ನಗರಸಭೆ ಆಯುಕ್ತರ ಚೇಂಬರ್‌ಗೆ “ಸಾರ್ವಜನಿಕರಿಗೆ ಪ್ರವೇಶವಿಲ್ಲ”: ಬೋರ್ಡ್​ ನೋಡಿ ಉಪ ಲೋಕಾಯುಕ್ತ ಶಾಕ್ – Kannada News | Upalokayukta B Veerappa Angry after Saw a No Entry to Bagalkot commissioner chamber

ಬಾಗಲಕೋಟೆ, (ಜುಲೈ 24): ಬಾಗಲಕೋಟೆಯಲ್ಲಿ (Bagalkot) ಸರ್ಕಾರಿ ಕಚೇರಿಗಳಿಗೆ ಉಪ ಲೋಕಾಯುಕ್ತರಾದ ಬಿ.ವೀರಪ್ಪ  (B Veerappa) ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಕಚೇರಿಗಳ ಕಾರ್ಯವೈಖರಿ ಬಗ್ಗೆ ಸಿಡಿಮಿಡಿಗೊಂಡರು. ಅಲ್ಲದೇ ನಗರಸಭೆ ಆಯುಕ್ತರ ಚೇಂಬರ್ ಮುಂದೆ ‘ಸಾರ್ವಜನಿಕರಿಗೆ ಪ್ರವೇಶವಿಲ್ಲ’ ಎಂದು ಹಾಕಲಾಗಿದ್ದ ಬೋರ್ಡ್ ನೋಡಿ ಶಾಕ್ ಆಗಿದ್ದಾರೆ. ಸರ್ಕಾರಿ ಕಚೇರಿಗೆ ಸಾರ್ವಜನಿಕರ ಬದಲು ಇನ್ಯಾರು ಹೋಗಬೇಕು?‌ ಇದು ಶಾಕಿಂಗ್, 17 ಜಿಲ್ಲೆಗಳಲ್ಲಿ ಮೊದಲ ಬಾರಿ ನೋಡುತ್ತಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಚೇರಿ ಕಾರ್ಯವೈಖರಿ ಪರಿಶೀಲನೆ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪ ಲೋಕಾಯುಕ್ತ ಬಿ.ವೀರಪ್ಪ, ನಗರಸಭೆ ಆಯುಕ್ತರ ಚೇಂಬರ್‌ಗೆ ‘ಸಾರ್ವಜನಿಕರಿಗೆ ಪ್ರವೇಶವಿಲ್ಲ’ ಎಂದು ಬೋರ್ಡ್ ಹಾಕಿದ್ದಾರೆ. ಸರ್ಕಾರಿ ಕಚೇರಿಗೆ ಸಾರ್ವಜನಿಕರ ಬದಲು ಇನ್ಯಾರು ಹೋಗಬೇಕು?‌ ಇದು ಶಾಕಿಂಗ್, 17 ಜಿಲ್ಲೆಗಳಲ್ಲಿ ಮೊದಲ ಬಾರಿ ನೋಡುತ್ತಿದ್ದೇನೆ. ಬಾಗಲಕೋಟೆ ನಗರಸಭೆ ಅಧಿಕಾರಿಗಳ ಅಸಹಕಾರ ಇದೆ. 4 ಜನ ಇಂಜಿನಿಯರ್‌ಗಳು ಸರಿಯಾದ ಮಾಹಿತಿ ಕೊಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ನೋಡಿ: ಸಿಲಿಂಡರ್ ಹೊರಗಿಡಿ, ತಾಜಾ ಎಣ್ಣೆ ಬಳಸಿ: ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ

ಅತಿಕ್ರಮಣ ಬಗ್ಗೆ ನೋಟಿಸ್ ಕೊಟ್ಟಿದ್ದಾರೆ. 2-3 ವರ್ಷ ಆದರೂ ಯಾವುದೇ ಕ್ರಮ ಆಗಿಲ್ಲ. ಬರೀ ನೋಟಿಸ್ ಕೊಟ್ಟು ಕ್ರಮ ಕೈಗೊಳ್ಳದಿದ್ದರೆ ಏನು ಪ್ರಯೋಜನ? ಅತಿಕ್ರಮಣ, ಲೈಸೆನ್ಸ್ ಉಲ್ಲಂಘನೆ ಎಷ್ಟು ಆಗಿದೆ ಹಾಗೂ ಎಷ್ಟು ಅತಿಕ್ರಮಣ ಆಗಿದೆ ಎಂಬ ಬಗ್ಗೆ ಸಂಪೂರ್ಣ ವರದಿ ಕೇಳಿದ್ದೇನೆ. ಡ್ಯೂಟಿ ಸರಿಯಾಗಿ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ನಗರಸಭೆ ಕಮಿಷನರ್ ನಾವು ಬರೋದು ಗೊತ್ತಾಗಿ ರಜೆ ಹೋಗಿದ್ದಾರೆ. ನಗರಸಭೆ ಹಾಗೂ BTDA ಮಧ್ಯೆ ಯಾವುದೇ ಹೊಂದಾಣಿಕೆ ಇಲ್ಲ. 2 ಕಡೆ ಪರಿಶೀಲನೆ ನಡೆಸಿ ಕೇಸ್ ರಿಜಿಸ್ಟರ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸಮಾಜ ನಿರ್ಮಾಣದ ಅಡಿಪಾಯವೇ ತಾಯ್ತನ; ಮಾತೃತ್ವದ ಕುರಿತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ – Kannada News | Motherhood is a eternal truth RSS Sarsanghchalak Mohan Bhagwat says in Vishwamanglya Sabha Program

ನವದೆಹಲಿ, ಜುಲೈ 24: ಮಾತೃತ್ವವಿಲ್ಲದೆ ಜೀವರಾಶಿಯ ಸೃಷ್ಟಿ, ಪೋಷಣೆ ಅಸಾಧ್ಯವಾಗಿದ್ದು, ಮಾತೃತ್ವವೇ ಮಾನವ ಸಮಾಜದ ನಿಜವಾದ ಅಡಿಪಾಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ. ನವದೆಹಲಿಯ ಅಂಬೇಡ್ಕರ್ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ ‘ವಿಶ್ವ ಮಾಂಗಲ್ಯ ಸಭಾ’ ಆಯೋಜಿಸಿದ್ದ “ಸಮಕಾಲೀನ ಮಾತೃತ್ವ” ವಿಷಯದ ಕುರಿತ ರಾಷ್ಟ್ರೀಯ ಜಾಗೃತಿ ಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧಿ ಮತ್ತು ರವೀಂದ್ರನಾಥ ಟ್ಯಾಗೋರ್ ಅವರಂತಹ ಮಹಾನ್ ವ್ಯಕ್ತಿಗಳು ಸಹ ಮಾತೃತ್ವ ಮತ್ತು ಕುಟುಂಬ ವ್ಯವಸ್ಥೆಯ ಬಗ್ಗೆ ಆಳವಾದ ಆಲೋಚನೆಗಳನ್ನು ಹೊಂದಿದ್ದರು ಎಂದು ಮೋಹನ್ ಭಾಗವತ್ ನೆನಪಿಸಿಕೊಂಡಿದ್ದಾರೆ.

