ಛೇ, ಇದೆಂಥಾ ಕ್ರೌರ್ಯ! ಜಗಳ ಬಿಡಿಸಲು ಹೋದ ಗರ್ಭಿಣಿಯ ಹೊಟ್ಟೆಗೆ ಒದ್ದ ಕಿರಾತಕರು, ಗರ್ಭದಲ್ಲಿದ್ದ ಅವಳಿ ಶಿಶುಗಳು ದಾರುಣ ಸಾವು

ಛೇ, ಇದೆಂಥಾ ಕ್ರೌರ್ಯ! ಜಗಳ ಬಿಡಿಸಲು ಹೋದ ಗರ್ಭಿಣಿಯ ಹೊಟ್ಟೆಗೆ ಒದ್ದ ಕಿರಾತಕರು, ಗರ್ಭದಲ್ಲಿದ್ದ ಅವಳಿ ಶಿಶುಗಳು ದಾರುಣ ಸಾವು

ಹಾವೇರಿ, ಏಪ್ರಿಲ್ 10: ಸಾಲದ ಹಣ ವಾಪಸ್ ಕೇಳುವ ಭರದಲ್ಲಿ ಗುಂಪೊಂದು ಗರ್ಭಿಣಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪರಿಣಾಮ, ಹೊಟ್ಟೆಯಲ್ಲಿದ್ದ ಆರು ತಿಂಗಳ ಅವಳಿ-ಜವಳಿ ಶಿಶುಗಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹಾವೇರಿ (Haveri) ಜಿಲ್ಲೆ ಸವಣೂರು ತಾಲೂಕಿನ ಅಲ್ಲಿಪುರ ಗ್ರಾಮದಲ್ಲಿ ನಡೆದಿದೆ. ಅಲ್ಲಿಪುರ ಗ್ರಾಮದ ಹಾಲವ್ವ ಎಂಬುವವರು ಮಗಳ ಸೀಮಂತ ಕಾರ್ಯಕ್ರಮಕ್ಕಾಗಿ ಊರಿಗೆ ಬಂದಿದ್ದರು. ಹಾಲವ್ವ ಅವರು ಗ್ರಾಮದ ಸುರೇಶ ಲಮಾಣಿ ಎಂಬುವವರಿಂದ 30 ಸಾವಿರ ರೂಪಾಯಿ ಸಾಲ ಪಡೆದಿದ್ದರು.

ಮಾರ್ಚ್ 28ರಂದು ಹಣ ವಾಪಸ್ ಕೇಳಲು ಬಂದ ಸುರೇಶ ಮತ್ತು ಆತನ ಕುಟುಂಬಸ್ಥರು ಗಲಾಟೆ ಆರಂಭಿಸಿದ್ದಾರೆ. ‘ಮಗಳ ಸೀಮಂತ ಮುಗಿದ ಮೇಲೆ ಹಣ ಕೊಡುತ್ತೇವೆ, ಸ್ವಲ್ಪ ಸಮಯ ಕೊಡಿ’ ಎಂದು ಹಾಲವ್ವ ಮನವಿ ಮಾಡಿದರೂ ಕೇಳದ ಆರೋಪಿಗಳು ಹಲ್ಲೆಗೆ ಮುಂದಾಗಿದ್ದಾರೆ.

ಗರ್ಭಿಣಿ ಪವಿತ್ರ ಮೇಲೆ ಹೊಟ್ಟೆಗೆ ಒದ್ದು ಹಲ್ಲೆ

ತಾಯಿ ಹಾಲವ್ವ ಮೇಲೆ ಹಲ್ಲೆ ನಡೆಯುತ್ತಿರುವುದನ್ನು ಕಂಡು ಜಗಳ ಬಿಡಿಸಲು ಬಂದ ಆರು ತಿಂಗಳ ಗರ್ಭಿಣಿ ಮಗಳು ಪವಿತ್ರ ಲಮಾಣಿ ಅವರ ಹೊಟ್ಟೆಗೆ ಆರೋಪಿಗಳು ಬಲವಾಗಿ ಒದ್ದಿದ್ದಾರೆ. ಹಲ್ಲೆಯಿಂದ ಗಂಭೀರವಾಗಿ ಅಸ್ವಸ್ಥಗೊಂಡ ಪವಿತ್ರ ಅವರನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಅವಧಿಪೂರ್ವ ಹೆರಿಗೆಯಾಗಿದ್ದು, ಹೊಟ್ಟೆಯಲ್ಲಿದ್ದ ಅವಳಿ ಕಂದಮ್ಮಗಳು ಪೆಟ್ಟು ಬಿದ್ದು ಸಾವನ್ನಪ್ಪಿವೆ.

ನಾಲ್ವರ ವಿರುದ್ಧ ದೂರು

ಈ ಘಟನೆಗೆ ಸಂಬಂಧಿಸಿದಂತೆ ಸುರೇಶ ಲಮಾಣಿ, ಪರಶುರಾಮ ಲಮಾಣಿ, ಮಹೇಶ ಲಮಾಣಿ ಮತ್ತು ಸಕ್ಕುಬಾಯಿ ಲಮಾಣಿ ಎಂಬ ನಾಲ್ವರ ವಿರುದ್ಧ ಸವಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ‘ನನ್ನ ಮಗಳ ಸೀಮಂತ ಮಾಡಬೇಕಾದ ಮನೆಯಲ್ಲಿ ಈಗ ಶವದ ಸೂತಕ ಆವರಿಸಿದೆ, ಆರೋಪಿಗಳನ್ನು ಬಂಧಿಸಿ ನಮಗೆ ನ್ಯಾಯ ಕೊಡಿಸಿ’ ಎಂದು ತಾಯಿ ಹಾಲವ್ವ ಕಣ್ಣೀರು ಹಾಕುತ್ತಾ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕಿವಿ ಕೇಳಲ್ಲ, ಮಾತೂ ಬರಲ್ಲ! ಆದ್ರೂ ಸ್ನೇಹಿತನ ಹೆಂಡತಿ ಮೇಲೆ ಕಣ್ಣು ಹಾಕಿದ ವ್ಯಕ್ತಿ ಮಾಡಿದ್ದೇನು ಗೊತ್ತಾ?

ವರದಿ: ಅಣ್ಣಪ್ಪ ಬಾರ್ಕಿ, ಟಿವಿ9 ಹಾವೇರಿ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟೀಂ ಇಂಡಿಯಾ ಮಾಜಿ ನಾಯಕನಿಗೆ ಗೆಲುವನ್ನು ಅರ್ಪಿಸಿದ LSG ಫಿನಿಶರ್ ಮುಕುಲ್ ಚೌಧರಿ

ಕೋಲ್ಕತ್ತಾ ನೈಟ್ ರೈಡರ್ಸ್ (KKR) ಹಾಗೂ ಲಖನೌ ಸೂಪರ್ ಜಯಂಟ್ಸ್ ನಡುವಿನ ಪಂದ್ಯದಲ್ಲಿ ಕೋಲ್ಕತ್ತ ಕೊನೆಯ ಕ್ಷಣದಲ್ಲಿ ಸೋತಿದೆ. ಎಲ್​​ಎಸ್​​ಜಿ ಪರ ಮುಕುಲ್ ಚೌಧರಿ ಅವರು 27 ಬಾಲ್​​ಗಳಿಗೆ 54 ರನ್ ಪೇರಿಸಿ, ತಂಡವನ್ನು ಗೆಲುವಿನ ದಡ ಸೇರಿಸಿದರು. ಅವರ ಅದ್ಭುತ ಆಟಕ್ಕೆ ಎಲ್ಲರೂ ತಲೆ ಬಾಗಿದ್ದಾರೆ. ಅವರು ತಮ್ಮ ಗೆಲುವನ್ನು ವಿಶೇಷ ವ್ಯಕ್ತಿಗೆ ಅರ್ಪಿಸಿದ್ದಾರೆ. ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ ಅಲ್ಲಿ ಈ ಬಗ್ಗೆ ಮಾತನಾಡಿದ್ದಾರೆ.

