ಇಸ್ರೇಲ್ ಹಿಜ್ಬೊಲ್ಲಾ ಮೇಲೆ ದಾಳಿ ಮುಂದುವರಿಸುತ್ತದೆ; ನೆತನ್ಯಾಹು ಎಚ್ಚರಿಕೆ

ಇಸ್ರೇಲ್ ಹಿಜ್ಬೊಲ್ಲಾ ಮೇಲೆ ದಾಳಿ ಮುಂದುವರಿಸುತ್ತದೆ; ನೆತನ್ಯಾಹು ಎಚ್ಚರಿಕೆ

ಟೆಲ್ ಅವೀವ್, ಏಪ್ರಿಲ್ 9: ಲೆಬನಾನ್‌ನಾದ್ಯಂತ ಮಾರಕ ದಾಳಿಗಳ ನಂತರವೂ ಇಸ್ರೇಲ್ ಹೆಜ್ಬೊಲ್ಲಾ ವಿರುದ್ಧ ತನ್ನ ಮಿಲಿಟರಿ ದಾಳಿಯನ್ನು ಮುಂದುವರಿಸುತ್ತದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಘೋಷಿಸಿದ್ದಾರೆ. ಇಸ್ರೇಲ್​ನ ದಾಳಿಯಲ್ಲಿ ಹೆಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸೆಮ್ ಅವರ ಸೋದರಳಿಯ ಮತ್ತು ಆಪ್ತ ಸಹಾಯಕ ಕೊಲ್ಲಲ್ಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇಸ್ರೇಲ್ ಅಗತ್ಯವಿರುವಲ್ಲೆಲ್ಲ ಹಿಜ್ಬೊಲ್ಲಾ ಮೇಲೆ ದಾಳಿಯನ್ನು ಮುಂದುವರಿಸುತ್ತದೆ ಎಂದು ಹೇಳಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ನೊಂದಿಗೆ 2 ವಾರಗಳ ಕದನ ವಿರಾಮವನ್ನು ಘೋಷಿಸಿದ ಗಂಟೆಗಳ ನಂತರ ಬೈರುತ್‌ನ ವಾಣಿಜ್ಯ ಮತ್ತು ವಸತಿ ಪ್ರದೇಶಗಳ ಮೇಲೆ ಇಸ್ರೇಲ್ ದಾಳಿಗಳನ್ನು ಪ್ರಾರಂಭಿಸಿತ್ತು. ಈ ದಾಳಿಯಿಂದ ಸಾವನ್ನಪ್ಪಿದವರ ಸಂಖ್ಯೆ 250ಕ್ಕೆ ಏರಿದೆ.

ಇದನ್ನೂ ಓದಿ: ಲೆಬನಾನ್​​ನಲ್ಲಿ ಪ್ಯಾಲೆಸ್ತೀನಿಯನ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ, 13 ಮಂದಿ ಸಾವು

ಲೆಬನಾನ್‌ನಲ್ಲಿ ಹಿಜ್ಬೊಲ್ಲಾ ಉಗ್ರಗಾಮಿ ಗುಂಪಿನ ವಿರುದ್ಧದ ದಾಳಿಗಳಿಗೆ ಪ್ರತಿಕ್ರಿಯೆಯಾಗಿ ಇರಾನ್ ನಿನ್ನೆ ರಾತ್ರಿಯಿಂದ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಿದೆ. ಬುಧವಾರ ಇರಾನ್ ಇರಾನ್‌ನೊಂದಿಗೆ ಅಮೆರಿಕ ಕದನ ವಿರಾಮ ಘೋಷಿಸಿದ ನಂತರ 2 ವಾರಗಳ ಕಾಲ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು ಇರಾನ್ ಒಪ್ಪಿಕೊಂಡಿತ್ತು. ಆದರೆ, ಲೆಬನಾನ್ ಮೇಲಿನ ದಾಳಿಯಿಂದ ಮತ್ತೆ ಹಾರ್ಮುಜ್ ಅನ್ನು ಮುಚ್ಚಲಾಗಿದೆ. ಶುಕ್ರವಾರ ಇಸ್ಲಾಮಾಬಾದ್‌ನಲ್ಲಿ ಈ ಬಗ್ಗೆ ಮಾತುಕತೆ ನಡೆಯಲಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಬಿಸಿಲಿಗೆ ಹೋದ ತಕ್ಷಣ ತಲೆನೋವು ಬರುತ್ತಾ? ಹಾಗಿದ್ರೆ ನಿಮಗೆ ಈ ಸಮಸ್ಯೆ ಇದೆ ಎಂದರ್ಥ!

ಬಿಸಿಲಿನಲ್ಲಿ ಹೊರಗೆ ಹೋದ ತಕ್ಷಣ ಅನೇಕರಿಗೆ ತಲೆನೋವು (Headache) ಬರುತ್ತದೆ. ಇದನ್ನು ಸಾಮಾನ್ಯವೆಂದು ಪರಿಗಣಿಸಿ ನಿರ್ಲಕ್ಷಿಸುವುದು ಸೂಕ್ತವಲ್ಲ, ಏಕೆಂದರೆ ಇದು ದೇಹದಲ್ಲಿನ ಕೆಲವು ಅಸಮತೋಲನದ ಸಂಕೇತವಾಗಿರಬಹುದು. ತಲೆ ಭಾರ, ಕಣ್ಣುಗಳಲ್ಲಿ ಉರಿ, ತಲೆತಿರುಗುವಿಕೆ, ದೌರ್ಬಲ್ಯ, ಅತಿಯಾದ ಬೆವರು ಅಥವಾ ಚಡಪಡಿಕೆ ಮುಂತಾದ ಲಕ್ಷಣಗಳು ಸೂರ್ಯನ ಬೆಳಕಿಗೆ ಒಡ್ಡಿಕೊಂಡ ತಕ್ಷಣ ಕಾಣಿಸಿಕೊಳ್ಳಬಹುದು. ಕೆಲವು ಸಂದರ್ಭಗಳಲ್ಲಿ, ವೇಗದ ಹೃದಯ ಬಡಿತ, ಆಯಾಸ ಕಂಡುಬರಬಹುದು. ಹಾಗಾದರೆ ಈ ರೀತಿಯಾಗುವುದಕ್ಕೆ ಕಾರಣವೇನು, ಈ ಸಮಸ್ಯೆ ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಬಿಸಿಲಿಗೆ ಹೋದ ತಕ್ಷಣ ತಲೆನೋವು ಬರುವುದಕ್ಕೆ ಕಾರಣವೇನು?

