ಕಾಂಗ್ರೆಸ್‌ನಲ್ಲಿ ಜೋರಾಯ್ತು ಸಚಿವ ಸ್ಥಾನಕ್ಕಾಗಿ ಸರ್ಕಸ್: 20 ಸ್ಥಾನಗಳಿಗಾಗಿ 60ಕ್ಕೂ ಹೆಚ್ಚು ಶಾಸಕರಿಂದ ಮಹಾ ಲಾಬಿ – Kannada News

ಕಾಂಗ್ರೆಸ್‌ನಲ್ಲಿ ಜೋರಾಯ್ತು ಸಚಿವ ಸ್ಥಾನಕ್ಕಾಗಿ ಸರ್ಕಸ್Image Credit source: tv9

ಬೆಂಗಳೂರು, ಜೂನ್ 8: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ನೂತನ ಕಾಂಗ್ರೆಸ್ (Congress) ಸರ್ಕಾರ ರಚನೆಯಾಗಿ, ಮೊದಲ ಹಂತದಲ್ಲಿ 13 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ‘ಕೈ’ ಪಾಳಯದಲ್ಲಿ ಈಗ ಎರಡನೇ ಸುತ್ತಿನ ಸಂಪುಟ ಸರ್ಕಸ್ ಆರಂಭವಾಗಿದೆ. ಇತ್ತೀಚೆಗಷ್ಟೇ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಬೆಂಗಳೂರು ಅಭಿವೃದ್ಧಿ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ವಾಪಸ್ ಪಡೆದಿದ್ದು, ಜಮೀರ್ ಅಹ್ಮದ್ ಬೆಂಬಲಿಗರ ಪ್ರತಿಭಟನೆಯ ಬಿಸಿ ಸದ್ಯ ತಣ್ಣಗಾಗುತ್ತಿದೆ ಎನ್ನುವಷ್ಟರಲ್ಲೇ ಹೈಕಮಾಂಡ್‌ಗೆ ಹೊಸ ತಲೆನೋವು ಶುರುವಾಗಿದೆ. ಸದ್ಯ ಸಂಪುಟದಲ್ಲಿ ಬಾಕಿ ಉಳಿದಿರುವ 20 ಸಚಿವ ಸ್ಥಾನಗಳಿಗಾಗಿ ಬರೋಬ್ಬರಿ 60ಕ್ಕೂ ಹೆಚ್ಚು ಶಾಸಕರು ಭಾರಿ ಪೈಪೋಟಿ ನಡೆಸುತ್ತಿದ್ದು, ದೆಹಲಿ ಮಟ್ಟದಲ್ಲಿ ಲಾಬಿ ಶುರುವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಾಂಶಗಳು

  • 20 ಸಚಿವ ಸ್ಥಾನಕ್ಕೆ ಭಾರಿ ಪೈಪೋಟಿ.
  • ಹೈಕಮಾಂಡ್ ಹಂತದಲ್ಲಿ ಮಾಜಿಗಳ ತೀವ್ರ ಲಾಬಿ.
  • ಪರಿಷತ್ ಚುನಾವಣೆ ಬಳಿಕವೇ ಸಂಪುಟ ವಿಸ್ತರಣೆ.

ದೆಹಲಿ ಮಟ್ಟದಲ್ಲಿ ಮಾಜಿ ಸಚಿವರ ಲಾಬಿ

ಸಚಿವ ಸಂಪುಟದ ಮೊದಲ ಪಟ್ಟಿಯಲ್ಲಿ ಸ್ಥಾನ ವಂಚಿತರಾದ ಹಲವು ಹಿರಿಯ ಹಾಗೂ ಮಾಜಿ ಸಚಿವರು ಇದನ್ನು ತಮಗೆ ಆದ ಅಗೌರವ ಎಂದು ಭಾವಿಸಿ ತೀವ್ರ ಬೇಸರಗೊಂಡಿದ್ದಾರೆ. ಹೀಗಾಗಿ, ಎರಡನೇ ಪಟ್ಟಿಯಲ್ಲಿ ಯಾವುದೇ ಕಾರಣಕ್ಕೂ ಮಂತ್ರಿ ಸ್ಥಾನ ಕೈತಪ್ಪಬಾರದು ಎಂದು ಪಣತೊಟ್ಟಿರುವ ಮಾಜಿಗಳು ಈಗಿನಿಂದಲೇ ದೆಹಲಿ ಮಟ್ಟದಲ್ಲಿ ಗಾಡ್‌ಫಾದರ್‌ಗಳ ಹುಡುಕಾಟ ಆರಂಭಿಸಿದ್ದಾರೆ. ಒಂದೊಂದು ಸಚಿವ ಸ್ಥಾನಕ್ಕೆ ಕನಿಷ್ಠ 3 ರಿಂದ 4 ಮಂದಿ ಶಾಸಕರು ರೇಸ್‌ನಲ್ಲಿದ್ದು, ಆಕಾಂಕ್ಷಿಗಳ ದೀರ್ಘ ಪಟ್ಟಿ ನೋಡಿ ಕಾಂಗ್ರೆಸ್ ಹೈಕಮಾಂಡ್ ತಲೆಕೆಡಿಸಿಕೊಂಡಿದೆ. ಹೀಗಾಗಿ ಜೂನ್ 18ರ ವಿಧಾನ ಪರಿಷತ್ ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕವೇ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಜಾತಿ, ಜಿಲ್ಲಾವಾರು ಲೆಕ್ಕಾಚಾರ: ಖರ್ಗೆ, ಸಿದ್ದರಾಮಯ್ಯ ಹಾಗೂ ಡಿಕೆಶಿ ಕದ ತಟ್ಟಿದ ಶಾಸಕರು

ಈ ಬಾರಿ ಸಂಪುಟ ಸೇರಲು ಹೊಸಬರು, ಹಳಬರು, ಹಿರಿಯರು, ವಲಸಿಗರು ಹಾಗೂ ಸಮುದಾಯದ ಮುಂದಾಳುಗಳು ತಮ್ಮದೇ ಆದ ಜಾತಿವಾರು ಲೆಕ್ಕಾಚಾರ, ಜಿಲ್ಲಾವಾರು ಕೋಟಾ ಮತ್ತು ಸಮುದಾಯದ ಪ್ರಾಬಲ್ಯದ ಕಾರ್ಡ್ ಬಳಸುತ್ತಿದ್ದಾರೆ. ಆರೇಳು ಬಾರಿ ಗೆದ್ದಿದ್ದರೂ ಇದುವರೆಗೆ ಒಮ್ಮೆಯೂ ಸಚಿವರಾಗದ ಹಿರಿಯ ಶಾಸಕರು ತಮಗೆ ಮೊದಲ ಆದ್ಯತೆ ನೀಡಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ.

ಮತ್ತೊಂದೆಡೆ, ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿರುವುದರಿಂದ ಅವರ ಆಪ್ತ ವಲಯದ ಶಾಸಕರು ತಮಗೆ ಮಂತ್ರಿಗಿರಿ ಪಕ್ಕಾ ಎಂಬ ನಿರೀಕ್ಷೆಯಲ್ಲಿದ್ದಾರೆ. ಇತ್ತ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಭಾವ ಹಾಗೂ ಬೆಂಬಲ ಬಳಸಿ ಸಂಪುಟ ಸೇರಲು ಮತ್ತೊಂದು ಪ್ರಭಾವಿ ಶಾಸಕರ ಗುಂಪು ತೀವ್ರ ಕಸರತ್ತು ನಡೆಸುತ್ತಿದೆ.

