IND vs AFG: 3 ವರ್ಷಗಳ ನಂತರ ಭಾರತದ ನೆಲದಲ್ಲಿ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ – Kannada News

ಅಫ್ಘಾನಿಸ್ತಾನದ ವಿರುದ್ಧ ನ್ಯೂ ಚಂಡೀಗಢದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣಗೂ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕಿದೆ. ಅನುಭವಿ ಮೊಹಮ್ಮದ್ ಸಿರಾಜ್ ಅವರೊಂದಿಗೆ ತಂಡದ ಬೌಲಿಂಗ್ ದಾಳಿಯ ಜವಾಬ್ದಾರಿಯನ್ನು ಹೊತ್ತಿರುವ ಪ್ರಸಿದ್ಧ್ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂದು ಅಮೋಘ ಪ್ರದರ್ಶನ ನೀಡುವ ಮೂಲಕ ಎರಡು ಪ್ರಮುಖ ವಿಕೆಟ್‌ಗಳನ್ನು ಪಡೆದರು. ಅಚ್ಚರಿಯ ಸಂಗತಿಯೆಂದರೆ ಇದು ಭಾರತದ ನೆಲದಲ್ಲಿ ಅದರಲ್ಲೂ ಟೆಸ್ಟ್ ಕ್ರಿಕೆಟ್​ನಲ್ಲಿ ಪ್ರಸಿದ್ಧ್ ಪಡೆದ ಮೊಟ್ಟ ಮೊದಲ ವಿಕೆಟ್ ಆಗಿತ್ತು.

ಆಟದ ಎರಡನೇ ದಿನದಂದು ಪ್ರಸಿದ್ಧ್ ಒಟ್ಟು 7 ಓವರ್‌ಗಳನ್ನು ಬೌಲ್ ಮಾಡಿ 27 ರನ್‌ಗಳಿಗೆ 2 ವಿಕೆಟ್‌ಗಳನ್ನು ಪಡೆದರು. ಪ್ರಸಿದ್ಧ್ ದಾಳಿಗೆ ಬಲಿಯಾದವರಲ್ಲಿ ಆರಂಭಿಕ ಸೇದಿಕುಲ್ಲಾ ಅಟಲ್‌ ಹಾಗೂ ನಾಯಕ ಹಶ್ಮತುಲ್ಲಾ ಶಾಹಿದಿ ಸೇರಿದ್ದರು. ಮೇಲೆ ಹೇಳಿದಂತೆ ಭಾರತದ ನೆಲದಲ್ಲಿ ಪ್ರಸಿದ್ಧ್ ಪಡೆದ ಮೊದಲ ಟೆಸ್ಟ್ ವಿಕೆಟ್ ಇದಾಗಿತ್ತು. 2023 ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಪ್ರಸಿದ್ಧ್ ಇದುವರೆಗೆ 6 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಮೊದಲ 5 ಟೆಸ್ಟ್ ಪಂದ್ಯಗಳನ್ನು ಪ್ರಸಿದ್ಧ್ ವಿದೇಶಿ ನೆಲದಲ್ಲಿ ಆಡಿದ್ದು 24 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಇನ್ನಿಂಗ್ಸ್‌ವೊಂದರಲ್ಲಿ ಎರಡು ಬಾರಿ ನಾಲ್ಕು ವಿಕೆಟ್‌ಗಳನ್ನು ಪಡೆದ ಸಾಧನೆಯನ್ನು ಸಹ ಮಾಡಿದ್ದಾರೆ.

 

Source link

ಸ್ವಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ಕೊಟ್ಟ ಸಿಎಂ ಡಿಕೆ ಶಿವಕುಮಾರ್, ಜತೆಗೊಂದು ಕಿವಿಮಾತು – Kannada News

ರಾಮನಗರ, (ಜೂನ್ 07): “ಕ್ಷೇತ್ರದ ಬಡವರಿಗೆ ತಲೆ ಮೇಲೆ ಸೂರು, ಸ್ಥಳೀಯರಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಕಡ್ಡಾಯ. ಮೆಡಿಕಲ್‌ ಕಾಲೇಜು ಶೀಘ್ರ ಪ್ರಾರಂಭ. ಸಮಸ್ಯೆಗಳನ್ನು ಆಲಿಸಲು ಅಧಿಕಾರಿ ನೇಮಕ” ಹೀಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಸ್ವಕ್ಷೇತ್ರ ಕನಕನಪುರ (Kanakapura) ಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ನೀಡಿದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಶಿವಕುಮಾರ್   ಅವರು ಇದೇ ಮೊದಲ ಬಾರಿಗೆ ತವರು ಕ್ಷೇತ್ರ ಕನಕಪುರದ ವಿವಿಧ ಭಾಗಗಳಿಗೆ ಭಾನುವಾರ ಭೇಟಿ ನೀಡಿ ಜನರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ಡಿಕೆಶಿ, ಕ್ಷೇತ್ರ ಅಭಿವೃದ್ಧಿ ಜೊತೆಗೆ ಜನರಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದರು.

“ನನ್ನ ಕ್ಷೇತ್ರದ ಜನರಿಗೆ ನನ್ನ ಮನೆ ಬಾಗಿಲು ಸದಾ ತೆರೆದಿರುತ್ತದೆ. ನಾನು ನಿಮ್ಮ ಸೇವೆಗೆ ಇರುವವನು. ನಿಮ್ಮ ಆಶೀರ್ವಾದದಿಂದ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದೇ‌‌ನೆ. ನನ್ನ ಕ್ಷೇತ್ರಕ್ಕೆ ಕಾಲಿಟ್ಟ ಕ್ಷಣದಿಂದ ನಾನು ಜನರ ಸೇವಕ. ಜಿಲ್ಲಾ ಪಂಚಾಯತಿ, ಟಿಎಪಿಸಿಎಂಎಸ್ ಮೂಲಕ ನನ್ನ ರಾಜಕೀಯ ಪ್ರಾರಂಭ ಮಾಡಿದೆ. ಪಕ್ಷಬೇಧ ಮರೆತು ನನ್ನನ್ನು ಬೆಳೆಸಿದ್ದೀರಿ” ಎಂದರು.

ಇದನ್ನೂ ಓದಿ: ಸ್ವಕ್ಷೇತ್ರ ಕನಕಪುರಕ್ಕೆ ಡಿಕೆ ಶಿವಕುಮಾರ್ ಭೇಟಿ: ನಿಮ್ಮೊಂದಿಗೆ ಸದಾ ಇರ್ತೆನೆ ಎಂಬ ಸಂದೇಶ ರವಾನಿಸಿದ ಸಿಎಂ

ಮೆಡಿಕಲ್ ಕಾಲೇಜು ನನ್ನ ಕನಸಾಗಿತ್ತು

ತುಂಗಣಿ ಗ್ರಾಮದಲ್ಲಿ ಮಾತನಾಡಿದ ಅವರು, “ಅಕ್ಷರ, ಆಶ್ರಯ, ಆರೋಗ್ಯ ಹುಡುಕಿಕೊಂಡು ವಲಸೆ ಹೋಗಬೇಡಿ. ಅದೆಲ್ಲವೂ ಇಲ್ಲಿಯೇ ದೊರೆಯಲಿದೆ. ಕನಕಪುರದಲ್ಲಿ ದೊಡ್ಡ ಮೆಡಿಕಲ್ ಕಾಲೇಜು ಆಗಬೇಕು ಎನ್ನುವುದು ನನ್ನ ಕನಸಾಗಿತ್ತು. ಇಡೀ ರಾಜ್ಯದಲ್ಲಿ ತಾಲ್ಲೂಕು ಮಟ್ಟದಲ್ಲಿ ಮೆಡಿಕಲ್ ಕಾಲೇಜು ಇದ್ದರೆ ಅದು ಈ ಕ್ಷೇತ್ರದಲ್ಲಿ ಮಾತ್ರ. ಯಡಿಯೂರಪ್ಪ ಅವರು ನಮಗೆ ಘೋಷಣೆಯಾಗಿದ್ದ ಮೆಡಿಕಲ್ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ನೀಡಿದ್ದರು. ನಾನು ಛಲಬಿಡದೇ ಕನಕಪುರಕ್ಕೆ ಮೆಡಿಕಲ್ ಕಾಲೇಜು ತಂದಿದ್ದೇನೆ” ಎಂದು ತಿಳಿಸಿದರು.