182 ರನ್​​ಗಳ ಬೃಹತ್ ಮೊತ್ತವನ್ನು ಎಲ್​​ಎಸ್​ಜಿ ಬೆನ್ನು ಹತ್ತಿತು. ಉತ್ತಮ ಆರಂಭ ಕಂಡರೂ ನಂತರ ಮುಗ್ಗರಿಸಿತು. ಎಲ್​​ಎಸ್​​ಜಿ 16 ಓವರ್​​ಗೆ 128 ರನ್​​ಗಳಿಗೆ ಏಳು ವಿಕೆಟ್ ಕಳೆದುಕೊಂಡು ಸಂಕಷ್ಟ ಅನುಭವಿಸಿತು. ಪಂದ್ಯ ಕೈ ತಪ್ಪಿತು ಎನ್ನುವಾಗ ಜಾಗರೂಕ ಆಟ ಆಡಲು ಆರಂಭಿಸಿದ್ದು ಮುಕುಲ್. 18ನೇ ಓವರ್​​ನಲ್ಲಿ 13 ರನ್​​, 19ನೇ ಓವರ್​​ನಲ್ಲಿ 16 ರನ್ ಬಾರಿಸಿದರು. ಕೊನೆಯ ಓವರ್​​ನಲ್ಲಿ ಗೆಲುವಿಗೆ ಬೇಕಾಗಿದ್ದು 14 ರನ್​​ಗಳು.

ಆವೇಶ್ ಮೊದಲು ಬಾಲ್ ಸಿಂಗಲ್ ತೆಗೆದರು. ನಂತರ ಬ್ಯಾಟಿಂಗ್​​ಗೆ ಇಳಿದ ಮುಕುಲ್ ಒಂದು ಸಿಕ್ಸ್ ಬಾರಿಸಿದರು. ನಂತರ ಎರಡು ಬಾಲ್ ಡಾಟ್ ಆಯಿತು. ಐದನೇ ಬಾಲ್​​ಗೆ ಆರು ರನ್​​ಗಳು ಬಂದವು. ಕೊನೆಯ ಬಾಲ್ ಸಿಂಗಲ್ ತೆಗೆಯುವ ಮೂಲಕ ಎಲ್​​ಎಸ್​ಜಿ ಗೆಲುವಿನ ದಡ ಸೇರಿತು.

‘ಎಂಎಸ್ ಧೋನಿ ಪಂದ್ಯಗಳನ್ನು ಹೇಗೆ ಫಿನಿಶ್ ಮಾಡುತ್ತಾರೆ ಎಂಬುದನ್ನು ನಾನು ನೋಡುತ್ತಿದ್ದೆ. ನಾನು ಅದೇ ರೀತಿಯಲ್ಲಿ ಬ್ಯಾಟ್ ಮಾಡಿದೆ. ನನ್ನ ವೃತ್ತಿಜೀವನದ ಆರಂಭದಲ್ಲಿ ಅವರು ನನಗೆ ಸ್ಫೂರ್ತಿ ನೀಡಿದರು. ನಾನು ಗೆಲ್ಲಿಸಿಕೊಟ್ಟೆ, ಮತ್ತು ಆ ಗೆಲುವನ್ನು ಅವರಿಗೆ ಅರ್ಪಿಸುತ್ತೇನೆ’ ಎಂದರು.

‘ನನ್ನ ದೇಹ ಹೆಚ್ಚು ಶಕ್ತಿಯನ್ನು ಹೊಂದಿದೆ. ಆದರೆ ನಾನು ದಿನವೂ ಅಭ್ಯಾಸ ಮಾಡುತ್ತೇನೆ. ಪ್ರತಿದಿನ 100ರಿಂದ 150 ಸಿಕ್ಸರ್‌ಗಳನ್ನು ಹೊಡೆಯುವುದನ್ನು ಅಭ್ಯಾಸ ಮಾಡಿದರೆ ಆ ಕಲೆ ಬೆಳೆಯುತ್ತದೆ. ಕಳೆದ 5-6 ತಿಂಗಳುಗಳಿಂದ ನಾನು ಅದರ ಮೇಲೆ ಸಾಕಷ್ಟು ಕೆಲಸ ಮಾಡಿದ್ದೇನೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಯುವ ಬ್ಯಾಟರ್ ಮುಕುಲ್ ಚೌಧರಿ ಎದುರು ಸೋತ ಕೆಕೆಆರ್

ಮುಕುಲ್ ಅವರನ್ನು ತಂಡಕ್ಕೆ ಹೇಗೆ ಆಯ್ಕೆ ಮಾಡಲಾಯಿತು ಎಂಬ ವಿಷಯವನ್ನು ತಂಡದ ಕೋಚ್ ಜಸ್ಟಿನ್ ಲ್ಯಾಂಗರ್ ರಿವೀಲ್ ಮಾಡಿದ್ದಾರೆ. ‘ಮುಕುಲ್ ಅವರನ್ನು ಕೆಲವು ತಿಂಗಳ ಹಿಂದೆ ತರಬೇತಿ ಶಿಬಿರದಲ್ಲಿ ನೋಡಿದ್ದೆವು. ಈ ದೇಶದಲ್ಲಿ ತುಂಬಾ ಪ್ರತಿಭೆಗಳಿವೆ. ನಮ್ಮ ಡೇಟಾ ವಿಶ್ಲೇಷಕ ಶ್ರೀನಿವಾಸ್ ಅವರೇ ಮುಕುಲ್​​ನ ಆಯ್ಕೆ ಮಾಡಿದ್ದು’ ಎಂದು ಜಸ್ಟಿನ್ ವಿವರಿಸಿದರು. ಎಲ್​​ಎಸ್​​ಜಿ ಮುಕುಲ್​​ಗೆ 2.60 ಕೋಟಿ ರೂಪಾಯಿ ನೀಡಿ ಖರೀದಿ ಮಾಡಿದೆ. ಈ ಹಣ ಒಂದೇ ಪಂದ್ಯದಲ್ಲಿ ವಸೂಲಿ ಆಗಿದೆ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ.

ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮದುವೆಯಾದ 14 ತಿಂಗಳಲ್ಲೇ ಸ್ಮರಣಶಕ್ತಿ ಕಳೆದುಕೊಂಡ ರಾಷ್ಟ್ರೀಯ ವಾಲಿಬಾಲ್ ಪಟು

ವಾರಾಣಸಿ, ಏಪ್ರಿಲ್ 10: ವಾಲಿಬಾಲ್(Volleyball) ಕೋರ್ಟ್​​ನಲ್ಲಿ ಎದುರಾಳಿಗಳನ್ನು ಮಣಿಸುತ್ತಿದ್ದ ಪ್ರಿಯಾ ಸರೋಜ್, ಇಂದು ಹಾಸಿಗೆಯ ಮೇಲೆ ಪ್ರಜ್ಞೆಯಿಲ್ಲದೆ ಮಲಗಿದ್ದಾರೆ. ಅವರ ಸ್ಮರಣಶಕ್ತಿ ಸಂಪೂರ್ಣವಾಗಿ ಹೋಗಿದೆ, ಮಾತು ಮರೆಯಾಗಿದೆ. ಅವರ ಈ ದುಸ್ಥಿತಿಗೆ ಗಂಡನೇ ಕಾರಣ ಎಂಬ ಆಘಾತಕಾರಿ ಸತ್ಯವನ್ನು ಅವರ ತಾಯಿ ನಿಶಾ ಈಗ ಕಣ್ಣೀರಿನೊಂದಿಗೆ ಬಿಚ್ಚಿಟ್ಟಿದ್ದಾರೆ.

ಫೆಬ್ರವರಿ 2024 ರಲ್ಲಿ ವಾರಾಣಸಿಯ ಪರಮಾನಂದಪುರದ ಪ್ರಿಯಾ ಸರೋಜ್ ಅವರನ್ನು ಬಿಎಲ್‌ಡಬ್ಲ್ಯೂ ನಿವಾಸಿ, ಜೆಇ (Junior Engineer) ಆಗಿ ಕೆಲಸ ಮಾಡುತ್ತಿದ್ದ ಅಮಿತ್ ವರ್ಮಾ ಅವರೊಂದಿಗೆ ಅದ್ಧೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು. ಮಗಳ ಜೀವನ ಸುಖವಾಗಿರಲಿ ಎಂದು ಪೋಷಕರು ಹಾರೈಸಿದ್ದರು. ಮದುವೆಯ ನಂತರ ಅಮಿತ್‌ಗೆ ಗೋರಖ್‌ಪುರಕ್ಕೆ ವರ್ಗಾವಣೆಯಾದಾಗ ಪ್ರಿಯಾ ಕೂಡ ಪತಿಯೊಂದಿಗೆ ತೆರಳಿದ್ದರು.

ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ ಕ್ರಮೇಣ ಅಮಿತ್ ತನ್ನ ಅಸಲಿ ರೂಪ ತೋರಿಸಲು ಆರಂಭಿಸಿದ್ದ. ಪ್ರಿಯಾ ಹೆಸರಿನಲ್ಲಿದ್ದ ಜಮೀನನ್ನು ತನ್ನ ಹೆಸರಿಗೆ ವರ್ಗಾಯಿಸುವಂತೆ ಮತ್ತು ಹೆಚ್ಚಿನ ವರದಕ್ಷಿಣೆ ತರುವಂತೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲು ಶುರುಮಾಡಿದ್ದ. ತನ್ನ ನೋವನ್ನು ಯಾರಿಗೂ ಹೇಳಿಕೊಳ್ಳದೆ ಪ್ರಿಯಾ ಸಹಿಸಿಕೊಂಡಿದ್ದಳು. ಆದರೆ ಅಳಿಯನ ಕಿರುಕುಳ ಮಿತಿಮೀರಿತ್ತು, ಎಂದು ತಾಯಿ ನಿಶಾ ಆರೋಪಿಸಿದ್ದಾರೆ.

ಮತ್ತಷ್ಟು ಓದಿ:

“ಅಣ್ಣನ ಮದುವೆ ಸಂಭ್ರಮದ ನಡುವೆ ಘೋರ ದುರಂತ!”: ಲಿಫ್ಟ್ ಕೇಬಲ್ ತುಂಡಾಗಿ ತಮ್ಮನಿಗೆ ಗಂಭೀರ ಗಾಯ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

 

ಮದುವೆಯಾದ 14 ತಿಂಗಳಿಗೆ ಪ್ರಿಯಾ ಅವರ ತಾಯಿಗೆ ಒಂದು ಕರೆ ಬಂತು. ನಿಮ್ಮ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದರು. ಗಾಬರಿಯಿಂದ ಗೋರಖ್‌ಪುರಕ್ಕೆ ಓಡಿಹೋದ ತಾಯಿಗೆ ಕಂಡದ್ದು ಮತ್ತೊಂದು ಆಘಾತ. ಪ್ರಿಯಾ ಜೀವಂತವಾಗಿದ್ದಳು, ಆದರೆ ಕೋಮಾದಲ್ಲಿದ್ದಳು.

ಅಲ್ಲಿಂದ ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದರೂ ಫಲ ಸಿಗಲಿಲ್ಲ. ಚಿಕಿತ್ಸೆಯ ಸಮಯದಲ್ಲಿ ಪ್ರಿಯಾ ಕ್ರಮೇಣ ತನ್ನ ಸ್ಮರಣಶಕ್ತಿ ಮತ್ತು ಮಾತನಾಡುವ ಶಕ್ತಿಯನ್ನು ಕಳೆದುಕೊಂಡಳು. ಒಂದು ಕಾಲದಲ್ಲಿ ಕ್ರೀಡಾಂಗಣದಲ್ಲಿ ಚೈತನ್ಯದ ಬುಗ್ಗೆಯಾಗಿದ್ದ ಈಕೆ ಈಗ ತನ್ನ ಗುರುತನ್ನೇ ಮರೆತು ಹೋಗಿದ್ದಾಳೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ನೀನು ಬಂಗಾರದ ಮನುಷ್ಯ ಕಣಯ್ಯ!: ಅಭಿಮಾನಿಯ ಫೋನ್​​​ ನೋಡಿ ಕರಗಿದ ಸಂಜು ಸ್ಯಾಮ್ಸನ್ ಮನಸ್ಸು

ಕೇರಳ, ಏ.10: ಸಂಜು ಸ್ಯಾಮ್ಸನ್ (Sanju Samson) ಕ್ರೀಡಾ ಸಾಮ್ರಾಜ್ಯದ ಯುವ ಆಟಗಾರ, ಸೈಲೆಂಟ್​​ ಆಗಿರುವ ಇವರು, ಒಳ್ಳೆಯ ಮನಸ್ಸಿನ ವ್ಯಕ್ತಿ, ಒಂದು ದಿನವೂ ತಾಳ್ಮೆ ಕಳೆದುಕೊಂಡಿಲ್ಲ. ಎಲ್ಲವನ್ನು ಕೂಲ್​ ಆಗಿ ನಿಭಾಯಿಸಿದ್ದಾರೆ, ಇದೀಗ ಇವರ ಈ ಗುಣಕ್ಕೆ ಒಂದು ಒಳ್ಳೆಯ ಉದಾಹರಣೆ ಇಲ್ಲಿದೆ ನೋಡಿದೆ. ಐಪಿಎಲ್ 2026ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಪರ ಆಡುತ್ತಿರುವ ಸಂಜು ಸ್ಯಾಮ್ಸನ್, ಸಾಲು ಸಾಲು ಸೋಲಿನ ನಂತರವೂ ಅಭಿಮಾನಿಗಳ ಮನಸ್ಸಿನಲ್ಲಿ ಉಳಿದುಕೊಂಡಿದ್ದಾರೆ. ಇದೀಗ ತಮ್ಮ ಗುಣದಿಂದ ಅಭಿಮಾನಗಳಿಗೆ ಮತ್ತಷ್ಟು ಇಷ್ಟವಾಗಿದ್ದಾರೆ. ಇವರು ಇತ್ತೀಚಿಗೆ ಕೇರಳದಲ್ಲಿ ಪ್ರಯಾಣಿಸುತ್ತಿದ್ದಾಗ ತಮ್ಮ ಅಭಿಮಾನಿಯೊಬ್ಬರ ಸಂಕಷ್ಟಕ್ಕೆ ಸ್ಪಂದಿಸಿ ಸುದ್ದಿಯಾಗಿದ್ದಾರೆ.

ಸಂಜು ಸ್ಯಾಮ್ಸನ್ ಅವರು ಕೋಝಿಕ್ಕೋಡ್‌ನಿಂದ ಕೊಯಮತ್ತೂರಿಗೆ ಪ್ರಯಾಣಿಸುತ್ತಿದ್ದರು. ಮುಂಡೂರು-ತೂತಾ ರಸ್ತೆಯ ಪುಂಚಪ್ಪಾಡಂ ಬಳಿ ಫೋನ್ ಕರೆ ಮಾಡಲು ತಮ್ಮ ಕಾರನ್ನು ನಿಲ್ಲಿಸಿದ್ದರು. ಈ ವೇಳೆ ಕೇಬಲ್ ಟೆಕ್ನಿಷಿಯನ್ ಶಬರೀಶ್ ಎಂಬುವವರು ತಮ್ಮ ಸ್ನೇಹಿತನೊಂದಿಗೆ ಕ್ರಿಕೆಟ್ ಆಡಲು ಹೋಗುತ್ತಿದ್ದರು. ಕಾರಿನಲ್ಲಿದ್ದ ವ್ಯಕ್ತಿ ಸಂಜು ಸ್ಯಾಮ್ಸನ್ ಎಂದು ತಿಳಿದ ಅಭಿಮಾನಿಗಳು ಅವರ ಬಳಿ ತೆರಳಿ ಮಾತನಾಡಿಸಿದರು. ಸಂಜು ಅತ್ಯಂತ ಪ್ರೀತಿಯಿಂದ ಅವರ ಕ್ಷೇಮ ವಿಚಾರಿಸಿ, ಸೆಲ್ಫಿ ನೀಡಲು ಒಪ್ಪಿದರು. ಶಬರೀಶ್ ಸೆಲ್ಫಿ ತೆಗೆಯುವಾಗ ಅವರ ಫೋನ್‌ನ ಡಿಸ್‌ಪ್ಲೇ ಸಂಪೂರ್ಣವಾಗಿ ಒಡೆದಿರುವುದನ್ನು ಸಂಜು ಗಮನಿಸಿದ್ದಾರೆ.

