ಕೊಪ್ಪಳದಲ್ಲಿ ಮರ್ಯಾದಾ ಹತ್ಯೆ ಯತ್ನ: ಅದೃಷ್ಟವಶಾತ್ 4 ತಿಂಗಳ ಗರ್ಭಿಣಿ ಪ್ರಾಣಾಪಾಯದಿಂದ ಪಾರು – Kannada News | Honor killing attempts In Koppal: Brother Try to Kill Sister Over Love marriage

ಕೊಪ್ಪಳ, (ಫೆಬ್ರವರಿ 18): ಕೊಪ್ಪಳ (Koppal) ತಾಲೂಕಿನ ಹಂದ್ರಾಳ ಗ್ರಾಮದಲ್ಲಿ ಮರ್ಯಾದೆ ಹತ್ಯೆ ಯತ್ನ (honor killing) ನಡೆದಿರುವ ಘಟನೆ ನಡೆದಿದೆ. ಸಹೋದರಿ ಬೇರೆ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಸಹೋದರ ಆಕೆಯನ್ನು ಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ನಾಲ್ಕು ತಿಂಗಳು ಗರ್ಭಿಣಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. 23 ವರ್ಷದ ಮೀನಾಕ್ಷಿ ಕಳೆದ ಎರಡು ವರ್ಷಗಳ ಹಿಂದೆ ST ಸಮುದಾಯದ ಯುವಕನನ್ನ ಪ್ರೀತಿಸಿ ಮದುವೆಯಾಗಿದ್ದು, ಸದ್ಯ ಮೀನಾಕ್ಷಿ ನಾಲ್ಕು ತಿಂಗಳು ಗರ್ಭಿಣಿ. ಇದನ್ನು ಲೆಕ್ಕಿಸದ ಸಹೋದರ ಮಂಜುನಾಥ್ ಎನ್ನುವಾತ ಮೀನಾಕ್ಷಿಯನ್ನು…

Read More

ಅಹಮದಾಬಾದ್​ ಸರ್ಕಾರಿ ಶಾಲೆಗಳಲ್ಲಿ 360 ಮಕ್ಕಳಿಗೆ ಹೃದಯ ಸಮಸ್ಯೆ; ಶಾಕಿಂಗ್ ವಿಷಯ ಬಹಿರಂಗ

ಅಹಮದಾಬಾದ್, ಮಾರ್ಚ್ 13: ಇಂದು ನಡೆದ ಗುಜರಾತ್ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಅಹಮದಾಬಾದ್ ಜಿಲ್ಲೆಯ ಸರ್ಕಾರಿ ಶಾಲೆಗಳ ಬಗ್ಗೆ ಆತಂಕಕಾರಿ ಸಂಗತಿ ಹೊರಬಿದ್ದಿದೆ. ಅಹಮದಾಬಾದ್ ಜಿಲ್ಲೆಯಲ್ಲಿ ವೈದ್ಯಕೀಯ ತಪಾಸಣೆಯ ಸಮಯದಲ್ಲಿ 360 ಮಕ್ಕಳು ಗಂಭೀರ ಹೃದಯ ಕಾಯಿಲೆಗಳಿಂದ ಬಳಲುತ್ತಿರುವುದು ಕಂಡುಬಂದಿದೆ. ಗುಜರಾತ್ ಸರ್ಕಾರವು ರಾಜ್ಯದಲ್ಲಿ ನಡೆಯುತ್ತಿರುವ ಶಾಲಾ ಆರೋಗ್ಯ ತಪಾಸಣೆ (Child health) ಕಾರ್ಯಕ್ರಮದ ವಿವರಗಳನ್ನು ಸದನದಲ್ಲಿ ಮಂಡಿಸಿದಾಗ ಈ ಆಘಾತಕಾರಿ ಸಂಗತಿ ಬಯಲಾಗಿದೆ. ಗುಜರಾತ್ ರಾಜ್ಯ ಆರೋಗ್ಯ ಸಚಿವರು ಹಂಚಿಕೊಂಡ ಮಾಹಿತಿಯ ಪ್ರಕಾರ, ಅಹಮದಾಬಾದ್ ಜಿಲ್ಲೆಯಾದ್ಯಂತ…