ನಿಮ್ಮ ಪಾದಗಳಿಗೆ ನಮಸ್ಕಾರ ಹೇಳಲು ಇಲ್ಲಿಗೆ ಬಂದಿದ್ದೇನೆ

ದೊಡ್ಡ ಆಲಹಳ್ಳಿ ಗ್ರಾಮದಲ್ಲಿ ಮಾತನಾಡಿದ ಸಿಎಂ, ಇದೊಂದು ಇತಿಹಾಸಕ್ಕೆ ಸಾಕ್ಷಿ ದಿನ. ದೊಡ್ಡ ಆಲಹಳ್ಳಿ ಕೆಂಪೇಗೌಡರ ಮಗ ಶಿವಕುಮಾರ್ ಪ್ರಮಾಣ ವಚನ ಮಾಡಿದ್ದೇನೆ.ಇದು ನಿಮ್ಮ ಗ್ರಾಮಕ್ಕೆ ಗೌರವ ಸಲ್ಲಬೇಕು. ನಾನು 1985ರಿಂದ ಚುನಾವಣೆ ನಿಂತಾಗಲಿಂದಲೂ ನನ್ನ ಜೊತೆ ಇದ್ದೀರಿ. ಸಾಕಷ್ಟು ಹಿರಿಯರು ಬೆನ್ನಾಲಬಾಗಿ ನಿಂತು ಆರ್ಶಿವಾದ ಮಾಡಿದ್ದಾರೆ. ನಾನು ಸಿಎಂ ಅಂತಾ ಹೇಳಿಕೊಳ್ಳಲು ಬಂದಿಲ್ಲ.ನಾನು ಎಂದಿಗೂ ಊರಿನ ಮಗ. ನನ್ನನ್ನ ಬಿಜೆಪಿಯವರು ಜೈಲಿಗೆ ಕಳುಹಿಸಿದರು. ನಾನು ಎಂದಿಗೂ ಅಗೌರವ ತಂದಿಲ್ಲ. ರಾಜಕೀಯವಾಗಿ ಷ್ಯಡ್ಯಂತ್ರ ನಡೆಯಿತು. ಆದರೂ ನೀವು ನನಗೆ ದೊಡ್ಡ ಶಕ್ತಿ ನೀಡಿದ್ರಿ. ಆದರೂ ಕೊನೆಗೂ ಅಧಿಕಾರ ನನಗೆ ಕೊಟ್ಟಿದ್ದಾರೆ. ಅಧಿಕಾರ ಹಂಚಿಕೆ ಪ್ರಕಾರ ನೀಡಿದ್ದಾರೆ. ನಿಮ್ಮ ಪಾದಗಳಿಗೆ ನಮಸ್ಕಾರ ಹೇಳಲು ಇಲ್ಲಿಗೆ ಬಂದಿದ್ದೇನೆ ಎಂದರು.

ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಆದ್ಯತೆ

“ಕ್ಷೇತ್ರದಲ್ಲಿನ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಮೊದಲ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸಲಾಗುವುದು.‌ ನನ್ನ ಕ್ಷೇತ್ರದ ಜನ ವಲಸೆ ಹೋಗುವುದನ್ನು ತಪ್ಪಿಸಲು ಕೆಲಸ ಮಾಡಲಾಗುತ್ತಿದೆ. ದೊಡ್ಡಆಲಳ್ಳಿ, ಹೊಸದುರ್ಗಗಳಲ್ಲಿ ಸಿಎಸ್ ಆರ್ ಅನುದಾನ ಬಳಸಿ ಕೆಪಿಎಸ್ ಶಾಲೆಗಳನ್ನು ನಿರ್ಮಾಣ ಮಾಡಲಾಗಿದೆ. ಬೆಂಗಳೂರಿನಲ್ಲಿ ದೊರೆಯುವ ಶಿಕ್ಷಣ ಇಲ್ಲಿಯೇ ದೊರೆಯಬೇಕು. ನಿಮಗೆ ಆಶ್ರಯ, ಆರೋಗ್ಯ, ಅಕ್ಷರ ನೀಡುವುದು ನನ್ನ ಮೊದಲ ಆದ್ಯತೆ.‌ ಇದೇ ವೇಳೆ ಭೂಮಿ ಮಾರಬೇಡಿ- ವ್ಯವಸಾಯ ಬಿಡಬೇಡಿ” ಎಂದು ಕಿವಿಮಾತು ಹೇಳಿದರು.

ಜೆಡಿಎಸ್-ಬಿಜೆಪಿಗರಿಗೆ ಆಹ್ವಾನ ಕೊಟ್ಟ ಡಿಕೆಶಿ

ನನ್ನ ಕಷ್ಟಕಾಲದಲ್ಲಿ ನನ್ನ ಜೊತೆ ಇದ್ದೀರಿ. ಯಾವ ಕುತಂತ್ರಕ್ಕೂ ನೀವು ಬಗ್ಗಲಿಲ್ಲ. ನಾನು ನಿಮ್ಮ ಋಣವನ್ನ ತೀರಿಸಬೇಕಿದೆ. ಗ್ರಾಮಕ್ಕೆ ಏನೆಲ್ಲ ಅಭಿವೃದ್ಧಿ ಮಾಡಬೇಕೋ ಮಾಡಿದ್ದೇನೆ. ನಾವು ಬೆಂಗಳೂರು ಜಿಲ್ಲೆಯವರು ಎಂದು ಹೇಳಿಕೊಳ್ಳಲು ಗೌರವ ಬರುತ್ತದೆ. ನನಗೆ ಸಿಕ್ಕಿರೋ ಬಿರುದು ನನ್ನದಲ್ಲ ಅದು ನಿಮ್ಮದು. ಯಾರು ಕೂಡ ಬಿಜೆಪಿ ಜೆಡಿಎಸ್ ನವರ ಜೊತೆ ಜಗಳ ಮಾಡಬಾರದು. ಓಟ್ ಹಾಕುವುದು ಬಿಡುವುದು ಅವರ ಆತ್ಮಸಾಕ್ಷಿಗೆ ಬಿಟ್ಟಿದ್ದು. ಯುವಕರಿಗೆ ರಾಜಕೀಯ ಪ್ರಜ್ಞೆ ಇದೆ. ಯುವಕರು ಯಾವುದೇ ಗಲಾಟೆ ಮಾಡಿಕೊಳ್ಳಬಾರದು. ಮುಂದೆ ಏನು ಕೆಲಸ ಆಗಬೇಕು ಅದನ್ನ ಮಾಡುತ್ತೇನೆ . ತಾಲೂಕಿನ ಸ್ವಾಭಿಮಾನ ಉಳಿಸಿದ್ದೇನೆ. ಜೆಡಿಎಸ್ ಬಿಜೆಪಿ ಕಾರ್ಯಕರ್ತರಿಗೆ ನನ್ನ ಮನೆ ಬಾಗಿಲು ತೆಗೆದಿದೆ ಎಂದು ಪರೋಕ್ಷವಾಗಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರನ್ನು ಕಾಂಗ್ರೆಸ್​​​ಗೆ ಆಹ್ವಾನಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಹೈ ಕೊಲೆಸ್ಟ್ರಾಲ್ ಅಪಾಯ ಇಲ್ಲದಿದ್ದರೂ ಹೃದಯಾಘಾತವಾಗುವುದಕ್ಕೆ ಕಾರಣವೇನು? ತಡೆಗಟ್ಟಲು ಇಲ್ಲಿದೆ ಸಲಹೆ – Kannada News

