Headlines

Video: ಗುಜರಾತ್​ನಲ್ಲಿ ಕೇವಲ 16 ಗಂಟೆಗಳಲ್ಲಿ 1100 ಮಿ.ಮೀ ಮಳೆ, ಗೊಂಬೆಗಳಂತೆ ನೀರಿನಲ್ಲಿ ತೇಲಿದ ಕಾರುಗಳು – Kannada News | Gujarat Deluge: 1,100 mm Rain in 16 Hours Leaves Valsad Under Water

ವಲ್ಸಾದ್, ಜುಲೈ 24: ದಕ್ಷಿಣ ಗುಜರಾತ್‌ನಲ್ಲಿ ವರುಣನ  ಆರ್ಭಟ ಮುಂದುವರೆದಿದ್ದು, ಜಲಪ್ರಳಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ವಲ್ಸಾದ್ ಜಿಲ್ಲೆಯ ಉಂಬರ್‌ಗಮ್ ಪ್ರದೇಶದಲ್ಲಿ ಗುರುವಾರ ಬೆಳಗ್ಗೆಯವರೆಗೆ ಕೇವಲ 16 ಗಂಟೆಗಳಲ್ಲಿ ಭಾರಿ 1100 ಮಿ.ಮೀ ಮಳೆ(Rain) ಸುರಿದಿದ್ದು, ಇಡೀ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಮಳೆಯ ಭೀಕರತೆಗೆ ಸಂಬಂಧಿಸಿದ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಪಾರ್ಕಿಂಗ್‌ನಲ್ಲಿದ್ದ ಕಾರುಗಳು ಮುಳುಗಡೆ ವಲ್ಸಾದ್ ಜಿಲ್ಲೆಯ ವಾಪಿ ಪ್ರದೇಶದ ಬಹುಮಹಡಿ ಕಟ್ಟಡ ಒಂದರ ಪಾರ್ಕಿಂಗ್‌ನಲ್ಲಿ ನಿಲ್ಲಿಸಲಾಗಿದ್ದ ಕಾರುಗಳು ಸಂಪೂರ್ಣವಾಗಿ…

Read More

Join Indian Army: ಭಾರತೀಯ ಸೇನೆಯಲ್ಲಿ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ; B.Tech ಪದವೀಧರರಿಗೆ ಸುವರ್ಣಾವಕಾಶ – Kannada News | Indian Army SSC Tech 2026: Technical Officer Jobs for B.E and B.Tech Engineers

ಎಂಜಿನಿಯರಿಂಗ್ (B.E/B.Tech) ಪದವಿ ಪಡೆದಿರುವ ಅಥವಾ ಅಂತಿಮ ವರ್ಷದ ವ್ಯಾಸಂಗದಲ್ಲಿರುವ ಯುವಕರಿಗೆ ಭಾರತೀಯ ಸೇನೆ (Indian Army) ಉತ್ತಮ ಉದ್ಯೋಗಾವಕಾಶವನ್ನು ಘೋಷಿಸಿದೆ. ಶಾರ್ಟ್ ಸರ್ವಿಸ್ ಕಮಿಷನ್ (SSC-Tech) ಮೂಲಕ ತಾಂತ್ರಿಕ ಅಧಿಕಾರಿಗಳ (Technical Officers) ಹುದ್ದೆಗಳ ನೇಮಕಾತಿಗೆ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದೇಶಸೇವೆಯೊಂದಿಗೆ ಗೌರವಯುತ ವೃತ್ತಿಜೀವನವನ್ನು ನಿರ್ಮಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಪ್ರಮುಖ ದಿನಾಂಕಗಳು ಇಲ್ಲಿವೆ: ಆಸಕ್ತ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ joinindianarmy.nic.in…

Read More

ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬಿದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ – Kannada News | Bengaluru: Richmond Town Abandoned Vehicle Towing Drive Begins Following Official Notices