ಇಲ್ಲಿದೆ ನೋಡಿ ಎಕ್ಸ್​​ ಪೋಸ್ಟ್​:

ಕಾರಿನಲ್ಲಿದ್ದ ವ್ಯಕ್ತಿ ಸಂಜು ಸ್ಯಾಮ್ಸನ್ ಎಂದು ತಿಳಿದ ಅಭಿಮಾನಿಗಳು ಅವರ ಬಳಿ ತೆರಳಿ ಮಾತನಾಡಿಸಿದರು. ಸಂಜು ಅತ್ಯಂತ ಪ್ರೀತಿಯಿಂದ ಅವರ ಕ್ಷೇಮ ವಿಚಾರಿಸಿ, ಸೆಲ್ಫಿ ನೀಡಲು ಒಪ್ಪಿದರು. ಶಬರೀಶ್ ಸೆಲ್ಫಿ ತೆಗೆಯುವಾಗ ಅವರ ಫೋನ್‌ನ ಡಿಸ್‌ಪ್ಲೇ ಸಂಪೂರ್ಣವಾಗಿ ಒಡೆದಿರುವುದನ್ನು ಸಂಜು ಗಮನಿಸಿದರು. ಅಭಿಮಾನಿಯ ಫೋನ್ ಸ್ಥಿತಿ ನೋಡಿ ಮರುಗಿದ ಸಂಜು, ತಕ್ಷಣ ತಮ್ಮ ಕಾರಿನ ಹಿಂಭಾಗದಲ್ಲಿದ್ದ ಸುಮಾರು 40,000 ರೂ. ಮೌಲ್ಯದ ಹೊಸ ಸ್ಮಾರ್ಟ್‌ಫೋನ್ ಅನ್ನು ಶಬರೀಶ್‌ಗೆ ಉಡುಗೊರೆಯಾಗಿ ನೀಡಿದರು. ಈ ಅನಿರೀಕ್ಷಿತ ಉಡುಗೊರೆಯಿಂದ ಅಭಿಮಾನಿಗಳು ಫಿದಾ ಆಗಿದ್ದಾರೆ.

ಇದನ್ನೂ ಓದಿ: RCB v/s RR: ತವರಿನಿಂದ ಹೊರಗೆ ಆರ್​ಸಿಬಿಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ? ಇಲ್ಲಿದೆ ಫುಲ್ ಡಿಟೇಲ್ಸ್

ಟಿ20 ವಿಶ್ವಕಪ್ 2026ರ ಫೈನಲ್‌ನಲ್ಲಿ ಭಾರತಕ್ಕೆ ಗೆಲುವು ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಂಜು, ಪ್ರಸ್ತುತ ಐಪಿಎಲ್‌ನಲ್ಲಿ ಸಿಎಸ್‌ಕೆ ಪರ ಸತತ ಮೂರು ಪಂದ್ಯಗಳಲ್ಲಿ (6, 7, 9 ರನ್) ವೈಫಲ್ಯ ಅನುಭವಿಸಿದ್ದಾರೆ. ಸಿಎಸ್‌ಕೆ ತಂಡ ಕೂಡ ಸತತ ಮೂರು ಸೋಲುಗಳಿಂದ ಕಂಗೆಟ್ಟಿದ್ದು, ಏಪ್ರಿಲ್ 11ರ ಶನಿವಾರದಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿಯಲಿದೆ.

ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Kaalashtami: ಸಾಲ ಮತ್ತು ಭಯದಿಂದ ಮುಕ್ತಿ ಬೇಕೆ? ಇಂದು ಕಾಲಾಷ್ಟಮಿ ದಿನ ಮರೆಯದೇ ಹೀಗೆ ಮಾಡಿ

ಕಾಲಾಷ್ಟಮಿಯ ಮಹತ್ವ ಮತ್ತು ಆಚರಣೆಯ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಹಬ್ಬ ಹರಿದಿನಗಳು, ವಿಶೇಷ ಕಾರ್ಯಕ್ರಮಗಳು ಮತ್ತು ಶುಭ ಕಾರ್ಯಗಳ ನಡುವೆ, ಕಾಲಾಷ್ಟಮಿಯು ಮಹತ್ತರವಾದ ಪ್ರಭಾವ, ಪರಿವರ್ತನೆ, ಅದೃಷ್ಟ ಮತ್ತು ಸಂಕಟ ನಿವಾರಣೆಯನ್ನು ತರುವ ವಿಶೇಷ ಪರ್ವಕಾಲವಾಗಿದೆ. ಇದು ಭಕ್ತರಲ್ಲಿ ನಂಬಿಕೆಯನ್ನು ಮೂಡಿಸುತ್ತದೆ.

ಪ್ರತಿ ಚಂದ್ರಮಾನ ಮಾಸದ ಕೃಷ್ಣ ಪಕ್ಷದ ಎಂಟನೇ ದಿನವನ್ನು (ಅಷ್ಟಮಿ ತಿಥಿ) ಕಾಲಾಷ್ಟಮಿ ಎಂದು ಆಚರಿಸಲಾಗುತ್ತದೆ. ಈ ದಿನ ಶಿವನ ಉಗ್ರ ರೂಪವಾದ ಕಾಲಭೈರವನನ್ನು ಆರಾಧಿಸಲಾಗುತ್ತದೆ, ಇವನು ಬೇಗನೆ ಫಲಿತಾಂಶಗಳನ್ನು ನೀಡುವ ಶಕ್ತಿ ಹೊಂದಿದ್ದಾನೆ. ಕಾಲಭೈರವನು 64 ರೂಪಗಳನ್ನು ಹೊಂದಿದ್ದು, ಕಾಲದ ಅಧಿಪತಿಯಾಗಿದ್ದಾನೆ. ಕಾಲಾಷ್ಟಮಿಯಂದು ಆಚರಣೆ ಮಾಡುವ ವಿಧಿ ವಿಧಾನಗಳು ಮತ್ತು ಅದರ ಮಹತ್ವವನ್ನು ತಿಳಿಯುವುದು ಅವಶ್ಯಕ. ಉದಾಹರಣೆಗೆ, ಏಪ್ರಿಲ್ 2026ರಲ್ಲಿ, ಅಷ್ಟಮಿ ತಿಥಿಯು ಒಂಬತ್ತನೇ ತಾರೀಕು ರಾತ್ರಿ 9 ಗಂಟೆ 13 ನಿಮಿಷಕ್ಕೆ ಪ್ರಾರಂಭವಾಗಿ, ಹತ್ತನೇ ತಾರೀಕು ರಾತ್ರಿ 11 ಗಂಟೆ 15 ನಿಮಿಷದವರೆಗೆ ಇರುತ್ತದೆ.

ಕಾಲಾಷ್ಟಮಿ ದಿನವು ಶುಭ ಫಲಗಳಿಗಾಗಿ ಅತ್ಯಂತ ಪ್ರಮುಖವಾಗಿದೆ. ಮನೆ ಕಟ್ಟುವ ಆಸೆ, ವಿವಾಹ, ಮಕ್ಕಳ ಪ್ರಾಪ್ತಿ, ಉತ್ತಮ ಆರೋಗ್ಯ, ಶತ್ರುಗಳ ಸಂಹಾರ, ಮತ್ತು ರಾಜಕೀಯ ಸ್ಥಾನಮಾನದಂತಹ ಎಲ್ಲ ಆಸೆ ಆಕಾಂಕ್ಷೆಗಳನ್ನು ಈಡೇರಿಸಲು ಈ ದಿನದಂದು ಪೂಜೆ ಸಲ್ಲಿಸಲಾಗುತ್ತದೆ. ಈ ದಿನದಂದು ಶಿವ ಚಾಲೀಸಾ, ಶಿವ ಅಷ್ಟೋತ್ತರ, ಭೈರವ ಚಾಲೀಸಾ, ಮತ್ತು ಭೈರವ ಅಷ್ಟೋತ್ತರ ಮಂತ್ರಗಳನ್ನು ಪಠಿಸುವುದು ಶ್ರೇಷ್ಠ. ಶಿವನು ಬ್ರಹ್ಮನ ಅಹಂಕಾರವನ್ನು ಕಡಿಮೆ ಮಾಡಲು ಮತ್ತು ಜ್ಞಾನೋದಯ ಮಾಡಿಸಲು ಕಾಲಭೈರವನ ರೂಪವನ್ನು ತಾಳಿದನೆಂಬ ಪ್ರತೀತಿ ಇದೆ. ಕಾಲ ಎಂದರೆ ಸಮಯ ಮತ್ತು ಭೈರವ ಎಂದರೆ ಭಯವನ್ನು ಹೋಗಲಾಡಿಸುವವನು. ಹೀಗಾಗಿ, ಕಾಲಭೈರವನು ಸಮಯದಲ್ಲಿನ ಭಯವನ್ನು ನಿವಾರಿಸುವವನಾಗಿದ್ದಾನೆ.

