Telangana Earthquake: ತೆಲಂಗಾಣದಲ್ಲಿ 3.8 ತೀವ್ರತೆಯ ಭೂಕಂಪ – Kannada News | Telangana Earthquake: 3.8 Magnitude Quake Hits Bhadradri Kothagudem, No Damage Reported

ತೆಲಂಗಾಣ, ಜೂನ್ 14: ತೆಲಂಗಾಣದ ಭದ್ರಾದ್ರಿ ಕೊತ್ತಗೊಡಂ ಜಿಲ್ಲೆ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ (ಜೂನ್ 14) ಬೆಳಗಿನ ಜಾವ ಲಘು ಭೂಕಂಪ(Earthquake) ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 3.8 ರಷ್ಟು ದಾಖಲಾಗಿದ್ದರೂ, ಯಾವುದೇ ರೀತಿಯ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟ ಸಂಭವಿಸದಿರುವುದು ಇಡೀ ರಾಜ್ಯವು ನಿರಾಳವಾಗುವಂತೆ ಮಾಡಿದೆ.

ಬೆಳಗಿನ ಜಾವ 2.26 ರ ಸುಮಾರಿಗೆ ಜನರು ಗಾಢ ನಿದ್ರೆಯಲ್ಲಿದ್ದಾಗ ಈ ಕಂಪನ ಸಂಭವಿಸಿದೆ. ಹಠಾತ್ ಜಾಗೃತರಾದ ಸ್ಥಳೀಯ ನಿವಾಸಿಗಳು ಮುನ್ನೆಚ್ಚರಿಕಾ ಕ್ರಮವಾಗಿ ತಕ್ಷಣವೇ ತಮ್ಮ ಮನೆಗಳಿಂದ ಹೊರಗೆ ಬಂದು ಮುಕ್ತ ಪ್ರದೇಶಗಳಲ್ಲಿ ಆಶ್ರಯ ಪಡೆದರು. ತೀವ್ರತೆ ಅತ್ಯಂತ ಕಡಿಮೆ ಇದ್ದ ಕಾರಣ ಜಿಲ್ಲೆಯ ಯಾವುದೇ ಭಾಗದಲ್ಲೂ ಮನೆಗಳು ಕುಸಿತಗೊಂಡ ಅಥವಾ ಯಾರಿಗಾದರೂ ಗಾಯಗಳಾದ ವರದಿಗಳು ಬಂದಿಲ್ಲ.

ಭೂಕಂಪದ ಕೇಂದ್ರಬಿಂದು ಮತ್ತು ತಾಂತ್ರಿಕ ವಿವರಗಳುರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಭದ್ರಾಚಲಂನಿಂದ ನೈಋತ್ಯಕ್ಕೆ ಸುಮಾರು 20 ಕಿಲೋಮೀಟರ್ ದೂರದಲ್ಲಿದೆ (17.492° ಉತ್ತರ ಅಕ್ಷಾಂಶ ಮತ್ತು 80.894° ಪೂರ್ವ ರೇಖಾಂಶ). ಆಳ: ಭೂಮಿಯ ಮೇಲ್ಮೈಯಿಂದ ಸುಮಾರು 10 ಕಿಲೋಮೀಟರ್ ಆಳದಲ್ಲಿ ಟೆಕ್ಟೋನಿಕ್ ಪ್ಲೇಟ್‌ಗಳ ಸಾಮಾನ್ಯ ಚಲನೆಯಿಂದಾಗಿ ಈ ಕಂಪನ ಉಂಟಾಗಿದೆ. ಕೇಂದ್ರಬಿಂದುವಿನಿಂದ 25 ಕಿ.ಮೀ ದೂರದಲ್ಲಿರುವ ಪಲ್ವಂಚ ಸೇರಿದಂತೆ ಭದ್ರಾಚಲಂ, ಸಾತುಪಲ್ಲಿ ಮತ್ತು ಕೊತ್ತಗೊಡಂ ಭಾಗಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ.

ಮತ್ತಷ್ಟು ಓದಿ: Philippines Earthquake: ದಕ್ಷಿಣ ಫಿಲಿಪೈನ್ಸ್​​ನಲ್ಲಿ 7.8 ತೀವ್ರತೆಯ ಭೂಕಂಪ, ಓರ್ವ ಸಾವು, ಹಲವರಿಗೆ ಗಾಯ, ಸುನಾಮಿ ಎಚ್ಚರಿಕೆ

ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿವೆ
ಆರಂಭದಲ್ಲಿ ಭೂಕಂಪದ ತೀವ್ರತೆಯನ್ನು 3.5 ಎಂದು ಅಂದಾಜಿಸಲಾಗಿದ್ದರೂ, ನಂತರ ಅದನ್ನು ನಿಖರವಾಗಿ 3.8 ಕ್ಕೆ ಪರಿಷ್ಕರಿಸಲಾಯಿತು. ಮುಖ್ಯ ಕಂಪನದ ನಂತರ ಸುಮಾರು 25 ನಿಮಿಷಗಳ ಕಾಲ ಸಣ್ಣ ಪ್ರಮಾಣದ ಕಂಪನಗಳು ಕಾಣಿಸಿಕೊಂಡಿದ್ದರಿಂದ ಜನರು ಸ್ವಲ್ಪ ಸಮಯ ಹೊರಾಂಗಣದಲ್ಲೇ ಕಳೆದರು. ಪ್ರಸ್ತುತ ಪರಿಸ್ಥಿತಿ ಸಂಪೂರ್ಣ ತಿಳಿಯಾಗಿದ್ದು, ಕಂದಾಯ ಮತ್ತು ವಿಪತ್ತು ನಿರ್ವಹಣಾ ಅಧಿಕಾರಿಗಳು ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಇದೇ ಪ್ರದೇಶದಲ್ಲಿ ಕಳೆದ ನಾಲ್ಕು ವರ್ಷಗಳ ಹಿಂದೆ, ಅಂದರೆ ಫೆಬ್ರವರಿ 18, 2022 ರಂದು ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿತ್ತು. ಅದಕ್ಕೆ ಹೋಲಿಸಿದರೆ ಪ್ರಸ್ತುತ ಸಂಭವಿಸಿರುವ ಭೂಕಂಪವು ಅತ್ಯಂತ ಸೌಮ್ಯವಾಗಿದ್ದು, ಜನಜೀವನ ಯಥಾಸ್ಥಿತಿಗೆ ಮರಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಶಾಂತಿ ಒಪ್ಪಂದದ ಸನಿಹದಲ್ಲಿ ಇರಾನ್-ಅಮೆರಿಕ: ಇರಾನ್ ನಾಯಕ ಅಯತೊಲ್ಲಾ ಖಮೇನಿ ಅಂತ್ಯಕ್ರಿಯೆಗೆ ದಿನಾಂಕ ಪ್ರಕಟ – Kannada News | Iran US Peace Deal Nears: Khamenei Funeral Dates Set, Hormuz Strait to Open

ಟೆಹ್ರಾನ್, ಜೂನ್ 14: ಮಧ್ಯಪ್ರಾಚ್ಯದಲ್ಲಿ ದೀರ್ಘಕಾಲದ ಉದ್ವಿಗ್ನತೆಗೆ ಕಾರಣವಾಗಿದ್ದ ಸಂಘಷಘ ಕೊನೆಗೊಂಡು ಶಾಶ್ವತ ಶಾಂತಿ ನೆಲೆಸಯವ ಅತ್ಯಂತ ಆಶಾದಾಯಕ ಬೆಳವಣಿಗೆಗಗಳು ಜಾಗತಿಕ ವೇದಿಕೆಯಲ್ಲಿ ನಡೆಯುತ್ತಿವೆ. ಇರಾನ್​ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ತಂದೆ ಅಯತೊಲ್ಲಾ ಅಲಿ ಖಮೇನಿ(Ayatollah Ali Khamenei) ಅವರ ಅಂತ್ಯಕ್ರಿಯೆಯ ಅಧಿಕೃತ ದಿನಾಂಕಗಳನ್ನು ಇರಾನ್ ಪ್ರಕಟಿಸಿದ್ದು. ಮತ್ತೊಂದೆಡೆ ಅಮೆರಿಕದೊಂದಿಗಿನ ಐತಿಹಾಸಿಕ ಶಾಂತಿ ಒಪ್ಪಂದವು ಅಂತಿಮ ಘಟ್ಟಕ್ಕೆ ತಲುಪಿದೆ.

