Belagavi: ಚಲಿಸುತ್ತಿದ್ದ ಲಾರಿ ಏರಿ ಸಿನಿಮಾ ಸ್ಟೈಲ್​​ನಲ್ಲಿ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ – Kannada News | Truck Driver Brutally Attacked in Belagavi Over Road Rage Incident

ಪೊಲೀಸರಿಂದ ಸ್ಥಳ ಪರಿಶೀಲನೆImage Credit source: Tv9 Kannada

ಬೆಳಗಾವಿ, ಫೆಬ್ರವರಿ 04: ಚಲಿಸುತ್ತಿದ್ದ ಲಾರಿ ಏರಿ ಸಿನಿಮಾ ಸ್ಟೈಲ್​​ನಲ್ಲಿ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯ ಶಂಕರಾನಂದ ಪುತ್ಥಳಿ ಬಳಿ ನಡೆದಿದೆ. ರುಕ್ಮಿಣಿ ನಗರದ ನಿವಾಸಿ ಅಯಾಜ್ ಸವಣೂರ(36) ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಎಂಟು ಜನರಿಂದ ಮಾರಣಾಂತಿಕ ಹಲ್ಲೆ ಆರೋಪ ಕೇಳಿಬಂದಿದೆ. ಮೂಲಗಳ ಪ್ರಕಾರ ಹಿಂಡಲಗಾ ಬಳಿ ನಡೆದ ಅಪಘಾತವೇ ಘಟನೆಗೆ ಕಾರಣ ಎನ್ನಲಾಗಿದೆ. ಆ್ಯಕ್ಸಿಡೆಂಟ್ ಮಾಡಿ ಲಾರಿ ನಿಲ್ಲಿಸದೇ ಬಂದ ಕಾರಣ, ಬೆನ್ನುಹತ್ತಿ ಬಂದು ಚಾಲಕನ ಮೇಲೆ ನಡೆಸಿರುವ ಮಾಹಿತಿ ಇದೆ.

ಲಾರಿ ಚಾಲಕ ಅಯಾಜ್ ಸವಣೂರ ತೊಡೆ, ಕಿವಿ, ಬೆನ್ನು ಮತ್ತು ತಲೆ ಭಾಗಕ್ಕೆ ದುಷ್ಕರ್ಮಿಗಳು ಚಾಕುವಿನಿಂದ ಮನಬಂತೆ ಇರಿದಿದ್ದು, ಲಾರಿ ಮೇಲೂ ಕಲ್ಲು ತೂರಾಟ ನಡೆಸಿ, ಗಾಜು ಒಡೆದು ಅಟ್ಟಹಾಸ ಮೆರೆದಿದ್ದಾರೆ. ಗಂಭೀರ ಗಾಯಗೊಂಡ ಅಯಾಜ್​​ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ಘಟನಾ ಸ್ಥಳಕ್ಕೆ ಬೆಳಗಾವಿ ಪೊಲೀಸರ ತಂಡ ಮತ್ತು ಸೋಕೋ ಟೀಮ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಆಸ್ತಿಗಾಗಿ ಒಡಹುಟ್ಟಿದವನನ್ನೇ ಕೊಂದ ಪಾಪಿ; ಒಂದೂವರೆ ಎಕರೆ ಜಮೀನಿಗಾಗಿ ಹರಿದ ನೆತ್ತರು

ಕೇಸರಿ ಧ್ವಜದ ವಾಟ್ಸ್ಯಾಪ್​ ಸ್ಟೇಟಸ್ ವಿಚಾರಕ್ಕೆ ಹಲ್ಲೆ

ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಪುಟ್ಪಾಕ್ ಗ್ರಾಮದಲ್ಲಿ ಕೇಸರಿ ಧ್ವಜದ ವಾಟ್ಸ್ಯಾಪ್​ ಸ್ಟೇಟಸ್ ವಿಚಾರಕ್ಕೆ ತಾಯಿ ಮತ್ತು ಮಗನ ಮೇಲೆ ಅನ್ಯ ಕೋಮಿನವರಿಂದ ಹಲ್ಲೆ ನಡೆದಿದೆ. ಮಸೀದಿ ಮೇಲೆ ಕೇಸರಿ ಧ್ವಜ ಕಟ್ಟಿದ ರೀತಿಯಲ್ಲಿ ಸ್ಟೇಟಸ್ ಹಾಕಿದ ಆರೋಪ ಹಿನ್ನೆಲೆ ಮನೆಗೆ ಹೋಗಿ ಸ್ಟೇಟಸ್ ಹಾಕಿದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಮಗನನ್ನ ಹೊಡೆದಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ತಾಯಿ ಮೇಲೆಯೂ ಹಲ್ಲೆ ನಡೆಸಲಾಗಿದೆ. ಶಿವ ಮಾಲಾಧಾರಿಗಳ ಕಾರ್ಯಕ್ರಮಕ್ಕಾಗಿ ಕೇಸರಿ ಧ್ವಜ ಹಾಕಲಾಗಿತ್ತು. ಇದೇ ದೃಶ್ಯಗಳನ್ನು ಎಡಿಟ್ ಮಾಡಿ ಯುವಕ ಸ್ಟೇಟಸ್ ಹಾಕಿದ್ದ. ಇನ್ನು ಹಲ್ಲೆ ಖಂಡಿಸಿ ಪ್ರತಿಭಟನೆ ಪುಟ್ಪಾಕ್ ಗ್ರಾಮಸ್ಥರು ಹಾಗೂ ಶಿವಮಾಲಾಧಾರಿಗಳು ಕೈಯಲ್ಲಿ ಶಿವ ಪಾರ್ವತಿ ಹಾಗೂ ಅಂಬೇಡ್ಕರ್ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಗುರುಮಠಕಲ್ ಠಾಣೆ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮ್ಯಾಂಚೆಸ್ಟರ್​​ನಲ್ಲಿ ಲಘು ವಿಮಾನ ಪತನ, ಇಬ್ಬರು ಸಾವು – Kannada News | Light Aircraft Goes Down in Greater Manchester, Leaving Two Dead

