Headlines

ಗುಂಡಿ ಬಿದ್ದ ಗುಂಡ್ಲುಪೇಟೆ ಮುಖ್ಯ ರಸ್ತೆಗಳನ್ನು ಸ್ವಂತ ವೆಚ್ಚದಲ್ಲಿ ಮುಚ್ಚಿದ ಕೂಲಿ ಕಾರ್ಮಿಕ – Kannada News | Shafiullah: The Common Man Who Fills Potholes Amidst Political Neglect

ಚಾಮರಾಜನಗರ, ಜು.24: ಜಿಲ್ಲಾ ಕೇಂದ್ರದಿಂದ ಗುಂಡ್ಲುಪೇಟೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು ತೀವ್ರವಾಗಿ ಹದಗೆಟ್ಟಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆಯುಂಟುಮಾಡುತ್ತಿದೆ. ಹಲವು ವರ್ಷಗಳಿಂದ ಗುಂಡಿಗಳಿಂದ ತುಂಬಿಹೋಗಿರುವ ಈ ರಸ್ತೆಯನ್ನು ದುರಸ್ತಿಪಡಿಸುವಂತೆ ಸಾರ್ವಜನಿಕರು ಹಾಗೂ ಕೂಲಿ ಕಾರ್ಮಿಕ ಶಫಿಉಲ್ಲಾ ಅವರು ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಬೇಸತ್ತ ಶಫಿಉಲ್ಲಾ, ತಮ್ಮ ಕಾಯಕದ ಮೂಲಕ ಗಳಿಸಿದ ಹಣವನ್ನೇ ವೆಚ್ಚ ಮಾಡಿ, ರಸ್ತೆಯ ಗುಂಡಿಗಳಿಗೆ ಮಣ್ಣು ಹಾಕಿ ತಾತ್ಕಾಲಿಕವಾಗಿ ಮುಚ್ಚುವ ಕೆಲಸಕ್ಕೆ ಮುಂದಾಗಿದ್ದಾರೆ. ಬೈಪಾಸ್…

Read More

ಕುಟುಂಬದ ಜೊತೆ ‘ಜನ ನಾಯಗನ್’ ಸಿನಿಮಾ ನೋಡಿ ಎಂಜಾಯ್ ಮಾಡಿದ ತ್ರಿಷಾ ಕೃಷ್ಣನ್ – Kannada News | Trisha Watches CM Vijay Last Movie Jana Nayagan with Family Video from Theatre Goes Viral

ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಅವರ ಕೊನೆಯ ಸಿನಿಮಾ ‘ಜನ ನಾಯಗನ್’ (Jana Nayagan) ಜುಲೈ 23 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಚಿತ್ರಕ್ಕೆ ಮೊದಲ ದಿನವೇ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಸಿಕ್ಕಿದ್ದು, ಬಾಕ್ಸ್ ಆಫೀಸ್‌ನಲ್ಲೂ ಉತ್ತಮ ಕಲೆಕ್ಷನ್ ಮಾಡಿದೆ. ಸಿಎಂ ವಿಜಯ್ ಅವರು ತಮ್ಮ ಅಧಿಕಾರಿಗಳೊಂದಿಗೆ ಈ ಚಿತ್ರವನ್ನು ವೀಕ್ಷಿಸಿದ್ದಾರೆ. ಇನ್ನು ಕಾಲಿವುಡ್‌ನ ಹಲವು ಸೆಲೆಬ್ರಿಟಿಗಳು ಸಹ ಮೊದಲ ದಿನವೇ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಶೇಷವೆಂದರೆ, ನಟಿ ತ್ರಿಷಾ ಕೃಷ್ಣನ್ ಅವರು ‘ಜನ ನಾಯಗನ್’…

Read More

Video: ಮೈಸೂರಿನ ಚಾಮುಂಡಿದೇವಿಗೆ ಎರಡನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ವಿಜೃಂಭಣೆಯ ಪೂಜೆ – Kannada News | Special Puja for Chamundidevi on Second Ashada Friday at Mysores Chamundi Hills

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಎರಡನೇ ಶುಕ್ರವಾರದಂದು ಚಾಮುಂಡಿದೇವಿಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಅತ್ಯಂತ ವಿಜೃಂಭಣೆಯಿಂದ ಜರುಗುತ್ತಿದೆ. ಈ ಪುಣ್ಯ ದಿನದಂದು ನಾಡದೇವಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ಮೈಸೂರು ನಗರ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯ ಭಕ್ತಾದಿಗಳು ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದಾರೆ ಎರಡನೇ ವಾರದ ಆಷಾಢ ಮಾಸದ ಶುಕ್ರವಾರದ ಹಿನ್ನೆಲೆಯಲ್ಲಿ, ಬೆಟ್ಟದಲ್ಲಿ ಹಲವಾರು ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದರ ಭಾಗವಾಗಿ, ಪಾರಾಯಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ವಿಶ್ವೇಶ್ವರ…