ಇದನ್ನೂ ಓದಿ: ಮತ್ತೊಂದು ಸ್ವರೂಪ ಪಡೆದ ಜಮೀರ್ ಅಹ್ಮದ್ ಖಾನ್​ರದ್ದು ಎನ್ನಲಾದ ಆಡಿಯೋ ಪ್ರಕರಣ

ಸದ್ಯಕ್ಕೆ 13 ಸಚಿವರ ಖಾತೆ ಹಂಚಿಕೆ ಅತೃಪ್ತಿಯನ್ನು ನಿಭಾಯಿಸುವುದರಲ್ಲೇ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಹಾಗೂ ಸಿಎಂ ಡಿಕೆಶಿ ಸುಸ್ತಾಗಿದ್ದು, ಮುಂಬರುವ ದಿನಗಳಲ್ಲಿ ಈ 20 ಸ್ಥಾನಗಳ ಭರ್ತಿ ಪ್ರಕ್ರಿಯೆ ಕಾಂಗ್ರೆಸ್ ಪಾಲಿಗೆ ಮತ್ತೊಂದು ದೊಡ್ಡ ಸವಾಲಾಗಿ ಪರಿಣಮಿಸುವುದರಲ್ಲಿ ಸಂಶಯವಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಾಲ್ಕನೇ ದಿನ ಭರ್ಜರಿ ಗಳಿಕೆ ಮಾಡಿದ ‘ಪೆದ್ದಿ’; ಮುಂದಿದೆ ಚಾಲೆಂಜ್ – Kannada News

ರಾಮ್ ಚರಣ್ ನಟನೆಯ, ಬುಚ್ಚಿ ಬಾಬು ಸನ ನಿರ್ದೇಶನದ ‘ಪೆದ್ದಿ’ ಚಿತ್ರ ನಾಲ್ಕನೇ ದಿನವಾದ ಭಾನುವಾರ ಬಾಕ್ಸ್ ಆಫೀಸ್‌ನಲ್ಲಿ ತನ್ನ ಪಾರುಪತ್ಯ ಮುಂದುವರಿಸಿದೆ. ಭಾನುವಾರ ಭಾರತದಲ್ಲೇ ಬರೋಬ್ಬರಿ 31.90 ಕೋಟಿ ನೆಟ್ ಕಲೆಕ್ಷನ್ ಮಾಡಿದೆ. ಇದರೊಂದಿಗೆ ಭಾರತದಲ್ಲಿ ಚಿತ್ರದ ಒಟ್ಟು ನೆಟ್ ಗಳಿಕೆ 157.15 ಕೋಟಿ ರೂಪಾಯಿ ಆಗಿದೆ. ಭಾರತದಲ್ಲಿ 187.02 ಕೋಟಿ ಗ್ರಾಸ್ ಕಲೆಕ್ಷನ್ ಆಗಿದೆ.

ಈ ಸಿನಿಮಾ, ವಿದೇಶಿ ಮಾರುಕಟ್ಟೆಯಿಂದ 46 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಜಾಗತಿಕವಾಗಿ ಕೇವಲ ನಾಲ್ಕೇ ದಿನಕ್ಕೆ 233.02 ಕೋಟಿ ಗಳಿಸಿ ದಾಖಲೆ ಬರೆದಿದೆ. ಚಿತ್ರದ ಯಶಸ್ಸಿಗೆ ತೆಲುಗು ವರ್ಷನ್‌ನ ಭರ್ಜರಿ ಪ್ರದರ್ಶನ ಕಾಣುತ್ತಿರುವುದೇ ಕಾರಣ ಎನ್ನಲಾಗಿದೆ.

ನಾಲ್ಕು ದಿನಗಳ ಸುದೀರ್ಘ ವೀಕೆಂಡ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿರುವ ‘ಪೆದ್ದಿ’ ಚಿತ್ರಕ್ಕೆ ಇನ್ನುಳಿದ ವಾರದ ದಿನಗಳು ಅಸಲಿ ಪರೀಕ್ಷೆಯಾಗಿವೆ. ಸಾಮಾನ್ಯವಾಗಿ ವೀಕೆಂಡ್ ಮುಗಿದ ನಂತರ ಸೋಮವಾರದಿಂದ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಸಂಖ್ಯೆ ಕ್ಷೀಣಿಸುವುದು ಸಹಜ. ಸೋಮವಾರದಿಂದ ಗುರುವಾರದವರೆಗೆ ಚಿತ್ರಮಂದಿರಗಳಿಗೆ ಪ್ರೇಕ್ಷಕರನ್ನು ಸೆಳೆಯುವುದು ಮತ್ತು ಕಲೆಕ್ಷನ್ ಸ್ಥಿರವಾಗಿ ಕಾಯ್ದುಕೊಳ್ಳುವುದು ಚಿತ್ರದ ಮುಂದಿರುವ ಅತಿ ದೊಡ್ಡ ಸವಾಲಾಗಿದೆ. ಈ ದಿನಗಳಲ್ಲಿ ಸಿನಿಮಾ ಪ್ರದರ್ಶನ ಹೇಗಿರಲಿದೆ ಎಂಬುದರ ಮೇಲೆ ಚಿತ್ರದ ಒಟ್ಟಾರೆ ಲೈಫ್‌ಟೈಮ್ ಕಲೆಕ್ಷನ್ ನಿರ್ಧಾರವಾಗಲಿದೆ.

ಇದನ್ನೂ ಓದಿ: 200 ಕೋಟಿ ರೂಪಾಯಿ ಕ್ಲಬ್ ಸೇರಿದ ರಾಮ್ ಚರಣ್ ಸಿನಿಮಾ ‘ಪೆದ್ದಿ’; ಆದರೂ ಇದೆ ಸವಾಲು

ವಿವಾದ ಮಾಡಿಕೊಂಡ ಸಿನಿಮಾ

ಒಂದೆಡೆ ಸಿನಿಮಾ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿದ್ದರೆ, ಮತ್ತೊಂದೆಡೆ ಚಿತ್ರದಲ್ಲಿ ಜಾನ್ವಿ ಕಪೂರ್ ಪಾತ್ರವನ್ನು ಬಿಂಬಿಸಿರುವ ರೀತಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿವಾದದ ಕುರಿತು ಖ್ಯಾತ ನಟಿ ನಿತ್ಯಾ ಮೆನನ್ ಪ್ರತಿಕ್ರಿಯಿಸಿದ್ದಾರೆ. ‘ನಾನು ಇನ್ನು ಸಿನಿಮಾ ನೋಡಿಲ್ಲ. ಆದರೆ ಚಿತ್ರರಂಗದಲ್ಲಿ ಮಹಿಳೆಯರನ್ನು ಹೀಗೆ ಬಿಂಬಿಸುವ ಕುರಿತು ನಡೆಯುತ್ತಿರುವ ಚರ್ಚೆಗಳನ್ನು ಬೆಂಬಲಿಸುತ್ತೇನೆ. ನಟ-ನಟಿಯರಿಗೆ ತಮ್ಮದೇ ಆದ ಮಿತಿಗಳಿರಬೇಕು. ದೃಶ್ಯವೊಂದರಲ್ಲಿ ನಟಿಸುವಾಗ ತಮಗೆ ಅಸಹಜ ಎನಿಸಿದರೆ ನಟರೇ ಅದನ್ನು ಖಡಾಖಂಡಿತವಾಗಿ ನಿರಾಕರಿಸಬೇಕು. ಯಾವುದೇ ಪರಿಸ್ಥಿತಿಯಲ್ಲೂ ನಾವು ಅಸಹಾಯಕರಾಗಲು ಸಾಧ್ಯವಿಲ್ಲ, ನಮ್ಮ ಆದ್ಯತೆಗಳು ಏನೋ ಅದರಂತೆ ನಾವು ಧ್ವನಿ ಎತ್ತಬಹುದು’ ಎಂದು ನಿತ್ಯಾ ಮೆನನ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪಾಕ್ ಉಗ್ರನ ಜೊತೆ ರಾಜ್ಯದ ಇಬ್ಬರ ಲಿಂಕ್: ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು! – Kannada News

ಪಾಕ್ ಮೂಲದ ವ್ಯಕ್ತಿ ಜೊತೆ ರಾಜ್ಯದ ಇಬ್ಬರು ನಂಟು

ತುಮಕೂರು, ಜೂನ್ 08: ಪಾಕಿಸ್ತಾನ (Pakistan) ಮೂಲದ ಶಂಕಿತ ಉಗ್ರನೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ ತುಮಕೂರು ಮತ್ತು ದಾವಣಗೆರೆ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಅತ್ಯಂತ ಭಯಾನಕ ಸಂಚು ಬಯಲಾಗಿದೆ. ಇನ್‌ಸ್ಟಾಗ್ರಾಮ್ ಮೂಲಕ ಯುವಕರನ್ನು ಸಂಪರ್ಕಿಸಿ, ಬ್ರೈನ್‌ವಾಶ್ ಮಾಡಿ ದೇಶದಲ್ಲಿ ಕುಕೃತ್ಯಕ್ಕೆ ಪಾಕ್ ಉಗ್ರ ರಾಣಾ ಸಂಚು ರೂಪಿಸಿದ್ದ ಕಹಾನಿಯನ್ನು ತನಿಖೆಯ ವೇಳೆ ಹೊರಬಂದಿದೆ.

ಮುಖ್ಯಾಂಶಗಳು

  • ತುಮಕೂರಿನಲ್ಲಿ ಪಾಕ್ ಉಗ್ರನ ಜೊತೆ ನಂಟು ಹೊಂದಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
  • ಇನ್‌ಸ್ಟಾಗ್ರಾಮ್ ಚಾಟಿಂಗ್ ಮೂಲಕ ಯುವಕರ ಬ್ರೈನ್‌ವಾಶ್ ಮಾಡಿರುವುದು ವಿಚಾರಣೆಯಲ್ಲಿ ಬಯಲಾಗಿದೆ.
  • ಕುಕೃತ್ಯಕ್ಕಾಗಿ 50 ರಿಂದ 60 ಜನರನ್ನು ಸಿದ್ಧಪಡಿಸಲು ಸಂಚು ರೂಪಿಸಲಾಗಿತ್ತು.

