Headlines

‘ಜನ ನಾಯಗನ್’ ನೋಡಿ ಸಂಭ್ರಮಿಸಿದ ನಟ ರವಿ ಮೋಹನ್: ತಮಿಳುನಾಡು ಸಚಿವರ ಕಣ್ಣೀರು – Kannada News | Ravi Mohan Cheers for CM Vijay starrer Jana Nayagan in Theatre TN Minister Cries

ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ ವಿಜಯ್ (CM Vijay) ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಸಿನಿಮಾ ಜುಲೈ 23ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ವಿಮರ್ಶಕರಿಂದ ಈ ಸಿನಿಮಾಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದ್ದರೂ, ಪ್ರೇಕ್ಷಕರು ಹಾಗೂ ವಿಜಯ್ ಅಭಿಮಾನಿಗಳು ಚಿತ್ರಮಂದಿರಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇದೀಗ ಖ್ಯಾತ ನಟ ರವಿ ಮೋಹನ್ (Ravi Mohan) ಸಹ ಥಿಯೇಟರ್‌ಗೆ ತೆರಳಿ ಸಿನಿಮಾ ವೀಕ್ಷಿಸಿದ್ದು, ವಿಜಯ್ ಅವರ ಎಂಟ್ರಿ ಸೀನ್‌ಗೆ ಶಿಳ್ಳೆ ಹೊಡೆದು ಸಂಭ್ರಮಿಸಿದ್ದಾರೆ. ಚೆನ್ನೈನ ಖ್ಯಾತ ವೆಟ್ರಿ ಥಿಯೇಟರ್​ನ ಕೊನೆಯ…

Read More

IND vs ZIM: ಸರಣಿ ನಿರ್ಧಾರಕ ಪಂದ್ಯಕ್ಕೆ ಹೇಗಿರಲಿದೆ ಭಾರತದ ಪ್ಲೇಯಿಂಗ್ 11? – Kannada News | IND vs ZIM 2nd T20 Preview: Pitch Report, Head to Head and India’s Probable XI

ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ, ಜಿಂಬಾಬ್ವೆಯನ್ನು (India vs Zimbabwe) 7 ವಿಕೆಟ್‌ಗಳಿಂದ ಸೋಲಿಸಿತು. ಇದರೊಂದಿಗೆ ಶ್ರೇಯಸ್ ಅಯ್ಯರ್ (Shreyas Iyer) ಪಡೆ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇದೀಗ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಳ್ಳುವ ಅವಕಾಶವನ್ನು ಹೊಂದಿದೆ. ಮೊದಲ ಪಂದ್ಯದಲ್ಲಿ, ಶ್ರೇಯಸ್ ಅಯ್ಯರ್ ಯುವ ಆಟಗಾರರಿಗೆ ಪ್ಲೇಯಿಂಗ್ 11 ರಲ್ಲಿ ಅವಕಾಶ ನೀಡಿದ್ದರು. ಅಶೋಕ್ ಶರ್ಮಾ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರೆ, ಮಯಾಂಕ್ ಯಾದವ್ ಎರಡು ವರ್ಷಗಳ ನಂತರ…

Read More

ಕರಾವಳಿಯಲ್ಲಿ ವರುಣನ ಆರ್ಭಟ: ಜು 25ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ! – Kannada News | Heavy Rain: Holiday Declared for Schools and Colleges in Dakshina Kannada, Udupi Tomorrow

ಪ್ರಾತಿನಿಧಿಕ ಚಿತ್ರImage Credit source: Getty images ಮಂಗಳೂರು, ಜುಲೈ 24: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಧಾರಾಕಾರ ಮಳೆ (rain) ಕೊಂಚ ಸಡಿಲಗೊಂಡಿದೆ. ಆದರೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಅಂದರೆ ಜುಲೈ 25ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ (Holiday) ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ…