Read More

‘ಅದು ನನ್ನ ಸಿನಿಮಾ ಆಗಿರಲಿಲ್ಲ’; ‘ಬಂದರ್’ ಚಿತ್ರದ ಬಗ್ಗೆ ಅನುರಾಗ್ ಕಶ್ಯಪ್ ಬೇಸರ – Kannada News | Anurag Kashyap Distances Himself from Bandar Says Misogyny and Anti MeToo Criticisms are Valid

ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ (Anurag Kashyap) ನಿರ್ದೇಶನದ  ಇತ್ತೀಚಿನ ಚಿತ್ರ ‘ಬಂದರ್’ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡ ಬೆನ್ನಲ್ಲೇ ತೀವ್ರ ವಿವಾದಕ್ಕೆ ಸಿಲುಕಿದೆ. ಈ ಸಿನಿಮಾ ಮಹಿಳಾ ವಿರೋಧಿಯಾಗಿದೆ ಮತ್ತು ‘ಮೀಟೂ ಚಳವಳಿ’ಗೆ ವಿರುದ್ಧವಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಕುರಿತು ಸ್ವತಃ ಮುಕ್ತವಾಗಿ ಮಾತನಾಡಿರುವ ಅನುರಾಗ್ ಕಶ್ಯಪ್, ಪ್ರೇಕ್ಷಕರು ಮತ್ತು ವಿಮರ್ಶಕರು ಮಾಡುತ್ತಿರುವ ಟೀಕೆಗಳು ನಿಜವಾದವು ಎಂದು ಒಪ್ಪಿಕೊಂಡಿದ್ದಾರೆ. ಆದರೆ, ಇದಕ್ಕೆ ಸಂಪೂರ್ಣವಾಗಿ ತಾವೊಬ್ಬರೇ ಕಾರಣವಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ. ಇದು ನನ್ನ…

Read More

SIR ಕರ್ತವ್ಯದ ವೇಳೆ ಮತ್ತೊಂದು ದುರಂತ: ಬಿಎಲ್‌ಒ ಶಿಕ್ಷಕಿ ಹೃದಯಾಘಾತದಿಂದ ಸಾವು! – Kannada News | Bengaluru: BLO Teacher Dies of Cardiac Arrest Amid SIR Duty Pressure

ಬೆಂಗಳೂರು, ಜುಲೈ 24: ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನಿರತರಾಗಿದ್ದ ಬಿಎಲ್‌ಒ (BLO) ಕರ್ತವ್ಯದಲ್ಲಿದ್ದ ಮತ್ತೊಬ್ಬರು ಶಿಕ್ಷಕಿಯೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕುರುಬರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದ ಶಮಂತಾಕುಮಾರಿ (44) ಮೃತಪಟ್ಟವರಾಗಿದ್ದಾರೆ. ಇತ್ತೀಚೆಗಷ್ಟೇ ಇವರನ್ನು SIR ಪ್ರಕ್ರಿಯೆಯ ಬಿಎಲ್‌ಒ ಡ್ಯೂಟಿಗೆ ನಿಯೋಜಿಸಲಾಗಿತ್ತು. ಈ ಹಿಂದೆ ತುಮಕೂರು ಮೂಲದ ಶಿಕ್ಷಕಿ ಭುವನಾ ಪರಿಷ್ಕರಣೆಗೆ ತೆರಳುತ್ತಿದ್ದ ವೇಳೆ ಅಪಘಾತದಿಂದ ಮೃತಪಟ್ಟಿದ್ದರು. ಮೇಲಾಧಿಕಾರಿಗಳ ಒತ್ತಡವೇ ಕಾರಣವೆಂದು ಕುಟುಂಬಸ್ಥರ ಆರೋಪ SIR ಪ್ರಕ್ರಿಯೆಯನ್ನು ಆದಷ್ಟು ಬೇಗ ಮುಗಿಸುವಂತೆ ಮೇಲಾಧಿಕಾರಿಗಳು ತೀವ್ರ ಒತ್ತಡ…

Read More

Video: ನನ್ನ ಆಟೋ ಪ್ರಯಾಣಿಸುವ ಹೆಣ್ಣು ಮಕ್ಕಳು ಸೇಫ್; ಅದ್ಭುತ ಸಾಲಿನಿಂದಲೇ ಧೈರ್ಯ ತುಂಬಿದ ಆಟೋ ಡ್ರೈವರ್ – Kannada News | An auto rickshaw driver instilled courage through a line written on the back of the seat.