ಕಳೆದ ಒಂದು ತಿಂಗಳ ಹಿಂದೆಯಷ್ಟೇ ಇನ್‌ಸ್ಟಾಗ್ರಾಮ್ ಮೂಲಕ ಯುವಕರಿಗೆ ಪರಿಚಯವಾಗಿದ್ದ ಪಾಕಿಸ್ತಾನದ ರಾಣಾ ಎಂಬಾತ, ಆರಂಭದಲ್ಲಿ ಧರ್ಮದ ಆಚರಣೆ ಹಾಗೂ ಧರ್ಮಗುರುಗಳ ಪ್ರವಚನಗಳನ್ನು ಹಂಚಿಕೊಳ್ಳುತ್ತಿದ್ದನು. ಆ ನಂತರ ಧರ್ಮಕ್ಕಾಗಿ ಕೆಲಸ ಮಾಡಬೇಕು ಎಂದು ಬಂಧಿತ ಅಲ್ಲಾಬಕ್ಷು ತಲೆಯಲ್ಲಿ ವಿಷ ತುಂಬಿ ಬ್ರೈನ್‌ವಾಶ್ ಮಾಡಿದ್ದ ಎನ್ನಲಾಗಿದೆ. ಅಲ್ಲಾಬಕ್ಷು ಮೊಬೈಲ್‌ನಲ್ಲಿ ಪಾಕಿಸ್ತಾನದ ಕೋಡ್ ಹೊಂದಿರುವ ನಂಬರ್ ಪತ್ತೆಯಾಗಿದ್ದು, ಅದನ್ನು ‘Rana bhi bhi’ ಎಂದು ಆತ ಸೇವ್ ಮಾಡಿಕೊಂಡಿದ್ದ ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ.

ಆರೋಪಿಗಳ ಎಕ್ಸ್‌ಕ್ಲೂಸಿವ್ ಚಾಟ್ ಬಯಲು

ಪಾಕ್ ಉಗ್ರ ರಾಣಾ ಸಂಪರ್ಕಕ್ಕೆ ಸಿಕ್ಕ ಬಳಿಕ ಅಲ್ಲಾಬಕ್ಷು ಇನ್‌ಸ್ಟಾಗ್ರಾಮ್‌ನಲ್ಲಿ ಹಿಂದಿ ಭಾಷೆಯಲ್ಲಿ ನಡೆಸಿದ ಚರ್ಚೆಯ ಇನ್‌ಸೈಡ್ ಮಾಹಿತಿ ಲಭ್ಯವಾಗಿದೆ. ರಾಣಾ ಪ್ರಚೋದನೆಗೆ ಮಾರುಹೋಗಿದ್ದ ಅಲ್ಲಾಬಕ್ಷು ಆತನಿಗೆ, “ಇನ್ಷಾ ಅಲ್ಲಾ, ಯಾವುದೇ ಕೆಲಸ ಇರಲಿ, ಯಾವುದೇ ರೀತಿಯ ಕೆಲಸ ಇರಲಿ, ನಿನ್ನ ತಮ್ಮನನ್ನು ನೆನಪಿಸಿಕೊ. ನಾನು ಖಂಡಿತವಾಗಲೂ ಮಾಡುತ್ತೇನೆ” ಎಂದು ಭರವಸೆ ನೀಡಿದ್ದನು. ಅಷ್ಟೇ ಅಲ್ಲದೆ, “ಇನ್ಷಾ ಅಲ್ಲಾ ಈಗ ನಾವಿಬ್ಬರು ಜೊತೆಯಾಗಿದ್ದೇವೆ. ನಮ್ಮ ಕೋಮಿಗೋಸ್ಕರ ಜೊತೆಯಾಗಿ ಕೆಲಸ ಮಾಡೋಣ” ಎಂದು ಹೇಳಿರುವುದು ಪತ್ತೆಯಾಗಿದೆ.

50 ರಿಂದ 60 ಮಂದಿಯನ್ನು ತಯಾರು ಮಾಡು ಎಂದಿದ್ದ ರಾಣಾ

“ದೇವರ ಕೆಲಸ ನಾವೆಲ್ಲಾ ಒಟ್ಟಾಗಿ ಮಾಡೋಣ” ಎಂದು ಹೇಳುತ್ತಿದ್ದ ರಾಣಾ, ಅಲ್ಲಾಬಕ್ಷುಗೆ ದ್ವೇಷದ ತರಬೇತಿ ನೀಡಿದ್ದ. “ನಮ್ಮ ಧರ್ಮದವರನ್ನು ದ್ವೇಷಿಸುವವರನ್ನು ಹಂತ ಹಂತವಾಗಿ ನಾಶ ಮಾಡಬೇಕು. ಅದಕ್ಕಾಗಿ 50 ರಿಂದ 60 ಮಂದಿಯನ್ನು ತಯಾರು ಮಾಡು. ನಾನು ಹೇಳಿದ ಹಾಗೆ ಅವರಿಗೆ ತರಬೇತಿ ನೀಡು, ನಿನಗೆ ಎಷ್ಟು ಹಣ ಬೇಕೋ ಅಷ್ಟು ನಾನು ಕೊಡುತ್ತೇನೆ” ಎಂದು ಆಮಿಷ ಒಡ್ಡಿದ್ದ.

ಇದೇ ವೇಳೆ ಅಲ್ಲಾಬಕ್ಷು, “ನೀನು ಭಾರತದಲ್ಲಿ ಬೇರೆ ಯಾರನ್ನಾದರೂ ಸಂಪರ್ಕಿಸಿದ್ದೀಯಾ?” ಎಂದು ಪ್ರಶ್ನಿಸಿದಾಗ, ರಾಣಾನೇ ಆತನಿಗೆ ಜಮೀರ್ ಖಾನ್ ಎಂಬ ಮತ್ತೊಬ್ಬನನ್ನು ಪರಿಚಯಿಸಿದ್ದ. ಈ ಇಬ್ಬರು ಜೊತೆಯಾಗಿ ದೇಶ ವಿರೋಧಿ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆಗೆ ಮಹತ್ವದ ಸುಳಿವು ಲಭ್ಯವಾಗಿದೆ.

ಇದನ್ನೂ ಓದಿ ಪಾಕ್ ಉಗ್ರನ ಜತೆ ಸಂಪರ್ಕ ಹೊಂದಿದ್ದ ಇಬ್ಬರ ಬಂಧನ: ಕರ್ನಾಟಕದಲ್ಲಿ ಬೇರೂರುತ್ತಿವೆ ಉಗ್ರರ ಸ್ಲೀಪರ್ ಸೆಲ್!

ಕೂಡಲೇ ಅಲರ್ಟ್ ಆದ ಗುಪ್ತಚರ ಇಲಾಖೆ ನೀಡಿದ ನಿಖರ ಮಾಹಿತಿ ಆಧರಿಸಿ ತುಮಕೂರು ನಗರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಖಾಕಿ ಪಡೆ ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಭಯೋತ್ಪಾದನಾ ಸಂಚಿನ ಮತ್ತಷ್ಟು ಆಳವಾದ ಸಂಗತಿಗಳನ್ನು ಕೆದಕುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:55 am, Mon, 8 June 26

Source link

ನಾನು RCB ತಂಡದ ಕಟ್ಟಾ ಅಭಿಮಾನಿ: ವೈಭವ್ ಅಚ್ಚರಿಯ ಹೇಳಿಕೆ! – Kannada News

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಸಂಚಲನ ಸೃಷ್ಟಿಸಿದ ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ (Vaibhav Sooryavanshi) ತಾನು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಟ್ಟಾಭಿಮಾನಿ ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅದು ಸಹ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿರುವಾಗ ಎಂಬುದು ವಿಶೇಷ.

ಆರ್​​ಆರ್ ತಂಡದ ಸಂದರ್ಶನದಲ್ಲಿ ಮಾತನಾಡಿದ ವೈಭವ್, “ನಾನು ಮೊದಲಿನಿಂದಲೂ ಆರ್‌ಸಿಬಿ ತಂಡದ ದೊಡ್ಡ ಅಭಿಮಾನಿ. ಅದಕ್ಕೆ ಏಕೈಕ ಕಾರಣ ವಿರಾಟ್ ಕೊಹ್ಲಿ ಭೈಯ್ಯಾ ” ಎಂದಿದ್ದಾರೆ.

