್ಪಲಿಯಲ್ಲಿ 2021 ರಲ್ಲಿ ನಡೆದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಲ್ಪುರದ ಸೆಷನ್ಸ್ ನ್ಯಾಯಾಲಯವು ಗುರುವಾರ 7 ಜನರಿಗೆ ಜೀವಾವಧಿ ಶಿಕ್ಷೆ (life imprisonment) ವಿಧಿಸಿದೆ ಮತ್ತು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಒಬ್ಬ ಆರೋಪಿಯನ್ನು ಖುಲಾಸೆಗೊಳಿಸಿದೆ. ನ್ಯಾಯಾಲಯದ ಆದೇಶಗಳ ಪ್ರಕಾರ ಶಿಕ್ಷೆಗಳನ್ನು ಏಕಕಾಲದಲ್ಲಿ ಜಾರಿಗೊಳಿಸಲು ನಿರ್ದೇಶಿಸಲಾಗಿದೆ. ಕತರ್ಬಗಾ ಪೊಲೀಸ್ ವ್ಯಾಪ್ತಿಯ ಗುಲಾಮಾಲ್ ಗ್ರಾಮದಲ್ಲಿ 2021ರಲ್ಲಿ ನಡೆದ ಪ್ರಕಾಶ್ ಪ್ರಧಾನ್ ಅವರ ಸಂಚಲನ ಮೂಡಿಸಿದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಲ್ಪುರದ…

Read More

ಐಪಿಎಲ್ ಆರಂಭಕ್ಕೂ ಮುನ್ನವೇ ‘ಕಪ್ ಗೆಲ್ಲುತ್ತೇವೆ’ ಎಂದು ಮೆಸೇಜ್ ಮಾಡಿದ್ದ ಕೊಹ್ಲಿ!

ಇಂಡಿಯನ್ ಪ್ರೀಮಿಯರ್ ಲೀಗ್​​ ಸೀಸನ್-18ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 18 ವರ್ಷಗಳ ಕಾಯುವಿಕೆ ಅಂತ್ಯಗೊಳಿಸಿದ್ದರು. ಆದರೆ ಈ ಕಾಯುವಿಕೆ ಈ ವರ್ಷವೇ ಅಂತ್ಯವಾಗಲಿದೆ ಎಂಬುದು ವಿರಾಟ್ ಕೊಹ್ಲಿಗೆ ಮೊದಲೇ ಗೊತ್ತಿತ್ತು. ಏಕೆಂದರೆ ಐಪಿಎಲ್​ನ ಹರಾಜಿನ ಬಳಿಕ ಆರ್​ಸಿಬಿ ತಂಡದ ಸಮತೋಲನವನ್ನು ನೋಡಿದ್ದ ಕೊಹ್ಲಿ ಅಂತಹದೊಂದು ವಿಶ್ವಾಸ ಹೊಂದಿದ್ದರು. ಇದೇ ವಿಶ್ವಾಸದೊಂದಿಗೆ ತನ್ನ ಗೆಳೆಯ ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್​ಗೆ ವಿಶೇಷ ಸಂದೇಶವನ್ನೂ ಸಹ…

Read More

ಡಿಕೆ ಶಿವಕುಮಾರ್ ಪ್ರಮಾಣ ವಚನ ಹಿನ್ನೆಲೆ 90 ಸಾವಿರ ಮನೆಗಳಿಗೆ ‘ಲಾಡು’ ಭಾಗ್ಯ; ಶಾಸಕ ಶ್ರೀನಿವಾಸ್ ಭರ್ಜರಿ ತಯಾರಿ! – Kannada News