ದೆಹಲಿಯ ವೈದ್ಯರಾದ ಡಾ. ಅಜಿತ್ ಜೈನ್ ಹೇಳುವ ಪ್ರಕಾರ, ತೀವ್ರ ಬಿಸಿಲು ಮತ್ತು ಉಷ್ಣತೆಯಿಂದ ದೇಹದ ತಾಪಮಾನ ತಕ್ಷಣ ಏರಿಕೆಯಾಗುತ್ತದೆ. ಇದರಿಂದ ತಲೆಭಾರ ಮತ್ತು ತಲೆನೋವು ಕಾಣಿಸಿಕೊಳ್ಳಬಹುದು. ಜೊತೆಗೆ ದೇಹದಲ್ಲಿ ನೀರಿನ ಕೊರತೆ (ಡಿಹೈಡ್ರೇಷನ್) ಉಂಟಾದರೆ, ಬೆವರಿನ ಮೂಲಕ ನೀರು ಮತ್ತು ಖನಿಜಗಳು ಹೊರಗೆ ಹೋದಾಗ ತಲೆನೋವು ಹೆಚ್ಚಾಗಬಹುದು. ಅಷ್ಟೇ ಅಲ್ಲ, ತೀವ್ರ ಬೆಳಕು ಕಣ್ಣಿನ ಮೇಲೆ ಬಿದ್ದಾಗ ಮೈಗ್ರೇನ್ ಇರುವವರಿಗೆ ತಲೆನೋವು ಉಂಟಾಗಬಹುದು. ಖಾಲಿ ಹೊಟ್ಟೆಯಲ್ಲಿ ಬಿಸಿಲಿಗೆ ಹೋಗುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಕುಸಿಯಬಹುದು, ಇದು ಕೂಡ ತಲೆನೋವಿಗೆ ಕಾರಣವಾಗುತ್ತದೆ. ಇದಲ್ಲದೆ ನಿದ್ರೆ ಕೊರತೆ, ದಣಿವು ಮತ್ತು ಬಿಸಿ ಗಾಳಿ ಸಮಸ್ಯೆಯನ್ನು ಮತ್ತಷ್ಟು ಗಂಭೀರವಾಗಿಸಬಹುದು.

ಇದನ್ನೂ ಓದಿ: Cold Water Vs Warm Water: ಬಿಸಿ ನೀರು ಅಥವಾ ತಣ್ಣೀರು; ಬೇಸಿಗೆಯಲ್ಲಿ ಕುಡಿಯಲು ಯಾವುದು ಬೆಸ್ಟ್?

ಯಾರಿಗೆ ಹೆಚ್ಚು ಅಪಾಯ?

ಮೈಗ್ರೇನ್ ಇರುವವರು, ಶೀಘ್ರವಾಗಿ ಡಿಹೈಡ್ರೇಷನ್ ಆಗುವವರು, ದೀರ್ಘಕಾಲ ಖಾಲಿ ಹೊಟ್ಟೆಯಲ್ಲಿ ಇರುವವರು ಹೆಚ್ಚು ಸಮಸ್ಯೆಗೆ ಒಳಗಾಗಬಹುದು. ಮಕ್ಕಳಲ್ಲಿ, ವೃದ್ಧರಲ್ಲಿ, ಗರ್ಭಿಣಿಯರಲ್ಲಿ ಮತ್ತು ಹೊರಾಂಗಣದಲ್ಲಿ ಕೆಲಸ ಮಾಡುವವರಲ್ಲಿ ಈ ಸಮಸ್ಯೆ ಹೆಚ್ಚು ಕಾಣಿಸಬಹುದು.

ತಡೆಗಟ್ಟಲು ಏನು ಮಾಡಬೇಕು?

ಬಿಸಿಲಿಗೆ ಹೋಗುವ ಮೊದಲು ಸಾಕಷ್ಟು ನೀರು ಕುಡಿಯುವುದು ಅತ್ಯಗತ್ಯ. ತಲೆ ಮುಚ್ಚಲು ಟೋಪಿ, ದುಪ್ಪಟ್ಟಾ ಅಥವಾ ಛತ್ರಿ ಬಳಸುವುದು ಉತ್ತಮ. ಕಣ್ಣನ್ನು ರಕ್ಷಿಸಲು ಸನ್‌ಗ್ಲಾಸ್ ಧರಿಸಬಹುದು. ಸಾಧ್ಯವಾದಷ್ಟು ಮಧ್ಯಾಹ್ನದ ತೀವ್ರ ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಬೇಕು. ಹೋಗಲೇ ಬೇಕಾದಾಗ ಹೊರಗೆ ಹೋಗುವ ಮೊದಲು ಸ್ವಲ್ಪ ಏನಾದರೂ ದೇಹ ತಂಪಾಗಿಸುವ ಆಹಾರ ಸೇವಿಸುವುದು ಮುಖ್ಯ. ಹಗುರ ಮತ್ತು ಸಡಿಲವಾಗಿರುವ ಉಡುಪನ್ನು ಧರಿಸುವುದರಿಂದ ದೇಹ ತಂಪಾಗಿರುತ್ತದೆ. ಈ ಸರಳ ಕ್ರಮಗಳು ತಲೆನೋವು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಬಿಸಿಲಿಗೆ ಹೋದ ತಕ್ಷಣ ತಲೆನೋವು ಕಾಣಿಸಿಕೊಳ್ಳುವುದು ದೇಹದ ಎಚ್ಚರಿಕೆಯ ಸೂಚನೆ ಆಗಿರಬಹುದು. ಆದ್ದರಿಂದ ದೇಹದ ಸಂಕೇತಗಳನ್ನು ಗಮನಿಸಿ, ಸರಿಯಾದ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಮತ್ತು ಅಗತ್ಯವಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಅತ್ಯಂತ ಮುಖ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಮ್ಮ ಮೊದಲ ಹೀರೋ ದಳಪತಿ ವಿಜಯ್ ಬಗ್ಗೆ ಪ್ರಿಯಾಂಕಾ ಚೋಪ್ರಾ ಮಾತು: ನಟಿ ಹೇಳಿದ್ದೇನು?

