Headlines

ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗರ್- ಶಿವಲಿಂಗೇಗೌಡ – Kannada News | Talks War Between BJP MLA Sharanu Salagar And Congress MLA shivalingegowda In Session

ಬೆಂಗಳೂರು, (ಫೆಬ್ರವರಿ 04): ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಲಂಚ ಆರೋಪ ಪ್ರಕರಣ ಸಂಬಂಧ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ (BJP And JDS) ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಸಚಿವ ತಿಮ್ಮಾಪುರ ರಾಜೀನಾಮೆ ನೀಡಬೇಕೆಂದು ಧರಣಿ ನಡೆಸಿವೆ. ನಿನ್ನೆ(ಫೆಬ್ರವರಿ 03) ಅಹೋರಾತ್ರಿ ಧರಣಿ ನಡೆಸಿ ತಿಮ್ಮಾಪುರ ರಾಜೀನಾಮೆಗೆ ಪಟ್ಟು ಹಿಡಿದಿದ್ದು, ಇಂದು (ಫೆ.04)  ಸಹ ಪ್ರತಿಭಟನೆ ಮುಂದುವರೆಸಿವೆ. ಈ ವೇಳೆ ಬಸವಕಲ್ಯಾಣ  ಬಿಜೆಪಿ  ಶಾಸಕ ಶರಣು ಸಲಗರ್ ಹಾಗೂ ಅರಸೀಕರೆ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ವೈಯಕ್ತಿಕವಾಗಿ ಬೈದಾಡಿಕೊಂಡಿಕೊಂಡಿರುವ…

Read More

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ; ಕೇಂದ್ರದ ಅರಣ್ಯ ಸಚಿವರ ಜತೆ ಹೆಚ್​ಡಿಕೆ ಮಾತುಕತೆ – Kannada News | Elephant Attacks in Karnataka: HDK Urges Central Govt for Urgent Human Wildlife Conflict Solutions

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ, ಫೆಬ್ರುವರಿ 04: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H D Kumaraswamy) ಅವರು, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಭೂಪೇಂದ್ರ ಯಾದವ್‌ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು. ಸಂಸತ್‌…

Read More

ವಂಟಮೂರಿ ಮಹಿಳೆ ವಿವಸ್ತ್ರ ಕೇಸ್; 12 ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ – Kannada News | Vantamuri Woman Assault Case: 12 Accused Get 5 Year Rigorous Imprisonment in Belagavi

ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್​​Image Credit source: Google ಬೆಳಗಾವಿ, ಫೆಬ್ರುವರಿ 04: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 12 ಜನ ಆರೋಪಿಗಳಿಗೆ ಐದು ವರ್ಷಗಳ ಕಠಿಣ ಶಿಕ್ಷೆಯನ್ನು ಬೆಳಗಾವಿಯ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸಿದೆ. ಈ ಕುರಿತು ನ್ಯಾಯಾಧೀಶ ಎಚ್.ಎಸ್. ಮಂಜುನಾಥ ಅವರು ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು 12 ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಸಾಬೀತಾಗಿದ್ದು, ಪ್ರತಿಯೊಂದು ಸೆಕ್ಷನ್‌ಗೆ ಒಂದೊಂದು ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ….

Read More

ಕ್ವಾರ್ಟರ್ ಫೈನಲ್​ ಪಂದ್ಯಕ್ಕೆ ಕರ್ನಾಟಕ ತಂಡ ಪ್ರಕಟ – Kannada News | Karnataka squad for Ranji Trophy quarterfinal

ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯಕ್ಕಾಗಿ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ದೇವದತ್ ಪಡಿಕ್ಕಲ್ ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಲ್ಲಿ ಟೀಮ್ ಇಂಡಿಯಾ ಆಟಗಾರರಾದ ಕೆಎಲ್ ರಾಹುಲ್ ಹಾಗೂ ಪ್ರಸಿದ್ಧ್ ಕೃಷ್ಣ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಕಳೆದ ಪಂದ್ಯದ ವೇಳೆ ಗಾಯಗೊಂಡು ಹೊರಗುಳಿದಿದ್ದ ಅನುಭವಿ ದಾಂಡಿಗ ಕರುಣ್ ನಾಯರ್ ಈ ಬಾರಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದರೊಂದಿಗೆ ಮಯಾಂಕ್ ಅಗರ್ವಾಲ್ ಕೂಡ ತಂಡದಲ್ಲಿದ್ದಾರೆ. ಆದರೆ ಮಂಡಿರಜ್ಜು ಗಾಯದಿಂದ ಬಳಲುತ್ತಿರುವ ವೇಗಿ ವೈಶಾಕ್…

Read More

Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ – Kannada News | Young Girl Rescued After Bull Attack in Lucknow’s Chowkpatia Area

ಲಕ್ನೋ, ಫೆಬ್ರವರಿ 04: ಬಾಲಕಿಯನ್ನು ಅಟ್ಟಾಡಿಸಿ ಬಂದು ದಾಳಿ ನಡೆಸುತ್ತಿದ್ದ ಗೂಳಿಯಿಂದ, ಬಾಲಕಿಯನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಸ್ಥಳೀಯರು ಆಕೆಯನ್ನು ರಕ್ಷಿಸಲು ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ, ಕೊನೆಗೆ ವ್ಯಕ್ತಿಯೊಬ್ಬ ಗೂಳಿಗೆ ತನ್ನ ಕೈಯಲ್ಲಿದ್ದ ಟವೆಲ್ ಬೀಸುವ ಮೂಲಕ ಬೇರೆಡೆಗೆ ಗಮನ ಸೆಳೆದು ಆಕೆಯನ್ನು ಉಳಿಸಿಕೊಳ್ಳುತ್ತಾರೆ. ಈ ಘಟನೆ ಲಕ್ನೋದ ಚೌಪಟ್ಟಿಯಲ್ಲಿ ನಡೆದಿದೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ      Source link

Read More

Spiritual Reasons: ದೇವಸ್ಥಾನದಲ್ಲಿ ದೇವರ ವಿಗ್ರಹದ ಮುಂದೆ ಯಾಕೆ ಫೋಟೋ, ಸೆಲ್ಫಿ ತೆಗೆಯಬಾರದು? ಆಧ್ಯಾತ್ಮಿಕ ಕಾರಣ ಇಲ್ಲಿದೆ – Kannada News | Temple Photography Rules: Why Garbhagudi Photos are Forbidden? Expert Vastu Guide

ದೇವಸ್ಥಾನದಲ್ಲಿ ದೇವರ ವಿಗ್ರಹದ ಮುಂದೆ ಯಾಕೆ ಫೋಟೋ ಸಾಕಷ್ಟು ಜನರಿಗೆ ಹೋದಲ್ಲಿ ಬಂದಲ್ಲಿ ಫೋಟೋ ತೆಗೆದುಕೊಳ್ಳುವ ಆಸೆ ಇರುತ್ತದೆ. ಹಿರಿಯರೊಂದಿಗೆ, ಕುಟುಂಬ ಸಮಾರಂಭಗಳಲ್ಲಿ ಅಥವಾ ಸುಂದರ ಪ್ರಕೃತಿಯ ಮಧ್ಯದಲ್ಲಿ ಸೆಲ್ಫಿ ತೆಗೆದುಕೊಳ್ಳುವುದು ಹೆಚ್ಚಾಗಿ ಬಿಟ್ಟಿದೆ. ಆದರೆ, ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಸೆಲ್ಫಿ ತೆಗೆಸಿಕೊಳ್ಳುವುದು ಇದು ಅಷ್ಟು ಶುಭವಲ್ಲ. ಅದರಲ್ಲಿ ಮುಖ್ಯವಾಗಿ ದೇವಾಲಯಗಳಲ್ಲಿ, ವಿಶೇಷವಾಗಿ ಮೂಲ ವಿಗ್ರಹ ಅಥವಾ ಗರ್ಭಗುಡಿಯೊಳಗೆ ಸೆಲ್ಫಿ ಅಥವಾ ಫೋಟೋಗಳನ್ನು ತೆಗೆದುಕೊಳ್ಳುವುದು ಶುಭವಲ್ಲ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್…

