Viral: ಬೆಂಗಳೂರಿನಿಂದ ಗುರಂಗಾವ್‌ಗೆ ಸ್ಥಳಾಂತರಗೊಳ್ಳುವ ಹಿಂದಿನ ಕಾರಣ ವಿವರಿಸಿದ ವ್ಯಕ್ತಿ – Kannada News | A man leaving Bengaluru for Gurgaon after 20 years explained the reason

ಉದ್ಯೋಗಕ್ಕಾಗಿ ಅನೇಕರು ದೂರದ ಊರು, ರಾಜ್ಯದಿಂದ ಬೆಂಗಳೂರಿಗೆ ಬರುತ್ತಾರೆ. ಹೀಗೆ ಬಂದವರಲ್ಲಿ ಕೆಲವರು ಇಲ್ಲೇ ನೆಲೆಸುತ್ತಾರೆ. ಇನ್ನು ಕೆಲವರು ಅನಿವಾರ್ಯ ಕಾರಣಕ್ಕಾಗಿ ಮಾಯನಗರಿ ಬಿಟ್ಟು ತಮ್ಮ ಊರಿಗೆ ತೆರಳುವುದಿದೆ. ಇದೀಗ ಕಳೆದ ಇಪ್ಪತ್ತು ವರ್ಷಗಳಿಂದ ಬೆಂಗಳೂರಿನಲ್ಲಿ (Bengaluru) ನೆಲೆಸಿರುವ ವ್ಯಕ್ತಿಯೊಬ್ಬರು ಗುರಗಾಂವ್‌ಗೆ (Gurgaon) ಹೋಗುವ ನಿರ್ಧಾರ ಮಾಡಿದ್ದಾರೆ. ತನ್ನ ತಂದೆ ತಾಯಿಯನ್ನು ನೋಡಿಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಬೇಕಾಯಿತು ಎಂದು ಹೇಳಿದ್ದಾರೆ. ಈ ರೆಡ್ಡಿಟ್ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರೆಡ್ಡಿಟ್ ಪೋಸ್ಟ್‌ನಲ್ಲಿ, ಬೆಂಗಳೂರಿನಿಂದ ಗುರಗಾಂವ್‌ಗೆ ಸ್ಥಳಾಂತರಗೊಳ್ಳುತ್ತಿದ್ದೇನೆ. ತಮ್ಮ ವಯಸ್ಸಾದ ಪೋಷಕರನ್ನು ನೋಡಿಕೊಳ್ಳಲು ಬೆಂಗಳೂರಿನಲ್ಲಿ ವರ್ಷಗಳ ಕಾಲ ಕಳೆದ ನಂತರ ಅವರು ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ. ಆದರೆ ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿಯೇ ನೆಲೆಸಿದ್ದೇನೆ. ನನಗೆ ಇಲ್ಲಿ ವೃತ್ತಿಪರ ಮಿತ್ರರು ಮತ್ತು ವೈಯಕ್ತಿಕ ಆತ್ಮೀಯರ ಬಳಗವೇ ಇದೆ. ಮಕ್ಕಳು ಇಲ್ಲೇ ಶಾಲೆಗೆ ಹೋಗುತ್ತಿದ್ದಾರೆ. ನನ್ನ ಹೆತ್ತವರು ಇಲ್ಲಿಗೆ ಬರಲು ಸಿದ್ಧರಿಲ್ಲ, ಆದ್ದರಿಂದ ಅಲ್ಲಿಗೆ ಸ್ಥಳಾಂತರಗೊಳ್ಳಬೇಕಾಗಿದೆ. ಆದರೆ ಗುರಗಾಂವ್‌ನ ಸಕಾರಾತ್ಮಕ ಅಂಶಗಳು ಬೆಂಗಳೂರನ್ನು ಬಿಟ್ಟು ತೆರಳುವ ನೋವನ್ನು ಕಡಿಮೆ ಮಾಡುತ್ತದೆ ಎಂದು ಬರೆದುಕೊಂಡಿದ್ದಾರೆ.

ವೈರಲ್ ಪೋಸ್ಟ್ ಇಲ್ಲಿದೆ

ಇದನ್ನೂ ಓದಿ: “ನಿಮ್ಮ ಸಂಸ್ಥೆಗಾಗಿ ನನ್ನ ರಕ್ತ ಸುರಿಸಿದ್ದೇನೆ”: ಕಾರಣವಿಲ್ಲದೆ ವಜಾ ಮಾಡಿದ ಕಂಪನಿಗೆ ಹಿಗ್ಗಾಮುಗ್ಗಾ ಜಾಡಿಸಿದ ಬೆಂಗಳೂರಿನ ಯುವಕ

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಭಾಷೆ ಬಿಟ್ಟರೆ ನಿಮಗೆ ಬೇರೇನೂ ಸಮಸ್ಯೆ ಆಗಲ್ಲ ಎಂದಿದ್ದಾರೆ. ಮತ್ತೊಬ್ಬರು, ಇಲ್ಲಿ ಒಂದು ಸಮಸ್ಯೆಯಿದೆ. ಗುರಗಾಂವ್‌ನಲ್ಲಿ ಜನರ ಮನಸ್ಥಿತಿ ಅತ್ಯಂತ ಕೆಟ್ಟದಾಗಿದೆ. ಅಲ್ಲದೆ, ದಯವಿಟ್ಟು ಉತ್ತಮ ಗಾಳಿ ಶುದ್ಧೀಕರಣ ಯಂತ್ರದಲ್ಲಿ ಹೂಡಿಕೆ ಮಾಡಲು ಮರೆಯಬೇಡಿ ಎಂದು ಸಲಹೆ ನೀಡಿದ್ದಾರೆ. ಇನ್ನೊಬ್ಬರು, ಎಲ್ಲಿ ನೆಲೆಸಿದರೂ ಆ ಊರನ್ನು ಪ್ರೀತಿಸಿ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

“ನಿಮ್ಮ ಸಂಸ್ಥೆಗಾಗಿ ನನ್ನ ರಕ್ತ ಸುರಿಸಿದ್ದೇನೆ”: ಕಾರಣವಿಲ್ಲದೆ ವಜಾ ಮಾಡಿದ ಕಂಪನಿಗೆ ಹಿಗ್ಗಾಮುಗ್ಗಾ ಜಾಡಿಸಿದ ಬೆಂಗಳೂರಿನ ಯುವಕ – Kannada News | Employee Loyalty vs Startup Greed: The Human Cost of Toxic Workplaces in India