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ (Heart Attack) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಹಿಂದೆ ವಯೋವೃದ್ಧರಲ್ಲಿ ಹೆಚ್ಚು ಕಂಡುಬರುತ್ತಿದ್ದ ಈ ಸಮಸ್ಯೆ ಈಗ ಯುವಕರಲ್ಲಿಯೂ ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯವಾಗಿ ಹೃದಯಾಘಾತಕ್ಕೆ ಹೆಚ್ಚಿದ ಕೊಲೆಸ್ಟ್ರಾಲೇ ಮುಖ್ಯ ಕಾರಣ ಎಂದು ಹಲವರು ಭಾವಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಕೊಲೆಸ್ಟ್ರಾಲ್ ಮಟ್ಟ ಸಾಮಾನ್ಯವಾಗಿದ್ದರೂ ಕೂಡ ಕೆಲವರಿಗೆ ಹೃದಯಾಘಾತ ಸಂಭವಿಸುವ ಸಾಧ್ಯತೆ ಇದೆ. ದೇಹದಲ್ಲಿ ಬ್ಯಾಡ್ ಕೊಲೆಸ್ಟ್ರಾಲ್ ಹೆಚ್ಚಾದರೆ ರಕ್ತನಾಳಗಳಲ್ಲಿ ಕೊಬ್ಬು ಜಮೆಯಾಗುತ್ತದೆ. ಇದರಿಂದ ಹೃದಯಕ್ಕೆ ರಕ್ತ ಸರಿಯಾಗಿ ಹರಿಯದೇ ಹೃದಯಾಘಾತದ ಅಪಾಯ ಹೆಚ್ಚಬಹುದು. ಆದರೆ ಹೃದಯ ಆರೋಗ್ಯವು ಕೇವಲ ಕೊಲೆಸ್ಟ್ರಾಲ್ ಮಟ್ಟದ ಮೇಲೆ ಮಾತ್ರ ಅವಲಂಬಿತವಾಗಿರುವುದಿಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಹೈ ಕೊಲೆಸ್ಟ್ರಾಲ್ ಅಪಾಯ ಇಲ್ಲದಿದ್ದರೂ ಹೃದಯಾಘಾತವಾಗುವುದಕ್ಕೆ ಕಾರಣವೇನು, ಹೃದಯವನ್ನು ಆರೋಗ್ಯವಾಗಿಡಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೈ ಕೊಲೆಸ್ಟ್ರಾಲ್ ಇಲ್ಲದಿದ್ದರೂ ಹೃದಯಾಘಾತಕ್ಕೆ ಕಾರಣಗಳೇನು?

ಅಮೆರಿಕನ್ ಹಾರ್ಟ್ ಅಸೋಸಿಯೇಷನ್ (AHA) ಪ್ರಕಾರ, ಹೃದಯಾಘಾತದ ಅಪಾಯವನ್ನು ಹೆಚ್ಚಿಸುವ ಹಲವು ಅಂಶಗಳಿವೆ. ಜೀವನಶೈಲಿ, ಆಹಾರ ಪದ್ಧತಿ ಮತ್ತು ಇತರ ಆರೋಗ್ಯ ಸಮಸ್ಯೆಗಳೂ ಹೃದಯಾಘಾತಕ್ಕೆ ಕಾರಣವಾಗಬಹುದು. ಅಲ್ಲದೆ ಹೈ ಬ್ಲಡ್ ಪ್ರೆಶರ್, ಮಧುಮೇಹ, ಧೂಮಪಾನ, ಅತಿಯಾದ ಒತ್ತಡ, ದೇಹದ ತೂಕ ಹೆಚ್ಚಳ, ವ್ಯಾಯಾಮದ ಕೊರತೆ ಮತ್ತು ಕುಟುಂಬದ ಆರೋಗ್ಯ ಇತಿಹಾಸವು ಪ್ರಮುಖ ಕಾರಣಗಳಾಗಬಹುದು. ಕೆಲವರು ಆರೋಗ್ಯಕರ ಕೊಲೆಸ್ಟ್ರಾಲ್ ಮಟ್ಟ ಹೊಂದಿದ್ದರೂ ಕೂಡ ಮಾನಸಿಕ ಒತ್ತಡ ಅಥವಾ ಅಸ್ವಸ್ಥ ಜೀವನಶೈಲಿಯಿಂದ ಹೃದಯ ಸಂಬಂಧಿ ಸಮಸ್ಯೆಗಳನ್ನು ಎದುರಿಸಬಹುದು. ಆದ್ದರಿಂದ ಕೇವಲ ಕೊಲೆಸ್ಟ್ರಾಲ್ ವರದಿ ನೋಡಿ ಹೃದಯದ ಸ್ಥಿತಿಯನ್ನು ಅಂದಾಜು ಮಾಡುವುದು ಸರಿಯಲ್ಲ ಎಂದು ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: ಚರ್ಮದ ಮೇಲೆ ಈ ಸಮಸ್ಯೆಗಳು ಕಾಣಿಸಿಕೊಂಡರೆ ಅದು ಹೃದಯಾಘಾತದ ಲಕ್ಷಣವಾಗಿರಬಹುದು; ನಿರ್ಲಕ್ಷ್ಯ ಬೇಡ

ಹೃದಯಾಘಾತದ ಈ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬೇಡಿ

ಸಾಮಾನ್ಯವಾಗಿ ಹೃದಯಾಘಾತವಾಗುವ ಮೊದಲು ಕೆಲವರಲ್ಲಿ ಎದೆನೋವು, ಎದೆ ಮೇಲೆ ಒತ್ತಡದ ಅನುಭವ, ಉಸಿರಾಟದ ತೊಂದರೆ, ತೀವ್ರ ದಣಿವು, ತಲೆಸುತ್ತು, ಕೈ, ಭುಜ, ಕುತ್ತಿಗೆ ಅಥವಾ ದವಡೆಯಲ್ಲಿ ನೋವು ಕಾಣಿಸಬಹುದು. ಮಹಿಳೆಯರು ಹಾಗೂ ಮಧುಮೇಹ ಇರುವವರಲ್ಲಿ ಲಕ್ಷಣಗಳು ವಿಭಿನ್ನವಾಗಿರಬಹುದು. ಯಾವುದೇ ಈ ರೀತಿಯ ಸಾಮಾನ್ಯವಲ್ಲದ ಲಕ್ಷಣಗಳು ಪದೇಪದೇ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಬಹಳ ಮುಖ್ಯ.

ಹೃದಯವನ್ನು ಆರೋಗ್ಯವಾಗಿಡಲು ಏನು ಮಾಡಬೇಕು?

