Headlines

ಇರಾನ್​ನಲ್ಲಿನ ಭಾರತೀಯರು ತಕ್ಷಣ ದೇಶ ಬಿಟ್ಟು ಹೊರಡಿ; ಭಾರತ ಆದೇಶ – Kannada News

ನವದೆಹಲಿ, ಜೂನ್ 8: ಇರಾನ್ (Iran War) ಮತ್ತು ಇಸ್ರೇಲ್ ನಡುವೆ ಹೆಚ್ಚುತ್ತಿರುವ ಮಿಲಿಟರಿ ಸಂಘರ್ಷ ಹಾಗೂ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ತನ್ನ ನಾಗರಿಕರಿಗಾಗಿ ಹೊಸ ಎಚ್ಚರಿಕೆಗಳನ್ನು ನೀಡಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ಭಾರತೀಯ ನಾಗರಿಕರಿಗೆ ಇರಾನ್‌ಗೆ ಪ್ರಯಾಣಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಎರಡೂ ದೇಶಗಳ ನಡುವೆ ಮಿಲಿಟರಿ ದಾಳಿ ನಿಲ್ಲುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮದ ಮಾತುಕತೆಗಳು ನಡೆಯುತ್ತಿದ್ದರೂ ಪರಸ್ಪರ ಇಂಧನ ಹಾಗೂ…

Read More

ನೀರಿನಲ್ಲಿ ಮುಳುಗಿ ಮೃತಪಟ್ಟವರನ್ನ ಉಪ್ಪಿನಿಂದ ಬದುಕಿಸಬಹುದಾ? ಮೂಢನಂಬಿಕೆಯ ಸತ್ಯಾಸತ್ಯತೆ ಅನಾವರಣ – Kannada News

ಬಾಗಲಕೋಟೆ, (ಜೂನ್ 08): ನೀರಿನಲ್ಲಿ ಮುಳುಗಿ ಮೃತಪಟ್ಟ ವ್ಯಕ್ತಿಯನ್ನು ನಾಲ್ಕು ಗಂಟೆಗಳವರೆಗೆ ಉಪ್ಪಿನಲ್ಲಿ ಮುಚ್ಚಿದರೆ ಮತ್ತೆ ಬದುಕಿಸಬಹುದು ಎನ್ನುವ ಮೂಢನಂಬಿಕೆ ಸಂದೇಶ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಲೇ ಇರುತ್ತೆ. ಆದ್ರೆ, ಇದರ ಸತ್ಯಾಸತ್ಯೆ ಬಾಗಲಕೋಟೆಯ ಮಗುವಿನ ಮೇಲೆ ಪ್ರಯೋಗ ಮಾಡಿದಾಗ ಅನಾವರಣಗೊಂಡಿದೆ. ಹೌದು…ಬಾಗಲಕೋಟೆಯ (Bagalkot) ನವನಗರದಲ್ಲಿ 18 ತಿಂಗಳ ಹೆಣ್ಣು ಮಗುವೊಂದು ನೀರಿನ ಟ್ಯಾಂಕ್‌ಗೆ ಬಿದ್ದು ಮೃತಪಟ್ಟಿದೆ.  ಮಗು ಅಮೀನಾ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಎದುರಿನ ಮನೆಯವರ ಸಂಪ್‌ಗೆ ಬಿದ್ದಿದೆ.  ಆದರೆ, ಮಗುವನ್ನು ಬದುಕಿಸಬಹುದು ಎಂಬ ಮೂಢನಂಬಿಕೆಯಿಂದ,…

Read More

ಪ್ರತಿನಿತ್ಯ ವ್ಯಾಯಾಮ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ? – Kannada News

ಇಂದಿನ ಈ ಬ್ಯುಸಿ, ಒತ್ತಡದ ಜೀವನದಲ್ಲಿ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳುವುದು ಅತ್ಯಗತ್ಯ.  ಅಲ್ಲದೆ ವ್ಯಾಯಾಮ (exercise) ಫಿಟ್‌ ಆಗಿರಲು, ದೇಹವನ್ನು ಸದೃಢವಾಗಿಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಆರೋಗ್ಯ ತಜ್ಞರು ಪ್ರತಿನಿತ್ಯ ವ್ಯಾಯಾಮ ಮಾಡಬೇಕು ಎಂದು ಸಲಹೆ ನೀಡುವುದು. ಇಂದಿನ ಯುವ ಪೀಳಿಗೆ ಫಿಟ್‌ ಆಗಿರುವ ಸಲುವಾಗಿ ಜಿಮ್‌ಗೆ ಹೋಗಿ ವರ್ಕೌಟ್‌ ಮಾಡ್ತಾರೆ. ವ್ಯಾಯಾಮ ಫಿಟ್‌ ಆಗಿರಲು ಸಹಾಯ ಮಾಡುವುದಲ್ಲದೆ ಸಾಕಷ್ಟು ಪ್ರಯೋಜನಗಳನ್ನು ಸಹ ಹೊಂದಿವೆ. ಮನಸ್ಥಿತಿಯನ್ನು ಸುಧಾರಿಸುವುದರಿಂದ ಹಿಡಿದು ಅನೇಕ ಗಂಭೀರ ಕಾಯಿಲೆಗಳನ್ನು ತಡೆಗಟ್ಟುವರೆಗೆ ಪ್ರತಿನಿತ್ಯ ವ್ಯಾಯಾಮ ಮಾಡುವುದರಿಂದ…