Read More

‘ಶ್ರೀರಾಮನ ಪಾತ್ರ ಮಾಡಲು ಭಯ, ಅನುಮಾನ ಇತ್ತು’: ವಿವರಿಸಿದ ರಣಬೀರ್ ಕಪೂರ್ – Kannada News | Actor Ranbir Kapoor felt fear playing Lord Rama in Ramayana movie Comic Con

ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ನಿರ್ದೇಶಕ ನಿತೀಶ್ ತಿವಾರಿ, ನಟರಾದ ಯಶ್, ರಣಬೀರ್ ಕಪೂರ್ ಹಾಗೂ ನಿರ್ಮಾಪಕ ನಮಿತ್ ಮಲ್ಹೋತ್ರಾ ಅಮೆರಿಕದ ಸ್ಯಾನ್ ಡಿಯಾಗೋ ಕಾಮಿಕ್-ಕಾನ್ (San Diego Comic-Con) ಕಾರ್ಯಕ್ರಮದಲ್ಲಿ ಭಾಗವಹಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಈ ವೇಳೆ ಶ್ರೀರಾಮನ ಪಾತ್ರ ನಿರ್ವಹಿಸುವ ಬಗ್ಗೆ ಮಾತನಾಡಿದ ರಣಬೀರ್ ಕಪೂರ್ (Ranbir Kapoor), ಮೊದಲ ಬಾರಿಗೆ ಈ ಅವಕಾಶ ಬಂದಾಗ ತಮ್ಮಲ್ಲಿ ಮೂಡಿದ್ದ ಭಯ ಮತ್ತು…

Read More

ಧೂಮಪಾನದಿಂದ ಶ್ವಾಸಕೋಶ ಮಾತ್ರವಲ್ಲ, ಮೂಳೆಗಳು ಬಲಹೀನವಾಗಿ ಫ್ರ್ಯಾಕ್ಚರ್ ಅಪಾಯ ಹೆಚ್ಚಾಗುತ್ತೆ! – Kannada News | Smoking Weakens Your Bones Too, Says Dr. Surendra Kamath

ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಆದರೆ ಹೆಚ್ಚಿನವರು ಧೂಮಪಾನದಿಂದ ಹೃದಯ ಮತ್ತು ಶ್ವಾಸಕೋಶದ ಸಮಸ್ಯೆಗಳು ಮಾತ್ರ ಉಂಟಾಗುತ್ತವೆ ಎಂದು ಭಾವಿಸುತ್ತಾರೆ. ವಾಸ್ತವವಾಗಿ, ಧೂಮಪಾನವು ಮೂಳೆಗಳ ಆರೋಗ್ಯ (Bone Health) ಮೇಲೆಯೂ ಗಂಭೀರ ಪರಿಣಾಮ ಬೀರುತ್ತದೆ. ದೀರ್ಘಕಾಲ ಧೂಮಪಾನ ಮಾಡುವವರಲ್ಲಿ ಆಸ್ಟಿಯೋಪೊರೋಸಿಸ್ (Osteoporosis), ಮೂಳೆ ಮುರಿತ (Fracture), ಮೂಳೆಗಳು ತಡವಾಗಿ ಜೋಡಣೆಯಾಗುವುದು (Delayed Bone Healing) ಮುಂತಾದ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಮಂಗಳೂರು ಕೆಎಂಸಿ ಆಸ್ಪತ್ರೆಯ ಕನ್ಸಲ್ಟೆಂಟ್ ಆರ್ಥೋಪೆಡಿಕ್…

