Headlines

ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ: ಕೂಡಲೇ ಸಚಿವರನ್ನ ಕರೆದೊಯ್ದ ಸಿಬ್ಬಂದಿ – Kannada News | Fire Breaks Out at Sindhanur Mass Wedding Due to Short Circuit

ರಾಯಚೂರು, ಮೇ 03: ಜಿಲ್ಲೆಯ ಸಿಂಧನೂರಿನಲ್ಲಿ 151 ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವಘಡವೊಂದು ಸಂಭವಿಸಿದೆ. ವೇದಿಕೆ ಮೇಲಿಂದ ಡಿಸಿಎಂ ಡಿಕೆ ಶಿವಕುಮಾರ್​ ತೆರಳಿದ ಬೆನ್ನಲ್ಲೇ  ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಇದೇ ವೇಳೆ ಸಚಿವ ಈಶ್ವರ ಖಂಡ್ರೆ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಸಿಬ್ಬಂದಿ ಕೂಡಲೇ ಅವರನ್ನು ಪಕ್ಕಕ್ಕೆ ಕರೆದುಕೊಂಡ ಹೋದರು. ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸುತ್ತಿದ್ದಂತೆ ಕೆಲಕಾಲ ಆತಂಕ ಉಂಟಾಗಿತ್ತು. ಹೊಗೆ ಹೆಚ್ಚಾದ ಹಿನ್ನೆಲೆ ಸ್ಥಳೀಯರು ಕೂಡ ಗಾಬರಿಗೊಂಡಿದ್ದರು. ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಯಿಂದ…

Read More

ಐಪಿಎಲ್ ಟಿಕೆಟ್ ಬ್ಲಾಕ್ ದಂಧೆಗೆ ಪೊಲೀಸರ ಬ್ರೇಕ್: 24 ಮಂದಿ ಅರೆಸ್ಟ್, 17 ಕೇಸ್ ದಾಖಲು! – Kannada News | IPL 2026: Bengaluru Police Crack Down on Ticket Black Marketing; 24 Arrested and 37 Tickets Seized

ಬೆಂಗಳೂರು, ಏಪ್ರಿಲ್ 28: ಐಪಿಎಲ್ ಪಂದ್ಯಾವಳಿಗಳ ಸಂದರ್ಭದಲ್ಲಿ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಬ್ಲಾಕ್ ಮಾರ್ಕೆಟ್ ದಂಧೆಕೋರರಿಗೆ ಬೆಂಗಳೂರು ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ, ಪೊಲೀಸರು 17 ಪ್ರಕರಣಗಳನ್ನು ದಾಖಲಿಸಿದ್ದು, ಈ ಸಂಬಂಧ 24 ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ 37 ಐಪಿಎಲ್ ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ಪ್ರಕರಣಗಳು ದಾಖಲಾಗಿದ್ದರೆ, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಕ್ರಿಕೆಟ್ ಪ್ರೇಮಿಗಳ…

Read More

Nirav Modi: ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಜಯ, ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – Kannada News | UK Court Directs Nirav Modi to Settle Over Rs 100 Crore in Bank Guarantee Dispute

ಲಂಡನ್, ಜೂನ್ 24: ಕೋಟ್ಯಂತರ ರೂಪಾಯಿ ಬ್ಯಾಂಕ್ ಹಗರಣ ನಡೆಸಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿ(Nirav Modi)ಗೆ ಲಂಡನ್ ನ್ಯಾಯಾಲಯದಿಂದ ದೊಡ್ಡ ಆಘಾತ ಎದುರಾಗಿದೆ. ಬ್ಯಾಂಕ್ ಆಫ್ ಇಂಡಿಯಾ ದಾಖಲಿಸಿದ್ದ ಸಾಲ ವಸೂಲಾತಿ ಪ್ರಕರಣದಲ್ಲಿ ಬ್ಯಾಂಕ್ ಪರವಾಗಿ ತೀರ್ಪು ಬಂದಿದ್ದು, ನೀರವ್ ಮೋದಿ ಬ್ಯಾಂಕಿಗೆ ಬರೋಬ್ಬರಿ 10.7 ಮಿಲಿಯನ್ ಡಾಲರ್ (ಅಂದರೆ 100 ಕೋಟಿ ರೂಪಾಯಿಗೂ ಹೆಚ್ಚು) ಹಣವನ್ನು ಮರುಪಾವತಿಸಬೇಕು ಎಂದು ನ್ಯಾಯಾಲಯ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಸ್ವಂತ ಇ-ಮೇಲ್‌ನಿಂದಲೇ ಸಿಕ್ಕಿಬಿದ್ದ ಕುತಂತ್ರಿ ಈ…