ಪ್ರಿಯಾಂಕಾ ಚೋಪ್ರಾ (Priyanka Chopra), ಈಗ ಹಾಲಿವುಡ್​ನ ಬ್ಯುಸಿ ನಟಿಯರಲ್ಲಿ ಒಬ್ಬರು. ಬಾಲಿವುಡ್​​ನಲ್ಲಿ ಸಹ ದಶಕದ ಕಾಲ ಸ್ಟಾರ್ ನಟಿಯಾಗಿ ಮೆರೆದಿದ್ದರು. ಬಾಲಿವುಡ್, ಹಾಲಿವುಡ್​​ನಲ್ಲೂ ಚಾಪು ಮೂಡಿಸಿರುವ ಪ್ರಿಯಾಂಕಾ ಚೋಪ್ರಾ ಅವರ ಮೊದಲ ಸಿನಿಮಾ ತಮಿಳು ಭಾಷೆಯ ‘ತಮಿಳನ್’. ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ವೃತ್ತಿಜೀವನದ ಆರಂಭದ ದಿನಗಳ ಬಗ್ಗೆ ಮಾತನಾಡಿರುವ ಪ್ರಿಯಾಂಕಾ ಚೋಪ್ರಾ, ‘ತಮಿಳನ್’ ಸಿನಿಮಾ ಬಗ್ಗೆಯೂ ಮಾತನಾಡಿದ್ದಾರೆ. ವಿಶೇಷವಾಗಿ ದಕ್ಷಿಣ ಭಾರತದ ಸೂಪರ್‌ಸ್ಟಾರ್ ದಳಪತಿ ವಿಜಯ್ ಅವರ ಜನಪ್ರಿಯತೆಯನ್ನು ಕಂಡು ತಾವು ಮೊದಲ ಬಾರಿಗೆ ಹೇಗೆ ಬೆರಗಾಗಿದ್ದೆ ಎಂಬ ಆಸಕ್ತಿದಾಯಕ ವಿಷಯವನ್ನು ಅವರು ಹಂಚಿಕೊಂಡಿದ್ದಾರೆ.

2002 ರಲ್ಲಿ ಬಿಡುಗಡೆ ಆದ ‘ತಮಿಳನ್’ ಸಿನಿಮಾ ಮೂಲಕ ಪ್ರಿಯಾಂಕಾ ಚೋಪ್ರಾ ಚಿತ್ರರಂಗಕ್ಕೆ ಕಾಲಿರಿಸಿದರು. ಅದು ಅವರ ಮೊಟ್ಟ ಮೊದಲ ಸಿನಿಮಾ. ಆಗಿನ್ನೂ ಅವರಿಗೆ ಸುಮಾರು 18 ವರ್ಷ ವಯಸ್ಸು. ಸಿನಿಮಾ ಬಗ್ಗೆ ಮಾತನಾಡಿರುವ ಪ್ರಿಯಾಂಕಾ ಚೋಪ್ರಾ, ‘ನನ್ನ ಮೊದಲ ಸಿನಿಮಾ ‘ತಮಿಳನ್’ ಚಿತ್ರದ ಶೂಟಿಂಗ್ ನಡೆಯುತ್ತಿದ್ದಾಗ, ಸಹ-ನಟ ವಿಜಯ್ ಅವರ ಜನಪ್ರಿಯತೆ ನೋಡಿ ನನಗೆ ಆಶ್ಚರ್ಯವಾಗಿತ್ತು. ನಾವು ಸೆಟ್‌ಗೆ ಹೋದಾಗಲೆಲ್ಲಾ ಅವರನ್ನು ನೋಡಲು ಸಾವಿರಾರು ಅಭಿಮಾನಿಗಳು ನೆರೆದಿರುತ್ತಿದ್ದರು. ಅವರು ನೃತ್ಯ ಮಾಡುತ್ತಿರಲಿ ಅಥವಾ ನಟಿಸುತ್ತಿರಲಿ, ಜನರು ಅವರನ್ನು ಒಬ್ಬ ‘ದೇವಮಾನವ’ ಎಂಬಂತೆ ಆರಾಧಿಸುತ್ತಿದ್ದರು’ ಎಂದಿದ್ದಾರೆ ನಟಿ.

‘ನಾನಗಾಗ ಇನ್ನೂ 18 ವರ್ಷ. ವಿಜಯ್ ಅವರ ಆ ರೀತಿಯ ಕ್ರೇಜ್ ನೋಡಿದಾಗ, ತಮಗೂ ಇಂತಹ ಅಭಿಮಾನಿ ಬಳಗ ಸಿಗಲಿ ಎಂಬ ಆಸೆ ಮೂಡಿತ್ತು. ಅದೊಂದು ಅದ್ಭುತದಂತೆ ನನಗೆ ಆಗ ಭಾಸವಾಗಿತ್ತು’ ಎಂದು ಪ್ರಿಯಾಂಕಾ ಚೋಪ್ರಾ ಹೇಳಿದ್ದಾರೆ.

ಇದನ್ನೂ ಓದಿ:ಫ್ಯಾಷನ್ ಶೋನಲ್ಲಿ ಮಿರಿ-ಮಿರಿ ಮಿಂಚಿದ ನಟಿ ಪ್ರಿಯಾಂಕಾ ಚೋಪ್ರಾ

ತಮಿಳು ಭಾಷೆ ತಿಳಿಯದಿದ್ದರೂ, ಸಂಭಾಷಣೆಗಳನ್ನು ಬಾಯಿಪಾಠ ಮಾಡಿ ಕಲಿತು ನಟಿಸುತ್ತಿದ್ದರಂತೆ. ಈ ಸಮಯದಲ್ಲಿ ವಿಜಯ್ ಅವರು ಬಹಳ ಸಹಕಾರ ನೀಡಿದ್ದರು ಎಂದು ಪ್ರಿಯಾಂಕಾ ಈ ಹಿಂದೆಯೂ ಅನೇಕ ಬಾರಿ ಹೇಳಿಕೊಂಡಿದ್ದಾರೆ. ಕೇವಲ ನಟನೆಯಲ್ಲದೆ, ವಿಜಯ್ ಅವರ ಪ್ರೇರಣೆಯಿಂದಲೇ ಪ್ರಿಯಾಂಕಾ ಅವರು ಆ ಚಿತ್ರದಲ್ಲಿ ‘ಉಲ್ಲಾತ್ತೈ ಕಿಳ್ಳಾದೆ’ ಎಂಬ ಹಾಡನ್ನು ಕೂಡ ಹಾಡಿದ್ದರು.

ಇಂದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಪ್ರಿಯಾಂಕಾ ಚೋಪ್ರಾ, ತಮಗೆ ‘ಸ್ಟಾರ್‌ಡಮ್’ ಎಂದರೇನು ಎಂಬುದನ್ನು ಮೊದಲು ಪರಿಚಯಿಸಿದ್ದೇ ದಳಪತಿ ವಿಜಯ್ ಮತ್ತು ಅವರ ಅಭಿಮಾನಿಗಳು ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಪ್ರಿಯಾಂಕಾ ಬರೆದಿರುವ ತಮ್ಮ ಆತ್ಮಕತೆಯಲ್ಲಿಯೂ ಸಹ ದಳಪತಿ ವಿಜಯ್ ಅವರ ಬಗ್ಗೆ ಪ್ರಸ್ತಾಪಿಸಿದ್ದಾರೆ. ತಮ್ಮ ಮೊದಲ ಸಿನಿಮಾಕ್ಕೆ ಅವರು ನೀಡಿದ ಸಹಕಾರವನ್ನು ನೆನಪು ಮಾಡಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಎನ್ಪಿಎಸ್ ಸ್ವಾಸ್ಥ್ಯ, ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದ ಈ ಹೆಲ್ತ್ ಸ್ಕೀಮ್ ಯಾವುದು?