ಅಲಿ ಖಮೇನಿ ಅಂತ್ಯಕ್ರಿಯೆ ವಿಳಂಬಕ್ಕೆ ಕಾರಣವೇನು?
ಫೆಬ್ರವರಿ 28ರಂದು 86 ವರ್ಷದ ಅಯತೊಲ್ಲಾ ಅಲಿ ಖಮೇನಿ ನಿಧನರಾಗಿದ್ದರು, ಆರು ದಿನಗಳ ಅಂತ್ಯಕ್ರಿಯೆ ಕಾರ್ಯಕ್ರಮ ಜಯಲೈನಲ್ಲಿ ನಡೆಯಲಿವೆ ಎಂದು ಇರಾನ್ ಫಾರ್ಸ್​ ಸುದ್ದಿ ಸಂಸ್ಥೆ ತಿಳಿಸಿದೆ.
ಅಂತ್ಯಕ್ರಿಯೆಯನ್ನು ಇಸ್ಲಾಮಿಕ್ ಕ್ಯಾಲೆಂಡರ್‌ನ ಮೊದಲ ತಿಂಗಳಾದ ಮೊಹರಂ ಆರಂಭದಲ್ಲಿ ನಡೆಸಲು ಮೊದಲು ನಿರ್ಧರಿಸಲಾಗಿತ್ತು. ಆದರೆ, ಪ್ರವಾದಿ ಮೊಹಮ್ಮದರ ಮೊಮ್ಮಗ ಇಮಾಮ್ ಹುಸೇನ್‌ಗಾಗಿ ಕರ್ಬಲಾ ಕದನದ ಹಿನ್ನೆಲೆಯಲ್ಲಿ ದೇಶದಾದ್ಯಂತ ಸಾರ್ವಜನಿಕರು ನಡೆಸುವ ವಾರ್ಷಿಕ ಶೋಕಾಚರಣೆಗೆ ಮೊದಲ ಆದ್ಯತೆ ನೀಡಲು ಇರಾನ್ ಸರ್ಕಾರವು ಈ ನಿರ್ಧಾರವನ್ನು ಜುಲೈಗೆ ಮುಂದೂಡಿದೆ.

ಜುಲೈ 4 ಮತ್ತು 5, ಟೆಹ್ರಾನ್‌ನ ಇಮಾಮ್ ಖೊಮೇನಿ ಪ್ರಾರ್ಥನಾ ಮೈದಾನದಲ್ಲಿ ಸಾರ್ವಜನಿಕ ಬೀಳ್ಕೊಡುಗೆ

ಜುಲೈ 6: ಮುಖ್ಯ ಶ್ರದ್ಧಾಂಜಲಿ ಮೆರವಣಿಗೆ

ಜುಲೈ 7 ಮತ್ತು 9: ಕ್ರಮವಾಗಿ ಕೋಮ್ ಮತ್ತು ಅವರ ತವರು ಮಶಾದ್ ನಗರಗಳಲ್ಲಿ ಅಂತಿಮ ವಿಧಿವಿಧಾನಗಳು ನೆರವೇರಲಿವೆ.

ಮತ್ತಷ್ಟು ಓದಿ: ಇರಾನ್ ಸರ್ವೋಚ್ಚ ನಾಯಕನೇ ನಮ್ಮ ಟಾರ್ಗೆಟ್ ಎಂದ ಇಸ್ರೇಲ್; ಯಾರು ಈ ಖಮೇನಿ?

ಇತಿಹಾಸ ಸೃಷ್ಟಿಸಲಿರುವ ಶಾಂತಿ ಒಪ್ಪಂದ ಮತ್ತು ಮುಕ್ತ ಜಲಮಾರ್ಗ
ಮೂರು ತಿಂಗಳಿಗೂ ಹೆಚ್ಚು ಕಾಲ ನಡೆದ ಅಮೆರಿಕ-ಇರಾನ್ ನಡುವಿನ ಸಂಘರ್ಷವು ಈಗ ಸಂಪೂರ್ಣವಾಗಿ ಮುಕ್ತಾಯಗೊಳ್ಳುವ ಹಂತಕ್ಕೆ ಬಂದಿದೆ. ಉಭಯ ದೇಶಗಳು ಜಾಗತಿಕ ಇಂಧನ ಮತ್ತು ಆರ್ಥಿಕ ಸ್ಥಿರತೆಗೆ ಪೂರಕವಾದ ಒಪ್ಪಂದಕ್ಕೆ ಸಹಿ ಹಾಕಲು ದಿನಗಣನೆ ಆರಂಭಿಸಿವೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಒಪ್ಪಂದವು ಅತ್ಯಂತ ಸನಿಹದಲ್ಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಐತಿಹಾಸಿಕ ಒಪ್ಪಂದಕ್ಕೆ ಸಹಿ ಬೀಳುತ್ತಿದ್ದಂತೆಯೇ, ಜಾಗತಿಕ ತೈಲ ಸಾಗಣೆಯ ಪ್ರಮುಖ ನರನಾಡಿಯಾಗಿರುವ ‘ಹಾರ್ಮುಜ್ ಜಲಸಂಧಿ’ಯು ಜಗತ್ತಿನ ಎಲ್ಲಾ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಸಂಪೂರ್ಣ ಮುಕ್ತವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಜಾಗತಿಕ ಮಧ್ಯಸ್ಥಿಕೆ ಮತ್ತು ಡಿಜಿಟಲ್ ಮುನ್ನಡೆ
ಈ ಐತಿಹಾಸಿಕ ಒಪ್ಪಂದವನ್ನು ಯಶಸ್ವಿಗೊಳಿಸುವಲ್ಲಿ ನೆರೆಯ ರಾಷ್ಟ್ರಗಳು ಮಹತ್ವದ ರಾಜತಾಂತ್ರಿಕ ಪಾತ್ರ ವಹಿಸಿವೆ. ಪ್ರಮುಖ ಸಂಧಾನಕಾರ ದೇಶಗಳಲ್ಲಿ ಒಂದಾದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ತಮ್ಮ ದೇಶವು ಎಲೆಕ್ಟ್ರಾನಿಕ್ ಸಹಿಗೆ (Electronic Signature) ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿರುವುದಾಗಿ ಪ್ರಕಟಿಸಿದ್ದಾರೆ. ಮುಂದಿನ 24 ಗಂಟೆಗಳ ಒಳಗೆ ಈ ಒಪ್ಪಂದವು ಅಧಿಕೃತಗೊಳ್ಳುವ ಸಾಧ್ಯತೆಗಳಿದ್ದು, ಇದು ಇಡೀ ಮಧ್ಯಪ್ರಾಚ್ಯದಲ್ಲಿ ಅಭಿವೃದ್ಧಿ ಮತ್ತು ದೀರ್ಘಕಾಲೀನ ಶಾಂತಿಗೆ ಬಲವಾದ ಅಡಿಪಾಯವನ್ನು ನಿರ್ಮಿಸಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಗಿಲ್ ಗಿಲಕ್ಕು… ಒಂದೇ ಕೈಯಲ್ಲಿ ಅತ್ಯದ್ಭುತ ಕ್ಯಾಚ್..! – Kannada News | Captain Shubman Gill with an absolute stunner Catch

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ಶುಭ್​​ಮನ್ ಗಿಲ್ ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಮಳೆ ಬಾಧಿತ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 21.2 ಓವರ್​ಗಳಲ್ಲಿ 182 ರನ್​ಗಳಿಸಿ 7 ವಿಕೆಟ್ ಕಳೆದುಕೊಂಡಿತ್ತು.

ಈ ವೇಳೆ ಕ್ರೀಸ್​ಗೆ ಆಗಮಿಸಿದ ಅಲ್ಲಾ ಗಝನ್​ಫರ್ ಹರ್ಷ್ ದುಬೆ ಎಸೆದ ಎಸೆತವನ್ನು ಲೆಗ್-ಸೈಡ್ ಕಡೆಗೆ ಬಲವಾಗಿ ಬ್ಯಾಟ್ ಬೀಸಲು ಯತ್ನಿಸಿದರು. ಬ್ಯಾಟ್‌ನ ಮೇಲ್ಭಾಗದ ಅಂಚಿಗೆತಗುಲಿದ ಚೆಂಡು, ವಿಕೆಟ್ ಕೀಪರ್‌ನನ್ನೂ ಮೀರಿ ವೇಗವಾಗಿ ಹಿಂದಕ್ಕೆ ಹಾರಿತು.