Read More

ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್ – Kannada News

‘ಕೆರೆಬೇಟೆ’ ಖ್ಯಾತಿಯ ನಟ ಗೌರಿಶಂಕರ್ ಅವರು ‘ಕಾಮನ್ ಮ್ಯಾನ್’ (Common Man) ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ಶೀರ್ಷಿಕೆಯೇ ಸೂಚಿಸುವಂತೆ ಒಬ್ಬ ಸಾಮಾನ್ಯ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿ ಆದರೆ ಏನಾಗುತ್ತದೆ ಎಂಬುದು ಈ ಸಿನಿಮಾದ ಕಥೆ. ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ನಿರ್ಮಾಪಕ ಎನ್. ನರಸಿಂಹಮೂರ್ತಿ ಅವರ ಜನ್ಮದಿನದ ಪ್ರಯುಕ್ತ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ವೇಳೆ ಓಂ ಸಾಯಿ ಪ್ರಕಾಶ್ (Om Sai Prakash) ಅವರು…

Read More

ವೈಜಾಗ್ ಉಕ್ಕಿನ ಸ್ಥಾವರ ಸ್ಫೋಟ; ಕರಗಿದ ಕಬ್ಬಿಣ ಸೋರಿಕೆಯಿಂದ 8 ಕಾರ್ಮಿಕರು ಸಾವು – Kannada News

ವಿಶಾಖಪಟ್ಟಣಂ, ಜೂನ್ 8: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಪ್ರಸಿದ್ಧ ವೈಜಾಗ್ ಸ್ಟೀಲ್ ಪ್ಲಾಂಟ್‌ನ (Visakhapatnam Steel Plant) ಎಸ್‌ಎಂಎಸ್-2 ವಿಭಾಗದಲ್ಲಿ ದುರಂತ ಘಟನೆ ಸಂಭವಿಸಿದೆ. ಕಾರ್ಖಾನೆಯಲ್ಲಿ ಎಂದಿನಂತೆ ಕೆಲಸ ನಡೆಯುತ್ತಿದ್ದಾಗ, ಕರಗಿದ ದ್ರವರೂಪದ ಕಬ್ಬಿಣವನ್ನು ಕ್ರೇನ್​ನಲ್ಲಿ ಸಾಗಿಸುತ್ತಿದ್ದಾಗ ಬೃಹತ್ ಬಕೆಟ್ ಇದ್ದಕ್ಕಿದ್ದಂತೆ ಉರುಳಿಬಿದ್ದಿದೆ. ಅತಿ ಹೆಚ್ಚು ಬಿಸಿಯಾಗಿದ್ದ ಕರಗಿದ ಕಬ್ಬಿಣವು ಅಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ನೇರವಾಗಿ ಚೆಲ್ಲಿದ್ದರಿಂದ, ಸ್ಥಳದಲ್ಲೇ 8 ಜನ ಕಾರ್ಮಿಕರು ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಹಲವು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು, ಅವರಲ್ಲಿ ಕೆಲವರ…

