Headlines

Bengaluru Air Quality: ಉಡುಪಿ, ಶಿವಮೊಗ್ಗದ ವಾಯು ಗುಣಮಟ್ಟದಲ್ಲಿ ಸುಧಾರಣೆ

ಬೆಂಗಳೂರು, ಏಪ್ರಿಲ್ 10: ಕಳೆದ ಹಲವು ದಿನಗಳಿಂದ ಬೆಂಗಳೂರು ಸೆರಿದಂತೆ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ (Bengaluru Air Quality) ಸುಧಾರಿಸುತ್ತಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು…

Read More

ಮಹತ್ವದ ಘಟ್ಟದಲ್ಲಿ ‘ಆಸೆ’ ಧಾರಾವಾಹಿ; ರೋಹಿಣಿಯೇ ಕ್ರಿಶ್ ತಾಯಿ ಅಂತ ಎಲ್ಲರಿಗೂ ತಿಳಿಯುವ ಸಮಯ

ಸ್ಟಾರ್ ಸುವರ್ಣದ ‘ಆಸೆ’ ಧಾರಾವಾಹಿ ಪ್ರೇಕ್ಷಕರನ್ನು ಸೆಳೆದುಕೊಳ್ಳುತ್ತಿದೆ ಎಂದರೂ ತಪ್ಪಾಗಲಿಕ್ಕಿಲ್ಲ. ಈ ಧಾರಾವಾಗೆ ದೊಡ್ಡ ಅಭಿಮಾನಿ ಬಳಗ ಇದ್ದಿರೋದು ಗೊತ್ತೇ ಇದೆ. ಈಗ ‘ಆಸೆ’ ಧಾರಾವಾಹಿಯು ಒಂದು ಮಹತ್ವದ ಘಟ್ಟ ತಲುಪಿದೆ. ಈ ಧಾರಾವಾಹಿಯಲ್ಲಿ ಕ್ರಿಶ್ ಸೂರ್ಯನ ಮಗ ಎಂಬುದು ನಾಯಕಿ ಮೀನಾಗೆ ಗೊತ್ತಾಗಿ ಹೋಗಿದೆ. ಈ ವಿಷಯವನ್ನು ಮನೆಯ ಎಲ್ಲರಿಗೂ ಹೇಳುವಂತೆ ಆಕೆ ಒತ್ತಡ ಹೇರುವುದನ್ನು ನೀವು ಧಾರಾವಾಹಿಯಲ್ಲಿ ಕಾಣಬಹುದು. ‘ಆಸೆ’ ಧಾರಾವಾಹಿಯಲ್ಲಿ ರೋಹಿಣಿ ಪತಿಗೆ ಹಾಗೂ ಕುಟುಂಬಕ್ಕೆ ಮೋಸ ಮಾಡುತ್ತಲೇ ಬರುತ್ತಿದ್ದಾಳೆ. ಈ ವಿಷಯದಲ್ಲಿ…

Read More

Horoscope Today: ಇಂದು ಈ ರಾಶಿಯವರು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 10, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ನವಮಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.     Source…

Read More

‘ಸ್ಪಿರಿಟ್’ ಬಳಿಕ ಮತ್ತೊಬ್ಬ ಸ್ಟಾರ್ ನಟನ ಜೊತೆ ಸಂದೀಪ್ ರೆಡ್ಡಿ ಸಿನಿಮಾ

ಸಂದೀಪ್ ರೆಡ್ಡಿ ವಂಗಾ (Sandeep Reddy Vanga), ಪ್ರಸ್ತುತ ಭಾರತದ ಯಶಸ್ವಿ ಮತ್ತು ಬೇಡಿಕೆಯ ನಿರ್ದೇಶಕರಲ್ಲಿ ಒಬ್ಬರು. ‘ಅನಿಮಲ್’ ಸಿನಿಮಾದ ಯಶಸ್ವಿನ ಬಳಿಕ ಸಂದೀಪ್ ರೆಡ್ಡಿ ಇದೀಗ ಪ್ರಭಾಸ್ ಜೊತೆಗೆ ಕೆಲಸ ಮಾಡುತ್ತಿದ್ದು, ಪ್ರಭಾಸ್ ಅವರಿಗಾಗಿ ‘ಸ್ಪಿರಿಟ್’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ‘ಸ್ಪಿರಿಟ್’ ಸಿನಿಮಾದ ಬಳಿಕ ಸಂದೀಪ್ ರೆಡ್ಡಿ ವಂಗಾ ಮತ್ತೊಬ್ಬ ಸ್ಟಾರ್ ನಟನೊಟ್ಟಿಗೆ ಕೆಲಸ ಮಾಡಲು ತಯಾರಾಗಿದ್ದು, ಈಗಾಗಲೇ ಮಾತುಕತೆ ಸಹ ಚಾಲ್ತಿಯಲ್ಲಿದೆ. ಪ್ರಭಾಸ್ ಜೊತೆಗೆ ‘ಸ್ಪಿರಿಟ್’ ಸಿನಿಮಾದ ಬಳಿಕ ಸಂದೀಪ್ ರೆಡ್ಡಿ ವಂಗಾ, ಅಲ್ಲು…

