Headlines

ವಸತಿ ಶಾಲೆಯ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿ, ಆಸ್ಪತ್ರೆಗೆ ದಾಖಲು! – Kannada News | Food Poisoning Hits Tirthahalli Residential School; Over 50 Students Hospitalised

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ನ್ಯಾಷನಲ್ ರೆಸಿಡೆನ್ಸಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ಸುಮಾರು 50ರಿಂದ 70 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ವಸತಿ ಶಾಲೆಯಲ್ಲಿ ರಾತ್ರಿ ಅವಲಕ್ಕಿ ಹಾಗೂ ದಾಲ್ ಚಪಾತಿ ತಿಂದಿದ್ದ ವಿದ್ಯಾರ್ಥಿಗಳಲ್ಲಿ ದಿಢೀರ್ ವಾಂತಿ-ಭೇದಿ ಕಾಣಿಸಿಕೊಂಡು ಆರೋಗ್ಯ ಏರುಪೇರಾಗಿತ್ತು. ತಕ್ಷಣವೇ ಅಸ್ವಸ್ಥ ಮಕ್ಕಳನ್ನು ಕೋಣಂದೂರು ಸರ್ಕಾರಿ ಆಸ್ಪತ್ರೆ ಹಾಗೂ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಈ ಪೈಕಿ ತೀವ್ರ ಅಸ್ವಸ್ಥಗೊಂಡಿದ್ದ 11 ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್…

Read More

Apply Now: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; 56 ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Shivamogga District Court Peon Recruitment 2026: Apply Online for 56 Vacancies

ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯು ತನ್ನ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 56 ಜವಾನ (Peon) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆ (ಅಧಿಸೂಚನೆ ಸಂಖ್ಯೆ: ADM.DJS.16342/2026) ಪ್ರಕಾರ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಹುದ್ದೆಯ ವಿವರಗಳು ಮತ್ತು ಅರ್ಜಿ ಸಲ್ಲಿಕೆ ಮಾಹಿತಿ: ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಸಲ್ಲಿಸಬೇಕಾಗಿದೆ. ಅರ್ಜಿಗಳನ್ನು…

Read More

ತಾಯಿಯ ಸ್ಮಾರಕ ನಿರ್ಮಿಸಬೇಕೆಂದು ಹಣ ಕೇಳಿ ಮಹಿಳೆಗೆ 2.3 ಲಕ್ಷ ರೂ. ವಂಚಿಸಿದ ‘ನಕಲಿ ಡಿಆರ್‌ಡಿಒ’ ಅಧಿಕಾರಿ! – Kannada News | Fake DRDO Officer Dupes Bengaluru Woman of Rs 2.3 Lakh

ಬೆಂಗಳೂರು, ಜುಲೈ 25: “ನನ್ನ ತಾಯಿಯ ನೆನಪಿನಲ್ಲಿ ಸ್ಮಾರಕ ಕಟ್ಟಿಸಬೇಕು, ಅದಕ್ಕೆ ಹಣದ ಅಭಾವವಿದೆ” ಎಂದು ಸುಳ್ಳು ಹೇಳಿ, ತಾನು ಡಿಆರ್‌ಡಿಒ (DRDO) ಹಿರಿಯ ಅಧಿಕಾರಿ ಎಂದು ನಂಬಿಸಿ ಮಹಿಳೆಯೊಬ್ಬರಿಗೆ 2.3 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣ ಹಾಗೂ ಮ್ಯಾಟ್ರಿಮೋನಿಯಲ್ ಪ್ಲಾಟ್‌ಫಾರ್ಮ್‌ ಮೂಲಕ ಮಹಿಳೆಯ ಪರಿಚಯ ಮಾಡಿಕೊಂಡಿದ್ದ ಆರೋಪಿ, ತಾನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ (DRDO) ಉನ್ನತ ಹುದ್ದೆಯಲ್ಲಿದ್ದೇನೆ ಎಂದು ಹೇಳಿಕೊಂಡಿದ್ದ. ಸ್ಮಾರಕದ ಹೆಸರಲ್ಲಿ ವಂಚನೆ ಪರಿಚಯ…