Read More

ಪ್ರತಿ ಸಣ್ಣ ಆರೋಗ್ಯ ಸಮಸ್ಯೆಗೂ ಔಷಧಿ ಸೇವಿಸುತ್ತೀರಾ? ಈ ಅಭ್ಯಾಸ ಎಷ್ಟು ಅಪಾಯಕಾರಿ ಗೊತ್ತಾ? – Kannada News | Self Medication Side Effects: Expert Shares Important Health Advice

ತಲೆನೋವು (Headache), ಆಸಿಡಿಟಿ, ಜ್ವರ ಅಥವಾ ದೇಹ ನೋವು ಕಾಣಿಸಿಕೊಂಡ ತಕ್ಷಣ ವೈದ್ಯರ ಸಲಹೆಯಿಲ್ಲದೆ ಔಷಧಿ ಸೇವಿಸುವ ಅಭ್ಯಾಸ ಹಲವರಲ್ಲಿ ಇದೆ. ಆದರೆ ಈ ಸ್ವಯಂ ಔಷಧಿ (Self-medication) ಪದ್ಧತಿ ಆರೋಗ್ಯಕ್ಕೆ ಗಂಭೀರ ಅಪಾಯವನ್ನುಂಟು ಮಾಡಬಹುದು ಎಂದು ವೈದ್ಯರು ಎಚ್ಚರಿಸುತ್ತಾರೆ. ಹಾಗಾದರೆ ಸ್ವಯಂ ಔಷಧಿ ಸೇವನೆ ಏಕೆ ಅಪಾಯಕಾರಿ, ಇದರಿಂದ ಯಾವ ರೀತಿಯ ತೊಂದರೆಗಳಾಗುತ್ತವೆ, ಯಾಕೆ ವೈದ್ಯರು ಸೂಚಿಸದೆಯೇ ಆ್ಯಂಟಿಬಯೋಟಿಕ್ ಸೇವನೇ ಮಾಡಬಾರದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ. ಸ್ವಯಂ ಔಷಧಿ ಸೇವನೆ ಏಕೆ ಅಪಾಯಕಾರಿ?…

Read More

ಬಿಎಂಟಿಸಿ ಬಸ್​​​​​​​​ನಲ್ಲಿ 6 ರೂ. ಬದಲು 60 ಸಾವಿರ ರೂ ಫೋನ್ ಪೇ ಮಾಡಿದ ಪ್ರಯಾಣಿಕ, ಮುಂದೇನಾಯ್ತು ನೋಡಿ – Kannada News | Digital Payment Caution: Bengaluru Rider Pays ₹60,000 Instead of ₹6 on PhonePe. Avoid UPI Errors.

ಬೆಂಗಳೂರು, ಜ.22: ಫೋನ್ ಪೇ ಮಾಡುವಾಗ ಸ್ವಲ್ಪ ಗಮನ ನೀಡಬೇಕು ಎನ್ನುವುದು ಇದೇ ಕಾರಣಕ್ಕೆ ನೋಡಿ, ಇಲ್ಲೊಬ್ಬ ವ್ಯಕ್ತಿ ಬಿಎಂಟಿಸಿಯಲ್ಲಿ (BMTC fare mistake) 6 ರೂ ಬದಲು 60 ಸಾವಿರ ಫೋನ್ ಪೇ ಮಾಡಿದ್ದಾರೆ. ಇದೀಗ ಈ ಸುದ್ದಿ ಭಾರೀ ವೈರಲ್​​ ಆಗಿದೆ. ಕೆಲವೊಂದು ಬಾರಿ ಫೋನ್​​ ಪೇ ಮಾಡುವಾಗ ತಪ್ಪಿ ಸೊನ್ನೆ ಹೆಚ್ಚು ಹಾಕಿ ಪಜೀತಿಗೆ ಸಿಲುಕಿಕೊಂಡಿರುವ ಘಟನೆಗಳು ಆಗ್ಗಾಗೆ ನಡೆಯುತ್ತಿರುತ್ತದೆ. ಕೆಲಸದ ಒತ್ತಡದಿಂದ ಅಥವಾ ಕೈ ತಪ್ಪಿಯು ಹೀಗೆ ಆಗಬಹುದು. ಹಾಗಾಗಿ ಎಚ್ಚರಿಕೆಯಿಂದ…