Read More

ಹೆಂಡತಿಯ ಒಂದು ಕ್ಷಣದ ಸಿಟ್ಟಿಗೆ ಪತಿ ಬಲಿ: ಶವದ ಪಕ್ಕದಲ್ಲೇ ರಾತ್ರಿ ಕಳೆದ ಪತ್ನಿ

ಗುಜರಾತ್, ಏಪ್ರಿಲ್ 10: ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ನಡೆದ ಈ ಘಟನೆಯು ಕೌಟುಂಬಿಕ ಕಲಹವು ಎಷ್ಟು ಭೀಕರ ರೂಪ ಪಡೆದುಕೊಳ್ಳಬಹುದು ಎಂಬುದಕ್ಕೆ ಕನ್ನಡಿಯಾಗಿದೆ. ಆ ಕ್ಷಣದ ಸಿಟ್ಟು ಮತ್ತು ಆನಂತರದ ಮೌನ ಎರಡೂ ಈ ಘಟನೆಯಲ್ಲಿದೆ. ಪ್ರೀತಿ ಮತ್ತು ವಿಶ್ವಾಸದಿಂದ ಇರಬೇಕಾದ ದಂಪತಿ ನಡುವೆ ನಡೆದ ಸಣ್ಣ ಜಗಳವೊಂದು ಅಂತಿಮವಾಗಿ ಕೊಲೆ(Murder)ಯಲ್ಲಿ ಅಂತ್ಯವಾಗಿದೆ. ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ನಡೆದ ಈ ಭೀಕರ ಘಟನೆಯು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ದಾರಿಯುದ್ದಕ್ಕೂ ನಡೆದ ಜಗಳ ಘಟನೆಯ ದಿನ ಪತಿ ಮತ್ತು ಪತ್ನಿ…

Read More

Daily Devotional: ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಕಾಲಾಷ್ಟಮಿಯು ಮಹತ್ತರವಾದ ಪ್ರಭಾವವನ್ನು ಬೀರುವ, ಪರಿವರ್ತನೆ ಮತ್ತು ಅದೃಷ್ಟವನ್ನು ತರುವ, ಸಂಕಟಗಳನ್ನು ದೂರಮಾಡುವ ವಿಶೇಷ ಪರ್ವಕಾಲವಾಗಿದೆ. ಪ್ರತಿ ತಿಂಗಳ ಕೃಷ್ಣ ಪಕ್ಷದ ಅಷ್ಟಮಿ ತಿಥಿಯನ್ನು ಕಾಲಾಷ್ಟಮಿ ಎಂದು ಕರೆಯಲಾಗುತ್ತದೆ. ಈ ದಿನದಂದು ಶಿವನ ಉಗ್ರ ರೂಪವಾದ ಕಾಲಭೈರವನನ್ನು ಆರಾಧಿಸಲಾಗುತ್ತದೆ. ಕಾಲಭೈರವನು ಕಾಲದ ಅಧಿಪತಿಯಾಗಿದ್ದು, ಅತ್ಯಂತ ಬೇಗ ಫಲಿತಾಂಶಗಳನ್ನು ನೀಡುವ ಶಕ್ತಿಯನ್ನು ಹೊಂದಿದ್ದಾನೆ. ಮನೆ ಕಟ್ಟುವ ಕನಸು, ವಿವಾಹ, ಮಕ್ಕಳ ಪ್ರಾಪ್ತಿ, ಆರೋಗ್ಯ…

Read More

ಇವಿಎಂನಲ್ಲಿ ಭದ್ರವಾಯ್ತು ಮಿನಿ ಕದನದ ಅಭ್ಯರ್ಥಿಗಳ ಭವಿಷ್ಯ! ದಾವಣಗೆರೆ ದಕ್ಷಿಣದಲ್ಲಿ ಗೆಲ್ಲೋದ್ಯಾರು? ಬಾಗಲ‘ಕೋಟೆ’ ಯಾರಿಗೆ?

ಬೆಂಗಳೂರು, ಏಪ್ರಿಲ್ 10: ರಾಜ್ಯದ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ (Karnataka Bypolls 2026) ಮತದಾನ ಗುರುವಾರ ಮುಕ್ತಾಯಗೊಂಡಿದೆ. ಕಳೆದ 15 ದಿನಗಳಿಂದ ನಡೆದ ಅಬ್ಬರದ ಪ್ರಚಾರಕ್ಕೆ ತೆರೆಬಿದ್ದಿದ್ದು, ಮತದಾನವೂ ಮುಗಿದಿದೆ. ಮತದಾರ ಪ್ರಭು ತನ್ನ ನಿರ್ಧಾರವನ್ನು ಮತಯಂತ್ರದಲ್ಲಿ ದಾಖಲಿಸಿದ್ದಾಗಿದೆ. ಎರಡೂ ಕ್ಷೇತ್ರಗಳಲ್ಲಿ ಬಹುತೇಕ ಸಮಾನ ಪ್ರಮಾಣದ ಮತದಾನವಾಗಿದೆ. ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದೆ. ಮತದಾನದ ಶೇಕಡಾವಾರು ವಿವರ ದಾವಣಗೆರೆ ದಕ್ಷಿಣ: ಶೇ 68.55 ರಷ್ಟು ಮತದಾನ ದಾಖಲಾಗಿದೆ. ಬಾಗಲಕೋಟೆ:…