Read More

ಪ್ರತಿದಿನ 12 ಓವರ್​ಗಳು: ಪ್ಲಾಸ್ಟಿಕ್​ ಬಾಲ್​ನಲ್ಲಿ ಪಾಂಡ್ಯ ಮಾಸ್ಟರ್ ಪ್ಲ್ಯಾನ್! – Kannada News | Hardik Pandya’s High Tech Reboot: Plastic Ball Drills & 12 Over Spells at CoE

ಭಾರತ ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಕ್ರಿಕೆಟ್ ಬದುಕನ್ನು ಮುಂದಿನ 5-6 ವರ್ಷಗಳ ಕಾಲ ವಿಸ್ತರಿಸುವ ಮಹತ್ತರ ಗುರಿಯೊಂದಿಗೆ ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ (CoE) ನಲ್ಲಿ ಕಠಿಣ ತರಬೇತಿ ಆರಂಭಿಸಿದ್ದಾರೆ. ಇದಕ್ಕಾಗಿ ಕಳೆದ ಕೆಲವು ದಿನಗಳಿಂದ ಹಾರ್ದಿಕ್ ಪಾಂಡ್ಯ ಅವರು ಪ್ರತಿದಿನ ಬರೋಬ್ಬರಿ 12 ಓವರ್​ಗಳನ್ನು ಬೌಲಿಂಗ್ ಮಾಡುತ್ತಿದ್ದಾರೆ. ಇದರ ಜೊತೆ ಬ್ಯಾಟಿಂಗ್ ಸುಧಾರಣೆಗಾಗಿ ವಿಭಿನ್ನವಾದ ‘ಪ್ಲಾಸ್ಟಿಕ್ ಬಾಲ್’ ತಂತ್ರವನ್ನು ಬಳಸುತ್ತಿದ್ದಾರೆ. ಪ್ಲಾಸ್ಟಿಕ್ ಬಾಲ್ ಮತ್ತು ಕಾಂಕ್ರೀಟ್ ಪಿಚ್: ಹಾರ್ದಿಕ್ ಪಾಂಡ್ಯ…

Read More

ಸರ್ಕಾರಿ ಶಾಲೆಗಳನ್ನು ಕಾರ್ಪೊರೇಟ್‌ಗಳಿಗೆ ದತ್ತು ನೀಡಲು ಸರ್ಕಾರದ ನಿರ್ಧಾರ: ಶಿಕ್ಷಣ ತಜ್ಞರು, ಪೋಷಕರಿಂದ ವ್ಯಾಪಕ ವಿರೋಧ – Kannada News | Karnataka Government Schools Privatization Sparks Outcry: Experts and Parents Demand Reversal

ಬೆಂಗಳೂರು, ಜು.25: ರಾಜ್ಯದ ಸರ್ಕಾರಿ ಶಾಲೆಗಳನ್ನು (Karnataka government schools) ಕಾರ್ಪೊರೇಟ್ ಕಂಪನಿಗಳು ಹಾಗೂ ಖಾಸಗಿ ಶಾಲೆಗಳಿಗೆ ದತ್ತು ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಶಿಕ್ಷಣ ತಜ್ಞರು, ಚಿಂತಕರು, ವಿದ್ಯಾರ್ಥಿ ಸಂಘಟನೆಗಳು ಹಾಗೂ ಪೋಷಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕಾರ್ಪೊರೇಟ್ ಸಂಸ್ಥೆಗಳು ಹಾಗೂ ಖಾಸಗಿ ಶಾಲೆಗಳು ಕಡ್ಡಾಯವಾಗಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯಬೇಕು ಎಂದು ಮುಖ್ಯಮಂತ್ರಿಗಳು ನೀಡಿರುವ ಹೇಳಿಕೆ ಈಗ ರಾಜ್ಯಾದ್ಯಂತ ಭಾರಿ ಚರ್ಚೆಗೆ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರದ ಈ ನಡೆಯನ್ನು ಖಂಡಿಸಿ ಶಿಕ್ಷಣ…

Read More

Weekly Career Horoscope: ಜುಲೈ 26 ರಿಂದ ಆಗಸ್ಟ್​​​ 01 ರವರೆಗಿನ ವಾರದ ಉದ್ಯೋಗ ಭವಿಷ್ಯ ಇಲ್ಲಿದೆ – Kannada News | Weekly Career Horoscope: July 26 Aug 01 – Navigate Work Challenges and Opportunities