ಡಿಕೆ ಶಿವಕುಮಾರ್ ಪ್ರಮಾಣ ವಚನ ಹಿನ್ನೆಲೆ 90 ಸಾವಿರ ಮನೆಗಳಿಗೆ ‘ಲಾಡು’ ಭಾಗ್ಯImage Credit source: Tv9 kannada ನೆಲಮಂಗಲ, ಜೂ.2: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಪ್ರಮಾಣ ವಚನ ಸ್ವೀಕರಿಸಲಿರುವ ಐತಿಹಾಸಿಕ ಕ್ಷಣಕ್ಕೆ ಇಡೀ ನೆಲಮಂಗಲ ವಿಧಾನಸಭಾ ಕ್ಷೇತ್ರವೇ ವಧುವಿನಂತೆ ಸಿಂಗಾರಗೊಳ್ಳುತ್ತಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಕ್ಷೇತ್ರದ ಪ್ರತಿ ಹಳ್ಳಿಯ ಪ್ರತಿ ಮನೆಯಲ್ಲೂ ಸಂಭ್ರಮ ಮನೆ ಮಾಡಿದ್ದು, ಈ ಐತಿಹಾಸಿಕ ಸಂತಸವನ್ನು ಹಂಚಿಕೊಳ್ಳಲು ಸ್ಥಳೀಯ ಶಾಸಕರಾದ ಶ್ರೀನಿವಾಸ್ ಅವರ ನೇತೃತ್ವದಲ್ಲಿ…

Read More

Video: ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ – Kannada News | We Have Boarded the Reform Express, Says PM Modi Ahead of Budget

ನವದೆಹಲಿ, ಜನವರಿ 29: ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಗುರುವಾರ ಮಾಧ್ಯಮಗಳನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ(Narendra Modi) ಮಾತನಾಡಿದ್ದಾರೆ. ನಮ್ಮ ಸರ್ಕಾರದ ವಿಶಿಷ್ಟ ಲಕ್ಷಣವೆಂದರೆ ಸುಧಾರಣೆ, ಕಾರ್ಯಕ್ಷಮತೆ ಮತ್ತು ಬದಲಾವಣೆ, ಈಗ ನಾವು ಸುಧಾರಣಾ ಎಕ್ಸ್​ಪ್ರೆಸ್​ನಲ್ಲಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.  ರಾಷ್ಟ್ರಪತಿ ಭಾಷಣವನ್ನು ಉಲ್ಲೇಖಿಸಿರುವ ಅವರು, ಭಾಷಣವು 140 ಕೋಟಿ ಭಾರತೀಯರ ವಿಶ್ವಾಸದ ಅಭಿವ್ಯಕ್ತಿಯಾಗಿದೆ. ಅವರ ಸಾಮರ್ಥ್ಯ ಮತ್ತು ಅವರ ಆಕಾಂಕ್ಷೆಗಳ ರೇಖಾಚಿತ್ರವಾಗಿದೆ. ವಿಶೇಷವಾಗಿ ಯುವಕರ ಬಗ್ಗೆ. ಎಲ್ಲಾ ಸಂಸದರಿಗೆ, ರಾಷ್ಟ್ರಪತಿ ಮಾರ್ಗದರ್ಶನ ನೀಡಲು ಹಲವಾರು ವಿಷಯಗಳನ್ನು…

Read More

Gold Rates: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಯಥಾಸ್ಥಿತಿ; ಇಲ್ಲಿದೆ ದರಪಟ್ಟಿ – Kannada News | Gold Price Today on 22nd April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 22: ಚಿನ್ನದ ಬೆಲೆ ಇಂದು ಬುಧವಾರ ಇಳಿಕೆ ಕಂಡಿದೆ. ಗ್ರಾಮ್​ಗೆ 50 ರೂನಷ್ಟು ಅಲ್ಪ ಕುಸಿತ ಇದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ (Gold Rates) ಯಥಾಸ್ಥಿತಿ ಇದೆ. ಕೆಲವೆಡೆ ಅಲ್ಪಸ್ವಲ್ಪ ಏರಿಳಿತಗಳಿವೆ. ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆಯಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,500…

Read More

‘ಎರಡು ಚಿತ್ರದ ಜಗದೇಕವೀರ’ ಚೇತನ್​​ಗೆ ಜಗ್ಗೇಶ್ ಮಾತಿನ ಚಾಟಿ – Kannada News | Actor Jaggesh criticize Chetan Ahimsa’s statement about Dr Rajkumar’s memorial