ಬೆಂಗಳೂರು, ಫೆ.4: ಒಂದು ಕಂಪನಿಯಲ್ಲಿ ದುಡಿಯುವಾಗ ಹಲವು ಕನಸುಗಳನ್ನು ಇಟ್ಟುಕೊಂಡಿರುತ್ತೇವೆ. ಒಳ್ಳೆಯ ವಾತಾವರಣದಲ್ಲಿ ಕೆಲಸ ಮಾಡುವ ಖುಷಿಯೇ ಬೇರೆ ಇರುತ್ತದೆ. ಆದರೆ ಕಂಪನಿ ಸೇರಿದಾಗ ಇರುವ ಉತ್ಸಾಹ, ನಂತರ ದಿನಗಳಲ್ಲಿ ಆ ಹುಮ್ಮಸ್ಸು, ಕೆಲಸದ ನಿಷ್ಠೆ ಇರುವುದಿಲ್ಲ. ಯಾಕೆಂದರೆ ಕಂಪನಿಯಲ್ಲಿ ನಡೆಯುವ ರಾಜಕೀಯ, ತಾರತಮ್ಯಗಳು, ಇದರಿಂದ ಬೇಸತ್ತು. ಇದು ನಮ್ಮ ಕಂಪನಿ ಅಲ್ಲ ಎಂಬ ಮನಸ್ಥಿತಿಗೆ ಬಂದಿರುತ್ತೇವೆ. ಇದರ ಜತೆಗೆ ನಿಷ್ಠೆಯಿಂದ ಕೆಲಸ ಮಾಡವರಿಗೆ ಇಲ್ಲಿ ಬೆಲೆ ಇರಲ್ಲ. ಇದೀಗ ಇಲ್ಲೊಂದು ಹಂಚಿಕೊಂಡಿರುವ ಪೋಸ್ಟ್​​ ಇಂತಹದೇ ವಿಚಾರದ ಬಗ್ಗೆ ಹೇಳುತ್ತದೆ. ಬೆಂಗಳೂರಿನ ಯುವಕ ಜೀವನ ಎಂಬುವವರು ತಮ್ಮ ಕಂಪನಿಯಲ್ಲಿ ಅನುಭವಿಸಿದ ಕಹಿ ಘಟನೆಯನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಸ್ಟಾರ್ಟ್‌ಅಪ್ ಸಂಸ್ಕೃತಿಯ (Startup Culture) ಕರಾಳ ಮುಖವನ್ನು ಅನಾವರಣ ಮಾಡಿದ್ದಾರೆ. ಕೆಲಸದ ಮೇಲಿನ ನಿಷ್ಠೆ ಮತ್ತು ಮಾನವೀಯ ಮೌಲ್ಯಗಳ ನಡುವಿನ ಕಂದಕ ಹೇಗಿರುತ್ತದೆ ಎಂಬುದನ್ನು ಅವರು ಹೇಳಿದ್ದಾರೆ.

ಜೀವನ ಅವರನ್ನು ಕೆಲಸಕ್ಕೆ ಸೇರಿದ 3 ತಿಂಗಳ ಪ್ರೊಬೇಷನ್ ಅವಧಿ ಮುಗಿಯುವ ಕೆಲವೇ ದಿನಗಳ ಮೊದಲು ಕೆಲಸದಿಂದ ತೆಗೆದುಹಾಕಲಾಗಿದೆ. ನಮ್ಮ ತಂಡವನ್ನು ತೆಗೆದು ಹಾಕುವ ಪ್ಲಾನ್ 9 ರಿಂದ 10 ತಿಂಗಳುಗಳಿಂದ ನಡೆಯುತ್ತಿತ್ತು. ಈ ಬಗ್ಗೆ ನಮ್ಮ ಮುಖ್ಯಸ್ಥರೇ ಸ್ವತಃ ಹೇಳಿದರು. ನಮ್ಮ ಟಿಮ್​​ನ್ನು ತೆಗೆದು ಹಾಕುವ ಮೊದಲೇ ಹೊಸ ಕೆಲಸಗಾರರನ್ನು ನೇಮಕಾ ಮಾಡಿದ್ದಾರೆ. ಇದೊಂದು ನೈತಿಕ ದಿವಾಳಿತನ, ಮುಳುಗುತ್ತಿದ್ದ ಕಂಪನಿಗೆ ಮರುಜೀವ ನೀಡಿದ ಜನರನ್ನೇ ತೆಗೆದು ಹಾಕುವ ಸಾಹಸ ಮಾಡಿದ್ದಾರೆ. ಹಾಗಾದರೆ ಇಂಟರ್ವ್ಯೂ ಸಮಯದಲ್ಲಿ ನೀಡಿದ ಭರವಸೆಗಳು ಮತ್ತು ತೋರಿಸಿದ ದೃಷ್ಟಿಕೋನ ಕೇವಲ ಸುಳ್ಳೇ? 1.5 ತಿಂಗಳು ನೀಡಲಾದ ವೇತನ (Severance Pay) ವೃತ್ತಿಜೀವನದಲ್ಲಿ ಉಂಟಾಗುವ ಗ್ಯಾಪ್ ಮತ್ತು ಮಾನಸಿಕ ಕಿರುಕುಳಕ್ಕೆ ಪರಿಹಾರವಾಗಬಲ್ಲದೇ? ಎಂಬ ಪ್ರಶ್ನೆಯನ್ನು ಜೀವನ ಈ ಪೋಸ್ಟ್​​ನಲ್ಲಿ ಕೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಈ ಊರಿನಲ್ಲಿ ನಡೆಯುತ್ತೇ ಅಪರೂಪದ ವಜ್ರಾಭರಣಗಳ ಜಾತ್ರೆ

ಇಲ್ಲಿದೆ ನೋಡಿ ಪೋಸ್ಟ್​:

ತಮ್ಮ ಕಂಪನಿಯ ಈ ನೀತಿಯನ್ನು ಬಳಸಿ ಬಿಸಾಡುವ ನೀತಿ ಎಂದು ಹೇಳಿದ್ದಾರೆ. ಕೆಲಸಗಾರರನ್ನು ಕೇವಲ ಬ್ಯಾಲೆನ್ಸ್ ಶೀಟ್‌ನಲ್ಲಿರುವ ಆಸ್ತಿಗಳಂತೆ ನೋಡುವ ಬದಲು ಮನುಷ್ಯರಂತೆ ನೋಡಿ ಎಂದು ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಗರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ನಾವು ಎಷ್ಟು ಬೇಗ ರಿಪ್ಲೇಸ್ ಆಗುತ್ತೇವೆ ಎಂದು ಯೋಚಿಸಿದರೆ ಭಯವಾಗುತ್ತದೆ ಎಂದು ಒಬ್ಬರು ಹೇಳಿದ್ದಾರೆ. ಇಂದು ಅವರು ನಿಮ್ಮ ಬೆಲೆ ತಿಳಿಯದೇ ಇರಬಹುದು, ಆದರೆ ಇದು ನಿಮಗೆ ದೊಡ್ಡ ಅವಕಾಶ ಎಂದು ಮತ್ತೊಬ್ಬರು ಹೇಳಿದ್ದಾರೆ. ನೀವು ನಿಮ್ಮ ಕೆಲಸದಿಂದ ಸೋತಿಲ್ಲ, ಅವರು ನಿಮ್ಮ ಉಳಿಸಿಕೊಳ್ಳುವಲ್ಲಿ ಸೋತಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Namma Metro: ವಿರೋಧದ ನಡುವೆಯು BMRCL ಬೋರ್ಡ್​ನಿಂದ ಮೆಟ್ರೋ ದರ ಏರಿಕೆಗೆ ಅಸ್ತು; ಹೆಚ್ಚಳ ಎಷ್ಟು? – Kannada News | Bangalore Metro Fare Hike: BMRCL Approves 5 percent Increase Amidst Passenger Opposition

ವಿರೋಧದ ನಡುವೆಯು BMRCL ಬೋರ್ಡ್ನಿಂದ ಮೆಟ್ರೋ ದರ ಏರಿಕೆಗೆ ಅಸ್ತು; ಹೆಚ್ಚಳ ಎಷ್ಟು?

ಬೆಂಗಳೂರು, ಫೆಬ್ರುವರಿ 04: ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರ ಮತ್ತೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಬೋರ್ಡ್ ಸಭೆಯಲ್ಲಿ ಶೇ 5ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ. ಆದರೆ ಈ ದರ ಏರಿಕೆ ಜಾರಿಗೆ ಬರಲು ರಾಜ್ಯ ಸರ್ಕಾರದ ಅನುಮತಿ ಅಗತ್ಯವಾಗಿದ್ದು, ಅದಕ್ಕಾಗಿ ಬಿಎಂಆರ್‌ಸಿಎಲ್ ಅಧಿಕಾರಿಗಳು ಸರ್ಕಾರದ ಒಪ್ಪಿಗೆ ಪಡೆಯಲು ಕಸರತ್ತು ನಡೆಸುತ್ತಿದ್ದಾರೆ.