Read More

2 ತಂಡಗಳನ್ನು ಗಂಟು ಮೂಟೆ ಕಟ್ಟುವಂತೆ ಮಾಡಿದ 1 ರನ್, 1 ಅಂಕ..! – Kannada News | IPL 2026 PlayOffs: 1 Run, 1 Point: Two Teams Knocked Out

IPL 2026: ಕ್ರಿಕೆಟ್ ಎಂಬುದು ಮಹಾನ್ ಅನಿಶ್ಚಿತತೆಗಳ ಆಟ. ಇಲ್ಲಿ ಕೇವಲ ಒಂದು ಎಸೆತ, ಒಂದು ರನ್ ಅಥವಾ ಪ್ರಕೃತಿಯ ಒಂದು ಸಣ್ಣ ಮುನಿಸು ಇಡೀ ಟೂರ್ನಿಯ ಚಿತ್ರಣವನ್ನೇ ಬದಲಾಯಿಸಿಬಿಡುತ್ತದೆ. ಇದಕ್ಕೆ ತಾಜಾ ಉದಾಹರಣೆ ಡೆಲ್ಲಿ ಕ್ಯಾಪಿಟಲ್ಸ್ (DC) ಮತ್ತು ಪಂಜಾಬ್ ಕಿಂಗ್ಸ್ (PBKS) ತಂಡಗಳು. ಇಡೀ ಟೂರ್ನಿಯುದ್ದಕ್ಕೂ ಅದ್ಭುತವಾಗಿ ಆಡಿದರೂ, ಅಂತಿಮವಾಗಿ ಪ್ಲೇಆಫ್ ಹಂತ ತಲುಪಲು ಈ ಎರಡೂ ತಂಡಗಳಿಗೆ ಅಡ್ಡಿಯಾಗಿದ್ದು ಕೇವಲ ‘1 ರನ್’ ಮತ್ತು ‘1 ಅಂಕ’ದ ಸಣ್ಣ ವ್ಯತ್ಯಾಸ! ಡೆಲ್ಲಿ ತಂಡದ…

Read More

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?, ಗಂಡ-ಹೆಂಡ್ತಿ ಜಗಳ ಕೇಸ್​ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ – Kannada News | Big Twist To Chikkaballapur Husband And Wife Harassment Case: Manjunath Released Meghashree Photos

ಚಿಕ್ಕಬಳ್ಳಾಪುರ, (ಜನವರಿ 11): ಗಂಡ ಹೆಂಡ್ತಿ ಜಗಳ ಉಂಡು ಮಲಗೋ ತನಕ ಅಂತಾರೆ. ಆದ್ರೆ, ಇವರ ಜಗಳ ಮಾತ್ರ ಬೀದಿಗೆ ಬಂದಿದೆ. ತನ್ನ ಗಂಡ ಸೈಕೋ, ಸಾಕಷ್ಟು ಟಾರ್ಚರ್ ಕೊಡುತ್ತಾನೆ ಎಂದು ಮಹಿಳೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಅತ್ತೆ ಮಾನವ ಮುಂದೆ ಬೆತ್ತಲಾಗಿ ಓಡಾಡುತ್ತಾನೆ. ಅಶ್ಲೀಲ ವಿಡಿಯೋ ತೋರಿಸಿ ಕಾಟ ಕೊಡುತ್ತಾನೆಂದು ದೂರಿದ್ದಾಳೆ. ಆದರೆ, ಈ ಕೇಸಿಗೆ ಗಂಡ ಟ್ವಿಸ್ಟ್ ಮೇಲೆ ಟ್ವಿಸ್ಟ್ ಕೊಟ್ಟಿದ್ದಾರೆ. ನಮ್ಮಿಬ್ಬರಿಗೂ ಅಧಿಕೃತವಾಗಿ ಮದುವೆಯಾಗಿಲ್ಲ. ಮದುವೆ ನೊಂದಣಿಗೆ ಮೇಘಾಶ್ರೀ ದಾಖಲೆಗಳನ್ನು ಕೋಡಲಿಲ್ಲ. ಇದರಿಂದ ಅನುಮಾನ…

