ನಷ್ಟದ ಭೀತಿಯಲ್ಲಿ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಸಿನಿಮಾ ನಿರ್ಮಾಪಕರು – Kannada News

ಚಿತ್ರರಂಗದಲ್ಲಿ ದೊಡ್ಡ ತಾರಾಗಣ ಹಾಗೂ ಭರ್ಜರಿ ಪ್ರಚಾರದೊಂದಿಗೆ ತೆರೆಗೆ ಬರುವ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಕಮಾಲ್ ಮಾಡುತ್ತವೆ ಎಂಬ ನಂಬಿಕೆ ಸದಾ ನಿಜವಾಗುವುದಿಲ್ಲ. ಇದಕ್ಕೆ ಲೇಟೆಸ್ಟ್ ಉದಾಹರಣೆ ಸಿಕ್ಕಿದೆ. ಭಾರಿ ನಿರೀಕ್ಷೆಗಳೊಂದಿಗೆ ಬಿಡುಗಡೆಯಾಗಿದ್ದ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಸಿನಿಮಾ ಇದೀಗ ಚಿತ್ರಮಂದಿರಗಳಲ್ಲಿ ಕಲೆಕ್ಷನ್ ಕಾಣದೆ ಸಂಪೂರ್ಣವಾಗಿ ಮಕಾಡೆ ಮಲಗುವ ಸೂಚನೆ ನೀಡಿದೆ. ವೀಕೆಂಡ್ ಮುಗಿದು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದರೂ ಚಿತ್ರದ ಗಳಿಕೆಯಲ್ಲಿ ಯಾವುದೇ ಚೇತರಿಕೆ ಕಂಡುಬಂದಿಲ್ಲ.

ಪ್ರಸ್ತುತ ದೇಶಾದ್ಯಂತ 1,380 ಶೋಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಆದರೆ, ಚಿತ್ರಮಂದಿರಗಳ ಸಂಖ್ಯೆ ಹೆಚ್ಚಿದ್ದರೂ ಪ್ರೇಕ್ಷಕರು ಇಲ್ಲದೆ ಚಿತ್ರಮಂದಿರಗಳು ಖಾಲಿ ಹೊಡೆಯುತ್ತಿವೆ. ಭಾನುವಾರ 9 ಕೋಟಿ ರೂಪಾಯಿ ಗಳಿಸಿರೋ ಈ ಚಿತ್ರ ಈವರೆಗೆ ಭಾರತದಲ್ಲಿ 24.08 ಕೋಟಿ ರೂಪಾಯಿಗೆ ತಲುಪಿದೆ. ಸದ್ಯಕ್ಕೆ ಚಿತ್ರದ ಅಂತಿಮ ಕಲೆಕ್ಷನ್ ವರದಿಗಳು ಬಾಕಿ ಇವೆಯಾದರೂ, ಸದ್ಯದ ಟ್ರೆಂಡ್ ನೋಡಿದರೆ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಾಣುತ್ತಿಲ್ಲ.

ಈ ಚಿತ್ರದ ಒಟ್ಟು ವೆಚ್ಚ ಬರೋಬ್ಬರಿ 55 ಕೋಟಿ ರೂಪಾಯಿ ಎನ್ನಲಾಗಿದೆ. ಥಿಯೇಟರ್‌ಗಳಿಂದ ಬರುವ ಒಟ್ಟಾರೆ ಕಲೆಕ್ಷನ್ ಹಣ ನೇರವಾಗಿ ನಿರ್ಮಾಪಕರ ಕೈ ಸೇರುವುದಿಲ್ಲ. ಚಿತ್ರಮಂದಿರಗಳಿಂದ ಬರುವ ಒಟ್ಟು ಗಳಿಕೆಯಲ್ಲಿ ಕೇವಲ ಅರ್ಧದಷ್ಟು (ಸುಮಾರು 50 ಪ್ರತಿಶತ) ಹಣ ಮಾತ್ರ ನಿರ್ಮಾಪಕರ ಕೈ ಸೇರುವ ಸಾಧ್ಯತೆ ಇರುತ್ತದೆ. ಇನ್ನುಳಿದ ಅರ್ಧದಷ್ಟು ಮೊತ್ತ ಚಿತ್ರಮಂದಿರದ ಮಾಲೀಕರು, ವಿತರಕರು ಹಾಗೂ ತೆರಿಗೆ ಪಾಲಾಗುತ್ತದೆ.

ಇದನ್ನೂ ಓದಿ: 200 ಕೋಟಿ ರೂಪಾಯಿ ಕ್ಲಬ್ ಸೇರಿದ ರಾಮ್ ಚರಣ್ ಸಿನಿಮಾ ‘ಪೆದ್ದಿ’; ಆದರೂ ಇದೆ ಸವಾಲು

ಈ ಲೆಕ್ಕಾಚಾರವನ್ನು ಅನ್ವಯಿಸಿ ನೋಡುವುದಾದರೆ, 55 ಕೋಟಿ ರೂಪಾಯಿ ಬಂಡವಾಳ ಹೂಡಿರುವ ನಿರ್ಮಾಪಕರಿಗೆ ಸದ್ಯ ಬಂದಿರುವ ಕಲೆಕ್ಷನ್‌ನಿಂದ ಕೈಗೆ ಸಿಗುವುದು ತೀರಾ ಕಡಿಮೆ ಮೊತ್ತ. ಸಿನಿಮಾ ಕನಿಷ್ಠ 110 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದರೆ ಮಾತ್ರ ನಿರ್ಮಾಪಕರು ಸೇಫ್ ಜೋನ್ ತಲುಪಲು ಸಾಧ್ಯವಿತ್ತು. ಆದರೆ ಸದ್ಯ ಸಿನಿಮಾ 30 ಕೋಟಿಯ ಗಡಿಯನ್ನೂ ದಾಟಲು ಒದ್ದಾಡುತ್ತಿರುವುದರಿಂದ, ಬಂಡವಾಳ ಹೂಡಿದ ನಿರ್ಮಾಪಕರಿಗೆ ಕೋಟ್ಯಂತರ ರೂಪಾಯಿಗಳ ಭಾರಿ ಪ್ರಮಾಣದ ನಷ್ಟ ಉಂಟಾಗುವುದು ಈಗ ಶೇಕಡಾ ನೂರರಷ್ಟು ಖಚಿತವಾದಂತಿದೆ. ಒಟಿಟಿ ಹಾಗೂ ಸ್ಯಾಟಲೈಟ್ ಹಕ್ಕುಗಳಿಂದ ಚಿತ್ರ ಹಣ ಮಾಡಿದರೂ ನಿರ್ಮಾಪಕರ ನಷ್ಟವನ್ನು ಸಂಪೂರ್ಣವಾಗಿ ಭರಿಸಲು ಇದು ಸಹಾಯ ಮಾಡದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮಹಿಳಾ ಟಿ20 ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಬಹುನಿರೀಕ್ಷಿತ ಮಹಿಳಾ ಟಿ20 ವಿಶ್ವಕಪ್​ ಜೂನ್ 12 ರಿಂದ ಶುರುವಾಗಲಿದೆ. ಇಂಗ್ಲೆಂಡ್ ಮತ್ತು ವೇಲ್ಸ್ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 12 ತಂಡಗಳು ಕಣಕ್ಕಿಳಿಯಲಿವೆ. ಈ ಹನ್ನೆರಡು ತಂಡಗಳನ್ನು ಎರಡು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಮೊದಲ ಸುತ್ತಿನಲ್ಲಿ ಗ್ರೂಪ್​ಗಳಲ್ಲಿರುವ ತಂಡಗಳ ನಡುವೆ ಪಂದ್ಯ ನಡೆಯಲಿದೆ.

  • ಗ್ರೂಪ್ A: ಆಸ್ಟ್ರೇಲಿಯಾ, ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ಬಾಂಗ್ಲಾದೇಶ್, ನೆದರ್ಲ್ಯಾಂಡ್ಸ್.
  • ಗ್ರೂಪ್ B: ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್, ಶ್ರೀಲಂಕಾ, ಸ್ಕಾಟ್ಲೆಂಡ್, ಐರ್ಲೆಂಡ್.

ಇದನ್ನೂ ಓದಿ: ನಾನು RCB ತಂಡದ ಕಟ್ಟಾ ಅಭಿಮಾನಿ: ವೈಭವ್ ಅಚ್ಚರಿಯ ಹೇಳಿಕೆ!

ಭಾರತ ತಂಡವು ಗ್ರೂಪ್​ A ನಲ್ಲಿರುವ ಕಾರಣ ಮೊದಲ ಸುತ್ತಿನಲ್ಲಿ ಆಸ್ಟ್ರೇಲಿಯಾ, ಪಾಕಿಸ್ತಾನ್, ಸೌತ್ ಆಫ್ರಿಕಾ, ಬಾಂಗ್ಲಾದೇಶ್ ಮತ್ತು ನೆದರ್ಲ್ಯಾಂಡ್ಸ್ ತಂಡಗಳನ್ನು ಎದುರಿಸಲಿದೆ.

