Headlines

Plane Crash: ಡೊಮಿನಿಕನ್ ಗಣರಾಜ್ಯದಲ್ಲಿ ತುರ್ತು ಲ್ಯಾಂಡಿಂಗ್ ವೇಳೆ ಖಾಸಗಿ ಜೆಟ್ ಅಪಘಾತ, ಬೆಂಕಿಗಾಹುತಿ, ಇಬ್ಬರು ಸಾವು – Kannada News

ಸ್ಯಾಂಟೊ ಡೊಮಿಂಗೊ, ಜೂನ್ 08: ಕೆರೆಬಿಯನ್ ದ್ವೀಪ ರಾಷ್ಟ್ರವಾದ ಡೊಮಿನಿಕನ್ ಗಣರಾಜ್ಯದ ಲಾ ರೊಮಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಅಪಘಾತ( Plane Accident)ವೊಂದು ಸಂಭವಿಸಿದೆ. ತಾಂತ್ರಿಕ ದೋಷದ ಕಾರಣದಿಂದಾಗಿ ತುರ್ತು ಭೂಸ್ಪರ್ಶಕ್ಕೆ ಯತ್ನಿಸುತ್ತಿದ್ದ ಖಾಸಗಿ ವಿಮಾನ ರನ್​ ವೇ ಮೇಲೆ ಬೆಂಕಿಗಾಹುತಿಯಾಗಿದೆ. ಘಟನೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಅದೃಷ್ಟವಶಾತ್, ಅಪಘಾತದ ಸಮಯದಲ್ಲಿ ವಿಮಾನದಲ್ಲಿ ಬೇರೆ ಯಾವುದೇ ಪ್ರಯಾಣಿಕರು ಅಥವಾ ಸಿಬ್ಬಂದಿ ಇರಲಿಲ್ಲ ಎಂದು ವಿಮಾನಯಾನ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಅಮೆರಿಕದ ಮಾಧ್ಯಮಗಳ ವರದಿಗಳ ಪ್ರಕಾರ, ಗಲ್ಫ್‌ಸ್ಟ್ರೀಮ್ ಜಿ200…

Read More

ಫಾಲೋಆನ್​ ಹೇರಿದ ಟೀಮ್ ಇಂಡಿಯಾ: ಭಾರತದ ಗೆಲುವು ಖಚಿತ..! – Kannada News

ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಅಫ್ಘಾನಿಸ್ತಾನ್ ತಂಡ ಕೇವಲ 152 ರನ್​ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (100), ಶುಭ್​ಮನ್ ಗಿಲ್ (126) ಶತಕ ಬಾರಿಸಿದರೆ, ಸಾಯಿ ಸುದರ್ಶನ್, ವಾಷಿಂಗ್ಟನ್ ಸುಂದರ್ ಹಾಗೂ ರಿಷಭ್ ಪಂತ್…

Read More

ಕೇವಲ 60 ಸೆಕೆಂಡುಗಳಲ್ಲಿ 1.273 ಕೆಜಿ ಜೇನುತುಪ್ಪ ತಿಂದು ಗಿನ್ನಿಸ್ ವಿಶ್ವದಾಖಲೆ ಬರೆದ ವ್ಯಕ್ತಿ – Kannada News

ಬರ್ಲಿನ್, ಜೂನ್ 08: ಜಗತ್ತಿನಾದ್ಯಂತ ವಿಚಿತ್ರ ಹಾಗೂ ಅಸಾಧಾರಣ ತಿನಿಸುಗಳನ್ನು ತಿನ್ನುವ ಸ್ಪರ್ಧೆಗಳಲ್ಲಿ ಸದಾ ಹೊಸ  ಇತಿಹಾಸ ಸೃಷ್ಟಿಸುತ್ತಿರುವ ಜರ್ಮನಿಯ ಪ್ರಸಿದ್ಧ ಸಾಹಸಿ ಆಂಡ್ರೆ ಓರ್ಟೋಲ್ಫ್ (Andre Ortolf), ಕೇವಲ ಒಂದು ನಿಮಿಷದಲ್ಲಿ ಬರೋಬ್ಬರಿ 1,273 ಗ್ರಾಂ (1.273 ಕಿಲೋಗ್ರಾಂ) ಜೇನುತುಪ್ಪ(Honey)ವನ್ನು ಪೂರ್ಣಗೊಳಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯ (Guinness World Record) ಹೊಸ ಇತಿಹಾಸ ಬರೆದಿದ್ದಾರೆ. ಜರ್ಮನಿಯ ಆಗ್ಸ್‌ಬರ್ಗ್‌ನಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಈ ದಾಖಲೆಯನ್ನು ಸೃಷ್ಟಿಸಿದ್ದು, ಇಲಾಖೆಯ ವತಿಯಿಂದ ಅವರನ್ನು ಜಗತ್ತಿನ ಅತ್ಯಂತ ವೇಗದ…

