Headlines

ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?; ವಿಡಿಯೋ ವೈರಲ್​​

ಬಾಗಲಕೋಟೆ, ಏಪ್ರಿಲ್​​ 09: ಉಪ ಚುನಾವಣೆ ಗೆಲ್ಲಲು ಕಾಂಗ್ರೆಸಿಗರು ಕೋಟ್ಯಾಂತರ ರೂಪಾಯಿ ಹಣವನ್ನು ಹಂಚಿಕೆ ಮಾಡಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ದೂರಿದ್ದ ಬೆನ್ನಲ್ಲೇ ಮತದಾರರಿಗೆ ಕಾಂಗ್ರೆಸಿಗರು 500 ರೂಪಾಯಿ ಹಂಚಿರುವ ಆರೋಪ ಕೇಳಿಬಂದಿದೆ. ನವನಗರದ ವಾಂಬೆ ಕಾಲೋನಿಯಲ್ಲಿ ಕಾರಲ್ಲಿ ಬಂದವರು ಮತದಾರರಿಗೆ ಹಣ ನೀಡಿ ಆಮಿಷವೊಡ್ಡಿದ್ದು, ಕಾಂಗ್ರೆಸಿಗರು ಕೇವಲ ಐದುನೂರು ಕೊಟ್ಟರು ಎಂದು ಮಹಿಳೆಯೋರ್ವರು ಅಲವತ್ತುಕೊಂಡ ಪ್ರಸಂಗ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Video: ಮೈಸೂರ್ ಸಿಲ್ಕ್ ಸೀರೆ ಖರೀದಿಸಲು ಮುಂಜಾನೆ 4 ಗಂಟೆಗೆ ಸರತಿ ಸಾಲಿನಲ್ಲಿ ನಿಂತ ಬೆಂಗಳೂರಿನ ಯುವತಿ

ಬೆಂಗಳೂರು, ಏಪ್ರಿಲ್‌ 09: ಹೆಣ್ಣಿನ ಅಂದ ಚಂದವನ್ನು ಹೆಚ್ಚಿಸುವುದೇ ಈ ಸೀರೆ . ಎಷ್ಟೇ ಫ್ಯಾಶನ್‌, ಟ್ರೆಂಡಿ ಉಡುಗೆಗಳು ಬಂದರೂ ಸೀರೆಯ ಕ್ರೇಜ್‌ ಮಾತ್ರ ಕಡಿಮೆಯಾಗಿಲ್ಲ. ಅದರಲ್ಲೂ ಮೈಸೂರು ಸಿಲ್ಕ್ ಸೀರೆಗೆ ಎಲ್ಲಿಲ್ಲದ ಬೇಡಿಕೆಯಿದೆ. ಹೀಗಾಗಿ ಎಷ್ಟೇ ದುಬಾರಿಯಾದ್ರು ಈ ಸೀರೆಯನ್ನು ಖರೀದಿಸದೇ ಇರಲಾರರು. ಬೆಂಗಳೂರಿನಲ್ಲಿ (Bengaluru) ಕೆಎಸ್‌ಐಸಿ (KSIC) ಮೈಸೂರು ಸಿಲ್ಕ್ ಸೀರೆಗಾಗಿ ಯುವತಿಯೂ ಬೆಳಗಿನ ಜಾವ 4 ಗಂಟೆಗೆ ಬಂದು 6 ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಂತು ಸೀರೆ ಖರೀದಿಸಿದ ಘಟನೆ ವೈರಲ್…

Read More

Naim Qassem Killed: ಇಸ್ರೇಲಿ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆ

ಇಸ್ರೇಲ್, ಏಪ್ರಿಲ್ 09: ಇರಾನ್ ಮತ್ತು ಅಮೆರಿಕ ನಡುವೆ 14 ದಿನಗಳ ಕದನ ವಿರಾಮ ಘೋಷಣೆಯಾಗಿರುವ ನಡುವೆ, ಇಸ್ರೇಲ್ ಹಿಜ್ಬುಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್‌ನನ್ನು ಕೊಂದಿರುವುದಾಗಿ ಹೇಳಿಕೊಂಡಿದೆ. ಯುದ್ಧದ ಹೊರತಾಗಿ, ಇಸ್ರೇಲ್ ಲೆಬನಾನ್‌ನಲ್ಲಿ ಹಿಜ್ಬೊಲ್ಲಾ ಮೇಲೆ ಭಾರೀ ದಾಳಿ ನಡೆಸುತ್ತಿದೆ. ಈ ದಾಳಿಗಳಲ್ಲಿ ಖಾಸಿಮ್ ಸಾವನ್ನಪ್ಪಿದ್ದಾನೆ ಎಂದು ಶಂಕಿಸಲಾಗಿದೆ.ಬೈರುತ್‌ನಲ್ಲಿ ನಡೆದ ಗುರಿ ದಾಳಿಯಲ್ಲಿ ಖಾಸಿಮ್ ಸಾವನ್ನಪ್ಪಿದ್ದಾನೆ. ಈ ದಾಳಿಗಳಲ್ಲಿ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಫೆಬ್ರವರಿ 28 ರಂದು ಭುಗಿಲೆದ್ದ ಈ ಸಂಘರ್ಷವು…

Read More

ಕಥೆಕದ್ದ ಆರೋಪದ ಬೆನ್ನಲ್ಲೇ ‘ಧುರಂಧರ್ 2’ ಚಿತ್ರಕ್ಕೆ ಮತ್ತೊಂದು ಶಾಕ್; ಪ್ರಮುಖ ಹಾಡು ಡಿಲೀಟ್?

‘ಧುರಂಧರ್ 2’ (Dhurandhar 2) ರಿಲೀಸ್ ಆಗಿ ತಿಂಗಳು ಕಳೆಯುತ್ತಾ ಬರುತ್ತಿರುವಾಗ ಚಿತ್ರಕ್ಕೆ ತೊಂದರೆ ಮೇಲೆ ತೊಂದರೆ ಎದುರಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಕಥೆ ಕದ್ದಿದ್ದು ಎಂಬ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಸಿನಿಮಾದ ಹಾಡೊಂದಕ್ಕೆ ಕತ್ತರಿ ಬೀಳುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಆ ಹಾಡನ್ನು ಉಳಿಸಿಕೊಳ್ಳಬೇಕು ಎಂದಾದರೆ ಇವರು ದೊಡ್ಡ ಮೊತ್ತ ಪಾವತಿಸಬೇಕಾಗಿ ಬರಹುದು ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ. ‘ಧುರಂಧರ್ 2’ ಸಿನಿಮಾನ ಆದಿತ್ಯ ಧಾರ್ ಹಾಗೂ ಜಿಯೋ…

Read More

‘ಜಾಂಬಿ ಡ್ರಗ್’ ಬಗ್ಗೆ ದುನಿಯಾ ವಿಜಿ ಆತಂಕ: ಯುವಕರು, ಪೋಷಕರಿಗೆ ಮನವಿ

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಕೆಲ ವಿಡಿಯೋಗಳು ವೈರಲ್ ಆಗುತ್ತಿವೆ. ಲೋಕದ ಪರಿವೆ ಇಲ್ಲದೆ ನಿಂತಿದ್ದ ಕಡೆಯೇ ನಿಂತು, ವಾಲಾಡುತ್ತಾ ಇರುವ ಯುವಕರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಅವರ ಈ ಸ್ಥಿತಿಗೆ ಹೊಸದಾಗಿ ಬಂದಿರುವ ಜಾಂಬಿ ಡ್ರಗ್ (Zombie drug) ಕಾರಣ ಎನ್ನಲಾಗುತ್ತಿದೆ. ‘ಜಾಂಬಿ ಡ್ರಗ್’ ಮಾದಕ ವಸ್ತು ಸೇವಿಸಿದರೆ ಹೀಗೆ ಯುವಕರು ನಿಂತಿದ್ದ ಕಡೆಯೇ ನಿಂತಿರುತ್ತಾರೆ, ಸಿನಿಮಾಗಳ ಬರುವ ಜಾಂಬಿ ರೀತಿಯ ಸ್ಥಿತಿಗೆ ತಲುಪುತ್ತಾರೆ ಎನ್ನಲಾಗುತ್ತಿದೆ. ಈ ರೀತಿಯ ಮಾದಕ ವಸ್ತು ಬೆಂಗಳೂರಿಗೂ ಬಂದಿದೆ…