ತಾಯ್ತನದ ಶಾಶ್ವತ ಮೌಲ್ಯಗಳು ಎಂದಿಗೂ ಬದಲಾಗುವುದಿಲ್ಲ. ಕಾಲಕ್ರಮೇಣ ಪರಿಸ್ಥಿತಿಗಳು ಬದಲಾದರೂ, ತಾಯ್ತನದ ನಿಜವಾದ ಸ್ವರೂಪ ಬದಲಾಗುವುದಿಲ್ಲ. ಜಗತ್ತಿನಲ್ಲಿ ಜೀವನದ ಸೃಷ್ಟಿ, ಪೋಷಣೆ ಮತ್ತು ಮುಂದುವರಿಕೆಗೆ ತಾಯ್ತನವೇ ಮುಖ್ಯ ಆಧಾರ. ಪ್ರತಿಯೊಬ್ಬ ಮನುಷ್ಯನ ಮೊದಲ ಶಿಕ್ಷಕಿ ತಾಯಿ. ಆ ಮಗುವಿನ ವ್ಯಕ್ತಿತ್ವ ವಿಕಸನ ಮತ್ತು ಆಲೋಚನೆಗಳಿಗೆ ಸರಿಯಾದ ದಿಕ್ಕನ್ನು ತೋರಿಸುವವಳು ತಾಯಿ ಎಂದು ಅವರು ಹೇಳಿದರು.

ಇದನ್ನೂ ಓದಿ: ಜಾಗತಿಕ ಬಿಕ್ಕಟ್ಟುಗಳಿಗೆ ಭಾರತ ಒಂದೇ ಪರಿಹಾರ; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ

ಇಂದಿನ ಕುಟುಂಬಗಳಲ್ಲಿ ಮಕ್ಕಳಿಗಾಗಿ ಸಮಯವನ್ನು ಮೀಸಲಿಡುವುದು ಮತ್ತು ಅವರೊಂದಿಗೆ ನಿರಂತರವಾಗಿ ಸಂವಹನ ನಡೆಸುವುದು ಬಹಳ ಮುಖ್ಯ. ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸುವುದು ಮತ್ತು ಅವರ ಆಸಕ್ತಿಗಳನ್ನು ಪ್ರೋತ್ಸಾಹಿಸುವುದು ಪೋಷಕರ ಜವಾಬ್ದಾರಿಯಾಗಿದೆ. ಮಕ್ಕಳು ತಮ್ಮ ಹೆತ್ತವರ ನಡವಳಿಕೆಯನ್ನು ಅವರ ಮಾತುಗಳಿಗಿಂತ ಹೆಚ್ಚಾಗಿ ಅನುಕರಿಸುತ್ತಾರೆ ಮತ್ತು ಆದ್ದರಿಂದ, ಪೋಷಕರು ಮಾದರಿಯಾಗಿರಬೇಕು ಎಂದು ಮೋಹನ್ ಭಾಗವತ್ ಸಲಹೆ ನೀಡಿದರು.

ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಕುರಿತಾದ ತಪ್ಪು ಕಲ್ಪನೆಗಳ ಬಗ್ಗೆ ಎಚ್ಚರಿಸಿದ ಅವರು, ಭಾರತದ ನಾಗರಿಕತೆಯ ಅಡಿಪಾಯಗಳು ಇಂದಿಗೂ ಗಟ್ಟಿಯಾಗಿವೆ. ಸಮಾಜವು ತನ್ನ ಸಾಂಸ್ಕೃತಿಕ ಪರಂಪರೆ, ಜ್ಞಾನ ವ್ಯವಸ್ಥೆ ಮತ್ತು ಇತಿಹಾಸದ ಮೇಲೆ ನಂಬಿಕೆಯಿಟ್ಟು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದರು. ಭಾರತೀಯ ಸಂಸ್ಕೃತಿಯ ಬಗ್ಗೆ ಅನೇಕ ತಪ್ಪು ಕಲ್ಪನೆಗಳನ್ನು ಉದ್ದೇಶಪೂರ್ವಕವಾಗಿ ಹರಡಲಾಗಿದೆ. ವೈವಿಧ್ಯತೆಯಲ್ಲಿ ಏಕತೆ ಭಾರತೀಯ ಸಂಸ್ಕೃತಿಯ ಮುಖ್ಯ ಸಂದೇಶವಾಗಿದ್ದು, ವಿದೇಶಿ ಜೀವನ ವಿಧಾನಗಳನ್ನು ಕುರುಡಾಗಿ ಅನುಸರಿಸುವ ಬದಲು ಭಾರತೀಯ ಕುಟುಂಬ ವ್ಯವಸ್ಥೆಯನ್ನು ಬಲಪಡಿಸುವ ಅವಶ್ಯಕತೆಯಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್ ಸಮನ್ಸ್

ಬೃಹತ್ ಸಮಾವೇಶ:

ಜುಲೈ 23 ಮತ್ತು ಇಂದು “ಮಾತೃತ್ವದ ಮೂಲಕ ರಾಷ್ಟ್ರ ನಿರ್ಮಾಣ” ಎಂಬ ಆಶಯದಡಿ ನಡೆದ ಎರಡು ದಿನಗಳ ಈ ರಾಷ್ಟ್ರೀಯ ಜಾಗೃತಿ ಸಭೆಯಲ್ಲಿ, ದೇಶಾದ್ಯಂತದಿಂದ ಸುಮಾರು 280 ಮಹಿಳೆಯರು ಭಾಗವಹಿಸಿ ಸಮಕಾಲೀನ ಮಾತೃತ್ವ, ಬದಲಾಗುತ್ತಿರುವ ಸಾಮಾಜಿಕ ವಾಸ್ತವಗಳು ಮತ್ತು ಭಾರತೀಯ ಕುಟುಂಬ ವ್ಯವಸ್ಥೆಯನ್ನು ರಕ್ಷಿಸುವಲ್ಲಿ ತಾಯಂದಿರ ಪಾತ್ರದ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ 900ಕ್ಕೂ ಹೆಚ್ಚು ಮಹಿಳಾ ನಾಯಕಿಯರು ಮತ್ತು ಗಣ್ಯರು ಭಾಗವಹಿಸಿದ್ದರು. ಈ ವಿಷಯದ ಸಂವಾದಕ್ಕಾಗಿ ಸುಮಾರು 2000ದಿಂದ 2500 ಮಹಿಳೆಯರು ನೋಂದಾಯಿಸಿಕೊಂಡಿದ್ದರು. 2010ರಲ್ಲಿ ನಾಗಪುರದಲ್ಲಿ ಪರಮ ಪೂಜ್ಯ ಆಚಾರ್ಯ ಸ್ವಾಮಿ ಜಿತೇಂದ್ರನಾಥ್ ಜಿ ಮಹಾರಾಜ್ ಅವರ ಮಾರ್ಗದರ್ಶನದಲ್ಲಿ ಸ್ಥಾಪಿತವಾದ ‘ವಿಶ್ವ ಮಾಂಗಲ್ಯ ಸಭಾ’ ಪ್ರಸ್ತುತ ಭಾರತದ 33 ಪ್ರಾಂತ್ಯಗಳಲ್ಲಿ ಸಕ್ರಿಯವಾಗಿದ್ದು, ಸುಮಾರು 6 ಲಕ್ಷ ಮಹಿಳೆಯರು ಇದರೊಂದಿಗೆ ಗುರುತಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಅಮೆರಿಕ ಮತ್ತು ನೆದರ್‌ಲ್ಯಾಂಡ್ಸ್ ಸೇರಿದಂತೆ 14 ದೇಶಗಳಲ್ಲೂ ತನ್ನ ಚಟುವಟಿಕೆಗಳನ್ನು ವಿಸ್ತರಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಾಕಿಸ್ತಾನದಲ್ಲಿ ಭೀಕರ ಆತ್ಮಾಹುತಿ ಬಾಂಬ್ ದಾಳಿ; 12 ಯೋಧರು ಸೇರಿ 15 ಜನ ಸಾವು – Kannada News | 15 people Including 12 Soldiers Killed In Suicide Bombing In Pakistan Khyber Pakhtunkhwa