ಹೃದಯ ಆರೋಗ್ಯಕ್ಕಾಗಿ ಸಮತೋಲನ ಆಹಾರ ಸೇವನೆ, ನಿಯಮಿತ ವ್ಯಾಯಾಮ ಮತ್ತು ಧೂಮಪಾನದಿಂದ ದೂರವಿರುವುದು ಅಗತ್ಯ. ಜೊತೆಗೆ ಬಿಪಿ, ಶುಗರ್ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿಕೊಳ್ಳಬೇಕು. ಸಾಕಷ್ಟು ನಿದ್ರೆ, ಒತ್ತಡ ನಿಯಂತ್ರಣ ಮತ್ತು ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳುವುದೂ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಸಹಾಯಕವಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ

ಶಿವರಾಜ್ ಕುಮಾರ್ (Shiva Rajkumar) ಮತ್ತು ಗೀತಾ ಶಿವರಾಜ್ ಕುಮಾರ್ ಅವರು ತಮ್ಮ ಆಪ್ತ ಸೀಕಲ್ ರಾಮಚಂದ್ರ ಅವರ ನಿವಾಸದಲ್ಲಿ ನಡೆದ ಸತ್ಯನಾರಾಯಣ ಸ್ವಾಮಿ ಪೂಜೆಯಲ್ಲಿ ಭಾಗವಹಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆ, ಸೀಕಲ್ ಗ್ರಾಮದಲ್ಲಿರುವ ಸೀಕಲ್ ರಾಮಚಂದ್ರ ಅವರ ನಿವಾಸದಲ್ಲಿ ನಡೆದ ಪೂಜೆಯಲ್ಲಿ ಶಿವಣ್ಣ ಹಾಗೂ ದಂಪತಿ ಭಾಗಿ ಆಗಿದ್ದು, ಈ ವೇಳೆ ಅವರೊಟ್ಟಿಗೆ ನಿರ್ದೇಶಕ ಆರ್ ಚಂದ್ರು ಸಹ ಜೊತೆಗೆ ಇದ್ದರು. ಸೀಕಲ್ ರಾಮಚಂದ್ರ ಅವರು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾಗಿದ್ದು, ಶಿವರಾಜ್ ಕುಮಾರ್ ಅವರಿಗೆ ಆಪ್ತರಾಗಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಪೆದ್ದಿ’ ವಿವಾದ: ಬಾಲಿವುಡ್ ದೂರುಗಳ ಬಗ್ಗೆ ನಿತ್ಯಾ ಮೆನನ್ ಪ್ರತ್ಯುತ್ತರ – Kannada News

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾನಲ್ಲಿ ನಟಿ ಜಾನ್ವಿ ಕಪೂರ್ ಅವರ ಪಾತ್ರವನ್ನು ಅತಿಯಾಗಿ ಗ್ಲಾಮರೈಸ್ ಮಾಡಿ ತೋರಿಸಲಾಗಿದೆ. ಇದು ಮಹಿಳೆಯರಿಗೆ ಮಾಡಿದ ಅವಮಾನ, ನಟಿಯರಿಗೆ ಮಾಡಿದ ಅವಮಾನ ಎಂಬ ಟೀಕೆ ವ್ಯಕ್ತವಾಗಿದೆ. ಅದರಲ್ಲೂ ಇದೇ ವಿಷಯವನ್ನು ಇರಿಸಿಕೊಂಡು ಬಾಲಿವುಡ್​​ನ ಕೆಲ ಮಂದಿ, ದಕ್ಷಿಣ ಭಾರತ ಚಿತ್ರರಂಗದ ದೂಷಣೆಗೆ ಮುಂದಾಗಿದ್ದು, ಮಹಿಳೆಯರನ್ನು ಭೋಗದ ವಸ್ತುವಿನಂತೆ ತೋರಿಸುವುದು ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಾಮಾನ್ಯ, ದಕ್ಷಿಣ ಭಾರತ ಚಿತ್ರರಂಗದಲ್ಲಿ ಮಹಿಳೆಯರಿಗೆ ಗೌರವ ನೀಡುವುದಿಲ್ಲ ಎಂಬೆಲ್ಲ ದೂರುಗಳು ಕೇಳಿ ಬರುತ್ತಿವೆ. ಇದಕ್ಕೆ ನಟಿ ನಿತ್ಯಾ ಮೆನನ್ ಸರಿಯಾಗಿ ಪ್ರತ್ಯುತ್ತರ ನೀಡಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ನಟಿ ನಿತ್ಯಾ ಮೆನನ್, ‘ಸಿನಿಮಾಗಳಲ್ಲಿ ಮಹಿಳೆಯರನ್ನು ಭೋಗ ವಸ್ತುವಿನಂತೆ ತೋರಿಸುವುದು ಕೇವಲ ದಕ್ಷಿಣ ಭಾರತದ ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ, ಇದು ಇಡೀ ಮನರಂಜನಾ ಉದ್ಯಮದಲ್ಲೇ ಇರುವ ಒಂದು ದೊಡ್ಡ ಪಿಡುಗಾಗಿದೆ. ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಾತ್ರ ಈ ಪಿಡುಗು ಇದೆ ಎನ್ನಲಾಗದು, ಇದು ಎಲ್ಲಾ ಕಡೆಯೂ ಇದೆ. ಇದೊಂದು ಟ್ರೆಂಡ್ ಆಗಿಬಿಟ್ಟಿದೆ ಮತ್ತು ಎಲ್ಲರೂ ಇದನ್ನು ಅನುಸರಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.

‘ಕಮರ್ಶಿಯಲ್ ಆಗಿ ಯಾವುದು ವರ್ಕೌಟ್ ಆಗುತ್ತದೆಯೋ ಮತ್ತು ಪ್ರೇಕ್ಷಕರನ್ನು ಯಾವುದು ಹೆಚ್ಚು ಉತ್ತೇಜಿಸುತ್ತದೆಯೋ, ಅಂತಹ ವಿಷಯಗಳನ್ನು ಸಿನಿಮಾಗಳಲ್ಲಿ ಬಳಸಿಕೊಳ್ಳಲಾಗುತ್ತದೆ. ಹೀಗಾಗಿ ಕಲಾವಿದರು ತಮ್ಮದೇ ಆದ ಕೆಲವು ಗಡಿಗಳನ್ನು ಹಾಕಿಕೊಳ್ಳಬೇಕು ಎಂದು ನನಗನಿಸುತ್ತದೆ. ದೃಶ್ಯದಲ್ಲಿ ನಟಿಸುವ ವ್ಯಕ್ತಿಯು ತಮಗೆ ಇಷ್ಟವಿಲ್ಲದಿದ್ದರೆ ಕಟ್ಟುನಿಟ್ಟಾಗಿ ನಿರಾಕರಿಸುವ ಧೈರ್ಯ ತೋರಬೇಕು’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:Peddi Movie review: ‘ಪೆದ್ದಿ’: ರಾಮ್ ಚರಣ್ ಸಿಕ್ಸರ್, ನಿರ್ದೇಶಕ ರನೌಟ್

ನಟಿಯರು ಬಲವಾದ ನಿಯಮಗಳನ್ನು ಹೊಂದಿರಬೇಕು ಮತ್ತು ಕಲಾವಿದರಾಗಿ ತಮ್ಮ ಜವಾಬ್ದಾರಿಯನ್ನು ಅರಿತಿರಬೇಕು. ನಾನು ಕೆಲವು ರೀತಿಯ ಪಾತ್ರಗಳು ಅಥವಾ ದೃಶ್ಯಗಳಲ್ಲಿ ಎಂದಿಗೂ ನಟಿಸುವುದಿಲ್ಲ. ಇದು ನಿಮ್ಮ ಆದ್ಯತೆಗಳು ಮತ್ತು ಒಬ್ಬ ನಟ ಅಥವಾ ಕಲಾವಿದರಾಗಿ ನಿಮ್ಮ ಜವಾಬ್ದಾರಿ ಏನು ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಅಂಥಹಾ ದೃಶ್ಯಗಳನ್ನು ಒಪ್ಪಿಕೊಳ್ಳದ ಕಾರಣ ನನಗೆ ಸಿಗದ ಸಿನಿಮಾಗಳು ಅಥವಾ ಜಾನರ್‌ಗಳು ಇವೆಯೇ? ಖಂಡಿತಾ ಇವೆ. ಆದರೆ ನಾನು ಅವಕಾಶಗಳಿಗಿಂತಲೂ ನನ್ನ ಮೌಲ್ಯಗಳನ್ನೇ ಆಯ್ಕೆ ಮಾಡಿಕೊಂಡಿದ್ದೇನೆ. ನೀವು ಕೇವಲ ಟಾಪ್ ಸ್ಟಾರ್ ಆಗಲು ಏನು ಬೇಕಾದರೂ ಮಾಡಲು ಸಿದ್ಧರಿದ್ದರೆ, ಅದು ನಿಮ್ಮ ವೈಯಕ್ತಿಕ ನಿರ್ಧಾರವಾಗಿರುತ್ತದೆ’ ಎಂದು ನಿತ್ಯಾ ಹೇಳಿದ್ದಾರೆ.