Read More

Gold Rate: ಚಿನ್ನದ ಬೆಲೆ 95 ರೂ, ಬೆಳ್ಳಿ ಬೆಲೆ 5 ರೂ ಕುಸಿತ – Kannada News

ನವದೆಹಲಿ, ಜೂನ್ 8: ಚಿನ್ನದ ಬೆಲೆಯ ಸತತ ಇಳಿಕೆ ಈ ವಾರವೂ ಶುರುವಾಗಿದೆ. ಈ ಹಳದಿ ಲೋಹದ ಬೆಲೆ (Gold Price) ಸೋಮವಾರ ಗ್ರಾಮ್​ಗೆ 95 ರೂಗಳಷ್ಟು ಕಡಿಮೆ ಆಗಿದೆ. ಹಲವು ದಿನಗಳ ನಂತರ 14,000 ರೂ ಮಟ್ಟಕ್ಕಿಂತ ಕೆಳಗೆ ಬಂದಿದೆ. ಆದರೆ ಇವತ್ತು ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಇನ್ನು, ಚಿನ್ನದಂತೆ ಬೆಳ್ಳಿ ಬೆಲೆಯ ಇಳಿಕೆ ಮುಂದುವರಿದೆ. ಇವತ್ತು ಇದರ ಬೆಲೆ ಗ್ರಾಮ್​ಗೆ 5 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10…

Read More

ರಾಜ್ಯಸಭೆಗೆ ಕಣಕ್ಕಿಳಿದ ಪ್ರೊ. ಎಂ. ನಾಗರಾಜ; ಮಾಜಿ ಪ್ರಧಾನಿ ದೇವೇಗೌಡರ ಸ್ಥಾನಕ್ಕೆ ಬಿಜೆಪಿ ಇವರನ್ನೇ ಆರಿಸಿದ್ದೇಕೆ? – Kannada News

ಪ್ರೊ. ಎಂ. ನಾಗರಾಜImage Credit source: The Hindu ಬೆಂಗಳೂರು, ಜೂನ್ 08: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ (BJP) ಭಾನುವಾರ ರಾತ್ರಿ ತನ್ನ ಅಭ್ಯರ್ಥಿಯಾಗಿ ಪ್ರೊ. ಎಂ. ನಾಗರಾಜ ಅವರ ಹೆಸರನ್ನು ಅಂತಿಮಗೊಳಿಸಿ ಅಧಿಕೃತವಾಗಿ ಘೋಷಿಸಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಮತ್ತೊಮ್ಮೆ ಕಣಕ್ಕಿಳಿಸುವ ಕುರಿತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆದಿತ್ತು. ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಪ್ರೊ. ನಾಗರಾಜ ಅವರಿಗೆ ಮನ್ನಣೆ ನೀಡಿದೆ.ಇದರೊಂದಿಗೆ, ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿಗಳಾಗಿ…

Read More

ನಷ್ಟದ ಭೀತಿಯಲ್ಲಿ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಸಿನಿಮಾ ನಿರ್ಮಾಪಕರು – Kannada News

ಚಿತ್ರರಂಗದಲ್ಲಿ ದೊಡ್ಡ ತಾರಾಗಣ ಹಾಗೂ ಭರ್ಜರಿ ಪ್ರಚಾರದೊಂದಿಗೆ ತೆರೆಗೆ ಬರುವ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಕಮಾಲ್ ಮಾಡುತ್ತವೆ ಎಂಬ ನಂಬಿಕೆ ಸದಾ ನಿಜವಾಗುವುದಿಲ್ಲ. ಇದಕ್ಕೆ ಲೇಟೆಸ್ಟ್ ಉದಾಹರಣೆ ಸಿಕ್ಕಿದೆ. ಭಾರಿ ನಿರೀಕ್ಷೆಗಳೊಂದಿಗೆ ಬಿಡುಗಡೆಯಾಗಿದ್ದ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಸಿನಿಮಾ ಇದೀಗ ಚಿತ್ರಮಂದಿರಗಳಲ್ಲಿ ಕಲೆಕ್ಷನ್ ಕಾಣದೆ ಸಂಪೂರ್ಣವಾಗಿ ಮಕಾಡೆ ಮಲಗುವ ಸೂಚನೆ ನೀಡಿದೆ. ವೀಕೆಂಡ್ ಮುಗಿದು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದರೂ ಚಿತ್ರದ ಗಳಿಕೆಯಲ್ಲಿ ಯಾವುದೇ ಚೇತರಿಕೆ ಕಂಡುಬಂದಿಲ್ಲ. ಪ್ರಸ್ತುತ ದೇಶಾದ್ಯಂತ 1,380 ಶೋಗಳಲ್ಲಿ ಈ…