“ಮೊದಲಿಂದಲೂ ನಾನು ವಿರಾಟ್ ಕೊಹ್ಲಿ ಫ್ಯಾನ್. ಹಾಗೆಯೇ ಆರ್​ಸಿಬಿ ತಂಡದ ಅಭಿಮಾನಿ. ಆರ್​ಆರ್​-ಆರ್​ಸಿಬಿ ಪಂದ್ಯ ಮುಗಿದ ನಂತರ ಕೊಹ್ಲಿ ನನ್ನ ಬಳಿ ಬಂದು ಹೆಗಲ ಮೇಲೆ ಕೈಹಾಕಿ ಮಾತನಾಡಿಸಿದಾಗ, ನಾನು ಒಬ್ಬ ಜಾಗತಿಕ ಸೂಪರ್‌ಸ್ಟಾರ್ ಜೊತೆ ಮಾತನಾಡುತ್ತಿದ್ದೇನೆ ಅನಿಸಲೇ ಇಲ್ಲ ” ಎಂದು ವೈಭವ್ ಸೂರ್ಯವಂಶಿ ತಿಳಿಸಿದ್ದಾರೆ.

“ವಿರಾಟ್ ಕೊಹ್ಲಿ ಅವರು ನನ್ನ ಸ್ವಂತ ಅಣ್ಣನಂತೆ. ಪಂದ್ಯದ ಬಳಿಕ ನನಗೆ ಅತ್ಯಂತ ಪ್ರೀತಿಯಿಂದ ಮಾರ್ಗದರ್ಶನ ನೀಡಿದರು. ಅವರು ಎಲ್ಲೂ ಸಹ ನನ್ನೊಂದಿಗೆ ಸೂಪರ್ ಸ್ಟಾರ್ ರೀತಿ ವರ್ತಿಸಿರಲಿಲ್ಲ. ಅವರು ನನ್ನ ಜೊತೆ ಮಾತನಾಡುವಾಗ ನನಗೂ ಕೂಡ ಅವರು ಜಾಗತಿಕ ಸೂಪರ್ ಸ್ಟಾರ್ ಎಂದು ಅನಿಸಿರಲಿಲ್ಲ” ಎಂದು ವೈಭವ್ ಕಿಂಗ್ ಕೊಹ್ಲಿಯ ಸರಳತೆ ಮತ್ತು ದೊಡ್ಡ ಗುಣವನ್ನು ಕೊಂಡಾಡಿದ್ದಾರೆ.

ವಿಶೇಷವೆಂದರೆ, ಟೂರ್ನಿಯ ಆರಂಭಿಕ ಪಂದ್ಯವೊಂದರಲ್ಲಿ ಆರ್‌ಸಿಬಿ ವಿರುದ್ಧ ವೈಭವ್ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದಾಗ, ವಿರಾಟ್ ಕೊಹ್ಲಿ ಖುದ್ದಾಗಿ ಅವರಿಗೆ ಆಟೋಗ್ರಾಫ್ ಇರುವ ವಿಶೇಷ ಕ್ಯಾಪ್ ಒಂದನ್ನು ಉಡುಗೊರೆಯಾಗಿ ನೀಡಿದ್ದರು. ಆರೆಂಜ್ ಕ್ಯಾಪ್ ಕೈಯಲ್ಲಿಲ್ಲದ ದಿನಗಳಲ್ಲೆಲ್ಲಾ ತಾವು ಕೊಹ್ಲಿ ನೀಡಿದ ಆ ಕ್ಯಾಪ್ ಅನ್ನೇ ಧರಿಸುತ್ತಿದ್ದಾಗಿ ವೈಭವ್ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಇದೀಗ ಐಪಿಎಲ್ ಸೀಸನ್​-19ರ ಆರೆಂಜ್ ಕ್ಯಾಪ್ ಹುಡುಗ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ. ಮುಂಬರುವ ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಥವಾ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ವೈಭವ್ ಸೂರ್ಯವಂಶಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ. ಇದರೊಂದಿಗೆ ಜಾಗತಿಕ ಕ್ರಿಕೆಟ್​ನಲ್ಲಿ ಹೊಸ ಯುಗ ಆರಂಭವಾಗುವುದನ್ನು ನಿರೀಕ್ಷಿಸಬಹುದು.

ಏಕೆಂದರೆ ವಿರಾಟ್ ಕೊಹ್ಲಿ ಸದ್ಯ ತಮ್ಮ ವೃತ್ತಿಜೀವನದ ನಿವೃತ್ತಿಯ ಅಂಚಿನಲ್ಲಿದ್ದಾರೆ. ಭಾರತೀಯ ಕ್ರಿಕೆಟ್ ಅನ್ನು ದಶಕಗಳ ಕಾಲ ಮುನ್ನಡೆಸಿದ ‘ಕಿಂಗ್’ ಯುಗ ಮುಗಿಯುವ ಸಮಯ ಹತ್ತಿರವಾಗುತ್ತಿದೆ. ಇಂತಹ ಸಂದರ್ಭದಲ್ಲಿ, ಅವರ ಜಾಗವನ್ನು ತುಂಬಬಲ್ಲ ಸಶಕ್ತ ಆಟಗಾರ ಯಾರು ಎಂಬ ಪ್ರಶ್ನೆಗೆ ಐಪಿಎಲ್ 2026ರಲ್ಲೇ ಉತ್ತರ ಸಿಕ್ಕಿದೆ. ಆ ಉತ್ತರವೇ ವೈಭವ್ ಸೂರ್ಯವಂಶಿ.

ಇದನ್ನೂ ಓದಿ: ಏಷ್ಯಾಡ್ ಕ್ರಿಕೆಟ್ ಟೂರ್ನಿ ವೇಳಾಪಟ್ಟಿ ಪ್ರಕಟ

ಕೇವಲ 15ರ ಹರೆಯದಲ್ಲೇ ಜಾಗತಿಕ ಬೌಲರ್‌ಗಳನ್ನು ಧೂಳೀಪಟ ಮಾಡಿದ ವೈಭವ್, ಮುಂದಿನ ದಿನಗಳಲ್ಲಿ ಟೀಮ್ ಇಂಡಿಯಾದ ಸೂಪರ್‌ಸ್ಟಾರ್ ಆಗಿ ಹೊರಹೊಮ್ಮುವುದು ಗ್ಯಾರಂಟಿ. ಹೀಗಾಗಿಯೇ, ಮುಂಬರುವ ಟಿ20 ಸರಣಿಗಳ ಮೂಲಕ ಕ್ರಿಕೆಟ್ ಅಂಗಳದ ಹೊಸ ಯುಗದ ಆರಂಭವನ್ನು ನಿರೀಕ್ಷಿಸಬಹುದು.

Published On – 8:31 am, Mon, 8 June 26

Source link

ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು – Kannada News

ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ‘ಸರಿಗಮಪ’ ವೇದಿಕೆಯಲ್ಲಿ ಅಗಲಿದ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್ ಅವರಿಗೆ ವಿಶೇಷ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ‘ಪಾರು’ ಧಾರಾವಾಹಿಯ ಮುಖ್ಯ ನಟಿ ಮೋಕ್ಷಿತಾ ಪೈ ಮತ್ತು ನಟ ಶರತ್, ದಿಲೀಪ್ ರಾಜ್ ತಮಗೆ ನೀಡಿದ ಬೆಂಬಲವನ್ನು ನೆನೆದು ಕಣ್ಣೀರಿಟ್ಟರು. ‘ಆರಂಭದ ದಿನಗಳಲ್ಲಿ ಶೂಟಿಂಗ್ ಕಷ್ಟವೆನಿಸಿದಾಗ ದಿಲೀಪ್ ಸರ್ ಮತ್ತು ವಿದ್ಯಾ ಮ್ಯಾಮ್ ತಮಗೆ ಧೈರ್ಯ ತುಂಬಿ, ನಟನೆಯನ್ನು ಪ್ರತಿಯೊಂದು ಹಂತದಲ್ಲೂ ಹೇಳಿಕೊಟ್ಟು ಬೆಳೆಸಿದರು ಎಂದು’ ಮೋಕ್ಷಿತಾ ಭಾವುಕರಾಗಿ ನುಡಿದರು. ದಿಲೀಪ್ ರಾಜ್ ಅವರ ಅಕಾಲಿಕ ನಿಧನ ಇಡೀ ಕಿರುತೆರೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದ್ದು, ಅವರ ಅಗಲಿಕೆಯ ನೋವು ಇಡೀ ವೇದಿಕೆಯನ್ನು ಮೌನವಾಗಿಸಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

Bengaluru Air Quality: ಬೆಂಗಳೂರಿನ ವಾಯು ಗುಣಮಟ್ಟ ಇಂದು ಉತ್ತಮ, ಉಡುಪಿಯ ಎಕ್ಯೂಐ ಎಲ್ಲದಕ್ಕಿಂತ ಬೆಸ್ಟ್! – Kannada News

ಬೆಂಗಳೂರಿನ ವಾಯು ಗುಣಮಟ್ಟ ಇಂದು ಉತ್ತಮ, ಉಡುಪಿಯ ಎಕ್ಯೂಐ ಎಲ್ಲದಕ್ಕಿಂತ ಬೆಸ್ಟ್!