ಬೆಂಗಳೂರು, ಜುಲೈ 24: ಫುಟ್‌ಪಾತ್‌ ಒತ್ತುವರಿ ವಿರುದ್ಧ ಸಚಿವ ಕೃಷ್ಣಬೈರೇಗೌಡ ದೊಡ್ಡ ಸಮರವೇ ಸಾರಿದ್ದರು. ಆ ಬಳಿಕ ರಸ್ತೆ ಬದಿ ವರ್ಷಗಳಿಂದ ನಿಂತಲ್ಲೇ ನಿಂತ ವಾಹನಗಳ ತೆರವಿಗೂ ಕೈ ಹಾಕಿದ್ದಾರೆ. ಈಗಾಗಲೇ ರಸ್ತೆ ಬದಿ ಅನಾಥವಾಗಿ ನಿಂತಿರುವ ವಾಹನಗಳಿಗೆ 15 ದಿನಗಳ ಮುಂಚಿತವಾಗಿಯೇ ನೋಟಿಸ್ ಕೂಡ ಅಂಟಿಸಲಾಗಿದೆ. ಸದ್ಯ ರಿಚ್ಮಂಡ್ ಟೌನ್ ಸುತ್ತಮುತ್ತಲೂ 30ಕ್ಕೂ ಹೆಚ್ಚು ಬಿಡಾಡಿ ವಾಹನಗಳನ್ನ ಗುರುತಿಸಿ ಜಿಬಿಎ ಅಧಿಕಾರಿಗಳು ಖುದ್ದು ಸ್ಟಿಕರ್ ಅಂಟಿಸಿದ್ದರು. ಆದರೆ ವಾಹನಗಳ ಮಾಲೀಕರು ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಹೀಗಾಗಿ…

Read More

ಚಿಕ್ಕಬಳ್ಳಾಪುರದಲ್ಲಿ ನಕಲಿ ಕೀಟನಾಶಕ ಜಾಲ ಪತ್ತೆ: ರೈತರಿಗೆ ವಂಚಿಸುತ್ತಿದ್ದ ‘ಬೆಳೆ ತಜ್ಞ’ ಕೃಷಿ ಇಲಾಖೆ ಬಲೆಗೆ! – Kannada News | Fake Pesticide Racket Busted in Chikkaballapur: ‘Crop Expert’ Arrested

ಚಿಕ್ಕಬಳ್ಳಾಪುರದಲ್ಲಿ ನಕಲಿ ಕೀಟನಾಶಕ ಜಾಲ ಪತ್ತೆ ಚಿಕ್ಕಬಳ್ಳಾಪುರ, ಜುಲೈ 24: ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಕೀಟನಾಶಕ ತಯಾರಿಸಿ ಮಾರಾಟ ಮಾಡುತ್ತಿದ್ದ ಭಾರಿ ಜಾಲವೊಂದನ್ನು ಚಿಕ್ಕಬಳ್ಳಾಪುರದಲ್ಲಿ ಕೃಷಿ ಇಲಾಖೆಯ ಜಾಗೃತ ದಳ ಬಯಲಿಗೆಳೆದಿದೆ. ನಗರದ ವಸತಿ ಮನೆಯೊಂದರ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಅಪಾರ ಪ್ರಮಾಣದ ನಕಲಿ ಕೀಟನಾಶಕ ಹಾಗೂ ಪ್ಯಾಕಿಂಗ್ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ. ನಡೆದಿದ್ದೇನು? ಅವಧಿ ಮೀರಿದ ಕೃಷಿ ರಾಸಾಯನಿಕಗಳನ್ನು ಅಪಾಯಕಾರಿಯಾಗಿ ಮಿಶ್ರಣ ಮಾಡಿ, ಸುಮಾರು 11 ರಿಂದ 12 ಪ್ರಮುಖ ಕಂಪನಿಗಳ ನಕಲಿ…

Read More

IND vs ZIM: ಸಚಿನ್ ತೆಂಡೂಲ್ಕರ್ ಸಾರ್ವಕಾಲಿಕ ದಾಖಲೆ ಮುರಿದ ವೈಭವ್ ಸೂರ್ಯವಂಶಿ – Kannada News | India vs Zimbabwe T20: Vaibhav Sooryavanshi shatters Sachin Tendulkar’s youngest fifty record

ವಾಸ್ತವವಾಗಿ ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿಯೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ವೈಭವ್, ಆ ಸರಣಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಆದಾಗ್ಯೂ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಅತಿ ಕಿರಿಯ ಆಟಗಾರನೆಂಬ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದರು. ವೈಭವ್​ಗೂ ಮೊದಲು ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು(PC-PTI). Source link

Read More

ಕಾರಂಜಾ ಜಲಾಶಯದಲ್ಲಿ ಮೀನು ಉತ್ಪಾದನೆ ಕುಸಿತ, ಬೀದರ್​ನಲ್ಲಿ ಬರಿದಾಗುತ್ತಿದೆ ಮೀನುಗಾರರ ಬದುಕು – Kannada News | Bidar Karanja Reservoir Fishermen Crisis: Fish Seed Shortage, Illegal Fishing Allegations Hit Livelihoods

