Headlines

‘ಸ್ಪಿರಿಟ್’ ಕೆಲಸ ಬಿಟ್ಟು ‘ಧುರಂಧರ್ 2’ ನೋಡಲು ಬಂದ ಪ್ರಭಾಸ್, ಸಂದೀಪ್ ರೆಡ್ಡಿ ವಂಗಾ

ಟಾಲಿವುಡ್‌ ನಟ ಪ್ರಭಾಸ್ (Prabhas) ಮತ್ತು ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರು ಈಗ ‘ಸ್ಪಿರಿಟ್’ (Spirit) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಸಿನಿಮಾದ ಕೆಲಸಗಳ ನಡುವೆ ಸಣ್ಣ ವಿರಾಮ ಪಡೆದುಕೊಂಡು ಚಿತ್ರಮಂದಿರಕ್ಕೆ ಬಂದಿದ್ದಾರೆ. ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ (Dhurandhar 2) ಸಿನಿಮಾ ವೀಕ್ಷಿಸಲು ಸಂದೀಪ್ ರೆಡ್ಡಿ ವಂಗಾ ಮತ್ತು ಪ್ರಭಾಸ್ ಅವರು ಥಿಯೇಟರ್‌ಗೆ ಭೇಟಿ ನೀಡಿದ್ದಾರೆ. ಚಿತ್ರಮಂದಿರದಲ್ಲಿ ಅವರಿಬ್ಬರು ಜೊತೆಯಾಗಿ ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…

Read More

ಪಿಯುಸಿ ನಂತರ AI ಲೋಕಕ್ಕೆ ಎಂಟ್ರಿ; ಆರ್ಟ್ಸ್, ಕಾಮರ್ಸ್ ಅಥವಾ ಸೈನ್ಸ್ ಯಾವುದೇ ಇರಲಿ, ನಿಮಗೂ ಇದೆ ಭವಿಷ್ಯ!

ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನವು ವೇಗವಾಗಿ ಬೆಳೆಯುತ್ತಿದೆ. ಈ ಬದಲಾವಣೆಯ ಮುಂಚೂಣಿಯಲ್ಲಿರುವುದು ‘ಆರ್ಟಿಫಿಶಿಯಲ್ ಇಂಟೆಲಿಜೆನ್ಸ್’ ಅಥವಾ ಕೃತಕ ಬುದ್ಧಿಮತ್ತೆ (AI). ಪಿಯುಸಿ ಬಳಿಕ ಕೇವಲ ಸೈನ್ಸ್ ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಆರ್ಟ್ಸ್ ಮತ್ತು ಕಾಮರ್ಸ್ ವಿಭಾಗದ ವಿದ್ಯಾರ್ಥಿಯಾಗಿದ್ದರೂ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಕ್ಷೇತ್ರದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಇಂದು ಹಲವು ಅವಕಾಶಗಳಿವೆ. ಯಂತ್ರಗಳಿಗೆ ಮನುಷ್ಯನಂತೆ ಆಲೋಚಿಸುವ ಮತ್ತು ಕಲಿಯುವ ಶಕ್ತಿಯನ್ನು ತುಂಬುವ ಈ ತಂತ್ರಜ್ಞಾನವು ಮುಂಬರುವ ದಶಕಗಳಲ್ಲಿ ಜಗತ್ತನ್ನು ಆಳಲಿದೆ. ಇದು ಪ್ರತಿಯೊಂದು ಕ್ಷೇತ್ರವನ್ನೂ ಆವರಿಸಿಕೊಳ್ಳುತ್ತಿರುವುದರಿಂದ, ನಿಮ್ಮ ಆಸಕ್ತಿಯ ಕ್ಷೇತ್ರಕ್ಕೆ…

Read More

Bihar Politics: ಬಿಹಾರದಲ್ಲಿ ನಿತೀಶ್ ಯುಗಾಂತ್ಯ: ಮುಂದಿನ ವಾರ ರಾಜೀನಾಮೆ ಸಾಧ್ಯತೆ, ಸಾಮ್ರಾಟ್ ಚೌಧರಿ ನೂತನ ಸಿಎಂ?