Read More

Daily Devotional: ಶನಿಗ್ರಹ ಇತರ ಗ್ರಹದೊಂದಿಗೆ ಇದ್ರೆ ಯಾವ ಖಾಯಿಲೆ ಬರುತ್ತೆ ಗೊತ್ತಾ? – Kannada News | Daily Devotional: Saturns Influence, Health Issues Arising from Conjunctions with Other Planets

ಬೆಂಗಳೂರು, ಜನವರಿ 14: ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ಭಗವಾನರನ್ನು ಪ್ರಮುಖ ಗ್ರಹವೆಂದು ಪರಿಗಣಿಸಲಾಗಿದೆ. ಶನಿ ಒಂದು ರಾಶಿಯಲ್ಲಿ ಎರಡುವರೆ ವರ್ಷ ಸ್ಥಿತನಾಗಿದ್ದು, ಅದರ ಸಂಚಾರ ಮತ್ತು ದೃಷ್ಟಿಯು ವ್ಯಕ್ತಿಯ ಜೀವನದ ಮೇಲೆ ಆಳವಾದ ಪ್ರಭಾವ ಬೀರುತ್ತದೆ. ಶನಿಯು ಏಕಾಂಗಿಯಾಗಿರುವಾಗ ವಾತ ಕಾಯಿಲೆಗಳು, ನರ ದೌರ್ಬಲ್ಯ, ಪ್ಯಾರಾಲಿಸಿಸ್, ಕಿಡ್ನಿ ವೈಫಲ್ಯ, ಅಜೀರ್ಣ ಮತ್ತು ಕೂದಲು ಉದುರುವಿಕೆ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳನ್ನು ನೀಡಬಹುದು. ಇತರೆ ಗ್ರಹಗಳೊಂದಿಗೆ ಶನಿ ಸಂಯೋಗಗೊಂಡಾಗ, ವಿಭಿನ್ನ ರೀತಿಯ ಅನಾರೋಗ್ಯಗಳು ಮತ್ತು ತೊಂದರೆಗಳು ಉಂಟಾಗಬಹುದು. ಉದಾಹರಣೆಗೆ,…

Read More

ಓಹ್ ಈಗ ಸಿಕ್ದೆ ನೋಡು, ಎರಡು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಹೆಂಡತಿಯನ್ನು ಮತಗಟ್ಟೆಯಲ್ಲಿ ಕಂಡ ಪತಿ ಮಾಡಿದ್ದೇನು? – Kannada News | West Bengal: Missing Wife Found at Polling Booth, Husband’s Election Day Confrontation Drama