Read More

‘ನಮ್ಮೂರು ನಮ್ಮವರು’ ಆಲ್ಬಂ ಸಾಂಗ್ ಮೂಲಕ ಜನಜಾಗೃತಿ ಮೂಡಿಸುವ ಕೆಲಸ – Kannada News

ಇತ್ತೀಚಿನ ದಿನಗಳಲ್ಲಿ ಸರ್ಕಾರ ಮತ್ತು ಸಾಮಾಜಿಕ ವ್ಯವಸ್ಥೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರದಿಂದ ಬಡವರು, ಜನಸಾಮಾನ್ಯರು ಹೈರಾಣಾಗುತ್ತಿದ್ದಾರೆ. ಭ್ರಷ್ಟಾಚಾರ, ಅನ್ಯಾಯ, ಅಸಮಾನತೆ ವಿರುದ್ಧ ಅಲ್ಲಲ್ಲಿ ಹೋರಾಟಗಳು, ಪ್ರತಿಭಟನೆಗಳು ನಡೆಯುತ್ತಿದ್ದರೂ, ಅದಾವುದಕ್ಕೂ ಇನ್ನೂ ಪೂರ್ಣ ಕಡಿವಾಣವಂತೂ ಬಿದ್ದಿಲ್ಲ ಎಂಬುದು ವಾಸ್ತವ. ಈಗ ಇದೇ ಭ್ರಷ್ಟಾಚಾರ, ಅನ್ಯಾಯ, ಸಾಮಾಜಿಕ ಅಸಮಾನತೆಯ ವಿರುದ್ಧ ಕನ್ನಡ ಚಿತ್ರರಂಗದ ಯುವ ಪ್ರತಿಭೆಗಳ ತಂಡವೊಂದು ‘ನಮ್ಮೂರು ನಮ್ಮವರು’ ಎಂಬ ಮ್ಯೂಸಿಕ್ ವಿಡಿಯೋ (Kannada Album Song) ಮೂಲಕ ಜನಜಾಗೃತಿ ಮೂಡಿಸುವ ಕೆಲಸಕ್ಕೆ ಮುಂದಾಗುತ್ತಿದೆ. ‘ನಮ್ಮೂರು ನಮ್ಮವರು’ ಶೀರ್ಷಿಕೆಯಲ್ಲಿ ತಯಾರಾಗಿರುವ…

Read More

ಜೂನ್​​ನಲ್ಲಿ ಶುಕ್ರ ಗೋಚಾರ ಫಲ: ಕರ್ಕಾಟಕದಲ್ಲಿ ಶುಕ್ರನ ಸಂಚಾರ; ಈ ರಾಶಿಯವರಿಗೆ ಒಲಿಯಲಿದೆ ಅಪಾರ ಸಂಪತ್ತು, ಧನಲಾಭದ ರಾಜಯೋಗ! – Kannada News

ಕಾಲಜ್ಞಾನ ಶಾಸ್ತ್ರದಲ್ಲಿ ಕರ್ಕಾಟಕ ರಾಶಿಯಲ್ಲಿರುವ ಶುಕ್ರನು ಸ್ಥಿತಿಯು ಗುರುವಿನ ದ್ರೇಕ್ಕಾಣ, ರವಿಯ ಹೋರೆ, ಶನಿಯ ನವಾಂಶ, ಕುಜನ ತ್ರಿಂಶಾಂಶ, ಶುಕ್ರನ ದ್ವಾದಶಾಂಶದಲ್ಲಿ ಜೂನ್ ತಿಂಗಳಿನಲ್ಲಿ ಇದ್ದು ಮಿಶ್ರಫಲ ನೀಡುವನು. ​ಮೇಷ ರಾಶಿ : ​ಶುಕ್ರನು ಸುಖಸ್ಥಾನದಲ್ಲಿದ್ದು ಮಿಶ್ರಫಲ ನೀಡುವನು. ರವಿಯ ಹೋರೆಯಿಂದಾಗಿ ತಾಯಿಯ ಆರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರವಿರಲಿ. ಶನಿಯ ನವಾಂಶದಲ್ಲಿದ್ದು ವೃತ್ತಿರಂಗದಲ್ಲಿ ಕಠಿಣ ಪರಿಶ್ರಮವನ್ನು ಬೇಡುತ್ತದೆ. ಕುಜನ ತ್ರಿಂಶಾಂಶದಿಂದಾಗಿ ಆತುರದ ನಿರ್ಧಾರಗಳು ನಷ್ಟ ತರಬಹುದು. ಶುಕ್ರದಶೆ ನಡೆಯುತ್ತಿರುವ ಈ ರಾಶಿಯ ಕಲಾಪ್ರೇಮಿಗಳು, ಕೃಷಿಕರು ಮತ್ತು ಭೂ ವ್ಯವಹಾರಸ್ಥರಿಗೆ…

Read More

IND vs AFG: ಭಾರತ- ಅಫ್ಘನ್ ಏಕದಿನ ಸರಣಿ ಯಾವಾಗ ಆರಂಭ? ಎಷ್ಟು ಪಂದ್ಯಗಳು ನಡೆಯಲಿವೆ? – Kannada News