ಪೆನ್ಷನ್ ಫಂಡ್​ಗಳ ಪ್ರಾಧಿಕಾರವಾದ ಪಿಎಫ್​ಆರ್​ಡಿಎ ಮೊನ್ನೆಯಷ್ಟೆ (ಏಪ್ರಿಲ್ 7) ಎನ್​ಪಿಎಸ್ ಸ್ವಾಸ್ಥ್ಯ ಸ್ಕೀಮ್​ನ (NPS Swasthya) ಎರಡನೇ ಪ್ರೂಫ್ ಆಫ್ ಕಾನ್ಸೆಪ್ಟ್ (PoC- Proof of Concept) ಅನ್ನು ಅನಾವರಣಗೊಳಿಸಿತು. ನ್ಯಾಷನಲ್ ಪೆನ್ಷನ್ ಸಿಸ್ಟಂನ ಗ್ರಾಹಕರಿಗೆ ರಿಟೈರ್ಮೆಂಟ್ ಸೇವಿಂಗ್ಸ್ ಹಣವನ್ನು ಹೆಲ್ತ್​ಕೇರ್ ವೆಚ್ಚಕ್ಕೆ ಬಳಸಲು ಅವಕಾಶ ಕೊಡುವ ಕೆಲ ನಿಯಮಗಳನ್ನು ಹಾಕಿದೆ.

ನ್ಯಾಷನಲ್ ಪೆನ್ಷನ್ ಸಿಸ್ಟಂ ಅಡಿಯಲ್ಲಿ ಈ ಸ್ವಾಸ್ಥ್ಯ ಯೋಜನೆ 18ರಿಂದ 85 ವರ್ಷ ವಯೋಮಾನದವರಿಗೆ ಮುಕ್ತವಾಗಿ ಲಭ್ಯ ಇರುತ್ತದೆ. ಈ ಸ್ಕೀಮ್ ಪಡೆಯುವಾಗ ಸಬ್​ಸ್ಕ್ರೈಬರ್​ಗಳು ಹೆಲ್ತ್ ಡಿಕ್ಲರೇಶನ್ ಒದಗಿಸಬೇಕು. ತಮ್ಮಲ್ಲಿ ಪ್ರೀ ಎಕ್ಸಿಸ್ಟಿಂಗ್ ಕಾಯಿಲೆಗಳು ಯಾವುದಾದರೂ ಇದ್ದರೆ ತಿಳಿಸಬೇಕು.

ಎನ್​ಪಿಎಸ್ ಸ್ವಾಸ್ಥ್ಯ ಸ್ಕೀಮ್ ಪಡೆಯಬೇಕೆಂದರೆ ಮೊದಲು ನ್ಯಾಷನಲ್ ಪೆನ್ಷನ್ ಸಿಸ್ಟಂ ಅಕೌಂಟ್ ಅನ್ನು ಆರಂಭಿಸಬೇಕು. ನಂತರ ಹೆಲ್ತ್ ಡಿಕ್ಲರೇಶನ್ ಸಲ್ಲಿಸಬೇಕು. ಲಭ್ಯ ಇರುವ ಪೆನ್ಷನ್ ಫಂಡ್ ಮ್ಯಾನೇಜರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಹೂಡಿಕೆ ಮಾಡುತ್ತಾ ಹೋಗಬಹುದು. ಈ ಎನ್​ಪಿಎಸ್ ಅಕೌಂಟ್​ನಲ್ಲಿ ಸ್ವಾಸ್ಥ್ಯ ಫೀಚರ್ ಅನ್ನು ಆಯ್ದುಕೊಳ್ಳಬೇಕು.

ಇದನ್ನೂ ಓದಿ: ಸ್ಮಾರ್ಟ್ ಆಗಿ ಪ್ಲಾನ್ ಮಾಡಿ; ಈ 4 ಹಣಕಾಸು ತಪ್ಪುಗಳನ್ನು ಮಾಡದಿರಿ

ಯಾವುದೇ ಪೆನ್ಷನ್ ಫಂಡ್​ಗಳು ಎನ್​ಪಿಎಸ್ ಸ್ವಾಸ್ಥ್ಯ ಪೆನ್ಷನ್ ಸ್ಕೀಮ್ ಆರಂಭಿಸಬಹುದು. ಪಿಒಸಿಯಾಗಿ ಮಾತ್ರ ಸದ್ಯಕ್ಕೆ ಇದನ್ನು ಚಾಲನೆಯಲ್ಲಿಡಬಹುದು. ಪೆನ್ಷನ್ ಫಂಡ್​ಗಳು ಖಾಸಗಿ ಫಿನ್​ಟೆಕ್ ಕಂಪನಿಗಳ ಜೊತೆ ಸಹಭಾಗಿತ್ವ ಪಡೆಯಬಹುದು.

ಎನ್​ಪಿಎಸ್ ಸ್ವಾಸ್ಥ್ಯ ಪೆನ್ಷನ್ ಸ್ಕೀಮ್ ಅಕೌಂಟ್​ನಲ್ಲಿರುವ ಹಣವನ್ನು ವೈದ್ಯಕೀಯ ವೆಚ್ಚಕ್ಕೆ ಬಳಸಿಕೊಳ್ಳಲು ಅವಕಾಶ ಇರುತ್ತದೆ. ಈ ಸ್ಕೀಮ್​ನಲ್ಲಿ ಒಟ್ಟಾರೆ ಕೊಡುಗೆಯ ಶೇ. 25ರಷ್ಟನ್ನು ವೈದ್ಯಕೀಯ ವೆಚ್ಚಗಳಿಗೆ ವಿತ್​ಡ್ರಾ ಮಾಡಿಕೊಳ್ಳಬಹುದು. ಮೊದಲ ಬಾರಿಗೆ ವಿತ್​ಡ್ರಾ ಮಾಡುವಾಗ ಸ್ಕೀಮ್​ನಲ್ಲಿ ಕನಿಷ್ಠ 50,000 ರೂ ಆದರೂ ಕೊಡುಗೆ ಇರಬೇಕು.