ಕಳೆದ ವರ್ಷ ಫೆಬ್ರವರಿ 9ರಂದು ಮೆಟ್ರೋ ಟಿಕೆಟ್ ದರವನ್ನು ಶೇ101.5ರಷ್ಟು ಏರಿಸಲಾಗಿತ್ತು. ಇದಕ್ಕೆ ಪ್ರಯಾಣಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇವಲ ಮೂರು ದಿನಗಳಲ್ಲೇ ದರವನ್ನು ಶೇ.71.5ಕ್ಕೆ ಇಳಿಸಲಾಗಿತ್ತು. ಆ ಘಟನೆ ಇನ್ನೂ ಪ್ರಯಾಣಿಕರ ಮನಸ್ಸಿಂದ ಮಾಸುವ ಮೊದಲೇ ಮತ್ತೆ ದರ ಏರಿಕೆಯ ಚರ್ಚೆ ಆರಂಭವಾಗಿರುವುದು ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಇದೀಗ ಶೇ 5ರಷ್ಟು ದರ ಏರಿಕೆಗೆ ಬಿಎಂಆರ್‌ಸಿಎಲ್ ಸಭೆಯಲ್ಲಿ ಒಪ್ಪಿಗೆ ದೊರೆತಿದ್ದು, ಸರ್ಕಾರದ ಅಂತಿಮ ನಿರ್ಧಾರಕ್ಕಾಗಿ ಕಾಯಲಾಗುತ್ತಿದೆ. ಪ್ರಯಾಣಿಕರ ವಿರೋಧದ ನಡುವೆಯೂ ದರ ಏರಿಕೆಗೆ ನಿಗಮ ಪಟ್ಟು ಹಿಡಿದಿದೆ ಎನ್ನಲಾಗುತ್ತಿದೆ.

ದರ ಏರಿಕೆ ವಿರೋಧಿಸಿದ್ದ ಸಂಸದ ತೇಜಸ್ವಿ ಸೂರ್ಯ

ಈಗಾಗಲೇ ಕಳೆದ ಫೆಬ್ರವರಿ 9ರಂದು ಬಿಎಂಆರ್ಸಿಎಲ್ ಅಧಿಕಾರಿಗಳು ಒನ್ ಟು ಡಬಲ್ ದರ ಏರಿಕೆ ಮಾಡಿದ್ದನ್ನು ವಿರೋಧಿಸಿ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಗೊಂದಲದ ನಡುವೆ ವಾರ್ಷಿಕ ಸ್ವಯಂಚಾಲಿತ ದರ ಏರಿಕೆ ಮಾಡಲು ಬಿಎಂಆರ್ಸಿಎಲ್ ಅಣಿಯಾಗಿದ್ದನ್ನು ಸಂಸದ ತೇಜಸ್ವಿ ಸೂರ್ಯ ವಿರೋಧಿಸಿದ್ದರು. ಬೆಂಗಳೂರು ಮೆಟ್ರೋಗೆ ದರ ನಿಗದಿ ಸಮಿತಿಯನ್ನು ಪುನರ್ ರಚಿಸಬೇಕು ಹಾಗೂ ಅಧಿಕಾರಿಗಳ ತಪ್ಪು ಲೆಕ್ಕ ಸರಿಪಡಿಸುವವರೆಗೆ ವಾರ್ಷಿಕ ದರ ಏರಿಕೆಯನ್ನು ತಡೆಹಿಡಿಯಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪತ್ರವನ್ನೂ ಬರೆದಿದ್ದರು.

ಇದನ್ನೂ ಓದಿ Namma Metro: ಮತ್ತೆ ಮೆಟ್ರೋ ದರ ಹೈಕ್ ಶಾಕ್? ದರ ಏರಿಕೆ ತಡೆಗೆ ತೇಜಸ್ವಿ ಸೂರ್ಯ ಪತ್ರ

ನಿಗಮದ ಈ ನಿರ್ಧಾರದ ಕುರಿತು ಪ್ರಯಾಣಿಕರೂ ಆಕ್ರೋಶ ಹೊರಹಾಕಿದ್ದರು. ಈ ವರ್ಷ ಮಾಡಿರುವ ದರ ಏರಿಕೆ ತಪ್ಪಿನಿಂದ ಮುಂದಿನ ವರ್ಷಗಳಲ್ಲೂ ಪ್ರಯಾಣಿಕರಿಗೆ ಹೆಚ್ಚುವರಿ ಹೊರೆ ಆಗಲಿದೆ. ಮೊದಲು ತಪ್ಪು ಲೆಕ್ಕ ಕೊಟ್ಟು ಏರಿಕೆ ಮಾಡಿರುವ ದರವನ್ನು ಇಳಿಸಲಿ,ನಂತರ ಪ್ರತಿವರ್ಷ ಬೇಕಾದರೆ 5% ರಷ್ಟು ಏರಿಕೆ ಮಾಡಲಿ ಎಂದು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದರು. ಆದರೆ ಈ ಎಲ್ಲಾ ವಿರೋಧದ ನಡುವೆಯೂ ಮೆಟ್ರೋ ದರ ಏರಿಕೆಗೆ ನಿಗಮ ಗ್ರೀನ್ ಸಿಗ್ನಲ್ ಕೊಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅಭಿಮಾನಿಗಳು ಗದ್ದಲ ಮಾಡಿದರೂ ಸಿಹಿ ಕೊಟ್ಟು ಕಳುಹಿಸಿದ ರಾಮ್ ಚರಣ್ – Kannada News | Ram Charan and Upasana Welcome Twins, Delight Fans with Sweet Surprise

ಮೆಗಾ ಕುಟುಂಬದಲ್ಲಿ ಹಬ್ಬದ ವಾತಾವರಣವಿದೆ. ಇತ್ತೀಚೆಗೆ ರಾಮ್ ಚರಣ್ (Ram Charan) ಪತ್ನಿ ಉಪಾಸನಾ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಉಪಾಸನಾ ಗಂಡು ಮತ್ತು ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಮೆಗಾ ಕುಟುಂಬ ಮತ್ತು ಅಭಿಮಾನಿಗಳು ಕೂಡ ಸಂತೋಷದಿಂದ ಮುಳುಗಿದ್ದರು.ಈ ವೇಳೆ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಆಸ್ಪತ್ರೆ ಹೊರಗೆ ನೆರೆದಿದ್ದರು. ಈ ವೇಳೆ ಫ್ಯಾನ್ಸ್​​ಗೆ ಸಿಹಿ ಪೆಟ್ಟಿಗೆಯ ಬಾಕ್ಸ್ ನೀಡಲಾಗಿದೆ ಎಂಬುದು ವಿಶೇಷ.

ಇತ್ತೀಚೆಗೆ ಉಪಾಸನಾಗೆ ಅವಳಿ ಮಕ್ಕಳು ಜನಿಸಿದರು. ಈ ಶುಭ ಸಂದರ್ಭದಲ್ಲಿ, ರಾಮ್ ಚರಣ್ ದಂಪತಿಗಳು ಮೆಗಾ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದರು. ಈ ಸಂತೋಷದ ಸಮಯದಲ್ಲಿ, ಅವರು ಅಭಿಮಾನಿಗಳಿಗೆ ಸಿಹಿ ಪೆಟ್ಟಿಗೆಗಳನ್ನು ಕಳುಹಿಸಿದರು. ಅಭಿಮಾನಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಉಡುಗೊರೆಯನ್ನು ಅನ್​ ಬಾಕ್​ ಮಾಡೋ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಎರಡು ರೀತಿಯ ಸಿಹಿತಿಂಡಿಗಳಿವೆ.