ಜಾನ್ಹವಿ ಕಪೂರ್ ಪಾತ್ರವನ್ನು ಅತಿಯಾಗಿ ಗ್ಲಾಮರೈಸ್ ಮಾಡಿರುವ ಬಗ್ಗೆ ‘ಪೆದ್ದಿ’ ಸಿನಿಮಾ ಬಗ್ಗೆ ಟೀಕೆ ವ್ಯಕ್ತವಾಗಿದೆ. ಇದೀಗ ಸಿನಿಮಾದ ನಿರ್ದೇಶಕ ಬುಚ್ಚಿಬಾಬು ಸನಾ, ಜಾನ್ಹವಿಯ ದೃಶ್ಯಗಳಿಗೆ ಕತ್ತರಿ ಹಾಕುವುದಾಗಿ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IAS, IPS ಅಧಿಕಾರಿಗಳ ವರ್ಗಾವಣೆ: ಮುನೀಶ್‌ ಮೌದ್ಗಿಲ್‌ಗೆ ಮಹತ್ವದ ಜವಾಬ್ದಾರಿ – Kannada News

ಬೆಂಗಳೂರು, (ಜೂನ್ 07): ಕರ್ನಾಟಕ ಸರ್ಕಾರವು ಇಂದು (ಜೂನ್ 07)  ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.  ಡಿಕೆ ಶಿವಕುಮಾರ್ (DK Shivakumar) ಸರ್ಕಾರ ಬರುತ್ತಿದ್ದಂತೆಯೇ ಪ್ರಮುಖ  ಅಧಿಕಾರಿಗಳ ಸ್ಥಳ ಬದಲಾವಣೆಯಾಗುತ್ತಿದೆ. ಇದೀಗ 6 ಐಎಎಸ್ ಅಧಿಕಾರಿಗಳ ಜೊತೆಗೆ ಐಪಿಎಸ್ ಆಫೀರ್ಸ್​​​​​ಗಳನ್ನೂ ಸಹ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಮುಖವಾಗಿ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ಸಿಎಂ ಪ್ರಧಾನ ಕಾರ್ಯದರ್ಶಿಯ ಹೆಚ್ಚುವರಿ ಹೊಣೆ ನೀಡಲಾಗಿದೆ. ಇನ್ನು  ಮುಖ್ಯವಾಗಿ  ಗುಪ್ತಚರ ವಿಭಾಗದ ಮುಖ್ಯಸ್ಥರನ್ನಾಗಿ  ಡಾ. ಚಂದ್ರಗುಪ್ತ ಅವರನ್ನು ನೇಮಕ ಮಾಡಲಾಗಿದೆ.

ಮುಖ್ಯಾಂಶಗಳು

  • ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಪ್ರಮುಖ ಅಧಿಕಾರಿಗಳ ಸ್ಥಾನಪಲ್ಲಟ
  • ಐಪಿಎಸ್ ಹಾಗೂ ಆರು ಐಎಎಸ್ ಅಧಿಕಾರಿಗಳ ವರ್ಗಾವಣೆ
  • ಗುಪ್ತಚರ ವಿಭಾಗದ ಮುಖ್ಯಸ್ಥರನ್ನಾಗಿ  ಡಾ. ಚಂದ್ರಗುಪ್ತ ಅವರನ್ನು ನೇಮಕ
  • ಮುನೀಶ್ ಮೌದ್ಗಿಲ್​​​ಗೆ ಸಿಎಂ ಪ್ರಧಾನ ಕಾರ್ಯದರ್ಶಿಯ ಹೆಚ್ಚುವರಿ ಹೊಣೆ

ಈ ಹಿಂದಿನ ಮುಖ್ಯಮಂತ್ರಿಯ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದ  ಅಂಜುಮ್ ಪರ್ವೇಝ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಮುನೀಶ್ ಮೌದ್ಗಿಲ್ ಅವರನ್ನು ನೂತನವಾಗಿ ಸೃಷ್ಟಿಸಲಾದ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ (ಕಾರ್ಯಕ್ರಮ ಮತ್ತು ಯೋಜನೆ ಅನುಷ್ಠಾನ) ಹುದ್ದೆಯ ಜವಾಬ್ದಾರಿಯನ್ನು ನೀಡಲಾಗಿದೆ.

IAS ಯಾರು ಎಲ್ಲಿಗೆ ವರ್ಗಾವಣೆ?

ಹುದ್ದೆ ನಿರೀಕ್ಷೆಯಲ್ಲಿದ್ದ 1994ರ ಬ್ಯಾಚ್‌ನ ಐಎಎಸ್ ಅಧಿಕಾರಿ ಅಂಜುಮ್ ಪರ್ವೇಜ್ ಅವರನ್ನು ಬೆಂಗಳೂರಿನ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಪ್ರಸ್ತುತ ಬಿಬಿಎಂಪಿ (ಆಡಳಿತ, ಕಂದಾಯ ಮತ್ತು ಐಟಿ) ವಿಶೇಷ ಆಯುಕ್ತರಾಗಿರುವ ಇವರಿಗೆ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ (ಕಾರ್ಯಕ್ರಮ ಮತ್ತು ಯೋಜನೆ ಅನುಷ್ಠಾನ) ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ.

ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ದೀಪಾ ಚೋಳನ್ ಅವರನ್ನು ಸಾರಿಗೆ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಇವರು ಡಾ. ಪ್ರಸಾದ್ ಎನ್.ವಿ. ಅವರ ಸ್ಥಾನವನ್ನು ತುಂಬಲಿದ್ದಾರೆ.

ಇನ್ನು ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಕಾವೇರಿ ಬಿ.ಬಿ. ಅವರನ್ನು ನಗರಾಭಿವೃದ್ಧಿ ಇಲಾಖೆಯ (ನಗರಾಡಳಿತ ಮತ್ತು ಪೌರಾಡಳಿತ) ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿಯಾಗಿದ್ದ ಡಾ. ವೆಂಕಟೇಶ್ ಎಂ.ವಿ ಅವರನ್ನ ಸಹಕಾರ ಸಂಘಗಳ ನಿಬಂಧಕರಾಗಿ ವರ್ಗಾವಣೆ ಮಾಡಲಾಗಿದೆ.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಡಾ. ಸೆಲ್ವಮಣಿ ಅವರನ್ನು ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಇವರು ಯೋಗೀಶ್ ಎಂ.ಪಿ. ಅವರ ಜಾಗಕ್ಕೆ ಬರಲಿದ್ದಾರೆ.