ಹೆಣ್ಣು ಮಕ್ಕಳಿಗೆ ಸುರಕ್ಷತೆ ಇಲ್ಲ. ಆಟೋ ಹಾಗೂ ಬಸ್ಸಿನಲ್ಲಿ ಒಂಟಿಯಾಗಿ ಓಡಾಡುವುದೇ ಕಷ್ಟ. ಹೀಗಿರುವಾಗ ತನ್ನ ಆಟೋ ಹತ್ತುವ ಹೆಣ್ಣು ಮಕ್ಕಳಿಗೆ ಧೈರ್ಯ ತುಂಬಿದ್ದಾನೆ. ಆಟೋ ಡ್ರೈವರ್‌ (auto driver) ತನ್ನ ಸೀಟಿನ ಹಿಂಭಾಗದಲ್ಲಿ ನಿಮ್ಮ ಸುರಕ್ಷತೆ ನನಗೆ ಮುಖ್ಯ, ಯಾವುದೇ ಭಯ ಬೇಡ ಆರಾಮಾಗಿ ಕುಳಿತುಕೊಳ್ಳಿ ಬರೆದಿದ್ದಾನೆ. ಈ ಸಾಲುಗಳು ನೆಟ್ಟಿಗರ ಗಮನ ಸೆಳೆದಿದೆ. ನೂರ್ಜಹನ್ ಬಿ (Noorjahan B) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಆಟೋ ಹಿಂಬದಿ ಬರೆಯಲಾದ ಅರ್ಥ…

Read More

Spiritual Tips: ಲಕ್ಷ್ಮಿಯ ಕೃಪೆ, ಆರ್ಥಿಕ ಸ್ಥಿರತೆಗಾಗಿ ವೀಳ್ಯದೆಲೆಯ ಮೇಲೆ ದೀಪ ಬೆಳಗಿಸಿ; ಶಾಸ್ತ್ರೋಕ್ತ ವಿಧಾನ ಇಲ್ಲಿದೆ – Kannada News | Betel Leaf Lamp Pooja: Spiritual Benefits for Prosperity and Peace

ಭಾರತೀಯ ಆಧ್ಯಾತ್ಮಿಕ ಸಂಪ್ರದಾಯದಲ್ಲಿ, ಪ್ರತಿಯೊಂದು ಪೂಜಾ ವಸ್ತುವಿಗೂ ತನ್ನದೇ ಆದ ವಿಶೇಷ ಮತ್ತು ಪವಿತ್ರವಾದ ಸ್ಥಾನವಿದೆ. ಅವುಗಳಲ್ಲಿ ‘ವೀಳ್ಯದ ಎಲೆ’ (ತಾಂಬೂಲ) ಅತ್ಯಂತ ಶ್ರೇಷ್ಠವೆಂದು ಪರಿಗಣಿಸಲಾಗಿದೆ. ವಿವಾಹ, ವ್ರತ, ಹೋಮ-ಹವನಗಳು ಮತ್ತು ದೇವತೆಗಳ ಆರಾಧನೆಯಂತಹ ಪ್ರತಿಯೊಂದು ಶುಭ ಸಮಾರಂಭಗಳಲ್ಲಿಯೂ ವೀಳ್ಯದ ಎಲೆ ಕಡ್ಡಾಯ. ಅದೇ ರೀತಿ, ವೀಳ್ಯದ ಎಲೆಯ ಮೇಲೆ ದೀಪವನ್ನು ಇಟ್ಟು ಬೆಳಗಿಸುವ ಪದ್ಧತಿಯು ಅತ್ಯಂತ ಪ್ರಾಚೀನ ಹಾಗೂ ಮಂಗಳಕರವಾದ ಆಚರಣೆಯಾಗಿದೆ. ಈ ಪೂಜೆಯು ಮನೆಯಲ್ಲಿ ಶುಭ ಶಕ್ತಿಯನ್ನು ಹೆಚ್ಚಿಸಿ, ಸಂತೋಷ ಮತ್ತು ಶಾಂತಿಯನ್ನು ತರುತ್ತದೆ…

Read More

ಕರ್ನಾಟಕ ಸರ್ಕಾರಿ ಪದವಿ ಕಾಲೇಜುಗಳಲ್ಲಿ ನಕಲಿ ಪಿಎಚ್‌ಡಿ ಪ್ರಮಾಣಪತ್ರ ಅಕ್ರಮ: 249 ಅತಿಥಿ ಉಪನ್ಯಾಸಕರ ವಿರುದ್ಧ ಕೇಸ್​ಗೆ ಸೂಚನೆ – Kannada News | Karnataka Fake PhD Certificate Scam: Criminal Cases Ordered Against 249 Guest Lecturers in Government Colleges