ಇದನ್ನೂ ಓದಿ: ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ

‘ಈ ಉಡುಗೊರೆಗಾಗಿ ರಾಮ್ ಚರಣ್ ಮತ್ತು ಉಪಾಸನಾ ಅವರಿಗೆ ಅಭಿನಂದನೆಗಳು. ಈ ಉಡುಗೊರೆ ಅಪೊಲೊದಿಂದ ಬಂದಿದೆ’ ಎಂದು ಬರೆಯಲಾಗಿದೆ. ಪ್ರಸ್ತುತ, ಇದಕ್ಕೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಉಪಾಸನಾ ಅವಳಿ ಮಕ್ಕಳಿಗೆ ಜನ್ಮ ನೀಡಿದಾಗ, ಎಲ್ಲಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಪೊಲೊ ಆಸ್ಪತ್ರೆಗೆ ತಲುಪಿ ಗದ್ದಲ ಸೃಷ್ಟಿಸಿದ್ದರು. ಈ ಸಂದರ್ಭದಲ್ಲಿಯೂ ರಾಮ್ ಚರಣ್ ಮತ್ತು ಅವರ ಪತ್ನಿ ತಮ್ಮ ಅಭಿಮಾನಿಗಳಿಗೆ ಸಿಹಿ ಪೆಟ್ಟಿಗೆಗಳನ್ನು ನೀಡಿದ್ದಾರೆ ಎಂಬುದು ವಿಶೇಷ. ಇವರು ಅಭಿಮಾನಿಗಳನ್ನು ಎಷ್ಟು ಪ್ರೀತಿಸುತ್ತಾರೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ.

ಸಿನಿಮಾ ವಿಷಯಕ್ಕೆ ಬಂದರೆ, ರಾಮ್ ಚರಣ್ ಪ್ರಸ್ತುತ ‘ಪೆದ್ದಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ‘ಉಪ್ಪೇನಾ’ ಖ್ಯಾತಿಯ ಬುಚಿಬಾಬು ಸನಾ ನಿರ್ದೇಶನದ ಈ ಚಿತ್ರದಲ್ಲಿ ಬಾಲಿವುಡ್ ಸುಂದರಿ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಕನ್ನಡ ಸೂಪರ್‌ಸ್ಟಾರ್ ಶಿವರಾಜ್ ಕುಮಾರ್ ಕೂಡ ಮತ್ತೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರೊಂದಿಗೆ ಮಿರ್ಜಾಪುರ ವೆಬ್ ಸರಣಿ ಖ್ಯಾತಿಯ ನಟ ದಿವ್ಯೇಂದು ತ್ರಿಪಾಠಿ, ಜಗಪತಿ ಬಾಬು, ಹಾಸ್ಯನಟ ಸತ್ಯ ಮತ್ತು ಇತರರು ವಿವಿಧ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಎ.ಆರ್. ರೆಹಮಾನ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ. ಈ ಚಿತ್ರದ ‘ಚಿಕಿರಿ..’ ಹಾಡು ಈಗಾಗಲೇ ಯೂಟ್ಯೂಬ್ ಅಲ್ಲಿ ಟ್ರೆಂಡ್ ಸೃಷ್ಟಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಪರಮೇಶ್ವರ್​​ ನೇತೃತ್ವದಲ್ಲಿ ಕಾಂಗ್ರೆಸ್​​ನ SC, ST ನಾಯಕರ ಸಭೆ – Kannada News | Congress SC ST Leaders Meet: Discussions Held on SCSP–TSP Fund Protection and Dalit CM Demand

ಗೃಹ ಸಚಿವ ಡಾ.ಜಿ. ಪರಮೆಶ್ವರ್​Image Credit source: Google

ಬೆಂಗಳೂರು, ಫೆಬ್ರವರಿ 04: ವಿಶೇಷ ಅಧಿವೇಶನದ ಹೊತ್ತಲ್ಲಿಯೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ SC, ST ಸಚಿವರು, ಶಾಸಕರು ಹಾಗೂ ವಿಧಾನಪರಿಷತ್​ ಸದಸ್ಯರ ಸಭೆ ನಡೆದಿದೆ. ಈ ಹಿಂದೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೀಡಿದ್ದ ಸೂಚನೆ ಈ ಮೀಟಿಂಗ್​ ನಡೆದಿದೆ ಎನ್ನಲಾಗಿದ್ದು, ಅಧಿಕಾರ ಹಂಚಿಕೆ ವಿಚಾರ ಚರ್ಚೆ ಮಧ್ಯೆಯೇ ಈ ಸಭೆ ಮಹತ್ವ ಪಡೆದುಕೊಂಡಿದೆ.

ಸಚಿವರಾದ ಪರಮೇಶ್ವರ್, ಮುನಿಯಪ್ಪ, ಮಹದೇವಪ್ಪ, ಶಿವರಾಜ ತಂಗಡಗಿ, ಮಾಜಿ ಸಚಿವ ಕೆ.ಎನ್.ರಾಜಣ್ಣ ಸೇರಿ 20ಕ್ಕೂ ಹೆಚ್ಚು ಎಸ್‌ಸಿ, ಎಸ್‌ಟಿ ಶಾಸಕರು ಹಾಗೂ ಪರಿಷತ್ ಸದಸ್ಯರು ಸಭೆಯಲ್ಲಿ ಭಾಗಿಯಾಗಿದ್ದಾರೆ. SCSP-TSP ಅನುದಾನ ಬಳಕೆ ಕುರಿತು ಸಭೆ ಹೆಸರಲ್ಲಿ ಕಾಂಗ್ರೆಸ್​ನ SC, ST ಸಚಿವರು, ಶಾಸಕರು ಒಗ್ಗಟ್ಟಿನ ಶಕ್ತಿ ಪ್ರದರ್ಶನ ಮಾಡಿದ್ದು, SCSP-TSP ಅನುದಾನ ಬೇರೆ ಯೋಜನೆಗಳಿಗೆ ಬಳಸ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಜೆಟ್​ನಲ್ಲಿ SC, ST ಸಮುದಾಯಕ್ಕೆ ವಿಶೇಷ ಕೊಡುಗೆ‌ ನೀಡಬೇಕು. SCSP-TSP ಹಣ ಯಾವುದಕ್ಕೆ ಮೀಸಲಿದೆಯೋ ಅದಕ್ಕೇ ಬಳಸಬೇಕು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಭೇಟಿಯಾಗುವ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದ್ದು, ದಲಿತ ಸಿಎಂ ಬೇಡಿಕೆ ಕುರಿತಾಗಿ ಸಮುದಾಯದಿಂದ ಹೈಕಮಾಂಡ್ ಮುಂದೆ ಹಕ್ಕು ಮಂಡನೆ ಬಗ್ಗೆಯೂ ಸಮಾಲೋಚನೆ ಈ ವೇಳೆ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: ಎಸ್​ಸಿಎಸ್​ಪಿ-ಟಿಎಸ್​ಪಿಯ 9 ಸಾವಿರ ಕೋಟಿ ರೂ. ಹಣ ಗ್ಯಾರಂಟಿಗೆ ಬಳಸಿಕೊಂಡ ಸರ್ಕಾರ