ಮೊದಲ ಸ್ಲಿಪ್‌ನಲ್ಲಿ ನಿಂತಿದ್ದ ನಾಯಕ ಶುಭ್​ಮನ್ ಗಿಲ್, ಕ್ಷಣಾರ್ಧದಲ್ಲಿ ಗಾಳಿಯಲ್ಲಿ ಜಿಗಿದು ಕೇವಲ ತಮ್ಮ ಎಡಗೈಯಿಂದ  ಅದ್ಭುತವಾಗಿ ಚೆಂಡನ್ನು ಹಿಡಿದರು.  ಈ ಕ್ಯಾಚ್ ನೋಡಿ ಟೀಮ್ ಇಂಡಿಯಾ ಆಟಗಾರರು ಹಾಗೂ ಪ್ರೇಕ್ಷಕರು ಆಶ್ಚರ್ಯಚಕಿತರಾದರು.

ಇದೀಗ ಈ ಅಸಾಧಾರಣ ಕ್ಯಾಚ್ ವಿಡಿಯೋ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಭಾರತೀಯ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಇದು ಅತ್ಯುತ್ತಮ ಸ್ಲಿಪ್ ಕ್ಯಾಚ್‌ಗಳಲ್ಲಿ ಒಂದಾಗಿದೆ ಎಂದು ಅಭಿಮಾನಿಗಳು ಮತ್ತು ವಿಶ್ಲೇಷಕರು ಶ್ಲಾಘಿಸುತ್ತಿದ್ದಾರೆ.

ಗೆದ್ದು ಬೀಗಿದ ಟೀಮ್ ಇಂಡಿಯಾ:

ಮಳೆಯ ಕಾರಣ 25 ಓವರ್​ಗಳಲ್ಲಿ ಸೀಮಿತವಾಗಿದ್ದ ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್​​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ಪರ ಆರಂಭಿಕ ದಾಂಡಿಗ ರಹಮಾನುಲ್ಲಾ ಗುರ್ಬಾಝ್ (102) ಭರ್ಜರಿ ಶತಕ ಸಿಡಿಸಿದರು.

ಗುರ್ಬಾಝ್ ಔಟಾಗುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ ಅಫ್ಘಾನಿಸ್ತಾನ್ ತಂಡವು 24.5 ಓವರ್​ಗಳಲ್ಲಿ 194 ರನ್​ಗಳಿಸಿ ಸರ್ವಪತನ ಕಂಡಿತು.

ಇದನ್ನೂ ಓದಿ: ಕೆಎಲ್ ರಾಹುಲ್​ ಸಿಕ್ಸ್​ಗೆ ಬೆರಗಾದ ಗೌತಮ್ ಗಂಭೀರ್!

195 ರನ್​ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ಶುಭ್​ಮನ್ ಗಿಲ್ ಅಜೇಯ 84 ರನ್ ಬಾರಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ ಕೇವಲ 19 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಸ್ಫೋಟಕ 39 ರನ್ ಚಚ್ಚಿದರು. ಈ ಮೂಲಕ ಟೀಮ್ ಇಂಡಿಯಾ 22.5 ಓವರ್​ಗಳಲ್ಲಿ 195 ರನ್​ಗಳಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

Published On – 8:25 am, Sun, 14 June 26

Source link

World Blood Donor Day: ಇಂದು ವಿಶ್ವ ರಕ್ತದಾನಿಗಳ ದಿನ; ಜೀವದಾತರಿಗೆ ಕೃತಜ್ಞತಾ ನಮನ – Kannada News | World Blood Donor Day: Save Lives and Honor Donors; Why Donation is Mahadana

“ರಕ್ತವನ್ನು ಕಾರ್ಖಾನೆಯಲ್ಲಿ ತಯಾರಿಸಲು ಸಾಧ್ಯವಿಲ್ಲ; ಅದು ಹೃದಯದಿಂದ ಮಾತ್ರ ಹರಿಯುತ್ತದೆ — ಒಂದು ಜೀವದಿಂದ ಮತ್ತೊಂದು ಜೀವಕ್ಕೆ.”ಪ್ರತಿ ವರ್ಷ ಜೂನ್ 14ರಂದು ಆಚರಿಸಲಾಗುವ ವಿಶ್ವ ರಕ್ತದಾನಿಗಳ ದಿನ ಕೇವಲ ಕ್ಯಾಲೆಂಡರ್‌ನಲ್ಲಿನ ಒಂದು ದಿನವಲ್ಲ. ಯಾವುದೇ ಪ್ರತಿಫಲವನ್ನು ಬಯಸದೆ, ತಮ್ಮ ರಕ್ತದ ಮೂಲಕ ಅಪರಿಚಿತರ ಬದುಕಿನಲ್ಲಿ ಆಶೆಯ ಬೆಳಕು ಮೂಡಿಸುವ ಲಕ್ಷಾಂತರ ಜೀವದಾತರಿಗೆ ಸಮಾಜ ಸಲ್ಲಿಸುವ ಕೃತಜ್ಞತೆಯ ದಿನವಿದು.

ಅಪರಿಚಿತರ ಬಾಳಿಗೆ ಆಶಾಕಿರಣ:

ಒಬ್ಬ ರಕ್ತದಾನಿ ತನ್ನ ರಕ್ತವನ್ನು ನೀಡುವಾಗ, ಅದು ಯಾರ ಬದುಕನ್ನು ಉಳಿಸುತ್ತದೆ ಎಂಬುದು ಅವನಿಗೆ ತಿಳಿದಿರುವುದಿಲ್ಲ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಯುವಕ, ಹೆರಿಗೆಯ ಕೊಠಡಿಯಲ್ಲಿ ಜೀವಕ್ಕಾಗಿ ಹೋರಾಡುತ್ತಿರುವ ತಾಯಿ, ಕ್ಯಾನ್ಸರ್ ಚಿಕಿತ್ಸೆಯಲ್ಲಿರುವ ಪುಟ್ಟ ಮಗು, ಅಥವಾ ಪ್ರತಿ ತಿಂಗಳು ರಕ್ತಕ್ಕಾಗಿ ಎದುರು ನೋಡುವ ಥಲಸ್ಸೇಮಿಯಾ ರೋಗಿ — ಇವರಿಗೆಲ್ಲಾ ಆ ರಕ್ತವೇ ಹೊಸ ಬದುಕಿನ ಭರವಸೆಯಾಗಿರುತ್ತದೆ. “ಒಂದು ಯೂನಿಟ್ ರಕ್ತವು ಮೂರು ಜೀವಗಳನ್ನು ಉಳಿಸಬಲ್ಲದು” ಎಂಬುದು ವೈದ್ಯಕೀಯ ಸತ್ಯ. ಇದೇ ರಕ್ತದಾನದ ನಿಜವಾದ ಮಹತ್ವ ಮತ್ತು ಅದರ ಅಪಾರ ಶಕ್ತಿ.

ಸಮಾಜದ ಮೌನ ನಾಯಕರು:

ಆದ್ದರಿಂದಲೇ ರಕ್ತದಾನಿಗಳು ಕೇವಲ ದಾನಿಗಳಲ್ಲ; ಅವರು ಸಮಾಜದ ಮೌನ ನಾಯಕರು, ನಿಜವಾದ ಮಾನವತಾವಾದಿಗಳು. ಅವರ ಕೆಲವೇ ನಿಮಿಷಗಳ ಸೇವೆ ಅನೇಕ ಕುಟುಂಬಗಳ ಬದುಕಿನಲ್ಲಿ ಆಶಾಕಿರಣವಾಗಿ ಬೆಳಗುತ್ತಿದೆ. ದೇಶದಾದ್ಯಂತ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುತ್ತಿರುವ ಪ್ರತಿಯೊಬ್ಬ ಜೀವದಾತರಿಗೂ ಈ ಸಂದರ್ಭದಲ್ಲಿ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುವುದು ನಮ್ಮ ಕರ್ತವ್ಯ.