ಕಾಲಭೈರವ ಆರಾಧನೆಯು ಭಯ, ಆತಂಕ, ಸಾಲಬಾದೆ, ರಾಜಕೀಯ ಪ್ರಗತಿ, ಸ್ಥಾನಮಾನ, ಮತ್ತು ನ್ಯಾಯಾಲಯದ ಪ್ರಕರಣಗಳಿಂದ ಉಂಟಾಗುವ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಭೈರವನನ್ನು ಕ್ಷೇತ್ರ ಪಾಲಕ ಅಂದರೆ ರಕ್ಷಕ ಎಂದು ಕರೆಯಲಾಗುತ್ತದೆ. ಜ್ಯೋತಿಷ್ಯದ ಪ್ರಕಾರ, ಶನಿ ದೋಷ, ರಾಹು ದೋಷ, ಅರ್ಧಾಷ್ಟಮ ಶನಿ, ಅಷ್ಟಮ ಶನಿ, ಮತ್ತು ಪಂಚಮ ಶನಿ ದೋಷಗಳಿಂದ ಬಳಲುತ್ತಿರುವವರು ಈ ದಿನ ಕಾಲಭೈರವನ ಪೂಜೆ ಮಾಡುವುದರಿಂದ ವಿಶೇಷ ಫಲಗಳನ್ನು ಪಡೆಯುತ್ತಾರೆ. ಭೈರವನು ಶಿಸ್ತಿನ ಸಿಪಾಯಿಯಂತೆ, ತನ್ನ ಭಕ್ತರನ್ನು ಸಂಕಷ್ಟಗಳಿಂದ ಕಾಪಾಡುತ್ತಾನೆ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಕಾಲಾಷ್ಟಮಿ ಆಚರಣೆಯ ವಿಧಿ ವಿಧಾನಗಳು: ಬೆಳಗಿನ ಜಾವ ಸ್ನಾನ ಮಾಡಿ, ಶುದ್ಧರಾಗಬೇಕು. ಭೈರವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವುದು ಅಥವಾ ಮನೆಯಲ್ಲಿಯೇ ದೇವರನ್ನು ಸ್ಥಾಪಿಸಿ ಮಾನಸಿಕವಾಗಿ ಜಪ ಮಾಡುವುದು ಉತ್ತಮ. ಸಂಧ್ಯಾಕಾಲದಲ್ಲಿ ಭೈರವೇಶ್ವರ ದೇವಸ್ಥಾನದಲ್ಲಿ ಸಾಸಿವೆ ಎಣ್ಣೆ ದೀಪವನ್ನು ಹಚ್ಚುವುದು ಅತ್ಯಂತ ಶುಭಕರ. ಇದಲ್ಲದೆ, ಕಾಲಭೈರವನ ವಾಹನವಾದ ನಾಯಿಗಳಿಗೆ ಬಿಸ್ಕತ್ತು, ರೊಟ್ಟಿ ಅಥವಾ ಚಪಾತಿಯನ್ನು ನೀಡುವುದು ಬಹಳ ಪುಣ್ಯ. ಇಡೀ ದಿನ “ಓಂ ಕಾಲಭೈರವಾಯ ನಮಃ” ಎಂಬ ಮಂತ್ರವನ್ನು ಪಠಿಸುವುದರಿಂದ ಸಕಲ ಸಂಕಟಗಳು ದೂರವಾಗಿ ಶುಭ ಫಲಗಳು ಪ್ರಾಪ್ತವಾಗುತ್ತವೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದ್ವಿತೀಯ ಪಿಯುಸಿಯಲ್ಲಿ 97 ಪರ್ಸೆಂಟ್ ಮಾಡಿದ ಅಂಕಿತಾ ಯಾರು?

Source link

ಕಿವಿ ಕೇಳಲ್ಲ, ಮಾತೂ ಬರಲ್ಲ! ಆದ್ರೂ ಸ್ನೇಹಿತನ ಹೆಂಡತಿ ಮೇಲೆ ಕಣ್ಣು ಹಾಕಿದ ವ್ಯಕ್ತಿ ಮಾಡಿದ್ದೇನು ಗೊತ್ತಾ?

ಮೈಸೂರು, ಏಪ್ರಿಲ್ 10: ಸಮಾಜದಲ್ಲಿ ವಿಶೇಷ ಚೇತನರಿಗೆ (Specially Abled) ಸೌಲಭ್ಯಗಳ ಜೊತೆ ಗೌರವವನ್ನೂ ನೀಡಲಾಗುತ್ತದೆ. ಎಲ್ಲರಂತಲ್ಲದ ಅವರನ್ನು ಕರುಣೆಯಿಂದಲೇ ನೋಡಲಾಗುತ್ತದೆ. ಅಂಗವೈಕಲ್ಯ ಹೊಂದಿದವರು ಇನ್ನೇನು ಅಪರಾಧ ಮಾಡಲು ಸಾಧ್ಯ ಎಂದು ಯೋಚಿಸುವವರನ್ನು ಬೆಚ್ಚಿಬೀಳಿಸುವ ಘಟನೆ ಜಿಲ್ಲೆಯ ನಂಜನಗೂಡು (Nanjanagudu) ತಾಲೂಕಿನ ದೇವಿರಮ್ಮನಹಳ್ಳಿಯಲ್ಲಿ ನಡೆದಿದೆ. ಮಾನವನ ವಿಕೃತ ಮನೋಭಾವಕ್ಕೆ ಅಂಗವೈಕಲ್ಯ ಅಡ್ಡಿಯಾಗುವುದಿಲ್ಲ ಎಂಬುದು ಈ ಪ್ರಕರಣದಲ್ಲಿ ಸಾಭೀತಾಗಿದೆ.

ಸ್ನೇಹಿತನ ಮಡದಿಯನ್ನೇ ಮದುವೆಯಾಗಲು ಬಯಸಿದ್ದ

ಸ್ವಾಮಿ ಮತ್ತು ಆತನ ಪತ್ನಿ ಸವಿತಾ ಇಬ್ಬರೂ ವಿಶೇಷ ಚೇತನರು. ಕಿವಿ ಕೇಳುವುದಿಲ್ಲ, ಮಾತು ಬರುವುದಿಲ್ಲ. ಆದರೂ ಸಂಸಾರ ಸಾಗಿಸುತ್ತಿದ್ದರು. ಆದರೆ ಸ್ವಾಮಿ ಕಳೆದ ಫೆಬ್ರವರಿ 12 ರಿಂದ ಕಾಣೆಯಾಗಿದ್ದ. ಈ ಬಗ್ಗೆ ಸವಿತಾ ಮಾರ್ಚ್ 4 ರಂದು ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಳು. ದಂಪತಿ ಅಂಗವಿಕಲರಾದ ಕಾರಣ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿದ್ದರು. ಸ್ವಾಮಿಯನ್ನು ಹತ್ಯೆ ಮಾಡಲಾಗಿದ್ದು, ಕೊಲೆ ಮಾಡಿದವರೂ ಸಹ ವಿಕಲಚೇತನರೆ ಎಂಬ ಸತ್ಯ ಪೊಲೀಸರನ್ನೇ ದಂಗಾಗಿಸಿದೆ.

ಸ್ವಾಮಿಯ ಸ್ನೇಹಿತ ಶ್ರೀನಿವಾಸ್‌ ಸಹ ಮಾತು ಬರದ, ಕಿವಿ ಕೇಳದ ವ್ಯಕ್ತಿ. ಇಬ್ಬರೂ ಕಾಲೇಜಿನಲ್ಲಿ ಒಟ್ಟಿಗೆ ಓದಿದವರು. ಹೀಗಿರುವಾಗ ಸ್ವಾಮಿಯ ಪತ್ನಿಯ ಮೇಲೆ ಶ್ರೀನಿವಾಸ್ ಕಣ್ಣು ಬಿದ್ದಿತ್ತು. ಹೇಗಾದರೂ ಆಕೆಯನ್ನು ಮದುವೆಯಾಗಲೇಬೇಕೆಂದು ಆತ ನಿರ್ಧಾರ ಮಾಡಿಕೊಂಡಿದ್ದ. ಆಕೆಯ ಜೊತೆ ನಿರಂತರವಾಗಿ ವೀಡಿಯೋ ಕಾಲ್​ ಸಂಭಾಷಣೆಯನ್ನೂ ನಡೆಸುತ್ತಿದ್ದ ಆತ, ಅಗತ್ಯವಿದ್ದಾಗ ಹಣ ಸಹಾಯವನ್ನೂ ಮಾಡಿದ್ದ ಎನ್ನಲಾಗಿದೆ.

