Headlines

ಬೆಂಗಳೂರಿನಲ್ಲಿ ಸೈನ್ಸ್ ಸಿಟಿ, ಎಲ್ಲಾ ಜಿಲ್ಲೆಗಳಲ್ಲಿ ಸೈನ್ಸ್ ಸೆಂಟರ್, 11 ಜಿಲ್ಲೆಗಳಲ್ಲಿ ಪ್ಲಾನಿಟೇರಿಯಂ ಸ್ಥಾಪನೆ: ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 6: ಕರ್ನಾಟಕದಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ (Bio Technology), ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಉತ್ತೇಜಿಸಲು ಬಜೆಟ್​ನಲ್ಲಿ ಸಿದ್ದರಾಮಯ್ಯ (Siddaramaiah) ಹಲವು ಕ್ರಮಗಳನ್ನು ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಹೊಸ ಸೈನ್ಸ್ ಸಿಟಿ ಸ್ಥಾಪಿಸುವ ಯೋಜನೆಯನ್ನು ಪ್ರಕಟಿಸಿದ್ದಾರೆ. ಇಂದು ನಾಲ್ಕೂವರೆ ಲಕ್ಷ ಕೋಟಿ ರೂ ಮೊತ್ತದ ದಾಖಲೆಯ ಬಜೆಟ್ (Karnataka Budget 2026) ಮಂಡಿಸಿದ ಮುಖ್ಯಮಂತ್ರಿಗಳು, ಬೆಂಗಳೂರಿನ ಆದಿನಾರಾಯಣ ಹೊಸಹಳ್ಳಿಯಲ್ಲಿ ‘ವಿಜ್ಞಾನ ನಗರ’ (Science City) ಸ್ಥಾಪಿಸಲಾಗುವುದು ಎಂದಿದ್ದಾರೆ. ಈ ಸೈನ್ಸ್ ಸಿಟಿಯನ್ನು 233 ಕೋಟಿ…

Read More

‘ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ’: ಇರಾನ್ ಮೂಲದ ಪೈಲ್ವಾನ್ ಮಿರ್ಜಾ

ದಾವಣಗೆರೆ, ಮಾ.2: ಇರಾನ್ ದೇಶದ ಪೈಲ್ವಾನ್ ಮಿರ್ಜಾ ಅವರು ಕ್ರೀಡಾಭಿಮಾನಿಗಳ ಮನಗೆದ್ದಿದ್ದಾರೆ. ಇತ್ತ ಇರಾನ್-ಇಸ್ರೇಲ್ ನಡುವೆ ಭೀಕರ ಯುದ್ಧ ನಡೆಯುತ್ತಿದ್ದರೂ, ಪೂರ್ವ ನಿಗದಿಯಂತೆ ದಾವಣಗೆರೆಯ ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸುವ ಮೂಲಕ ಮಿರ್ಜಾ ಅವರು ಅದ್ಭುತ ಕ್ರೀಡಾ ಪ್ರೇಮ ಮೆರೆದಿದ್ದಾರೆ. ನಗರದ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮಹಾರಾಷ್ಟ್ರದ ಪುಣೆ ಮೂಲದ ಪೈಲ್ವಾನ್ ರವಿರಾಜ್ ಮತ್ತು ಇರಾನ್‌ನ ಮಿರ್ಜಾ ಮುಖಾಮುಖಿಯಾಗಿದ್ದರು. ಬರೋಬ್ಬರಿ 43 ನಿಮಿಷಗಳ ಕಾಲ ನಡೆದ ಈ ರೋಚಕ ಹೋರಾಟದಲ್ಲಿ ಇಬ್ಬರು ಪೈಲ್ವಾನರು…

Read More

Daily Devotional: ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಗೊತ್ತಾ? – Kannada News | Why You Should Not Plant Drumstick Tree Near Your House: Astrology and Scientific Reasons

ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನುಗ್ಗೆ ಸೊಪ್ಪು, ಕಾಯಿ ಎಲ್ಲವೂ ಔಷಧೀಯ ಗುಣಗಳನ್ನು ಹೊಂದಿವೆ. ಆದರೆ, ಈ ನುಗ್ಗೆ ಮರವನ್ನು ಮನೆಯ ಅಂಗಳದಲ್ಲಿ ಅಥವಾ ಮನೆಯ ಹತ್ತಿರ ಬೆಳೆಸುವುದು ಶುಭವಲ್ಲ ಎಂದು ಶಾಸ್ತ್ರಗಳು ಮತ್ತು ವೈಜ್ಞಾನಿಕ ವಿಶ್ಲೇಷಣೆಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮನೆಯ ಆಗ್ನೇಯ, ಈಶಾನ್ಯ, ವಾಯುವ್ಯ, ನೈರುತ್ಯ ಸೇರಿದಂತೆ ಯಾವುದೇ ದಿಕ್ಕಿನಲ್ಲಿ ನುಗ್ಗೆ ಮರ ಇರುವುದು ಅಶುಭ. ಇದು…

Read More

ಹು-ಧಾ ಪಾಲಿಕೆಗೆ ಕೋಟಿ ಕೋಟಿ ನಷ್ಟ: ಕಲಾವಿದರ ನಿವೇಶನ ಅಕ್ರಮ ಮಾರಾಟ ಬಯಲು – Kannada News | Hubballi Dharwad Land Scam: HDMC Loses Revenue to Illegal Plot Sales in Artists’ Colony

ನಿವೇಶನಗಳ ಅಕ್ರಮ ಮಾರಾಟImage Credit source: tv9 kannada ಹುಬ್ಬಳ್ಳಿ, ಮೇ 15: ಒಂದಡೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubballi-Dharwad Corporation) ಆದಾಯ ಕೊರತೆಯಿಂದ ಬಳಲುತ್ತಿದೆ. ಮತ್ತೊಂದಡೆ ಪಾಲಿಕೆಗೆ ಆದಾಯ ಬರುವ ಮೂಲಗಳಲ್ಲಿ ಅಕ್ರಮಗಳು ನಡೆದಿದ್ದರೂ ಪಾಲಿಕೆ ಯಾವುದೇ ಕ್ರಮಕೈಗೊಳ್ಳದೆ ಕಣ್ಣುಮುಚ್ಚಿಕೊಂಡಿದೆ. ಕಲಾವಿದರ ಕಾಲೋನಿಯಲ್ಲಿ ಭೂ ಮಾಫಿಯಾ ದಲ್ಲಾಳಿಗಳು, ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಸೈಟ್​​ಗಳನ್ನು ಅಕ್ರಮವಾಗಿ ಪರಬಾರೆ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಕ್ರಮಕೈಗೊಳ್ಳಬೇಕಿದ್ದ ಪಾಲಿಕೆ ಮೌನಕ್ಕೆ ಶರಣಾಗಿದ್ದು, ಅಕ್ರಮದಲ್ಲಿ ಪಾಲಿಕೆಯ ಅಧಿಕಾರಿಗಳು ಮತ್ತು ಕೆಲ ಜನಪ್ರತಿನಿಧಿಗಳು…

Read More