ಇಸ್ಲಾಮಾಬಾದ್, ಜುಲೈ 24: ಪಾಕಿಸ್ತಾನದಲ್ಲಿ (Pakistan) ಸೇನಾ ಭದ್ರತಾ ಚೆಕ್​ಪಾಯಿಂಟ್ ಅನ್ನು ಗುರಿಯಾಗಿಸಿಕೊಂಡು ಉಗ್ರನೊಬ್ಬ ನಡೆಸಿದ ಭೀಕರ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 15 ಜನರು ಮೃತಪಟ್ಟಿದ್ದಾರೆ, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಪಾಕಿಸ್ತಾನದ ವಾಯುವ್ಯ ಪ್ರಾಂತ್ಯದ ಪ್ರದೇಶದಲ್ಲಿ ಭದ್ರತಾ ಪಡೆಗಳ ಚೆಕ್‌ಪೋಸ್ಟ್ ಅನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ.

ಸ್ಫೋಟಕಗಳನ್ನು ತುಂಬಿದ್ದ ವಾಹನದಲ್ಲಿ ದಾಳಿಕೋರನು ನೇರವಾಗಿ ಭದ್ರತಾ ತಪಾಸಣಾ ಕೇಂದ್ರದ ಸಮೀಪ ಬಂದು ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಈ ಸ್ಫೋಟದ ತೀವ್ರತೆಗೆ ಸ್ಥಳದಲ್ಲೇ 15 ಜನರು ಮೃತಪಟ್ಟಿದ್ದು, ಮೃತರಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಸಮೀಪದಲ್ಲಿದ್ದ ಸಾರ್ವಜನಿಕರು ಕೂಡ ಸೇರಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

ಇದನ್ನೂ ಓದಿ: ಪಿಒಕೆಯ ಪ್ರಧಾನಿಯಾಗುವೆ, ಹೊಸ ಇಚ್ಛೆ ವ್ಯಕ್ತಪಡಿಸಿದ ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್

ರಕ್ಷಣಾ ಕಾರ್ಯಾಚರಣೆ ಮತ್ತು ತನಿಖೆ:

ಸ್ಫೋಟ ಸಂಭವಿಸಿದ ತಕ್ಷಣವೇ ಸ್ಥಳಕ್ಕೆ ಹೆಚ್ಚುವರಿ ಸೇನಾ ಪಡೆಗಳು ಮತ್ತು ಪರಿಹಾರ ಪಡೆಗಳು ಧಾವಿಸಿದ್ದು, ಇಡೀ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿವೆ. ದಾಳಿಯ ಹೊಣೆಯನ್ನು ತಕ್ಷಣಕ್ಕೆ ಯಾವುದೇ ಉಗ್ರ ಸಂಘಟನೆ ಅಧಿಕೃತವಾಗಿ ವಹಿಸಿಕೊಂಡಿಲ್ಲವಾದರೂ, ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (TTP) ಅಥವಾ ಇತರ ಸ್ಥಳೀಯ ಬಂಡಾಯ ಗುಂಪುಗಳ ಮೇಲೆ ಶಂಕೆ ವ್ಯಕ್ತವಾಗಿದೆ.

ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನದಲ್ಲಿ ಭದ್ರತಾ ಪಡೆಗಳ ಮೇಲೆ ಹಾಗೂ ಪೊಲೀಸ್ ತಪಾಸಣಾ ಕೇಂದ್ರಗಳ ಮೇಲೆ ಉಗ್ರರ ದಾಳಿಗಳು ಗಣನೀಯವಾಗಿ ಹೆಚ್ಚಾಗುತ್ತಿದ್ದು, ಈ ಘಟನೆಯು ದೇಶದ ಭದ್ರತಾ ವ್ಯವಸ್ಥೆಯ ಮೇಲಿನ ಆತಂಕವನ್ನು ಹೆಚ್ಚಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಕರಾವಳಿ’ ಸಿನಿಮಾ ನೋಡಿ ಎಮೋಷನಲ್ ಪ್ರತಿಕ್ರಿಯೆ ನೀಡಿದ ಪ್ರೇಕ್ಷಕರು – Kannada News | Raj B Shetty starrer Karavali movie release Audience share their review

ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ, ಮಿತ್ರ ಮುಂತಾದವರು ನಟಿಸಿರುವ ‘ಕರಾವಳಿ’ (Karavali) ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾಗೆ ಗುರುದತ್ ಗಾಣಿಗ ಅವರು ನಿರ್ದೇಶನ ಮಾಡಿದ್ದಾರೆ. ಕಂಬಳ ಕುರಿತಾದ ಕಥೆ ಈ ಸಿನಿಮಾದಲ್ಲಿ ಇದೆ. ಚಿತ್ರವನ್ನು ನೋಡಿದ ಪ್ರೇಕ್ಷಕರು ಎಮೋಷನಲ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಭಿಮಾನಿಗಳು ಮಾತನಾಡಿರುವ ಈ ವಿಡಿಯೋವನ್ನು ಚಿತ್ರತಂಡದವರು ಹಂಚಿಕೊಂಡಿದ್ದಾರೆ. ‘ಕಂಬಳದ ಅನುಭವ ಚೆನ್ನಾಗಿತ್ತು. ಮಹಾವೀರ ಮತ್ತು ಮಹಾಬಲ ಎಂಬ ಎರಡು ಪಾತ್ರಗಳ ಮೇಲೆ ಈ ಸಿನಿಮಾ ನಿಂತಿದೆ. ಆ ಪಾತ್ರಗಳನ್ನು ನೋಡಿ ನಾವು ಅತ್ತಿದ್ದೇವೆ. ರಾಜ್ ಬಿ. ಶೆಟ್ಟಿ ಅವರ ಪಾತ್ರ ಒಂದು ರೀತಿಯ ಕರೆಂಟ್ ರೀತಿ ಇದೆ. ಮಧ್ಯಂತರದ ಬಳಿಕ ಸಿನಿಮಾ ಇನ್ನೂ ಚೆನ್ನಾಗಿದೆ. ಈ ಸಿನಿಮಾದ ಕಥೆಯನ್ನು ವಿಭಿನ್ನವಾಗಿ ಕಟ್ಟಿಕೊಡಲಾಗಿದೆ’ ಎಂದು ಪ್ರೇಕ್ಷಕರು ತಮ್ಮ ವಿಮರ್ಶೆ ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಜನ ನಾಯಗನ್’ ನೋಡಿ ಸಂಭ್ರಮಿಸಿದ ನಟ ರವಿ ಮೋಹನ್: ತಮಿಳುನಾಡು ಸಚಿವರ ಕಣ್ಣೀರು – Kannada News | Ravi Mohan Cheers for CM Vijay starrer Jana Nayagan in Theatre TN Minister Cries

ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ ವಿಜಯ್ (CM Vijay) ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಸಿನಿಮಾ ಜುಲೈ 23ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ವಿಮರ್ಶಕರಿಂದ ಈ ಸಿನಿಮಾಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದ್ದರೂ, ಪ್ರೇಕ್ಷಕರು ಹಾಗೂ ವಿಜಯ್ ಅಭಿಮಾನಿಗಳು ಚಿತ್ರಮಂದಿರಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇದೀಗ ಖ್ಯಾತ ನಟ ರವಿ ಮೋಹನ್ (Ravi Mohan) ಸಹ ಥಿಯೇಟರ್‌ಗೆ ತೆರಳಿ ಸಿನಿಮಾ ವೀಕ್ಷಿಸಿದ್ದು, ವಿಜಯ್ ಅವರ ಎಂಟ್ರಿ ಸೀನ್‌ಗೆ ಶಿಳ್ಳೆ ಹೊಡೆದು ಸಂಭ್ರಮಿಸಿದ್ದಾರೆ.

ಚೆನ್ನೈನ ಖ್ಯಾತ ವೆಟ್ರಿ ಥಿಯೇಟರ್​ನ ಕೊನೆಯ ಸಾಲಿನಲ್ಲಿ ಕುಳಿತು ರವಿ ಮೋಹನ್ ಅವರು ಸಾರ್ವಜನಿಕರೊಂದಿಗೆ ‘ಜನ ನಾಯಗನ್’ ವೀಕ್ಷಿಸಿದ್ದಾರೆ. ವಿಜಯ್ ಅವರ ಗ್ರ್ಯಾಂಡ್ ಎಂಟ್ರಿ ದೃಶ್ಯ ಬಂದಾಗ ರವಿ ಮೋಹನ್ ಎದ್ದು ನಿಂತು ಚಪ್ಪಾಳೆ ತಟ್ಟಿ, ಸೀಟಿ ಹೊಡೆದು ಖುಷಿಪಟ್ಟ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಿನಿಮಾ ಮುಗಿದ ಬಳಿಕ ಥಿಯೇಟರ್ ಹೊರಗೆ ಕಾದಿದ್ದ ಅಭಿಮಾನಿಗಳೊಂದಿಗೆ ಅವರು ಸೆಲ್ಫಿ ಕೂಡ ತೆಗೆಸಿಕೊಂಡಿದ್ದಾರೆ.

ಥಿಯೇಟರ್‌ನಲ್ಲೇ ಕಣ್ಣೀರಿಟ್ಟ ತಮಿಳುನಾಡು ಸಚಿವ:

ವಿಜಯ್ ಅವರ ರಾಜಕೀಯ ಪ್ರವೇಶದ ಬಳಿಕ ಬಿಡುಗಡೆ ಆಗಿರುವ ಕೊನೆಯ ಚಿತ್ರ ಇದಾಗಿರುವುದರಿಂದ ಅಭಿಮಾನಿಗಳಿಗೆ ಇದು ಅತ್ಯಂತ ಭಾವುಕ ಕ್ಷಣವಾಗಿದೆ. ಕೇವಲ ಅಭಿಮಾನಿಗಳು ಮಾತ್ರವಲ್ಲದೆ, ತಮಿಳುನಾಡು ಕಾರ್ಮಿಕ ಕ್ಷೇಮಾಭಿವೃದ್ಧಿ ಸಚಿವ ಮೊಹಮ್ಮದ್ ಪರ್ವೇಜ್ ಅವರು ಥಿಯೇಟರ್‌ನಲ್ಲಿ ಸಿನಿಮಾ ವೀಕ್ಷಿಸುತ್ತಾ ಕಣ್ಣೀರು ಹಾಕಿದ್ದಾರೆ.

ಸಿನಿಮಾದ ಪ್ರಮುಖ ದೃಶ್ಯವೊಂದರಲ್ಲಿ ಸಚಿವರು ಕಣ್ಣೀರು ಒರೆಸಿಕೊಳ್ಳುತ್ತಿರುವ ದೃಶ್ಯ ವೈರಲ್ ಆಗಿದೆ. ‘ವಿಜಯ್ ಅವರ ಕೊನೆಯ ಸಿನಿಮಾ ಇದಾಗಿರುವುದರಿಂದ ಮತ್ತು ಅವರು ಸಂಪೂರ್ಣವಾಗಿ ರಾಜಕೀಯದಲ್ಲಿ ಸಕ್ರಿಯವಾಗಿರುವುದರಿಂದ ಈ ಸಿನಿಮಾ ವೀಕ್ಷಣೆ ತಮಗೆ ಅತ್ಯಂತ ಭಾವುಕ ಅನುಭವ ನೀಡಿತು’ ಎಂದು ಚಿತ್ರ ವೀಕ್ಷಣೆಯ ಬಳಿಕ ಸಚಿವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ವಿಚ್ಛೇದನ ಸಿಗೋ ತನಕ ಸಿನಿಮಾ ಮಾಡಲ್ಲ ಅಂತ ಹೇಳಿ ಈಗ ಉಲ್ಟಾ ಹೊಡೆದ ಜಯಂ ರವಿ

‘ಜನ ನಾಯಗನ್’ ಕಥೆ ಏನು?

ಎಚ್. ವಿನೋದ್ ನಿರ್ದೇಶನದ ಹಾಗೂ ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಿಸಿರುವ ಈ ಚಿತ್ರದಲ್ಲಿ ಪೂಜಾ ಹೆಗ್ಡೆ, ಬಾಬಿ ಡಿಯೋಲ್, ಮಮಿತಾ ಬೈಜು, ಗೌತಮ್ ವಾಸುದೇವ್ ಮೆನನ್, ಪ್ರಕಾಶ್ ರಾಜ್ ಹಾಗೂ ಪ್ರಿಯಾಮಣಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ತೀರಿಹೋದ ತಮ್ಮ ಸ್ನೇಹಿತನ ಮಗಳನ್ನು ಸಾಕಿ ಬೆಳೆಸಿ, ಆಕೆಯ ಬಾಲ್ಯದ ನೋವುಗಳನ್ನು ಮರೆಸಿ ಭಾರತೀಯ ಸೇನೆಗೆ ಸೇರ್ಪಡೆಗೊಳಿಸಲು ಪಡುವ ಶ್ರಮ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಭ್ರಷ್ಟರ ವಿರುದ್ಧ ನಡೆಸುವ ಹೋರಾಟವೇ ಈ ಚಿತ್ರದ ಮುಖ್ಯ ಕಥಾವಸ್ತುವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs ZIM: ಸರಣಿ ನಿರ್ಧಾರಕ ಪಂದ್ಯಕ್ಕೆ ಹೇಗಿರಲಿದೆ ಭಾರತದ ಪ್ಲೇಯಿಂಗ್ 11? – Kannada News | IND vs ZIM 2nd T20 Preview: Pitch Report, Head to Head and India’s Probable XI

ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ, ಜಿಂಬಾಬ್ವೆಯನ್ನು (India vs Zimbabwe) 7 ವಿಕೆಟ್‌ಗಳಿಂದ ಸೋಲಿಸಿತು. ಇದರೊಂದಿಗೆ ಶ್ರೇಯಸ್ ಅಯ್ಯರ್ (Shreyas Iyer) ಪಡೆ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇದೀಗ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಳ್ಳುವ ಅವಕಾಶವನ್ನು ಹೊಂದಿದೆ. ಮೊದಲ ಪಂದ್ಯದಲ್ಲಿ, ಶ್ರೇಯಸ್ ಅಯ್ಯರ್ ಯುವ ಆಟಗಾರರಿಗೆ ಪ್ಲೇಯಿಂಗ್ 11 ರಲ್ಲಿ ಅವಕಾಶ ನೀಡಿದ್ದರು. ಅಶೋಕ್ ಶರ್ಮಾ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರೆ, ಮಯಾಂಕ್ ಯಾದವ್ ಎರಡು ವರ್ಷಗಳ ನಂತರ ತಂಡಕ್ಕೆ ಮರಳಿದ್ದರು. ಮಯಾಂಕ್ ಸಿಕ್ಕ ಅವಕಾಶದಲ್ಲಿ ಮಿಂಚಿದರೆ, ಅಶೋಕ್​ ಶರ್ಮಾಗೆ ಉತ್ತಮ ಆರಂಭ ಸಿಗಲಿಲ್ಲ. ಇತ್ತ ಅಭಿಷೇಕ್ ಶರ್ಮಾ ಕೂಡ ಮೊದಲ ಪಂದ್ಯದಲ್ಲಿ ಕೇವಲ ಒಂದಂಕಿಗೆ ವಿಕೆಟ್ ಒಪ್ಪಿಸಿದರು. ಹೀಗಾಗಿ ಎರಡನೇ ಪಂದ್ಯದಿಂದ ಇವರಿಬ್ಬರನ್ನು ಹೊರಗಿಡಲಾಗುತ್ತಾ ಅಥವಾ ಅದೇ ತಂಡವನ್ನು ಕಣಕ್ಕಿಳಿಸಲಾಗುತ್ತಾ ಎಂಬುದು ಪ್ರಶ್ನೆ.

ಅಶೋಕ್ ಶರ್ಮಾಗೆ ಮತ್ತೊಂದು ಅವಕಾಶ

ಎರಡನೇ ಪಂದ್ಯಕ್ಕೆ ಭಾರತ ತಂಡದಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳು ತೀರ ಕಡಿಮೆ. ಏಕೆಂದರೆ ಗೆಲುವಿನ ಸಂಯೋಜನೆಯನ್ನು ಯಾರೂ ಕೂಡ ಬದಲಿಸಲು ಹೋಗುವುದಿಲ್ಲ. ಆದಾಗ್ಯೂ ತಂಡದಲ್ಲಿ ಒಂದೇ ಒಂದು ಬದಲಾವಣೆ ಮಾಡುವ ಸಾಧ್ಯತೆಯಿದೆ. ಅಶೋಕ್ ಶರ್ಮಾ ಚೊಚ್ಚಲ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ನಾಲ್ಕು ಓವರ್‌ಗಳಲ್ಲಿ 29 ರನ್‌ಗಳನ್ನು ಬಿಟ್ಟುಕೊಟ್ಟರಾದರೂ ಒಂದೇ ಒಂದು ವಿಕೆಟ್ ಪಡೆಯಲಿಲ್ಲ. ಆದಾಗ್ಯೂ ಅವರಿಗೆ ಎರಡನೇ ಪಂದ್ಯದಲ್ಲಿ ಅವರಿಗೆ ಮತ್ತೊಂದು ಅವಕಾಶ ಸಿಗಬಹುದು.

ಅಭಿಷೇಕ್ ಬದಲಿಗೆ ಪ್ರಭ್‌ಸಿಮ್ರಾನ್?

ಆದರೆ ಬ್ಯಾಟಿಂಗ್‌ ವಿಭಾಗದಲ್ಲಿ 1 ಬದಲಾವಣೆಯಾಗಬಹುದು. ಅಭಿಷೇಕ್ ಶರ್ಮಾ ಇತ್ತೀಚೆಗೆ ಸ್ಥಿರ ಪ್ರದರ್ಶನ ನೀಡುತ್ತಿಲ್ಲ. ವಿಶ್ವಕಪ್‌ನಲ್ಲಿ ಅವರ ಪ್ರದರ್ಶನವೂ ಕಳಪೆಯಾಗಿತ್ತು. ಅವರು ತಮ್ಮ ಕೊನೆಯ ಐದು ಇನ್ನಿಂಗ್ಸ್‌ಗಳಲ್ಲಿ ಕೇವಲ 73 ರನ್‌ಗಳನ್ನು ಮಾತ್ರ ಗಳಿಸಿದ್ದಾರೆ. ಮೊದಲ ಟಿ20ಯಲ್ಲಿ 8 ಎಸೆತಗಳಲ್ಲಿ ಕೇವಲ 1 ರನ್ ಗಳಿಸಿ ಔಟಾಗಿದ್ದರು. ಹೀಗಾಗಿ ಅಭಿಷೇಕ್ ಬದಲಿಗೆ ಪ್ರಭ್‌ಸಿಮ್ರಾನ್‌ಗೆ ಅವಕಾಶ ನೀಡಬಹುದು. ಇದು ಸಾಧ್ಯವಾದರೆ ವೈಭವ್ ಮತ್ತು ಪ್ರಭ್‌ಸಿಮ್ರಾನ್ ಆರಂಭಿಕರಾಗಿ ಕಣಕ್ಕಿಳಿಯಬಹುದು. ಉಳಿದಂತೆ ತಂಡದಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳಿಲ್ಲ.

ಪಿಚ್ ವರದಿ

ಹರಾರೆಯಲ್ಲಿರುವ ಪಿಚ್ ಬ್ಯಾಟ್ಸ್‌ಮನ್ ಮತ್ತು ಬೌಲರ್‌ಗಳಿಗೆ ಇಬ್ಬರಿಗೂ ಅನುಕೂಲಕರವಾಗಿದೆ. ಮೊದಲ ಪಂದ್ಯದಲ್ಲಿ ಬೌಲರ್‌ಗಳು ಉತ್ತಮ ಬೌನ್ಸ್ ಪಡೆದರು. ಮಾಯಾಂಕ್ ಯಾದವ್ ಅವರ ಬೌಲಿಂಗ್‌ನಿಂದ ವಿಕೆಟ್ ಕೀಪಿಂಗ್ ಮಾಡುವಾಗ ಇಶಾನ್ ಕಿಶನ್ ಕಷ್ಟಪಟ್ಟು ಕೆಲಸ ಮಾಡಬೇಕಾಯಿತು. ಆದ್ದರಿಂದ, ಈ ಪಿಚ್ ಸ್ಪಿನ್ನರ್‌ಗಳಿಗಿಂತ ವೇಗದ ಬೌಲರ್‌ಗಳಿಗೆ ಅನುಕೂಲಕರವಾಗಿದೆ. ಈ ಪಿಚ್‌ನಲ್ಲಿ 170 ಕ್ಕಿಂತ ಹೆಚ್ಚಿನ ಸ್ಕೋರ್ ಗುರಿ ಕಲೆಹಾಕುವುದು ಕಷ್ಟ.