ಮ್ಯಾಂಚೆಸ್ಟರ್, ಫೆಬ್ರವರಿ 04: ಗ್ರೇಟರ್​ ಮ್ಯಾಂಚೆಸ್ಟರ್​ನಲ್ಲಿ ಲಘು ವಿಮಾನ ಪತನಗೊಂಡಿದ್ದು, ಇಬ್ಬರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. 11.00 ಗಂಟೆಯ ಸುಮಾರಿಗೆ ರೋಚ್‌ಡೇಲ್‌ನ ಲಿಟಲ್‌ಬರೋದಲ್ಲಿರುವ ಕೃಷಿ ಭೂಮಿಗೆ ವಿಮಾನ ಅಪ್ಪಳಿಸಿತ್ತು. ಕೂಡಲೇ ಅಲ್ಲಗೆ ಪೊಲೀಸರು, ಅಗ್ನಿಶಾಮಕ ದಳ ಮತ್ತು ಏರ್ ಆಂಬ್ಯುಲೆನ್ಸ್ ಅನ್ನು ಕಳುಹಿಸಲಾಯಿತು. ಪತನಗೊಂಡ ವಿಮಾನವು ಸಣ್ಣ ಸಿರಸ್ ಎಸ್‌ಆರ್ 20 ಆಗಿದ್ದು, ಬರ್ಮಿಂಗ್ಹ್ಯಾಮ್‌ನಿಂದ ಹೊರಟಿತ್ತು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Daily Devotional: ಯಾವ ಬೆರಳಿನಿಂದ ಯಾವ ವಿಧವಾಗಿ ಕುಂಕುಮ ಇಡಬೇಕು? – Kannada News | Daily Devotional: Understanding the Right Finger for Kumkum and Vibhuti

ಬೆಂಗಳೂರು, ಫೆಬ್ರುವರಿ​ 04: ನಮ್ಮ ದೈನಂದಿನ ಪೂಜೆಗಳಲ್ಲಿ ಮತ್ತು ಸಮಾಜದಲ್ಲಿ ಕುಂಕುಮ ಹಾಗೂ ವಿಭೂತಿಗೆ ವಿಶೇಷ ಸ್ಥಾನವಿದೆ. ಇದು ಕೇವಲ ಒಂದು ಧಾರ್ಮಿಕ ಸಂಪ್ರದಾಯವಲ್ಲ, ಬದಲಿಗೆ ನಮ್ಮ ಬಾಂಧವ್ಯಗಳನ್ನು ಬಲಪಡಿಸುವ ಮತ್ತು ಶುಭಫಲಗಳನ್ನು ತರುವ ಒಂದು ಮಾರ್ಗವಾಗಿದೆ. ನಾವು ಕುಂಕುಮವನ್ನು ಹಚ್ಚುವಾಗ ಯಾವ ಬೆರಳನ್ನು ಬಳಸಬೇಕು ಎಂಬುದು ಅನೇಕರಿಗೆ ತಿಳಿದಿಲ್ಲ. ನಮ್ಮ ಬಲಗೈಯ ಐದು ಬೆರಳುಗಳು ಐದು ವಿಭಿನ್ನ ಗ್ರಹಗಳನ್ನು ಪ್ರತಿನಿಧಿಸುತ್ತವೆ. ಶುಕ್ರ, ಗುರು, ಶನಿ, ರವಿ ಮತ್ತು ಬುಧ ಗ್ರಹಗಳ ಪ್ರತೀಕವಾಗಿರುವ ಈ ಬೆರಳುಗಳ ಸರಿಯಾದ ಬಳಕೆಯಿಂದ ನಾವು ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸಬಹುದು ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

ಸ್ವತಃ ಕುಂಕುಮ ಅಥವಾ ವಿಭೂತಿಯನ್ನು ಹಚ್ಚಿಕೊಳ್ಳುವಾಗ ಮಧ್ಯದ ಬೆರಳು (ಶನಿಯ ಬೆರಳು) ಬಳಸುವುದರಿಂದ ಶನಿಯ ಕಾಟ ಕಡಿಮೆಯಾಗಿ, ಆಯುಷ್ಯ ವೃದ್ಧಿಯಾಗುತ್ತದೆ ಹಾಗೂ ಆರೋಗ್ಯ ಮತ್ತು ಆರ್ಥಿಕ ಸಮಸ್ಯೆಗಳು ದೂರವಾಗುತ್ತವೆ. ಮುತ್ತೈದೆಯರಿಗೆ, ಹಿರಿಯರಿಗೆ, ಅತಿಥಿಗಳಿಗೆ ಅಥವಾ ಮಕ್ಕಳಿಗೆ ಕುಂಕುಮ ಹಚ್ಚುವಾಗ ಹೆಬ್ಬೆರಳನ್ನು ಬಳಸಬೇಕು. ಇದು ಬಾಂಧವ್ಯಗಳನ್ನು ವೃದ್ಧಿಸುತ್ತದೆ ಎಂದು ಗುರೂಜಿ ಹೇಳಿದ್ದಾರೆ.

 

 

 

 

Source link

‘ಧುರಂಧರ್ 2’ ಪೋಸ್ಟರ್​ಗೆ ಯಶ್ ಸಿನಿಮಾ ಸ್ಫೂರ್ತಿ? ಟ್ರೆಂಡ್ ಸೆಟ್ಟರ್ ಆದ ರಾಕಿಭಾಯ್ – Kannada News | KGF Inspires Dhurandhar 2 Poster: Yash’s Impact as a Trendsetter

ಈಗ ಎಲ್ಲೆಲ್ಲೂ ‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಜೋರಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವರು ‘ಟಾಕ್ಸಿಕ್’ ಸಿನಿಮಾ (Toxic Movie) ಪರ ವಹಿಸಿಕೊಂಡು ಬಂದರೆ ಇನ್ನೂ ಕೆಲವರು ‘ಧರುಂಧರ್ 2’ ಚಿತ್ರದ ಪರವಾಗಿ ಮಾತನಾಡುತ್ತಿದ್ದಾರೆ. ಹೀಗಿರುವಾಗಲೇ ‘ಧುರಂಧರ್ 2’ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಯಶ್ ನಟನೆಯ ‘ಕೆಜಿಎಫ್ ಚಾಪ್ಟರ್ 2’ ಚಿತ್ರದಿಂದ ಸ್ಫೂರ್ತಿ ಪಡೆದು ಇದನ್ನು ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.