ರಕ್ತದಾನಿಗಳಿಗೆ ಸಿಗಬೇಕಿದೆ ಸಾಂಸ್ಥಿಕ ಗೌರವ:

ಆದರೆ ಕೇವಲ ಚಪ್ಪಾಳೆಗಳು, ಪ್ರಶಂಸೆಗಳು ಮತ್ತು ಸನ್ಮಾನಗಳು ಮಾತ್ರ ಇವರ ಸೇವೆಗೆ ಸಾಕಾಗುವುದಿಲ್ಲ. ಸಮಾಜ ಮತ್ತು ಸರ್ಕಾರಗಳು ರಕ್ತದಾನಿಗಳ ಸೇವೆಯನ್ನು ನಿಜವಾದ ಅರ್ಥದಲ್ಲಿ ಗೌರವಿಸುವ ನಿಟ್ಟಿನಲ್ಲಿ ಕೆಲವು ಸ್ಪಷ್ಟ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ.

ವಿಶೇಷ ಕಲ್ಯಾಣ ಯೋಜನೆಗಳು:

ನಿಯಮಿತ ರಕ್ತದಾನಿಗಳಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಶೇಷ ಕಲ್ಯಾಣ ಯೋಜನೆಗಳನ್ನು ರೂಪಿಸಬೇಕು. ಉಚಿತ ಆರೋಗ್ಯ ತಪಾಸಣೆ, ವಿಮಾ ಸೌಲಭ್ಯ, ವೈದ್ಯಕೀಯ ಸಲಹೆ ಹಾಗೂ ಆಯುಷ್ಮಾನ್ ಭಾರತ ಸೇರಿದಂತೆ ವಿವಿಧ ಆರೋಗ್ಯ ಯೋಜನೆಗಳಲ್ಲಿ ಇವರಿಗೆ ವಿಶೇಷ ಆದ್ಯತೆ ಸಿಗಬೇಕು.

ಇದನ್ನೂ ಓದಿ: ಮಕ್ಕಳ ಸುಂದರ ಬಾಲ್ಯ, ಉಜ್ವಲ ಭವಿಷ್ಯವನ್ನು ಕಸಿಯುತ್ತಿದೆ ಬಾಲ ಕಾರ್ಮಿಕ ಪದ್ಧತಿ

ಭೇದಭಾವ ಮುಕ್ತ ಸೌಲಭ್ಯ:

ರಕ್ತದಾನಕ್ಕೆ ಬಡತನ ಅಥವಾ ಶ್ರೀಮಂತಿಕೆಯ ಗಡಿ ಇಲ್ಲ. ಆದ್ದರಿಂದ ರಕ್ತದಾನಿಗಳಿಗೆ ನೀಡುವ ಸೌಲಭ್ಯಗಳಲ್ಲಿ ಬಿಪಿಎಲ್-ಎಪಿಎಲ್ ಎಂಬ ಭೇದಭಾವ ಇರಬಾರದು. ಜೀವ ಉಳಿಸುವ ಸೇವೆಗೆ ಎಲ್ಲರೂ ಸಮಾನ ಗೌರವ ಪಡೆಯಬೇಕು.

ಚಿಕಿತ್ಸೆಯಲ್ಲಿ ಆದ್ಯತೆ:

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ನೋಂದಾಯಿತ ನಿಯಮಿತ ರಕ್ತದಾನಿಗಳಿಗೆ ತುರ್ತು ಚಿಕಿತ್ಸಾ ಸೇವೆಗಳಲ್ಲಿ ಕನಿಷ್ಠ ಮಟ್ಟದ ಆದ್ಯತೆ ನೀಡುವ ವ್ಯವಸ್ಥೆಯೂ ಜಾರಿಯಾಗಬೇಕು. ಇದು ಯಾವುದೇ ವಿಶೇಷ ಸವಲತ್ತಲ್ಲ; ನಿರಂತರವಾಗಿ ಜೀವದಾನ ಮಾಡುತ್ತಿರುವ ವ್ಯಕ್ತಿಗಳಿಗೆ ಸಲ್ಲಬೇಕಾದ ಸಾಮಾಜಿಕ ಗೌರವದ ಸಂಕೇತವಾಗಿದೆ.

ರಕ್ತದಾನವೇ ಮಹಾದಾನ:

ಇಂದು ನಮ್ಮ ದೇಶದ ರಕ್ತ ಬ್ಯಾಂಕ್‌ಗಳು ಸುರಕ್ಷಿತ ರಕ್ತದಿಂದ ತುಂಬಿರಲು ಕಾರಣ ಲಕ್ಷಾಂತರ ಸ್ವಯಂಸೇವಕ ರಕ್ತದಾನಿಗಳು. ಅವರ ಈ ಅಮೂಲ್ಯ ಸೇವೆಗೆ ಅಧಿಕೃತ ಮಾನ್ಯತೆ ಮತ್ತು ಸಾಮಾಜಿಕ ಗೌರವ ದೊರಕಲೇಬೇಕು. ಧನದಾನ, ಅನ್ನದಾನ, ವಿದ್ಯಾದಾನ — ಇವೆಲ್ಲವೂ ಮಹತ್ವದ ದಾನಗಳೇ. ಆದರೆ ಸಂಕಷ್ಟದ ಕ್ಷಣದಲ್ಲಿ ಒಬ್ಬ ವ್ಯಕ್ತಿಯ ಜೀವ ಉಳಿಸುವ ರಕ್ತದಾನವು ಜೀವದಾನಕ್ಕೆ ಸಮಾನವಾದ ‘ಮಹಾದಾನ’ ಎನಿಸಿಕೊಳ್ಳುತ್ತದೆ.

ಈ ದಿನದ ನಮ್ಮ ಸಂಕಲ್ಪ:

ಈ ವಿಶ್ವ ರಕ್ತದಾನಿಗಳ ದಿನದಂದು ನಾವೆಲ್ಲರೂ ಒಂದು ದೃಢ ಸಂಕಲ್ಪ ಮಾಡೋಣ:

“ರಕ್ತದಾನ ಮಾಡೋಣ, ಜೀವ ಉಳಿಸೋಣ.”

“ರಕ್ತದಾನಿಗಳನ್ನು ಗೌರವಿಸೋಣ, ಪ್ರೋತ್ಸಾಹಿಸೋಣ.”

ಲೇಖನ: ಡಾ. ರವಿಕಿರಣ ಪಟವರ್ಧನ, ಪಟವರ್ಧನ ಆಯುರ್ವೇದ, ಶಿರಸಿ 08384 225836

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೆಹಲಿ: ಅಗ್ನಿ ಅವಘಡ, 3 ಮಂದಿ ಸಾವು, ಶಾರ್ಟ್​ಸರ್ಕ್ಯೂಟ್ ಅಲ್ಲ, ಘಟನೆಗೂ ಮುನ್ನ ಕಾಣಿಸಿಕೊಂಡ ಮುಸುಕುಧಾರಿ ಮಹಿಳೆ ಯಾರು? – Kannada News | Delhi Fire Mystery: Masked Woman on CCTV Before Fatal Blaze, Not Short Circuit

ನವದೆಹಲಿ, ಜೂನ್ 14: ಆಗ್ನೇಯ ದೆಹಲಿಯ ಗೋವಿಂದಪುರಿ ಪ್ರದೇಶದ ವಸತಿ ಕಟ್ಟಡವೊಂದರಲ್ಲಿ ಇತ್ತೀಚೆಗೆ ಸಂಭವಿಸಿದ ದುರದೃಷ್ಟಕರ ಬೆಂಕಿ ಅವಘಡ(Fire Accident) ತನಿಖೆಯಲ್ಲಿ ದೆಹಲಿ ಪೊಲೀಸರಿಗೆ ಸುಳಿವು ಲಭ್ಯವಾಗಿದೆ. ಪ್ರಕರಣದ ಹಿಂದಿರುವ ರಹಸ್ಯವನ್ನು ಭೇದಿಸಲು ಹಾದಿ ಸುಗಮವಾಗಿದೆ. ಆರಂಭದಲ್ಲಿ ಕೇವಲ ಶಾರ್ಟ್ ಸರ್ಕ್ಯೂಟ್ ಇರಬಹುದು ಎಂದು ಶಂಕಿಸಲಾಗಿದ್ದ ಈ ಘಟನೆಗೆ, ಈಗ ಲಭ್ಯವಾಗಿರುವ ಸಿಸಿಟಿವಿ (CCTV) ದೃಶ್ಯಾವಳಿಗಳು ತನಿಖೆಯನ್ನು ತಾರ್ಕಿಕ ಅಂತ್ಯದತ್ತ ಕೊಂಡೊಯ್ಯಲು ನೆರವಾಗಿವೆ.