IND vs ZIM: ಭಾರತ- ಜಿಂಬಾಬ್ವೆ ನಡುವೆ 2ನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ?

ಹರಾರೆಯಲ್ಲಿ ಎರಡೂ ತಂಡಗಳ ದಾಖಲೆ

ಇಲ್ಲಿಯವರೆಗೆ, ಭಾರತ ಮತ್ತು ಜಿಂಬಾಬ್ವೆ ನಡುವೆ ಹರಾರೆ ಮೈದಾನದಲ್ಲಿ 13 ಪಂದ್ಯಗಳು ನಡೆದಿವೆ. ಭಾರತ ಈ ಪಂದ್ಯಗಳಲ್ಲಿ 10 ಪಂದ್ಯಗಳನ್ನು ಗೆದ್ದಿದ್ದರೆ, ಜಿಂಬಾಬ್ವೆ 3 ಪಂದ್ಯಗಳನ್ನು ಗೆದ್ದಿದೆ. ಭಾರತ ಕಳೆದ ಐದು ಪಂದ್ಯಗಳನ್ನು ಸುಲಭವಾಗಿ ಗೆದ್ದಿದೆ. ಭಾರತ ಈಗ ಎರಡನೇ ಟಿ20ಐ ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳುವ ಇರಾದೆಯಲ್ಲಿದೆ.

ಎರಡನೇ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್​ 11: ಅಭಿಷೇಕ್ ಶರ್ಮಾ/ ಪ್ರಭ್‌ಸಿಮ್ರಾನ್‌ ಸಿಂಗ್, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ರವಿ ಬಿಷ್ಣೋಯ್, ಪ್ರಿನ್ಸ್ ಯಾದವ್, ಅಶೋಕ್ ಶರ್ಮಾ, ಮಾಯಾಂಕ್ ಯಾದವ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರಾವಳಿಯಲ್ಲಿ ವರುಣನ ಆರ್ಭಟ: ಜು 25ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ! – Kannada News | Heavy Rain: Holiday Declared for Schools and Colleges in Dakshina Kannada, Udupi Tomorrow

ಪ್ರಾತಿನಿಧಿಕ ಚಿತ್ರImage Credit source: Getty images

ಮಂಗಳೂರು, ಜುಲೈ 24: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಧಾರಾಕಾರ ಮಳೆ (rain) ಕೊಂಚ ಸಡಿಲಗೊಂಡಿದೆ. ಆದರೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಅಂದರೆ ಜುಲೈ 25ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ (Holiday) ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ನಾಳೆ ಶಾಲಾ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ನಾಳೆ ರಜೆ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ (ಪಿಯುಸಿ) ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಇಂದು ಕೂಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

ಇದನ್ನೂ ಓದಿ: Karnataka Weather Forecast: ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ; ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್

ಅದೇ ರೀತಿಯಾಗಿ ಮಳೆ ಹೆಚ್ಚಾಗುತ್ತಿರುವ ಕಾರಣ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೂ ನಾಳೆ ರಜೆ ನೀಡಲಾಗಿದೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ್ ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸಾಮಾನ್ಯ ಮಟ್ಟದಲ್ಲೇ ಇದೆ ಕರಾವಳಿಯ ಮಳೆ

ಇನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಇಂದಿನ ಅಂಕಿ-ಅಂಶಗಳ ಪ್ರಕಾರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವಾಡಿಕೆಯಷ್ಟೇ ಮಳೆ ಆಗಿದೆ. ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕನ್ನಡದಲ್ಲಿ 38.3 ಮಿ.ಮೀ (ಸರಾಸರಿ ವಾಡಿಕೆ 37.4 ಮಿ.ಮೀ) ಹಾಗೂ ಉಡುಪಿಯಲ್ಲಿ 48.0 ಮಿ.ಮೀ (ಸರಾಸರಿ ವಾಡಿಕೆ 47.8 ಮಿ.ಮೀ) ಮಳೆ ದಾಖಲಾಗಿದ್ದು, ಎರಡೂ ಕಡೆ ವರುಣನ ಆರ್ಭಟ ಸದ್ಯಕ್ಕೆ ಸಹಜ ಸ್ಥಿತಿಯಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ಶ್ರೀರಾಮನ ಪಾತ್ರ ಮಾಡಲು ಭಯ, ಅನುಮಾನ ಇತ್ತು’: ವಿವರಿಸಿದ ರಣಬೀರ್ ಕಪೂರ್ – Kannada News | Actor Ranbir Kapoor felt fear playing Lord Rama in Ramayana movie Comic Con

ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ನಿರ್ದೇಶಕ ನಿತೀಶ್ ತಿವಾರಿ, ನಟರಾದ ಯಶ್, ರಣಬೀರ್ ಕಪೂರ್ ಹಾಗೂ ನಿರ್ಮಾಪಕ ನಮಿತ್ ಮಲ್ಹೋತ್ರಾ ಅಮೆರಿಕದ ಸ್ಯಾನ್ ಡಿಯಾಗೋ ಕಾಮಿಕ್-ಕಾನ್ (San Diego Comic-Con) ಕಾರ್ಯಕ್ರಮದಲ್ಲಿ ಭಾಗವಹಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಈ ವೇಳೆ ಶ್ರೀರಾಮನ ಪಾತ್ರ ನಿರ್ವಹಿಸುವ ಬಗ್ಗೆ ಮಾತನಾಡಿದ ರಣಬೀರ್ ಕಪೂರ್ (Ranbir Kapoor), ಮೊದಲ ಬಾರಿಗೆ ಈ ಅವಕಾಶ ಬಂದಾಗ ತಮ್ಮಲ್ಲಿ ಮೂಡಿದ್ದ ಭಯ ಮತ್ತು ಅನುಮಾನಗಳನ್ನು ಹಂಚಿಕೊಂಡಿದ್ದಾರೆ.

‘ಬಹಳಷ್ಟು ಭಯ ಮತ್ತು ಗೊಂದಲಗಳಿದ್ದವು’