ಮಹಿಳಾ ಟಿ20 ವಿಶ್ವಕಪ್‌ನ ಸಂಪೂರ್ಣ ವೇಳಾಪಟ್ಟಿ:

ದಿನಾಂಕ

ಮುಖಾಮುಖಿ

ಸ್ಥಳ

12-06-2026

ಇಂಗ್ಲೆಂಡ್ vs ಶ್ರೀಲಂಕಾ

ಎಡ್ಜ್‌ಬಾಸ್ಟನ್

13-06-2026

ಸ್ಕಾಟ್ಲೆಂಡ್ vs ಐರ್ಲೆಂಡ್

ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಗ್ರೌಂಡ್

13-06-2026

ಆಸ್ಟ್ರೇಲಿಯಾ vs ಸೌತ್ ಆಫ್ರಿಕಾ,

ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಗ್ರೌಂಡ್

13-06-2026

ವೆಸ್ಟ್ ಇಂಡೀಸ್ vs ನ್ಯೂಝಿಲೆಂಡ್

ಹ್ಯಾಂಪ್‌ಶೈರ್ ಬೌಲ್

14-06-2026

ಬಾಂಗ್ಲಾದೇಶ್ vs ನೆದರ್ಲ್ಯಾಂಡ್ಸ್

ಎಡ್ಜ್‌ಬಾಸ್ಟನ್

14-06-2026

ಭಾರತ vs. ಪಾಕಿಸ್ತಾನ್

ಎಡ್ಜ್‌ಬಾಸ್ಟನ್

16-06-2026

ನ್ಯೂಝಿಲೆಂಡ್ vs ಶ್ರೀಲಂಕಾ

ಹ್ಯಾಂಪ್‌ಶೈರ್ ಬೌಲ್

16-06-2026

ಇಂಗ್ಲೆಂಡ್ vs ಐರ್ಲೆಂಡ್

ಹ್ಯಾಂಪ್‌ಶೈರ್ ಬೌಲ್

17-06-2026

ಆಸ್ಟ್ರೇಲಿಯಾ vs ಬಾಂಗ್ಲಾದೇಶ್

ಹೆಡಿಂಗ್ಲೆ

17-06-2026

ಭಾರತ vs ನೆದರ್ಲ್ಯಾಂಡ್ಸ್

ಹೆಡಿಂಗ್ಲೆ

17-06-2026

ಸೌತ್ ಆಫ್ರಿಕಾ vs ಪಾಕಿಸ್ತಾನ್

ಎಡ್ಜ್‌ಬಾಸ್ಟನ್

18-06-2026

ವೆಸ್ಟ್ ಇಂಡೀಸ್ vs ಸ್ಕಾಟ್ಲೆಂಡ್

ಹೆಡಿಂಗ್ಲೆ

19-06-2026

ನ್ಯೂಝಿಲೆಂಡ್ vs ಐರ್ಲೆಂಡ್

ಹ್ಯಾಂಪ್‌ಶೈರ್ ಬೌಲ್

20-06-2026

ಆಸ್ಟ್ರೇಲಿಯಾ vs ನೆದರ್ಲ್ಯಾಂಡ್ಸ್

ಹ್ಯಾಂಪ್‌ಶೈರ್ ಬೌಲ್

20-06-2026

ಪಾಕಿಸ್ತಾನ್ vs ಬಾಂಗ್ಲಾದೇಶ್

ಹ್ಯಾಂಪ್‌ಶೈರ್ ಬೌಲ್

20-06-2026

ಇಂಗ್ಲೆಂಡ್ vs ಸ್ಕಾಟ್ಲೆಂಡ್

ಹೆಡಿಂಗ್ಲೆ

21-06-2026

ವೆಸ್ಟ್ ಇಂಡೀಸ್ vs ಶ್ರೀಲಂಕಾ

ಬ್ರಿಸ್ಟಲ್ ಕೌಂಟಿ ಗ್ರೌಂಡ್

21-06-2026

ಸೌತ್ ಆಫ್ರಿಕಾ vs ಭಾರತ

ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಗ್ರೌಂಡ್

23-06-2026

ನ್ಯೂಝಿಲೆಂಡ್ vs ಸ್ಕಾಟ್ಲೆಂಡ್

ಬ್ರಿಸ್ಟಲ್ ಕೌಂಟಿ ಗ್ರೌಂಡ್

23-06-2026

ಶ್ರೀಲಂಕಾ vs ಐರ್ಲೆಂಡ್

ಬ್ರಿಸ್ಟಲ್ ಕೌಂಟಿ ಗ್ರೌಂಡ್

23-06-2026

ಆಸ್ಟ್ರೇಲಿಯಾ vs. ಪಾಕಿಸ್ತಾನ್

ಹೆಡಿಂಗ್ಲೆ

24-06-2026

ಇಂಗ್ಲೆಂಡ್ vs ವೆಸ್ಟ್ ಇಂಡೀಸ್

ಲಾರ್ಡ್ಸ್ ಕ್ರಿಕೆಟ್ ಗ್ರೌಂಡ್

25-06-2026

ಭಾರತ vs ಬಾಂಗ್ಲಾದೇಶ್

ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಗ್ರೌಂಡ್

25-06-2026

ಸೌತ್ ಆಫ್ರಿಕಾ vs ನೆದರ್ಲ್ಯಾಂಡ್ಸ್

ಬ್ರಿಸ್ಟಲ್ ಕೌಂಟಿ ಗ್ರೌಂಡ್

26-06-2026

ಶ್ರೀಲಂಕಾ vs ಸ್ಕಾಟ್ಲೆಂಡ್

ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಗ್ರೌಂಡ್

27-06-2026

ಪಾಕಿಸ್ತಾನ್ vs ನೆದರ್ಲ್ಯಾಂಡ್ಸ್

ಬ್ರಿಸ್ಟಲ್ ಕೌಂಟಿ ಗ್ರೌಂಡ್

27-06-2026

ವೆಸ್ಟ್ ಇಂಡೀಸ್ vs ಐರ್ಲೆಂಡ್

ಬ್ರಿಸ್ಟಲ್ ಕೌಂಟಿ ಗ್ರೌಂಡ್

27-06-2026

ಇಂಗ್ಲೆಂಡ್ vs ನ್ಯೂಝಿಲೆಂಡ್

ದಿ ಓವಲ್

28-06-2026

ಸೌತ್ ಆಫ್ರಿಕಾ vs ಬಾಂಗ್ಲಾದೇಶ್

ಲಾರ್ಡ್ಸ್ ಕ್ರಿಕೆಟ್ ಗ್ರೌಂಡ್

28-06-2026

ಆಸ್ಟ್ರೇಲಿಯಾ vs ಭಾರತ

ಲಾರ್ಡ್ಸ್ ಕ್ರಿಕೆಟ್ ಗ್ರೌಂಡ್

30-06-2026

ಸೆಮಿಫೈನಲ್ 1

ದಿ ಓವಲ್

02-07-2026

ಸೆಮಿಫೈನಲ್ 2

ದಿ ಓವಲ್

05-07-2026

ಫೈನಲ್

ಲಾರ್ಡ್ಸ್ ಕ್ರಿಕೆಟ್ ಗ್ರೌಂಡ್

Source link

WTC ಫೈನಲ್​ಗೇರಲು ಭಾರತ ತಂಡ ಇನ್ನೆಷ್ಟು ಪಂದ್ಯ ಗೆಲ್ಲಬೇಕು?

Source link

ಸಚಿನ್ ಪೈಲಟ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರೆ…ಅಶೋಕ್ ಗೆಹ್ಲೋಟ್ ಹೇಳಿದ್ದೇನು? – Kannada News

ಸಚಿನ್ ಪೈಲಟ್, ಅಶೋಕ್ ಗೆಹ್ಲೋಟ್ Image Credit source: NDTV

ಜೈಪುರ, ಜೂನ್ 08: ರಾಜಸ್ಥಾನ(Rajasthan) ರಾಜಕಾರಣದಲ್ಲಿ ಸುಡು ಬಿಸಿಲಿನಂತೆಯೇ ರಾಜಕೀಯ  ಉಷ್ಣತೆಯೂ ಗಣನೀಯವಾಗಿ ಹೆಚ್ಚಾಗಿದೆ. 2020ರ ಕೋವಿಡ್ 19 ಸಾಂಕ್ರಾಮಿಕ ರೋಗದ ಸಮಯದಲ್ಲಿ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ರಾಜಸ್ಥಾನ ಕಾಂಗ್ರೆಸ್​ನ ಮಾನೇಸರ್ ರೆಸಾರ್ಟ್​ ಘಟನೆಯು ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ಕುರಿತು ಜೂನ್ 7ರ ಭಾನುವಾರದಂದು ಜೈಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್, ತಮ್ಮದೇ ಪಕ್ಷದ ಸಹೋದ್ಯೋಗಿ ಸಚಿನ್ ಪೈಲಟ್ ವಿರುದ್ಧ ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ.

ಸಚಿನ್ ಪೈಲಟ್ ಅವರು ಅಂದು ತಾವು ಮಾಡಿದ ತಪ್ಪನ್ನು ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದರೆ, ವಿರೋಧ ಪಕ್ಷವಾದ ಬಿಜೆಪಿಗೆ ಈ ಮಾನೇಸರ್ ಘಟನೆಯ ವಿಷಯವನ್ನು ಪದೇ ಪದೇ ಕಾಂಗ್ರೆಸ್ ಅನ್ನು ಕೆಣಕಲು ಯಾವುದೇ ಅವಕಾಶ ಸಿಗುತ್ತಿರಲಿಲ್ಲ ಎಂದು ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.

ಸೆಪ್ಟೆಂಬರ್ 25, 2022 ರಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯ ಬಹಿಷ್ಕಾರದ ವಿವಾದವನ್ನು ಪ್ರಸ್ತಾಪಿಸಿದ ಗೆಹ್ಲೋಟ್, ಆ ಸಮಯದಲ್ಲಿ ಹೈಕಮಾಂಡ್ ವಿರುದ್ಧ ಯಾವುದೇ ಬಂಡಾಯ ಅಥವಾ ಅಸಮಾಧಾನ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು. ಅದು ಕೇವಲ ಸಚಿನ್ ಪೈಲಟ್ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಏರಿಸುವ ಪ್ರಸ್ತಾಪದ ವಿರುದ್ಧ ಶಾಸಕರು ವ್ಯಕ್ತಪಡಿಸಿದ ತೀವ್ರ ಭಿನ್ನಾಭಿಪ್ರಾಯವಾಗಿತ್ತು ಎಂದು ಅವರು ವಿವರಿಸಿದರು.