ತುಘಲಕಾಬಾದ್ ಎಕ್ಸ್‌ಟೆನ್ಶನ್‌ನ ಪಾರ್ಕಿಂಗ್ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಜೂನ್ 11-12ರ ರಾತ್ರಿ ಬೆಳಗಿನ ಜಾವ 2.23 ರ ಸುಮಾರಿಗೆ ಮುಸುಕುಧಾರಿ ಮಹಿಳೆಯೊಬ್ಬಳು ಕಟ್ಟಡ ಪ್ರವೇಶಿಸುವುದು ಕಂಡುಬಂದಿದೆ. ಆಕೆ ಹೋದ ಕೆಲವೇ ಕ್ಷಣಗಳಲ್ಲಿ ಗೇಟ್ ಒಳಗಿನಿಂದ ಬೆಳಕಿನ ಮಿಂಚು ಕಾಣಿಸಿಕೊಂಡಿದ್ದು, ತಕ್ಷಣವೇ ಆಕೆ ಕಟ್ಟಡದಿಂದ ಹೊರನಡೆದಿದ್ದಾಳೆ. ಈ ದೃಶ್ಯವು ಪೊಲೀಸರಿಗೆ ತನಿಖೆಯ ದಿಕ್ಕನ್ನು ನಿಖರಗೊಳಿಸಲು ಮತ್ತು ಶಂಕಿತ ವ್ಯಕ್ತಿಯನ್ನು ಪತ್ತೆಹಚ್ಚಲು ಭಾರಿ ದೊಡ್ಡ ಪುರಾವೆಯಾಗಿ ಸಿಕ್ಕಿದೆ.

ಬೆಳಗಿನ ಜಾವ 2.31 ಕ್ಕೆ ಕರೆ ಬಂದ ತಕ್ಷಣವೇ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಜಂಟಿಯಾಗಿ ಅತ್ಯಂತ ವೇಗವಾಗಿ ಕಾರ್ಯಾಚರಣೆ ಆರಂಭಿಸಿದರು. ದಟ್ಟವಾದ ಹೊಗೆಯ ನಡುವೆಯೂ ಕಟ್ಟಡದೊಳಗೆ ಸಿಲುಕಿದ್ದ ಹಲವಾರು ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವಲ್ಲಿ ರಕ್ಷಣಾ ಪಡೆಗಳು ಯಶಸ್ವಿಯಾಗಿವೆ. ಗಾಯಗೊಂಡಿರುವ ಗುಡ್ಡಿ ದೇವಿ ಹಾಗೂ ಮೋನಿ ಅವರಿಗೆ ಆಸ್ಪತ್ರೆಯಲ್ಲಿ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಮತ್ತಷ್ಟು ಓದಿ: ಓಮನ್ ಕರಾವಳಿಯಲ್ಲಿ 24 ಭಾರತೀಯ ನಾವಿಕರಿದ್ದ ಹಡಗಿನಲ್ಲಿ ಬೆಂಕಿ ಅವಘಡ

ಕಟ್ಟಡದಲ್ಲಿದ್ದ ನಿವಾಸಿಗಳು ತಮ್ಮ ಅದ್ಭುತ ಸಮಯಪ್ರಜ್ಞೆಯಿಂದ ಪ್ರಾಣ ಉಳಿಸಿಕೊಂಡಿದ್ದಾರೆ. ಎರಡನೇ ಮಹಡಿಯ ಪ್ರಕಾಶ್ ಮಂಡಲ್ ಅವರು ಪಕ್ಕದ ಫ್ಲಾಟ್‌ನಿಂದ ಎಸೆದ ಸೀರೆಯನ್ನು ಪೈಪ್‌ಗೆ ಕಟ್ಟಿ ಸಾಹಸದಿಂದ ಕೆಳಗೆ ಇಳಿದರೆ, ಐದನೇ ಮಹಡಿಯ ರಾಧೇಶ್ಯಾಮ್ ಅವರು ತಮ್ಮ ಹೆಣ್ಣುಮಕ್ಕಳೊಂದಿಗೆ ಟೆರೇಸ್‌ನಿಂದ ಪಕ್ಕದ ಛಾವಣಿಗೆ ಹಾರಿ ಪಾರಾಗಿದ್ದಾರೆ. ಇನ್ನು ಕೆಲವು ಕುಟುಂಬಗಳು ಬೇಸಿಗೆ ರಜೆಗಾಗಿ ಮುಂಚಿತವಾಗಿಯೇ ಊರಿಗೆ ತೆರಳಿದ್ದರಿಂದ ದೊಡ್ಡ ಮಟ್ಟದ ಪ್ರಾಣಹಾನಿ ತಪ್ಪಿದಂತಾಗಿದೆ.

ವಿಡಿಯೋ

ಮಾಳವೀಯ ನಗರದ ಹೋಟೆಲ್ ಅವಘಡದ ನಂತರ ದೆಹಲಿ ಪೊಲೀಸರು ಇಂತಹ ಘಟನೆಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ವಿಧಿವಿಜ್ಞಾನ (Forensic) ತಂಡಗಳು ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ತಾಂತ್ರಿಕ ಸಾಕ್ಷ್ಯಗಳನ್ನು ವಿಶ್ಲೇಷಿಸುತ್ತಿದ್ದು, ಶಂಕಿತ ಮಹಿಳೆಯನ್ನು ಬಂಧಿಸಲು ನಿರಂತರ ದಾಳಿಗಳನ್ನು ನಡೆಸುತ್ತಿದ್ದಾರೆ. ಕಳ್ಳತನ ಅಥವಾ ದುಷ್ಕೃತ್ಯದ ಯಾವುದೇ ಸಂಚು ಇದ್ದರೂ ಅದನ್ನು ಶೀಘ್ರದಲ್ಲೇ ಬಯಲಿಗೆಳೆದು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಲು ಇಲಾಖೆ ಸಂಪೂರ್ಣ ಬದ್ಧವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಶಾಲಾ ಮಕ್ಕಳಿಗಿನ್ನು ಚಪ್ಪಲಿ ಭಾಗ್ಯ!: ಮಕ್ಕಳ ಆರೋಗ್ಯ ಗಮನದಲ್ಲಿರಿಸಿ ಶಿಕ್ಷಣ ಇಲಾಖೆಯಿಂದ ಹೊಸ ಚಿಂತನೆ – Kannada News | Govt School Students May Get Shoes or Slippers Depending on Regional Weather Conditions

ಸಾಂದರ್ಭಿಕ ಚಿತ್ರImage Credit source: newindianexpress.com

ಬೆಂಗಳೂರು, ಜೂನ್​​ 14: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಶೂ-ಸಾಕ್ಸ್ ಯೋಜನೆಯಲ್ಲಿ ಕೊಂಚ ಬದಲಾವಣೆ ತರಲು ಶಿಕ್ಷಣ ಇಲಾಖೆ ಮುಂದಾದಗಿದ್ದು, ವಾತಾವರಣಕ್ಕೆ ತಕ್ಕಂತೆ ಮಕ್ಕಳಿಗೆ ಶೂ ಅಥವಾ ಚಪ್ಪಲಿ ನೀಡಲು ಚಿಂತನೆ ನಡೆಸಿದೆ. ದೀರ್ಘ ಕಾಲ ಶೂ ಧರಿಸುವುದರಿಂದ ಕೆಲ ವಿದ್ಯಾರ್ಥಿಗಳಲ್ಲಿ ಕಾಲಿನಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವ ಪ್ರಕರಗಳು ವರದಿಯಾದ ಬೆನ್ನಲ್ಲೇ ಮಹತ್ವದ ನಿರ್ಧಾರಕ್ಕೆ ಇಲಾಖೆ ಮುಂದಾಗಿದೆ. ಯಾವೆಲ್ಲ ಪ್ರದೇಶಗಳಲ್ಲಿ ಮಕ್ಕಳಿಗೆ ಶೂ ಅಥವಾ ಚಪ್ಪಲಿ ಸೂಕ್ತ ಎಂಬ ಬಗ್ಗೆ ಜಿಲ್ಲಾ ಉಪನಿರ್ದೇಶಕರಿಂದ ಮಾಹಿತಿಯನ್ನೂ ಕೇಳಲಾಗಿದೆ.