‘ಕೆಜಿಎಫ್’ ಹಾಗೂ ‘ಕೆಜಿಎಫ್ ಚಾಪ್ಟರ್ 1’ ಚಿತ್ರದಲ್ಲಿ ರಕ್ತದ ಹೊಳೆ ಹರಿದಿದೆ. ಇದನ್ನು ಸೂಚ್ಯವಾಗಿ ತೋರಿಸಲು ಕೆಜಿಎಫ್ ಪೋಸ್ಟರ್​​​ನಲ್ಲಿ ರಕ್ತದ ಬಣ್ಣದ ಬ್ಯಾಕ್​ಗ್ರೌಂಡ್ ನೀಡಲಾಗಿತ್ತು. ಸಿನಿಮಾದ ಕಥೆಗೆ ಪೋಸ್ಟರ್ ಸರಿಯಾಗಿ ಹೊಂದಿಕೆ ಆಗಿತ್ತು. ಈಗ ‘ಧುರಂಧರ್ 2’ ಕೂಡ ಇದನ್ನು ಫಾಲೋ ಮಾಡಿದೆ. ‘ಧುಂಧರ್ 2’ ಚಿತ್ರದಲ್ಲಿ ರಿವೇಂಜ್ ಇರುವುದರಿಂದ, ಈ ಪೋಸ್ಟರ್​​​ ಕೂಡ ಕೆಂಪು ಬಣ್ಣದಲ್ಲೇ ಬಂದಿದೆ. ಇದು ಚರ್ಚೆಯ ಕೇಂದ್ರಬಿಂದು ಆಗಿದೆ. ಯಶ್ ಅವರನ್ನು ಅನೇಕರು ಟ್ರೆಂಡ್ ಸೆಟ್ಟರ್ ಎಂದು ಕರೆದಿದ್ದಾರೆ. ‘ಧುರಂಧರ್ 2’ ಚಿತ್ರವನ್ನು ಟ್ರೆಂಡ್ ಫಾಲೋವರ್ ಎಂದು ಕರೆಯಲಾಗಿದೆ.

ಸಿನಿಮಾ ವಿಷಯದಲ್ಲಿ ಯಶ್ ಅವರು ತಮ್ಮನ್ನು ತಾವು ಟ್ರೆಂಡ್ ಸೆಟ್ಟರ್ ಆಗಿ ಮಾಡಿಕೊಳ್ಳಲು ಇಷ್ಟಪಡುತ್ತಾರೆ. ‘ಕೆಜಿಎಫ್’ ರೀತಿಯ ಗ್ಯಾಂಗ್​​ಸ್ಟರ್ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿರಲಿಲ್ಲ. ಈ ಕಾರಣದಿಂದಲೇ ಆ ಸಿನಿಮಾ ಸೂಪರ್ ಹಿಟ್ ಆಯಿತು. ‘ಕೆಜಿಎಫ್ 2’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ‘ಕೆಜಿಎಫ್’ ಶೈಲಿಯನ್ನು ಅನುಸರಿಸಿ ಅನೇಕ ಸಿನಿಮಾಗಳು ಬಂದವು. ‘ಕೆಜಿಎಫ್’ ಚಿತ್ರದ ಕಥೆಯ ಪ್ಯಾಟರ್ನ್​​ನ ‘ಪುಷ್ಪ’ದವರೂ ಫಾಲೋ ಮಾಡಿದ್ದಾರೆ ಎಂಬ ಮಾತು ಕೂಡ ಇದೆ.

ಇದನ್ನೂ ಓದಿ: ‘ಧುರಂಧರ್ 2’ ಟೀಸರ್ ನೋಡಿದವರಿಗೆ ಭಾರೀ ನಿರಾಸೆ; ರಿಲೀಸ್ ದಿನಾಂಕವೂ ರಿವೀಲ್

‘ಧುರಂಧರ್ 2’ ಚಿತ್ರದ ಟೀಸರ್ ಫೆಬ್ರವರಿ 3ರಂದು ರಿಲೀಸ್ ಆಯಿತು. ಈ ಟೀಸರ್ ಅಷ್ಟಾಗಿ ಗಮನ ಸೆಳೆದಿಲ್ಲ. ‘ಧುರಂಧರ್’ ಸಿನಿಮಾ ಕೊನೆಯಲ್ಲಿ ಬರೋ ಎಂಡ್ ಕಾರ್ಡ್​​ ಅನ್ನೇ ಟೀಸರ್ ಮಾಡಿ ಬಿಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 6:58 am, Wed, 4 February 26

Source link

Horoscope Today 04 February​: ಇಂದು ಈ ರಾಶಿಯವರು ವಾಹನ ಚಾಲಾಯಿಸುವಾಗ ಎಚ್ಚರದಿಂದಿರಿ!

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 04 ಫೆಬ್ರುವರಿ​ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಬುಧವಾರವಾಗಿದ್ದು, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘಮಾಸದ ಕೃಷ್ಣ ಪಕ್ಷದ ತದಿಗೆಯಾಗಿದ್ದು, ಬುಧವಾರವಾಗಿದೆ. ಚಂದ್ರನು ಸಿಂಹ ರಾಶಿಯ ಪುಬ್ಬಾ ನಕ್ಷತ್ರದಲ್ಲಿ ಸಂಚರಿಸುತ್ತಿದ್ದಾನೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

ಇಂದು ವಿಶ್ವ ಕ್ಯಾನ್ಸರ್ ದಿನವಾಗಿದ್ದು, ಕ್ಯಾನ್ಸರ್ ಕುರಿತು ಅರಿವು ಮೂಡಿಸಲು, ಪೀಡಿತರಿಗೆ ಸಹಾಯ ಮಾಡಲು ಮತ್ತು ಮಾನಸಿಕ ಧೈರ್ಯ ತುಂಬಲು ಗುರೂಜಿ ಕರೆ ನೀಡಿದ್ದಾರೆ. ಶೃಂಗೇರಿ ಹಾಗೂ ಹೆಚ್.ಡಿ.ಕೋಟೆಯಲ್ಲಿ ರಥೋತ್ಸವಗಳು ನಡೆಯುತ್ತಿವೆ. ಮೇಷದಿಂದ ಮೀನದವರೆಗಿನ ರಾಶಿಗಳಿಗೆ ವೃತ್ತಿ, ವ್ಯವಹಾರ, ಶಿಕ್ಷಣ, ಕುಟುಂಬ, ಆರೋಗ್ಯ ಮತ್ತು ಹಣಕಾಸು ಮುಂತಾದ ಕ್ಷೇತ್ರಗಳಲ್ಲಿನ ಸಂಭವನೀಯ ಫಲಗಳನ್ನು ವಿವರಿಸಲಾಗಿದ್ದು, ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಜಪಿಸಬೇಕಾದ ಮಂತ್ರಗಳ ಕುರಿತು ಬಸವರಾಜ ಗುರೂಜಿ ಮಾಹಿತಿ ನೀಡಿದ್ದಾರೆ.