Read More

Video: ಯಾಕೆ ಹಣ್ಣಿಗೆ ಕೊಳಕು ನೀರು ಸಿಂಪಡಣೆ ಮಾಡ್ತೀಯ ಎಂದಿದ್ದಕ್ಕೆ ಗಟ ಗಟನೆ ಚರಂಡಿ ನೀರು ಕುಡಿದ ಹಣ್ಣಿನ ವ್ಯಾಪಾರಿ – Kannada News | Virar Vendor Caught Using Gutter Water on Fruits, Locals Intervene

ವಿರಾರ್, ಫೆಬ್ರವರಿ 04: ಯಾಕೆ ಹಣ್ಣಿಗೆ ಚರಂಡಿ ನೀರು ಸಿಂಪಡಣೆ ಮಾಡ್ತೀರಾ ಎಂದು ಕೇಳಿದ್ದಕ್ಕೆ ಹಣ್ಣಿನ ವ್ಯಾಪಾರಿಯೊಬ್ಬ ಗಟ ಗಟನೆ ಚರಂಡಿ ನೀರು ಕುಡಿದಿರುವ ಘಟನೆ ಮಹಾರಾಷ್ಟ್ರದ ವಿರಾರ್​​ನಲ್ಲಿ ನಡೆದಿದೆ. ನಂತರ ಸ್ಥಳೀಯರು ಆ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿದರು. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.ವೀಡಿಯೊವು ಪುರುಷರ ಗುಂಪೊಂದು ಹಣ್ಣಿನ ಮಾರಾಟಗಾರನಿಗೆ ಹಣ್ಣುಗಳ ಮೇಲೆ ಸಿಂಪಡಿಸುತ್ತಿದ್ದ ನೀರು ಗಟರ್ ನೀರು ಆದರೆ ಅವನು ಆ ನೀರು ಬಿಎಂಸಿ ನೀರು ಎಂದು ವಾದಿಸುತ್ತಿದ್ದ. ಬಿಎಂಸಿ ನೀರು ಎಲ್ಲಿದೆ…

Read More

IPL 2026: ಐಪಿಎಲ್​ಗೆ SRH ತಂಡದ ಸ್ಟಾರ್ ಆಟಗಾರ ಡೌಟ್

ಟಿ20 ವಿಶ್ವಕಪ್​ ಮುಕ್ತಾಯದ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಶುರುವಾಗಲಿದೆ. ಮಾರ್ಚ್ 26 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ (Pat Cummins) ಕಾಣಿಸಿಕೊಳ್ಳುವುದು ಅನುಮಾನ. ಏಕೆಂದರೆ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಪ್ಯಾಟ್ ಕಮಿನ್ಸ್ ಮುಂಬರುವ ಟಿ20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ. ಅಲ್ಲದೆ ಸಂಪೂರ್ಣ ಫಿಟ್ ಆದರೆ ಮಾತ್ರ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಐಪಿಎಲ್​ ಆಡುವ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಪ್ಯಾಟ್ ಕಮಿನ್ಸ್, ಸದ್ಯಕ್ಕೆ…

Read More

ಬ್ರಾಹ್ಮಣ ಸಮುದಾಯಕ್ಕೆ ಅವಮಾನ? ಮನೋಜ್ ಸಿನಿಮಾ ವಿರುದ್ಧ ಆಕ್ರೋಶ – Kannada News | Ghooskhor Pandat movie landed in controversy for its name