ಮುಖ್ಯಾಂಶಗಳು

  • ವಿದ್ಯಾರ್ಥಿಗಳಿಗೆ ಶೂ-ಸಾಕ್ಸ್; ಯೋಜನೆಯಲ್ಲಿ ಕೊಂಚ ಬದಲಾವಣೆ
  • ವಾತಾವರಣಕ್ಕೆ ತಕ್ಕಂತೆ ಶೂ ಅಥವಾ ಚಪ್ಪಲಿ ನೀಡಲು ಚಿಂತನೆ
  • ಮಕ್ಕಳ ಆರೋಗ್ಯ ಸೇರಿ ಹಲವು ಅಂಶ ಪರಿಗಣಿಸಿರುವ ಶಿಕ್ಷಣ ಇಲಾಖೆ

ಚಪ್ಪಲಿ ವಿತರಣೆಗೆ ಹೆಚ್ಚಿನ ಒಲವು ಯಾಕೆ?

ಮಳೆ ಮತ್ತು ಬೇಸಿಗೆ ಕಾಲಗಳೆರಡರಲ್ಲೂ ಚಪ್ಪಲಿಯನ್ನು ಧರಿಸೋದು ವಿದ್ಯಾರ್ಥಿಗಳಿಗೆ ಸುಲಭವಾಗಲಿದೆ. ಅಲ್ಲದೆ ದೀರ್ಘ ಕಾಲ ಶೂ ಧರಿಸೋದು ವಿವಿಧ ಸೋಂಕುಗಳಿಗೂ ಕಾರಣವಾಗಬಹುದು. ಜೊತೆಗೆ ಮಳೆಗಾಲದಲ್ಲಿ ಸಾಕ್ಸ್ ಒದ್ದೆಯಾಗಿ ವಾಸನೆ ಬರುವ ಸಾಧ್ಯತೆಯೂ ಹೆಚ್ಚಿರಲಿದೆ. ಈ ಎಲ್ಲ ಕಾರಣಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಚಪ್ಪಲಿ ವಿತರಿಸುವ ಬಗ್ಗೆ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ.

ಇದನ್ನೂ ಓದಿ: ಬಿಇ, ಬಿಟೆಕ್, ಎಂಟೆಕ್ ವಿದ್ಯಾರ್ಥಿಗಳಿಗೆ ಡಿಆರ್‌ಡಿಒದಲ್ಲಿ ಇಂಟರ್ನ್‌ಶಿಪ್ ಅವಕಾಶ; ಸ್ಟೈಫಂಡ್ ಕೂಡ ಲಭ್ಯ!

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಪ್ರತಿ ವರ್ಷ ಶಿಕ್ಷಣ ಇಲಾಖೆಯಿಂದ ಒಂದು ಜೊತೆ ಶೂ ಮತ್ತು ಎರಡು ಜತೆ ಸಾಕ್ಸ್ ವಿತರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಕಳೆದ ವರ್ಷ ಒಂದರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 265 ರೂ., 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 295 ರೂ., 9ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 325 ರೂ.ಗಳನ್ನು ಸರ್ಕಾರ ನಿಗದಿ ಮಾಡಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 8:11 am, Sun, 14 June 26

Source link

ಕೆಎಲ್ ರಾಹುಲ್​ ಸಿಕ್ಸ್​ಗೆ ಬೆರಗಾದ ಗೌತಮ್ ಗಂಭೀರ್! – Kannada News | Gambhir’s Rare Reaction To KL Rahul’s Sublime Shot Goes Viral!

ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು.  ಈ ಸ್ಫೋಟಕ ಬ್ಯಾಟಿಂಗ್​ ನಡುವೆ ಕೆಲವು ಕ್ಲಾಸ್ ಶಾಟ್​ಗಳಿಂದ ಗಮನ ಸೆಳೆದಿದ್ದರು. ಈ ವೇಳೆ ಡಗೌಟ್‌ನಲ್ಲಿ ಕುಳಿತಿದ್ದ ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ನೀಡಿದ ರಿಯಾಕ್ಷನ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಗಂಭೀರ್ ರಿಯಾಕ್ಷನ್!

21ನೇ ಓವರ್​ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ 161 ರನ್​ ಕಲೆಹಾಕಿತ್ತು. ಅದರಂತೆ ಕೊನೆಯ 4 ಓವರ್​ಗಳಲ್ಲಿ ಭಾರತ ತಂಡಕ್ಕೆ 33 ರನ್​ಗಳ ಅವಶ್ಯಕತೆಯಿತ್ತು. 22ನೇ ಓವರ್​ನಲ್ಲಿ ಅಫ್ಘಾನಿಸ್ತಾನದ ವೇಗಿ ಝಿಯಾ ಉರ್ ರೆಹಮಾನ್ ಶರೀಫಿ ಎಸೆದ ಫುಲ್ ಲೆಂಗ್ತ್ ಎಸೆತವನ್ನು ಕೆಎಲ್ ರಾಹುಲ್ ಅತ್ಯಂತ ನಯವಾಗಿ, ಬ್ಯಾಟ್ ಫೇಸ್ ಓಪನ್ ಮಾಡಿ ಕವರ್ಸ್ ಮೇಲಿಂದ ಭರ್ಜರಿಯಾಗಿ ಸಿಕ್ಸರ್​​ಗಟ್ಟಿದರು.

ಸಾಮಾನ್ಯವಾಗಿ ಗಂಭೀರ ಮುಖಭಾವಕ್ಕೇ ಹೆಸರಾದ ಗೌತಮ್ ಗಂಭೀರ್, ಈ ಶಾಟ್ ನೋಡಿದ ತಕ್ಷಣ ಒಂದು ಕ್ಷಣ ಆಶ್ಚರ್ಯಚಕಿತರಾದರು. ತಕ್ಷಣವೇ ಪಕ್ಕದಲ್ಲೇ ಕುಳಿತಿದ್ದ ಬ್ಯಾಟಿಂಗ್ ಕೋಚ್ ಸಿತಾಂಶು ಕೋಟಕ್ ಕಡೆಗೆ ತಿರುಗಿ ಅಚ್ಚರಿಯ ನೋಟವನ್ನು ವಿನಿಮಯ ಮಾಡಿಕೊಂಡರು. ಗಂಭೀರ್ ಅವರ ಈ ಅಪರೂಪದ ಹಾವಭಾವದ ತುಣುಕು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪಂದ್ಯದ ಮುಖ್ಯಾಂಶಗಳು:

  • ಕೆಎಲ್ ಕಮಾಲ್: 5ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ರಾಹುಲ್ ಕೇವಲ 19 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ ಅಬ್ಬರದ 39 ರನ್* ಸಿಡಿಸಿ ತಂಡಕ್ಕೆ ಸುಲಭ ಜಯ ತಂದುಕೊಟ್ಟರು.
  • ಗಿಲ್ ಮೈಲಿಗಲ್ಲು: ನಾಯಕ ಶುಭ್​ಮನ್ ಗಿಲ್ 84* ರನ್ ಗಳಿಸಿ ಅಜೇಯರಾಗಿ ಉಳಿದಿದ್ದಲ್ಲದೆ, ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ (62 ಇನಿಂಗ್ಸ್) 3,000 ರನ್ ಪೂರೈಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಬರೆದರು.
  • ಅಫ್ಘಾನ್ ಹೋರಾಟ: ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ ತಂಡ, ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಝ್ ಅವರ ಆಕರ್ಷಕ ಶತಕದ (102 ರನ್) ನೆರವಿನೊಂದಿಗೆ 194 ರನ್‌ಗಳಿಸಲು ಶಕ್ತರಾಗಿದ್ದರು.
  • ಟೀಮ್ ಇಂಡಿಯಾಗೆ ಜಯ: ಮಳೆಯ ಕಾರಣ 25 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ 22.5 ಓವರ್​ಗಳಲ್ಲಿ 195 ರನ್​ ಬಾರಿಸಿ ಟೀಮ್ ಇಂಡಿಯಾ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಇದನ್ನೂ ಓದಿ: Shubman Gill: ಪರವಾಗಿಲ್ಲ, ತಪ್ಪು ನನ್ನದೇ ಅಂದಿದ್ದಾರೆ..!

ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಇನ್ನು ಉಭಯ ತಂಡಗಳ ಎರಡನೇ ಮುಖಾಮುಖಿ ಜುಲೈ 17 ರಂದು ನಡೆಯಲಿದ್ದು, ಈ ಪಂದ್ಯಕ್ಕೆ ಲಕ್ನೋನ ಏಕಾನ ಸ್ಟೇಡಿಯಂ ಆತಿಥ್ಯವಹಿಸಲಿದೆ.

Source link

‘ನಾನು ಸಲಿಂಗಿ ಅಲ್ಲ’: ದಿಶಾ ಪಟಾನಿ ಜೊತೆಗಿನ ಸಂಬಂಧಕ್ಕೆ ಮೌನಿ ರಾಯ್ ಸ್ಪಷ್ಟನೆ – Kannada News | Mouni Roy denies her rumours of Disha Patani after Divorce with Suraj Nambiar

ಬಾಲಿವುಡ್ ನಟಿ ಮೌನಿ ರಾಯ್ (Mouni Roy) ಇತ್ತೀಚೆಗಷ್ಟೇ ತಮ್ಮ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ್ದರು. ಪತಿ ಸೂರಜ್ ನಂಬಿಯಾರ್ ಅವರಿಂದ ಅಧಿಕೃತವಾಗಿ ಬೇರ್ಪಟ್ಟ ಬೆನ್ನಲ್ಲೇ, ನಟಿಯ ಲೈಂಗಿಕ ಆದ್ಯತೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ವದಂತಿಗಳು ಹರಿದಾಡತೊಡಗಿದ್ದವು. ದಿಶಾ ಪಟಾನಿ (Disha Patani) ಮತ್ತು ಮೌನಿ ರಾಯ್ ಅವರು ಆಪ್ತವಾಗಿ ಇರುವುದನ್ನು ಹಲವರು ತಪ್ಪಾಗಿ ಅರ್ಥೈಸಿದ್ದರು. ಇದೀಗ ಈ ಎಲ್ಲಾ ಊಹಾಪೋಹಗಳಿಗೆ ಮೌನಿ ರಾಯ್ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. ತಾವು ಸಲಿಂಗಿ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಯೂಟ್ಯೂಬ್‌ನಲ್ಲಿ ಪ್ರಸಾರವಾಗುವ ‘ಮೋನಿಕಾ ಶರ್ಮಾ ಚಾಟ್ ಶೋ’ನಲ್ಲಿ ಭಾಗವಹಿಸಿದ್ದ ಮೌನಿ ರಾಯ್ ಅವರಿಗೆ, ಬಾಲಿವುಡ್‌ನಲ್ಲಿ ನಿಮ್ಮ ಬಗ್ಗೆ ಕೇಳಿಬಂದ ಅತ್ಯಂತ ದೊಡ್ಡ ವದಂತಿ ಯಾವುದು ಎಂಬ ಪ್ರಶ್ನೆ ಎದುರಾಯಿತು. ಇದಕ್ಕೆ ಯಾವುದೇ ಮುಜುಗರವಿಲ್ಲದೇ ಉತ್ತರಿಸಿದ ಮೌನಿ, ‘ಓಹ್.. ನಾನು ಗೇ (ಸಲಿಂಗಕಾಮಿ) ಎಂಬ ವದಂತಿ!’ ಎಂದು ನಗುತ್ತಲೇ ಉತ್ತರಿಸಿದರು.

ಪತಿಯಿಂದ ಬೇರ್ಪಟ್ಟ ನಂತರದ ದಿನಗಳ ಬಗ್ಗೆ ಮಾತನಾಡಿದ 40ರ ಪ್ರಾಯದ ಮೌನಿ ರಾಯ್, ‘ನನ್ನ ಕಷ್ಟದ ದಿನಗಳಲ್ಲಿ ನನ್ನ ಕುಟುಂಬ ಮತ್ತು ಸ್ನೇಹಿತರು ಬಂಡೆಯಂತೆ ನನ್ನ ಪರವಾಗಿ ನಿಂತಿದ್ದಾರೆ. ಈ ವಿಷಯದಲ್ಲಿ ನಾನು ನಿಜಕ್ಕೂ ಅದೃಷ್ಟವಂತೆ. ಅದರಲ್ಲೂ ನನ್ನ ಸ್ನೇಹಿತೆಯರು ನನ್ನ ಜೀವನದ ಏಳು-ಬೀಳುಗಳು, ಒಳ್ಳೆಯ ಹಾಗೂ ಕೆಟ್ಟ ದಿನಗಳಲ್ಲಿ ನನಗೆ ಗಟ್ಟಿ ಬೆಂಬಲ ನೀಡಿದ್ದಾರೆ’ ಎಂದು ತಮಗೆ ಸಿಕ್ಕ ಪ್ರೀತಿಯನ್ನು ಸ್ಮರಿಸಿಕೊಂಡರು.

ಜೊತೆಗೆ, ಪ್ರತಿಯೊಬ್ಬ ಮಹಿಳೆಯ ಜೀವನದಲ್ಲೂ ಪರಸ್ಪರ ಪ್ರೋತ್ಸಾಹಿಸುವ ಮತ್ತು ಧೈರ್ಯ ತುಂಬುವ ಇಂತಹ ಉತ್ತಮ ಗೆಳತಿಯರು ಇರುವುದು ತುಂಬಾ ಮುಖ್ಯ ಎಂದೂ ಅವರು ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಯುವತಿಯರಿಗೆ ಮಹತ್ವದ ಸಂದೇಶ ನೀಡಿದ ಮೌನಿ, ‘ಪ್ರತಿಯೊಬ್ಬ ಯುವತಿಯೂ ಜೀವನದಲ್ಲಿ ಎದುರಾಗುವ ಏರುಪೇರುಗಳನ್ನು ಆತ್ಮವಿಶ್ವಾಸದಿಂದ ಎದುರಿಸಬೇಕಾದರೆ, ಅವರು ಭಾವನಾತ್ಮಕವಾಗಿ ಹಾಗೂ ಆರ್ಥಿಕವಾಗಿ ಸ್ವಾವಲಂಬಿಗಳಾಗುವುದು ಅತ್ಯಂತ ಅಗತ್ಯ’ ಎಂದು ಹೇಳಿದರು.

ಇದನ್ನೂ ಓದಿ: ದಿಶಾ ಪಟಾನಿ-ಮೌನಿ ರಾಯ್​ ಈ ರೀತಿ ಸ್ನೇಹ; ಇದೇ ಕಾರಣಕ್ಕೆ ವಿಚ್ಛೇದನ ನೀಡಿದ್ರಾ ಸೂರಜ್?

2022ರಲ್ಲಿ ಉದ್ಯಮಿ ಸೂರಜ್ ನಂಬಿಯಾರ್ ಅವರನ್ನು ವಿವಾಹವಾಗಿದ್ದ ಮೌನಿ ರಾಯ್, ಕಳೆದ ತಿಂಗಳಷ್ಟೇ ಇನ್‌ಸ್ಟಾಗ್ರಾಮ್‌ನಲ್ಲಿ ಜಂಟಿ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಪರಸ್ಪರ ಒಪ್ಪಿಗೆಯಿಂದ ಸೌಹಾರ್ದಯುತವಾಗಿ ವಿಚ್ಛೇದನ ಪಡೆಯುತ್ತಿರುವುದಾಗಿ ಘೋಷಿಸಿದ್ದರು. ಅವರಿಬ್ಬರ ವಿಚ್ಛೇದನಕ್ಕೆ ದಿಶಾ ಪಟಾನಿ ಕಾರಣ ಎಂದು ಕೆಲವರು ಗಾಸಿಪ್ ಹಬ್ಬಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Bengaluru Air Quality: ರಾಜ್ಯಾದ್ಯಂತ ಮುಂಗಾರು ಅಬ್ಬರ: ಕರಾವಳಿ, ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಭಾರಿ ಸುಧಾರಣೆ! – Kannada News | Karnataka AQI Update: Bangalore Air Quality Improves, Gadag Tops Clean Air List

ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಭಾರಿ ಸುಧಾರಣೆ!
Image Credit source: Deccan herald

ಬೆಂಗಳೂರು, ಜೂನ್ 14: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿರುವುದರಿಂದ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದ್ದು, ಬಹುತೇಕ ನಗರಗಳಲ್ಲಿ ಗಾಳಿಯ ಗುಣಮಟ್ಟ ಉತ್ತಮ ಸ್ಥಿತಿಯಲ್ಲಿದೆ. ಇಂದು ಕರ್ನಾಟಕದ ಪ್ರಮುಖ ನಗರಗಳು ಮತ್ತು ರಾಜಧಾನಿ ಬೆಂಗಳೂರಿನ ವಿವಿಧ ಪ್ರದೇಶಗಳ ವಾಯು ಗುಣಮಟ್ಟ ಸೂಚ್ಯಂಕ (AQI) ವಿವರ ಇಲ್ಲಿದೆ.