‘ಈ ಸಿನಿಮಾದ ಆಫರ್ ನನ್ನ ಬಳಿ ಬಂದಾಗ ನನಗೆ ತುಂಬಾ ಭಯ ಮತ್ತು ಅನುಮಾನಗಳಿದ್ದವು. ನನ್ನಿಂದ ಇದು ಸಾಧ್ಯವೇ? ನಾನು ಈ ಪಾತ್ರಕ್ಕೆ ಅರ್ಹನೇ ಎಂಬ ಪ್ರಶ್ನೆಗಳು ಕಾಡುತ್ತಿದ್ದವು. ಆದರೆ, ಆ ಅನುಮಾನಗಳು ಶೀಘ್ರದಲ್ಲೇ ಧನ್ಯತಾ ಭಾವವಾಗಿ ಬದಲಾದವು. ಇದು ಜೀವನದಲ್ಲಿ ಒಮ್ಮೆ ಮಾತ್ರ ಸಿಗುವ ಅವಕಾಶ, ಆಶೀರ್ವಾದ ಹಾಗೂ ನೈತಿಕ ಜವಾಬ್ದಾರಿ ಎಂದು ಭಾವಿಸಿದೆ. ರಾಮಾಯಣವು ನಮ್ಮ ಪ್ರಜ್ಞೆಯಲ್ಲೇ ಬೆರೆತುಹೋಗಿದೆ. 4000ಕ್ಕೂ ಹೆಚ್ಚು ವರ್ಷಗಳಿಂದ ಲಕ್ಷಾಂತರ ಜನರ ಧರ್ಮ ಮತ್ತು ಧೈರ್ಯದ ಸಂಕೇತವಾಗಿರುವ ಶ್ರೀರಾಮನ ಪಾತ್ರವನ್ನು ಬೆಳ್ಳಿತೆರೆಯ ಮೇಲೆ ಪ್ರತಿನಿಧಿಸುವುದು ಅತ್ಯಂತ ಸವಾಲಿನ ಕೆಲಸ’ ಎಂದು ರಣಬೀರ್ ಹೇಳಿದ್ದಾರೆ.

ಶ್ರೀರಾಮನ ಪಾತ್ರವನ್ನು ಪೂರ್ಣಗೊಳಿಸಲು ಪರಿಪೂರ್ಣತೆಗಿಂತ ಹೆಚ್ಚಾಗಿ ಪ್ರಾಮಾಣಿಕತೆ ಮತ್ತು ನಂಬಿಕೆ ಮುಖ್ಯ ಎಂಬುದನ್ನು ತಾವು ಅರ್ಥಮಾಡಿಕೊಂಡಿರುವುದಾಗಿ ರಣಬೀರ್ ತಿಳಿಸಿದರು. ತೆರೆಮೇಲೆ ಈ ಪಾತ್ರವನ್ನು ನೋಡಲು ರಣಬೀರ್ ಕಪೂರ್ ಅವರ ಅಭಿಮಾನಿಗಳು ಕಾಯುತ್ತಿದ್ದಾರೆ.

ರಣಬೀರ್ ಬಗ್ಗೆ ನಟ ಯಶ್ ಹೇಳಿದ್ದೇನು?

ಸಿನಿಮಾದಲ್ಲಿ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸ್ಯಾಂಡಲ್‌ವುಡ್ ಸ್ಟಾರ್ ಯಶ್ ಅವರು ಶ್ರೀರಾಮನ ಪಾತ್ರಕ್ಕೆ ರಣಬೀರ್ ಕಪೂರ್ ಅವರ ಆಯ್ಕೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ‘ರಾಮಾಯಣ ಚಿತ್ರದಲ್ಲಿ ಸೀತೆ ಪಾತ್ರ ಮಾಡಲು ನಾನು ಶುದ್ಧವಾಗಿದ್ದೆ’: ಸಾಯಿ ಪಲ್ಲವಿ

‘ಈ ಪ್ರಪಂಚದಲ್ಲಿ ಯಾರೂ ಬಂದು ನನ್ನಲ್ಲಿ ಶ್ರೀರಾಮನ ಪಾತ್ರ ಮಾಡಲು ಬೇಕಾದ ಎಲ್ಲಾ ಸದ್ಗುಣಗಳಿವೆ ಎಂದು ಹೇಳಲು ಸಾಧ್ಯವಿಲ್ಲ. ರಣಬೀರ್ ಕೂಡ ಅದೇ ಮಾತು ಹೇಳಿರುವುದು ಅವರ ವಿನಮ್ರತೆಯನ್ನು ತೋರಿಸುತ್ತದೆ. ಅವರು ಅದ್ಭುತ ನಟ. ಶ್ರೀರಾಮನ ಪಾತ್ರ ಮಾಡುವುದು ಸುಲಭದ ಮಾತಲ್ಲ. ಅವರು ಈ ಪಾತ್ರಕ್ಕಾಗಿ ಪಟ್ಟಿರುವ ಶ್ರಮಕ್ಕೆ ನನ್ನ ಕಡೆಯಿಂದ ದೊಡ್ಡ ಗೌರವವಿದೆ’ ಎಂದು ಯಶ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಧೂಮಪಾನದಿಂದ ಶ್ವಾಸಕೋಶ ಮಾತ್ರವಲ್ಲ, ಮೂಳೆಗಳು ಬಲಹೀನವಾಗಿ ಫ್ರ್ಯಾಕ್ಚರ್ ಅಪಾಯ ಹೆಚ್ಚಾಗುತ್ತೆ! – Kannada News | Smoking Weakens Your Bones Too, Says Dr. Surendra Kamath

ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಆದರೆ ಹೆಚ್ಚಿನವರು ಧೂಮಪಾನದಿಂದ ಹೃದಯ ಮತ್ತು ಶ್ವಾಸಕೋಶದ ಸಮಸ್ಯೆಗಳು ಮಾತ್ರ ಉಂಟಾಗುತ್ತವೆ ಎಂದು ಭಾವಿಸುತ್ತಾರೆ. ವಾಸ್ತವವಾಗಿ, ಧೂಮಪಾನವು ಮೂಳೆಗಳ ಆರೋಗ್ಯ (Bone Health) ಮೇಲೆಯೂ ಗಂಭೀರ ಪರಿಣಾಮ ಬೀರುತ್ತದೆ. ದೀರ್ಘಕಾಲ ಧೂಮಪಾನ ಮಾಡುವವರಲ್ಲಿ ಆಸ್ಟಿಯೋಪೊರೋಸಿಸ್ (Osteoporosis), ಮೂಳೆ ಮುರಿತ (Fracture), ಮೂಳೆಗಳು ತಡವಾಗಿ ಜೋಡಣೆಯಾಗುವುದು (Delayed Bone Healing) ಮುಂತಾದ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ಕೆಎಂಸಿ ಆಸ್ಪತ್ರೆಯ ಕನ್ಸಲ್ಟೆಂಟ್ ಆರ್ಥೋಪೆಡಿಕ್ ಸರ್ಜನ್ ಡಾ. ಸುರೇಂದ್ರ ಕಾಮತ್ ಅವರ ಪ್ರಕಾರ, ತಂಬಾಕು ಹೊಗೆಯಲ್ಲಿ 7,000ಕ್ಕೂ ಹೆಚ್ಚು ರಾಸಾಯನಿಕಗಳು ಇದ್ದು, ಅವುಗಳಲ್ಲಿ ಅನೇಕವು ದೇಹಕ್ಕೆ ವಿಷಕಾರಿಯಾಗಿವೆ. ಇವುಗಳು ಹೃದಯ, ಶ್ವಾಸಕೋಶ ಮತ್ತು ರಕ್ತನಾಳಗಳಷ್ಟೇ ಅಲ್ಲದೆ, ಮೂಳೆಗಳ ಬೆಳವಣಿಗೆ ಮತ್ತು ಬಲವನ್ನೂ ದುರ್ಬಲಗೊಳಿಸುತ್ತವೆ.

ಧೂಮಪಾನದಿಂದ ಮೂಳೆಗಳಿಗೆ ಹೇಗೆ ಹಾನಿಯಾಗುತ್ತದೆ?