ಕಲಬುರಗಿ, ಜುಲೈ 24: ಕರ್ನಾಟಕದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 249 ಅತಿಥಿ ಉಪನ್ಯಾಸಕರು ನಕಲಿ ಪಿಎಚ್‌ಡಿ (PhD) ಪ್ರಮಾಣಪತ್ರಗಳನ್ನು ಸಲ್ಲಿಸಿ ನೇಮಕಾತಿ ಪಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರಿಗೆ ಕೂಡಲೇ ಕ್ರಿಮಿನಲ್ ಪ್ರಕರಣ ದಾಖಲಿಸಿ, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಆಯುಕ್ತರು ಜುಲೈ 21ರಂದು ಈ ಕುರಿತು ಆದೇಶ ಹೊರಡಿಸಿದ್ದು, ನಕಲಿ ಪಿಎಚ್‌ಡಿ ಪ್ರಮಾಣಪತ್ರ ಸಲ್ಲಿಸಿದ ಅತಿಥಿ…

Read More

ಏನಿದು ‘ಸೆಕ್ಷನ್ 301’? ಡೊನಾಲ್ಡ್ ಟ್ರಂಪ್ ಇದನ್ನು ಅಸ್ತ್ರವಾಗಿಸಿಕೊಂಡಿದ್ದೇಕೆ? ಒಂದೇ ತಕ್ಕಡಿಯಲ್ಲಿ ಭಾರತ, ಪಾಕಿಸ್ತಾನ – Kannada News | Section 301: Trump’s Trade War and India’s Tariff Challenge. Why India with Pakistan

ವಾಷಿಂಗ್ಟನ್, ಜುಲೈ 24: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ತಮ್ಮ ಅಮೆರಿಕ ಫಸ್ಟ್​ ನೀತಿಯ ಭಾಗವಾಗಿ ಮತ್ತೊಮ್ಮೆ ಸುಂಕ ಯುದ್ಧವನ್ನು ಆರಂಭಿಸಿದ್ದಾರೆ. ಅಮೆರಿಕದ ಹಳೆಯ ವ್ಯಾಪಾರ ಕಾನೂನು ಸೆಕ್ಷನ್ 301 ಅನ್ನು ಬಳಸಿಕೊಂಡು, ಭಾರತ ಸೇರಿದಂತೆ ವಿಶ್ವದ 60ಕ್ಕೂ ಹೆಚ್ಚು ದೇಶಗಳ ರಫ್ತು ಉತ್ಪನ್ನಗಳ ಮೇಲೆ ಶೇಕಡಾ 10ರಿಂದ 12.5ರಷ್ಟು ಹೆಚ್ಚುವರಿ ಆಮದು ಸುಂಕವನ್ನು ವಿಧಿಸಿದ್ದಾರೆ. ಆಶ್ಚರ್ಯಕರವಾಗಿ, ಈ ಸುಂಕ ಪಟ್ಟಿಯಲ್ಲಿ ಭಾರತವನ್ನು ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳ ಸಾಲಿನಲ್ಲಿ (ಶೇ. 10 ರ ಸುಂಕ) ನಿಲ್ಲಿಸಲಾಗಿದ್ದರೆ,…

Read More

ಕಾರಿನಲ್ಲಿ ಹೋಗುತ್ತಿದ್ದಾಗ ಎದುರಾಯ್ತು ಹುಲಿ: ಗುಂಡ್ಲುಪೇಟೆಯಲ್ಲಿ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಚಾಮರಾಜನಗರ, ಜು.24: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ರಂಗನಾಥಪುರ ಗ್ರಾಮದ ಹೊರವಲಯದಲ್ಲಿ ಕಳೆದೆರಡು ದಿನಗಳಿಂದ ಹುಲಿಯೊಂದು ಬಿಂದಾಸ್ ಆಗಿ ಸಂಚರಿಸುತ್ತಿದ್ದು, ಸ್ಥಳೀಯ ಗ್ರಾಮಸ್ಥರು ಹಾಗೂ ರೈತರಲ್ಲಿ ತೀವ್ರ ಭೀತಿ ವಾತಾವರಣ ನಿರ್ಮಾಣವಾಗಿದೆ. ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಬಫರ್ ವಲಯದ (Buffer Zone) ವ್ಯಾಪ್ತಿಗೆ ಬರುವ ರಂಗನಾಥಪುರ ಗ್ರಾಮದ ಸುತ್ತಮುತ್ತಲಿನ ಜಮೀನುಗಳಲ್ಲಿ ಈ ಹುಲಿರಾಯ ಪ್ರತ್ಯಕ್ಷನಾಗಿದ್ದು, ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರೈತರು ಭಯಪಡುವಂತಾಗಿದೆ. ಇಂದು ಬೆಳಿಗ್ಗೆ ರೈತರು ಕಾರಿನಲ್ಲಿ ತಮ್ಮ ಜಮೀನಿನ ಕಡೆಗೆ ತೆರಳುತ್ತಿದ್ದಾಗ, ಮಾರ್ಗಮಧ್ಯದಲ್ಲೇ ಹುಲಿಯು ಜಮೀನಿನ…

Read More