ಜುಲೈ 26 ರಿಂದ ಆಗಷ್ಟ್ 01 ರವರೆಗೆ ಐದನೇ ವಾರವಾಗಿದ್ದು ಸಹನೆಯನ್ನು ಕಾಯ್ದುಕೊಳ್ಳುವುದು, ಅತಿಯಾದ ನಿರೀಕ್ಷೆಯಿಂದ ಬೇಸರ, ಪಡೆಯ ಜವಾಬ್ದಾರಿಯನ್ನು ನಿರ್ವಹಿಸುವ ಆತಂಕ, ಲಾಭಕ್ಕಾಗಿ ಕೆಲವನ್ನು ಬಿಡುವುದು ಇದೆಲ್ಲ ಬರಲಿದ್ದು, ಹೊಸ ಹೊಸತನ್ನು ಕಲಿಯುವುದು ಅನಿವಾರ್ಯವೂ ಆಗಲಿದೆ. ಕಳೆದುಹೋದುದರ ಬಗ್ಗೆ ಲೆಕ್ಕಿಸದೇ ವರ್ತಮಾನದಲ್ಲಿ ನೆಮ್ಮದಿಯಿಂದ ಇರುವ ಬಗೆಯನ್ನು ಕಾಣಿರಿ.‌ ಶುಭವಾಗಲಿ. ಮೇಷ ರಾಶಿ : ಮೇಷ ರಾಶಿಯವರ ಉದ್ಯೋಗ ಸ್ಥಾನದ ಅಧಿಪತಿಯಾದ ಶನಿಯು ದ್ವಾದಶದಲ್ಲಿದ್ದು, ದ್ವಿತೀಯ ಸ್ಥಾನದಲ್ಲಿ ಮಂಗಳನಿರುವುದರಿಂದ ಕಾರ್ಯಕ್ಷೇತ್ರದಲ್ಲಿ ತೀವ್ರ ಪರಿಶ್ರಮದ ಅಗತ್ಯವಿದೆ. ಕಚೇರಿಯಲ್ಲಿ ಮೇಲಧಿಕಾರಿಗಳೊಂದಿಗೆ…

Read More

ಕಲರ್ಸ್ ಕನ್ನಡದಲ್ಲಿ ಜುಲೈ 26ಕ್ಕೆ ‘ಕಲ್ಟ್’ ಸಿನಿಮಾ; ಜೈದ್ ಖಾನ್ ಚಿತ್ರದ ಪ್ರಸಾರದ ಬಗ್ಗೆ ಇಲ್ಲಿದೆ ವಿವರ – Kannada News | Zaid Khan Starrer Cult Set for World Television Premiere on Colors Kannada this Sunday

ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಂಡಿದ್ದ ನಟ ಜೈದ್ ಖಾನ್ (Zaid Khan)  ನಟನೆಯ ‘ಕಲ್ಟ್’ ಸಿನಿಮಾ ಈಗ ಕಿರುತೆರೆಗೆ ಲಗ್ಗೆ ಇಡುತ್ತಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಇದೇ ಜುಲೈ 26ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ಚಿತ್ರದ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಪ್ರಸಾರವಾಗಲಿದೆ. ಸ್ನೇಹ, ಪ್ರೀತಿ, ಕನಸುಗಳು ಹಾಗೂ ಇಂದಿನ ಯುವ ಪೀಳಿಗೆಯ ಜೀವನದ ಕಥಾಹಂದರವನ್ನು ಈ ಸಿನಿಮಾ ಹೊಂದಿದೆ. ಚಿತ್ರದಲ್ಲಿ ನಟ ಜೈದ್ ಖಾನ್ ಮಾಧವ ಎಂಬ ಪಾತ್ರದಲ್ಲಿ ಲವರ್ ಬಾಯ್ ಹಾಗೂ ಭಗ್ನಪ್ರೇಮಿಯ ಎರಡು…

Read More

ಮಹಾರಾಷ್ಟ್ರ ಪೇಪರ್ ಲೀಕ್ ಮಾಸ್ಟರ್‌ಮೈಂಡ್ ವಿಜಯೇಂದ್ರ ಗುಪ್ತಾ ಬಿಹಾರದಲ್ಲಿ ಬಂಧನ – Kannada News | Thane Police Apprehend Mastermind Behind Maharashtra TET Paper Leak in Bihar