ಸಿನಿಮಾಗಳು (Cinema) ವಿವಾದಕ್ಕೆ ಸಿಲುಕುವುದು ತೀರ ಸಾಮಾನ್ಯ ಆಗಿಬಿಟ್ಟಿದೆ. ಸಿನಿಮಾಗಳಲ್ಲಿ ಜಾತಿ, ಧರ್ಮ, ಸಮುದಾಯ, ವೃತ್ತಿಯ ಅಪಮಾನ ಮಾಡಲಾಗಿದೆ ಎಂಬ ದೂರು ಇತ್ತೀಚೆಗೆ ಕೇಳಿ ಬರುತ್ತಲೇ ಇರುತ್ತವೆ. ಇದೀಗ ಇದೇ ಸಾಲಿಗೆ ಖ್ಯಾತ ನಟ ಮನೋಜ್ ಬಾಜಪೇಯಿ ನಟನೆಯ ಸಿನಿಮಾ ಸಹ ಸೇರಿಕೊಂಡಿದೆ. ಮನೋಜ್ ನಟನೆಯ ಹೊಸ ಸಿನಿಮಾ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಹೆಸರಿನ ಬಗ್ಗೆ ಇದೀಗ ಆಕ್ರೋಶ ವ್ಯಕ್ತವಾಗಿದೆ. ಸಿನಿಮಾದ ಹೆಸರು ಬದಲಾವಣೆ ಮಾಡದಿದ್ದಲ್ಲಿ ಸಿನಿಮಾ ಬಹಿಷ್ಕರಿಸುವುದಾಗಿ ಹಲವರು ಪೋಸ್ಟ್​​ಗಳನ್ನು ಹಂಚಿಕೊಂಡಿದ್ದಾರೆ. ಮನೋಜ್…

Read More

ಮಹಿಳೆಯರಲ್ಲಿ ಕ್ಯಾನ್ಸರ್​​ ಹೆಚ್ಚಳ: ಆಘಾತಕಾರಿ ಮಾಹಿತಿ ಬಿಚ್ಚಿಟ್ಟ ಆಂಕಾಲಜಿಸ್ಟ್‌ಗಳು – Kannada News | Oncologists Warn of Rising Cancer Cases Among Young Women, Urge Not to Ignore Symptoms

ಬೆಂಗಳೂರು, ಫೆಬ್ರವರಿ 04: ಕ್ಯಾನ್ಸರ್‌ನ ಪ್ರವೃತ್ತಿಗಳಲ್ಲಿ ಕಳವಳಕಾರಿ ಬದಲಾವಣೆ ಕಂಡುಬರುತ್ತಿದ್ದು, ಕಡಿಮೆ ವಯಸ್ಸಿನ ಮಹಿಳೆಯರಲ್ಲಿಯೇ ಹೆಚ್ಚಾಗಿ ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವ ಬಗ್ಗೆ ಆಂಕಾಲಜಿಸ್ಟ್‌ಗಳು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ರೋಗ ಲಕ್ಷಣಗಳನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡದೆ ಮಹಿಳೆಯರು ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕು ಎಂಬ ಮನವಿಯನ್ನೂ ಆಸ್ಟರ್ ವೈಟ್‌ಫೀಲ್ಡ್ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಆಂಕಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ಅಶ್ವಿನ್ ಕೆ.ಆರ್. ಮಾಡಿದ್ದಾರೆ. ಸ್ಥೂಲತೆ, ಇನ್ಸುಲಿನ್ ಪ್ರತಿರೋಧ, ಮಧುಮೇಹ, ನಿರಂತರ ಒತ್ತಡ, ಸಮಯಕ್ಕೆ ಸರಿಯಾಗಿ ನಿದ್ರೆ ಮಾಡದಿರುವುದು, ತಂಬಾಕು ಸೇವನೆ ಹಾಗೂ…

Read More