Read More

ವೈಭವ್ vs ಸಂಜು: ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗ ಕಿಡಿ! – Kannada News | Sanjay Manjrekar Fumes After World Cup Hero Sanju Samson Axed

ಇಂಗ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವೈಭವ್ ಸೂರ್ಯವಂಶಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದಾರೆ. ಯುವ ದಾಂಡಿಗನಿಗೆ ಆಡುವ ಬಳಗದಲ್ಲಿ ಅವಕಾಶ ನೀಡಲು ಟೀಮ್ ಮ್ಯಾನೇಜ್ಮೆಂಟ್ ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಟ್ಟಿದ್ದರು. ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರ ಈ ನಿರ್ಧಾರಕ್ಕೆ  ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಮಂಜ್ರೇಕರ್ ಕಿಡಿ: ಟಿ20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ಗೆದ್ದಿದ್ದ ಮ್ಯಾಚ್…

Read More

ಮಂತ್ರಾಲಯಕ್ಕೆ ಹೋಗುವುದು ಅವರ ಕನಸಾಗಿತ್ತು: ಹರಕೆ ತೀರಿಸಿ ರಾಯರ ದರ್ಶನ ಪಡೆಯಲು ಹೋದ ವ್ಯಕ್ತಿ ನಾಪತ್ತೆ – Kannada News | Mantralaya Mystery: Chamarajanagar Devotee Doreswamy Missing Since Feb 9, Police Probe

ಚಾಮರಾಜನಗರ, ಫೆ.28: ರಾಯರನ್ನು ನೋಡಲು ಸಾವಿರಾರೂ ಭಕ್ತರು ಪ್ರತಿದಿನ ಬರುತ್ತಾರೆ. ಅದೊಂದು ಕಾರ್ಣಿಕದ ಸ್ಥಳ, ನೆಮ್ಮದಿ, ಸಂಕಷ್ಟಕ್ಕೆ ಮುಕ್ತಿ ನೀಡುವ ಸ್ಥಳ, ಹೀಗೆ ರಾಯರ ಮೇಲೆ ಅಪಾರ ಭಕ್ತಿ ಹೊಂದಿದ್ದ ವ್ಯಕ್ತಿಯೊಬ್ಬರು ಹರಕೆ ತೀರಿಸಲು ಮಂತ್ರಾಲಯಕ್ಕೆ ಹೋಗಿ ಈಗ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಚಾಮರಾಜನಗರದ ಗಾಳಿಪುರ ಬಡಾವಣೆಯ ನಿವಾಸಿ ದೊರೆಸ್ವಾಮಿ (55) ನಾಪತ್ತೆಯಾದ ದುರ್ದೈವಿ. ದೊರೆಸ್ವಾಮಿ ಅವರು ಕೂಲಿ ಕೆಲಸ ಮಾಡಿಕೊಂಡಿದ್ದರೂ ಪ್ರತಿ ಗುರುವಾರ ತಪ್ಪದೇ ರಾಘವೇಂದ್ರ ಸ್ವಾಮಿಗಳ ಆರಾಧನೆ ಮಾಡುತ್ತಿದ್ದರು. ಜೀವನದಲ್ಲಿ ಒಮ್ಮೆಯಾದರೂ ಮಂತ್ರಾಲಯಕ್ಕೆ…

Read More