ಮಹಾರಾಷ್ಟ್ರ, ಜು.25: ಇತ್ತೀಚೆಗೆ ನಡೆದ ಟಿಇಟಿ (ಶಿಕ್ಷಕರ ಅರ್ಹತಾ ಪರೀಕ್ಷೆ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅದರ ಮಾಸ್ಟರ್‌ಮೈಂಡ್ ವಿಜಯೇಂದ್ರ ಗುಪ್ತಾನನ್ನು ಬಂಧಿಸಲಾಗಿದೆ. ಥಾಣೆ ಪೊಲೀಸರು ಬಿಹಾರದಲ್ಲಿ ಕಾರ್ಯಾಚರಣೆ ನಡೆಸಿ, ಪ್ರಕರಣದ ಪ್ರಮುಖ ಆರೋಪಿ ಗುಪ್ತಾನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಂಧನವು ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ದೊಡ್ಡ ಹೊಡೆತ ನೀಡಿದಂತಾಗಿದೆ. ರಾಜ್ಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಇನ್ನು ಮುಂದೆ ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಲಾಗಿದ್ದು, ಇಂತಹ ಪ್ರಕರಣಗಳನ್ನು ನಿಭಾಯಿಸಲು ಹೊಸ ಮಸೂದೆಯೊಂದನ್ನು ಜಾರಿಗೆ ತರಲು ಮಹಾರಾಷ್ಟ್ರ…

Read More

ಮೆಟ್ರೋ, ಇಂಟರ್ನೆಟ್ ಬಂದ್ ಮಾಡಬಹುದು, ಆದರೆ ಪೇಪರ್ ಲೀಕ್ ತಡೆಯಲು ಆಗಲ್ಲ!: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ – Kannada News | Rahul Gandhi Slams Centre Over NEET Protest; Demands Education Minister Resignation

ನವದೆಹಲಿ, ಜುಲೈ 25: ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪೇಪರ್ ಲೀಕ್ ಖಂಡಿಸಿ ಧರಣಿ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಖಂಡಿಸಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಿಭಟನಾನಿರತ ವಿದ್ಯಾರ್ಥಿಗಳು ಇಟ್ಟಿರುವ ಮೂರು ಪ್ರಮುಖ ಬೇಡಿಕೆಗಳ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ…

Read More

‘ಸುಮನ್ ರಂಗನಾಥನ್ ಸಿನಿಮಾ ಪ್ರಚಾರಕ್ಕೆ ಬರುತ್ತಿಲ್ಲ’; ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ‘ತದ್ವಿರುದ್ಧ’ ಟೀಂ – Kannada News | Actress Suman Ranganath Faces Complaint in Film Chamber by Tadvirudha Movie Team Over Promotion Issues

ಬಹುಭಾಷಾ ನಟಿ ಸುಮನ್ ರಂಗನಾಥನ್ (Suman Ranganathan) ವಿರುದ್ಧ ‘ತದ್ವಿರುದ್ಧ’ ಸಿನಿಮಾದ ನಿರ್ಮಾಣ ಸಂಸ್ಥೆ ಚಾರ್ಮಿಯನ್ ಮೋಷನ್ ಪಿಕ್ಚರ್ಸ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಅಧಿಕೃತವಾಗಿ ದೂರು ನೀಡಿದೆ. ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದರೂ ನಟಿ ಪ್ರಚಾರ ಕಾರ್ಯಕ್ರಮಗಳಿಗೆ ಸಹಕರಿಸುತ್ತಿಲ್ಲ ಎಂದು ಚಿತ್ರತಂಡ ಗಂಭೀರವಾಗಿ ಆರೋಪಿಸಿದೆ. ನಟಿಗೆ ನೀಡಬೇಕಾದ ಸಂಭಾವನೆಯನ್ನು ಸಂಪೂರ್ಣವಾಗಿ ಚುಕ್ತಾ ಮಾಡಿದ್ದರೂ, ಅವರು ಕಳೆದ ಕೆಲವು ತಿಂಗಳುಗಳಿಂದ ಚಿತ್ರತಂಡಕ್ಕೆ ಸಿಗದೆ ಸತಾಯಿಸುತ್ತಿದ್ದಾರೆ ಎಂದು ನಿರ್ಮಾಪಕರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಾಣಿಜ್ಯ ಮಂಡಳಿಗೆ ನೀಡಿರುವ ದೂರಿನ…

Read More