SCSP, TSP ಹಣ ನೀಡದ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಈ ಹಿಂದೆ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ರೋಷಾವೇಶ ಪ್ರದರ್ಶಿಸಿದ್ದರು. ಎಸ್​ಸಿಎಸ್​ಪಿ, ಟಿಎಸ್​ಪಿಗೆ ಅನುದಾನ ಹಂಚಿಕೆ ಮಾಡದಿರುವುದು ಯಾಕೆ? ಏನು ಅಂದುಕೊಂಡಿದ್ದೀರಿ? SCSP, TSP ಹಣ ಬೇರೆ ಕಡೆ ಬಳಸುತ್ತಿದ್ದೀರಾ? ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಏರುಧ್ವನಿಯಲ್ಲಿಯೇ ಸಚಿವರು ಪ್ರಶ್ನಿಸಿದ್ದು, ಮಹದೇವಪ್ಪ ಅವರ ಆಕ್ರೋಶ ಕಂಡು ಸಂಪುಟ ಸಹೋದ್ಯೋಗಿಗಳು ಕಕ್ಕಾಬಿಕ್ಕಿ ಆದ ಪ್ರಸಂಗ ನಡೆದಿತ್ತು. ಆ ಬೆನ್ನಲ್ಲಿಯೇ ಈಗ ಸಮುದಾಯದ ನಾಯಕರ ಸಭೆ ನಡೆದಿರೋದು ಭಾರೀ ಕುತೂಹಲ ಮೂಡಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಆನ್​ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಸಹೋದರಿಯರು 9ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ – Kannada News | Ghaziabad Tragedy: Three Minor Sisters Die After Jumping From Housing Complex

ಗಾಜಿಯಾಬಾದ್, ಫೆಬ್ರವರಿ 04:ಆನ್​ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶ ಗಾಜಿಯಾಬಾದ್​​ನಲ್ಲಿ ನಡೆದಿದೆ. ಅಪ್ರಾಪ್ತ ಸಹೋದರಿಯರು ಮಂಗಳವಾರ ತಡರಾತ್ರಿ ತಾರಸಿಯಿಂದ ಕೆಳಗೆ ಹಾರಿದ್ದಾರೆ. ಅವರ ಪೋಷಕರು ಆನ್‌ಲೈನ್ ಗೇಮಿಂಗ್ ಆಡುವುದನ್ನು ವಿರೋಧಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಮೃತ ಬಾಲಕಿಯರನ್ನು ಪಾಖಿ (12), ಪ್ರಾಚಿ (14) ಮತ್ತು ವಿಶಿಕಾ (16) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ,  COVID-19 ಸಾಂಕ್ರಾಮಿಕ ಸಮಯದಲ್ಲಿ ಈ ಮೂವರು ಆನ್‌ಲೈನ್ ವಿಡಿಯೋ ಗೇಮ್‌ಗಳಿಗೆ ವ್ಯಸನಿಯಾಗಿದ್ದರು ಎಂದು ವರದಿಯಾಗಿದೆ. ಅವರು ಆನ್‌ಲೈನ್, ಟಾಸ್ಕ್ ಆಧಾರಿತ ಕೊರಿಯನ್ ಲವ್ ಗೇಮ್ ಆಡುತ್ತಿದ್ದರು. ವರದಿಯಲ್ಲಿ ಉಲ್ಲೇಖಿಸಿರುವ ಪ್ರಕಾರ, ವ್ಯಸನವು ಎಷ್ಟರ ಮಟ್ಟಿಗೆ ತಲುಪಿತ್ತೆಂದರೆ, ಹುಡುಗಿಯರು ಶಾಲೆಗೆ ಹೋಗುವುದನ್ನು ನಿಲ್ಲಿಸಿ, ಹೆಚ್ಚಿನ ಸಮಯವನ್ನು ಆಟದಲ್ಲಿ ಕಳೆಯುತ್ತಿದ್ದರು ಎಂದು ವರದಿಯಾಗಿದೆ.

ಬೆಳಗಿನ ಜಾವ 2 ಗಂಟೆ ಸುಮಾರಿಗೆ ಗಾಜಿಯಾಬಾದ್‌ನ ವಸತಿ ಪಟ್ಟಣವಾದ ಭಾರತ್ ಸಿಟಿಯಲ್ಲಿ ಈ ಘಟನೆ ನಡೆದಿದೆ. ಬಾಲಕಿಯರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಘಟನೆಯ ಹಿಂದಿನ ನಿಖರವಾದ ಕಾರಣವನ್ನು ಕಂಡುಹಿಡಿಯಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಾವಿಗೆ ಕಾರಣವಾದ ಸಂದರ್ಭಗಳ ಬಗ್ಗೆ ತಿಳಿಯಲು  ಆತ್ಮಹತ್ಯೆ ಪತ್ರ ಅಥವಾ ಡಿಜಿಟಲ್ ಪುರಾವೆಗಳು ಲಭ್ಯವಿದೆಯೇ ಎಂದು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ಸ್ಪಷ್ಟವಾಗಿಲ್ಲ.

ಮತ್ತಷ್ಟು ಓದಿ: ಸಿ.ಜೆ.ರಾಯ್​​​ ಆತ್ಮಹತ್ಯೆ: ಮೋದಿ, ನಿರ್ಮಲಾ ಸೀತಾರಾಮನ್​ಗೆ ಮೋಹನ್ ದಾಸ್ ಪೈ ವಿಶೇಷ ಮನವಿ

ಹುಡುಗಿಯರು ಬಾಲ್ಕನಿಯಲ್ಲಿ ಪ್ಲಾಸ್ಟಿಕ್ ಕುರ್ಚಿಯನ್ನು ಇಟ್ಟು ಒಂಬತ್ತನೇ ಮಹಡಿಯಿಂದ ಒಬ್ಬೊಬ್ಬರಾಗಿ ಹಾರಿದ್ದಾರೆ. ಬಿದ್ದ ಕಾರಣ ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಬ್ದ ಕೇಳಿ ಜನರು ಮತ್ತು ಕುಟುಂಬ ಸದಸ್ಯರು ಬರುವ ಹೊತ್ತಿಗೆ ಎಲ್ಲವೂ ಮುಗಿದಿತ್ತು. ಪೊಲೀಸರು ಸ್ಥಳಕ್ಕೆ ಆಗಮಿಸಿ, ಶವಗಳನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.

ಇಂತಹ ಟಾಸ್ಕ್ ಆಧಾರಿತ ಆಟಗಳಲ್ಲಿ, ಅಪಾಯಕಾರಿ ಸವಾಲುಗಳನ್ನು ನೀಡಲಾಗುತ್ತದೆ, ಅವುಗಳನ್ನು ಪೂರ್ಣಗೊಳಿಸಲು ಅವರು ಮಾನಸಿಕವಾಗಿ ಸವಾಲು ಎದುರಿಸುತ್ತಾರೆ. ಮೂವರು ಸಹೋದರಿಯರು ಅಂತಿಮ ಟಾಸ್ಕ್ ಪೂರ್ಣಗೊಳಿಸಲು ಅಥವಾ ಆಟದ ಪ್ರಭಾವದಿಂದ ಈ ತೀವ್ರ ಹೆಜ್ಜೆ ಇಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಆದಾಗ್ಯೂ, ಪೊಲೀಸರು ಈ ಕೋನವನ್ನು ಕೂಲಂಕಷವಾಗಿ ತನಿಖೆ ಮಾಡುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

RCB ತಂಡ ಮಾರಾಟಕ್ಕಿದೆ… ಇಷ್ಟು ಕೋಟಿ ಇದ್ದರೆ ನೀವು ಸಹ ಖರೀದಿಸಬಹುದು! – Kannada News | IPL 2026: RCB sale ‘launched’ by Diageo

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಮಾರಾಟಕ್ಕೆ ಡಿಯಾಜಿಯೋ ಕಂಪೆನಿ ಮುಂದಾಗಿದೆ. ಈ ಮಾರಾಟ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದ್ದು, ಆರ್​ಸಿಬಿ ಫ್ರಾಂಚೈಸಿಯ ಮೌಲ್ಯ ಸುಮಾರು 2 ಬಿಲಿಯನ್ ಡಾಲರ್ ಎಂದು ಘೋಷಿಸಲಾಗಿದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ ಸುಮಾರು 18,000 ಕೋಟಿ ರೂ.

ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಬಿಡ್ಡಿಂಗ್ ಸುಮಾರು 18 ಸಾವಿರ ಕೋಟಿ ರೂ.ನಿಂದ ಶುರುವಾಗಲಿದೆ. ಈಗಾಗಲೇ ಕೆಲ ಉದ್ಯಮಿಗಳು ಆರ್​ಸಿಬಿ ತಂಡದ ಖರೀದಿಗೆ ಆಸಕ್ತಿ ತೋರಿದ್ದು, ಹೀಗಾಗಿ ಈ ಮೊತ್ತವು ಮತ್ತಷ್ಟು ಏರಿಕೆಯಾಗುವುದರಲ್ಲಿ ಅನುಮಾನವೇ ಇಲ್ಲ.

ಝೆರೋಧಾ ಕಂಪೆನಿಯ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಮತ್ತು ಮಣಿಪಾಲ್ ಶಿಕ್ಷಣ ಮತ್ತು ವೈದ್ಯಕೀಯ ಸಂಸ್ಥೆಯ (MEMG) ಅಧ್ಯಕ್ಷ ರಂಜನ್ ಪೈ ಜೊತೆಗೂಡಿ  ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಖರೀದಿಗೆ ಆಸಕ್ತಿ ತೋರಿದ್ದಾರೆ ಈ ಹಿಂದೆ ವರದಿಯಾಗಿತ್ತು.

ಅತ್ತ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದಾರ್ ಪೂನವಾಲ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಖರೀದಿಗೆ ಆಸಕ್ತಿ ಹೊಂದಿದ್ದಾರೆ.

ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಸಹ ಮಾಲೀಕರಾದ ಪಾರ್ಥ್ ಜಿಂದಾಲ್ ಕೂಡ ಆರ್​ಸಿಬಿ ಮೇಲೆ ಕಣ್ಣಿಟ್ಟಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಗಾಗಿ ಅವರ ಜೆಎಸ್​ಡಬ್ಲ್ಯೂ ಗ್ರೂಪ್ ಬಿಡ್ ಮಾಡಲಿದೆ ಎಂದು ತಿಳಿದು ಬಂದಿದೆ.

ಇನ್ನೊಂದೆಡೆ ಅದಾನಿ ಗ್ರೂಪ್ ಕೂಡ ಆರ್​ಸಿಬಿ ಫ್ರಾಂಚೈಸಿಯನ್ನು ಖರೀದಿಸಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಎಂಟ್ರಿ ಕೊಡಲು ಪ್ಲ್ಯಾನ್ ರೂಪಿಸುತ್ತಿದೆ. ಹೀಗಾಗಿ ಅದಾನಿ ಗ್ರೂಪ್​ ಕಡೆಯಿಂದ ಬಿಡ್ಡಿಂಗ್​ನಲ್ಲಿ ಪೈಪೋಟಿ ಎದುರಾಗಲಿದೆ.

ಈ ಉದ್ಯಮಿಗಳಲ್ಲದೆ ದೇವಯಾನಿ ಇಂಟರ್​ನ್ಯಾಷನಲ್ ಗ್ರೂಪ್ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಖರೀದಿಗೆ ಆಸಕ್ತಿ ತೋರಿದೆ. ಹಾಗೆಯೇ ಅಮೆರಿಕದ ಪ್ರೈವೆಟ್ ಇನ್​ವೆಸ್ಟ್​ಮೆಂಟ್ ಕಂಪೆನಿಯೊಂದು ಕೂಡ ಆರ್​ಸಿಬಿ ಫ್ರಾಂಚೈಸಿ ಖರೀದಿಗಾಗಿ ಡಿಯಾಜಿಯೊ ಕಂಪೆನಿ ಜೊತೆ ಮಾತುಕತೆ ನಡೆಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: 5 ಓವರ್​ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ವೆಸ್ಟ್ ಇಂಡೀಸ್

ಇದೀಗ 18 ಸಾವಿರ ಕೋಟಿ ರೂ. ಬ್ರ್ಯಾಂಡ್ ಮೌಲ್ಯದೊಂದಿಗೆ ಆರ್​ಸಿಬಿ ಫ್ರಾಂಚೈಸಿಯನ್ನು ಡಿಯಾಜಿಯೋ ಕಂಪೆನಿ ಮಾರಾಟಕ್ಕಿಟ್ಟಿದೆ ಎಂದು  Sportico ವರದಿ ಮಾಡಿದೆ. ಈ ಮಾರಾಟ ಪ್ರಕ್ರಿಯೆಗೆ ಅಧಿಕೃತ ಚಾಲನೆ ದೊರೆತಿರುವುದರಿಂದ ಪ್ರಮುಖ ಕಂಪೆನಿಗಳ ಕಡೆಯಿಂದ ಬಿಡ್ಡಿಂಗ್​ನಲ್ಲಿ ಪೈಪೋಟಿ ನಡೆಯಬಹುದು. ಈ ಪೈಪೋಟಿಯೊಂದಿಗೆ ಆರ್​ಸಿಬಿ ಫ್ರಾಂಚೈಸಿಯು ಎಷ್ಟು ಕೋಟಿಗೆ ಮಾರಾಟವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

RCB ಫ್ರಾಂಚೈಸಿ ಖರೀದಿಗೆ ಆಸಕ್ತಿ ಹೊಂದಿರುವವರು:

  • ಜೆಎಸ್​ಡಬ್ಲ್ಯೂ ಗ್ರೂಪ್ (ಪಾರ್ಥ್ ಜಿಂದಾಲ್)
  • ಅದಾನಿ ಗ್ರೂಪ್ (ಗೌತಮ್ ಅದಾನಿ)
  • ಪೂನಾವಾಲ ಗ್ರೂಪ್ (ಆದಾರ್ ಪೂನಾವಾಲ)
  • ನಿಖಿಲ್ ಕಾಮತ್ (ಝೆರೋಧಾ ಕಂಪೆನಿ)
  • ರಂಜನ್ ಪೈ (ಮಣಿಪಾಲ್ ಗ್ರೂಪ್)
  • ದೇವಯಾನಿ ಇಂಟರ್ನ್ಯಾಷನಲ್ ಗ್ರೂಪ್ (ರವಿಕಾಂತ್ ಜೈಪುರಿಯಾ)
  • ಅಮೆರಿಕದ ಪ್ರೈವೆಟ್ ಇನ್​ವೆಸ್ಟ್​ಮೆಂಟ್ ಕಂಪೆನಿ

Source link

‘ಧುರಂಧರ್’ ವಿಷಯದಲ್ಲಿ ಮಾಡಿದ ತಪ್ಪಿಗೆ ಭಾರೀ ದಂಡ ತೆತ್ತ ನೆಟ್​​ಫ್ಲಿಕ್ಸ್? – Kannada News | Netflix’s ‘Dhurandhar’ Blunder: Lost ‘Dhurandhar 2’ OTT Rights to Hotstar