ಗುಪ್ತಚರ ವಿಭಾಗದ ಮುಖ್ಯಸ್ಥರ ಬದಲಾವಣೆ

ಪ್ರಮುಖವಾಗಿ ಗುಪ್ತಚರ ವಿಭಾಗದ ಮುಖ್ಯಸ್ಥ ಲಾಭೂ ರಾಮ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಇವರ ಜಾಗಕ್ಕೆ ಬೆಂಗಳೂರಿನ ಭದ್ರತಾ (ಗುಪ್ತಚರ) ವಿಭಾಗದ ಪೊಲೀಸ್ ಮಹಾನಿರೀಕ್ಷಕರಾಗಿ (IGP) ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಚಂದ್ರಗುಪ್ತ ಅವರನ್ನು ನೇಮಕ ಮಾಡಲಾಗಿದೆ.

ಇನ್ನು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕರಾಗಿ (DGP) ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಪ್ರಣಬ್ ಮೊಹಾಂತಿ, ಐಪಿಎಸ್ (KN 1994) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಬೆಂಗಳೂರಿನ ಅಪರಾಧ ತನಿಖಾ ದಳ (CID), ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳ ಪೊಲೀಸ್ ಮಹಾನಿರ್ದೇಶಕರಾಗಿ ವರ್ಗಾಯಿಸಿ ನಿಯೋಜಿಸಲಾಗಿದೆ. ಹಾಗೇ ಪ್ರಣಬ್ ಮೊಹಾಂತಿ ಅವರಿಗೆ ಬೆಂಗಳೂರಿನ ಅಪರಾಧ ತನಿಖಾ ದಳದ ಪೊಲೀಸ್ ಮಹಾನಿರ್ದೇಶಕರ (ಸೈಬರ್ ಅಪರಾಧಗಳು) ಹೆಚ್ಚುವರಿ ಜವಾಬ್ದಾರಿಯನ್ನು ಸಹ ವಹಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 9:01 pm, Sun, 7 June 26

Source link

ಎಬೋಲಾ ವೈರಸ್‌ ಅಪಾಯಕಾರಿ, ಆದ್ರೆ ಈ ಸಲಹೆ ಪಾಲಿಸಿದ್ರೆ ಹತ್ತಿರವೂ ಸುಳಿಯಲ್ಲ! – Kannada News

ಇತ್ತೀಚಿನ ದಿನಗಳಲ್ಲಿ ಎಬೋಲಾ ವೈರಸ್ (Ebola Virus) ಕುರಿತು ಜಗತ್ತಿನಾದ್ಯಂತ ಆತಂಕ ಹೆಚ್ಚಾಗಿದೆ. ಇದು ಗಂಭೀರ ವೈರಲ್ ಸೋಂಕಾಗಿದ್ದು, “ಎಬೋಲಾ ವೈರಸ್ ಡಿಸೀಸ್ (EVD)” ಎಂಬ ಅಪಾಯಕಾರಿ ಕಾಯಿಲೆಗೆ ಕಾರಣವಾಗುತ್ತದೆ. ಸೋಂಕಿತ ವ್ಯಕ್ತಿಯ ರಕ್ತ, ದೇಹದ ದ್ರವಗಳು ಅಥವಾ ಸೋಂಕಿತ ಪ್ರಾಣಿಗಳ ಸಂಪರ್ಕದಿಂದ ಈ ವೈರಸ್ ಹರಡಬಹುದು. ಆಫ್ರಿಕಾದ ಕೆಲವು ದೇಶಗಳಲ್ಲಿ ಇತ್ತೀಚೆಗೆ ಎಬೋಲಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವು ದೇಶಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರಿಕೆ ನೀಡಲಾಗುತ್ತಿದೆ. ಅದರಲ್ಲಿಯೂ ಎಬೋಲಾವನ್ನು ಜಗತ್ತಿನ ಅತ್ಯಂತ ಅಪಾಯಕಾರಿ ವೈರಸ್‌ಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತದೆ. ಹಿಂದೆ ಈ ಸೋಂಕಿಗೆ ತುತ್ತಾಗಿ ಜನ ಸಾವನ್ನಪ್ಪಿದ್ದಾರೆ. ಜೊತೆಗೆ ಆರಂಭಿಕ ಲಕ್ಷಣಗಳು ಸಾಮಾನ್ಯ ವೈರಲ್ ಜ್ವರದಂತೆಯೇ ಕಾಣಿಸಿಕೊಳ್ಳುವುದರಿಂದ ಸಮಯಕ್ಕೆ ಸರಿಯಾಗಿ ಗುರುತಿಸುವುದು ಕಷ್ಟವಾಗಬಹುದು. ಹಾಗಾದರೆ ಇದು ಎಷ್ಟು ಅಪಾಯಕಾರಿ, ಸೋಂಕಿನ ಲಕ್ಷಣಗಳು ಹೇಗಿರುತ್ತವೆ, ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಇದನ್ನೂ ಓದಿ: ದೇಹದಲ್ಲಿ ಈ ರೀತಿ ಬದಲಾವಣೆ ಕಂಡು ಬಂದ್ರೆ ತಡಮಾಡದೆಯೇ ವೈದ್ಯರನ್ನು ಭೇಟಿ ಮಾಡಿ

ಎಬೋಲಾ ವೈರಸ್ ಎಷ್ಟು ಅಪಾಯಕಾರಿ?

ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಎಬೋಲಾ ಸೋಂಕು ದೇಹದಲ್ಲಿ ವೇಗವಾಗಿ ಹರಡಿ ಪ್ರಮುಖ ಅಂಗಾಂಗಗಳ ಕಾರ್ಯವೈಖರಿಯನ್ನು ಹಾನಿಗೊಳಿಸಬಹುದು ಎಂದು ಹೇಳಿದೆ. ಆರೋಗ್ಯ ತಜ್ಞರು ಕೂಡ ಈ ಸೋಂಕು ತೀವ್ರವಾದಾಗ ದೇಹದ ಸಾಮಾನ್ಯ ಕಾರ್ಯಗಳು ಅಸ್ತವ್ಯಸ್ತವಾಗುತ್ತವೆ. ಇದರ ಪರಿಣಾಮವಾಗಿ ರೋಗಿಯ ಸ್ಥಿತಿ ಬೇಗ ಗಂಭೀರವಾಗಬಹುದು. ಸಮಯಕ್ಕೆ ಸರಿಯಾದ ಚಿಕಿತ್ಸೆ ಮತ್ತು ವೈದ್ಯಕೀಯ ಮೇಲ್ವಿಚಾರಣೆ ದೊರೆತರೆ ಬದುಕುವ ಸಾಧ್ಯತೆ ಹೆಚ್ಚುತ್ತದೆ ಎಂದು ಹೇಳುತ್ತಾರೆ.

ಎಬೋಲಾ ಸೋಂಕಿನ ಲಕ್ಷಣಗಳು:

  • ಜ್ವರ
  • ತಲೆನೋವು
  • ದೌರ್ಬಲ್ಯ
  • ಸ್ನಾಯು ನೋವು
  • ಗಂಟಲು ನೋವು

ಸೋಂಕು ಹೆಚ್ಚಾದಂತೆ ಕೆಲವರಲ್ಲಿ ವಾಂತಿ, ಹೊಟ್ಟೆ ನೋವು ಮತ್ತು ತೀವ್ರ ಆಯಾಸವೂ ಕಾಣಿಸಬಹುದು. ಗಂಭೀರ ಸಂದರ್ಭಗಳಲ್ಲಿ ಇದು ದೇಹದ ಹಲವು ಅಂಗಾಂಗಗಳ ಮೇಲೆ ಪರಿಣಾಮ ಬೀರುತ್ತದೆ.

ಹೇಗೆ ಮುನ್ನೆಚ್ಚರಿಕೆ ವಹಿಸಬೇಕು?

