ಗುಂಡಿ ಬಿದ್ದ ಗುಂಡ್ಲುಪೇಟೆ ಮುಖ್ಯ ರಸ್ತೆಗಳನ್ನು ಸ್ವಂತ ವೆಚ್ಚದಲ್ಲಿ ಮುಚ್ಚಿದ ಕೂಲಿ ಕಾರ್ಮಿಕ – Kannada News | Shafiullah: The Common Man Who Fills Potholes Amidst Political Neglect
ಚಾಮರಾಜನಗರ, ಜು.24: ಜಿಲ್ಲಾ ಕೇಂದ್ರದಿಂದ ಗುಂಡ್ಲುಪೇಟೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು ತೀವ್ರವಾಗಿ ಹದಗೆಟ್ಟಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆಯುಂಟುಮಾಡುತ್ತಿದೆ. ಹಲವು ವರ್ಷಗಳಿಂದ ಗುಂಡಿಗಳಿಂದ ತುಂಬಿಹೋಗಿರುವ ಈ ರಸ್ತೆಯನ್ನು ದುರಸ್ತಿಪಡಿಸುವಂತೆ ಸಾರ್ವಜನಿಕರು ಹಾಗೂ ಕೂಲಿ ಕಾರ್ಮಿಕ ಶಫಿಉಲ್ಲಾ ಅವರು ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಬೇಸತ್ತ ಶಫಿಉಲ್ಲಾ, ತಮ್ಮ ಕಾಯಕದ ಮೂಲಕ ಗಳಿಸಿದ ಹಣವನ್ನೇ ವೆಚ್ಚ ಮಾಡಿ, ರಸ್ತೆಯ ಗುಂಡಿಗಳಿಗೆ ಮಣ್ಣು ಹಾಕಿ ತಾತ್ಕಾಲಿಕವಾಗಿ ಮುಚ್ಚುವ ಕೆಲಸಕ್ಕೆ ಮುಂದಾಗಿದ್ದಾರೆ. ಬೈಪಾಸ್…