‘ಧುರಂಧರ್’ ಸಿನಿಮಾ (Dhurandhar) ವಿಷಯದಲ್ಲಿ ನೆಟ್​​ಫ್ಲಿಕ್ಸ್ ಸಂಸ್ಥೆ ದೊಡ್ಡ ತಪ್ಪೊಂದನ್ನು ಮಾಡಿತ್ತು. ಈ ಚಿತ್ರವನ್ನು ಒಟಿಟಿಯಲ್ಲಿ ಪ್ರಸಾರ ಮಾಡುವಾಗ 10 ನಿಮಿಷಗಳ ದೃಶ್ಯಕ್ಕೆ ಕತ್ತರಿ ಹಾಕಿದೆ. ಅಲ್ಲದೆ, ಹಲವು ಪದಗಳನ್ನು ಮ್ಯೂಟ್ ಮಾಡಿದೆ. ಇಷ್ಟೇ ಅಲ್ಲ, ಸಿನಿಮಾದ ಗುಣಮಟ್ಟವನ್ನು ತಗ್ಗಿಸಿದೆ. ಇದು ಸಂಸ್ಥೆಗೆ ತುಂಬಾನೇ ದುಬಾರಿ ಆಯಿತೇ ಎಂಬ ಪ್ರಶ್ನೆ ಮೂಡಿದೆ. ಈಗ ‘ಧರುಂಧರ್ 2’ ಸಿನಿಮಾದ ಒಟಿಟಿ ಹಕ್ಕು ನೆಟ್​​ಫ್ಲಿಕ್ಸ್ ಕೈತಪ್ಪಿದೆ. ಎರಡನೇ ಪಾರ್ಟ್ ಹಾಟ್​ಸ್ಟಾರ್ ಮೂಲಕ ತೆರೆಗೆ ಬರುತ್ತಿದೆ.

‘ಧುರಂಧರ್ 2’ ಸಿನಿಮಾ ಡಿಸೆಂಬರ್ 5ರಂದು ತೆರೆಗೆ ಬಂತು. ಈ ಚಿತ್ರದ ಮೊದಲ ಭಾಗದ ಬಜೆಟ್ 250 ಕೋಟಿ ರೂಪಾಯಿ ಎನ್ನಲಾಗಿದೆ. ಎರಡೂ ಪಾರ್ಟ್ ಸೇರಿದರೆ 475 ಕೋಟಿ ರೂಪಾಯಿ ಆಗಿದೆಯಂತೆ. ಮೊದಲ ಭಾಗದ ಬಾಕ್ಸ್ ಆಫೀಸ್ ಕಲೆಕ್ಷನ್ 1350 ಕೋಟಿ ರೂಪಾಯಿ ಆಗಿದೆ. ಈ ಸಿನಿಮಾನ ಜಿಯೋ ಸ್ಟುಡಿಯೋಸ್ ನಿರ್ಮಿಸಿದೆ. ಬಿ62 ಸ್ಟುಡಿಯೋಸ್ ಕೂಡ ಸಿನಿಮಾ ನಿರ್ಮಾಣದಲ್ಲಿ ಕೈ ಜೋಡಿಸಿದೆ. ಮೊದಲ ಭಾಗದ ಒಟಿಟಿ ಹಕ್ಕನ್ನು ನೆಟ್​​ಫ್ಲಿಕ್ಸ್​​ಗೆ ನೀಡಲಾಗಿತ್ತು. ಆದರೆ, ಎರಡನೇ ಪಾರ್ಟ್ ವಿಷಯದಲ್ಲಿ ಸಂಸ್ಥೆ ನಿರ್ಧಾರ ಬದಲಿಸಿದೆ.

‘ಧುರಂಧರ್ 2’ ಸಿನಿಮಾ ಜಿಯೋ ಹಾಟ್​ಸ್ಟಾರ್ ಮೂಲಕ ಪ್ರಸಾರ ಕಾಣಲಿದೆ. ಟೀಸರ್​​ನಲ್ಲಿ ಈ ವಿಷಯ ತಿಳಿದುಬಂದಿದೆ. ‘ಧುರಂಧರ್ 2’ ಟೀಸರ್ ಕೊನೆಯಲ್ಲಿ ಜಿಯೋ ಹಾಟ್​​ಸ್ಟಾರ್ ಹೆಸರನ್ನು ಉಲ್ಲೇಖ ಮಾಡಲಾಗಿದೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಒಟಿಟಿ ಪ್ರೇಕ್ಷಕನಿಗೆ ‘ಧುರಂಧರ್’ ಚಿತ್ರದ ನಿಜವಾದ ಅನುಭವವನ್ನು ‘ನೆಟ್​ಫ್ಲಿಕ್ಸ್’ ಹಾಳು ಮಾಡಿದೆ. ಈ ಕಾರಣದಿಂದ ನಿರ್ಮಾಣ ಸಂಸ್ಥೆ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಸೋಶಿಯಲ್ ಮೀಡಿಯಾದಲ್ಲಿ ಮಾತನಾಡಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ‘ಧುರಂಧರ್ 2’ ಚಿತ್ರವನ್ನು‘ಟಾಕ್ಸಿಕ್’ ಕಬಳಿಸಿಯಾಗಿದೆ; ಹಿಂದಿ ಮಂದಿಯ ಅಭಿಪ್ರಾಯ

ಆದರೆ, ಅಸಲಿಗೆ ಹಾಗಿರೋದಿಲ್ಲ. ಏಕೆಂದರೆ, ಈ ಡೀಲ್​​ಗಳು ಏಕಾಏಕಿ ನಡೆಯೋದಿಲ್ಲ. ರಾತ್ರೋರಾತ್ರಿ ಒಪ್ಪಂದ ಬದಲಿಸಿಕೊಳ್ಳಲು ಸಾಧ್ಯವಿಲ್ಲ. ಜಿಯೋ ಸ್ಟುಡಿಯೋಸ್ ಅಡಿಯಲ್ಲೇ ಜಿಯೋ ಹಾಟ್​​ಸ್ಟಾರ್ ಕೂಡ ಬರುತ್ತದೆ. ಈ ಕಾರಣದಿಂದ ಈ ನಿರ್ಧಾರ ತೆಗೆದುಕೊಂಡಿರಬಹುದು. ಈ ಮೊದಲು ಹಾಟ್​​ಸ್ಟಾರ್ ಜಿಯೋ ಸಂಸ್ಥೆಯ ಅಡಿಯಲ್ಲಿ ಇರಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಥೆಲ್ ಸ್ಪಿನ್​ಗೆ ‘ತಿರುಗಿ’ ಬಿದ್ದ ಶ್ರೀಲಂಕಾ

ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಇಂಗ್ಲೆಂಡ್ ತಂಡ ಜಯ ಸಾಧಿಸಿದೆ. ಆದರೆ ಈ ಬಾರಿ ಗೆದ್ದಿರುವುದು ಕೇವಲ 12 ರನ್​ಗಳ ಅಂತರದಿಂದ. ಈ ಗೆಲುವಿನ ರೂವಾರಿ ಜೇಕಬ್ ಬೆಥೆಲ್. ಪಲ್ಲೆಕೆಲ್ಲೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 128 ರನ್​ಗಳು ಮಾತ್ರ.

129 ರನ್​ಗಳ ಸುಲಭ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡವು 15 ಓವರ್​ಗಳಲ್ಲಿ 97 ರನ್ ಕಲೆಹಾಕಿದ್ದರು. ಈ ಹಂತದಲ್ಲಿ ದಾಳಿಗಿಳಿದ ಜೇಕಬ್ ಬೆಥೆಲ್ ಇಡೀ ಪಂದ್ಯದ ಚಿತ್ರಣ ಬದಲಿಸಿದರು.