ಬೀದರ್, ಜುಲೈ 24: ಬೀದರ್ (Bidar) ಜಿಲ್ಲೆಯ ಭಾಲ್ಕಿ ತಾಲೂಕಿನ ಹಾಲಹಳ್ಳಿ (ಕೆ) ಗ್ರಾಮದ ಸಮೀಪದ ಕಾರಂಜಾ ಜಲಾಶಯವನ್ನು ಅವಲಂಬಿಸಿರುವ ನೂರಾರು ಮೀನುಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಲಾಶಯದಲ್ಲಿ ಸಮರ್ಪಕ ಪ್ರಮಾಣದಲ್ಲಿ ಮೀನು ಮರಿಗಳನ್ನು ಬಿಡದಿರುವುದರಿಂದ ಮೀನು ಉತ್ಪಾದನೆ ಗಣನೀಯವಾಗಿ ಕುಸಿದಿದೆ ಎಂದು ಮೀನುಗಾರರು ಆರೋಪಿಸಿದ್ದಾರೆ. ಇದೇ ವೇಳೆ ತೆಲಂಗಾಣದಿಂದ ಬರುವ ಕೆಲವರು ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ. 200ಕ್ಕೂ ಹೆಚ್ಚು ಮೀನುಗಾರರು ಸಂಕಷ್ಟದಲ್ಲಿ ಜಲಾಶಯವನ್ನೇ ನಂಬಿಕೊಂಡು…

Read More

Friday Donations: ಲಕ್ಷ್ಮಿ ಅನುಗ್ರಹಕ್ಕಾಗಿ ಶುಕ್ರವಾರ ಈ ವಸ್ತು ದಾನ ಮಾಡಿ; ಶಾಸ್ತ್ರೋಕ್ತ ನಿಯಮ ಇಲ್ಲಿದೆ – Kannada News | Friday Donations for Wealth: Mahalakshmi’s Blessings and Financial Prosperity Tips

ಹಿಂದೂ ಸನಾತನ ಧರ್ಮದಲ್ಲಿ ವಾರದ ಪ್ರತಿಯೊಂದು ದಿನಕ್ಕೂ ತನ್ನದೇ ಆದ ಆಧ್ಯಾತ್ಮಿಕ ಮಹತ್ವವಿದೆ. ಅವುಗಳಲ್ಲಿ ಶುಕ್ರವಾರವು ಸಂಪತ್ತು, ಸಮೃದ್ಧಿ ಮತ್ತು ಐಶ್ವರ್ಯದ ಅಧಿದೇವತೆಯಾದ ಶ್ರೀ ಮಹಾಲಕ್ಷ್ಮಿಗೆ ಅತ್ಯಂತ ಪ್ರಿಯವಾದ ದಿನ. ಈ ದಿನದಂದು ಭಕ್ತರು ದೇವಿಯ ಅನುಗ್ರಹಕ್ಕಾಗಿ ಉಪವಾಸ, ಪೂಜೆ-ಪುನಸ್ಕಾರಗಳನ್ನು ನೆರವೇರಿಸುತ್ತಾರೆ. ಪೂಜೆಯ ಜೊತೆಗೆ ಶುಕ್ರವಾರ ಮಾಡುವ ‘ದಾನ’ಕ್ಕೆ ಶಾಸ್ತ್ರಗಳಲ್ಲಿ ಅತ್ಯಂತ ಮಹತ್ವದ ಸ್ಥಾನ ನೀಡಲಾಗಿದೆ. ಈ ದಿನ ನಿರ್ಗತಿಕರಿಗೆ ಕೆಲವು ವಿಶೇಷ ವಸ್ತುಗಳನ್ನು ದಾನ ಮಾಡುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿಗಳು ತೊಲಗಿ, ಆರ್ಥಿಕ ಕಷ್ಟಗಳು ನಿವಾರಣೆಯಾಗುತ್ತವೆ….

Read More

ನೇಪಾಳ ಗಡಿಯಲ್ಲಿ ಭಾರತದೊಳಗೆ ನುಸುಳುವ ಯತ್ನ ವಿಫಲ: ಅಮೆರಿಕದ ಪ್ರಜೆ, ಖಲಿಸ್ತಾನಿ ಉಗ್ರ ಸೇರಿ ಐವರ ಬಂಧನ – Kannada News | India Nepal Border: American, Khalistani Militant Among Five Arrested in Infiltration Bid

ನವದೆಹಲಿ, ಜುಲೈ 24: ಉತ್ತರ ಪ್ರದೇಶದ ಭಾರತ-ನೇಪಾಳ ಗಡಿಯಲ್ಲಿ ಭದ್ರತಾ ಪಡೆಗಳು ಭಾರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಭಾರತ ಪ್ರವೇಶಿಸಲು ಯತ್ನಿಸುತ್ತಿದ್ದ ಅಮೆರಿಕದ ಪ್ರಜೆ ಹಾಗೂ ಖಲಿಸ್ತಾನ್(Khalistan) ಪರ ‘ವಾರಿಸ್ ಪಂಜಾಬ್ ದೇ’ ಸಂಘಟನೆಯ ವಾಂಟೆಡ್ ಉಗ್ರ ಸೇರಿದಂತೆ ಐವರನ್ನು ಬಂಧಿಸಿವೆ. ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ರುಪೈದಿಹಾ ಗಡಿ ಪೋಸ್ಟ್ ಬಳಿ ಸಶಸ್ತ್ರ ಸೀಮಾ ಬಲ್ (SSB) ಹಾಗೂ ಯುಪಿ ಪೊಲೀಸರು ಜಂಟಿಯಾಗಿ ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಸಿಕ್ಕಿಬಿದ್ದ ಪ್ರಮುಖ ಆರೋಪಿಗಳು ಯಾರು? ವಿಕ್ರಮ್‌ಜಿತ್…