ಬೆಂಗಳೂರು, ಜೂನ್ 08: ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟವು (AQI) ಒಟ್ಟಾರೆಯಾಗಿ ಉತ್ತಮ ಹಾಗೂ ತೃಪ್ತಿದಾಯಕ ಮಟ್ಟದಲ್ಲಿದೆ. ಮುಂಗಾರು ಮಳೆಯ ಆಗಮನ ಮತ್ತು ವಾತಾವರಣದಲ್ಲಿನ ಬದಲಾವಣೆಗಳಿಂದಾಗಿ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದ್ದು, ಜನರಿಗೆ ಶುದ್ಧ ಗಾಳಿ ಲಭ್ಯವಾಗುತ್ತಿದೆ.

ಮುಖ್ಯಾಂಶಗಳು

  • ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟವು ತೃಪ್ತಿದಾಯಕ ಮಟ್ಟದಲ್ಲಿದೆ.
  • ಬೆಂಗಳೂರಿನ ಸರಾಸರಿ ಎಕ್ಯೂಐ 14 ರಿಂದ 30 ರಷ್ಟಿದ್ದು ಉತ್ತಮವಾಗಿದೆ.
  • ಮುಂಗಾರು ಮಳೆಯಿಂದಾಗಿ ರಾಜ್ಯದ ಬಹುತೇಕ ನಗರಗಳಲ್ಲಿ ವಾಯು ಮಾಲಿನ್ಯ ಕುಸಿದಿದೆ.

ಬೆಂಗಳೂರಿನಲ್ಲಿ ಉತ್ತಮ ಗಾಳಿ ಗುಣಮಟ್ಟ

ರಾಜಧಾನಿ ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು ಅತ್ಯಂತ ಉತ್ತಮ ಮಟ್ಟದಲ್ಲಿದೆ. ಇಂದಿನ ಅಧಿಕೃತ ಅಂಕಿ-ಅಂಶಗಳ ಪ್ರಕಾರ, ಬೆಂಗಳೂರಿನ ಸರಾಸರಿ ಎಕ್ಯೂಐ (AQI) 14 ರಿಂದ 30ರ ಆಸುಪಾಸಿನಲ್ಲಿ ದಾಖಲಾಗಿದ್ದು, ಇದನ್ನು ಉತ್ತಮ (Good) ವಲಯ ಎಂದು ಪರಿಗಣಿಸಲಾಗುತ್ತದೆ. ನಗರದ ಪ್ರಮುಖ ವಲಯಗಳಾದ ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್ ಮತ್ತು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಗಳಲ್ಲೂ ಮಾಲಿನ್ಯಕಾರಕ ಕಣಗಳಾದ PM2.5 ಮತ್ತು PM10 ಪ್ರಮಾಣ ಅತ್ಯಂತ ಕನಿಷ್ಠ ಮಟ್ಟದಲ್ಲಿದೆ. ಇದರಿಂದಾಗಿ ಸಾರ್ವಜನಿಕರು ಯಾವುದೇ ಆರೋಗ್ಯದ ಆತಂಕವಿಲ್ಲದೆ ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ.

ಕರ್ನಾಟಕದ ಇತರೆ ಪ್ರಮುಖ ನಗರಗಳ ಇಂದಿನ ಸ್ಥಿತಿ

ಸಾಂಸ್ಕೃತಿಕ ನಗರಿ ಮೈಸೂರು ಮತ್ತು ಬೆಳಗಾವಿಯಲ್ಲಿ ಇಂದಿನ ಎಕ್ಯೂಐ ಪ್ರಮಾಣ 45 ರಿಂದ 60 ರಷ್ಟಿದ್ದು, ವಾಯು ಗುಣಮಟ್ಟವು ತೃಪ್ತಿದಾಯಕ (Satisfactory/Moderate) ಮಟ್ಟದಲ್ಲಿದೆ. ಉತ್ತರ ಕರ್ನಾಟಕದ ಕೈಗಾರಿಕಾ ವಲಯಗಳಾದ ಬಳ್ಳಾರಿ ಹಾಗೂ ಬಾಗಲಕೋಟೆಯಲ್ಲಿ ಎಕ್ಯೂಐ 70 ರ ಆಸುಪಾಸಿನಲ್ಲಿದ್ದು, ಸಾಮಾನ್ಯ ಜನರಿಗೆ ಇದು ಯಾವುದೇ ಪ್ರಮುಖ ಆರೋಗ್ಯದ ಅಪಾಯವನ್ನು ಉಂಟುಮಾಡುವುದಿಲ್ಲ. ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಅಲ್ಲಿನ ವಾಯು ಗುಣಮಟ್ಟ ಅತ್ಯಂತ ಆರೋಗ್ಯಕರವಾಗಿದ್ದು, ಸೂಚ್ಯಂಕವು 30 ಕ್ಕಿಂತಲೂ ಕೆಳಗಿದೆ.

ಒಟ್ಟಾರೆಯಾಗಿ, ಇಂದಿನ ದಿನದಲ್ಲಿ ಕರ್ನಾಟಕದ ಪ್ರಮುಖ ನಗರಗಳ ಜನರಿಗೆ ಮಾಲಿನ್ಯ ಮುಕ್ತ ಮತ್ತು ಶುದ್ಧವಾದ ಗಾಳಿಯ ವಾತಾವರಣ ಸಿಕ್ಕಂತಾಗಿದೆ. ವಾಯು ಗುಣಮಟ್ಟವು 0-50ರ ಒಳಗಿದ್ದರೆ ಅದನ್ನು ಸುರಕ್ಷಿತ ಎಂದು ಪರಿಗಣಿಸಲಾಗುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಎಐಸಿಸಿ ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ – Kannada News

ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ

ಬೆಂಗಳೂರು, ಜೂನ್ 08: ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ (50) ಅವರು ಹೃದಯಾಘಾತದಿಂದ ಭಾನುವಾರ (ಜೂನ್ 8) ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅಂದು ರಾತ್ರಿ ಇದ್ದಕ್ಕಿದ್ದಂತೆ ತೀವ್ರ ಹೃದಯಾಘಾತಕ್ಕೊಳಗಾದ ಸೂರಜ್ ಹೆಗ್ಡೆ ಅವರನ್ನು ತಕ್ಷಣವೇ ನಗರದ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಮುಖ್ಯಾಂಶಗಳು

  • ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
  • ಇವರು ಮಾಜಿ ಸಿಎಂ ದಿ. ದೇವರಾಜ ಅರಸು ಅವರ ಮೊಮ್ಮಗನಾಗಿದ್ದರು.
  • ಸೂರಜ್ ಹೆಗ್ಡೆ ನಿಧನಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ.

ಮೃತರು ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಮೊಮ್ಮಗನಾಗಿದ್ದು, ಪಕ್ಷದ ಸಂಘಟನೆಯಲ್ಲಿ ಅತ್ಯಂತ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ರಾಜಕೀಯ ಜೀವನ ಆರಂಭಿಸಿದ್ದ ಸೂರಜ್ ಹೆಗ್ಡೆ , ಎಐಸಿಸಿ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೇರಿ ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಸದ್ಯ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದರು.

ಗಣ್ಯರ ಸಂತಾಪ

ಸೂರಜ್ ಹೆಗ್ಡೆ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ತೀವ್ರ ಆಘಾತ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ.