ಮುಖ್ಯಾಂಶಗಳು

  • ಮುಂಗಾರು ಮಳೆಯಿಂದಾಗಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಗಣನೀಯವಾಗಿ ಕುಸಿತ ಕಂಡಿದೆ.
  • ಗದಗ ನಗರದಲ್ಲಿ ಅತ್ಯಂತ ಸ್ವಚ್ಛ ಹಾಗೂ ಶುದ್ಧ ಗಾಳಿ ದಾಖಲಾಗಿದೆ.
  • ಧಾರವಾಡ ಮತ್ತು ಮಂಗಳೂರಿನಲ್ಲಿ ಮಾಲಿನ್ಯದ ಪ್ರಮಾಣ ಕೊಂಚ ಏರಿಕೆ ಕಂಡಿದೆ.

ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಹೇಗಿದೆ?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ ಇಂದು 33 ರಿಂದ 56ರ ಆಸುಪಾಸಿನಲ್ಲಿ ದಾಖಲಾಗಿದ್ದು, ಉತ್ತಮ ಹಾಗೂ ಸಾಧಾರಣ ಶ್ರೇಣಿಯಲ್ಲಿದೆ. ಇತ್ತೀಚೆಗೆ ಸುರಿದ ಮಳೆಯಿಂದಾಗಿ ವಾತಾವರಣದಲ್ಲಿನ ಧೂಳಿನ ಕಣಗಳು ಕಡಿಮೆಯಾಗಿವೆ.

  • ಹೆಬ್ಬಾಳ: 30 (ಉತ್ತಮ – ಅತ್ಯಂತ ಶುದ್ಧ ಗಾಳಿ)
  • ಸಿಲ್ಕ್ ಬೋರ್ಡ್: 54 (ಸಾಧಾರಣ)
  • ಹೊಂಬೇಗೌಡ ನಗರ: 51 (ಸಾಧಾರಣ)
  • ಬಿಟಿಎಂ ಲೇಔಟ್: 63 (ಸಾಧಾರಣ)
  • ಕಡಬೀಸನಹಳ್ಳಿ : 97 (ಅಪಾಯಕಾರಿ)

ಒಟ್ಟಾರೆಯಾಗಿ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದಾದ ಪೂರಕ ವಾತಾವರಣವಿದೆ. ರಾಜ್ಯದ ಇತರೆ ನಗರಗಳ ಇಂದಿನ ವಾಯು ಗುಣಮಟ್ಟದ ಶ್ರೇಯಾಂಕಗಳನ್ನು ಗಮನಿಸಿದರೆ, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಧೂಳಿನಿಂದಾಗಿ ಮಾಲಿನ್ಯ ಕೊಂಚ ಏರಿದ್ದರೆ, ಕರಾವಳಿ ಮತ್ತು ಮಲೆನಾಡು ಭಾಗಗಳು ಅತ್ಯಂತ ಶುದ್ಧ ಗಾಳಿಯನ್ನು ಹೊಂದಿವೆ.

ಹೆಚ್ಚು ಮಾಲಿನ್ಯವಿರುವ ನಗರಗಳು

  • ಧಾರವಾಡ: 153 (ಕಳಪೆ)
  • ಮಂಗಳೂರು: 108 (ಸಾಧಾರಣಕ್ಕಿಂತ ಕೊಂಚ ಹೆಚ್ಚು)
  • ಹುಬ್ಬಳ್ಳಿ: 86 (ಸಾಧಾರಣ)

ಅತ್ಯಂತ ಶುದ್ಧ ಗಾಳಿಯಿರುವ ನಗರಗಳು

  • ಗದಗ: 19 (ಅತ್ಯುತ್ತಮ ಹಾಗೂ ಅತ್ಯಂತ ಸ್ವಚ್ಛ ಗಾಳಿ)
  • ಕೊಪ್ಪಳ: 44 (ಉತ್ತಮ)
  • ಮೈಸೂರು: 56 (ಸಾಧಾರಣ)
  • ಶಿವಮೊಗ್ಗ: 77 (ಸಾಧಾರಣ)

ಮಳೆಯ ಮುನ್ಸೂಚನೆ ಇರುವುದರಿಂದ ಮುಂಬರುವ ದಿನಗಳಲ್ಲಿ ವಾಯು ಗುಣಮಟ್ಟ ಇನ್ನಷ್ಟು ಸುಧಾರಿಸುವ ನಿರೀಕ್ಷೆಯಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹಳೇ ವಾಹನಗಳ ಬಳಕೆ ಕಡಿಮೆ ಮಾಡುವುದು ಮತ್ತು ಹಸಿರು ವಲಯವನ್ನು ಹೆಚ್ಚಿಸುವುದು ಇಂದಿನ ಅಗತ್ಯವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Karnataka Weather Forecast: ರಾಜ್ಯದಲ್ಲಿ ಮುಂಗಾರು ಚುರುಕು; ಯೆಲ್ಲೋ ಅಲರ್ಟ್​ ಘೋಷಣೆ – Kannada News | Karnataka Weather Forecast: Rain and Gusty Winds Forecasted Across Many Districts

ರಾಜ್ಯದಲ್ಲಿ ಮುಂಗಾರು ಚುರುಕು; ಯೆಲ್ಲೋ ಅಲರ್ಟ್​ ಘೋಷಣೆ
Image Credit source: India Today

ಬೆಂಗಳೂರು, ಜೂನ್ 14: ನಗರದ ಹಲವೆಡೆ ಶನಿವಾರ ರಾತ್ರಿ ಧಾರಾಕಾರ ಮಳೆ (Weather) ಸುರಿದಿದೆ. ಇಂದೂ ಸಹ ಹಲವೆಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗಾಳಿ ಮುಖಾಂತರ ಮಳೆ ಸುರಿಯುವ ಮುನ್ಸೂಚನೆ ಸಿಕ್ಕಿದೆ.

ಮುಖ್ಯಾಂಶಗಳು

  • ಕರಾವಳಿಯ ಉಡುಪಿ, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
  • ಉತ್ತರ ಒಳನಾಡಿನ ಎಂಟು ಜಿಲ್ಲೆಗಳಲ್ಲಿ ಭಾರಿ ಬಿರುಗಾಳಿ ಸಹಿತ ಮಳೆಯಾಗಲಿದೆ.
  • ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಗೆ ಗುಡುಗು ಸಹಿತ ಮಳೆ ಮುನ್ಸೂಚನೆ.

ಎಲ್ಲೆಲ್ಲಿ ಮಳೆ?

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಎಲ್ಲಾ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು, ಮಿಂಚು ಹಾಗೂ ಗಂಟೆಗೆ 30-40 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಈ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಇದನ್ನೂ ಓದಿ Karnataka Weather Forecast: ನಾಳೆಯಿಂದ ರಾಜ್ಯದಲ್ಲಿ ಮುಂದಿನ ಮೂರು ದಿನ ವರುಣದ್ದೇ ಹಾವಳಿ!

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಮಳೆಯ ಸಮಯದಲ್ಲಿ ಗಂಟೆಗೆ **30-40 ಕಿ.ಮೀ** ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಮತ್ತು ರೈತರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನತೆಗೆ ಈ ಮಳೆ ತಂಪೆರೆಯಲಿದ್ದು, ಕೃಷಿ ಚಟುವಟಿಕೆಗಳಿಗೂ ಸಹಕಾರಿಯಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version