Read More

ಮಹಿಳಾ ಟಿ20 ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಬಹುನಿರೀಕ್ಷಿತ ಮಹಿಳಾ ಟಿ20 ವಿಶ್ವಕಪ್​ ಜೂನ್ 12 ರಿಂದ ಶುರುವಾಗಲಿದೆ. ಇಂಗ್ಲೆಂಡ್ ಮತ್ತು ವೇಲ್ಸ್ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 12 ತಂಡಗಳು ಕಣಕ್ಕಿಳಿಯಲಿವೆ. ಈ ಹನ್ನೆರಡು ತಂಡಗಳನ್ನು ಎರಡು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಮೊದಲ ಸುತ್ತಿನಲ್ಲಿ ಗ್ರೂಪ್​ಗಳಲ್ಲಿರುವ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಗ್ರೂಪ್ A: ಆಸ್ಟ್ರೇಲಿಯಾ, ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ಬಾಂಗ್ಲಾದೇಶ್, ನೆದರ್ಲ್ಯಾಂಡ್ಸ್. ಗ್ರೂಪ್ B: ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್, ಶ್ರೀಲಂಕಾ, ಸ್ಕಾಟ್ಲೆಂಡ್, ಐರ್ಲೆಂಡ್. ಇದನ್ನೂ ಓದಿ: ನಾನು RCB ತಂಡದ ಕಟ್ಟಾ…

Read More

WTC ಫೈನಲ್​ಗೇರಲು ಭಾರತ ತಂಡ ಇನ್ನೆಷ್ಟು ಪಂದ್ಯ ಗೆಲ್ಲಬೇಕು?

2027ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ (WTC) ಫೈನಲ್‌ ಲೆಕ್ಕಾಚಾರಗಳು ಶುರುವಾಗಿದೆ. ಅದರಲ್ಲೂ ಪ್ರಸ್ತುತ ಅಂಕ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿರುವ ಟೀಮ್ ಇಂಡಿಯಾಗೆ ಮುಂದಿನ 9 ಮ್ಯಾಚ್​ಗಳು ನಿರ್ಣಾಯಕ. ಅಂದರೆ ಈ ಒಂಭತ್ತು ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಬಹುದು. (PC: BCCI) ಟೀಮ್ ಇಂಡಿಯಾ ಈವರೆಗೆ ಆಡಿದ 9 ಪಂದ್ಯಗಳಲ್ಲಿ 4 ಗೆಲುವು, 4 ಸೋಲು ಹಾಗೂ 1 ಡ್ರಾ ಸಾಧಿಸಿದೆ. ಈ ಮೂಲಕ ಶೇಕಡಾವಾರು  48.15% ಅಂಕಗಳೊಂದಿಗೆ…

Read More

ಸಚಿನ್ ಪೈಲಟ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರೆ…ಅಶೋಕ್ ಗೆಹ್ಲೋಟ್ ಹೇಳಿದ್ದೇನು? – Kannada News

ಸಚಿನ್ ಪೈಲಟ್, ಅಶೋಕ್ ಗೆಹ್ಲೋಟ್ Image Credit source: NDTV ಜೈಪುರ, ಜೂನ್ 08: ರಾಜಸ್ಥಾನ(Rajasthan) ರಾಜಕಾರಣದಲ್ಲಿ ಸುಡು ಬಿಸಿಲಿನಂತೆಯೇ ರಾಜಕೀಯ  ಉಷ್ಣತೆಯೂ ಗಣನೀಯವಾಗಿ ಹೆಚ್ಚಾಗಿದೆ. 2020ರ ಕೋವಿಡ್ 19 ಸಾಂಕ್ರಾಮಿಕ ರೋಗದ ಸಮಯದಲ್ಲಿ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ರಾಜಸ್ಥಾನ ಕಾಂಗ್ರೆಸ್​ನ ಮಾನೇಸರ್ ರೆಸಾರ್ಟ್​ ಘಟನೆಯು ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ಕುರಿತು ಜೂನ್ 7ರ ಭಾನುವಾರದಂದು ಜೈಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್,…

Read More

ಕಲಬುರಗಿ: ಲಂಚ ಪಡೆಯುತ್ತಿದ್ದಾಗ ರೆಡ್​ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಎಎಸ್​ಐ, ಕಾನ್​ಸ್ಟೇಬಲ್ – Kannada News

ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಶಿವಶರಣಪ್ಪ, ಮಹಿಳಾ ಕಾನ್‌ಸ್ಟೆಬಲ್ ಜ್ಯೋತಿ ಕಲಬುರಗಿ, ಜೂನ್ 8: ಕಲಬುರಗಿ ನಗರದಲ್ಲಿ ಅತ್ಯಂತ ಅಮಾನವೀಯ ಮತ್ತು ಲಜ್ಜೆಗೆಟ್ಟ ಭ್ರಷ್ಟಾಚಾರದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪೋಕ್ಸೋ (POCSO) ಪ್ರಕರಣದ ಸಂತ್ರಸ್ತೆಯ ತಾಯಿಯಿಂದಲೇ ಲಂಚ ಸ್ವೀಕರಿಸುತ್ತಿದ್ದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ASI) ಹಾಗೂ ಮಹಿಳಾ ಕಾನ್‌ಸ್ಟೆಬಲ್ ಅವರನ್ನು ಲೋಕಾಯುಕ್ತ ಪೊಲೀಸರು ಭಾನುವಾರ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಗಳು ಸಂತ್ರಸ್ತೆಯ ತಾಯಿಗೆ ಕಾನೂನು ನೆರವು ನೀಡುವ ನೆಪದಲ್ಲಿ ಲಂಚ ಪಡೆಯುತ್ತಿದ್ದರು….

Read More