ನಟ ಚೇತನ್ ಅಹಿಂಸ, ಡಾ ರಾಜ್​ಕುಮಾರ್ (Dr Rajkumar) ಅವರ ಸಮಾಧಿ ಕುರಿತು ಆಡಿರುವ ಅಸೂಕ್ಷ್ಮ ಮಾತುಗಳು ತೀವ್ರ ಟೀಕೆಗೆ, ನಿಂದನೆಗೆ ಗುರಿ ಆಗಿವೆ. ಕನ್ನಡಪರ ಸಂಘಟನೆಗಳು, ಅಣ್ಣಾವ್ರ ಅಭಿಮಾನಿಗಳು ಬೀದಿಗಿಳಿದು ಪ್ರತಿಭಟನೆ ಸಹ ನಡೆಸಿದ್ದಾರೆ. ಹಲವು ವಿಚಾರವಾದಿಗಳು, ಸಾಹಿತಿಗಳು ಸಹ ಚಿತ್ರರಂಗ ಹಾಗೂ ಕರ್ನಾಟಕಕ್ಕೆ ಅಣ್ಣಾವ್ರ ಕೊಡುಗೆಯನ್ನು ವಿವರಿಸಿದ್ದಾರೆ. ಇದೀಗ ನಟ ಜಗ್ಗೇಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಚಿತ್ರರಂಗಕ್ಕೆ ಅಣ್ಣಾವ್ರ ಮಹತ್ವದ ಕೊಡುಗೆಯನ್ನು ವಿವರಿಸಿರುವ ಜೊತೆಗೆ ಚೇತನ್ ಅಹಿಂಸ ಹೇಳಿಕೆಯನ್ನು ಟೀಕೆ ಮಾಡಿದ್ದಾರೆ. ‘ಹೋದವರೆಲ್ಲಾ ಒಳ್ಳೆಯವರು…

Read More

ಇರಾನ್ ಶಾಂತಿ ಮಾತುಕತೆ ತಿರಸ್ಕರಿಸಿದ್ದೇಕೆ, ಅಮೆರಿಕದ ಅತಿಯಾದ ಬೇಡಿಕೆಗಳು ಮತ್ತು ದ್ವಂದ್ವ ನೀತಿಗೆ ಇರಾನ್ ಗರಂ – Kannada News | Ceasefire Strain: Iran Declines Talks, Points to US Conditions

ಡೊನಾಲ್ಡ್ ಟ್ರಂಪ್ -ಖಮೇನಿ Image Credit source: Google Gemini ಟೆಹ್ರಾನ್, ಏಪ್ರಿಲ್ 20: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್​ನಲ್ಲಿ ನಡೆಯಬೇಕಿದ್ದ ಅಮೆರಿಕ ಮತ್ತು ಇರಾನ್(Iran) ನಡುವಿನ ಎರಡನೇ ಸುತ್ತಿನ ಮಹತ್ವದ ಮಾತುಕತೆಯನ್ನು ಇರಾನ್ ಅಧಿಕೃತವಾಗಿ ತಿರಸ್ಕರಿಸಿದೆ. ಅಮೆರಿಕದ ಅತಿಯಾದ ಬೇಡಿಕೆಗಳು ಮತ್ತು ನೌಕಾ ದಿಗ್ಬಂಧನವೇ ಈ ಬಿಕ್ಕಟ್ಟಿಗೆ ಕಾರಣ ಎಂದು ಇರಾನ್ ದೂರಿದೆ. ಇರಾನ್​ನ ಐಆರ್​ಎನ್​ಎ ಬಿತ್ತರಿಸಿದ್ದ ವರದಿ ಪ್ರಕಾರ, ಇಸ್ಲಾಮಾಬಾದ್‌ನಲ್ಲಿ ಮಾತುಕತೆ ನಡೆಯಲಿದೆ ಎಂಬ ವರದಿಗಳನ್ನು ಇರಾನ್ ಸಂಪೂರ್ಣವಾಗಿ ನಿರಾಕರಿಸಿದೆ. ಅಮೆರಿಕ…