ಮತ್ತಷ್ಟು ಓದಿ: ರಾಜಸ್ಥಾನ ಸಿಎಂ ಆಯ್ಕೆ ಮಾಡುವ ಅಧಿಕಾರ ಕಾಂಗ್ರೆಸ್ ಅಧ್ಯಕ್ಷರಿಗಿದೆ: ಸಚಿನ್ ಪೈಲಟ್ ಬಣ

ಅಂದು 100 ಕ್ಕೂ ಹೆಚ್ಚು ಶಾಸಕರ ಆಕ್ಷೇಪವೇನೆಂದರೆ ಯಾರು 2020 ರಲ್ಲಿ ತಮ್ಮದೇ ಪಕ್ಷದ ಶಾಸಕರನ್ನು ಕರೆದುಕೊಂಡು ಹರಿಯಾಣದ ಮಾನೇಸರ್‌ಗೆ ಹೋಗಿ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸಿದ್ದರೋ, ಅಂತಹ ವ್ಯಕ್ತಿಯನ್ನು ಮುಖ್ಯಮಂತ್ರಿ ಹುದ್ದೆಗೆ ಒಪ್ಪಲು ಸಾಧ್ಯವಿಲ್ಲ ಎಂಬುದಾಗಿತ್ತು. ಒಂದು ವೇಳೆ ಹೈಕಮಾಂಡ್ ವಿರುದ್ಧವೇ ನಿಜವಾದ ದಂಗೆ ನಡೆದಿದ್ದರೆ, ನನ್ನನ್ನು ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಸುತ್ತಿರಲಿಲ್ಲ. ಆದರೆ, ಇಡೀ ಘಟನೆಯನ್ನು ತಪ್ಪಾಗಿ ಬಿಂಬಿಸಿ ನನಗೆ ಕೆಟ್ಟ ಹೆಸರು ತರಲು ಸಚಿನ್ ಪೈಲಟ್ ಅವರ ಆಪ್ತರು ಸಂಚು ರೂಪಿಸಿದ್ದರು.

ಪೈಲಟ್ ನನಗೆ ಮಗನಿದ್ದಂತೆ, ವೈಯಕ್ತಿಕ ದ್ವೇಷವಿಲ್ಲ
ಸಚಿನ್ ಪೈಲಟ್ ಅವರೊಂದಿಗೆ ತಮಗೆ ಯಾವುದೇ ವೈಯಕ್ತಿಕ ಹಗೆತನವಿಲ್ಲ ಎಂಬುದನ್ನು ಗೆಹ್ಲೋಟ್ ಸ್ಪಷ್ಟಪಡಿಸಿದ್ದಾರೆ. ನಾವಿಬ್ಬರೂ ಈಗಲೂ ಪರಸ್ಪರ ಭೇಟಿಯಾಗುತ್ತೇವೆ, ನಗುತ್ತೇವೆ, ಮಾತನಾಡುತ್ತೇವೆ ಮತ್ತು ತಮಾಷೆ ಮಾಡುತ್ತೇವೆ. ನಾನು ಅವರನ್ನು ಮೊದಲಿನಿಂದಲೂ ಕುಟುಂಬದ ಕಿರಿಯ ಸದಸ್ಯನಂತೆ, ಮಗನಂತೆ ನಡೆಸಿಕೊಂಡಿದ್ದೇನೆ. ಆದರೆ, ಅವರು ಸತ್ಯವನ್ನು ಒಪ್ಪಿಕೊಳ್ಳಲು ಇನ್ನೂ ಕಲ್ತಿಲ್ಲ, ಅದಕ್ಕಾಗಿಯೇ ಈ ವಿವಾದ ಪದೇ ಪದೇ ಜೀವಂತವಾಗಿದೆ. ನಾನು ಆ ಘಟನೆಯ ನಂತರವೇ ‘ಮರೆತು ಕ್ಷಮಿಸಿ’ ಎಂದು ಹೇಳಿದ್ದೆ. ಆ ಭಾವನೆಯನ್ನು ಪೈಲಟ್ ಅರ್ಥ ಮಾಡಿಕೊಳ್ಳಬೇಕಿತ್ತು, ಎಂದಿದ್ದಾರೆ.

ಕೇಂದ್ರದಲ್ಲಿ ಸಚಿವರಾಗಲು ಸಹಾಯ ಮಾಡಿದ್ದೆ
ತಮ್ಮ ರಾಜಕೀಯ ಇತಿಹಾಸದ ಮತ್ತೊಂದು ಪುಟವನ್ನು ಬಿಚ್ಚಿಟ್ಟ ಗೆಹ್ಲೋಟ್, ಸಚಿನ್ ಪೈಲಟ್ ಅವರು ಕೇಂದ್ರ ಸರ್ಕಾರದಲ್ಲಿ ಸಚಿವರಾಗಲು ತಾವು ದೊಡ್ಡ ಮಟ್ಟದ ಸಹಾಯ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಅವರು ಸಚಿವರಾಗಲು ಬಯಸಿ ನನಗೆ ಕರೆ ಮಾಡಿದಾಗ, ನಾನು ಅವರ ಪರವಾಗಿ ಹೈಕಮಾಂಡ್ ಜೊತೆ ಬ್ಯಾಟಿಂಗ್ ಮಾಡಿ ಸಚಿವ ಸ್ಥಾನ ಸಿಗುವಂತೆ ಮಾಡಿದ್ದೆ. ಆದರೆ ಪೈಲಟ್ ಇದನ್ನು ಎಂದಿಗೂ ಸಾರ್ವಜನಿಕವಾಗಿ ಒಪ್ಪಿಕೊಳ್ಳಲಿಲ್ಲ ಎಂಬ ಬೇಸರ ನನಗಿದೆ. ಅಶೋಕ್ ಗೆಹ್ಲೋಟ್ ನನಗೆ ಸಹಾಯ ಮಾಡಿದ್ದಾರೆ ಎಂದು ಅವರು ತಮ್ಮ ಸ್ನೇಹಿತರ ಮುಂದೆ ಹೇಳಿದ್ದರೂ ನನ್ನ ಹೃದಯ ತುಂಬಿ ಬರುತ್ತಿತ್ತು ಎಂದು ಭಾವುಕರಾಗಿ ನುಡಿದಿದ್ದಾರೆ.

 ರಾಜಕೀಯ ಸಲಹೆಗಾರರ ವಿರುದ್ಧ ಅಸಮಾಧಾನ
ಕೆಲವು ರಾಜಕೀಯ ಸಲಹೆಗಾರರು,  ಸಚಿನ್ ಪೈಲಟ್ ಅವರ ಸುತ್ತ ನಿರಂತರವಾಗಿ ಅವಾಸ್ತವಿಕ ರಾಜಕೀಯ ಸಾಧ್ಯತೆಗಳನ್ನು ಸೃಷ್ಟಿಸುತ್ತಿವೆ, ಇದು ವಾಸ್ತವದಲ್ಲಿ ಪೈಲಟ್ ಅವರ ರಾಜಕೀಯ ಭವಿಷ್ಯಕ್ಕೆ ದೊಡ್ಡ ಹಾನಿ ಮಾಡುತ್ತಿದೆ ಎಂದು ಗೆಹ್ಲೋಟ್ ಎಚ್ಚರಿಸಿದ್ದಾರೆ. ಪ್ರಸ್ತುತ ದೇಶ ಮತ್ತು ಕಾಂಗ್ರೆಸ್ ಪಕ್ಷ ಎರಡೂ ಕಠಿಣ ಬಿಕ್ಕಟ್ಟಿನ ಹಂತದಲ್ಲಿದ್ದು, ಹಳೆಯ ಕಹಿ ನೆನಪುಗಳನ್ನು ಮರೆತು ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವತ್ತ ಎಲ್ಲ ನಾಯಕರು ಒಟ್ಟಾಗಿ ಶ್ರಮಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ಅಶೋಕ್ ಗೆಹ್ಲೋಟ್ ಅವರ ಈ ಭರ್ಜರಿ ರಾಜಕೀಯ ಹೇಳಿಕೆಗಳು ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದರೂ, ಸಚಿನ್ ಪೈಲಟ್ ಕಡೆಯಿಂದ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಪೈಲಟ್ ಅವರು ಈ ಸುದೀರ್ಘ ಹೇಳಿಕೆಗಳ ಕುರಿತು ಸಂಪೂರ್ಣ ಮೌನ ವಹಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕಲಬುರಗಿ: ಲಂಚ ಪಡೆಯುತ್ತಿದ್ದಾಗ ರೆಡ್​ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಎಎಸ್​ಐ, ಕಾನ್​ಸ್ಟೇಬಲ್ – Kannada News

ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಶಿವಶರಣಪ್ಪ, ಮಹಿಳಾ ಕಾನ್‌ಸ್ಟೆಬಲ್ ಜ್ಯೋತಿ

ಕಲಬುರಗಿ, ಜೂನ್ 8: ಕಲಬುರಗಿ ನಗರದಲ್ಲಿ ಅತ್ಯಂತ ಅಮಾನವೀಯ ಮತ್ತು ಲಜ್ಜೆಗೆಟ್ಟ ಭ್ರಷ್ಟಾಚಾರದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪೋಕ್ಸೋ (POCSO) ಪ್ರಕರಣದ ಸಂತ್ರಸ್ತೆಯ ತಾಯಿಯಿಂದಲೇ ಲಂಚ ಸ್ವೀಕರಿಸುತ್ತಿದ್ದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ASI) ಹಾಗೂ ಮಹಿಳಾ ಕಾನ್‌ಸ್ಟೆಬಲ್ ಅವರನ್ನು ಲೋಕಾಯುಕ್ತ ಪೊಲೀಸರು ಭಾನುವಾರ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಗಳು ಸಂತ್ರಸ್ತೆಯ ತಾಯಿಗೆ ಕಾನೂನು ನೆರವು ನೀಡುವ ನೆಪದಲ್ಲಿ ಲಂಚ ಪಡೆಯುತ್ತಿದ್ದರು.

ಮುಖ್ಯಾಂಶಗಳು

  • 10 ಸಾವಿರ ರೂ. ಲಂಚ ಸ್ವೀಕರಿಸುವಾಗ ರೆಡ್‌ಹ್ಯಾಂಡ್ ಆಗಿ ಅರೆಸ್ಟ್.
  • ಕಾನೂನು ನೆರವು ನೀಡುವ ನೆಪದಲ್ಲಿ ಸಂತ್ರಸ್ತೆಯ ತಾಯಿಗೆ ವಂಚನೆ.
  • ತಪ್ಪಿಸಿಕೊಳ್ಳಲು ಯತ್ನಿಸಿದ ಎಎಸ್‌ಐ ಕೂಡ ಬಂಧನ.