ಕೋಲ್ಕತ್ತಾ, ಏಪ್ರಿಲ್ 24: ಓಹ್ ಈಗ ಸಿಕ್ದೆ ನೋಡು ಎಲ್ಲಿದ್ದೆ ಇಷ್ಟು ದಿನ? ಇದು ಎರಡು ವರ್ಷಗಳಿಂದ ನಾಪತ್ತೆಯಾಗಿದ್ದ ಪತ್ನಿಯನ್ನು ಮತಗಟ್ಟೆಯಲ್ಲಿ ಕಂಡಾಗಿ ಪತಿ ಕೇಳಿದ ಪ್ರಶ್ನೆ ಇದು. ಪಶ್ಚಿಮ ಬಂಗಾಳ(West Bengal)ದಲ್ಲಿ ಏಪ್ರಿಲ್ 23ರಂದು ನಡೆದ ಮೊದಲ ಹಂತದ ಮತದಾನದ ಸಂದರ್ಭದಲ್ಲಿ ಎರಡು ವರ್ಷಗಳ ಹಿಂದೆ ಕಾಣೆಯಾಗಿದ್ದ ಪತ್ನಿಯನ್ನು ಪತಿ ಕಂಡಿದ್ದಾರೆ. ತಾರಾಬರಿ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 25/238 ರ ಹೊರಗೆ ಒಬ್ಬ ವ್ಯಕ್ತಿ ಅತಿಯಾದ ಬಿಸಿಲನ್ನೂ ಲೆಕ್ಕಿಸದೆ ಗಂಟೆಗಟ್ಟಲೆ ಓಡಾಡುತ್ತಿದ್ದ. ಬೆವರಿನಿಂದ ಮೈ…

Read More

ಬಿಸಿಲಿನ ಬೇಗೆಗೆ ಕಬಿನಿ ನೀರಿನಲ್ಲಿ ‘ಯಂಗ್ ಟೈಗರ್’ ಕೂಲ್ ಕೂಲ್!

ಮೈಸೂರು, ಏ.6: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತಿದ್ದು, ಕೇವಲ ಮನುಷ್ಯರಿಗಷ್ಟೇ ಅಲ್ಲದೆ ಪ್ರಾಣಿಗಳಿಗೂ ಬಿಸಿಲ ಬೇಗೆ ತಟ್ಟಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲ್ಲೂಕಿನ ಪ್ರಸಿದ್ಧ ಕಬಿನಿ ಹಿನ್ನೀರಿನಲ್ಲಿ ಯಂಗ್ ಟೈಗರ್ (Young Tiger) ಒಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕಬಿನಿ ಹಿನ್ನೀರಿನಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಈ ಅದ್ಭುತ ದೃಶ್ಯ ಕಂಡುಬಂದಿದೆ. ಕೆಂಡದಂತಹ ಬಿಸಿಲಿನಿಂದ ಪಾರಾಗಲು ಈ ಯುವ ಹುಲಿಯು…

Read More

ಹಸಿವಾದಾಗ ಸಿಕ್ಕಾಪಟ್ಟೆ ಕೋಪ ಬರೋದೇಕೆ? ಇದರ ಹಿಂದಿನ ಕಾರಣವೇನು ಗೊತ್ತಾ? – Kannada News

ಆಹಾರವು ನಮ್ಮ ದೇಹಕ್ಕೆ ಅತ್ಯಗತ್ಯವಾಗಿ ಬೇಕೇಬೇಕು. ನೀರಿನಂತೆ ಆಹಾರವು ನಮ್ಮ ದೇಹಕ್ಕೆ ಮೂಲಭೂತ ಅವಶ್ಯಕತೆಯಾಗಿದೆ. ಇದು ನಮ್ಮ ಸಕ್ರಿಯರಾಗಿಲು, ಚೈತನ್ಯಶೀಲರಾಗಿರಲು ಸಹಾಯ ಮಾಡುತ್ತದೆ. ಅದೇ ಹೊಟ್ಟೆಗೆ ಸರಿಯಾಗಿ ಊಟ ಬೀಳದಿದ್ದರೆ ಅಥವಾ ಸಿಕ್ಕಾಪಟ್ಟೆ ಹಸಿದಾಗ (hungry) ಹೆಚ್ಚಿನವರಿಗೆ ಕಿರಿಕಿರಿ ಉಂಟಾಗುತ್ತದೆ, ಸಣ್ಣಪುಟ್ಟ ವಿಚಾರಗಳಿಗೂ ಕೋಪ ಬರುತ್ತದೆ. ಇದೇ ರೀತಿ ನಿಮಗೂ ಹಸಿವಾದಾಗ ಜಾಸ್ತಿ ಕೋಪ ಬರುತ್ತಾ? ಹಸಿದಾಗ ಕೋಪ ಬರೋದೇಕೆ, ಇದರ ಹಿಂದಿನ ವೈಜ್ಞಾನಿಕ ಕಾರಣವೇನು ಎಂಬುದರ ಸಂಪೂರ್ಣ ವಿವರವನ್ನು ತಿಳಿಯಿರಿ. ಹಸಿವಾದಾಗ ಕೋಪ ಬರೋದೇಕೆ? ನಾವು…