Read More

‘ಸ್ವಾರ್ಥ ಬಿಡಿ, ವಿಧ್ಯಾರ್ಥಿಗಳಿಗಾಗಿ ಮುಂದೆ ಬನ್ನಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ – Kannada News | Sadhu Kokila upset about sandalwood celebrities for being silent on social issues

ನೀಟ್ (NEET) ಪರೀಕ್ಷಾ ಅಕ್ರಮ ವಿರೋಧಿಸಿ ದೇಶದಾದ್ಯಂತ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಬಾಲಿವುಡ್ ಸಿನಿಮಾ ಸೆಲೆಬ್ರಿಟಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ನೆರೆಯ ತಮಿಳುನಾಡಿನಲ್ಲಿ ಸಹ ಹಲವು ನಿರ್ದೇಶಕರು, ನಟರು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಆದರೆ ಕನ್ನಡದ ಸೆಲೆಬ್ರಿಟಿಗಳು ಬಹುತೇಕರು ಮೌನಕ್ಕೆ ಶರಣಾಗಿದ್ದಾರೆ. ಈ ಬಗ್ಗೆ ನಟ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ ಮಾತನಾಡಿ, ‘ಈ ಹಿಂದೆ ಬೆಂಗಳೂರಿನ ಕುಡಿಯುವ ನೀರಿಗೆ ಒತ್ತಾಯಿಸಿ ಮೇಕೆದಾಟು ಪ್ರತಿಭಟನೆ ಮಾಡಿದಾಗಲೂ ಸಹ ಚಿತ್ರರಂಗದವರು ಬಂದಿರಲಿಲ್ಲ. ದಯವಿಟ್ಟು ಸ್ವಾರ್ಥ ಬಿಡಿ, ಮಾನವೀಯತೆ ಬೆಳೆಸಿಕೊಳ್ಳಿ, ದಯವಿಟ್ಟು…

Read More

ಸಾರಿಗೆ ಸಚಿವರ ಕ್ಷೇತ್ರದಲ್ಲೇ ಶೌಚಾಲಯ, ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ! – Kannada News | R.T. Nagar Bus Stop: From Public Utility to Neglected Godown and Drunkards Den

ಬೆಂಗಳೂರು, ಜುಲೈ 24: ಆರ್.ಟಿ. ನಗರದ ದೇವಗೌಡ ರಸ್ತೆಯಲ್ಲಿರುವ ಬಿಎಂಟಿಸಿ ಬಸ್ ನಿಲ್ದಾಣ ಪ್ರಯಾಣಿಕರಿಗೆ ಸೇವೆ ನೀಡುವ ಬದಲು ಸಮಸ್ಯೆಗಳ ಆಗರವಾಗಿ ಮಾರ್ಪಟ್ಟಿದೆ. ಬಸ್​​ ಸ್ಟ್ಯಾಂಡ್​​​ ಶೌಚಾಲಯ, ಗೋದಾಮಾಗಿ ಮಾರ್ಪಟ್ಟಿದ್ದು, ರಾತ್ರಿ ಕುಡುಕರ ಅಡ್ಡೆಯಾಗಿದೆ. ನಿರ್ವಹಣೆ ಇಲ್ಲದ ಕಾರಣ ನಿಲ್ದಾಣದ ಆಸನಗಳು, ಚಾವಣಿಗಳು ಸಂಪೂರ್ಣವಾಗಿ ಮುರಿದು ಬಿದ್ದಿವೆ. ಇದರಿಂದ ಪ್ರಯಾಣಿಕರಿಗೆ ಸಮಸ್ಯೆ ಉಂಟಾಗಿದ್ದು, ದುರದೃಷ್ಟವಶಾತ್ ಈ ಬಸ್ ನಿಲ್ದಾಣ ಸಾರಿಗೆ ಸಚಿವರ ಕ್ಷೇತ್ರದಲ್ಲೇ ಇದ್ದರೂ ಇದರ ದುಸ್ಥಿತಿ ಅವರ ಗಮನಕ್ಕೆ ಬಂದಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಿಂದ…

Read More