Read More

ಕ್ರಿಕೆಟ್​​ ವಿಚಾರಕ್ಕೆ ಶುರುವಾದ ಗಲಾಟೆ ಸಾವಲ್ಲಿ ಅಂತ್ಯ: ನಡೆದಿದ್ದು ಅಪಘಾತವೋ? ಕೊಲೆಯೋ? – Kannada News | Anekal Youth Dies After Cricket Dispute Car Crash, Mother Alleges Murder

ಆನೇಕಲ್​​, ಜನವರಿ 26: ಕ್ರಿಕೆಟ್​​ ವಿಚಾರಕ್ಕೆ ಶುರುವಾದ ಗಲಾಟೆ ಯುವಕನೋರ್ವನ ಸಾವಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಕಮ್ಮಸಂದ್ರದಲ್ಲಿ ನಡೆದಿದೆ. ಹೆಬ್ಬಗೋಡಿ ನಿವಾಸಿ ಪ್ರಶಾಂತ್(28) ಮೃತ ದುರ್ದೈವಿಯಾಗಿದ್ದಾನೆ. ಮದ್ಯದ ನಶೆಯಲ್ಲಿ ಇಬ್ಬರು ಯುವಕರ ನಡುವೆ ಕಿರಿಕ್​​ ಆಗಿದೆ ಎನ್ನಲಾಗಿದ್ದು, ಪ್ರಶಾಂತ್​​ ಮತ್ತು ರೋಷನ್​​ ಹೆಗ್ಡೆ ಎಂಬವರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಈ ವೇಳೆ ರೋಷನ್​​ ಕಾರು ಹತ್ತಿ ಹೊರಟರೂ ಪ್ರಶಾಂತ್​​ ಆತನ ಕಾರಿನ ಫೂಟ್​​ ಬೋರ್ಡ್​​ ಮೇಲೆ ಹತ್ತಿ ಕಿರಿಕ್​​ ಮುಂದುವರಿಸಿದ್ದ. ಅವಾಚ್ಯ ಶಬ್ದಗಳಿಂದ…

Read More

ಬೆಂಗಳೂರಿನಲ್ಲಿ ರಣ ಬಸಿಲು: ಆರೋಗ್ಯ ಇಲಾಖೆಯ ಮಾರ್ಗಸೂಚಿ, ಗರ್ಭಿಣಿಯರು, ಮಕ್ಕಳಿಗೆ ಎಚ್ಚರಿಕೆ – Kannada News | Bengaluru Heatwave: Health Advisory for Rising Temperatures and Dehydration Risks

ಪ್ರಾತಿನಿಧಿಕ ಚಿತ್ರImage Credit source: indianexpress ಬೆಂಗಳೂರ, ಏಪ್ರಿಲ್​ 17: ಕೂಲ್ ಸಿಟಿ ಎಂದು ಕರೆಸಿಕೊಳ್ಳುವ ರಾಜಧಾನಿ ಬೆಂಗಳೂರು (bangaluru) ಸದ್ಯ ಹಾಟ್ ಸಿಟಿಯಾಗಿ (Heatwave) ಬದಲಾಗಿದೆ. ಸೆಕೆ ಜೊತೆಗೆ ಏರಿಕೆಯಾಗುತ್ತಿರುವ ತಾಪಮಾನಕ್ಕೆ ಸಿಟಿ ಜನ ಶಾಪ್ ಹಾಕುವುದಕ್ಕೆ ಶುರು ಮಾಡಿದ್ದಾರೆ. ಅದರಲ್ಲೂ ಮಕ್ಕಳು, ವೃದ್ಧರು ಹಾಗೂ ಗರ್ಭಿಣಿಯರು ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಗರ್ಭಿಣಿಯರು, ಮಕ್ಕಳ ಬಗ್ಗೆ ಎಚ್ಚರ  ಬೆಂಗಳೂರಿನಲ್ಲಿ ಇಂದು 36ರ ಗರಿಷ್ಠ ತಾಪಮಾನ ದಾಖಲಾಗಿದೆ. ಕ್ಷಣಕ್ಷಣಕ್ಕೂ ಏರಿಕೆ ಆಗುತ್ತಿರುವ ರಾಜಧಾನಿಯ…

Read More