ಸೂರಜ್ ಹೆಗ್ಡೆ ಅವರ ಅಗಲಿಕೆಯ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ಆಘಾತವಾಗಿದೆ. ಇಷ್ಟು ಚಿಕ್ಕ ವಯಸ್ಸಿಗೆ ಅವರು ನಮ್ಮನ್ನು ಅಗಲಿದ್ದಾರೆ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಅವರು ತಮ್ಮ ತಾತ ದೇವರಾಜ ಅರಸು ಅವರ ಹಾದಿಯಲ್ಲೇ ಸಾಗುತ್ತಾ, ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುತ್ತಿದ್ದರು. ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾಗಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದ ಪ್ರಬಲ ನಾಯಕನನ್ನು ಕಾಂಗ್ರೆಸ್ ಪಕ್ಷ ಕಳೆದುಕೊಂಡಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಕಾಂಗ್ರೆಸ್ ನಾಯಕರು ಪ್ರಾರ್ಥಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮೋಹನ್‌ಲಾಲ್ ನಟನೆಯ ‘ದೃಶ್ಯಂ 3’ ಒಟಿಟಿ ರಿಲೀಸ್ ಡೇಟ್ ಫಿಕ್ಸ್? ಇಲ್ಲಿದೆ ಅಪ್‌ಡೇಟ್ – Kannada News

ಭಾರತೀಯ ಚಿತ್ರರಂಗದ ಅತ್ಯುತ್ತಮ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾಗಳ ಪಟ್ಟಿಯನ್ನು ನೋಡಿದರೆ ಅದರಲ್ಲಿ ‘ದೃಶ್ಯಂ’ ಸರಣಿಯ ಚಿತ್ರಗಳು ಮೊದಲ ಸ್ಥಾನದಲ್ಲಿ ನಿಲ್ಲುತ್ತವೆ. ಮಾಲಿವುಡ್ ಸೂಪರ್‌ಸ್ಟಾರ್ ಮೋಹನ್ ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಅವರ ಕಾಂಬಿನೇಷನ್‌ನಲ್ಲಿ ಮೂಡಿಬಂದ ಈ ಚಿತ್ರಗಳು ಪ್ರೇಕ್ಷಕರಿಗೆ ರೋಮಾಂಚಕ ಅನುಭವ ನೀಡುವುದರ ಜೊತೆಗೆ ಬಾಕ್ಸ್ ಆಫೀಸ್‌ನಲ್ಲೂ ಕಲೆಕ್ಷನ್ ಸುರಿಮಳೆಗೈದಿವೆ. ಇದೀಗ ಈ ಸೂಪರ್ ಹಿಟ್ ಸರಣಿಯ ಇತ್ತೀಚಿನ ಚಿತ್ರ ‘ದೃಶ್ಯಂ 3’ ಪ್ರೇಕ್ಷಕರ ಮುಂದೆ ಬಂದಿದೆ. ಮೊದಲ ಎರಡು ಭಾಗಗಳನ್ನು ನಿರ್ದೇಶಿಸಿದ್ದ ಜೀತು ಜೋಸೆಫ್ ಅವರೇ ಈ ಮೂರನೇ ಭಾಗವನ್ನೂ ನಿರ್ದೇಶಿಸಿದ್ದು, ನಟ ಮೋಹನ್ ಲಾಲ್ ಅವರ 66 ನೇ ಹುಟ್ಟುಹಬ್ಬದ ವಿಶೇಷ ಸಂದರ್ಭವಾಗಿ ಮೇ 21 ರಂದು ಈ ಸಿನಿಮಾ ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ.

ಆದಾಗ್ಯೂ, ಮೊದಲ ಎರಡು ಭಾಗಗಳಿಗೆ ಹೋಲಿಸಿದರೆ ಈ ಮೂರನೇ ಭಾಗಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರದಲ್ಲಿ ಮೊದಲಿನಷ್ಟು ಸಸ್ಪೆನ್ಸ್ ಮತ್ತು ರೋಮಾಂಚಕ ಅಂಶಗಳು ಕಂಡುಬಂದಿಲ್ಲ ಎಂಬ ವಿಮರ್ಶೆಗಳು ಕೇಳಿಬಂದಿವೆ. ಹಾಗಿದ್ದರೂ, ಈ ಚಿತ್ರವು ಕಲೆಕ್ಷನ್ ವಿಚಾರದಲ್ಲಿ ಭರ್ಜರಿ ಪ್ರದರ್ಶನ ನೀಡುತ್ತ ಮುನ್ನುಗ್ಗುತ್ತಿದೆ. ವ್ಯಾಪಾರ ಮೂಲಗಳ ಪ್ರಕಾರ, ದೃಶ್ಯಂ 3 ಸಿನಿಮಾ ಇದುವರೆಗೆ ವಿಶ್ವಾದ್ಯಂತ ಬರೋಬ್ಬರಿ 230.23 ಕೋಟಿ ರೂಪಾಯಿ ಗಳಿಕೆ ಮಾಡಿ ದಾಖಲೆ ಬರೆದಿದೆ. ಈ ಚಿತ್ರವು ಕರ್ನಾಟಕದಲ್ಲಿ ಅಷ್ಟಾಗಿ ಸದ್ದು ಮಾಡದಿದ್ದರೂ, ಮಲಯಾಳಂನಲ್ಲಿ ಮಾತ್ರ ಇಂದಿಗೂ ಹೌಸ್‌ಫುಲ್ ಪ್ರದರ್ಶನಗಳೊಂದಿಗೆ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ.

ಇನ್ನು ಚಿತ್ರಮಂದಿರಗಳಲ್ಲಿ ಅಬ್ಬರಿಸಿದ ‘ದೃಶ್ಯಂ 3’ ಚಿತ್ರವನ್ನು ಒಟಿಟಿಯಲ್ಲಿ ನೋಡಲು ಸಿನಿಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಚಿತ್ರದ ಒಟಿಟಿ ಬಿಡುಗಡೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ದೊಡ್ಡ ಅಪ್‌ಡೇಟ್ ವೈರಲ್ ಆಗಿದೆ. ‘ದೃಶ್ಯಂ 3’ ಚಿತ್ರದ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕುಗಳನ್ನು ಪ್ರಮುಖ ಒಟಿಟಿ ಸಂಸ್ಥೆಯಾದ ಅಮೆಜಾನ್ ಪ್ರೈಮ್ ವಿಡಿಯೋ ಭಾರಿ ಮೊತ್ತಕ್ಕೆ ಖರೀದಿಸಿದೆ. ಥಿಯೇಟರ್‌ನಲ್ಲಿ ರಿಲೀಸ್ ಆದ ಆರು ಅಥವಾ ಎಂಟು ವಾರಗಳ ನಂತರ ಒಟಿಟಿಗೆ ತರಬೇಕು ಎಂಬ ಚಿತ್ರರಂಗದ ನಿಯಮವು ಈ ಸಿನಿಮಾಗೂ ಅನ್ವಯಿಸುವುದರಿಂದ, ಜೂನ್ ಕೊನೆಯ ವಾರದಲ್ಲಿ ಇದು ಒಟಿಟಿಗೆ ಬರುವ ಸಾಧ್ಯತೆಯಿದೆ. ಸದ್ಯದ ಮಾಹಿತಿ ಪ್ರಕಾರ, ಜೂನ್ 18 ಅಥವಾ ಜೂನ್ 25 ರಂದು ಈ ಸಿನಿಮಾ ಸ್ಟ್ರೀಮಿಂಗ್ ಆರಂಭಿಸಲಿದ್ದು, ಈ ಬಗ್ಗೆ ಅಧಿಕೃತ ಪ್ರಕಟಣೆ ಶೀಘ್ರದಲ್ಲೇ ಹೊರಬೀಳಲಿದೆ.

ಇದನ್ನೂ ಓದಿ: ಬುಧವಾರವೂ ಜಾರ್ಜ್‌ಕುಟ್ಟಿ ಕಮಾಲ್; 7 ದಿನಕ್ಕೆ ‘ದೃಶ್ಯಂ 3’ ಗಳಿಕೆ ಎಷ್ಟು?

ಆಶೀರ್ವಾದ್ ಸಿನಿಮಾಸ್, ಪನೋರಮಾ ಸ್ಟುಡಿಯೋಸ್ ಮತ್ತು ಪೆನ್ ಸ್ಟುಡಿಯೋಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರದಲ್ಲಿ ಮೋಹನ್ ಲಾಲ್ ಅವರಿಗೆ ಜೋಡಿಯಾಗಿ ನಟಿ ಮೀನಾ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಇವರೊಂದಿಗೆ ಅನ್ಸಿಬಾ ಹಾಸನ್, ಎಸ್ತರ್ ಅನಿಲ್, ಕಲಾಭವನ್ ಶಾಜನ್, ಸಿದ್ದಿಕ್, ಮುರಳಿ ಗೋಪಿ, ಆಶಾ ಶರತ್ ಹಾಗೂ ಬಿಜು ಮೆನನ್ ಒಳಗೊಂಡ ದೊಡ್ಡ ತಾರಾಗಣವೇ ಚಿತ್ರದಲ್ಲಿದೆ. ಇನ್ನು ಚಿತ್ರದ ಕಥೆಗೆ ತಕ್ಕಂತೆ ಅನಿಲ್ ಜಾನ್ಸನ್ ಅವರು ಅದ್ಭುತವಾಗಿ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಏಷ್ಯಾಡ್ ಕ್ರಿಕೆಟ್ ಟೂರ್ನಿ ವೇಳಾಪಟ್ಟಿ ಪ್ರಕಟ – Kannada News