ಎಬೋಲಾ ಸೋಂಕಿನಿಂದ ರಕ್ಷಿಸಿಕೊಳ್ಳಲು ಸೋಂಕಿತ ವ್ಯಕ್ತಿಯ ರಕ್ತ ಅಥವಾ ದೇಹದ ದ್ರವಗಳ ನೇರ ಸಂಪರ್ಕವನ್ನು ತಪ್ಪಿಸಬೇಕು. ಸೋಂಕು ಹೆಚ್ಚಿರುವ ಪ್ರದೇಶಗಳಿಗೆ ಪ್ರಯಾಣಿಸುವಾಗ ಆರೋಗ್ಯ ಸಂಸ್ಥೆಗಳ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಿಯಮಿತವಾಗಿ ಕೈ ತೊಳೆಯುವುದು, ಸ್ವಚ್ಛತೆ ಕಾಪಾಡಿಕೊಳ್ಳುವುದು ಮತ್ತು ಯಾವುದೇ ಅಸಾಮಾನ್ಯ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅತ್ಯಂತ ಮುಖ್ಯ. ಸಮಯೋಚಿತ ಎಚ್ಚರಿಕೆ ಮತ್ತು ಜಾಗೃತಿಯೇ ಈ ಅಪಾಯಕಾರಿ ಸೋಂಕಿನಿಂದ ರಕ್ಷಿಸಿಕೊಳ್ಳುವ ಉತ್ತಮ ಮಾರ್ಗವಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs AFG: W,W,W.. 25 ವರ್ಷಗಳ ವಿಕೆಟ್ ಬರ ನೀಗಿಸಿದ ಮಾನವ್ ಸುತಾರ್ – Kannada News

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More

Source link

World Oceans Day 2026: ಪರಿಸರ ವ್ಯವಸ್ಥೆಯನ್ನು ಸಮತೋಲನದಲ್ಲಿಡುವಲ್ಲಿ ಸಾಗರಗಳ ಪಾತ್ರ ಅಪಾರ – Kannada News

ಭೂಮಿಯ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಆವರಿಸಿರುವ ಸಾಗರ (Oceans) ಆಹಾರ, ಔಷಧ  ಮತ್ತು ಜಾಗತಿಕ ಆರ್ಥಿಕತೆಯ ಪ್ರಮುಖ ಮೂಲವಾಗಿದೆ. ಅಷ್ಟೇ ಅಲ್ಲದೆ ಭೂಮಿಯ ಮೇಲ್ಮೈಯಲ್ಲಿ ಶಾಖ ಚಕ್ರದ ಸಮತೋಲನವನ್ನು ಕಾಯ್ದುಕೊಳ್ಳುವಲ್ಲಿ, ಪರಿಸರ ವ್ಯವಸ್ಥೆಗಳನ್ನು ಸಮತೋಲನದಲ್ಲಿಡುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ. ಆದರೆ ಇಂದಿನ ಈ ಯುಗದಲ್ಲಿ, ಭೂಮಿಯಂತೆಯೇ, ಸಾಗರಗಳು ಸಹ ಹವಾಮಾನ ಬದಲಾವಣೆ, ಮಾಲಿನ್ಯ, ಜಾಗತಿಕ ತಾಪಮಾನ ಏರಿಕೆಯಂತಹ ಬೆದರಿಕೆಯನ್ನು ಎದುರಿಸುತ್ತಿವೆ. ಇವು ಸಾಗರ ಹಾಗೂ  ಅದರಲ್ಲಿ ವಾಸಿಸುವ ಜೀವಿಗಳಿಗೆ ಅಪಾಯವನ್ನುಂಟುಮಾಡುತ್ತಿವೆ. ಈ ನಿಟ್ಟಿನಲ್ಲಿ ಸಾಗರ ಸಂರಕ್ಷಣೆಯ ಅಗತ್ಯತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಜೂನ್‌ 8 ರಂದು ವಿಶ್ವ ಸಾಗರ ದಿನವನ್ನು ಅಚರಿಸಲಾಗುತ್ತದೆ.

ವಿಶ್ವ ಸಾಗರ ದಿನದ ಇತಿಹಾಸವೇನು?

1992 ರಲ್ಲಿ ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ ಭೂ ಶೃಂಗಸಭೆಯಲ್ಲಿ ಕೆನಡಾ ಸರ್ಕಾರವು ವಿಶ್ವ ಸಾಗರ ದಿನದ ಆಚರಣೆಯನ್ನು ಮೊದಲು ಪ್ರಸ್ತಾಪಿಸಿತು. ಇದರ ನಂತರ, ಸಾಗರಗಳ ರಕ್ಷಣೆಗಾಗಿ, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಜೂನ್ 8 ರಂದು ‘ವಿಶ್ವ ಸಾಗರ ದಿನ‘ವನ್ನು ಆಚರಿಸಲು ಅಧಿಕೃತ ನಿರ್ಣಯವನ್ನು ಅಂಗೀಕರಿಸಿತು . ಅಂದಿನಿಂದ, ಪ್ರತಿ ವರ್ಷ ಜೂನ್ 8 ರಂದು ವಿಶ್ವ ಸಾಗರ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ

ವಿಶ್ವ ಸಾಗರ ದಿನದ ಮಹತ್ವವೇನು ?

  • ವಿಶ್ವ ಸಾಗರ ದಿನವನ್ನು ಆಚರಿಸುವ ಮುಖ್ಯ ಉದ್ದೇಶವೆಂದರೆ ಸಾಗರಗಳ ಪ್ರಾಮುಖ್ಯತೆ ಮತ್ತು ಸಮುದ್ರ ಸಂಪನ್ಮೂಲಗಳ ಸಂರಕ್ಷಣೆಯ ಬಗ್ಗೆ ಜನರಿಗೆ ಅರಿವು ಮೂಡಿಸುವುದಾಗಿದೆ.
  • ಈ ದಿನವನ್ನು ಆಚರಿಸುವ ಪ್ರಮುಖ ಉದ್ದೇಶವೆಂದರೆ ಜೀವವೈವಿಧ್ಯತೆ, ಆಹಾರ ಭದ್ರತೆ, ಪರಿಸರ ಸಮತೋಲನ, ಹವಾಮಾನ ಬದಲಾವಣೆ, ಸಮುದ್ರ ಸಂಪನ್ಮೂಲಗಳ ಅನಿಯಂತ್ರಿತ ಬಳಕೆ ಮುಂತಾದ ಸಮಸ್ಯೆಗಳನ್ನು ಎತ್ತಿ ತೋರಿಸುವುದು ಮತ್ತು ಸಾಗರಗಳು ಒಡ್ಡುವ ಸವಾಲುಗಳ ಬಗ್ಗೆ ಜಾಗತಿಕ ಜಾಗೃತಿ ಮೂಡಿಸುವುದಾಗಿದೆ.
  • ಸಮುದ್ರ ವ್ಯವಸ್ಥೆಗಳನ್ನು ಸಂರಕ್ಷಿಸಲು, ಸುಸ್ಥಿರ ಮೀನುಗಾರಿಕೆ ಪದ್ಧತಿಗಳನ್ನು ಅಳವಡಿಸಿಕೊಳ್ಳಲು, ಸಾಗರ ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ಸಾಗರಕ್ಕೆ  ಸಂಬಂಧಿಸಿದ ಇತರ ಪ್ರಮುಖ ಸಮಸ್ಯೆಗಳ ಬಗ್ಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲುಪ್ರತಿ ವರ್ಷ ವಿಶ್ವ ಸಾಗರ ದಿನವನ್ನು ಆಚರಿಸಲಾಗುತ್ತದೆ.
  • ಈ ವಿಶೇಷ ದಿನದಂದು, ಜನರಿಗೆ ಸಮುದ್ರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಮತ್ತು ಮಾಲಿನ್ಯದಿಂದ ಉಂಟಾಗುವ ಹಾನಿಕಾರಕ ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಸರ್ಕಾರ ಮತ್ತುಸರ್ಕಾರೇತರ ಸಂಸ್ಥೆಗಳು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಸಂಬಳ ಪಡೆಯುತ್ತಿದ್ದ ಕೈಗಳಿಗಿಂತ ಖಾಲಿ ಕೈಗಳು ಕಲಿಸಿದ್ದೇ ಹೆಚ್ಚು; ಜಾಬ್ ರಿಸೈನ್ ಮಾಡಿದ ವ್ಯಕ್ತಿ ಹೀಗೆಂದಿದ್ದೇಕೆ? – Kannada News