 

 

Source link

ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧದಲ್ಲಿ ‘ದೋಸ್ತಿ’ ನಾಯಕರಿಂದ ಅಹೋರಾತ್ರಿ ಧರಣಿ

ಬೆಂಗಳೂರು, ಫೆಬ್ರವರಿ 04: ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪಗಳನ್ನು ಮುಂದಿಟ್ಟುಕೊಂಡು, ಸಚಿವ ಆರ್.ಬಿ.ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸಿವೆ. ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಶಾಸಕರು ಜಾಗಟೆ ಬಾರಿಸಿ, ಹಾಡು ಹಾಡಿ ವಿಭಿನ್ನವಾಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆ ಆವರಣದಲ್ಲೇ ರಾತ್ರಿ ಊಟ ಮಾಡಿ, ವಿಶ್ರಮಿಸುವ ಮೂಲಕ ಸರ್ಕಾರದ ವಿರುದ್ಧ ನಾಯಕರು ಕಿಡಿಕಾರಿದ ಪ್ರಸಂಗ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಉಡುಪಿಯ ಹೆಜಮಾಡಿ ಟೋಲ್ ಬಳಿ ಮದ್ಯದ ನಶೆಯಲ್ಲಿ ಕೇರಳ ವಿದ್ಯಾರ್ಥಿಗಳ ಹುಚ್ಚಾಟ: ವಿಡಿಯೋ ವೈರಲ್​ – Kannada News | Kerala Students Udupi Trip Turns Chaotic with Hejamadi Toll Disturbance

ಉಡುಪಿ, ಫೆಬ್ರವರಿ 04: ಕೇರಳದಿಂದ ಉಡುಪಿಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಗುಂಪೊಂದು ಹೆಜಮಾಡಿ ಟೋಲ್ ಬಳಿ ಪುಂಡಾಟ ನಡೆಸಿರುವ ಘಟನೆ ನಡೆದಿದೆ. ಎರಡು ಬಸ್ಸುಗಳಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ಟೋಲ್ ಗೇಟ್ ಬಳಿ ಬಸ್ ನಿಲ್ಲಿಸಿ ಮದ್ಯಸೇವಿಸಿ, ರಸ್ತೆಯ ಮಧ್ಯದಲ್ಲಿ ಪಟಾಕಿ ಸಿಡಿಸಿ ಹುಚ್ಚಾಟ ಮೆರೆದಿದ್ದಾರೆ. ಇವರ ಈ ಕಿರಿಕ್ ಮತ್ತು ಪುಂಡಾಟದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿವೆ. ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಇಂತಹ ಅನಗತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಇತರ ಪ್ರಯಾಣಿಕರಿಗೆ ತೊಂದರೆ ಉಂಟುಮಾಡುವುದಲ್ಲದೆ, ಸ್ಥಳೀಯ ಕಾನೂನು ಸುವ್ಯವಸ್ಥೆಗೂ ಭಂಗ ತರುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 4ರ ದಿನಭವಿಷ್ಯ

ಈ ದಿನ ನಿಮ್ಮಿಂದ ಸಾಧ್ಯವಾದಲ್ಲಿ ಗ್ರಂಥ ದಾನವನ್ನು ಮಾಡಿ. ಉದಾಹರಣೆಗೆ ರಾಮಾಯಣ, ಮಹಾಭಾರತ, ಭಗವದ್ಗೀತೆ ಹೀಗೆ ಗ್ರಂಥವೊಂದನ್ನು ದಾನ ಮಾಡಿ. ಇನ್ನು ಸಾರ್ವಜನಿಕ ಸಾರಿಗೆಯನ್ನು ಬಳಸುವವರಾಗಿದ್ದಲ್ಲಿ ಮುಖ್ಯವಾದ ಡಾಕ್ಯುಮೆಂಟ್ ಗಳು, ಗ್ಯಾಜೆಟ್ ಗಳನ್ನು ತೆಗೆದುಕೊಂಡುವಾಗ ಜಾಗ್ರತೆಯಿಂದ ಇರಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಕ್ಲಿಕ್ ಆಗಿಯೇ ಆಗುತ್ತದೆ ಎಂಬ ಲೆಕ್ಕಾಚಾರದಲ್ಲಿ ನೀವು ಆರಂಭಿಸಿದ ವೃತ್ತಿ- ವ್ಯಾಪಾರ ಅಂದುಕೊಂಡ ದಿಕ್ಕಿನಲ್ಲಿಯೇ ಸಾಗಲಿದೆ. ಹಣಕಾಸಿನ ಹೊಂದಾಣಿಕೆ ಮಾಡಬೇಕು ಎಂದಿದ್ದಲ್ಲಿ ಅದು ಕೂಡ ಸಲೀಸಾಗಿ ಆಗಲಿದೆ. ನೀವು ಮುಂಜಾಗ್ರತೆಯಿಂದ ಹಣ ಉಳಿತಾಯ ಮಾಡಿಕೊಂಡು ಬಂದಿದ್ದು ಅಂತೂ ಪ್ರಯೋಜನಕ್ಕೆ ಬಂತು ಎಂಬ ಸಮಾಧಾನ ಈ ದಿನ ನಿಮಗೆ ಸಿಗಲಿದೆ