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ಇದೀಗ ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜೂನ್ 13 ರಿಂದ ಆರಂಭವಾಗಲಿದೆ. ಏಕದಿನ ವಿಶ್ವಕಪ್ ದೃಷ್ಟಿಯಿಂದ ಈ ಏಕದಿನ ಸರಣಿ ಉಭಯ ತಂಡಗಳಿಗೂ ಬಹುಮುಖ್ಯವಾಗಿದೆ. ಆದಾಗ್ಯೂ ಈ ಸರಣಿಯಲ್ಲಿ ಕೊಹ್ಲಿ (Virat Kohlli) ಆಡುತ್ತಿಲ್ಲ ಎಂಬುದು ಅಭಿಮಾನಿಗಳಿಗೆ ಬೇಸರವನ್ನುಂಟು ಮಾಡಿದೆ. ಕೊಹ್ಲಿ ಜೊತೆಗೆ ರೋಹಿತ್ ಶರ್ಮಾ ಆಡುವುದು ಸಹ ಅನುಮಾನ ಎನ್ನಲಾಗುತ್ತಿದೆ….

Read More

ಬೆಂಗಳೂರಿನಲ್ಲಿ ಜೊಮಾಟೊ ಡೆಲಿವರಿ ಬಾಯ್ ಆಗಿದ್ದ ಸೂರಜ್ ಈಗ ಎಐ ಸ್ಟಾರ್ಟಪ್ ಫೌಂಡರ್ – Kannada News

ಕೆಲವೇ ವರ್ಷಗಳ ಹಿಂದೆ ಬೆಂಗಳೂರಿನ ಟ್ರಾಫಿಕ್‌ನಲ್ಲಿ, ಕೈಯಲ್ಲೊಂದು ಝೊಮ್ಯಾಟೊ (Zomato) ಬ್ಯಾಗ್ ಇಟ್ಟುಕೊಂಡು ಬೈಕ್ ಓಡಿಸುತ್ತಿದ್ದ ಒಬ್ಬ ಹುಡುಗ ಇಂದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಸ್ಟಾರ್ಟ್‌ಅಪ್‌ನ ಮಾಲೀಕನಾಗಿದ್ದಾನೆ. ಇದು ಯಾವುದೋ ಸಿನಿಮಾ ಸ್ಟೋರಿ ಅಲ್ಲ, ಬೆಂಗಳೂರಿನಲ್ಲೇ ನೆಲೆಸಿ ಯಶಸ್ಸು ಕಂಡ ಯುವ ಉದ್ಯಮಿ ಸೂರಜ್ ಬಿಸ್ವಾಸ್ (Suraj Biswas) ಅವರ ನಿಜ ಜೀವನದ ಸಾಹಸಗಾಥೆ. ವೈದ್ಯನಾಗಬೇಕೆಂಬ ತಂದೆಯ ಕನಸು ಮತ್ತು ಬಡತನದ ಸವಾಲು ಸೂರಜ್ ಅವರ ತಂದೆ ಒಬ್ಬ ಸಾಮಾನ್ಯ ದಿನಗೂಲಿ ಕಾರ್ಮಿಕರಾಗಿದ್ದರು….

Read More

T20 World Cup 2026: 4 ವಿಕೆಟ್ ಉರುಳಿಸಿದ ಶ್ರೇಯಾಂಕ; ವಿಂಡೀಸ್ ವಿರುದ್ಧ ಗೆದ್ದ ಟೀಂ ಇಂಡಿಯಾ – Kannada News

10ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026) ಇದೇ ಜೂನ್ 12 ರಿಂದ ಆರಂಭವಾಗಲಿದೆ. ಈ ಚುಟುಕು ಸಮರಕ್ಕೆ ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಇತ್ತ ಎಲ್ಲಾ ತಂಡಗಳು ಕೂಡ ಟಿ20 ವಿಶ್ವಕಪ್​ಗೆ ಆತಿಥ್ಯವಹಿಸಿರುವ ಇಂಗ್ಲೆಂಡ್​ಗೆ ಬಂದಿಳಿದಿವೆ. ಈ ಪಂದ್ಯಾವಳಿ ಆರಂಭಕ್ಕೆ ನಾಲ್ಕು ದಿನಗಳು ಬಾಕಿ ಉಳಿದಿದ್ದು, ಅದಕ್ಕೂ ಮೊದಲು ಎಲ್ಲಾ ತಂಡಗಳು ಅಭ್ಯಾಸ ಪಂದ್ಯದಲ್ಲಿ ನಿರತವಾಗಿವೆ. ಅದರಂತೆ ಸೋಮವಾರ (ಜೂನ್ 8) ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ…

Read More