Read More

VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ 14ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವು ಕೇವಲ ರನ್ ರೋಚಕತೆಗೆ ಮಾತ್ರವಲ್ಲದೆ, ಕ್ರೀಡಾಂಗಣದಲ್ಲಿ ಕಂಡುಬಂದ ಅಸಾಧಾರಣ ಫೀಲ್ಡಿಂಗ್ ಸಾಹಸಕ್ಕೂ ಸಾಕ್ಷಿಯಾಯಿತು. ಗುಜರಾತ್ ಟೈಟಾನ್ಸ್ ತಂಡದ ಆಟಗಾರ ಗ್ಲೆನ್ ಫಿಲಿಪ್ಸ್ ಅವರು ಅಸಾಧ್ಯವೆನಿಸುವ ಕ್ಯಾಚ್ ಒಂದನ್ನು ಹಿಡಿಯಲು ಪ್ರಯತ್ನಿಸಿ ಕ್ರಿಕೆಟ್ ಲೋಕವನ್ನು ಬೆರಗುಗೊಳಿಸಿದ್ದಾರೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಚೇಸಿಂಗ್ ಮಾಡುತ್ತಿದ್ದಾಗ 6ನೇ ಓವರ್‌ನಲ್ಲಿ…

Read More

ನಿಮ್ಮ ಬಿಲ್‌ನಲ್ಲಿ ‘M.D. Penalty’ ಬರುತ್ತಿದೆಯೇ? ದಂಡದಿಂದ ತಪ್ಪಿಸಿಕೊಳ್ಳಲು ಈ ಸರಳ ಸೂತ್ರ ಅನುಸರಿಸಿ!

ಬೆಂಗಳೂರು, ಏ.9: ನಿಮ್ಮ ವಿದ್ಯುತ್ ಬಿಲ್‌ನಲ್ಲಿ ‘M.D. Penalty’ (Maximum Demand Penalty) ಏಕೆ ಬರುತ್ತದೆ ಮತ್ತು ಅದನ್ನು ತಪ್ಪಿಸುವುದು ಹೇಗೆ ಎಂಬ ಬಗ್ಗೆ ಮಹಿಳೆಯೊಬ್ಬರು ವಿಡಿಯೋ ಮಾಡಿದ್ದಾರೆ, ಇದನ್ನು @Karnataka Portfolio ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘M.D. Penalty’ ಎಂದರೆ ವಿದ್ಯುತ್​​​​ನ ಗರಿಷ್ಠ ಬೇಡಿಕೆ ದಂಡ. ಇದನ್ನು ಯಾಕೆ ವಿಧಿಸಲಾಗುತ್ತದೆ ಎಂಬ ಬಗ್ಗೆ ವಿವರವಾಗಿ ಹೇಳಿದ್ದಾರೆ. ನೀವು ನಿಮ್ಮ ಮನೆಗೆ ಅಥವಾ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಪಡೆಯುವಾಗ ಇಂತಿಷ್ಟೇ ಕಿಲೋವ್ಯಾಟ್ (kw) ವಿದ್ಯುತ್ ಬಳಸುತ್ತೇವೆ ಎಂದು…