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಗ್ಯಾರೇಜ್ ನಡೆಸುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ವಾಹನಗಳ ಬಿಡಿ ಭಾಗಗಳ ಹೋಲ್ ಸೇಲ್ ಮಾರಾಟ ಮಾಡುವಂಥವರಿಗೆ ವಿಸ್ತರಣೆಗೆ ಅವಕಾಶಗಳು ತೆರೆದುಕೊಳ್ಳಲಿವೆ. ರಿಯಾಯಿತಿಯಲ್ಲಿ ಸಿಗುತ್ತಿದೆ ಎಂಬ ಕಾರಣಕ್ಕೋ ಅಥವಾ ಬೇರೆ ಯಾವುದೋ ಆಫರ್ ಗಳಿವೆ ಅಂತಲೋ ವಾಷಿಂಗ್ ಮಶೀನ್, ರೆಫ್ರಿಜರೇಟ್, ಟಿವಿ ಇಂಥವುಗಳನ್ನು ಖರೀದಿ ಮಾಡುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ನಿಮಗೆ ತುಂಬ ಚೆನ್ನಾಗಿ ಗೊತ್ತಿರುವಂಥ- ಅನುಭವ ಇರುವಂಥ ವಿಷಯಗಳಲ್ಲಿಯೇ ನಿರೀಕ್ಷಿತ ಮಟ್ಟದ ಫಲಿತಾಂಶ ಪಡೆದುಕೊಳ್ಳಲು ಹರಸಾಹಸ ಪಡುವಂತೆ ಆಗಲಿದೆ. ನಿಮ್ಮ ಸುತ್ತಮುತ್ತ ಏನೋ ಬದಲಾವನೆ ಆಗುತ್ತಿದೆ ಎಂಬುದು ಬಲವಾಗಿ ಮನಸ್ಸಿನಲ್ಲಿ ಬೇರೂರಲಿದೆ. ಉದ್ಯೋಗ ಅಥವಾ ವೃತ್ತಿಗೆ ಸಂಬಂಧಿಸಿದಂತೆ ಕೆಲವು ಕೋರ್ಸ್ ಗಳಿಗೆ ಸೇರ್ಪಡೆ ಆಗುವುದಕ್ಕೆ ಆಲೋಚನೆ ಮಾಡಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Source link

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಪ್ರೀತಿ ಪರೀಕ್ಷೆಯ ಕಾಲ – Kannada News | Horoscope 04 February 2026; Dina Rashi Bhavishya Today, Checkout the details here

ಮೇಷ ರಾಶಿ:

ಆದಾಯಕ್ಕೆ ಮೂಲವಾದುದನ್ನು ಹುಡುಕಿಕೊಳ್ಳುವುದು ಭವಿಷ್ಯ ದೃಷ್ಟಿಯಿಂದ ಉತ್ತಮ. ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯುವುದು ಕಷ್ಟವಾಗಬಹುದು. ಆದಾಯದ ಮೂಲದಿಂದ ನಿಮಗೆ ನೆಮ್ಮದಿ ಸಿಗುವುದು. ನಿಮಗಾದ ನೋವಿಗೆ ಯಾರ ಸಾಂತ್ವನವೂ ಉಪಯೋಗಕ್ಕೆ ಬಾರದು. ಶತ್ರುಗಳ ಅನ್ಯಾಯಕ್ಕೆ ಸಾಕ್ಷಿಯು ಸಿಗಬಹುದು. ನಕಾರಾತ್ಮಕತೆಯನ್ನು ಬುದ್ಧಿಪೂರ್ವಕವಾಗಿ ಹಿಮ್ಮೆಟ್ಟಿಸಿ. ನಿಮ್ಮ ಮನೋಬಲವು ಹೆಚ್ಚಾಗಿ ಉತ್ಸಾಹದಿಂದ ಇರುವಿರಿ. ಇನ್ನೊಬ್ಬರ ಅನುಭವವನ್ನು ನೀವು ಪಾಠವಾಗಿಸಿಕೊಳ್ಳಿ.

ವೃಷಭ ರಾಶಿ:

ಹೊಸ‌ ಉದ್ಯಮವನ್ನು ಆರಂಭಿಸಲು ನಿಮಗೆ ಧೈರ್ಯ ಸಾಲದು. ಕೆಲವೊಮ್ಮೆ ನಿಮ್ಮ ಸ್ವಭಾವವು ನಾಟಕೀಯದಂತೆ ತೋರುವುದು. ಅತಿಥಿಗಳ ಜೊತೆ ಸಲ್ಪ ಸಮಯ ಕಳೆಯಬೇಕಾಗುವುದು. ಮಕ್ಕಳಿಂದ ನೀವು ಸ್ವತಂತ್ರರಾಗಲು ಬಯಸುವಿರಿ. ಇಂದು ನಿಮ್ಮ ವೈಯಕ್ತಿಕ ಕೆಲಸಗಳಿಗೆ ತೊಂದರೆ ಬರುವುದು. ಇಲ್ಲದೆ ಸಮಸ್ಯೆಯನ್ನು ಸೃಷ್ಟಿಸಿಕೊಳ್ಳಲಿದ್ದೀರಿ. ಭೂಮಿಯ ವ್ಯವಹಾರದಲ್ಲಿ ನೀವು ಜಯಶಾಲಿಯಾಗುವಿರಿ. ಒಬ್ಬರ ಬಳಿಯೇ ಎಲ್ಲವನ್ನೂ ಹೇಳಿಕೊಳ್ಳಿ.

ಮಿಥುನ ರಾಶಿ:

ನಿಮ್ಮಲ್ಲಿ ಎಷ್ಟೇ ಆತ್ಮವಿಶ್ವಾಸವಿದ್ದರೂ ಕೆಲಸಗಳ ಒತ್ತಡದಲ್ಲಿ ಗೊಂದಲದಲ್ಲಿ ಸಿಕ್ಕಿಕೊಳ್ಳುವಿರಿ. ನಿಮ್ಮ ಆಸೆಗಳನ್ನು ಯಾವುದೇ ಪೂರ್ವಾಪರ ವಿಚಾರವಿಲ್ಲದೇ ಪೂರೈಸಿಕೊಳ್ಳುವಿರಿ. ಕುಟುಂಬ ಸದಸ್ಯರ ಮೇಲೆ ವಿನಾಕಾರಣ ಸಿಟ್ಟಾಗುವಿರಿ. ಮಕ್ಕಳ ಮೇಲೇ ಅಕ್ಕರೆ ಇರುವುದು. ಹೇಗಾದರೂ ಮಾಡಿ ಬೆಳೆಯಬೇಕು ಎನ್ನುವ ಬಯಕೆ ಅತಿಯಾಗಿರುವುದು. ಅಸಹಾಯಕತೆಯು ಸಿಟ್ಟಾಗಿ ಪರಿಣಮಿಸಬಹುದು.