ವೈದ್ಯಕೀಯ ವೆಚ್ಚವು ತೀರಾ ಜಾಸ್ತಿ ಇದ್ದರೆ ಸ್ವಾಸ್ಥ್ಯ ಪೆನ್ಷನ್ ಸ್ಕೀಮ್​ನ ಅವಧಿಗೆ ಮುನ್ನವೇ ಪೂರ್ಣ ಹಣ ವಿತ್​ಡ್ರಾ ಮಾಡಿಕೊಳ್ಳಬಹುದು. ವೈದ್ಯಕೀಯ ವೆಚ್ಚ ಭರಿಸಿದ ಬಳಿಕ ಉಳಿಯುವ ಹಣವನ್ನು ಕಾಮನ್ ಸ್ಕೀಮ್ ಅಕೌಂಟ್​ಗೆ ವರ್ಗಾವಣೆ ಮಾಡಲಾಗುತ್ತದೆ.

ಇದನ್ನೂ ಓದಿ: ಪಿಪಿಎಫ್​ನಲ್ಲಿ ಕೇವಲ 1 ಪರ್ಸಂಟ್ ಬಡ್ಡಿಗೆ ಸಾಲ? ಯಾವ ವರ್ಷ, ಎಷ್ಟು ಅವಧಿ ಇತ್ಯಾದಿ ನಿಯಮಗಳು ತಿಳಿದಿರಿ

ಎನ್​ಪಿಎಸ್ ಸ್ವಾಸ್ಥ್ಯ ಪೆನ್ಷನ್ ಸ್ಕೀಮ್ ಅನ್ನು ಯಾವುದಾದರೂ ಬ್ಯಾಂಕ್​ನಲ್ಲಿ ಪಡೆಯಬಹುದು. ಆನ್​ಲೈನ್​ನಲ್ಲಿ ಎನ್​ಪಿಎಸ್ ವೆಬ್​ಸೈಟ್​ಗೆ ಹೋಗಿಯೂ ಅಕೌಂಟ್ ತೆರೆಯಬಹುದು.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

KKR vs LSG IPL 2026 Live Score: ಜಯದ ಹುಡುಕಾಟದಲ್ಲಿ ಕೆಕೆಆರ್ – Kannada News | Kolkata Knight Riders vs Lucknow Super Giants IPL 2026 Live Cricket Score KKR vs LSG Match on 9th April latest news in Kannada

ಐಪಿಎಲ್ 2026 ರ 15 ನೇ ಪಂದ್ಯವು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ. ಕೋಲ್ಕತ್ತಾ ತಮ್ಮ ತವರು ಮೈದಾನವಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಆಡಲಿದ್ದು, ಅಲ್ಲಿ ತನ್ನ ಮೊದಲ ಗೆಲುವನ್ನು ಎದುರು ನೋಡುತ್ತಿದೆ. ಏತನ್ಮಧ್ಯೆ, ಹಿಂದಿನ ಪಂದ್ಯದಲ್ಲಿ ಜಯ ಸಾಧಿಸಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ ತನ್ನ ಅಜೇಯ ಓಟವನ್ನು ಮುಂದುವರೆಸುವ ಇರಾದೆಯಲ್ಲಿದೆ.

Source link

IPL 2026: 1 ರನ್ನಿಂದ ಗೆದ್ದ ಗುಜರಾತ್ ನಾಯಕನಿಗೆ ಬಿಗ್ ಶಾಕ್ ನೀಡಿದ ಬಿಸಿಸಿಐ

Source link

Chanakya Niti: ಈ ಕೆಲಸಗಳ ಮಾಡೋ ಮುನ್ನ ನೂರು ಬಾರಿ ಯೋಚಿಸಿ, ಇಲ್ಲಾಂದ್ರೆ ಪಶ್ಚಾತಾಪ ಪಡಬೇಕಾಗುತ್ತದೆ

ಜೀವನದಲ್ಲಿ ಯಶಸ್ವಿಯಾಗಲು (success), ಯಶಸ್ವಿ ಜೀವನವನ್ನು ನಡೆಸಲು ನಾವು ಮಾಡುವ ಪ್ರತಿಯೊಂದರ ಬಗ್ಗೆಯೂ ನೂರು ಬಾರಿ ಯೋಚಿಸಬೇಕು, ಸಾವಿರ ಬಾರಿ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಒಂದು ವೇಳೆ ಆತುರದಲ್ಲಿ ಮಾಡುವ ಯಾವುದೇ ಕೆಲಸವಾದರೂ ಸರಿ, ಅದು ನಮ್ಮ ಭವಿಷ್ಯವನ್ನೇ ಹಾಳು ಮಾಡುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ. ಅದರಲ್ಲೂ ನಾವು ಈ ಕೆಲವು ಕೆಲಸಗಳನ್ನು ಆತುರದಿಂದ ಮತ್ತು ಯೋಚಿಸದೆ ಮಾಡಿದರೆ,  ಭವಿಷ್ಯದಲ್ಲಿ ಸಾಕಷ್ಟು ಕಷ್ಟ ನಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಹಾಗಿದ್ರೆ ಯಾವ ಕೆಲಸಗಳನ್ನು ಮಾಡುವ ಮುನ್ನ ನೂರು ಬಾರಿ ಯೋಚಿಸಬೇಕು ಎಂಬುದನ್ನು ನೋಡೋಣ ಬನ್ನಿ.

ಈ ಕೆಲಸಗಳನ್ನು ಮಾಡೋ ಮುನ್ನ ಇರಲಿ ಎಚ್ಚರ:

ಮಾತನಾಡುವ ಮೊದಲು ಯೋಚಿಸಿ:  ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು ಎಂಬ ಮಾತಿನಂತೆ, ಒಮ್ಮೆ ಮಾತನಾಡಿದ ಮಾತನ್ನು ಹಿಂದಕ್ಕೆ ಪಡೆಯಲು ಸಾಧ್ಯವೇ ಇಲ್ಲ. ನಾವು ಯೋಚಿಸದೆ ಮಾತನಾಡಿದರೆ, ನಮ್ಮ ಮಾತುಗಳಿಂದ ಇತರರು ನೋಯುತ್ತಾರೆ. ಇದು ಸಂಬಂಧಗಳಿಗೆ ಹಾನಿ ಉಂಟು ಮಾಡಬಹುದು. ಆದ್ದರಿಂದ, ಮಾತನಾಡುವ ಮೊದಲು ನೂರು ಬಾರಿ ಯೋಚಿಸುವುದು ಬಹಳ ಮುಖ್ಯ ಎನ್ನುತ್ತಾರೆ ಚಾಣಕ್ಯ.

