‘ಅಂತ್ಯವನ್ನು ಒಪ್ಪಿಕೊಳ್ಳಿ’: ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅರ್ಜುನ್ ಕಪೂರ್ ಮನಸ್ಥಿತಿ
ಬಾಲಿವುಡ್ ನಟ ಅರ್ಜುನ್ ಕಪೂರ್ (Arjun Kapoor) ಕಳೆದ ಕೆಲವು ಸಮಯದಿಂದ ಸೋಷಿಯಲ್ ಮೀಡಿಯಾದಲ್ಲಿ ಸತತವಾಗಿ ಟ್ರೋಲಿಂಗ್ ಮತ್ತು ನೆಗೆಟಿವಿಟಿಗೆ ಗುರಿಯಾಗುತ್ತಿದ್ದಾರೆ. ಇತ್ತೀಚೆಗಷ್ಟೇ ತಮ್ಮ ತಾಯಿಯ ಜನ್ಮದಿನದಂದು ಭಾವುಕ ಪೋಸ್ಟ್ ಹಂಚಿಕೊಂಡಿದ್ದ ಅವರು, ಜೀವನವು ತಮಗೆ ‘ಕ್ರೂರವಾಗಿ ವರ್ತಿಸುತ್ತಿದೆ’ ಎಂದು ಬರೆದುಕೊಂಡಿದ್ದರು. ಇದೀಗ ಅರ್ಜುನ್ ಹಂಚಿಕೊಂಡಿರುವ ಮತ್ತೊಂದು ಗೂಢಾರ್ಥದ ಸಂದೇಶವು ಅಭಿಮಾನಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಗುರುವಾರ (ಏಪ್ರಿಲ್ 9) ಅರ್ಜುನ್ ಕಪೂರ್ ಅವರು ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಒಂದು ಸಾಲನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ, ‘ಅಂತ್ಯವನ್ನು ಒಪ್ಪಿಕೊಳ್ಳಿ, ಅದು…