Read More

ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ: 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ – Kannada News | Hoskote Teen Kalyani’s Suspicious Death: Inter District Body Transfer Raises Police Questions

ಚಿಕ್ಕಬಳ್ಳಾಪುರ, ಫೆ.10: ಜಿಲ್ಲೆಯಲ್ಲಿ 17 ವರ್ಷದ ಬಾಲಕಿ ಕಲ್ಯಾಣಿಯ ನಿಗೂಢ ಸಾವು ಮತ್ತು ಆಕೆಯ ಶವವನ್ನು ಪೊಲೀಸರಿಗೆ ತಿಳಿಸದೆ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ಸಾಗಿಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗಿಡ್ನಹಳ್ಳಿ ಗ್ರಾಮದಲ್ಲಿ ದೊಡ್ಡಪ್ಪ-ದೊಡ್ಡಮ್ಮನ ಮನೆಯಲ್ಲಿ ಬೆಳೆದಿದ್ದ ಕಲ್ಯಾಣಿ ಇಂದು ಬೆಳಿಗ್ಗೆ ಗಿಡ್ನಹಳ್ಳಿ ಗ್ರಾಮದ ತೋಟವೊಂದರ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಬಾಲಕಿ ಸಾವನ್ನಪ್ಪಿದ ನಂತರ, ಪೋಷಕರು ಮತ್ತು ಸಂಬಂಧಿಕರು ಸ್ಥಳೀಯ ನಂದಗುಡಿ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ಶವವನ್ನು…

Read More

“ನೀವು ವೇಶ್ಯಾವಾಟಿಕೆ ನಡೆಸುತ್ತೀರಾ?”: ಮನೆಯಿಂದ ಹೊರಗೆ ಎಳೆದು ತಂದು ಮಹಿಳೆ ಮೇಲೆ ಅಮಾನವೀಯ ಹಲ್ಲೆ!

ಬೆಂಗಳೂರು, ಏ. 6: ಸಿಲಿಕಾನ್ ಸಿಟಿಯ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಭೀಕರ ಘಟನೆಯೊಂದು ನಡೆದಿದೆ. ಮನೆಯಲ್ಲಿ ಯುವಕನ ಜೊತೆಗಿದ್ದಾಳೆ ಎಂಬ ಕಾರಣಕ್ಕೆ ಪಶ್ಚಿಮ ಬಂಗಾಳ ಮೂಲದ ಮಹಿಳೆಯೊಬ್ಬರನ್ನು ಮನೆಯಿಂದ ಹೊರಗೆ ಎಳೆದು ತಂದು ಅಮಾನವೀಯವಾಗಿ ಹಲ್ಲೆ ನಡೆಸಲಾಗಿದೆ. ಏಪ್ರಿಲ್ 4ರಂದು ಶನಿವಾರ ರಾತ್ರಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪಶ್ಚಿಮ ಬಂಗಾಳ ಮೂಲದ ಮಹಿಳೆಯು ವರ್ತೂರು ವ್ಯಾಪ್ತಿಯಲ್ಲಿ ವಾಸವಿದ್ದರು. ಏಪ್ರಿಲ್ 4ರಂದು ಆಕೆ ತನ್ನ ಮನೆಯಲ್ಲಿ ಯುವಕನೋರ್ವನ ಜೊತೆ ಇದ್ದಾಗ, ಕೆಲವು…

Read More