ಕಾನೂನು ನೆರವು ನೀಡುವ ನೆಪದಲ್ಲಿ ದೋಚುತ್ತಿದ್ದ ಪೊಲೀಸರು

ಬಂಧಿತ ಆರೋಪಿಗಳು ಪೋಕ್ಸೋ ಸಂತ್ರಸ್ತೆಯ ತಾಯಿಗೆ ನ್ಯಾಯಾಲಯದಲ್ಲಿ ಕಾನೂನು ನೆರವು ಮತ್ತು ರಕ್ಷಣೆ ಒದಗಿಸುವ ನೆಪವೊಡ್ಡಿ 10,000 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಅಷ್ಟೇ ಅಲ್ಲದೆ, ಈ ಮುಂಚೆಯೇ ಸರ್ಕಾರಿ ಅಭಿಯೋಜಕರ (Public Prosecutor) ಶುಲ್ಕ ಎಂದು ಹೇಳಿ ಸಂತ್ರಸ್ತೆಯ ತಾಯಿಯಿಂದ 1,000 ರೂಪಾಯಿ ಹಣವನ್ನು ಪಡೆದಿದ್ದರು ಎಂಬ ಆರೋಪವಿದೆ. ಪೊಲೀಸರ ಈ ಕಿರುಕುಳದಿಂದ ಬೇಸತ್ತ ಮಹಿಳೆ ತಕ್ಷಣವೇ ಕಲಬುರಗಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಸಿಕ್ಕಿಬಿದ್ದ ಮಹಿಳಾ ಸಿಬ್ಬಂದಿ, ತಪ್ಪಿಸಿ ಓಡಲೆತ್ನಿಸಿದ ಎಎಸ್‌ಐ ಸೆರೆ

ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಇನ್‌ಸ್ಪೆಕ್ಟರ್ ಅರುಣ್‌ಕುಮಾರ್ ಮುರಗುಂಡಿ ಹಾಗೂ ಸಿಬ್ಬಂದಿ ವರ್ಗದವರು ಸ್ಟೇಷನ್ ಬಜಾರ್ ಠಾಣೆಯ ಬಳಿ ತೆರಳಿದ್ದರು. ಸಂತ್ರಸ್ತೆಯ ತಾಯಿಯಿಂದ ಮಹಿಳಾ ಕಾನ್‌ಸ್ಟೆಬಲ್ ಜ್ಯೋತಿ 10,000 ರೂಪಾಯಿ ಲಂಚದ ಹಣವನ್ನು ಪಡೆಯುತ್ತಿದ್ದಂತೆಯೇ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಆಕೆಯನ್ನು (ರೆಡ್‌ಹ್ಯಾಂಡೆಡ್ ಆಗಿ ವಶಕ್ಕೆ ಪಡೆದಿದ್ದಾರೆ. ಇತ್ತ ಲೋಕಾಯುಕ್ತ ದಾಳಿಯ ಸುಳಿವು ಸಿಗುತ್ತಿದ್ದಂತೆಯೇ ಎಎಸ್‌ಐ ಶಿವಶರಣಪ್ಪ ಠಾಣೆಯಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಲೋಕಾಯುಕ್ತ ಜಾಗೃತ ದಳವು ಆತನನ್ನು ಬೆನ್ನಟ್ಟಿ ಆಳಂದ ತಾಲೂಕಿನ ಕಡಗಂಚಿ ಎಂಬಲ್ಲಿ ಹೆಡೆಮುರಿ ಕಟ್ಟಿದೆ.

ಇದನ್ನೂ ಓದಿ: ಪಾಕ್ ಉಗ್ರನ ಜೊತೆ ರಾಜ್ಯದ ಇಬ್ಬರ ಲಿಂಕ್: ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು!

ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ. ಬಂಧಿತ ಇಬ್ಬರು ಭ್ರಷ್ಟ ಪೊಲೀಸ್ ಸಿಬ್ಬಂದಿ ವಿರುದ್ಧ ಮೊಕದ್ದಮೆ ಹೂಡಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

National Best Friend Day 2026: ರಕ್ತ ಸಂಬಂಧಕ್ಕೂ ಮಿಗಿಲಾದ ಪವಿತ್ರ ಬಂಧವೇ ಸ್ನೇಹ – Kannada News

ರಾಷ್ಟ್ರೀಯ ಆತ್ಮೀಯ ಸ್ನೇಹಿತರ ದಿನImage Credit source: Pinterest

ಸ್ನೇಹ (Friendship) ಸಂಬಂಧ ಎನ್ನುವಂತಹದ್ದು, ಸುಂದರವಾದ, ಪವಿತ್ರವಾದ ಹಾಗೂ ಪರಿಶುದ್ಧವಾದ ಬಂಧ. ಈ ಸ್ನೇಹ ಗಡಿ, ಭಾಷೆ, ಲಿಂಗ, ಜಾತಿ, ಧರ್ಮ ಇವೆಲ್ಲವನ್ನೂ ಮೀರಿ ನಿಲ್ಲುವಂತಹದ್ದಾಗಿದೆ. ಪ್ರತಿಯೊಬ್ಬರಿಗೂ ಸ್ನೇಹಿತರಿರುತ್ತಾರೆ. ಇದರಲ್ಲಿ ಕೆಲವು ಮಂದಿ ಪ್ರಾಣ ಸ್ನೇಹಿತರಾಗಿರುತ್ತಾರೆ. ಇವರು ನಮ್ಮ ಇಡೀ ಜೀವನವನ್ನು ಸುಂದರವಾಗಿಸಬಲ್ಲರು. ಇವರು ನಮ್ಮ ಕಷ್ಟಗಳಿಗೆ ಹೆಗಲಾಗಿ ನಿಲ್ಲುವರು, ಜೀವನಕ್ಕೆ ಧೈರ್ಯವಾಗಿ ನಿಲ್ಲುವರು. ಜೀವಕ್ಕೆ ಜೀವವಾಗಿರುವ ಪ್ರಾಣ ಸ್ನೇಹಿತರಿಗೆ ಥ್ಯಾಂಕ್ಸ್‌ ಹೇಳಲು ಹಾಗೂ ಸ್ನೇಹಿತರು, ಸ್ನೇಹದ ಮಹತ್ವವನ್ನು ತಿಳಿಸಲು ಸ್ನೇಹವೆಂಬ ಅಮೂಲ್ಯ ಸಂಬಂಧವನ್ನು ಗೌರವಿಸಲು ಪ್ರತಿವರ್ಷ ಜೂನ್‌ 8 ರಂದು ರಾಷ್ಟೀಯ ಬೆಸ್ಟ್‌ ಫ್ರೆಂಡ್‌ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ.

ರಾಷ್ಟ್ರೀಯ ಆತ್ಮೀಯ ಸ್ನೇಹಿತರ ದಿನದ ಇತಿಹಾಸವೇನು?

ರಾಷ್ಟ್ರೀಯ ಆತ್ಮೀಯ ಸ್ನೇಹಿತರ ದಿನದ ಆಚರಣೆಯು ಅಮೆರಿಕದಲ್ಲಿ ಹುಟ್ಟಿಕೊಂಡಿತು. ವರದಿಗಳ ಪ್ರಕಾರ, ರಾಷ್ಟ್ರೀಯ ಆತ್ಮೀಯ ಸ್ನೇಹಿತರ ದಿನವು 1935 ರಲ್ಲಿ ಪ್ರಾರಂಭವಾಯಿತು. 1935 ರಲ್ಲಿ, ಅಮೆರಿಕದ ಕಾಂಗ್ರೆಸ್‌ನ ಲೆನೆ ಕ್ಯಾಲ್ವಿನ್ ಎಂಬವರು ಜೂನ್ 8 ಅನ್ನು ರಾಷ್ಟ್ರೀಯ ಸ್ನೇಹಿತರ ದಿನವೆಂದು ಘೋಷಿಸಲು ಪ್ರಸ್ತಾಪಿಸಿದರು. ನಂತರ 1998 ರಲ್ಲಿ, ಯುಎಸ್ ಕಾಂಗ್ರೆಸ್ ಜೂನ್ 8 ಅನ್ನು ರಾಷ್ಟ್ರೀಯ ಆತ್ಮೀಯ ಸ್ನೇಹಿತರ ದಿನವೆಂದು ಗುರುತಿಸಿತು. ಕ್ರಮೇಣ, ಈ ಸಂಪ್ರದಾಯವನ್ನು ಪ್ರಪಂಚದಾದ್ಯಂತ ಅನೇಕ ದೇಶಗಳಲ್ಲಿ ಆಚರಿಸಲು ಪ್ರಾರಂಭಿಸಿತು. ಇಂದು ಭಾರತ ಸೇರಿದಂತೆ ಅನೇಕ ದೇಶಗಳು ರಾಷ್ಟ್ರೀಯ ಬೆಸ್ಟ್‌ ಫ್ರೆಂಡ್‌ ದಿನವನ್ನು ಆಚರಿಸುತ್ತಿವೆ.

ರಾಷ್ಟ್ರೀಯ ಆತ್ಮೀಯ ಸ್ನೇಹಿತರ ದಿನದ ಮಹತ್ವವೇನು?