ಜಪಾನ್​ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನ (ಏಷ್ಯಾಡ್) ಕ್ರಿಕೆಟ್ ಪಂದ್ಯಾವಳಿಗಳ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿದೆ. ಐಚಿ ಪ್ರಿಫೆಕ್ಚರ್‌ನಲ್ಲಿರುವ ಕೊರೋಗಿ ಅಥ್ಲೆಟಿಕ್ ಪಾರ್ಕ್‌ನಲ್ಲಿ ನಡೆಯಲಿರುವ ಈ ಟಿ20 ಟೂರ್ನಿಯು 2026ರ ಸೆಪ್ಟೆಂಬರ್ 17 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಅಕ್ಟೋಬರ್ 3 ರಂದು ನಡೆಯಲಿದೆ. ಕಳೆದ ಬಾರಿ ಚೀನಾದಲ್ಲಿ ನಡೆದ ಪಂದ್ಯಾವಳಿಯಲ್ಲಿ ಐತಿಹಾಸಿಕ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದ ಭಾರತದ ಪುರುಷರ ಮತ್ತು ಮಹಿಳಾ ಕ್ರಿಕೆಟ್ ತಂಡಗಳು, ಈ ಬಾರಿಯೂ ಪ್ರಶಸ್ತಿ ಉಳಿಸಿಕೊಳ್ಳುವ ನೆಚ್ಚಿನ ತಂಡಗಳಾಗಿ ಕಣಕ್ಕಿಳಿಯಲಿವೆ.

ಮಹಿಳಾ ಮತ್ತು ಪುರುಷರ ಪಂದ್ಯಗಳ ವೇಳಾಪಟ್ಟಿ:

ಈ ಬಾರಿಯ ಪಂದ್ಯಾವಳಿಯಲ್ಲಿ ಒಟ್ಟು ಎರಡು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿದ್ದು, ವೇಳಾಪಟ್ಟಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ:

  • ಮಹಿಳಾ ಕ್ರಿಕೆಟ್ ಪಂದ್ಯಾವಳಿ: ಸೆಪ್ಟೆಂಬರ್ 17 ರಿಂದ ಸೆಪ್ಟೆಂಬರ್ 22, 2026.
  •  ಪುರುಷರ ಕ್ರಿಕೆಟ್ ಪಂದ್ಯಾವಳಿ: ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 3, 2026.

ಪಂದ್ಯದ ಸಮಯ:

ಭಾರತ ಮತ್ತು ಜಪಾನ್ ನಡುವಿನ ಸಮಯದ ವ್ಯತ್ಯಾಸದಿಂದಾಗಿ, ಭಾರತೀಯ ಕ್ರಿಕೆಟ್ ಅಭಿಮಾನಿಗಳು ಬೆಳ್ಳಂಬೆಳಿಗ್ಗೆಯೇ ಪಂದ್ಯಗಳನ್ನು ಆನಂದಿಸಬಹುದಾಗಿದೆ.

  •  ಮೊದಲ ಪಂದ್ಯ: ಭಾರತೀಯ ಕಾಲಮಾನ ಮುಂಜಾನೆ 5:30 ಕ್ಕೆ ಆರಂಭವಾಗಲಿದೆ..
  •  ಎರಡನೇ ಪಂದ್ಯ: ಭಾರತೀಯ ಕಾಲಮಾನ ಬೆಳಿಗ್ಗೆ 10:30 ಕ್ಕೆ ಆರಂಭವಾಗಲಿದೆ.

ಕಣಕ್ಕಿಳಿಯುವ ತಂಡಗಳಾವುವು?

ಈ ಬಾರಿಯ ಏಷ್ಯನ್ ಗೇಮ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪುರುಷರ ವಿಭಾಗದಲ್ಲಿ 10 ತಂಡಗಳು ಮತ್ತು ಮಹಿಳಾ ವಿಭಾಗದಲ್ಲಿ 8 ತಂಡಗಳು ಚಿನ್ನದ ಪದಕಕ್ಕಾಗಿ ಕಣಕ್ಕಿಳಿಯಲಿವೆ.

  • ಪುರುಷರ ತಂಡಗಳು:
  • ಭಾರತ
  • ಪಾಕಿಸ್ತಾನ್
  • ಬಾಂಗ್ಲಾದೇಶ್
  • ಶ್ರೀಲಂಕಾ
  • ಅಫ್ಘಾನಿಸ್ತಾನ್
  • ಜಪಾನ್
  • ನೇಪಾಳ
  • ಜಮಾನ್
  • ಹಾಂಗ್​ಕಾಂಗ್
  • ಮಲೇಷ್ಯಾ.

ಇದನ್ನೂ ಓದಿ: ವೈಭವ್ ಸೂರ್ಯವಂಶಿ ಎಂಟ್ರಿ: ಟೀಮ್ ಇಂಡಿಯಾದ 3 ತಂಡಗಳು ಪ್ರಕಟ

  • ಮಹಿಳಾ ತಂಡಗಳು:
  • ಭಾರತ
  • ಪಾಕಿಸ್ತಾನ್
  • ಬಾಂಗ್ಲಾದೇಶ್
  • ಶ್ರೀಲಂಕಾ
  • ಜಪಾನ್
  • ಥಾಯ್ಲೆಂಡ್
  • ಮಲೇಷ್ಯಾ
  • ಚೀನಾ

ಟೂರ್ನಿಯ ಸ್ವರೂಪ:

ಟಿ20 ಸ್ವರೂಪದಲ್ಲಿ ನಡೆಯಲಿರುವ ಈ ಟೂರ್ನಿಯನ್ನು  ಪ್ರಾಥಮಿಕ ಹಂತ ಮತ್ತು ನಾಕೌಟ್ ಹಂತಗಳಾಗಿ ವಿಂಗಡಿಸಲಾಗಿದೆ. ಅದರಂತೆ ಮೊದಲ ಸುತ್ತಿನಲ್ಲಿ ದುರ್ಬಲ ತಂಡಗಳು ಮಾತ್ರ ಕಣಕ್ಕಿಳಿಯಲಿವೆ. ಅಂದರೆ ಅಗ್ರ ಶ್ರೇಯಾಂಕದ 4 ಬಲಿಷ್ಠ ತಂಡಗಳಾದ ಭಾರತ, ಪಾಕಿಸ್ತಾನ್, ಶ್ರೀಲಂಕಾ ಮತ್ತು ಬಾಂಗ್ಲಾದೇಶ್​ ನೇರವಾಗಿ ಕ್ವಾರ್ಟರ್ ಫೈನಲ್​ನಲ್ಲಿ ಕಣಕ್ಕಿಳಿಯಲಿವೆ.

ಅದಕ್ಕೂ ಮುನ್ನ ನಡೆಯುವ ಪ್ರಾಥಮಿಕ ಹಂತದಲ್ಲಿ ಉಳಿದ 6 ತಂಡಗಳನ್ನು ತಲಾ 3 ತಂಡಗಳಂತೆ ಎರಡು ಗ್ರೂಪ್‌ಗಳಾಗಿ ವಿಂಗಡಿಸಲಾಗುತ್ತದೆ. ಈ ತಂಡಗಳು ಸಿಂಗಲ್ ರೌಂಡ್-ರಾಬಿನ್ ಮಾದರಿಯಲ್ಲಿ ತಲಾ ಎರಡು ಪಂದ್ಯಗಳನ್ನು ಆಡಲಿವೆ.

ಎರಡೂ ಗ್ರೂಪ್‌ಗಳಿಂದ ಅಗ್ರಸ್ಥಾನ ಪಡೆಯುವ ಒಟ್ಟು 4 ತಂಡಗಳು (ಪ್ರತಿ ಗ್ರೂಪ್‌ನಿಂದ ಟಾಪ್ 2 ತಂಡಗಳು) ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಡಲಿವೆ. ಆ ಬಳಿಕ 8 ತಂಡಗಳ ನಡುವೆ ನಾಕೌಟ್ ಪಂದ್ಯಗಳು ನಡೆಯಲಿವೆ. ನಾಕೌಟ್ ಹಂತದಲ್ಲಿ ಗೆಲ್ಲುವ 4 ತಂಡಗಳು ಸೆಮಿಫೈನಲ್​ಗೇರಲಿದ್ದು, ಅಲ್ಲಿ ಗೆಲ್ಲುವ ತಂಡಗಳು ಚಿನ್ನದ ಪದಕಕ್ಕಾಗಿ ಪೈನಲ್ ಆಡಲಿವೆ.