ಕರ್ಕಾಟಕ ರಾಶಿ:

ಸಲ್ಲದ ಆಸೆಗಳಿಂದ ನಿಮಗೆ ಬಂಧನವನ್ನು ಹಾಕಿಕೊಳ್ಳುವಿರಿ. ಎಂದೋ ಬಯಸಿದ ವಸ್ತುವುದು ಇಂದು ನಿಮಗೆ ಅನಿರೀಕ್ಷಿತವಾಗಿ ಸಿಗುವುದು. ಸಂಗಾತಿಯ ಆಯ್ಕೆಯಲ್ಲಿ ಗೊಂದಲ ಇರುವುದು. ಯಾರಿಗಾದರೂ ನಿಜವನ್ನು ತಿಳಿಸಬೇಕಾದರೆ ಮನಸ್ಸಿಗೆ ನೋವಾಗದಂತೆ ತಿಳಿಸಿ. ಎಂದೋ ಆದ ಘಟನೆಯನ್ನು ಮತ್ತೆ ನೆನಪಿಸಿಕೊಂಡು ಮನಸ್ತಾಪವನ್ನು ತಂದುಕೊಳ್ಳುವಿರಿ. ಅಧಿಕಾರಿಗಳಿಂದ ಆರ್ಥಿಕತೆಯ ಪರಿಶೀಲನೆ ನಡೆಯುವುದು. ಅಪರಿಚಿತ ವ್ಯಕ್ತಿಗಳ ಜೊತೆ ಯಾವ ವ್ಯವಹಾರವನ್ನು ಕಡಮೆ‌ ಮಾಡಿ.

ಸಿಂಹ ರಾಶಿ:

ದೌರ್ಭಾಗ್ಯಗಳು ನಿಮ್ಮನ್ನು ಯಾವುದಾದರೂ ಒಂದು ರೀತಿಯಲ್ಲಿ ನಿಮ್ಮನ್ನು ಸೇರಬಹುದು.‌ ಉದ್ಯೋಗದ ಕಾರಣಕ್ಕೆ ಪ್ರವಾಸ ಮಾಡಬೇಕಾಗಬಹುದು. ನಿಮ್ಮ ಆದಾಯಕ್ಕೆ ತಕ್ಕಂತೆ ಜೀವನವಿರಲಿದೆ. ನೀವೇ ಆಶ್ಚರ್ಯವಾಗುವಂತೆ ಆಕರ್ಷಕವಾಗಿ‌ ನೀವು ಇಂದು ಕಾಣಲಿದ್ದೀರಿ. ದುಃಖವನ್ನು ಆಪ್ತರ ಬಳಿ ಮಾತ್ರ ಹಂಚಿಕೊಳ್ಳಿ. ನಿಮ್ಮ ಮಾತಿಗೆ ಕೆಲವರ ಬೆಂಬಲವು ನಿಮಗೆ ಖುಷಿಕೊಡುವುದು. ಶ್ರಮಪಟ್ಟು ಆರಂಭಿಸಿದ ಕಾರ್ಯಗಳು ಪಿತೂರಿಯಿಂದ ಅರ್ಧಕ್ಕೆ ಸ್ಥಗಿತವಾಗಬಹುದು.

ಕನ್ಯಾ ರಾಶಿ:

ನಿಮ್ಮ ಸಹಕಾರವನ್ನು ಬಂಧುಗಳು ಮರೆತು ವರ್ತಿಸುತ್ತಾರೆ. ಪ್ರಯಾಣದಲ್ಲಿ ಸುರಕ್ಷತೆಯ ಬಗ್ಗೆ ಗಮನವಿರಲಿ. ಹಣದ ಕೊರೆತೆ ಇಲ್ಲದಿದ್ದರೂ ಹಳೆಯ ಮನೆಯನ್ನೇ ಅವಶ್ಯಕತೆಗೆ ಸರಿಯಾಗಿ ಗಟ್ಟಿ ಮಾಡಿಕೊಳ್ಳಿ. ಮಿತಿಯಲ್ಲಿ ನಿಮ್ಮ ಮಾತು ಇರಬೇಕಾಗುವುದು. ವಿದೇಶೀಯ ವಸ್ತುಗಳ ಬಳಕೆಯನ್ನು ಮಾಡುವುದು ಕಾರಣಾಂತರಗಳಿಂದ ಇಷ್ಟವಾಗದು. ಸಂಪನ್ಮೂಲ ವ್ಯಕ್ತಿಗಳಾಗಿ ದೂರದ ಊರಿಗೆ ಹೋಗುವಿರಿ.

ತುಲಾ ರಾಶಿ:

ಉನ್ನತ ಮಟ್ಟದ ಕಾರ್ಯಕ್ಕೆ ಪರಿಚಿತರ ಬೆಂಬಲವನ್ನು ಪಡೆಯುವಿರಿ. ಕೆಲವನ್ನು ನೀವು ಬುದ್ಧಿಪೂರ್ವಕವಾಗಿ ಮಾಡುವಿರಿ. ಬೇರೆಯವರ ಕೆಳಗೆ ಕೆಲಸಮಾಡಲು ಇಷ್ಟವಾಗದು. ಕುಟುಂಬದಲ್ಲಿ ನಡೆಯುವ ಕಾರ್ಯಗಳಿಗೆ ನಿಮ್ಮಿಂದ ಹೆಚ್ಚಿನ ಹಣ ಖರ್ಚು ಮಾಡುವ ಸನ್ನಿವೇಶವು ಬರಬಹುದು. ಎಲ್ಲ ಕೆಲಸಕ್ಕೂ ಬೇರೆಯವರನ್ನು ಅವಲಂಬಿಸಿ ಆರ್ಥಿಕ ನಷ್ಟವನ್ನು ಕಾಣಬೇಕಾಗಬಹುದು. ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಯಾರಿಗೂ ಬಿಡುವುದಿಲ್ಲ.