  • ಈ ದಿನವು ಸ್ನೇಹಿತರ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು,  ಸ್ನೇಹದ ಅಮೂಲ್ಯ ಬಂಧ ಮತ್ತು ಜೀವನದಲ್ಲಿ ಸ್ನೇಹಿತರ ಮಹತ್ವವನ್ನು ಗೌರವಿಸಲು ಒಂದು ವಿಶೇಷ ಅವಕಾಶವಾಗಿದೆ.
  • ಸ್ನೇಹದ ಮಹತ್ವವನ್ನು ತಿಳಿಸಲು ಸ್ನೇಹವೆಂಬ ಅಮೂಲ್ಯ ಸಂಬಂಧವನ್ನು ಗೌರವಿಸಲು ಪ್ರತಿವರ್ಷ ಜೂನ್‌ 8 ರಂದು ರಾಷ್ಟೀಯ ಬೆಸ್ಟ್‌ ಫ್ರೆಂಡ್‌ ದಿನವನ್ನು ಆಚರಿಸಲಾಗುತ್ತದೆ.
  • ಒಟ್ಟಾರೆಯಾಗಿ ಸ್ನೇಹಿತರೊಂದಿಗೆ ಸಂತೋಷವನ್ನು ಹಂಚಿಕೊಳ್ಳಲು ಮತ್ತು ಸುಂದರ ನೆನಪುಗಳನ್ನು ಸೃಷ್ಟಿಸಲು ಬೆಸ್ಟ್‌ಫ್ರೆಂಡ್‌ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಪರಿಸರ ವ್ಯವಸ್ಥೆಯನ್ನು ಸಮತೋಲನದಲ್ಲಿಡುವಲ್ಲಿ ಸಾಗರಗಳ ಪಾತ್ರ ಅಪಾರ

ಆತ್ಮೀಯ ಸ್ನೇಹಿತರ ದಿನ ನಿಮ್ಮ ಬೆಸ್ಟ್‌ಫ್ರೆಂಡ್‌ಗೆ ಈ ರೀತಿ ಶುಭಾಶಯ ಕೋರಿ:

  • ನಿನ್ನ ಅದ್ಭುತ ಸ್ನೇಹಕ್ಕೆ ನಾನೆಂದು ಚಿರಋಣಿ. ನನ್ನ ನೋವು-ನಲಿವಿನಲ್ಲಿ ಜೊತೆಯಾಗಿ ನಿಂತ ನನ್ನ ಪ್ರಾಣ ಸ್ನೇಹಿತನಿಗೆ ಹ್ಯಾಪಿ ಬೆಸ್ಟ್‌ಫ್ರೆಂಡ್‌ ಡೇ.
  • ನಿಜವಾದ ಸ್ನೇಹಕ್ಕೆ ಅರ್ಥ ನೀನು. ನನ್ನ ನೋವು ನಲಿವುಗಳಲ್ಲಿ ಜೊತೆಯಾಗಿ ನಿಂತ ನನ್ನ ಪ್ರಾಣ ಸ್ನೇಹಿತನಿಗೆ ಆತ್ಮೀಯ ಸ್ನೇಹಿತರ ದಿನದ ಹಾರ್ದಿಕ ಶುಭಾಶಯಗಳು.
  • ನನ್ನ ಜೀವನದ ಸಂತೋಷದ ಕ್ಷಣದಲ್ಲಿ ಮಾತ್ರವಲ್ಲ ನನ್ನ ನೋವು, ಕಷ್ಟದಲ್ಲೂ ನನ್ನ ಬೆನ್ನೆಲುವಾಗಿ ನಿಂತ ನಿನಗೆ ಅನಂತ ಅನಂತ ಧನ್ಯವಾದಗಳು.
  • ನಿನಗೆ ನನ್ನ ಹೃದಯದಲ್ಲಿ ಯಾವಾಗಲೂ ವಿಶೇಷ ಸ್ಥಾನವಿದೆ. ನಮ್ಮ ಈ ಸುಂದರ ಸ್ನೇಹ ಶಾಶ್ವತವಾಗಿ ಉಳಿಯಲಿ.
  • ನ್ನ ಖುಷಿಯಲ್ಲಿ ಜೊತೆಯಾಗಿ ನಿಲ್ಲುವ, ದುಃಖದಲ್ಲಿದ್ದಾಗ ನನ್ನನ್ನು ಸಂತೈಸಿ ಶಕ್ತಿ ತುಂಬುವ ನನ್ನ ಪ್ರಾಣ ಸ್ನೇಹಿತನಿಗೆ ಬೆಸ್ಟ್‌ ಫ್ರೆಂಡ್ಸ್‌ ದಿನದ ಶುಭಾಶಯಗಳು.
  • ಹ್ಯಾಪಿ ಬೆಸ್ಟ್‌ಫ್ರೆಂಡ್ಸ್‌ ಡೇ ಗೆಳೆಯ, ನನ್ನ ಜೀವನದ ಅತಿ ಅಮೂಲ್ಯವಾದ ಉಡುಗೊರೆ ನೀನು. ನಮ್ಮ ಈ ಸ್ನೇಹ ಸದಾ ಕಾಲ ಹೀಗೆಯೇ ಇರಲಿ.
  • ನಾನು ನನ್ನ ಜೀವನದಲ್ಲಿ  ಹೊಂದಿರುವ ಅತ್ಯಂತ ಅಮೂಲ್ಯವಾದ ವಿಷಯವೆಂದರೆ ನಿನ್ನ ಸ್ನೇಹ. ನಾನು ಅದನ್ನು ಶಾಶ್ವತವಾಗಿ ಪಡೆದುಕೊಳ್ಳಲು ಬಯಸುತ್ತೇನೆ.
  • ನಗುವುದು ಸಹ ಕಷ್ಟವಾದಾಗ ನೀನು ನನ್ನನ್ನ ನಗಿಸಿದೆ ಅಳುವೇ ಜೀವನವಾದಾಗ ನೀ ನನ್ನ ಕಣ್ಣೊರಿಸಿದೆ ಸದಾ ನನ್ನ ಜೊತೆ ನಿಂತಿದ್ದಕ್ಕಾಗಿ ನಾನೆಂದಿಗೂ ನಿನಗೆ ಋಣಿಯಾಗಿರುತ್ತೇನೆ.  ಎಲ್ಲಾ ಜನ್ಮದಲ್ಲಿಯೂ ನನಗೆ ಸ್ನೇಹಿತನಾಗಿ ನೀನೇ ಬೇಕು.  ಹ್ಯಾಪಿ ಬೆಸ್ಟ್‌ಫ್ರೆಂಡ್ಸ್‌ ಡೇ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಹಿಳಾ ಟಿ20 ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಬಹುನಿರೀಕ್ಷಿತ ಮಹಿಳಾ ಟಿ20 ವಿಶ್ವಕಪ್​ ಜೂನ್ 12 ರಿಂದ ಶುರುವಾಗಲಿದೆ. ಇಂಗ್ಲೆಂಡ್ ಮತ್ತು ವೇಲ್ಸ್ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 12 ತಂಡಗಳು ಕಣಕ್ಕಿಳಿಯಲಿವೆ. ಈ ಹನ್ನೆರಡು ತಂಡಗಳನ್ನು ಎರಡು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಮೊದಲ ಸುತ್ತಿನಲ್ಲಿ ಗ್ರೂಪ್​ಗಳಲ್ಲಿರುವ ತಂಡಗಳ ನಡುವೆ ಪಂದ್ಯ ನಡೆಯಲಿದೆ.

  • ಗ್ರೂಪ್ A: ಆಸ್ಟ್ರೇಲಿಯಾ, ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ಬಾಂಗ್ಲಾದೇಶ್, ನೆದರ್ಲ್ಯಾಂಡ್ಸ್.
  • ಗ್ರೂಪ್ B: ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್, ಶ್ರೀಲಂಕಾ, ಸ್ಕಾಟ್ಲೆಂಡ್, ಐರ್ಲೆಂಡ್.

ಇದನ್ನೂ ಓದಿ: ನಾನು RCB ತಂಡದ ಕಟ್ಟಾ ಅಭಿಮಾನಿ: ವೈಭವ್ ಅಚ್ಚರಿಯ ಹೇಳಿಕೆ!

ಭಾರತ ತಂಡವು ಗ್ರೂಪ್​ A ನಲ್ಲಿರುವ ಕಾರಣ ಮೊದಲ ಸುತ್ತಿನಲ್ಲಿ ಆಸ್ಟ್ರೇಲಿಯಾ, ಪಾಕಿಸ್ತಾನ್, ಸೌತ್ ಆಫ್ರಿಕಾ, ಬಾಂಗ್ಲಾದೇಶ್ ಮತ್ತು ನೆದರ್ಲ್ಯಾಂಡ್ಸ್ ತಂಡಗಳನ್ನು ಎದುರಿಸಲಿದೆ.

ಮಹಿಳಾ ಟಿ20 ವಿಶ್ವಕಪ್‌ನ ಸಂಪೂರ್ಣ ವೇಳಾಪಟ್ಟಿ:

ದಿನಾಂಕ

ಮುಖಾಮುಖಿ

ಸ್ಥಳ

12-06-2026

ಇಂಗ್ಲೆಂಡ್ vs ಶ್ರೀಲಂಕಾ

ಎಡ್ಜ್‌ಬಾಸ್ಟನ್

13-06-2026

ಸ್ಕಾಟ್ಲೆಂಡ್ vs ಐರ್ಲೆಂಡ್

ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಗ್ರೌಂಡ್

13-06-2026

ಆಸ್ಟ್ರೇಲಿಯಾ vs ಸೌತ್ ಆಫ್ರಿಕಾ,

ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಗ್ರೌಂಡ್

13-06-2026

ವೆಸ್ಟ್ ಇಂಡೀಸ್ vs ನ್ಯೂಝಿಲೆಂಡ್

ಹ್ಯಾಂಪ್‌ಶೈರ್ ಬೌಲ್

14-06-2026

ಬಾಂಗ್ಲಾದೇಶ್ vs ನೆದರ್ಲ್ಯಾಂಡ್ಸ್

ಎಡ್ಜ್‌ಬಾಸ್ಟನ್

14-06-2026

ಭಾರತ vs. ಪಾಕಿಸ್ತಾನ್

ಎಡ್ಜ್‌ಬಾಸ್ಟನ್

16-06-2026

ನ್ಯೂಝಿಲೆಂಡ್ vs ಶ್ರೀಲಂಕಾ

ಹ್ಯಾಂಪ್‌ಶೈರ್ ಬೌಲ್

16-06-2026

ಇಂಗ್ಲೆಂಡ್ vs ಐರ್ಲೆಂಡ್

ಹ್ಯಾಂಪ್‌ಶೈರ್ ಬೌಲ್

17-06-2026

ಆಸ್ಟ್ರೇಲಿಯಾ vs ಬಾಂಗ್ಲಾದೇಶ್

ಹೆಡಿಂಗ್ಲೆ

17-06-2026

ಭಾರತ vs ನೆದರ್ಲ್ಯಾಂಡ್ಸ್

ಹೆಡಿಂಗ್ಲೆ

17-06-2026

ಸೌತ್ ಆಫ್ರಿಕಾ vs ಪಾಕಿಸ್ತಾನ್

ಎಡ್ಜ್‌ಬಾಸ್ಟನ್

18-06-2026

ವೆಸ್ಟ್ ಇಂಡೀಸ್ vs ಸ್ಕಾಟ್ಲೆಂಡ್

ಹೆಡಿಂಗ್ಲೆ

19-06-2026

ನ್ಯೂಝಿಲೆಂಡ್ vs ಐರ್ಲೆಂಡ್

ಹ್ಯಾಂಪ್‌ಶೈರ್ ಬೌಲ್

20-06-2026

ಆಸ್ಟ್ರೇಲಿಯಾ vs ನೆದರ್ಲ್ಯಾಂಡ್ಸ್

ಹ್ಯಾಂಪ್‌ಶೈರ್ ಬೌಲ್

20-06-2026

ಪಾಕಿಸ್ತಾನ್ vs ಬಾಂಗ್ಲಾದೇಶ್

ಹ್ಯಾಂಪ್‌ಶೈರ್ ಬೌಲ್

20-06-2026

ಇಂಗ್ಲೆಂಡ್ vs ಸ್ಕಾಟ್ಲೆಂಡ್

ಹೆಡಿಂಗ್ಲೆ

21-06-2026

ವೆಸ್ಟ್ ಇಂಡೀಸ್ vs ಶ್ರೀಲಂಕಾ

ಬ್ರಿಸ್ಟಲ್ ಕೌಂಟಿ ಗ್ರೌಂಡ್

21-06-2026

ಸೌತ್ ಆಫ್ರಿಕಾ vs ಭಾರತ

ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಗ್ರೌಂಡ್

23-06-2026

ನ್ಯೂಝಿಲೆಂಡ್ vs ಸ್ಕಾಟ್ಲೆಂಡ್

ಬ್ರಿಸ್ಟಲ್ ಕೌಂಟಿ ಗ್ರೌಂಡ್

23-06-2026

ಶ್ರೀಲಂಕಾ vs ಐರ್ಲೆಂಡ್

ಬ್ರಿಸ್ಟಲ್ ಕೌಂಟಿ ಗ್ರೌಂಡ್

23-06-2026

ಆಸ್ಟ್ರೇಲಿಯಾ vs. ಪಾಕಿಸ್ತಾನ್

ಹೆಡಿಂಗ್ಲೆ

24-06-2026

ಇಂಗ್ಲೆಂಡ್ vs ವೆಸ್ಟ್ ಇಂಡೀಸ್

ಲಾರ್ಡ್ಸ್ ಕ್ರಿಕೆಟ್ ಗ್ರೌಂಡ್

25-06-2026

ಭಾರತ vs ಬಾಂಗ್ಲಾದೇಶ್

ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಗ್ರೌಂಡ್

25-06-2026

ಸೌತ್ ಆಫ್ರಿಕಾ vs ನೆದರ್ಲ್ಯಾಂಡ್ಸ್

ಬ್ರಿಸ್ಟಲ್ ಕೌಂಟಿ ಗ್ರೌಂಡ್

26-06-2026

ಶ್ರೀಲಂಕಾ vs ಸ್ಕಾಟ್ಲೆಂಡ್

ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಗ್ರೌಂಡ್

27-06-2026

ಪಾಕಿಸ್ತಾನ್ vs ನೆದರ್ಲ್ಯಾಂಡ್ಸ್

ಬ್ರಿಸ್ಟಲ್ ಕೌಂಟಿ ಗ್ರೌಂಡ್

27-06-2026

ವೆಸ್ಟ್ ಇಂಡೀಸ್ vs ಐರ್ಲೆಂಡ್

ಬ್ರಿಸ್ಟಲ್ ಕೌಂಟಿ ಗ್ರೌಂಡ್

27-06-2026

ಇಂಗ್ಲೆಂಡ್ vs ನ್ಯೂಝಿಲೆಂಡ್

ದಿ ಓವಲ್

28-06-2026

ಸೌತ್ ಆಫ್ರಿಕಾ vs ಬಾಂಗ್ಲಾದೇಶ್

ಲಾರ್ಡ್ಸ್ ಕ್ರಿಕೆಟ್ ಗ್ರೌಂಡ್

28-06-2026

ಆಸ್ಟ್ರೇಲಿಯಾ vs ಭಾರತ

ಲಾರ್ಡ್ಸ್ ಕ್ರಿಕೆಟ್ ಗ್ರೌಂಡ್

30-06-2026

ಸೆಮಿಫೈನಲ್ 1

ದಿ ಓವಲ್

02-07-2026

ಸೆಮಿಫೈನಲ್ 2

ದಿ ಓವಲ್

05-07-2026

ಫೈನಲ್

ಲಾರ್ಡ್ಸ್ ಕ್ರಿಕೆಟ್ ಗ್ರೌಂಡ್

Source link

ಪಶ್ಚಿಮ ಬಂಗಾಳ: 4,800 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು, ಗಡಿ ಭದ್ರತೆ ನಮ್ಮ ಆದ್ಯತೆ ಎಂದ ಸಿಎಂ ಸುವೇಂದು – Kannada News

ಕೋಲ್ಕತ್ತಾ, ಜೂನ್ 08: ಬಾಂಗ್ಲಾದೇಶದ 4,800 ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ(Suvendu Adhikari) ಹೇಳಿದ್ದಾರೆ. ಭಾರತ-ಬಾಂಗ್ಲಾದೇಶದ ಗಡಿಯಲ್ಲಿ ಸುರಕ್ಷಿತಗೊಳಿಸುವುದು ಮತ್ತು ಅಕ್ರಮ ವಲಸೆಯನ್ನು ತಡೆಗಟ್ಟುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆ ಎಂದು ಹೇಳಿದ್ದಾರೆ. ಬಿಜೆಪಿಯ ವಿಶೇಷ ತರಬೇತಿ ಶಿಬಿರದ ಪೂರ್ವಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಗಡಿ ಜಿಲ್ಲೆಗಳ ವಸತಿ ಕೇಂದ್ರಗಳಿಂದ ಈಗಾಗಲೇ ಸುಮಾರು 4,800 ಅಕ್ರಮ ವಲಸಿಗರನ್ನು ಬಾಂಗ್ಲಾದೇಶಕ್ಕೆ ಯಶಸ್ವಿಯಾಗಿ ಗಡೀಪಾರು ಮಾಡಲಾಗಿದ್ದು, ಇನ್ನುಳಿದ 836 ಜನರ ಸ್ವದೇಶಿ ವಾಪಸಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.

ಗಡಿ ಭದ್ರತೆ ಮತ್ತು ಜನಗಣತಿ ಯೋಜನೆಗಳು
ಗಡಿ ರಕ್ಷಣೆಯನ್ನು ಬಲಪಡಿಸುವುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರವು ಇನ್ನೂ ತಡೆಗೋಡೆ ನಿರ್ಮಾಣ ಬಾಕಿ ಇರುವ 556 ಕಿ.ಮೀ ವ್ಯಾಪ್ತಿಯ ಪೈಕಿ 100 ಕಿ.ಮೀ ಭೂಮಿಯನ್ನು ಈಗಾಗಲೇ ಭದ್ರತಾ ಪಡೆಗೆ ಹಸ್ತಾಂತರಿಸಿದೆ. ಈ ಪೈಕಿ ಉತ್ತರ ಬಂಗಾಳದ ಕಾರ್ಯತಂತ್ರದ ದೃಷ್ಟಿಯಿಂದ ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವ ಚಿಕನ್ಸ್​ ನೆಕ್ ವಲಯಕ್ಕೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಪಾರದರ್ಶಕ ಆಡಳಿತವನ್ನು ತರಲು ಜನಗಣತಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಆಗಸ್ಟ್ 1 ರಿಂದ ಆಗಸ್ಟ್ 15 ರವರೆಗೆ ಮನೆ-ಮನೆ ಸಮೀಕ್ಷೆ ನಡೆಯಲಿದೆ. ಮುಂದಿನ ವರ್ಷದ ಫೆಬ್ರವರಿ ಅಂತ್ಯದ ವೇಳೆಗೆ ಈ ಪ್ರಕ್ರಿಯೆ ಪೂರ್ಣಗೊಂಡು, ಗಡಿ ವಿಂಗಡಣೆ ಕಾರ್ಯಗಳು ನಡೆಯಲಿವೆ ಎಂದು ಅವರು ಮಾಹಿತಿ ನೀಡಿದರು.

ಮತ್ತಷ್ಟು ಓದಿ: ಬಂಗಾಳದಲ್ಲಿ ಕೇಸರಿ ಯುಗಾರಂಭ: ಮೇ 9 ರಂದು ಬಿಜೆಪಿ ಸರ್ಕಾರದ ಪಟ್ಟಾಭಿಷೇಕ, ಸಿಎಂ ರೇಸ್‌ನಲ್ಲಿ ಸುವೇಂದು ಅಧಿಕಾರಿ ಮುಂಚೂಣಿ

ಅನ್ನಪೂರ್ಣ ಯೋಜನೆ ಮತ್ತು ಫಲಾನುಭವಿಗಳ ಪರಿಶೀಲನೆ
ಹಿಂದಿನ ಸರ್ಕಾರದ ‘ಲಕ್ಷ್ಮಿರ್ ಭಂಡಾರ್’ ಯೋಜನೆಯಲ್ಲಿದ್ದ ಲೋಪದೋಷಗಳನ್ನು ಸರಿಪಡಿಸಿ, ಅರ್ಹ ಮಹಿಳೆಯರ ಸಬಲೀಕರಣಕ್ಕಾಗಿ ತರಲಾದ ‘ಅನ್ನಪೂರ್ಣ ಯೋಜನೆ’ಯಡಿಯಲ್ಲಿ ಪ್ರಸ್ತುತ 50 ಲಕ್ಷ ಮಹಿಳೆಯರು ತಲಾ 3,000 ರೂ.ಗಳ ಆರ್ಥಿಕ ನೆರವನ್ನು ಪಡೆದಿದ್ದಾರೆ. ಯೋಜನೆ ಜಾರಿಯಾದ ಮೊದಲ ದಿನವೇ 28 ಲಕ್ಷಕ್ಕೂ ಹೆಚ್ಚು ಮಹಿಳೆಯರ ಖಾತೆಗೆ ಹಣ ತಲುಪಿದೆ.

