’25 ಕೋಟಿಗೂ ಹೆಚ್ಚು ಜನ ಬಡತನದಿಂದ ಹೊರಬಂದಿದ್ದಾರೆ’; ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ – Kannada News | Over 25 Crore People Lifted Out Of Poverty President Droupadi Murmu Addresses Nation On Independence Day Eve
ನವದೆಹಲಿ, ಆಗಸ್ಟ್ 14: ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಇಂದು (ಆಗಸ್ಟ್ 14) ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ದೇಶ-ವಿದೇಶಗಳಲ್ಲಿರುವ ಎಲ್ಲಾ ಭಾರತೀಯರಿಗೂ ಶುಭಾಶಯ ಕೋರಿದರು. ಇದೇ ಮೊದಲ ಬಾರಿ ರಾಷ್ಟ್ರಪತಿಗಳ ಭಾಷಣಕ್ಕೂ ಮುನ್ನ ‘ವಂದೇ ಮಾತರಂ’ ಗೀತೆ ಮೊಳಗಿತು. ನಂತರ ರಾಷ್ಟ್ರಗೀತೆಯಾದ ‘ಜನ ಗಣ ಮನ’ವನ್ನು ಪ್ರಸಾರ ಮಾಡಲಾಯಿತು. “ದೇಶದಲ್ಲಿ 25 ಕೋಟಿಗೂ ಹೆಚ್ಚು (250 ಮಿಲಿಯನ್) ಜನರನ್ನು ಬಡತನದಿಂದ ಹೊರತರಲಾಗಿದೆ. ಹೆಣ್ಣುಮಕ್ಕಳ ಶಿಕ್ಷಣದಲ್ಲಿ ಹೊಸ ಮೈಲಿಗಲ್ಲುಗಳನ್ನು…