ವೃಶ್ಚಿಕ ರಾಶಿ:

ನಿಮ್ಮ ಮಾತಿನಿಂದ‌ ಶತ್ರುಗಳು ಹುಟ್ಟಿಕೊಳ್ಳಬಹುದು. ನಿಮ್ಮ ಜೀವನ ಶೈಲಿ ವಿಶೇಷ ರೀತಿಯಲ್ಲಿ ಕಾಣಿಸಬಹುದು. ಮೇಲಿಂದ‌ ಮೇಲೆ‌ ಬರುತ್ತಿರುವ ಆರೋಗ್ಯದ ತೊಂದರೆಯು ನಿಮಗೆ ಅಸತಂಕವನ್ನು ಉಂಟುಮಾಡಬಹುದು. ಬೇಡವಾದುದನ್ನು ಕಳೆದುಕೊಳ್ಳಲು ಪ್ರಯತ್ನಿಸಿ. ಶತ್ರುವನ್ನು ಉಪಾಯದಿಂದ ಗೆಲ್ಲುವ ತಂತ್ರ ಬಳಸಿ. ನಿಧಾನವಾಗಿ ವರ್ಧಿಸುತ್ತಿರುವ ಆದಾಯದಿಂದ ನಿಮ್ಮ ಆರ್ಥಿಕ ಪರಿಸ್ಥಿತಿಯು ಸುಧಾರಿಸುವುದು.

ಧನು ರಾಶಿ:

ರಾಜಕೀಯದವರು ತಮ್ಮ ಹೇಳಿಕೆಗಳಿಗೆ ಸ್ಪಷ್ಟತೆಯನ್ನು ನೀಡುವರು. ಸ್ನೇಹಿತರ ನಿರೀಕ್ಷೆಯಲ್ಲಿ ಹೆಚ್ಚಿನ‌ ಸಮಯವು ಕಳೆದುಹೋಗುವುದು. ಅಪರಿಚಿತರ ಮೂಲಕ ನಿಮ್ಮ ಹಣವನ್ನು ಕಳೆದುಕೊಳ್ಳಲಿದ್ದೀರಿ. ವೃತ್ತಿಯಲ್ಲಿ ನಿಮಗೆ ವಿರಾಮವು ಇಂದು ಸಿಗದೇ ನಿಮ್ಮ ಸ್ವಂತ ಕಾರ್ಯವನ್ನು ಕೈ ಬಿಡಬೇಕಾಗುವುದು. ನಿಮ್ಮ ಜೀವನ ಪ್ರೀತಿ ಇತರರಿಗೆ ಖುಷಿಕೊಡುವುದು. ಅಗತ್ಯವಿದ್ದಾಗ ಮಾತ್ರ ಸಾಲದ ಬಗ್ಗೆ ಆಲೋಚಿಸಿ. ಸರ್ಕಾರಿ ಉದ್ಯೋಗದವರು ವರ್ಗಾವಣೆಯಿಂದ ದೂರವಿರಬೇಕಾಗಬಹುದು.

ಮಕರ ರಾಶಿ:

ಸಂಗಾತಿಯ ಸಂಪತ್ತಿನಿಂದ ನಿಮಗೆ ಬೇಕಾದುದನ್ನು ಪಡೆಯುವಿರಿ. ಅತಿಯಾದ ಬಾಯಾರಿಕೆ ಆಗಬಹುದು. ಯಾರ ಮಾತನ್ನು ಒಪ್ಪಿಕೊಳ್ಳದೇ ನಿಮ್ಮದೇ ಆದ ದಾರಿಯಲ್ಲಿ ನಡೆಯುವಿರಿ. ಕಛೇರಿಯ ಕೆಲಸದಲ್ಲಿ ನಿಮ್ಮ ಮಧ್ಯೆ ಅನಗತ್ಯರ ಪ್ರವೇಶದಿಂದ ಕೋಪಗೊಳ್ಳುವಿರಿ. ನಿಮ್ಮ ಮಕ್ಕಳ ವರ್ತನೆಯಿಂದ ಬೇಸರ ಆಗುವುದು. ಮಾಡಬೇಕಾದ ಒಳ್ಳೆಯ ಕೆಲಸದ ಬಗ್ಗೆ ಗಮನವಿರಲಿ. ಬೇರೆಯವರಿಂದ ನಿಮ್ಮವರ ಬಗ್ಗೆ ದೂರನ್ನೂ ಕೇಳಬೇಕಾದೀತು.

ಕುಂಭ ರಾಶಿ:

ಸಹೋದ್ಯೋಗಿಗಳ ಜೊತೆ ವಿವಾಹ ನಿಶ್ಚಯ ಮಾಡಿಕೊಳ್ಳುವಿರಿ. ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲಕರವಿದ್ದರೂ ಅದನ್ನು ಬಳಸಿಕೊಳ್ಳುವ ಜಾಣತನವೂ ಅಗತ್ಯವಿದೆ. ಶುಭ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶಗಳಿದ್ದರೂ ಕಾರ್ಯದ ಒತ್ತಡದಿಂದ ಸಾಧ್ಯವಾಗದು. ಮೋಜಿನ ಕಾರಣಕ್ಕೆ ಸುತ್ತಾಟ ಮಾಡುವಿರಿ. ಬಂಧುಗಳ ಜೊತೆ ಅನಗತ್ಯ ವಾಗ್ವಾದ ಬೇಡ. ನಿಮ್ಮ ಮೇಲಿನ‌ ಪ್ರೀತಿ ಕಡಿಮೆ‌ ಆಗುವುದು.‌ ಯಾವುದೂ ಬೇಡವೆನ್ನುವ ಭಾವವು ಇರುವುದು.

ಮೀನ ರಾಶಿ:

ಪ್ರೀತಿಯ ವಿಷಯಗಳಲ್ಲಿ ಭಾವನೆಗಳಿಗೆ ಗಮನ ಕೊಡಿ. ಹಣದ ವಿಷಯಗಳಲ್ಲಿ ಯೋಜನೆಗೆ ಆದ್ಯತೆ ನೀಡಬೇಕು. ಹಳೆಯ ದಾಂಪತ್ಯವಾದರೂ ಸಂತೋಷಕ್ಕೆ ಕೊರತೆ ಇಲ್ಲದಂತೆ ಇರುವಿರಿ. ಸಾಮಾಜಿಕ ಕಾರ್ಯಕ್ಕೆ ನಿಮ್ಮ ಕೊಡುಗೆಯನ್ನು ನೀಡುವಿರಿ. ಕಛೇರಿಯ ಕೆಲಸಗಳನ್ನು ವೇಗವಾಗಿ ಮಾಡಿ ಜವಾಬ್ದಾರಿಯನ್ನು ಮುಗಿಸುವಿರಿ. ವ್ಯವಹಾರದಲ್ಲಿ ಹೆಚ್ಚಿನ ಲಾಭವು ಬರಬಹುದು. ಪ್ರಸಾರ ಮಾಧ್ಯಮದವರು ಮನೆಯಿಂದ ದೂರ ಹೋಗಬೇಕಾಗಬಹುದು.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ಸೌಭಾಗ್ಯ, ಕರಣ : ತೈತಿಲ, ಸೂರ್ಯೋದಯ – 06 – 52 am, ಸೂರ್ಯಾಸ್ತ – 06 – 23 pm, ಇಂದಿನ ಶುಭಾಶುಭ ಕಾಲ : ರಾಹು 12:38 – 14:05, ಯಮಗಂಡ ಕಾಲ 08:19 – 09:46, ಗುಳಿಕ ಕಾಲ 11:12 – 12:38