Read More

ಇಂಗ್ಲೆಂಡ್‌ ನೆಲದಲ್ಲಿ ಮಿಂಚಿದ ಕುಲ್ದೀಪ್ ಯಾದವ್

ಟೀಂ ಇಂಡಿಯಾದಲ್ಲಿನ ಅವಕಾಶಗಳ ಕೊರತೆಯಿಂದಾಗಿ ಅನುಭವಿ ಸ್ಪಿನ್ನರ್ ಕುಲ್ದೀಪ್ ಯಾದವ್ ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಕೌಂಟಿ ಕ್ರಿಕೆಟ್​ನಲ್ಲಿ ಯಾರ್ಕ್‌ಷೈರ್ ತಂಡದ ಪರ ಆಡುತ್ತಿದ್ದಾರೆ. ಅದರಂತೆ ತಂಡದ ಪರ ಮೊದಲ ಪಂದ್ಯದಲ್ಲಿ ಕಣಕ್ಕಿಳಿದ ಕುಲ್ದೀಪ್ ಗ್ಲಾಮೋರ್ಗನ್ ವಿರುದ್ಧ 10 ಓವರ್‌ಗಳಲ್ಲಿ ಕೇವಲ 39 ರನ್‌ಗಳನ್ನು ಬಿಟ್ಟುಕೊಟ್ಟು ಪ್ರಮುಖ 2 ವಿಕೆಟ್​ಗಳನ್ನು ಕಬಳಿಸಿದ್ದಾರೆ(PC-PTI). ಕುಲ್ದೀಪ್ ಯಾದವ್ ತಮ್ಮ ಕೊನೆಯ ಓವರ್‌ನಲ್ಲಿ ಮೂರು ಎಸೆತಗಳಲ್ಲಿ ಎರಡು ವಿಕೆಟ್‌ಗಳನ್ನು ಪಡೆಯುವ ಮೂಲಕ ತಮ್ಮ ಮ್ಯಾಜಿಕ್ ಪ್ರದರ್ಶಿಸಿದರು. ಮೊದಲಿಗೆ ವಿಕೆಟ್ ಕೀಪರ್ ಅಲೆಕ್ಸ್ ಹಾರ್ಟನ್ ಅವರ…

Read More

ಪೊಲೀಸ್ ಸೇವೆ ಜತೆಗೆ ಸಮಾಜಮುಖಿ ಕೆಲಸಗಳಲ್ಲೂ ತೊಡಗಿಸಿಕೊಂಡಿರುವ ಎಸಿಪಿ ರಾಜೇಶ್‌ಗೆ ಡಿಜಿ ಪದಕ ಪ್ರದಾನ – Kannada News | CCB ACP LY Rajesh awarded dg medal for Excellent Service And Investigation

ಬೆಂಗಳೂರು, (ಜುಲೈ 24): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿ ಹಾಗೂ ಸಿಸಿಬಿ ಎಸಿಪಿಯಾಗಿರುವ ಎಲ್.ವೈ. ರಾಜೇಶ್ (LY Rajesh) ಅವರಿಗೆ ಅತ್ಯುತ್ತಮ ಸೇವೆಗಾಗಿ ಪ್ರತಿಷ್ಠಿತ ಡಿಜಿ ಪದಕ ಪ್ರದಾನ ಮಾಡಲಾಗಿದೆ. ಡ್ರಗ್ಸ್​​ ಮುಕ್ತ ಬೆಂಗಳೂರು ನಿರ್ಮಾಣಕ್ಕೆ ನೀಡಿದ ಕೊಡುಗೆ, ಸಮಾಜಮುಖಿ ಕಾರ್ಯಗಳು ಹಾಗೂ ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಈ ಪದಕ ನೀಡಿ ಗೌರವಿಸಲಾಗಿದೆ. ಸದ್ಯ ರಾಜೇಶ್ ಅವರು ಸಿಸಿಬಿಯಲ್ಲಿ ಎಸಿಪಿ ಆಗಿ ಕೆಲಸ ಮಾಡುತ್ತಿದ್ದು, ಡ್ರಗ್ಸ್ ಮುಕ್ತ ಬೆಂಗಳೂರಿಗಾಗಿ ಸಾಕಷ್ಟು ಕೆಲಸ…

Read More

ವಿದ್ಯಾರ್ಥಿಗಳ ಪ್ರತಿಭಟನೆ: ದೆಹಲಿಯ ಸಂಗೀತ ಕಾರ್ಯಕ್ರಮ ಮುಂದೂಡಿದ ಗಾಯಕ ಸೋನು ನಿಗಮ್ – Kannada News | Singer Sonu Nigam postpones his Music concert in Delhi due to NEET Student Protests CJP

ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿರುವ ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೆಹಲಿ ಸೇರಿದಂತೆ ವಿವಿಧೆಡೆ ವಿದ್ಯಾರ್ಥಿಗಳ ಪ್ರತಿಭಟನೆ (Student Protest) ಮುಂದುವರಿದಿದೆ. ಹಲವು ನಟ-ನಟಿಯರು ಹಾಗೂ ಪ್ರಮುಖ ವ್ಯಕ್ತಿಗಳು ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ, ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ (Sonu Nigam) ಕೂಡ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ತಮ್ಮ ದೆಹಲಿ ಸಂಗೀತ ಕಚೇರಿಯನ್ನು ಮುಂದೂಡಿದ್ದಾರೆ. ಜುಲೈ 25ರಂದು ದೆಹಲಿಯ ಯಶೋಭೂಮಿ ಕನ್ವೆನ್ಷನ್ ಸೆಂಟರ್‌ನಲ್ಲಿ ಸೋನು ನಿಗಮ್ ಅವರ…

Read More

IND vs ZIM: ಭಾರತ- ಜಿಂಬಾಬ್ವೆ ನಡುವೆ 2ನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs Zimbabwe 2nd T20: Match Preview, Live Stream, Date, Time and Squads

ಆತಿಥೇಯ ಜಿಂಬಾಬ್ವೆ ತಂಡವನ್ನು ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್​ಗಳಿಂದ ಸುಲಭವಾಗಿ ಮಣಿಸಿದ್ದ ಟೀಂ ಇಂಡಿಯಾ (India vs Zimbabwe) ಇದೀಗ ಎರಡನೇ ಟಿ20 ಪಂದ್ಯವನ್ನು ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳುವ ತವಕದಲ್ಲಿದೆ. ಇದು ಸಾಧ್ಯವಾದರೆ ನಾಯಕನಾಗಿ ಶ್ರೇಯಸ್ ಅಯ್ಯರ್​ಗೆ (Shreyas Iyer) ಇದು ಮೊದಲ ಟಿ20 ಸರಣಿ ಗೆಲುವಾಗಲಿದೆ. ಹೀಗಾಗಿ ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲುವ ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿಯುತ್ತಿದೆ. ಇತ್ತ ಮೊದಲ ಟಿ20 ಸೋತಿರುವ ಜಿಂಬಾಬ್ವೆ ಎರಡನೇ ಪಂದ್ಯವನ್ನು ಗೆದ್ದು ಸರಣಿಯನ್ನು ಜೀವಂತವಾಗಿರಿಸಲು ಪ್ರಯತ್ನಿಸಲಿದೆ. ಹೀಗಾಗಿ…

Read More

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ, ಇನ್ನಷ್ಟು ತಲೆದಂಡ ಸಾಧ್ಯತೆ – Kannada News | NTA terminated 47 officials in major overhaul amid NEET paper leak protests

ನವದೆಹಲಿ, ಜುಲೈ 24: ನೀಟ್ ಯುಜಿ (NEET UG) ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ ದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನೆ ಮುಂದುವರಿದಿದೆ. ದೇಶದ ಪರೀಕ್ಷಾ ವ್ಯವಸ್ಥೆಯನ್ನು ಬಲಪಡಿಸಲು ಕೇಂದ್ರ ಸರ್ಕಾರವು ತನ್ನ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದೆ. ಇದರ ನಡುವೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಬೃಹತ್ ಕಾರ್ಯಾಚರಣೆ ನಡೆಸಿದ್ದು, ತನ್ನ 47 ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿದೆ. ಎನ್​ಟಿಎಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಿಸುವ ಭಾಗವಾಗಿ ಇನ್ನೂ ಹಲವು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು…

Read More