ದುಡ್ಡೇ ದೊಡ್ಡಪ್ಪ ಅನ್ನೋ ಮಾತಿದೆ. ಒಂದೇ ಒಂದು ರೂಪಾಯಿ ಇಲ್ಲದೇ ಹೋದ್ರು ಜನ ನಿಮ್ಮತ್ತ ತಿರುಗಿಯೂ ನೋಡಲ್ಲ. ಹೌದು, ಎಲ್ಲರೂ ದುಡಿಯೋದು ದುಡ್ಡಿಗಾಗಿ. ಹೀಗಿರುವಾಗ ವ್ಯಕ್ತಿಯೊಬ್ಬ ಸಂಬಳವಿಲ್ಲದೇ (salary) ಒಂದಲ್ಲ ಎರಡಲ್ಲ ಬರೋಬ್ಬರಿ 60 ದಿನಗಳನ್ನು ಕಳೆದಿದ್ದಾನೆ. ಇದೇ ವೇಳೆ ಕೆಲಸ ಹಾಗೂ ಆದಾಯವು ದೈನಂದಿನ ಜೀವನದ ಮೇಲೆ ಎಷ್ಟು ಆಳವಾಗಿ ಪ್ರಭಾವ ಬೀರುತ್ತದೆ ಎಂದು ಅರಿತುಕೊಂಡಿದ್ದಾನೆ. ವಿಡಿಯೋ ಹಂಚಿಕೊಂಡು ಸಂಬಳವಿಲ್ಲದೇ 60 ದಿನಗಳು ತಾನು ಕಲಿತ ಪಾಠಗಳನ್ನು ಬಗ್ಗೆ ಪ್ರಾಮಾಣಿಕವಾಗಿ ಹಂಚಿಕೊಂಡಿದ್ದಾನೆ. ಈ ವಿಡಿಯೋ ನೋಡಿದ ನೆಟ್ಟಿಗರು ಬದುಕು ಇಂತಹ ಸಂದರ್ಭದಲ್ಲೇ ಅರ್ಥವಾಗುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ.

@attentionslop ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಶೀರ್ಷಿಕೆಯಲ್ಲಿ 60 ದಿನಗಳು ಸಂಬಳವಿಲ್ಲದೇ ಕಲಿಸಿದ ಜೀವನ ಪಾಠಗಳೇನು ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋದಲ್ಲಿ ಸುಮಾರು ಎರಡು ವರ್ಷಗಳ ಕಾಲ ಒಂದೇ ಕಂಪನಿಯಲ್ಲಿ ಕೆಲಸ ಮಾಡಿದ ನಂತರ ಮಾರ್ಚ್ ಅಂತ್ಯದಲ್ಲಿ ರಾಜೀನಾಮೆ ನೀಡಿದೆ. ನಾನು ಆ ನಿರ್ಧಾರವನ್ನು ತಿಂಗಳುಗಳಿಂದ ಮುಂದೂಡುತ್ತಿದ್ದೆ. ಆದರೆ ನಿಜವಾಗಿಯೂ ಏನೂ ಬದಲಾಗಿಲ್ಲ. ಸ್ಥಿರ ಸಂಬಳವು ದೈನಂದಿನ ಬದುಕನ್ನು ಕಷ್ಟಕರವಾದ ರೀತಿಯಲ್ಲಿ ರೂಪಿಸಲು ಪ್ರಾರಂಭಿಸುತ್ತದೆ ಎಂದು ಹೇಳಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಜಾಬ್‌ ರಿಸೈನ್‌ ಬಳಿಕ ಮನೆ ಬಾಡಿಗೆ ಹಾಗೂ ಖರ್ಚು ಮಾಡುವ ಅಭ್ಯಾಸಗಳಿಂದ ಹಿಡಿದು ವಾರಾಂತ್ಯದ ಯೋಜನೆಗಳು, ಆತ್ಮವಿಶ್ವಾಸ ಮತ್ತು ಭದ್ರತೆಯ ಪ್ರಜ್ಞೆಯವರೆಗೆ ಪ್ರಭಾವ ಬೀರುತ್ತದೆ. ತಮ್ಮ ಪೋಷಕರಿಂದ ಮತ್ತೆ ಹಣ ಕೇಳುವ ಬಗ್ಗೆ ತಪ್ಪಿತಸ್ಥರೆಂದು ಭಾವಿಸುವ, ತಮ್ಮ ಬ್ಯಾಂಕ್ ಬ್ಯಾಲೆನ್ಸ್‌ನ್ನು ಹೆಚ್ಚಾಗಿ ಪರಿಶೀಲಿಸಲು ಪ್ರಾರಂಭಿಸುವ ಮತ್ತು ಸಣ್ಣ ಖರೀದಿಗಳನ್ನು ಮಾಡುವ ಮೊದಲು ಹಿಂಜರಿಯುವುದನ್ನು ಸೃಷ್ಟಿಸುತ್ತದೆ. ನಿಜವಾಗಿಯೂ ಸಂತೋಷವಾಗಿದ್ದೀರಾ ಎಂದು ಕೇಳಲು ನೀವು ವಿರಳವಾಗಿ ನಿಲ್ಲುತ್ತೀರಿ. ದಿನಚರಿಯು ದೊಡ್ಡ ಚಿತ್ರವನ್ನು ಮಸುಕುಗೊಳಿಸುತ್ತದೆ ಎಂದಿದ್ದಾರೆ.

ಇದನ್ನೂ ಓದಿ: 9 ಟು 5 ಲೈಫ್ ಬೇಡಪ್ಪಾ: ಬೆಂಗಳೂರಲ್ಲಿ 60 ಸಾವಿರ ಸಂಬಳದ ಕೆಲಸಕ್ಕೆ 22ರ ಯುವತಿ ದಿಢೀರ್ ರಿಸೈನ್!

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ನನ್ನದು ಅದೇ ಕಥೆ, ನಾಳೆ ನನ್ನ ಕೊನೆಯ ನೋಟಿಸ್ ಅವಧಿಯ ದಿನ ಎಂದು ಹೇಳಿದ್ದಾರೆ. ಇನ್ನೊಬ್ಬರು ಕಾಮೆಂಟ್ ನಲ್ಲಿ ಎಲ್ಲಾ ಸನ್ನಿವೇಶಕ್ಕೂ ಹೊಂದಿಕೊಳ್ಳಬೇಕು, ಅದು ಅನಿವಾರ್ಯ ಎಂದಿದ್ದಾರೆ. ಮತ್ತೊಬ್ಬರು, ನಾನು ಕೂಡ 5 ವರ್ಷಗಳ ನಂತರ ನನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್ದೇನೆ ಮತ್ತು ನಿಮ್ಮ ಕಥೆ ನನ್ನದಕ್ಕೆ ಹೊಂದಿಕೆಯಾಗುತ್ತದೆ ಮತ್ತು ಹೌದು, ನಿನ್ನೆ ನನಗೆ ಅನುಮೋದನೆ ಸಿಕ್ಕಿತು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:19 pm, Sun, 7 June 26

Source link

Exit mobile version