ಏಷ್ಯನ್ ಗೇಮ್ಸ್​ಗೆ ಭಾರತ ಟಿ20 ತಂಡ:

ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪಾನಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್​ಪ್ರೀತ್ ಬುಮ್ರಾ ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ವೈಭವ್ ಸೂರ್ಯವಂಶಿ.

Source link

ತಾತ, ಅಪ್ಪನ ಹಾದಿಯಲ್ಲಿ ಅಜಯ್ ದೇವಗನ್ ಪುತ್ರ ಯುಗ್: ಜಿಮ್ ವಿಡಿಯೋ ವೈರಲ್ – Kannada News

ಬಾಲಿವುಡ್‌ನ ಸ್ಟಾರ್ ಜೋಡಿ ಅಜಯ್ ದೇವಗನ್ ಮತ್ತು ಕಾಜೋಲ್ ಅವರ ಮುದ್ದಿನ ಮಗ ಯುಗ್ ದೇವಗನ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ತಮ್ಮ ಅದ್ಭುತ ಬಾಡಿ ಟ್ರಾನ್ಸ್‌ಫಾರ್ಮೇಶನ್ ಮೂಲಕ ಯುಗ್ ಎಲ್ಲರ ಗಮನ ಸೆಳೆದಿದ್ದಾರೆ. 15 ವರ್ಷದ ಯುಗ್‌ ಫಿಟ್‌ನೆಸ್ ನೋಡಿದರೆ, ಅವರು ಅಜ್ಜ, ಖ್ಯಾತ ಸಾಹಸ ನಿರ್ದೇಶಕ ವೀರೂ ದೇವಗನ್ ಮತ್ತು ತಂದೆ ಅಜಯ್ ದೇವಗನ್ ಅವರ ಹೆಜ್ಜೆಗಳನ್ನು ಅನುಸರಿಸುತ್ತಿರುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ.

ಪ್ರಸ್ತುತ ಯುಗ್ ದೇವಗನ್ ಜಿಮ್‌ನಲ್ಲಿ ಕಸರತ್ತು ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಯುಗ್ ಕಠಿಣವಾದ ಪುಷ್-ಅಪ್ಸ್‌ಗಳನ್ನು ಮಾಡುತ್ತಿರುವುದನ್ನು ಕಾಣಬಹುದು. ಅವನು ಜಿಮ್ ವರ್ಕೌಟ್ ಆರಂಭಿಸಿದ ದಿನಗಳಿಂದ ಹಿಡಿದು, ಪ್ರಸ್ತುತ ಅವರ ದೇಹ ಈಗ ಹೇಗೆ ಬದಲಾಗಿದೆ ಎಂಬ ಸಂಪೂರ್ಣವಾಗಿ ವಿಡಿಯೋದಲ್ಲಿ ತೋರಿಸಲಾಗಿದೆ. ಯುಗ್‌ ಅವರ ಆರಂಭಿಕ ಮತ್ತು ಇಂದಿನ ಬಾಡಿಯನ್ನು ಹೋಲಿಸಿ ನೋಡಿದರೆ, ಅವರ ಕಠಿಣ ಪರಿಶ್ರಮ ಕಾಣುತ್ತದೆ.

ಯುಗ್‌ನ ಅವರ ಅದ್ಭುತ ಬದಲಾವಣೆಯನ್ನು ನೋಡಿ ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ. ಈಗಾಗಲೇ ಫಿಟ್‌ನೆಸ್ ಪ್ರೇಮಿಯಾಗಿರುವ ಯುಗ್‌ನ ಕಠಿಣ ಪರಿಶ್ರಮ, ದೈಹಿಕ ಸಾಮರ್ಥ್ಯ ಮತ್ತು ತ್ರಾಣವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಜನರು ಮುಕ್ತಕಂಠದಿಂದ ಶ್ಲಾಘಿಸುತ್ತಿದ್ದಾರೆ.

ವಿಡಿಯೋ ಹಂಚಿಕೊಂಡ ಫಿಟ್‌ನೆಸ್ ತರಬೇತುದಾರ ರಾಬಿನ್ ಬಹ್ಲ್

ಖ್ಯಾತ ಕ್ರೀಡಾಪಟು ಮತ್ತು ಫಿಟ್‌ನೆಸ್ ಟ್ರೇನರ್ ರಾಬಿನ್ ಬಹ್ಲ್ ಅವರು ಯುಗ್‌ನ ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಜೊತೆಗೆ ಭಾವುಕ ಸಾಲುಗಳನ್ನು ಬರೆದುಕೊಂಡಿರುವ ಅವರು, ‘ಈ ಜಿಮ್‌ನಲ್ಲಿ ಅತ್ಯಂತ ಕಷ್ಟಪಟ್ಟು ಕೆಲಸ ಮಾಡುವ ಹುಡುಗ ಇವನೇ. ಅವನ ಸಮರ್ಪಣಾ ಮನೋಭಾವವನ್ನು ನೋಡುವುದು ನನಗೆ ಸ್ಫೂರ್ತಿ ನೀಡುತ್ತದೆ. ಅವನನ್ನು ಅತ್ಯುತ್ತಮ ಫಿಟ್‌ನೆಸ್ ಶಿಖರಕ್ಕೆ ಕೊಂಡೊಯ್ಯಲು ಮತ್ತು ಈ ಜರ್ನಿಯನ್ನು ಮುಂದುವರಿಸಲು ನನಗೆ ಇದು ಪ್ರೇರಣೆ ನೀಡಿದೆ. ಇದು ಕೇವಲ ಆರಂಭವಷ್ಟೇ’ ಎಂದು ಯುಗ್‌ನನ್ನು ಹೊಗಳಿದ್ದಾರೆ.

ಇದನ್ನೂ ಓದಿ: ಅಜಯ್ ದೇವಗನ್​ಗಿಂತ ಅಕ್ಷಯ್ ಕುಮಾರ್ ಸಂಬಳ ಹೆಚ್ಚು? ಸ್ಪಷ್ಟನೆ ನೀಡಿದ ಚಿತ್ರತಂಡ

ರಾಬಿನ್ ಬಹ್ಲ್ ಅವರ ಈ ಪೋಸ್ಟ್‌ಗೆ ಯುಗ್ ಅವರ ತಾಯಿ, ನಟಿ ಕಾಜೋಲ್ ಕಾಮೆಂಟ್ ಬಾಕ್ಸ್‌ನಲ್ಲಿ ‘ಫೈರ್’ ಎಮೋಜಿಯನ್ನು ಹಾಕುವ ಮೂಲಕ ಮಗನಿಗೆ ಬೆಂಬಲ ನೀಡಿದ್ದಾರೆ.

ಯುಗ್ ಮಾಧ್ಯಮಗಳ ಕ್ಯಾಮೆರಾಗಳಿಂದ ಮತ್ತು ಗ್ಲಾಮರ್ ಪ್ರಪಂಚದಿಂದ ದೂರ ಉಳಿಯಲು ಬಯಸುತ್ತಾರೆ. ಕೆಲವೇ ಕೆಲವು ಕಾರ್ಯಕ್ರಮಗಳಲ್ಲಿ ಮಾತ್ರ ಅವರು ಪೋಷಕರ ಜೊತೆ ಕಾಣಿಸಿಕೊಳ್ಳುತ್ತಾರೆ. ಯುಗ್ ಈಗಾಗಲೇ ಚಿತ್ರರಂಗಕ್ಕೆ ಪರೋಕ್ಷವಾಗಿ ಕಾಲಿಟ್ಟಿರುವುದು ಹಲವರಿಗೆ ತಿಳಿದಿಲ್ಲ. ಹೌದು, ಪ್ರಸಿದ್ಧ ಹಾಲಿವುಡ್ ಚಿತ್ರ ‘ಕರಾಟೆ ಕಿಡ್- ಲೆಜೆಂಡ್ಸ್’ ಸಿನಿಮಾದ ಹಿಂದಿ ಆವೃತ್ತಿಗೆ ಯುಗ್ ಧ್ವನಿ ನೀಡಿದ್ದಾರೆ. ಅಂದರೆ, ಅವರು ಈ ಚಿತ್ರಕ್ಕೆ ಡಬ್ಬಿಂಗ್ ಆರ್ಟಿಸ್ಟ್ ಆಗಿ ಕೆಲಸ ಮಾಡಿದ್ದಾರೆ. ಸದ್ಯ ಯುಗ್ ಸಿನಿಮಾ ಕೆಲಸಗಳ ಜೊತೆಗೆ ತನ್ನ ವಿದ್ಯಾಭ್ಯಾಸದ ಕಡೆಯೂ ಸಂಪೂರ್ಣ ಗಮನ ಹರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version