ಆರೋಪಿಯ ಬಂಧನ

ಫೆಬ್ರವರಿ 12ರಂದು ಕುಣಿಗಲ್ ತಾಲೂಕಿನ ಅಮೃತ್ತೂರಿಗೆ ಹಣ ಕೊಡುತ್ತೇನೆ ಎಂದು ಸ್ವಾಮಿಯನ್ನು ಕರೆಸಿದ್ದ ಆರೋಪಿ, ಆತನಿಗೆ ಮದ್ಯ ಕುಡಿಸಿ ಕೊಲೆ ಮಾಡಿದ್ದಾನೆ. ನಂತರ ಶವವನ್ನು ಬಾವಿಗೆ ಎಸೆದು ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾನೆ. ಪೊಲೀಸರು ವಾಕ್ ಮತ್ತು ಶ್ರಾವಣ ತಜ್ಞರ ಸಹಾಯದಿಂದ ವಿಡಿಯೋ ಕಾಲ್ ಮಾಹಿತಿ ಸಂಗ್ರಹಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೊಟ್ಟೆಗೆ ಕ್ಲಿಪ್ ಹಾಕಿಕೊಂಡು ನಟನೆ: ರಣ್ವೀರ್ ಸಿಂಗ್ ಡೆಡಿಕೇಷನ್ ಎಂಥಹದ್ದು ಗೊತ್ತೆ?

ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಅಭಿನಯದ ‘ಧುರಂಧರ್ 2’ ಸಿನಿಮಾ ದೊಡ್ಡ ಹಿಟ್ ಆಗಿದೆ. ಸತತ ಸೋಲಿನಿಂದ ಕಂಗೆಟ್ಟಿದ್ದ ರಣ್ವೀರ್ ಸಿಂಗ್​​ಗೆ ‘ಧುರಂಧರ್’ ಸರಣಿ ದೊಡ್ಡ ಗೆಲುವು ನೀಡಿದೆ, ಮಾತ್ರವಲ್ಲದೆ ತಾವೊಬ್ಬ ಸ್ಟಾರ್ ನಟ ಎಂಬುದನ್ನು ರಣ್ವೀರ್ ಮತ್ತೆ ಬಾಲಿವುಡ್​​ಗೆ ಸಾರಿ ಹೇಳಿದ್ದಾರೆ. ಸಿನಿಮಾನಲ್ಲಿ ರಣ್ವೀರ್ ನಟನೆಯ ಬಗ್ಗೆ ಬಹಳ ಮೆಚ್ಚುಗೆ ವ್ಯಕ್ತವಾಗಿದೆ. ಅದರಲ್ಲೂ ‘ಧುರಂಧರ್ 2’ ಕ್ಲೈಮ್ಯಾಕ್ಸ್ ವೇಳೆ ಸಾಕಷ್ಟು ದೈಹಿಕ ನೋವು ಅನುಭವಿಸಿ ನಟಿಸಿದ ರೀತಿಯ ಬಗ್ಗೆ ಅತೀವ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ಇದು ರಣ್ವೀರ್ ಸಿಂಗ್​​ಗೆ ಹೊಸದೇನೂ ಅಲ್ಲ. ನಟನೆ ಆರಂಭಿಸಿದಾಗಿನಿಂದಲೂ ಆ ಡೆಡಿಕೇಷನ್, ಪಾತ್ರದ ಬಗೆಗಿನ ನಿಷ್ಠೆ ಹಾಗೆಯೇ ಇದೆ. ಇದನ್ನು ಉದಾಹರಣೆ ಸಹಿತವಾಗಿ ನಿರ್ದೇಶಕ ಅನುರಾಗ್ ಕಶ್ಯಪ್ ವಿವರಿಸಿದ್ದಾರೆ.

ರಣ್ವೀರ್ ಸಿಂಗ್ ನಾಯಕನಾಗಿ ನಟಿಸಿದ ಎರಡನೇ ಸಿನಿಮಾ ‘ಲುಟೇರ’ 2013 ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ನಿರ್ದೇಶಿಸಿದ್ದು ವಿಕ್ರಮಾದಿತ್ಯ ಮೋಟ್ವಾನಿ, ನಿರ್ಮಾಣ ಮಾಡಿದ್ದು ಅನುರಾಗ್ ಕಶ್ಯಪ್. ಇದೀಗ ಅನುರಾಗ್ ಕಶ್ಯಪ್ ಅವರು ತೆಲುಗಿನ ‘ಡಕೈತ್’ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಪ್ರಚಾರದ ವೇಳೆ ‘ಧುರಂಧರ್’ ಬಗ್ಗೆ ಮಾತನಾಡುತ್ತಾ, ರಣ್ವೀರ್ ಸಿಂಗ್ ಅವರ ಡೆಡಿಕೇಶನ್ ಎಂಥಹದ್ದು ಎಂದು ಹೇಳಿದ್ದಾರೆ.

‘ಲುಟೇರಾ’ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯದಲ್ಲಿ ರಣವೀರ್ ಅವರ ಪಾತ್ರಕ್ಕೆ ಗುಂಡು ತಗಲುತ್ತದೆ. ಆ ಗುಂಡೇಟಿನ ನೈಜ ನೋವನ್ನು ಅನುಭವಿಸಲು ಮತ್ತು ಅದನ್ನು ತೆರೆಯ ಮೇಲೆ ಸರಿಯಾಗಿ ಬಿಂಬಿಸಲು ರಣವೀರ್ ಯಾರಿಗೂ ಹೇಳದಂತೆ ತಮ್ಮ ಹೊಟ್ಟೆಗೆ ಒಂದು ಕ್ಲಿಪ್ ಅನ್ನು ಜೋರಾಗಿ ಚುಚ್ಚಿಕೊಂಡಿದ್ದರಂತೆ. ‘ಅವರು ನಟನೆಯಲ್ಲಿ ಎಷ್ಟು ಮಗ್ನರಾಗಿದ್ದರೆಂದರೆ, ಆ ಕ್ಲಿಪ್‌ನಿಂದಾದ ಗಾಯದ ತೀವ್ರತೆಯಿಂದಾಗಿ ನಾವು ಅವರನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾಯಿತು. ತಮಗೆ ನೋವಾಗುತ್ತಿದ್ದರೂ ಅವರು ಯಾರೊಂದಿಗೂ ಹಂಚಿಕೊಳ್ಳಲಿಲ್ಲ. ಅವರಿಗೆ ಅಲ್ಲಿಂದ ಕದಲಲು ಸಾಧ್ಯವಾಗದಿದ್ದಾಗ ಮಾತ್ರ ನಮಗೆ ವಿಷಯ ತಿಳಿಯಿತು ಎಂದು ಅನುರಾಗ್ ಕಶ್ಯಪ್ ಹೇಳಿದ್ದಾರೆ.

ಇದನ್ನೂ ಓದಿ;ಧುರಂಧರ್ ರಣವೀರ್ ಸಿಂಗ್ ಸಿನಿಮಾ ಎಂದು ಹೇಳಲು ಸಾಧ್ಯವಿಲ್ಲ; ಕರೀನಾ ಕಪೂರ್

‘ಧುರಂಧರ್’ ದೊಡ್ಡ ಸಿನಿಮಾ ‘ಲುಟೇರ’, ‘ಧುರಂಧರ್’ ಅಷ್ಟು ದೊಡ್ಡ ಸಿನಿಮಾ ಅಲ್ಲ, ಅಷ್ಟು ಕಲೆಕ್ಷನ್ ಸಹ ಮಾಡಲಿಲ್ಲ ಆದರೆ ರಣ್ವೀರ್ ಸಿಂಗ್ ಅವರ ಪಾತ್ರದ ನಿಷ್ಠೆ ಬದಲಾಗುವುದಿಲ್ಲ. ಅವರು ಆಗಲೂ ಹಾಗೆಯೇ ಇದ್ದರು. ಅವರು ತಮ್ಮ ಪಾತ್ರಕ್ಕಾಗಿ ಏನು ಬೇಕಾದರೂ ಮಾಡಲು ತಯಾರಾಗಿಬಿಡುತ್ತಾರೆ’ ಎಂದಿದ್ದಾರೆ ಅನುರಾಗ್ ಕಶ್ಯಪ್.

ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಕಳೆದ ವರ್ಷ ಬಿಡುಗಡೆ ಆಗಿ 1300 ಕೋಟಿ ಮೊತ್ತ ಕಲೆ ಹಾಕಿತ್ತು. ಅದರ ಮುಂದುವರಿದ ಭಾಗ ‘ಧುರಂಧರ್: ದಿ ರಿವೆಂಜ್’ (ಮಾರ್ಚ್ 19 ರಂದು ಬಿಡುಗಡೆ) ಈಗಾಗಲೇ 1600 ಕೋಟಿ ರೂ.ಗಳಿಗೂ ಅಧಿಕ ಗಳಿಕೆ ಮಾಡಿ ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಬರೆದಿವೆ. ಆದಿತ್ಯ ಧರ್ ನಿರ್ದೇಶನದ ಈ ಚಿತ್ರದಲ್ಲಿ ಅರ್ಜುನ್ ರಾಂಪಾಲ್, ಸಂಜಯ್ ದತ್ ಮತ್ತು ಆರ್ ಮಾಧವನ್ ಕೂಡ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

“ಬೆಂಗಳೂರಿನ ಹೋಟೆಲ್ ಉದ್ಯಮಿಗಳಿಗೆ ಗುಡ್ ನ್ಯೂಸ್!”: ಮತ್ತೆ ಆರಂಭವಾಗಲಿವೆ ಮುಚ್ಚಿದ್ದ ಹೋಟೆಲ್‌ಗಳು

ಬೆಂಗಳೂರು, ಏ.10: ಬೆಂಗಳೂರಿನಲ್ಲಿ ದಿನನಿತ್ಯ ಎಲ್​​ಪಿಜಿ ಗ್ಯಾಸ್​​ ಬಗ್ಗೆ ಒಂದೊಂದು ಗೊಂದಲವಾಗಿತ್ತು. ಹೊಟೇಲ್​​​, ಹಲವಾರು ರೆಸ್ಟೋರೆಂಟ್‌ಗಳು ತುಂಬಾ ಸಂಕಷ್ಟಕ್ಕೆ ಒಳಗಾಗಿತ್ತು. ಜನರಿಗೆ ರುಚಿರುಚಿಯಾದ ತಿಂಡಿ, ಊಟಗಳನ್ನು ಮಾಡಲಾಗುತ್ತಿಲ್ಲ ಎಂಬ ಕೊರಗು ಕೂಡ ಅವರನ್ನು ಕಾಡುತ್ತಿತ್ತು. ಇದೀಗ ಕೇಂದ್ರ ಬೆಂಗಳೂರು ಹೊಟೇಲ್​​​, ರೆಸ್ಟೋರೆಂಟ್‌ಗಳಿಗೆ ಬಿಗ್​​ ಗುಡ್​​​​ ನ್ಯೂಸ್​​​​ವೊಂದನ್ನು ನೀಡಿದೆ. ಕೇಂದ್ರ ಸರ್ಕಾರವು ತಮ್ಮ ಎಲ್‌ಪಿಜಿ ಅವಶ್ಯಕತೆಗಳಲ್ಲಿ 70% ವರೆಗೆ ಪುನಃಸ್ಥಾಪಿಸುವುದಾಗಿ ಘೋಷಿಸಿದೆ ಇದರಿಂದ ಹೊಟೇಲ್ ಉದ್ಯಮಕ್ಕೆ ಬೂಸ್ಟ್​​​ ನೀಡಿದಂತಾಗಿದೆ. ನಗರದಲ್ಲಿ ಹಲವಾರು ರೆಸ್ಟೋರೆಂಟ್‌ಗಳು ಮತ್ತು ತಿನಿಸುಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟ ಹಿನ್ನೆಲೆಯಲ್ಲಿ ಈ ಕ್ರಮವನ್ನು ಕೇಂದ್ರ ಸರ್ಕಾರ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ಕೇಂದ್ರವು ವಾಣಿಜ್ಯ ಮತ್ತು ಕೈಗಾರಿಕಾ ಬಳಕೆದಾರರಿಗಿಂತ ದೇಶೀಯ ಗೃಹೋಪಯೋಗಿ ಪೂರೈಕೆಗೆ ಆದ್ಯತೆ ನೀಡಿದ ನಂತರ ಈ ಬಿಕ್ಕಟ್ಟು ಶುರುವಾಗಿತ್ತು. ಆತಿಥ್ಯ ಮತ್ತು ಉತ್ಪಾದನಾ ವಲಯಗಳಾದ್ಯಂತದ ವ್ಯವಹಾರಗಳು ಕಾರ್ಯನಿರ್ವಹಿಸಲು ಹೆಣಗಾಡುತ್ತಿದ್ದವು. ಇದಿಗ ದೇಶಾದ್ಯಂತದ ಕೈಗಾರಿಕಾ ಘಟಕಗಳಿಗೆ ಎಲ್‌ಪಿಜಿಯನ್ನು ನೀಡುವ ಮೂಲಕ ಎರಡು ಮಹತ್ವದ ಕ್ರಮಗಳನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಈ ವಾರ ಘೋಷಿಸಿದೆ. ಒಂದು ಅಡುಗೆ ಅನಿಲ ಪಡೆಯಲು ಕಷ್ಟಪಡುವ ವಲಸೆ ಕಾರ್ಮಿಕರಿಗೆ, ಎರಡನೇಯದ್ದು ಹೊಟೇಲ್​​​​, ರೆಸ್ಟೋರೆಂಟ್‌ಗಳಿಗೆ ನೀಡಲು ಮುಂದಾಗಿದೆ.

ಕೈಗಾರಿಕಾ ಘಟಕಗಳು ಈಗ ತಮ್ಮ ಎಲ್‌ಪಿಜಿ ಅವಶ್ಯಕತೆಗಳಲ್ಲಿ 70% ವರೆಗೆ ಪಡೆಯಲಿವೆ ಎಂದು ಸಚಿವಾಲಯ ಬುಧವಾರ ಘೋಷಿಸಿತು, ಇಂಧನ ಪೂರೈಕೆ ಒತ್ತಡವನ್ನು ಕಡಿಮೆ ಮಾಡಲು ಮತ್ತು ಉತ್ಪಾದನೆಯನ್ನು ಸರಾಗವಾಗಿ ನಡೆಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಇನ್ನು ಕೇಂದ್ರ ಸರ್ಕಾರ ನೀಡಿರುವ ಈ ನಿರ್ದೇಶನವು ಔಷಧಗಳು, ಆಹಾರ ಸಂಸ್ಕರಣೆ, ಪಾಲಿಮರ್‌ಗಳು, ಕೃಷಿ, ಪ್ಯಾಕೇಜಿಂಗ್, ಬಣ್ಣ, ಉಕ್ಕು, ಲೋಹಗಳು, ಸೆರಾಮಿಕ್ಸ್, ಗಾಜು, ಫೌಂಡರೀಸ್, ಫೋರ್ಜಿಂಗ್, ಯುರೇನಿಯಂ, ಭಾರ ನೀರು, ಬೀಜಗಳು, ಏರೋಸಾಲ್ ತಯಾರಿಕೆ ಮತ್ತು ಇನ್ನೂ ಹೆಚ್ಚಿನವುಗಳನ್ನು ಒಳಗೊಂಡಿದೆ.

ಇದನ್ನೂ ಓದಿ: ಕಾರ್ಪೊರೇಟ್ ಕೆಲಸ ತೊರೆದು ಕ್ಲೌಡ್ ಕಿಚನ್ ಶುರು ಮಾಡಿದ ಯುವ ಉದ್ಯಮಿ!