ಕೆಟ್ಟ ಸಹವಾಸ ಮಾಡುವ ಮುನ್ನ ಇರಲಿ ಎಚ್ಚರ: ನಾವು ಸಹವಾಸ ಮಾಡುವ ಜನರು ನಮ್ಮ ಜೀವನದ ಮೇಲೆ  ನೇರವಾಗಿ ಪರಿಣಾಮ ಬೀರುತ್ತಾರೆ. ಕೆಟ್ಟ ಸಹವಾಸವು ನಮ್ಮನ್ನು ದಾರಿ ತಪ್ಪಿಸಬಹುದು, ನಮ್ಮ ಭವಿಷ್ಯವನ್ನೇ ಹಾಳು ಮಾಡಬಹುದು. ಅದಕ್ಕಾಗಿಯೇ ನಾವು ಸ್ನೇಹಿತರು ಮತ್ತು ಜೀವನ ಸಂಗಾತಿಯನ್ನು ಆಯ್ಕೆ ಮಾಡುವಾಗ ತುಂಬಾನೇ ಜಾಗರೂಕರಾಗಿರಬೇಕು ಎನ್ನುತ್ತಾರೆ ಚಾಣಕ್ಯ.

ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಿ: ಜೀವನದಲ್ಲಿ ತಾಳ್ಮೆ ಎನ್ನುವಂತಹದ್ದು ತುಂಬಾನೇ ಮುಖ್ಯ. ಯಾವಾಗಲೂ ಅಷ್ಟೇ ಯೋಚಿಸದೇ, ಕೂಲಂಕುಷವಾಗಿ ಪರೀಕ್ಷಿಸದೇ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು. ಏಕೆಂದರೆ ಆತುರದ ನಿರ್ಧಾರಗಳು ನಮ್ಮ ಮೇಲೆ ಕೆಟ್ಟ ಪರಿಣಾಮಗಳನ್ನು ಬೀರಬಹುದು. ಆದ್ದರಿಂದ, ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಾಧಕ-ಬಾಧಕಗಳನ್ನು ಅಳೆಯುವುದು ಅವಶ್ಯಕ ಎಂದಿದ್ದಾರೆ ಚಾಣಕ್ಯ.

ಇದನ್ನೂ ಓದಿ: ಮಹಿಳೆಯ ಗುಣಗಳು ಕುಟುಂಬದ ಬಹುದೊಡ್ಡ ಶಕ್ತಿ ಎಂದಿದ್ದಾರೆ ಚಾಣಕ್ಯ

ಕೋಪದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ:  ಕೋಪ ಬಂದಾಗ ನಮ್ಮ ಯೋಚನಾ ಶಕ್ತಿ ಕಡಿಮೆಯಾಗುತ್ತದೆ. ಅಲ್ಲದೆ ಕೋಪದಲ್ಲಿ ನಾವು ಏನು ಮಾಡುತ್ತೇವೆ ಎಂಬ ಅರಿವು ಸಹ ನಮಗಿರುವುದಿಲ್ಲ.  ಆ ಸಮಯದಲ್ಲಿ ನಾವು ತೆಗೆದುಕೊಳ್ಳುವ ನಿರ್ಧಾರಗಳು ತಪ್ಪಾಗುವ ಸಾಧ್ಯತೆ ಹೆಚ್ಚು. ಆದ್ದರಿಂದ, ಕೋಪ ಕಡಿಮೆಯಾದ ನಂತರವೇ ಯಾವುದೇ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ, ಕೋಪದ ಕೈಗೆ ಯಾವತ್ತೂ ಬುದ್ಧಿ ಕೊಡಬಾರದು ಎಂದಿದ್ದಾರೆ ಚಾಣಕ್ಯ.

ಯೋಜನೆಗಳನ್ನು ಹಂಚಿಕೊಳ್ಳಬೇಡಿ: ಯಾವುದೋ ಉತ್ಸಾಹದಲ್ಲಿ, ಆತುರದಲ್ಲಿ ನಿಮ್ಮ ಗುರಿ ಮತ್ತು ಯೋಜನೆಗಳನ್ನು ಎಲ್ಲರೊಂದಿಗೂ ಹಂಚಿಕೊಳ್ಳಬೇಡಿ. ಇದರಿಂದ ಭವಿಷ್ಯದಲ್ಲಿ ಸಾಕಷ್ಟು ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ, ನೀವು ಅಂದುಕೊಂಡ ಗುರಿಯನ್ನು ಸಾಧಿಸಲು ಸಾಧ್ಯವಾಗುವುದಿಲ್ಲ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಆದ್ದರಿಂದ ಈ ವಿಚಾರಗಳನ್ನು ಯಾರೊಂದಿಗೂ ಹಂಚಿಕೊಳ್ಳುವ ಮುನ್ನ ನೂರು ಬಾರಿ ಯೋಚಿಸಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Karnataka 2nd PUC Result 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ

ಬೆಂಗಳೂರು, (ಏಪ್ರಿಲ್ 09): ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆ ಅಂತ್ಯವಾಗಿದೆ. ಹೌದು…2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಆನ್​​ಲೈನ್​​ನಲ್ಲಿ ಪ್ರಕಟವಾಗಿದೆ. ಈ ಮೊದಲು ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟಿಸುವುದು ವಾಡಿಕೆ. ಆದ್ರೆ, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗಿದ್ದು, ಇದೀಗ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಸುದ್ದಿಗೋಷ್ಠಿ ಫಲಿತಾಂಶವನ್ನು ಪ್ರಕಟಿಸಿದ್ದು, ಯಾರು ಟಾಪರ್, ಯಾವ ಜಿಲ್ಲೆ ಫಸ್ಟ್ ಎನ್ನುವುದನ್ನು ನೋಡಿ.

Source link

ಮುಂದಿನ ವಾರ ಗ್ರಹಗಳ ಬದಲಾವಣೆ; ಈ ರಾಶಿಗೆ ಅದೃಷ್ಟದ ಸುರಿಮಳೆ

​ಪ್ರಸ್ತುತ ಆಕಾಶಮಂಡಲದಲ್ಲಿ ಗುರುವು ಮಿಥುನ ರಾಶಿಯಲ್ಲಿ ಸಂಚರಿಸುತ್ತಿರುವುದು ಮತ್ತು ಶನಿಯು ಮೀನ ರಾಶಿಯಲ್ಲಿ ಇರುವುದು ರಾಜ್ಯದ ಆಡಳಿತಾರೂಢರಿಗೆ ಸವಾಲು ಮತ್ತು ಅವಕಾಶ ಎರಡನ್ನೂ ಒಟ್ಟಿಗೆ ತರುತ್ತಿದೆ. ಗುರುವಿನ ಪ್ರಭಾವದಿಂದಾಗಿ ಹೊಸ ಯೋಜನೆಗಳ ಘೋಷಣೆಯಾಗಬಹುದು, ಆದರೆ ಶನಿಯ ಪ್ರಭಾವದಿಂದಾಗಿ ಆ ಯೋಜನೆಗಳ ಅನುಷ್ಠಾನದಲ್ಲಿ ವಿರೋಧ ಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಲಿದೆ.