Read More

Video: ಪಶ್ಚಿಮ ಬಂಗಾಳ ಚುನಾವಣೆ, ಜನತೆಗೆ 6 ಭರವಸೆಗಳ ಕೊಟ್ಟ ಪ್ರಧಾನಿ ಮೋದಿ

ಕೋಲ್ಕತ್ತಾ, ಏಪ್ರಿಲ್ 09: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜನತೆಗೆ ಪ್ರಧಾನಿ ನರೇಂದ್ರ ಮೋದಿ 6 ಭರವಸೆಗಳನ್ನು ಕೊಟ್ಟಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಭ್ರಷ್ಟರನ್ನು ಜೈಲಿಗೆ ಕಳುಹಿಸಲಾಗುತ್ತದೆ ಮತ್ತು ಎಲ್ಲಾ ಹಳೆಯ ಹಗರಣದ ಕಡತಗಳನ್ನು ಮತ್ತೆ ತೆರೆಯಲಾಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಟಿಎಂಸಿ ಹರಡಿರುವ ಭಯ ಮತ್ತು ಭಯೋತ್ಪಾದನೆಯನ್ನು ಬಿಜೆಪಿ ಕೊನೆಗೊಳಿಸುತ್ತದೆ ಮತ್ತು ರಾಜ್ಯದಲ್ಲಿ ಕಾನೂನಿನ ಮೇಲಿನ ನಂಬಿಕೆಯನ್ನು ಪುನಃಸ್ಥಾಪಿಸುತ್ತದೆ. ಟಿಎಂಸಿ ಆಳ್ವಿಕೆಯಲ್ಲಿ ಮಹಿಳೆಯರಿಗೆ ಆಗಿರುವ ಪ್ರತಿಯೊಂದು ಹಗರಣ, ಭ್ರಷ್ಟಾಚಾರ ಮತ್ತು ಅನ್ಯಾಯದ …

Read More

ಮೂರು ತಿಂಗಳಲ್ಲಿ 80,000 ಟೆಕ್ಕಿಗಳ ಲೇ ಆಫ್; ಮುಂದೈತೆ ಇನ್ನೂ ದೊಡ್ಡ ಬಲಿ

ನವದೆಹಲಿ, ಏಪ್ರಿಲ್ 9: ಎಐ ಬೆಳವಣಿಗೆ ಮತ್ತು ಅಳವಡಿಕೆಯ ಫಲ ಪೂರ್ಣವಾಗಿ ಸಿಗುವಂತಾಗಲು ಬಹಳ ದಿನಗಳು ಬೇಕು. ಆದರೆ, ಈಗಲೇ ಹಲವು ಟೆಕ್ ಕಂಪನಿಗಳು ಲೇ ಆಫ್​ಗೆ ತೊಡಗಿವೆ. ಜಾಗತಿಕ ತಂತ್ರಜ್ಞಾನ ಕ್ಷೇತ್ರದ ಸಂಸ್ಥೆಗಳು ಈ ವರ್ಷದ ಮೊದಲ ಕ್ವಾರ್ಟರ್​ನಲ್ಲಿ (ಜನವರಿ-ಮಾರ್ಚ್) 80,000 ಉದ್ಯೋಗಿಗಳನ್ನು ಮನೆಗೆ ಕಳುಹಿಸಿವೆ. ರ್ಯಾಷನಲ್ ಎಫ್​ಎಕ್ಸ್ (RationalFX) ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, ಜನವರಿ 1ರಿಂದ ಏಪ್ರಿಲ್ 1ರವರೆಗೆ 78,557 ಮಂದಿಯನ್ನು ಲೇ ಆಫ್ (Lay offs) ಮಾಡಲಾಗಿದೆ. ಇದು ಅಧಿಕೃತವಾಗಿ ಲೇ…

Read More

ಬಾಗಲಕೋಟೆ ಉಪಚುನಾವಣೆ: ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!

ಬಾಗಲಕೋಟೆ, ಏಪ್ರಿಲ್ 9: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹಕ್ಕು ಚಲಾಯಿಸಲು ಗೋವಾದಲ್ಲಿ ನೆಲೆಸಿದ್ದ ಕರ್ನಾಟಕದ ಮತದಾರರು ವಿಶೇಷ ಆಸಕ್ತಿ ತೋರಿದ್ದಾರೆ. ಕ್ಷೇತ್ರದ ವ್ಯಾಪ್ತಿಯ ಮಾದಾಪುರ ಗ್ರಾಮದ ಸುಮಾರು 70 ರಿಂದ 80 ಮತದಾರರು ಎರಡು ಖಾಸಗಿ ಬಸ್‌ಗಳ ಮೂಲಕ ಗೋವಾದಿಂದ ಸ್ವಗ್ರಾಮಕ್ಕೆ ಆಗಮಿಸಿದ್ದಾರೆ. ಉದ್ಯೋಗಕ್ಕಾಗಿ ಗೋವಾಕ್ಕೆ ವಲಸೆ ಹೋಗಿದ್ದ ಇವರು, ಮಾದಾಪುರ ಗ್ರಾಮದ ಮತಗಟ್ಟೆಗಳಲ್ಲಿ ಉತ್ಸಾಹದಿಂದ ಸರದಿಯಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಚುನಾವಣೆ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More