ಹಳೆಯ ಯೋಜನೆಯಲ್ಲಿದ್ದ ಅಪಾಯಕಾರಿ ಆರ್ಥಿಕ ಅಕ್ರಮಗಳನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು, ಫಲಾನುಭವಿಗಳ ಪಟ್ಟಿಯಲ್ಲಿದ್ದ ಸುಮಾರು 27 ಲಕ್ಷ ಹೆಸರುಗಳು ಮತದಾರರ ಪಟ್ಟಿಯಲ್ಲೇ ಇರಲಿಲ್ಲ ಮತ್ತು ಮಹಿಳೆಯರಿಗಾಗಿ ಮೀಸಲಾದ ಯೋಜನೆಯಲ್ಲಿ ಸುಮಾರು ಮೂರು ಲಕ್ಷ ಪುರುಷರು ಅಕ್ರಮವಾಗಿ ಸೌಲಭ್ಯ ಪಡೆದಿದ್ದರು ಎಂದು ಆರೋಪಿಸಿದರು. ಈ ಹಿನ್ನೆಲೆಯಲ್ಲಿ ಜಾರಿಗೆ ತರಲಾದ ಕಟ್ಟುನಿಟ್ಟಾದ ಪರಿಶೀಲನಾ ಪ್ರಕ್ರಿಯೆಯು ಕಲ್ಯಾಣ ವಿತರಣಾ ವ್ಯವಸ್ಥೆಯನ್ನು ದೀರ್ಘಾವಧಿಯಲ್ಲಿ ಬಲಪಡಿಸಲಿದೆ ಎಂದು ಅವರು ಸಮರ್ಥಿಸಿಕೊಂಡರು.

ಭ್ರಷ್ಟಾಚಾರ ಮುಕ್ತ ಆಡಳಿತ ಮತ್ತು ಬಜೆಟ್ ಮುನ್ನೋಟ
ಹಿಂದಿನ ತೃಣಮೂಲ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿವಿಧ ವಲಯಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ತನಿಖೆಗಳ ಮೂಲಕ ಅಕ್ರಮಗಳು ಬಯಲಾಗುತ್ತಿವೆ. ಸರ್ಕಾರ ಬದಲಾವಣೆಯಾದ ನಂತರ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಭ್ರಷ್ಟಾಚಾರದಲ್ಲಿ ಭಾಗಿಯಾದ ಹಲವು ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳನ್ನು ಬಂಧಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಮುಂದಿನ ಜೂನ್ 22 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಆರೋಗ್ಯ, ಸಾರ್ವಜನಿಕ ಕಲ್ಯಾಣ ಮತ್ತು ಸರ್ಕಾರಿ ನೌಕರರ ತುಟ್ಟಿ ಭತ್ಯೆ (DA) ಕುರಿತಾಗಿ ಹಲವು ಪ್ರಮುಖ ಪ್ರಕಟಣೆಗಳನ್ನು ಹೊರಡಿಸಲಾಗುವುದು ಎಂದು ಸುವೇಂದು ಅಧಿಕಾರಿ ಭರವಸೆ ನೀಡಿದರು. ಇದರ ಜೊತೆಗೆ, ಮುಂಬರುವ ವಾರದಿಂದ ರಾಜ್ಯದ ಜನರಿಗಾಗಿ ಕೇವಲ 5 ರೂಪಾಯಿ ಸಬ್ಸಿಡಿ ದರದಲ್ಲಿ ಮೀನು ಊಟದ ಸೌಲಭ್ಯವನ್ನು ಪರಿಚಯಿಸುವುದಾಗಿ ಅವರು ಇದೇ ಸಂದರ್ಭದಲ್ಲಿ ಘೋಷಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಗೆದ್ದ ಇಂಗ್ಲೆಂಡ್, ಸೋತ ನ್ಯೂಝಿಲೆಂಡ್, ಜಿಗಿದ ಸೌತ್ ಆಫ್ರಿಕಾ! – Kannada News

ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದೆ. ಲಾರ್ಡ್ಸ್​ ಮೈದಾನದಲ್ಲಿ ನಡೆದ ಈ ಪಂದ್ಯದ ಫಲಿತಾಂಶದೊಂದಿಗೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) 2025-27ರ ಅಂಕಪಟ್ಟಿಯಲ್ಲಿ ಭಾರಿ ಬದಲಾವಣೆಯಾಗಿದೆ. ಇಲ್ಲಿ ಗೆದ್ದ ಇಂಗ್ಲೆಂಡ್ ತಂಡಕ್ಕಿಂತ ಹೆಚ್ಚಿನ ಲಾಭ ಆಗಿರುವುದು ಸೌತ್ ಆಫ್ರಿಕಾ ತಂಡಕ್ಕೆ ಎಂಬುದು ವಿಶೇಷ.

ಅಂದರೆ ನ್ಯೂಝಿಲೆಂಡ್ ತಂಡದ ಸೋಲಿನೊಂದಿಗೆ ಸೌತ್ ಆಫ್ರಿಕಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಲಗ್ಗೆಯಿಟ್ಟಿದೆ. ಇದಕ್ಕೂ ಮುನ್ನ ಕಿವೀಸ್ ಪಡೆ ದ್ವಿತೀಯ ಸ್ಥಾನದಲ್ಲಿದ್ದರು. ಆದರೆ ಲಾರ್ಡ್ಸ್ ಟೆಸ್ಟ್​ನಲ್ಲಿನ ಪರಾಜಯವು ನ್ಯೂಝಿಲೆಂಡ್ ತಂಡವನ್ನು ನಾಲ್ಕನೇ ಸ್ಥಾನಕ್ಕೆ ಕುಸಿಯುವಂತೆ ಮಾಡಿದೆ.

ಲಾರ್ಡ್ಸ್​ನಲ್ಲಿ ಭರ್ಜರಿ ಜಯ:

ಲಾರ್ಡ್ಸ್​ ಟೆಸ್ಟ್ ಪಂದ್ಯದಲ್ಲಿ ಬೌಲರ್​ಗಳು ಪರಾಕ್ರಮ ಮೆರೆದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು.

  • ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಮೊದಲ ಇನಿಂಗ್ಸ್​ನಲ್ಲಿ 140 ರನ್ ಕಲೆಹಾಕಲಷ್ಟೇ ಶಕ್ತರಾಗಿದ್ದರು.
  • ಮೊದಲ ಇನಿಂಗ್ಸ್ ಆಡಿದ ನ್ಯೂಝಿಲೆಂಡ್ 113 ರನ್​ಗಳಿಗೆ ಆಲೌಟ್ ಆಗಿ 27 ರನ್​ಗಳ ಹಿನ್ನಡೆ ಅನುಭವಿಸಿದರು.
  • 27 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆಡಿದ ಇಂಗ್ಲೆಂಡ್ 226 ರನ್​ ಬಾರಿಸಿ ಆಲೌಟ್ ಆದರು.
  • ಅಂತಿಮ ಇನಿಂಗ್ಸ್​ನಲ್ಲಿ 254 ರನ್​ಗಳ ಗುರಿ ಪಡೆದ ನ್ಯೂಝಿಲೆಂಡ್ 138 ರನ್​ಗಳಿಗೆ ಆಲೌಟ್ ಆಗಿದ್ದಾರೆ.
  • ಈ ಮೂಲಕ ಇಂಗ್ಲೆಂಡ್ ತಂಡವು ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ 115 ರನ್​ಗಳ ಭರ್ಜರಿ ಜಯ ಸಾಧಿಸಿದ್ದಾರೆ.

ಈ ಪಂದ್ಯದಲ್ಲಿ ಒಟ್ಟು 7 ವಿಕೆಟ್ ಕಬಳಿಸಿ ಮಿಂಚಿದ್ದ ಇಂಗ್ಲೆಂಡ್ ವೇಗಿ ಒಲೀ ರಾಬಿನ್ಸನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಇತ್ತ ಈ ಹೀನಾಯ ಸೋಲಿನೊಂದಿಗೆ ನ್ಯೂಝಿಲೆಂಡ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಾಯಿಂಟ್ ಟೇಬಲ್​ನಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ.

ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿ:

Rank ತಂಡಗಳು ಪಂದ್ಯ ಗೆಲುವು ಸೋಲು ಡ್ರಾ ಅಂಕಗಳು ಶೇಕಡಾವಾರು
1. ಆಸ್ಟ್ರೇಲಿಯಾ 8 7 1 0 84 87.5
2. ಸೌತ್ ಆಫ್ರಿಕಾ 4 3 1 0 36 75
3. ಶ್ರೀಲಂಕಾ 2 1 0 1 16 66.67
4. ನ್ಯೂಝಿಲೆಂಡ್ 4 2 1 1 28 58.33
5. ಬಾಂಗ್ಲಾದೇಶ್ 4 2 1 1 28 58.33
6. ಭಾರತ 9 4 4 1 52 48.15
7. ಇಂಗ್ಲೆಂಡ್ 11 4 6 1 50 37.88
8. ಪಾಕಿಸ್ತಾನ್ 4 1 3 0 4 8.33
9. ವೆಸ್ಟ್ ಇಂಡೀಸ್ 8 0 7 1 4 4.17

ಪ್ರಸ್ತುತ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡವು ಅಗ್ರಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾ ತಂಡ ದ್ವಿತೀಯ ಸ್ಥಾನದಲ್ಲಿದೆ. ಈ ಎರಡು ತಂಡಗಳು ಮುಂಬರುವ ಸರಣಿಗಳಲ್ಲಿ ಭರ್ಜರಿ ಪ್ರದರ್ಶನ ಮುಂದುವರೆಸಿದರೆ ಈ ಬಾರಿ ಕೂಡ ಫೈನಲ್​ನಲ್ಲಿ ಮುಖಾಮುಖಿಯಾಗಲಿದ್ದಾರೆ.