​ಗೆಲುವು ಪಡೆಯುವ ರಾಶಿಗಳು:

  • ಮೇಷ: ಸೂರ್ಯನು ನಿಮ್ಮ ರಾಶಿಯಲ್ಲಿ ಉಚ್ಚ ಸ್ಥಾನದಲ್ಲಿರುವುದರಿಂದ, ಈ ರಾಶಿಯ ನಾಯಕರಿಗೆ ಸಿಂಹ ಬಲ ಬರಲಿದೆ. ಅನಿರೀಕ್ಷಿತವಾಗಿ ದೊಡ್ಡ ಜವಾಬ್ದಾರಿಗಳು ಹುಡುಕಿಕೊಂಡು ಬರಬಹುದು. ಸರ್ಕಾರಿ ಮಟ್ಟದ ಮಾತುಕತೆಗಳಲ್ಲಿ ನಿಮ್ಮದೇ ಮೇಲುಗೈ ಆಗಲಿದೆ.
  • ಕುಂಭ: ನಿಮ್ಮ ರಾಶ್ಯಾಧಿಪತಿ ಶನಿಯು ಎರಡನೇ ಮನೆಯಲ್ಲಿರುವುದರಿಂದ ಆರ್ಥಿಕ ಮತ್ತು ಸಂಪನ್ಮೂಲ ಕ್ರೋಢೀಕರಣದಲ್ಲಿ ಯಶಸ್ಸು ಸಿಗಲಿದೆ. ಗುಪ್ತವಾಗಿ ನಡೆಸುವ ರಾಜಕೀಯ ತಂತ್ರಗಳು ಫಲಪ್ರದವಾಗಲಿವೆ.

​ಮಿಶ್ರ ಫಲದ ರಾಶಿಗಳು:

  • ​ಕರ್ಕಾಟಕ: ಚಂದ್ರನ ಚಲನೆಯಿಂದಾಗಿ ವಾರದ ಆರಂಭದಲ್ಲಿ ಅಸ್ಥಿರತೆ ಇರಲಿದ್ದರೂ, ವಾರಾಂತ್ಯಕ್ಕೆ ಪರಿಸ್ಥಿತಿ ಸುಧಾರಿಸಲಿದೆ. ಸಾರ್ವಜನಿಕ ಭಾಷಣ ಮಾಡುವಾಗ ಎಚ್ಚರವಿರಲಿ; ಮಾತು ತಪ್ಪಾಗಿ ಅರ್ಥೈಸಲ್ಪಡಬಹುದು.
  • ಮಕರ: ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ, ಆದರೆ ವಿರೋಧಿಗಳ ಕುತಂತ್ರದಿಂದಾಗಿ ಗೆಲುವು ಸ್ವಲ್ಪ ವಿಳಂಬವಾಗಬಹುದು. ತಾಳ್ಮೆಯೇ ನಿಮ್ಮ ಯಶಸ್ಸಿನ ಮಂತ್ರ.

​ಸೋಲುವ ರಾಶಿಗಳು:

  • ಕನ್ಯಾ: ಸಪ್ತಮ ಸ್ಥಾನದಲ್ಲಿ ರಾಹುವಿನ ಸಂಚಾರವಿರುವುದರಿಂದ ಮಿತ್ರ ಪಕ್ಷಗಳಿಂದ ಅಥವಾ ಆಪ್ತರಿಂದಲೇ ನಂಬಿಕೆ ದ್ರೋಹವಾಗುವ ಸಾಧ್ಯತೆಯಿದೆ. ಒಪ್ಪಂದಗಳಿಗೆ ಸಹಿ ಹಾಕುವ ಮುನ್ನ ಎಚ್ಚರಿಕೆ ಅಗತ್ಯ.
  • ಮಿಥುನ: ಹತ್ತನೇ ಮನೆಯಲ್ಲಿ ರಾಹು-ಬುಧರ ಯುತಿಯಿಂದಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಗೊಂದಲ ಉಂಟಾಗಬಹುದು. ತಪ್ಪು ಮಾಹಿತಿಯ ಆಧಾರದ ಮೇಲೆ ನೀವು ಇಡುವ ಹೆಜ್ಜೆ ರಾಜಕೀಯವಾಗಿ ದೊಡ್ಡ ಬೆಲೆ ತೆರುವಂತೆ ಮಾಡಬಹುದು.

ವಿಶೇಷ ಸೂಚನೆ ಎಂದರೆ ಮಂಗಳನು ಶನಿಯೊಂದಿಗೆ ಯುತಿಯಲ್ಲಿರುವುದರಿಂದ ರಾಜಕೀಯ ವಲಯದಲ್ಲಿ ತೀವ್ರ ಸ್ವರೂಪದ ವಾಕ್ಸಮರ ಅಥವಾ ಆಂತರಿಕ ಬಂಡಾಯ ಏಳುವ ಸಾಧ್ಯತೆಯಿದೆ. ಹಳೆಯ ನಾಯಕರ ಪ್ರಭಾವ ಕಡಿಮೆಯಾಗಿ, ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ಸಿಗುವಂತಹ ಬೆಳವಣಿಗೆಗಳು ತೆರೆಮರೆಯಲ್ಲಿ ನಡೆಯಲಿವೆ. ​ಈ ಬದಲಾವಣೆಗಳು ವಿಶೇಷವಾಗಿ ಏಪ್ರಿಲ್ ೧೪ರ ಸೌರಮಾನ ಯುಗಾದಿ ಅನಂತರ ವೇಗ ಪಡೆಯಲಿವೆ.

– ಲೋಹಿತ ಹೆಬ್ಬಾರ್

Source link

ನವ ವಿವಾಹಿತೆ ನಾಪತ್ತೆ ಕೇಸ್​​ಗೆ ಟ್ವಿಸ್ಟ್​: ಮುಸ್ಲಿಂ ಯುವಕನ ಜೊತೆ ಯುವತಿ ಪತ್ತೆ; ಪೊಲೀಸ್​​ ಠಾಣೆಯಲ್ಲಿ ಹೈಡ್ರಾಮಾ