ಪಾಟ್ನಾ, ಏಪ್ರಿಲ್ 09: ಬಿಹಾರದ ರಾಜಕೀಯ ಇತಿಹಾಸದಲ್ಲಿ ಒಂದು ಸುದೀರ್ಘ ಮತ್ತು ಪ್ರಭಾವಶಾಲಿ ಅಧ್ಯಾಯ ಈಗ ಅಂತ್ಯದತ್ತ ಸಾಗುತ್ತಿದೆ. ಕಳೆದ ಎರಡು ದಶಕಗಳಿಂದ ಬಿಹಾರ ರಾಜಕಾರಣದಲ್ಲಿ ಆಳವಾಗಿ ಬೇರೂರಿದ್ದ  ನಿತೀಶ್ ಕುಮಾರ್(Nitish Kumar), ಈಗ ಪಾಟ್ನಾದಿಂದ ದೆಹಲಿಯ ರಾಜಕೀಯ ಅಂಗಳಕ್ಕೆ ತಮ್ಮ ಪಯಣ ಬೆಳೆಸಿದ್ದಾರೆ. ನಿತೀಶ್ ಯುಗಾಂತ್ಯ: ಬಿಹಾರದ ಚಾಣಕ್ಯನ ದೆಹಲಿ ಪಯಣ ಬಿಹಾರ ರಾಜಕೀಯದಲ್ಲಿ ‘ಸುಶಾಸನ್ ಬಾಬು’ ಎಂದೇ ಖ್ಯಾತರಾದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರ ಎರಡು ದಶಕಗಳ ಮುಖ್ಯಮಂತ್ರಿ ಪರ್ವ ಮುಕ್ತಾಯವಾಗುತ್ತಿದೆ. ರಾಜ್ಯ…

Read More

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026: ಆನ್​​​ಲೈನ್​​​ನಲ್ಲಿ ರಿಸಲ್ಟ್ ಪ್ರಕಟ

ಬೆಂಗಳೂರು, (ಏಪ್ರಿಲ್ 09): 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ (Karnataka 2nd PUC Result 2026) ಹೊರಬಿದ್ದಿದೆ. ಆನ್​​ಲೈನ್​​ ನಲ್ಲಿ ಫಲಿತಾಂಶ ಪ್ರಕಟವಾಗಿದ್ದು,  ಬಳಿಕ  ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು (ಏಪ್ರಿಲ್ 09) ಸಂಜೆ 6ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ  ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ  ಪ್ರಕಟಿಸಲಿದ್ದಾರೆ. ಇದಕ್ಕೂ ಮೊದಲು ಆನ್​​ಲೈನ್​​ನಲ್ಲಿ https://karresults.nic.in ವೆಬ್​​ಸೈಟ್ ಮೂಲಕ ಫಲಿತಾಂಶವನ್ನು ಪರಿಶೀಲನೆ ಮಾಡಬಹುದು. ಒಂದು ವೇಳೆ…

Read More

‘ದರ್ಶನ’ ಸಿನಿಮಾ ಮುಹೂರ್ತ: ತಬಲಾ ನಾಣಿ ಮಾತಿಗೆ ನಕ್ಕು ಸುಸ್ತಾದ ಜನ

ಇತ್ತೀಚೆಗಷ್ಟೆ ಕನ್ನಡದ ಮೂರು ಸಿನಿಮಾಗಳ (Cinema) ಮುಹೂರ್ತ ಒಟ್ಟಿಗೆ ನಡೆದಿದೆ. ‘ದರ್ಶನ’, ‘ಸೀತಾರಾಮ ರಾಜು’ ಮತ್ತು ‘ಕಾಡ’ ಸಿನಿಮಾದ ಮುಹೂರ್ತಗಳು ಒಟ್ಟಿಗೆ ನಡೆದಿದ್ದು, ಸಿನಿಮಾಗಳಲ್ಲಿ ನಟಿಸುತ್ತಿರುವ ಪ್ರಮುಖ ನಟ, ನಟಿಯರು ಮುಹೂರ್ತದಲ್ಲಿ ಹಾಜರಾಗಿದ್ದರು. ಮಾಧ್ಯಮಗಳೊಟ್ಟಿಗೆ ಸಿನಿಮಾಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಪೃಥ್ವಿ ಅಂಬರ್ ನಟಿಸುತ್ತಿರುವ ‘ದರ್ಶನ’ ಸಿನಿಮಾನಲ್ಲಿ ನಟಿಸಲಿರುವ ಪೋಷಕ ನಟ ತಬಲಾ ನಾಣಿ ಮುಹೂರ್ತದ ವೇಳೆ ಮಾತನಾಡಿದ್ದು, ಅವರ ತಮಾಷೆ ಮಾತುಗಳು ಕೇಳಿ ಸಭಿಕರು ನಕ್ಕು ಹಗುರಾದರು. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ರಾಷ್ಟ್ರೀಯ ಸಿನಿಮಾ ಅಕಾಡೆಮಿ ಪ್ರಶಸ್ತಿ ಘೋಷಣೆ: ಯಾರಿಗೆಲ್ಲ ಸಿಕ್ಕಿತು ಅವಾರ್ಡ್