ಇದನ್ನೂ ಓದಿ: ನಾನು RCB ತಂಡದ ಕಟ್ಟಾ ಅಭಿಮಾನಿ: ವೈಭವ್ ಅಚ್ಚರಿಯ ಹೇಳಿಕೆ!

ಅಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿ ಕಾಣಿಸಿಕೊಳ್ಳುವ ಎರಡು ತಂಡಗಳು ಫೈನಲ್​ನಲ್ಲಿ ಮುಖಾಮುಖಿಯಾಗಲಿದೆ. ಇದೀಗ ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಪಾಯಿಂಟ್ಸ್ ಟೇಬಲ್​​ನಲ್ಲಿ ಮೊದಲೆರಡು ಸ್ಥಾನಗಳಲ್ಲಿದ್ದು, ಈ ತಂಡಗಳ ವಿರುದ್ಧ ಬೇರೆ ತಂಡಗಳ ಅತ್ಯುತ್ತಮ ಪ್ರದರ್ಶನ ನೀಡಿದರೆ ಮಾತ್ರ ಅಂಕ ಪಟ್ಟಿಯಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ. ಹೀಗಾಗಿ ಮುಂಬರುವ ಸರಣಿಗಳು ಟಾಪ್-5 ತಂಡಗಳಿಗೆ ನಿರ್ಣಾಯಕ ಎಂದೇ ಹೇಳಬಹುದು.

Published On – 9:30 am, Mon, 8 June 26

Source link

ಹೂಳು ತೆಗೆಯುವ ಪರಿಶೀಲನೆ ವೇಳೆ ಮೇಯರ್ ಎದುರು ಚರಂಡಿಗೆ ಹಾರಿದ ಸಾಮಾಜಿಕ ಕಾರ್ಯಕರ್ತ – Kannada News

ಚರಂಡಿ-ಸಾಂದರ್ಭಿಕ ಚಿತ್ರImage Credit source: Free Press Journal

ಥಾಣೆ, ಜೂನ್ 08: ಮೇಯರ್ ಹೂಳು ತೆಗೆಯುವ ಪರಿಶೀಲನೆ ನಡೆಸುತ್ತಿರುವ ವೇಳೆ ಸಾಮಾಜಿಕ ಕಾರ್ಯಕರ್ತನೊಬ್ಬ ಚರಂಡಿಗೆ ಹಾರಿರುವ ಘಟನೆ ಥಾಣೆಯಲ್ಲಿ ನಡೆದಿದೆ. ಭಿವಂಡಿಯಲ್ಲಿ ಚರಂಡಿ(Drain) ಸ್ವಚ್ಛತಾ ಕಾರ್ಯದಲ್ಲಿ ಮೇಯರ್ ನಿರ್ಲಕ್ಷ್ಯ ತೋರಿದ್ದಾರೆ ಎಂದು ಪ್ರತಿಭಟಿಸಿರುವ ವ್ಯಕ್ತಿ ಚರಂಡಿಗೆ ಹಾರಿದ್ದಾರೆ. ಮೇಯರ್ ನಾರಾಯಣ್ ಚೌಧರಿ ಅವರು ಶನಿವಾರ ಇಡೀ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖುದ್ದಾಗಿ ಪ್ರವಾಸ ಮಾಡಿ, ಮಳೆಗಾಲ ಪೂರ್ವ ಸಿದ್ಧತಾ ಕಾಮಗಾರಿಗಳನ್ನು ಅತ್ಯಂತ ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದರು. ಸಾರ್ವಜನಿಕರ ಭಾಗವಹಿಸುವಿಕೆ ಮತ್ತು ಆಡಳಿತದ ತ್ವರಿತ ನಿರ್ಧಾರಗಳಿಂದಾಗಿ ಸದ್ಯಕ್ಕೆ ಸ್ಥಗಿತಗೊಂಡಿದ್ದ ಕಾಮಗಾರಿಗಳಿಗೆ ಭರ್ಜರಿ ವೇಗ ಸಿಕ್ಕಿದೆ.

ವಾರ್ಡ್ ಸಮಿತಿ 1 ರ ಅಡಿಯಲ್ಲಿ ಮೇಯರ್ ನಾರಾಯಣ್ ಚೌಧರಿ ಮತ್ತು ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾಗ, ಸ್ಥಳೀಯ ಸಾಮಾಜಿಕ ಕಾರ್ಯಕರ್ತರೊಬ್ಬರು ಚರಂಡಿ ಸ್ವಚ್ಛತಾ ಕಾರ್ಯದ ಕಡೆಗೆ ಅಧಿಕಾರಿಗಳ ಗಮನ ಸೆಳೆಯಲು ಚರಂಡಿಗೆ ಇಳಿದು ಸಾಂಕೇತಿಕವಾಗಿ ಪ್ರತಿಭಟಿಸಿದರು. ತಕ್ಷಣವೇ ಕಾರ್ಯಪ್ರವೃತ್ತರಾದ ಮೇಯರ್ ಮತ್ತು ಪುರಸಭೆ ಅಧಿಕಾರಿಗಳು, ಆ ಕಾರ್ಯಕರ್ತನ ಜಾಗೃತಿಯನ್ನು ಶ್ಲಾಘಿಸಿ, ಅತ್ಯಂತ ಸೌಹಾರ್ದಯುತವಾಗಿ ಮನವೊಲಿಸಿ ಅವರ ಸಲಹೆಗಳನ್ನು ಸ್ವೀಕರಿಸಿದರು.

ನಾಗರಿಕರು ಮತ್ತು ಆಡಳಿತ ಮಂಡಳಿಯ ನಡುವಿನ ಈ ಮುಕ್ತ ಸಂವಹನವು ಸ್ಥಳದಲ್ಲೇ ಸಮಸ್ಯೆ ಬಗೆಹರಿಯಲು ದಾರಿಯಾಯಿತು. ಸದ್ಯಕ್ಕೆ ಕೇವಲ 34% ಕಾಮಗಾರಿ ಪೂರ್ಣಗೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಿದ ಮೇಯರ್, ಸಾರ್ವಜನಿಕರ ತೆರಿಗೆ ಹಣದ ಪ್ರತಿಯೊಂದು ರೂಪಾಯಿಗೂ ಪಾರದರ್ಶಕತೆ ಇರಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮತ್ತಷ್ಟು ಓದಿ: ಚರಂಡಿಗೊಂದು ‘ನೆಟ್’ ಹಾಕಿದ್ರೆ ಸಾಕು; ಬೆಂಗಳೂರಿನಲ್ಲಿ ಮಳೆಯಿಂದ ಆಗುವ ಸಮಸ್ಯೆ ಸಿಕ್ತು ಸೂಪರ್ ಐಡಿಯಾ!

ಯುದ್ಧೋಪಾದಿಯಲ್ಲಿ ಸ್ವಚ್ಛತೆ: ಆಂತರಿಕ ಮತ್ತು ದ್ವಿತೀಯಕ ಚರಂಡಿಗಳಲ್ಲಿ ಬಾಕಿ ಇರುವ ಎಲ್ಲಾ ಹೂಳು, ಕೆಸರು ಮತ್ತು ಕಸವನ್ನು ಆದ್ಯತೆಯ ಮೇರೆಗೆ ತಕ್ಷಣವೇ ತೆರವುಗೊಳಿಸಲು ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಗುಣಮಟ್ಟದ ಮಾನದಂಡಗಳನ್ನು ಕಾಯ್ದುಕೊಳ್ಳಲು ವಿಫಲರಾಗುವ ಅಥವಾ ವಿಳಂಬ ಮಾಡುವ ಗುತ್ತಿಗೆದಾರರ ಪಾವತಿಗಳನ್ನು ತಡೆಹಿಡಿಯುವುದು ಮತ್ತು ಅವರನ್ನು ಕಪ್ಪುಪಟ್ಟಿಗೆ (Blacklist) ಸೇರಿಸುವುದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ಭರವಸೆ ನೀಡಿದ್ದಾರೆ.

ಮುಂಗಾರು ಮಳೆ ವೇಗವಾಗಿ ಬರುತ್ತಿರುವುದರಿಂದ ಸಾರ್ವಜನಿಕರ ಸುರಕ್ಷತೆಗೆ ನಮ್ಮ ಮೊದಲ ಆದ್ಯತೆ. ನಗರದ ತಗ್ಗು ಪ್ರದೇಶಗಳು ಮತ್ತು ನೀರು ನಿಲ್ಲುವ ಸಾಧ್ಯತೆ ಇರುವ ಸೂಕ್ಷ್ಮ ಸ್ಥಳಗಳನ್ನು ಗುರುತಿಸಿ ಈಗಾಗಲೇ ಪ್ರಮುಖ ಚರಂಡಿಗಳನ್ನು ಯಶಸ್ವಿಯಾಗಿ ಸ್ವಚ್ಛಗೊಳಿಸಲಾಗಿದೆ. ಉಳಿದ ಆಂತರಿಕ ಕಾಮಗಾರಿಗಳನ್ನೂ ನಿಗದಿತ ಅವಧಿಗಿಂತ ಮುಂಚಿತವಾಗಿಯೇ ಮುಗಿಸಲಾಗುವುದು ಎಂದು ಮೇಯರ್ ನಾರಾಯಣ್ ಚೌಧರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version