ಕೊಪ್ಪಳ, ಏಪ್ರಿಲ್​​ 09: ಇಲ್ಲಿನ ಗೌರಿ ಅಂಗಳ ನಿವಾಸಿ ನಾಗರಾಜ್​​ ಎಂಬವರನ್ನು ವಿವಾಹವಾಗಿದ್ದ ರಾಯಚೂರು ಜಿಲ್ಲೆಯ ಸಿಂದನೂರಿನ ಸಂಜನಾ ಎಂಬಾಕೆ ಮದುವೆಯಾಗಿ ಎರಡು ತಿಂಗಳಲ್ಲೇ ಪತಿ ಬಿಟ್ಟು ನಾಪತ್ತೆ ಆಗಿದ್ದಳು. ವಿಷಯ ತಿಳಿದ ಮಾವ ಅಂದರೆ ಪತಿಯ ತಂದೆ ಹೃದಯಾಘಾತದಿಂದ ಮೃತಪಟ್ಟ ಕಾರಣ ಘಟನೆ ಭಾರಿ ಸುದ್ದಿಯಾಗಿತ್ತು. ಈ ಪ್ರಕರಣಕ್ಕೀಗ ಭರ್ಜರಿ ಟ್ವಿಸ್ಟ್​​ ಸಿಕ್ಕಿದ್ದು, ಕಳೆದ 20 ದಿನಗಳ ಹಿಂದೆ ಮಿಸ್​​ ಆಗಿದ್ದ ಯುವತಿ ಸಂಜನಾ ಮುಸ್ಲಿಂ ಯುವಕನೋರ್ವನ ಜೊತೆ ನಿನ್ನೆ ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದಾಳೆ. ರಾಜಾಭಕ್ಷಿ ಎಂಬಾತನ ಜೊತೆ ನವ ವಿವಾಹಿತೆಯನ್ನು ಪತ್ತೆ ಮಾಡಿರುವ ಪೊಲೀಸರು, ಇಬ್ಬರನ್ನೂ ಕೊಪ್ಪಳದ ಮಹಿಳಾ ಠಾಣೆಗೆ ಕರೆತಂದಿದ್ದಾರೆ.

ಮೂಲತಃ ಗದಗ ಜಿಲ್ಲೆ ನಿವಾಸಿಯಾಗಿರೋ ರಾಜಾಭಕ್ಷಿ ಆಟೋ ಚಾಲಕನಾಗಿದ್ದು, ಅದಾಗಲೇ ಈತನಿಗೆ ಮದುವೆ ಕೂಡ ಆಗಿದೆ. ಹೀಗಿದ್ದರೂ ಆತ ಸಂಜನಾಳನ್ನು ಕರೆದುಕೊಂಡು ಹೋಗಿದ್ದ ಎಂಬ ವಿಚಾರವೀಗ ಬಯಲಾಗಿದೆ. ಇನ್ನು  ಇವರಿಬ್ಬರನ್ನು ಪೊಲೀಸ್​​ ಠಾಣೆಗೆ ಕರೆತರುತ್ತಿದ್ದಂತೆ ಸಂಜನಾ ಪತಿ ಸೇರಿ ಸಂಬಂಧಿಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ನಡುವೆಯೂ ತನಗೆ ರಾಜಾಭಕ್ಷಿನೇ ಬೇಕು ಎಂದು ಸಂಜನಾ ಹಠ ಹಿಡಿದಿದ್ದರೆ, ಈಕೆಯ ಹುಚ್ಚಾಟಕ್ಕೆ ಅದಾಗಲೇ ನಮ್ಮ ಮನೆಯಲ್ಲಿ ಇಂದು ಜೀವ ಹೋಗಿದೆ. ಹೀಗಾಗಿ ನಮಗೆ ಪರಿಹಾರ ಬೇಕು ಎಂದು ನಾಗರಾಜ್​​ ಕುಟುಂಬ ಪಟ್ಟು ಹಿಡಿದಿದೆ.

ಇದನ್ನೂ ಓದಿ: ಪತಿ ಬಿಟ್ಟು ನವವಿವಾಹಿತೆ ನಾಪತ್ತೆ; ವಿಷಯ ತಿಳಿದ ಮಾವ ಹೃದಯಾಘಾತದಿಂದ ಸಾವು!

ಎರಡೂ ಕುಟುಂಬಳ ಪರಸ್ಪರ ಒಪ್ಪಿಗೆಯ ಮೇಲೆಯೇ ಕೊಪ್ಪಳದ ಪಾರ್ಥಾ ಕಲ್ಯಾಣ ಮಂಟಪದಲ್ಲಿ ಫೆಬ್ರವರಿ 8ರಂದು ನಾಗರಾಜ್​​ ಮತ್ತು ಸಂಜನಾ ವಿವಾಹ ನಡೆದಿತ್ತು. ಆ ಬಳಿಕ ದಂಪತಿ ನಾಗರಾಜ್​​ ಅವರ ಮನೆಯ ಮೇಲಿನ ಮಹಡಿಯಲ್ಲಿ ವಾಸವಿದ್ದರು. ಈ ನಡುವೆ ಮಾರ್ಚ್​​ 21ರ ರಾತ್ರಿ ರಾತ್ರಿ 8.30ರ ಸುಮಾರಿಗೆ ಸಂಜನಾ ತನಗೆ ಆರೋಗ್ಯ ಸರಿ ಇಲ್ಲದ ಕಾರಣ ಔಷಧ ತರುವಂತೆ ಪತಿ ನಾಗರಾಜ್​​ಗೆ ತಿಳಿಸಿದ್ದಾಳೆ. ಹೀಗಾಗಿ ಮಾತ್ರೆ ತರಲೆಂದು ತೆರಳಿದ್ದ ನಾಗರಾಜ್​​ 15 ನಿಮಿಷಗಳ ಬಳಿಕ ಮನೆಗೆ ಹಿಂದಿರುಗಿದ್ದಾರೆ. ಆದರೆ ಆ ವೇಳೆ ಹೆಂಡತಿ ಸಂಜನಾ ಮನೆಯಲ್ಲಿ ಇಲ್ಲದಿರೋದು ಗಮನಕ್ಕೆ ಬಂದಿದೆ. ಹೀಗಾಗಿ ಕೆಳ ಮಹಡಿಯಲ್ಲಿರುವ ಸಹೋದರನ ಮನೆಗೆ ತೆರಳಿ ನಾಗರಾಜ್​​ ಪತ್ನಿ ಬಗ್ಗೆ ವಿಚಾರಿಸಿದ್ದಾರೆ. ಆದರೆ ಆಕೆ ಇಲ್ಲಿಗೆ ಬಂದಿಲ್ಲ ಎಂಬ ಉತ್ತರ ದೊರೆತಿದೆ. ಸಂಬಂಧಿಕರ ಮನೆಗಳಲ್ಲಿ ವಿಚಾರಿಸಿದಾಗಲೂ ಆಕೆಯ ಬಗ್ಗೆ ಮಾಹಿತಿ ಸಿಗದ ಕಾರಣ ಪತಿ ನಾಗರಾಜ್​​ ಈ ಬಗ್ಗೆ ದೂರು ದಾಖಲಿಸಿದ್ದರು. ಆ ಬೆನ್ನಲ್ಲೇ ಸೊಸೆ ನಾಪತ್ತೆಯಾಗಿರುವ ವಿಚಾರ ತಿಳಿದ ನಾಗರಾಜ್​​ ತಂದೆ ಖಂಡೆಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version