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 4ರ ದಿನಭವಿಷ್ಯ

ನಿಮ್ಮಲ್ಲಿ ಯಾರಿಗೆ ಪದೇಪದೇ ಅಲರ್ಜಿ ಕಾಡುತ್ತಾ ಇದೆ, ರಕ್ತದೊತ್ತಡದಂಥ ತೀವ್ರ ಸಮಸ್ಯೆಗಳು ಕಾಡುತ್ತಾ ಇವೆ ಅಂಥವರು ಸ್ಫಟಿಕದ ಬ್ರೇಸ್ ಲೆಟ್ ಅಥವಾ ಸ್ಫಟಿಕದ ಹಾರವನ್ನು ಧಾರಣೆ ಮಾಡಿಕೊಳ್ಳಿ. ಇಂಟರ್ ವ್ಯೂ, ಮುಖ್ಯ ಕೆಲಸದ ಮೇಲೆ ಪ್ರಯಾಣ ಮಾಡುತ್ತಾ ಇದ್ದೀರಿ ಅಂತಾದಲ್ಲಿ ಒಂದು ರೂಪಾಯಿಯ ಆರು ನಾಣ್ಯಗಳನ್ನು ದೇವಸ್ಥಾನದ ಹುಂಡಿಯಲ್ಲಿ ಹಾಕಿ, ಮುಂದುವರಿಯಿರಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ನಿಮಗೆ ತುಂಬ ಇಷ್ಟವಾಗುವಂಥ ವ್ಯಕ್ತಿ ಅಥವಾ ವ್ಯಕ್ತಿಗಳ ಗುಂಪಿನ ಜೊತೆಗೆ ಸಂತೋಷವಾದ ಸಮಯವನ್ನು ಕಳೆಯುವಂಥ ಯೋಗ ಇದೆ. ಅಷ್ಟೇ ಅಲ್ಲ, ಕುಟುಂಬ ಸದಸ್ಯರ ಜೊತೆಗೆ ಹೋಟೆಲ್- ರೆಸ್ಟೋರೆಂಟ್ ನಲ್ಲಿ ಸ್ವಾದಿಷ್ಟವಾದ ಭೋಜನ- ಖಾದ್ಯಗಳನ್ನು ಸವಿಯುವಂಥ ಯೋಗ ಸಹ ಇದೆ. ಲೇವಾದೇವಿ ವ್ಯವಹಾರ ಮಾಡುತ್ತಿರುವವರು ವಿಧಾನದಲ್ಲಿ ಕೆಲವು ಬದಲಾವಣೆಗಳನ್ನು ಅಳವಡಿಸಿಕೊಳ್ಳುವುದಕ್ಕೆ ತೀರ್ಮಾನ ತೆಗೆದುಕೊಳ್ಳಲಿದ್ದೀರಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಸಂಯಮ ಹಾಗೂ ತಾಳ್ಮೆ ನಿಮ್ಮ ಪಾಲಿಗೆ ಗಟ್ಟಿಯಾಗಿ ನಿಲ್ಲುವಂಥ ಸ್ವಭಾವ ಆಗಿರುತ್ತವೆ. ನಿಮ್ಮ ಜತೆಗೆ ಇರುವವರು ಇನ್ನು ಇದು ಆಗದು ಎಂದು ಕೆಲವು ಕೆಲಸಗಳಿಂದ ದೂರ ಸರಿದು ನಿಂತ ಮೇಲೂ ನೀವು ಗಟ್ಟಿಯಾಗಿ ನಿಂತು ಯಶಸ್ಸು ಕಾಣುವಂತೆ ಆಗಲಿದೆ. ವ್ಯಾಪಾರ- ವ್ಯವಹಾರ ಮಾಡಿಕೊಂಡು ಇರುವವರು ಅದರಲ್ಲಿನ ರಹಸ್ಯಗಳನ್ನು ಯಾರ ಜೊತೆಗೆ ಹಂಚಿಕೊಳ್ಳುವುದಕ್ಕೆ ಹೋಗಬೇಡಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ನಿಮಗೆ ಏನು ಸಿಗುತ್ತದೋ ಅಷ್ಟರಲ್ಲಿಯೇ ತೃಪ್ತಿ ಪಟ್ಟುಕೊಂಡು ಸುಮ್ಮನಿರಬೇಕು ಎಂದು ಎಚ್ಚರಿಕೆ ಧ್ವನಿಯಲ್ಲಿ ಕೆಲವು ವ್ಯಕ್ತಿಗಳು ಹೇಳಲಿದ್ದಾರೆ. ಭಾವನಾತ್ಮಕವಾಗಿ ನೀವು ಬಹಳ ಹತ್ತಿರವಾದ ವ್ಯಕ್ತಿಯ ಆರ್ಥಿಕ ವಿಚಾರಗಳು ಗಾಬರಿ ಹುಟ್ಟಿಸುತ್ತವೆ. ನೀವು ಊಹಿಸಲು ಕೂಡ ಸಾಧ್ಯವಿಲ್ಲದಂಥ ದೊಡ್ಡ ಸಮಸ್ಯೆ ಅವರ ಬದುಕಿನಲ್ಲಿ ಆಗಿರುವುದು ತಿಳಿದುಬಂದು, ಬೇಸರ ಮೂಡಲಿದೆ.

ಲೇಖನ- ಸ್ವಾತಿ ಎನ್.ಕೆ.

Source link

Exit mobile version