ಅಂತಿಮ ಹಂತದಲ್ಲಿ 3.3 ಓವರ್​ಗಳನ್ನು ಎಸೆದ ಬೆಥೆಲ್ ಕೇವಲ 11 ರನ್ ನೀಡಿ 4 ವಿಕೆಟ್ ಉರುಳಿಸಿದರು. ಪರಿಣಾಮ ಶ್ರೀಲಂಕಾ ತಂಡವು 19.3 ಓವರ್​ಗಳಲ್ಲಿ 116 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಇಂಗ್ಲೆಂಡ್ ತಂಡ 12 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

Source link

ಲಿಬಿಯಾದ ಮಾಜಿ ಸರ್ವಾಧಿಕಾರಿ ಗಡಾಫಿಯ ಮಗ ಸೈಫ್ ಅಲ್-ಇಸ್ಲಾಂನ ಗುಂಡಿಕ್ಕಿ ಹತ್ಯೆ – Kannada News | Libya: Saif al Islam Gaddafi, Son of Muammar, Killed by Gunmen Amid Political Turmoil

ಲಿಬಿಯಾ, ಫೆಬ್ರವರಿ 04: ಲಿಬಿಯಾದಲ್ಲಿ ರಾಜಕೀಯ ಉದ್ವಿಗ್ನತೆ ಮತ್ತೊಮ್ಮೆ ಉತ್ತುಂಗಕ್ಕೇರಿದೆ. ಜಿಂಟಾನ್ ನಗರದ ಮನೆಯೊಂದಕ್ಕೆ ನುಗ್ಗಿದ ನಾಲ್ವರು ಅಪರಿಚಿತ ಬಂದೂಕುಧಾರಿಗಳು ಲಿಬಿಯಾದ ಮಾಜಿ ಸರ್ವಾಧಿಕಾರಿ ಗಡಾಫಿಯ ಮಗ  ಸೈಫ್ ಅಲ್-ಇಸ್ಲಾಂ ಗಡಾಫಿಯನ್ನು ಹತ್ಯೆ(Murder)ಗೈದಿದ್ದಾರೆ. ತಮ್ಮ ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಸೈಫ್ ಅಲ್-ಇಸ್ಲಾಂಗೆ 53 ವರ್ಷ ವಯಸ್ಸಾಗಿತ್ತು. ಲಿಬಿಯಾದ ಅಧಿಕಾರಿಗಳು ಮತ್ತು ಕುಟುಂಬ ಮೂಲಗಳು ಮಂಗಳವಾರ ಈ ಘಟನೆಯನ್ನು ದೃಢಪಡಿಸಿವೆ.

ಸೈಫ್ ಅಲ್-ಇಸ್ಲಾಂ ಗಡಾಫಿ ಲಿಬಿಯಾದ ಮಾಜಿ ಸರ್ವಾಧಿಕಾರಿ ಮುಅಮ್ಮರ್ ಗಡಾಫಿಯವರ ಮಗ, ಅವರು ತಮ್ಮ ತಂದೆಯ ಆಡಳಿತದಲ್ಲಿ ಅತ್ಯಂತ ಶಕ್ತಿಶಾಲಿ ವ್ಯಕ್ತಿಯಾಗಿದ್ದರು. ಅವರ ಹತ್ಯೆಯ ಉದ್ದೇಶ ಸ್ಪಷ್ಟವಾಗಿಲ್ಲವಾದರೂ, ಈ ಘಟನೆಯು ಮತ್ತೊಮ್ಮೆ ಲಿಬಿಯಾದ ಅಸ್ಥಿರ ಭದ್ರತಾ ವ್ಯವಸ್ಥೆ ಮತ್ತು ದೀರ್ಘಕಾಲದ ರಾಜಕೀಯ ಸಂಘರ್ಷವನ್ನು ಬೆಳಕಿಗೆ ತಂದಿದೆ.

ಲಿಬಿಯಾದ ಮಾಧ್ಯಮಗಳ ಪ್ರಕಾರ, ಸೈಫ್ ಅಲ್-ಇಸ್ಲಾಂ ಅವರ ವಕೀಲ ಖಲೀದ್ ಅಲ್-ಝೈದಿ ಮತ್ತು ರಾಜಕೀಯ ಪ್ರತಿನಿಧಿಗಳು ವಾಯುವ್ಯ ಲಿಬಿಯಾದ ಜಿಂಟಾನ್ ನಗರದಲ್ಲಿರುವ ಅವರ ಮನೆಯಲ್ಲಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ದೃಢಪಡಿಸಿದ್ದಾರೆ. ಅವರ ರಾಜಕೀಯ ತಂಡದ ಹೇಳಿಕೆಯ ಪ್ರಕಾರ, ನಾಲ್ವರು ಮುಸುಕುಧಾರಿ ಬಂದೂಕುಧಾರಿಗಳು ಅವರ ನಿವಾಸಕ್ಕೆ ಪ್ರವೇಶಿಸಿ, ಭದ್ರತಾ ಕ್ಯಾಮೆರಾಗಳನ್ನು ನಿಷ್ಕ್ರಿಯಗೊಳಿಸಿ, ಘರ್ಷಣೆಯ ನಂತರ ಗುಂಡು ಹಾರಿಸಿದ್ದಾರೆ.

ಲಿಬಿಯಾದ ಅಧಿಕಾರಿಗಳು ಹತ್ಯೆಯ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಆದಾಗ್ಯೂ, ಹತ್ಯೆಯ ಹಿಂದಿನ ಉದ್ದೇಶ ಅಥವಾ ಸಂಚು ರೂಪಿಸಿದವರು ಯಾರು ಎಂಬುದರ ಕುರಿತು ಇನ್ನೂ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ದಾಳಿಕೋರರು ಕಮಾಂಡೋ ಘಟಕದವರೆಂದು ಹೇಳಲಾಗುತ್ತದೆ.

ಮತ್ತಷ್ಟು ಓದಿ: ಒಂದೇ ಮಹಿಳೆಯ ಜತೆಗೆ ಇಬ್ಬರ ಅನೈತಿಕ ಸಂಬಂಧ: ಚಾಕುವಿನಿಂದ ಇರಿದು ಕೊಲೆ

ಜೂನ್ 1972 ರಲ್ಲಿ ಟ್ರಿಪೋಲಿಯಲ್ಲಿ ಜನಿಸಿದ ಸೈಫ್ ಅಲ್-ಇಸ್ಲಾಂ, ಗಡಾಫಿ , ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಿಂದ ಪಿಎಚ್‌ಡಿ ಪದವಿ ಪಡೆದಿದ್ದರು.ನಾಲ್ಕು ದಶಕಗಳ ಅಧಿಕಾರದ ನಂತರ 2011 ರಲ್ಲಿ ನ್ಯಾಟೋ ಬೆಂಬಲಿತ ದಂಗೆಯಲ್ಲಿ ಮೊಅಮ್ಮರ್ ಗಡಾಫಿ ಅವರನ್ನು ಪದಚ್ಯುತಗೊಳಿಸಲಾಯಿತು. ಆ ವರ್ಷದ ಕೊನೆಯಲ್ಲಿ ದೇಶವು ಸಂಘರ್ಷಕ್ಕೆ ಸಿಲುಕಿದಾಗ ಅವರನ್ನು ಕೊಲ್ಲಲಾಯಿತು.

ನವೆಂಬರ್ 2021 ರಲ್ಲಿ, ಅವರು ಲಿಬಿಯಾದ ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಉಮೇದುವಾರಿಕೆಯನ್ನು ಘೋಷಿಸುವ ಮೂಲಕ ರಾಜಕೀಯ ಪುನರಾಗಮನಕ್ಕೆ ಪ್ರಯತ್ನಿಸಿದರು. ಅವರ ನಿರ್ಧಾರವು ದೇಶಾದ್ಯಂತ ಗಡಾಫಿ ವಿರೋಧಿ ಗುಂಪುಗಳಿಂದ ತೀವ್ರ ವಿರೋಧವನ್ನು ಹುಟ್ಟುಹಾಕಿತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version