ಭಾರತದ 12 ಚಿತ್ರರಂಗಗಳನ್ನು (Movie Industry) ಪ್ರತಿನಿಧಿಸುವ ಭಾರತೀಯ ರಾಷ್ಟ್ರೀಯ ಸಿನಿ ಅಕಾಡೆಮಿ ತಮ್ಮ 2026ರ ಐಎನ್​​ಸಿಎ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಭಾಷಾವಾರು ಈ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಕನ್ನಡದಲ್ಲಿ ಎಲ್ಲ ಪ್ರಶಸ್ತಿಗಳನ್ನು ‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕೆ ನೀಡಲಾಗಿದೆ. ‘ಕಾಂತಾರ: ಚಾಪ್ಟರ್ 1’ ಹೊರತಾಗಿ ಇನ್ಯಾವ ಕನ್ನಡ ಸಿನಿಮಾಕ್ಕೂ ಐಎನ್​​ಸಿಎ ಪ್ರಶಸ್ತಿ ಲಭಿಸಿಲ್ಲ. ಅತ್ಯುತ್ತಮ ನಟ, ನಟಿ, ನಿರ್ದೇಶಕ ಮತ್ತು ಸಿನಿಮಾ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಐಎನ್​​ಸಿಎ ಘೋಷಿಸಿದೆ. ಕನ್ನಡ ವಿಭಾಗದಲ್ಲಿ ಅತ್ಯುತ್ತಮ ಸಿನಿಮಾ ‘ಕಾಂತಾರ: ಚಾಪ್ಟರ್ 1’,…

Read More

ಬಾಲ ಬಿಚ್ಚಿದರೆ ಗಡೀಪಾರು: ಛೋಟಾ ಮುಂಬೈ ಖ್ಯಾತಿಯ ಹುಬ್ಬಳ್ಳಿಯಲ್ಲಿ ರೌಡಿಗಳಿಗೆ ಕಮಿಷನರ್ ಖಡಕ್ ಎಚ್ಚರಿಕೆ

ಹುಬ್ಬಳ್ಳಿ, ಏಪ್ರಿಲ್ 9: ಛೋಟಾ ಮುಂಬೈ ಖ್ಯಾತಿಯ ಹುಬ್ಬಳ್ಳಿಯಲ್ಲಿ (Hubballi-Dharawad) ಇತ್ತೀಚೆಗೆ ಪುಡಿ ರೌಡಿಗಳ ಉಪಟಳ ಮತ್ತು ಚಾಕು ಇರಿತದಂತಹ ಕೃತ್ಯಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ, ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ನಗರದ ಹಳೆ ಸಿಎಆರ್ (CAR) ಮೈದಾನದಲ್ಲಿ ಇಂದು ನಡೆದ ಬೃಹತ್ ರೌಡಿ ಪರೇಡ್‌ನಲ್ಲಿ 450ಕ್ಕೂ ಹೆಚ್ಚು ರೌಡಿ ಶೀಟರ್‌ಗಳು ಭಾಗಿಯಾಗಿದ್ದರು. ಬಾಲ ಬಿಚ್ಚಿದರೆ ಗುಂಡಾ ಕಾಯ್ದೆ ನೆತ್ತಿ ಸುಡುವ ಬಿಸಿಲಿನಲ್ಲಿ ನಡೆದ ಈ ಪರೇಡ್‌ನಲ್ಲಿ ಒಬ್ಬೊಬ್ಬರ ಹಳೆಯ ಇತಿಹಾಸ…