ಸಚಿವಾಲಯದ ಸುತ್ತೋಲೆಯ ಪ್ರಕಾರ, ಕೈಗಾರಿಕಾ ಘಟಕಗಳು ಈಗ ಮಾರ್ಚ್ 2026 ರ ಪೂರ್ವದ ಬೃಹತ್ ದೇಶೀಯವಲ್ಲದ LPG ಬಳಕೆಯ ಮಟ್ಟಗಳಲ್ಲಿ 70% ವರೆಗೆ ಪಡೆಯಬಹುದು, ಇದು ದಿನಕ್ಕೆ ಒಟ್ಟಾರೆ ವಲಯ ಮಿತಿ 0.2 TMT ಗೆ ಒಳಪಟ್ಟಿರುತ್ತದೆ. ನೈಸರ್ಗಿಕ ಅನಿಲವು ಪರ್ಯಾಯವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವಿಶೇಷ ಉದ್ದೇಶಗಳಿಗಾಗಿ LPG ಬಳಸುವ ಘಟಕಗಳಿಗೆ ಆದ್ಯತೆ ನೀಡುವುದಾಗಿ ಸಚಿವಾಲಯ ಹೇಳಿದೆ. ಇದರ ಜತೆಗೆ ದೇಶಾದ್ಯಂತ ವಲಸೆ ಕಾರ್ಮಿಕರಿಗೂ ಹೆಚ್ಚಿನ ಅಡುಗೆ ಎಲ್​​​ಪಿಜಿಗಳನ್ನು ಮುಂದಾಗಿದೆ. 5 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯನ್ನು ಮಾಡಬೇಕು ಎಂದು ಹೇಳಿದೆ. ಸಣ್ಣ ಸಿಲಿಂಡರ್‌ಗಳು ಉಚಿತ ವ್ಯಾಪಾರ LPG (FTL) ವರ್ಗದ ಅಡಿಯಲ್ಲಿ ಬರುತ್ತವೆ ಮತ್ತು LPG ವಿತರಣಾ ಏಜೆನ್ಸಿಗಳು, ಆಯ್ದ ಪೆಟ್ರೋಲ್ ಪಂಪ್‌ಗಳು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಖರೀದಿಗೆ ಲಭ್ಯವಿದೆ. ಗ್ರಾಹಕರು ಒಂದನ್ನು ಖರೀದಿಸಲು ಸರ್ಕಾರ ನೀಡುವ ಯಾವುದೇ ಗುರುತಿನ ಚೀಟಿಯನ್ನು ತೋರಿಸಿದರೆ ಸಾಕು ಎಂದು ಹೇಳಿದೆ.
ಇಂಡೇನ್ ಎಫ್‌ಟಿಎಲ್ ಸಿಲಿಂಡರ್‌ನ ಬೆಲೆ 1,505 ರೂ., ನಂತರದ ಪ್ರತಿ ರೀಫಿಲ್ ಬೆಲೆ 630 ರೂ.. ಎಚ್‌ಪಿ ಎಫ್‌ಟಿಎಲ್ ಸಿಲಿಂಡರ್‌ಗಳ ಬೆಲೆ 1,519 ರೂ., ರೀಫಿಲ್‌ಗಳು 631 ರೂ.ಗೆ ಲಭ್ಯವಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಾರ್ಕಿಂಗ್ ವಿಚಾರಕ್ಕೆ ಜಗಳ, ಡ್ರೈವರ್ ತಲೆ ಕತ್ತರಿಸಿದ ವ್ಯಕ್ತಿ, ಪೊಲೀಸರೆದುರೇ ಆರೋಪಿಯನ್ನು ಕೊಂದ ಜನ

ಪಾಟ್ನಾ, ಏಪ್ರಿಲ್ 10: ಕಾನೂನು ಕೈಗೆತ್ತಿಕೊಂಡರೆ ಆಗುವ ಅನಾಹುತಕ್ಕೆ ಬಿಹಾರದ ಅರಾರಿಯಾ ಜಿಲ್ಲೆಯ ಫೋರ್ಬ್ಸ್‌ಗಂಜ್ ಸಾಕ್ಷಿಯಾಗಿದೆ. ಗುರುವಾರ ಇಲ್ಲಿ ನಡೆದ ಅವಳಿ ಕೊಲೆ(Murder)ಗಳು ಕೇವಲ ಕ್ರೌರ್ಯದ ಪರಾಕಾಷ್ಠೆಯಲ್ಲ, ಬದಲಿಗೆ ಕಾನೂನು ಸುವ್ಯವಸ್ಥೆಯ ವೈಫಲ್ಯದ ಪ್ರತಿಬಿಂಬದಂತಿದೆ. ಘಟನೆಯ ಆರಂಭವಾಗಿದ್ದು ಒಂದು ಸಣ್ಣ ಪಾರ್ಕಿಂಗ್ ವಿವಾದದಿಂದ. ರಸ್ತೆಬದಿಯ ವ್ಯಾಪಾರಿ ರವಿ ಚೌಹಾಣ್ ಹಾಗೂ ಪಿಕಪ್ ಚಾಲಕ ಅಲಿ ಹುಸೇನ್ ನಡುವೆ ವಾಹನ ನಿಲ್ಲಿಸುವ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ‘ಈ ಸಣ್ಣ ಜಗಳ ವಿಕೋಪಕ್ಕೆ ತಿರುಗಿದಾಗ, ರವಿ ಚೌಹಾಣ್ ಅತ್ಯಂತ ಕ್ರೂರವಾಗಿ ಅಲಿ ಹುಸೇನ್ ಮೇಲೆ ಹಲ್ಲೆ ನಡೆಸಿ, ನೂರಾರು ಜನರ ಮುಂದೆಯೇ ಆತನ ಶಿರಚ್ಛೇದ ಮಾಡಿದ್ದಾನೆ.

ಅಷ್ಟಕ್ಕೇ ನಿಲ್ಲದ ಹಂತಕ, ಕತ್ತರಿಸಿದ ತಲೆಯನ್ನು ಹಿಡಿದು ರಸ್ತೆಯಲ್ಲಿ ಮೆರವಣಿಗೆ ಮಾಡಿ ಅಟ್ಟಹಾಸ ಮೆರೆದಿದ್ದಾನೆ. ನಂತರ ಶವವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಈ ಘೋರ ಕೃತ್ಯದ ಸುದ್ದಿ ತಿಳಿಯುತ್ತಿದ್ದಂತೆಯೇ ಅಲಿ ಹುಸೇನ್ ಸಂಬಂಧಿಕರು ಮತ್ತು ಸ್ಥಳೀಯರು ಆಕ್ರೋಶಗೊಂಡರು. ಚೌಹಾಣ್ ಅಡಗಿದ್ದ ಜಾಗಕ್ಕೆ ನುಗ್ಗಿದ ಜನಸಮೂಹ, ಆತನನ್ನು ಎಳೆದೊಯ್ದು ಅದೇ ಅಪರಾಧ ನಡೆದ ಸ್ಥಳಕ್ಕೆ ತಂದಿದೆ. ಪೊಲೀಸರು ಸ್ಥಳದಲ್ಲಿದ್ದರೂ ಸಹ, ಕೋಪಗೊಂಡ ಗುಂಪು ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿರಲಿಲ್ಲ.

ಪೊಲೀಸರ ಕಣ್ಣೆದುರೇ ರವಿ ಚೌಹಾಣ್ ಮೇಲೆ ಕೋಲು ಮತ್ತು ಕಬ್ಬಿಣದ ರಾಡ್‌ಗಳಿಂದ ಭೀಕರವಾಗಿ ಹಲ್ಲೆ ನಡೆಸಲಾಗಿದೆ. ರಕ್ತಪಿಪಾಸುಗಳಂತೆ ವರ್ತಿಸಿದ ಗುಂಪು ಆತನನ್ನು ಅಲ್ಲಿಯೇ ಹೊಡೆದು ಕೊಂದಿದೆ.

ಮತ್ತಷ್ಟು ಓದಿ: ಬೆಳಗಾವಿ ಸಿದ್ದೇಶ್ವರ ಜಾತ್ರೆಯಲ್ಲಿ ರಕ್ತದೊಕುಳಿ: ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

ಒಂದೇ ದಿನ ನಡೆದ ಈ ಎರಡು ಭೀಕರ ಕೊಲೆಗಳಿಂದಾಗಿ ಇಡೀ ಪ್ರದೇಶ ಸ್ಮಶಾನ ಸದೃಶವಾಗಿದೆ. ಪೊಲೀಸರು ಮತ್ತು ಸಾರ್ವಜನಿಕರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡು ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ಇಡೀ ಪ್ರದೇಶದಲ್ಲಿ ಗಸ್ತು ಚುರುಕುಗೊಳಿಸಲಾಗಿದ್ದು, ಎರಡು ಕಡೆಯ ಹತ್ಯೆಗಳ ಬಗ್ಗೆ ತನಿಖೆ ಆರಂಭಿಸಲಾಗಿದೆ. ಒಂದು ಸಣ್ಣ ಪಾರ್ಕಿಂಗ್ ವಿವಾದವು ಎರಡು ಕುಟುಂಬಗಳನ್ನು ಬೀದಿಪಾಲು ಮಾಡಿದ್ದು, ಇಡೀ ಜಿಲ್ಲೆಯನ್ನು ಆತಂಕದ ಸುಳಿಯಲ್ಲಿ ಸಿಲುಕಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version