ಧೂಮಪಾನವು ಮೂಳೆ ರಚನೆ ಮತ್ತು ಮೂಳೆ ಕ್ಷಯದ ನಡುವಿನ ಸಮತೋಲನವನ್ನು ಹಾಳು ಮಾಡುತ್ತದೆ. ಪರಿಣಾಮವಾಗಿ ಮೂಳೆ ಖನಿಜ ಸಾಂದ್ರತೆ (Bone Mineral Density – BMD) ಕಡಿಮೆಯಾಗುತ್ತದೆ ಮತ್ತು ಆಸ್ಟಿಯೋಪೊರೋಸಿಸ್ ಅಪಾಯ ಹೆಚ್ಚುತ್ತದೆ.

ಮೂಳೆ ರಚನೆ ಕಡಿಮೆಯಾಗುತ್ತದೆ: ನಿಕೋಟಿನ್ (Nicotine) ಎಂಬ ರಾಸಾಯನಿಕವು ಹೊಸ ಮೂಳೆಗಳನ್ನು ರಚನೆ ಆಸ್ಟಿಯೋಬ್ಲಾಸ್ಟ್ (Osteoblast) ಕೋಶಗಳ ಕಾರ್ಯಕ್ಷಮತೆಯನ್ನು ಕುಗ್ಗಿಸುತ್ತದೆ. ಇದರಿಂದ ಹೊಸ ಮೂಳೆಗಳ ಬೆಳವಣಿಗೆ ನಿಧಾನವಾಗುತ್ತದೆ.

ಕ್ಯಾಲ್ಸಿಯಂ ಹೀರಿಕೊಳ್ಳುವಿಕೆ ಕಡಿಮೆಯಾಗುತ್ತದೆ: ಧೂಮಪಾನ ಮಾಡುವವರಲ್ಲಿ ದೇಹವು ಆಹಾರದಿಂದ ಕ್ಯಾಲ್ಸಿಯಂ ಅನ್ನು ಸರಿಯಾಗಿ ಹೀರಿಕೊಳ್ಳಲು ಸಾಧ್ಯವಾಗುವುದಿಲ್ಲ. ಇದರಿಂದ ಮೂಳೆಗಳು ಕ್ರಮೇಣ ದುರ್ಬಲ ಅಥವಾ ಬಲಹೀನಗೊಳ್ಳುತ್ತವೆ.

ಹಾರ್ಮೋನ್ ಅಸಮತೋಲನ: ಮಹಿಳೆಯರಲ್ಲಿ ಈಸ್ಟ್ರೋಜನ್ ಹಾರ್ಮೋನ್ ಮಟ್ಟವು ಬೇಗ ಕಡಿಮೆಯಾಗುವುದರಿಂದ ಮೆನೋಪಾಸ್ ನಂತರ ಆಸ್ಟಿಯೋಪೊರೋಸಿಸ್ ಅಪಾಯ ಹೆಚ್ಚುತ್ತದೆ. ಪುರುಷರಲ್ಲಿಯೂ ಟೆಸ್ಟೋಸ್ಟೆರೋನ್ ಮಟ್ಟದ ಮೇಲೆ ಪರಿಣಾಮ ಬೀರಬಹುದು.

ಇದನ್ನೂ ಓದಿ: ಪ್ರಾಡಕ್ಟ್ ಲೇಬಲ್ ಓದದೆಯೇ ಖರೀದಿಸುವ ಅಭ್ಯಾಸವಿದ್ದರೆ ಹಿಡನ್ ಶುಗರ್ ಹೆಚ್ಚಾಗಬಹುದು ಎಚ್ಚರ!

ಆಕ್ಸಿಡೇಟಿವ್ ಒತ್ತಡ ಹೆಚ್ಚಾಗುತ್ತದೆ: ಧೂಮಪಾನದಿಂದ ಫ್ರೀ ರಾಡಿಕಲ್‌ಗಳು ಹೆಚ್ಚಾಗಿ ಉತ್ಪತ್ತಿಯಾಗಿ ಮೂಳೆ ಕೋಶಗಳಿಗೆ ಹಾನಿ ಉಂಟುಮಾಡುತ್ತವೆ.

ರಕ್ತ ಪೂರೈಕೆ ಕಡಿಮೆಯಾಗುತ್ತದೆ: ಧೂಮಪಾನವು ರಕ್ತನಾಳಗಳನ್ನು ಕಿರಿದಾಗಿಸುವುದರಿಂದ ಮೂಳೆಗಳಿಗೆ ಅಗತ್ಯವಾದ ಆಮ್ಲಜನಕ ಮತ್ತು ಪೋಷಕಾಂಶಗಳು ಸಮರ್ಪಕವಾಗಿ ತಲುಪುವುದಿಲ್ಲ.

ಮೂಳೆ ಮುರಿತವಾದರೆ ಗುಣವಾಗುವುದಕ್ಕೆ ಏಕೆ ಸಮಯ ತೆಗೆದುಕೊಳ್ಳುತ್ತದೆ?

ನಿಕೋಟಿನ್ ಹೊಸ ರಕ್ತನಾಳಗಳ ಬೆಳವಣಿಗೆಯನ್ನು ತಡೆಯುತ್ತದೆ. ಇದರ ಪರಿಣಾಮವಾಗಿ:

  • ಮೂಳೆಗಳು ನಿಧಾನವಾಗಿ ಜೋಡಣೆಯಾಗುತ್ತವೆ.
  • ಗಾಯ ಗುಣಮುಖವಾಗಲು ಹೆಚ್ಚು ಸಮಯ ಬೇಕಾಗುತ್ತದೆ.
  • ಸೋಂಕಿನ ಅಪಾಯ ಹೆಚ್ಚಾಗುತ್ತದೆ.
  • ಶಸ್ತ್ರಚಿಕಿತ್ಸೆಯ ನಂತರ ಚೇತರಿಕೆ ವಿಳಂಬವಾಗಬಹುದು.

ಮೂಳೆಗಳ ಸಾಮರ್ಥ್ಯ ಹೆಚ್ಚಿಸಲು ಏನು ಮಾಡಬೇಕು?

  • ಧೂಮಪಾನವನ್ನು ಸಂಪೂರ್ಣವಾಗಿ ತ್ಯಜಿಸಿ.
  • ಕ್ಯಾಲ್ಸಿಯಂ ಸಮೃದ್ಧ ಆಹಾರ ಸೇವಿಸಿ.
  • ವಿಟಮಿನ್ ಡಿ ಕೊರತೆಯಾಗದಂತೆ ನೋಡಿಕೊಳ್ಳಿ.
  • ಪ್ರತಿದಿನ 30– 45 ನಿಮಿಷ ವ್ಯಾಯಾಮ ಮಾಡಿ.
  • ವಾಕಿಂಗ್, ಜಾಗಿಂಗ್, ತೂಕ ಎತ್ತುವ ವ್ಯಾಯಾಮ (Weight-bearing Exercise) ಮಾಡಿ.
  • ಮದ್ಯಪಾನವನ್ನು ಮಿತಿಗೊಳಿಸಿ.
  • ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇಂಗ್ಲೆಂಡ್‌ ನೆಲದಲ್ಲಿ ಮಿಂಚಿದ ಕುಲ್ದೀಪ್ ಯಾದವ್

Source link

Exit mobile version