Read More

ಡೆಲಿವರಿ ಬಾಯ್​​ಗೆ ಬೆದರಿಸಿ ತಡ ರಾತ್ರಿ ಹಣ ಪೀಕಿದ ಗುಂಪು: ದೂರು ನೀಡದಂತೆಯೂ ಬೆದರಿಕೆ

ಬೆಂಗಳೂರು, ಏಪ್ರಿಲ್​​ 09: ತಡ ರಾತ್ರಿಯೂ ಕೆಲಸ ಮಾಡುವ ಡೆಲಿವರಿ ಬಾಯ್​​ಗಳನ್ನೇ ಟಾರ್ಗೆಟ್​​ ಮಾಡಿ ದೋಚುವ ಪ್ರಕರಣಗಳು ಬೆಂಗಳೂರಲ್ಲಿ (Bengaluru) ಮೇಲಿಂದ ಮೇಲೆ ನಡೆಯುತ್ತಿದ್ದು, ಇವುಗಳ ಸಾಲಿಗೆ ಮತ್ತೊಂದು ಕೇಸ್​​ ಸೇರ್ಪಡೆಯಾಗಿದೆ. ನಗರದ ನೆಕ್ಸಸ್​​ ಮಾಲ್​​ ಬಳಿ ನಿಂತಿದ್ದ 19 ವರ್ಷದ ಡೆಲಿವರಿ ಬಾಯ್​​ನ ಬೆದರಿಸಿರುವ ಮೂರು ಮಂದಿಯ ಗುಂಪು, ಆನ್‌ಲೈನ್ ಮೂಲಕ 49 ಸಾವಿರ ರೂಪಾಯಿ ಹಣವನ್ನು ವರ್ಗಾಯಿಸಿಕೊಂಡಿರುವ ಬಗ್ಗೆ ದೂರು ದಾಖಲಾಗಿದೆ. ಯುವಕನ ಮೇಲೆ ಹಲ್ಲೆ ನಡೆಸಿರುವ ಬಗ್ಗೆಯೂ ಆರೋಪಿಸಲಾಗಿದೆ. ಮಾರ್ಚ್​​ 31ರ ರಾತ್ರಿ…

Read More

IPL 2026: RCB ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಬಹುತೇಕ ಖಚಿತ

IPL 2026: ಐಪಿಎಲ್ 2026ರ 16ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬಲಿಷ್ಠ ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು ಎದುರಿಸಲಿದೆ. ಗುವಾಹಟಿಯ ಎಸಿಎ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸತತ ಗೆಲುವಿನ ಓಟವನ್ನು ಮುಂದುವರಿಸುವ ಗುರಿಯನ್ನು ಆರ್​ಸಿಬಿ ಹೊಂದಿದೆ. ಇದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ. RCB ತಂಡದ ಬಲ: ಬ್ಯಾಟರ್​ಗಳೇ ಆರ್​ಸಿಬಿ ತಂಡದ ಬಲಿಷ್ಠ ಶಕ್ತಿ. ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಅವರ ಸ್ಫೋಟಕ ಆರಂಭವು ತಂಡಕ್ಕೆ…

Read More

ಧೋಬಿ ಎಲ್ಲಿ ಡೈಮಂಡ್ ಡೀಲ್ಸ್ ಎಲ್ಲಿ? ಬಟ್ಟೆ ಒಗೆಯುವವನಿಗೆ 598 ಕೋಟಿ ರೂ ಟ್ಯಾಕ್ಸ್ ನೋಟೀಸ್ ಬಂದಿದ್ದು ಯಾಕೆ?

ಅಜ್ಮೇರ್, ಏಪ್ರಿಲ್ 9: ಬಟ್ಟೆ ಒಗೆಯುವ ಕಾಯದ ಧೋಬಿಗೆ ಆದಾಯ ತೆರಿಗೆ ಇಲಾಖೆಯಿಂದ (Income Tax) ಬರೋಬ್ಬರಿ 598 ಕೋಟಿ ರೂಗಳ ಟ್ಯಾಕ್ಸ್ ನೋಟೀಸ್ ಬಂದಿದೆ. ಧೋಬಿ ಹೆಸರಲ್ಲಿ ದೊಡ್ಡ ಪ್ರಮಾಣದ ಡೈಮಂಡ್ ವ್ಯಾಪಾರ ನಡೆದಿದ್ದ ಹಿನ್ನೆಲೆಯಲ್ಲಿ ಇನ್ಕಮ್ ಟ್ಯಾಕ್ಸ್ ಇಲಾಖೆಯು ಆತನ ಬೆನ್ನು ಬಿದ್ದಿದೆ. ರಾಜಸ್ಥಾನದ ಅಜ್ಮೇರ್ ನಗರದ ರಾಮಗಂಜ್ ಎಂಬಲ್ಲಿನ ರಸ್ತೆಬದಿಯಲ್ಲಿ ಬಟ್ಟೆ ಒಗೆಯುವ ಮತ್ತು ಇಸ್ತ್ರಿ ಮಾಡುವ ಅಂಗಡಿ ಇಟ್ಟುಕೊಂಡಿರುವ ಜಿತೇಂದ್ರ ಕುಮಾರ್ ಎನ್ನುವ ಈ ಅಮಾಯಕ ವ್ಯಕ್ತಿ ಈಗ ನೂರಾರು ಕೋಟಿ…

Read More