Read More

ದ್ವಿತೀಯ ಪಿಯುಸಿ ಫಲಿತಾಂಶದ ದಿನವೇ ವಿದ್ಯಾರ್ಥಿನಿ ನಿಗೂಢ ಸಾವು: ತಾಯಿಯ ನಡವಳಿಕೆ ಮೇಲೆಯೇ ಸಂಬಂಧಿಕರ ಶಂಕೆ!

ಬೆಂಗಳೂರು, ಏಪ್ರಿಲ್ 10: ದ್ವಿತೀಯ ಪಿಯುಸಿ ಫಲಿತಾಂಶ (2nd PUC Result) ಪ್ರಕಟವಾದ ದಿನವೇ ಬೆಂಗಳೂರಿನ (Bangalore) ಹೆಬ್ಬಾಳದ ಮನೋರಾಯನಪಾಳ್ಯದಲ್ಲಿ ವಿದ್ಯಾರ್ಥಿನಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿದ್ದಾಳೆ. ತನುಶ್ರೀ (18) ಮೃತಪಟ್ಟ ವಿದ್ಯಾರ್ಥಿನಿ. ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವಂತೆ ಕಂಡುಬಂದಿದೆ. ಆದರೆ, ಸಂಬಂಧಿಕರು ಮಾತ್ರ ವಿದ್ಯಾರ್ಥಿನಿಯ ತಾಯಿಯ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆಯ ವಿವರ ಗುರುವಾರ (ಏಪ್ರಿಲ್ 9) ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ವಿಶ್ವಾಸ ಕಳೆದುಕೊಳ್ಳಬೇಕಾಗುವುದು

ಮೇಷ ರಾಶಿ: ಕೃಷಿ ಚಟುವಟಿಕೆಯಲ್ಲಿ ನಿಮ್ಮದೇ ಆದ ಹೆಜ್ಜೆಗಳನ್ನು ಇಡುವಿರಿ‌. ನೀವು ಆಸ್ತಿಗೆ ಸಂಬಂಧಿಸಿದ ವಿವಾದವು ಇನ್ನೊಂದು ತಿರುವನ್ನು ಪಡೆಯಬಹುದು. ನಿಮ್ಮ ಸಂಗಾತಿಯ ಬೆಂಬಲವು ಖುಷಿ ಕೊಡುವುದು. ಯಾವುದೋ ಅಗಾಧ ಯೋಚನೆಯಲ್ಲಿ ನೀವು ಇರುವಿರಿ. ವ್ಯಾಪಾರದಲ್ಲಿ ನಷ್ಟ ಸಂಭವಿಸಬಹುದು. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ಉತ್ಸಾಹದಿಂದ ಎಲ್ಲರನ್ನೂ ಜೋಡಿಸಿಕೊಂಡು ಕೆಲಸವನ್ನು ಮುಗಿಸುವಿರಿ. ವೃಷಭ ರಾಶಿ: ವಿದ್ಯಾಭ್ಯಾಸದಲ್ಲಿ ಶ್ರಮದ ಅಗತ್ಯ ಬಹಳ ಕಾಣಿಸುವುದು. ಎಂತಹ ಸವಾಲನ್ನೂ ನೀವು ಎದುರಿಸುವ ಹುಂಬುತನದಲ್ಲಿ ಏನನ್ನಾದರೂ ಮಾಡಿಕೊಳ್ಳುಬಿರಿ. ಧೈರ್ಯದಿಂದ ಏನನ್ನೂ ಎದುರಿಸುವ…

Read More

KKR vs LSG: ಯುವ ಬ್ಯಾಟರ್ ಮುಕುಲ್ ಚೌಧರಿ ಎದುರು ಸೋತ ಕೆಕೆಆರ್

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2026 ರ 15ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಲೀಗ್​ನಲ್ಲಿ ಮೊದಲ ಗೆಲುವಿಗಾಗಿ ಹುಡುಕಾಟ ನಡೆಸುತ್ತಿರುವ ಕೆಕೆಆರ್ ತಂಡ ತವರಿನಲ್ಲಿ ನಡೆದ ಸತತ ಎರಡನೇ ಪಂದ್ಯದಲ್ಲೂ ಸೋಲು ಕಂಡಿತು. ಈ ಮೂಲಕ ಲೀಗ್​ನಲ್ಲಿ ಕೆಕೆಆರ್​ಗೆ ಸತತ 4ನೇ ಸೋಲು ಎದುರಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 181 ರನ್ ಗಳಿಸಿ…

Read More